Thursday, June 4, 2020

ಡೆಂಗ್ಯೂ ರೋಗ ನಿಯಂತ್ರಣಕ್ಕೆ ವರ್ಷದ 12 ತಿಂಗಳು ಸರ್ವೇ ಕಾರ್ಯ ಪ್ರಾರಂಭ -ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಜೇಬುನ್ನಿಸಾಬೇಗಂ ಬೀಳಗಿ




ಈ ದಿವಸ ವಾರ್ತೆ
ವಿಜಯಪುರ : ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣದ ಜೊತೆಗೆ ಡೆಂಗ್ಯೂ ರೋಗ ನಿವಾರಣೆ ಹಾಗೂ ನಿಯಂತ್ರಣಕ್ಕೆ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು  ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಜೇಬುನ್ನಿಸಾಬೇಗಂ ಬೀಳಗಿ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಡೆಂಗ್ಯೂ ರೋಗ ನಿಯಂತ್ರಣಾ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ತಿಳಿಹೇಳುವ ಕಾರ್ಯವನ್ನು ಈಗಾಗಲೇ ಕೈಗೊಳ್ಳಲಾಗಿದ್ದು. ಇದರ ಜೊತೆಗೆ ಆಶಾ ಕಾರ್ಯಕರ್ತೆಯರಿಂದ ಮನೆ-ಮನೆಗೆ ತೆರಳಿ ಲಾರ್ವಾ ಸಾಂದ್ರತೆ ಬಗ್ಗೆ ಸರ್ವೇ ಹಾಗೂ ಜನರಿಗೆ ತಿಳಿಹೇಳುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದರು.

ವರ್ಷದ 12 ತಿಂಗಳು ನಗರ ಹಾಗೂ ಗ್ರಾಮಿಣ ಪ್ರದೇಶಗಳಿಗೆ ತೆರಳಿ ಆಶಾಕಾರ್ಯಕರ್ತೆಯರು ಹಾಗೂ ಕಿರಿಯ ಆರೋಗ್ಯ ಸಹಾಯಕಿಯರು ಕೋವಿಡ್-19 ಸರ್ವೇಯಂತೆ ಮನೆಮನೆಗೆ ತೆರಳಿ ಡೇಟಾ ಸಂಗ್ರಹ ಮಾಡುವುದರ ಜೊತೆಗೆ ಸಾರ್ವಜನಿಕರಿಗೆ ತಿಳಿಹೇಳುವ ಕಾರ್ಯ ಮಾಡುತ್ತಿದ್ದಾರೆ. ಜೋತೆಗೆ ಸಾರ್ವಜನಿಕ ಸ್ಥಳಗಳಿಗೆ ಬೇಟಿ ನೀಡಿ ಡೆಂಗ್ಯೂ ರೋಗದ ಲಕ್ಷಣಗಳು ಹಾಘೂ ಅದನ್ನು ನಿಯಂತ್ರಿಸುವ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯಯಿಂದ ಭಿತ್ತಿಪತ್ರ ಹಾಗೂ ಬ್ಯಾನರ್‍ಗಳನ್ನು ಅಳವಡಿಸಲಾಗುತ್ತಿದೆ ಎಂದರು.
 
ಡೆಂಗ್ಯೂ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಈ ಹಿಂದಿನ ಮೂರು ವರ್ಷಗಳ ದಾಖಲೆಗಳನ್ನು ಸಂಗ್ರಹಿಸಿ ಯಾವ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಗ್ಯೂ ಕಂಡುಬಂದಿದೆ ಹಾಗೂ ಸ್ಲಂ ಪ್ರದೇಶದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಲಾಗುತ್ತಿದ್ದು, ಅಂತಹ ಪ್ರದೇಶಗಳಿಗೆ ತೆರಳಿ ಸೊಳ್ಳೆ ಪರದೆಗಳನ್ನು ವಿತರಿಸುವುದು ಹಾಗೂ ಧೂಮಿಕರಣ ಮಾಡಲಾಗುತ್ತಿದೆ. ಸೊಳ್ಳೆಗಳ ಸಂತಾನೊತ್ಪತ್ತಿಯಾಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಿಗೆ ತಿಳಿಹೇಳುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಡೆಂಗ್ಯೂ ರೋಗ ಪರೀಕ್ಷಿಸಲು ಲ್ಯಾಬ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಡಿ.ಪಿ.ಎಚ್.ಎಲ್ ಎನ್ನುವ ಲ್ಯಾಬ್ ಕಾರ್ಯ ನಿರ್ವಹಿಸುತ್ತಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಬ್ಲಡ್ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದೆ, ಜಿಲ್ಲೆಯಲ್ಲಿ ಜನೇವರಿ ಮಾಸದಿಂದ ಮೇ ತಿಂಗಳವರೆಗೆ ಒಟ್ಟು 310 ಬ್ಲಡ್‍ಸ್ಯಾಂಪಲ್‍ಗಳನ್ನು ಸಂಗ್ರಹಿಸಲಾಗಿದ್ದು ಅವುಗಳಲ್ಲಿ 102 ಜನರಿಗೆ ಡೆಂಗ್ಯೂ ಪಾಸಿಟಿವ್ ದೃಡಪಟ್ಟಿದೆ. ಕಳೆದ 2019ರ ಸಾಲಿನಲ್ಲಿ ಒಟ್ಟು 271 ಬ್ಲಡ್‍ಸ್ಯಾಂಪಲ್‍ಗಳನ್ನು ಸಂಗ್ರಹಿಸಲಾಗಿದ್ದು ಅವುಗಳಲ್ಲಿ 77 ಜನರಿಗೆ ಡೆಂಗ್ಯೂ ಪಾಸಿಟಿವ್ ದೃಡಪಟ್ಟಿತ್ತು. ಕಳೆದ ಸಾಲಿಗಿಂಗ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ರಕ್ತ ಮಾದರಿಯನ್ನು ಪರೀಕ್ಷಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಡೆಂಗ್ಯೂ ರೋಗ ನಿಯಂತ್ರಣಕ್ಕಾಗಿ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಸಿಮದಗಿ ತಾಲೂಕಿನಲ್ಲಿ ಒಟ್ಟು 57 ಜನರ ರಕ್ತ ಮಾದರಿಯಲ್ಲಿ 22 ಜನರಿಗೆ ಡೆಂಗ್ಯೂ ದೃಡಪಟ್ಟಿದ್ದು, ಬ,ಬಾಗೇವಾಡಿಯಲ್ಲಿ 59 ಜನರ ಪೈಕಿ 15 ಜನರಿಗೆ ದೃಡ, ಮುದ್ದೆಬಿಹಾಳ ತಾಲೂಕಿನಲ್ಲಿ 26 ಜನರ ಪೈಕಿ 12 ಜನರಿಗೆ ದೃಡ, ಇಂಡಿ ತಾಲೂಕಿನಲ್ಲಿ 74 ಜನರ ಪೈಕಿ 23 ದೃಡ, ವಿಜಯಪುರ ತಾಲೂಕಿನಲ್ಲಿ 94 ಜನರ ಪೈಕಿ 30 ಜನರಿಗೆ ಡೆಂಗ್ಯೂ ದೃಡ ಪಟ್ಟಿದ್ದು ಇದರಲ್ಲಿ ವಿಜಯಪುರ ನಗರದಲ್ಲಿ 12 ಜನರಿಗೆ ದೆಂಗ್ಯೂ ಕಾಣೀಸಿಕೊಂಡಿದೆ ಎಂದು ತಿಳಿಸಿದರು.

ಡೆಂಗ್ಯೂ ರೋಗ ನಿಯಂತ್ರಣಕ್ಕಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳು ಒಳಚರಂಡಿ ಹಾಗೂ ಕೊಳಚೆ ಪ್ರದೇಶಗಳನ್ನು ಸ್ವಚ್ಛವಾಗಿಡಲು ತಿಳಿಸಲಾಗಿದ್ದು. ಮಳೆಗಾಲ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಯಾವದೇ ರೀತಿಯಲ್ಲಿ ಒಳಚರಂಡಿ ಸಮಸ್ಯೆ ಹಾಗೂ ಕೊಳಚೆ ಪ್ರದೇಶಗಳಲ್ಲಿ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಸಂಗ್ರಹ ಸಾಮಗ್ರಿಗಳಲ್ಲಿ ಸೊಳ್ಳೆಗಳು ಉತ್ಪಾದನೆಯಾಗದಂತೆ ಸ್ವಚ್ಛತೆ ಕಾಪಾಡಲು ತಿಳಿಸಿದ್ದು ಟಾಯರ್ ಸಂಗ್ರಹದ ಮೇಲೆ ನೀರು ನಿಲ್ಲದಂತೆ ಪ್ಲಾಸ್ಟಿಕ್ ಹೊದಿಕೆಯನ್ನು ಹಾಕಿಸಲಾಗಿದೆ. ನಗರ ಹಾಗೂ ಪಟ್ಟಣ ಪ್ರದೇಶಗಳ ಪರಿಸರದಲ್ಲಿ ಸೊಳ್ಳೆ ಉತ್ಪತ್ತಿ ನಿಯಂತ್ರಣಗೊಳಿಸುವ ಸಲುವಾಗಿ ಈಗಿರುವ ನಾಗರಿಕ ಬೈಲಾಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಹಾಗೂ ಅನುಪಯುಕ್ತ ಹಾಗೂ ಘನತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮಾಡುವಂತೆ ತಿಳಿಸಲಾಗಿದೆ ಎಂದರು.

ಮಹಾನಗರ ಪಾಲಿಕೆ ವತಿಯಿಂದ ಸೊಳ್ಳೆ ನಾಶಕ್ಕೆ ವಾರಕ್ಕೊಮ್ಮೆ ಸೂಕ್ತ ಕೀಟನಾಶಕ ದ್ರಾವಣವನ್ನು ಸಿಂಪಡನೆ ಹಾಗೂ ಧೂಮಿಕರಣ ಕೈಗೊಳ್ಳಲಾಗುತ್ತಿದೆ. ಸೊಳ್ಳೆ ರಹಿತ ಓವರ್‍ಹೆಡ್ ಟ್ಯಾಂಕ್ ಹಾಗೂ ಅಂಡರ್‍ಗ್ರೌಂಡ್ ಟ್ಯಾಂಕ್‍ಗಳನ್ನು ನಿರ್ಮಿಸಲು ತಿಳಿಸಿದ್ದು.ನೀರು ಸರಬರಾಜು ಮಾಡುವ ಮೊದಲು ಸೂಕ್ತ ಕ್ಲೋರಿನೇಶನ್ ಮಾಡಲಾಗುತ್ತಿದೆ. ಜೊತೆಗೆ ನೀರು ಸರಬರಾಜು ಮಾಡುವ ಪೈಪುಗಳಲ್ಲಿ ಸೋರಿಕೆಯನ್ನು ತಡೆಗಟ್ಟಲಾಗುತ್ತಿದೆ.
ಮೀನುಗಾರಿಕೆ ಇಲಾಖೆಯಿಂದ ಲಾರ್ವಾಹಾರಿ ಮೀನುಗಳಾದ ಶಪ್ಪಿ ಮತ್ತು ಗ್ಯಾಂಬ್ಯುಸಿಯಾ ಇವುಗಳನ್ನು ಬೆಳೆಸಿ ಜಿಲ್ಲೆಯಾದ್ಯಂತ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತಿದ್ದು, ಈಗಾಗಲೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಶಪ್ಪಿ ಹಾಗೂ ಗ್ಯಾಂಬ್ಯುಸಿಯಾ ಮೀನುಗಳನ್ನು ಬಿಡಲಾಗಿದೆ. ಅಗತ್ಯ ಸ್ಥಳಗಳಲ್ಲಿ ಈ ಮೀನುಗಳನ್ನು ಸೂಕ್ತ ಸಮಯದಲ್ಲಿ ಉಚಿತವಾಗಿ ಒದಗಿಸಲಾಗುತ್ತಿದೆ. ಕರೆ, ಬಾವಿ, ಕೊಳ್ಳಗಳಲ್ಲಿ ಜಿಲ್ಲಾವಾರು ಜಿಐಎಸ್ ನಕ್ಷೆಗಳನ್ನು ತಯಾರಿಸಬೇಕು ಹಾಗೂ ಅದರ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ನೀಡಲು ಸಹ ಸೂಚಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ವರಿ ಗೋಲಗೇರಿ, ಜಿಲ್ಲಾ ಕೀಟಶಾಸ್ತ್ರಜ್ಞ ಡಾ. ರಿಯಾಝ್ ದೇವಳ್ಳಿ ಸೇರಿದಂತೆ ಪತ್ರಕರ್ತರಾದ ರಾಹುಲ್ ಆಪ್ಟೆ, ಕಲ್ಲಪ್ಪ ಶಿವಶರಣ, ಭಿಮು ಕುಂಟೋಜಿ
ಇತರರಿದ್ದರು.

No comments:

Post a Comment