Wednesday, June 17, 2020

ಕೃಷಿ ಹೊಂಡದಲ್ಲಿ ಸ್ನಾನ ಮಾಡಲು ಹೋಗಿ ಕಾಲುಜಾರಿ ಬಿದ್ದು, ಮೃತಪಟ್ಟ ಯುವಕ


ಈ ದಿವಸ ವಾರ್ತೆ
ವಿಜಯಪುರ: ಕೃಷಿ ಹೊಂಡದಲ್ಲಿ ಯುವಕನೊಬ್ಬ ಬಿದ್ದು ಸಾವಿಗೀಡಾದ ಘಟನೆ ಜಿಲ್ಲೆಯ ನಿಡಗುಂದಿ ಸಮೀಪದ ಹೆಬ್ಬಾಳ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ಮೃತನನ್ನು ಹೆಬ್ಬಾಳ ಗ್ರಾಮದ ಹುಸನಪ್ಪ ಹನುಮಂತ ತಳವಾರ (24) ಎಂದು ಗುರುತಿಸಲಾಗಿದೆ.
ಹುಸನಪ್ಪ ತಳವಾರ ಈತನು ಕೃಷಿ ಹೊಂಡದಲ್ಲಿ ಸ್ನಾನ ಮಾಡಲು ಹೋಗಿ ಕಾಲುಜಾರಿ ಬಿದ್ದು, ಮೃತಪಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments:

Post a Comment