Friday, May 29, 2020

ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷ್ ಕುಮಾರ್ ಅಮಾನತು


ಈ ದಿವಸ ವಾರ್ತೆ
ಸಿಂದಗಿ: ಇಲ್ಲಿಯ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿಯ ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಅವರನ್ನು ಅಮಾನತುಗೊಳಿಸಿ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಎಸ್.ಹಿರೇಮಠ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ತಾಲ್ಲೂಕಿನ ಅನುದಾನಿತ ಶಿಕ್ಷಣ ಸಂಸ್ಥೆ ಕೊಂಡಗೂಳಿ ಕೇಶೀರಾಜ ಪ್ರೌಢಶಾಲೆಯಲ್ಲಿ ಹಿಂದಿ ಭಾಷಾ ಸಹ ಶಿಕ್ಷಕ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ
ಮಟ್ಟದ ದಿನಪತ್ರಿಕೆಯ ರಾಜ್ಯ ಪುಟದಲ್ಲಿ ಅರ್ಜಿ ಆಹ್ವಾನ ಮಾಡಿಲ್ಲ. ಹೀಗಾಗಿ ರಾಜ್ಯದ ಎಲ್ಲ ಮೆರಿಟ್ ಹೊಂದಿರುವ ಅಭ್ಯರ್ಥಿಗಳು ಅವಕಾಶ ವಂಚಿತರಾಗಿದ್ದಾರೆ. ನಿಯಮ ಉಲ್ಲಂಘನೆ ಆಗಿದ್ದು, ನೇಮಕಾತಿಯಲ್ಲಿ ಲೋಪವಾಗಿದೆ. ಈ ಕುರಿತು ಕಾರಣ ಕೇಳಿ ನೀಡಿದ ನೋಟಿಸ್‌ಗೆ ಸಮಂಜಸ ಉತ್ತರ ನೀಡಿಲ್ಲ. ಹೀಗಾಗಿ ಸೇವೆಯಿಂದ ಅಮಾನತುಗೊಳಿಸುವುದು ಸೂಕ್ತ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

No comments:

Post a Comment