Wednesday, July 15, 2020

16-07-2020 EE DIVASA KANNADA DAILY NEWS PAPER

ಜನಸಂಖ್ಯೆ ಹೆಚ್ಚಳವನ್ನು ನಿಯಂತ್ರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ


ಈ ದಿವಸ ವಾರ್ತೆ
ವಿಜಯಪುರ : ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯಿಂದಾಗಿ ಅನೇಕ ಸಮಸ್ಯೆಗಳು ಉದ್ಭಣಗೊಳ್ಳುತ್ತಿರುವುದಕ್ಕೆ ಕಾರಣವಾಗುತ್ತಿದೆ. ಈ ಕಾಣದಿಂದಾಗಿ ಜನಸಂಖ್ಯೆ ಹೆಚ್ಚಳವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಜಿಲ್ಲಾ ಆರೋಗ್ಯ ಇಲಾಖೆ ಮುಂದಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ವರಿ ಗೋಲಗೆರಿ ಅವರು ತಿಳಿಸಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ನಡೆದ ಜನಸಂಖ್ಯಾ ಸ್ಥಿತಿಗತಿ ಹಾಗೂ ಕುಟುಂಬ ಕಲ್ಯಾಣ ಸೇವೆಗಳ ಕುರಿತು ನಡೆದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ಜನಸಂಖ್ಯೆ ಹೆಚ್ಚಳದ ಪರಿಣಾಮ ನಾವು ಹಾಗೂ ನಮ್ಮ ಮುಂದಿನ ತಲೆಮಾರುಗಳು ಹೆಚ್ಚಿನ ತೊಂದರೆಗಳನ್ನು ಅನುಭವಿಸುವಂತಾಗಿದೆ. ನಗರ ಪ್ರದೇಶಗಳಲ್ಲಿ ಜನಸಂಖ್ಯೆ ಹೆಚ್ಚಳದಿಂದ ಕೊಳಚೆ ಪ್ರದೇಶಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಪೌಷ್ಠಿಕೆ, ಸಾಂಕ್ರಾಮಿಕ ರೋಗಗಳು ಹೆಚಳಕ್ಕೆ ಕಾರಣವಾಗಿದೆ. ಬಡತನ ಹೆಚ್ಚಳ, ನಿರುದ್ಯೋಗ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಜನಸಂಖ್ಯೆ ಕಾರಣವಾಗಿದೆ ಎಂದು ತಿಳಿಸಿದರು. 
ಜಿಲ್ಲಾ ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜನಸಂಖ್ಯೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಅನೇಕ ರೀತಿಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು. ವಿವಾಹಿತರು, ಮಹಿಳೆಯರು, ಯುವಕ/ಯುವತಿಯರಿಗೆ ಜನಸಂಖ್ಯೆ ಹೆಚ್ಚಳದಿಂದಾಗುವ ಪರಿಣಾಮಗಳನ್ನು ತಿಳಿಸಲಾಗುತ್ತಿದೆ. ವಿವಾಹಿತರು ಜನನ ಅಂತರವನ್ನು ಕಾಪಾಡಿ, ಜನನ ಅಂತರವನ್ನು ಕನಿಷ್ಠ ಒಂದು ಮಗುವಿನಿಂದ ಮತ್ತೊಂದು ಮಗುವಿಗೆ 4 ವರ್ಷ ಅಂತರವಿರಬೇಕು, ಎರಡು ಮಕ್ಕಳಾದ ಮೇಲೆ ಸ್ವಪ್ರೇರಿತವಾಗಿ ಬರುವ ಪುರುಷರಿಗೆ ಎನ್‍ಎಸ್‍ವಿ(ಪುರುಷರ ಸಂತಾನ ಹರಣ ಚಿಕಿತ್ಸೆ) ಮಾಡಿಸಿಕೊಳ್ಳಲು ಜಾಗೃತಿ ಮೂಡಿಸಲಾಗುತ್ತಿದೆ ಎಂದರು. 
ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೆ ತಂದಿದೆ. ಚಿಕ ್ಕಕುಟುಂಬ ಚೊಕ್ಕ ಕುಟುಂಬ ಎನ್ನುವ ಘೋಷವಾಖ್ಯದೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಜಿಲ್ಲೆಯಲ್ಲೂ ವಿವಿಧ ರೀತಿಯಲ್ಲಿ ಗ್ರಾಮಿಣ ಭಾಗದಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. 
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ ಅವರು ಮಾತನಾಡಿ ಜನಸಂಖ್ಯೆ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅನೇಕ ಕುಟುಂಬ ಕಲ್ಯಾಣ ಯೊಜನೆಗಳನ್ನು ಜಾರಿಗೆ ತಂದಿದ್ದು ಇದರಿಂದ ನವ ವಿವಾಹಿತರು ಈ ವಿಧಾನಗಳನ್ನು ಅಳವಡಿಸುವುದರಿಂದ ಮೊದಲ ಮಗುವನ್ನು 2 ವರ್ಷಗಳ ನಂತರ ಪಡೆಯಬಹುದು. ಮಕ್ಕಳ ಮಧ್ಯೆ ಮೂರರಿಂದ ನಾಲ್ಕು ವರ್ಷಗಳ ಅಂತರವನ್ನು ಕಾಯ್ದುಕೊಳ್ಳಬಹುದು, ತಾಯಿ ಮರಣ ಮತ್ತು ಶಿಶು ಮರಣ ಪ್ರಮಾಣವನ್ನು ತಗ್ಗಿಸಬಹುದಾಗಿದೆ ಎಂದರು. 
ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಜೈಬುನಿಸಾ ಬೀಳಗಿ, ಟಿ.ಎಚ್.ಇ.ಓ ಬಾಗವಾನ, ಕುಂಬಾರ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.