Tuesday, July 14, 2020

15-07-2020 EE DIVASA KANNADA DAILY NEWS PAPER

ಜಿಲ್ಲೆಯಲ್ಲಿ ಇಂದು ಚಿಕಿತ್ಸೆ ಫಲಕಾರಿಯಾಗದೆ 3 ಕೋವಿಡ್ ಸೋಂಕಿತರ ನಿಧನ : ಶಿಷ್ಟಾಚಾರದಂತೆ ಅಂತ್ಯಕ್ರಿಯೆ


ಈ ದಿವಸ ವಾರ್ತೆ
ವಿಜಯಪುರ  : ಜಿಲ್ಲೆಯಲ್ಲಿ ಇಂದಿನ ವೈದ್ಯಕೀಯ ವರದಿಯನ್ವಯ ಮೂವ್ವರು ಕೋವಿಡ್-೧೯ ಪಾಸಿಟಿವ್ ರೋಗಿಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಅದರಂತೆ ವಿಜಯಪುರ ನಗರದ ಶಾಪೇಟಿ, ಸ್ಟೇಶನ್ ಹಿಂದಿನ ರಸ್ತೆಯ ನಿವಾಸಿಯಾದ ೫೫ ವರ್ಷದ ಪುರುಷ (ರೋಗಿ ಸಂಖ್ಯೆ – ೨೪೭೭೩) ಕೋವಿಡ್ ಪಾಸಿಟಿವ್ ವ್ಯಕ್ತಿಯು ದಿನಾಂಕ ೦೫-೦೭-೨೦೨೦ ರಂದು ನಿಮೋನಿಯಾ, ಜ್ವರ, ತೀವ್ರ ಉಸಿರಾಟ ತೊಂದರೆ ಲಕ್ಷಣಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟು ದಿನಾಂಕ ೧೧-೭-೨೦೨೦ ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಿಜಯಪುರ ನಗರದ ಮುರಾಣಕೇರಿ ಕಾಲನಿಯ ನಿವಾಸಿಯಾದ ೫೦ ವರ್ಷದ ಪುರುಷ (ರೋಗಿ ಸಂಖ್ಯೆ – ೩೧೮೮೦) ಕೋವಿಡ್ ಪಾಸಿಟಿವ್ ವ್ಯಕ್ತಿಯು ದಿನಾಂಕ ೧೦-೦೭-೨೦೨೦ ರಂದು ೧೨.೪೨ ಗಂಟೆಗೆ ಜ್ವರ, ತೀವ್ರ ಉಸಿರಾಟ ತೊಂದರೆ ಲಕ್ಷಣಗಳಿಂದ ಮತ್ತು ನಾಲ್ಕು ವರ್ಷಗಳಿಂದ ಸಕ್ಕರೆ ಕಾಯಿಲೆ, ರಕ್ತದೊತ್ತಡ, ೨ ವರ್ಷಗಳಿಂದ ಹೃದಯ ಸಂಬAಧಿ ಕಾಯಿಲೆಗಳಿಂದ ಬಳಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟು ದಿನಾಂಕ ೧೦-೭-೨೦೨೦ ರಂದು ೯.೦೦ ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅದೇ ರೀತಿ ವಿಜಯಪುರ ನಗರದ ಕಾಳಿಕಾ ನಗರ, ಆಶ್ರಮದ ನಿವಾಸಿಯಾದ ೬೮ ವರ್ಷದ ಪುರುಷ (ರೋಗಿ ಸಂಖ್ಯೆ – ೩೫೨೧೬) ಕೋವಿಡ್ ಪಾಸಿಟಿವ್ ವ್ಯಕ್ತಿಯು ದಿನಾಂಕ ೦೭-೦೭-೨೦೨೦ ರಂದು ಕೆಮ್ಮು, ತೀವ್ರ ಉಸಿರಾಟ ತೊಂದರೆ ಲಕ್ಷಣಗಳಿಂದ ಮತ್ತು ಏಳು ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟು ದಿನಾಂಕ ೧೩-೭-೨೦೨೦ ರಂದು ೯.೦೦ ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೃತರ ಅಂತ್ಯಕ್ರಿಯೆಯನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಅವರು ತಿಳಿಸಿದ್ದಾರೆ.