Friday, July 17, 2020

18-07-2020 EE DIVASA KANNADA DAILY NEWS PAPER

ಕೋರೋನಾವನ್ನು ತಡೆಗಟ್ಟಲು ವಿದ್ಯಾರ್ಥಿಗಳು ವಾರಿಯರ್ಸ್ ಮಾದರಿಯಲ್ಲಿ ಶ್ರಮಿಸಬೇಕಿದೆ ಕೆ.ಎನ್. ರಮೇಶ


ಈ ದಿವಸ ವಾರ್ತೆ
ವಿಜಯಪುರ: ಜಗತ್ತನೆ ಕಾಡುತ್ತಿರುವ ಕೊರೋನ ನಮ್ಮ ದೇಶದಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದು ಇದನ್ನು ತಗ್ಗಿಸಲು ವಿದ್ಯಾರ್ಥಿಗಳು ವಾರಿಯರ್ಸ್ ಮಾದರಿಯಲ್ಲಿ ಶ್ರಮಿಸಬೇಕಿದೆ ಎಂದು ವಿಜಯಪುರ ಜಿಲ್ಲೆಯ ವಿಜಯವಾಣಿ, ಕನ್ನಡ ದಿನಪತ್ರಿಕೆಯ ಸ್ಥಾನಿಕ ಸಂಪಾದಕರು, ರಮೇಶ ಕೆ ಎನ್ ಹೇಳಿದರು.
ಭಾರತ ಸರಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ  ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಿಜಯಪುರ ಮತ್ತು ವಿದ್ಯಾವರ್ಧಕ ಸಂಘದ ಕಲಾ, ವಾಣಿಜ್ಯ ಮತ್ತು ಬಿಸಿಎ (ದರಬಾರ) ಮಹಾವಿದ್ಯಾಲಯ, ವಿಜಯಪುರ, ಇವರ ಸಹಯೋಗದಲ್ಲಿ ಕೋವಿಡ್ 19 ನಿಯಂತ್ರಣದಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಅಂತರ್ಜಾಲ ಸಂವಾದ ಕರ‍್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಅವರು ಮಾತನಾಡಿದರು.
ರಾಜ್ಯದಲ್ಲಿ ಇತನಕ ಸರಿಸುಮಾರಿ ಸಾವಿರಕ್ಕೂ ಹೆಚ್ಚು ಮಂದಿ ಕೊರೋನಾಗಿ ಬಲಿಯಾಗಿದ್ದಾರೆ.
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಅಧ್ಯಯನದ ಪ್ರಕಾರ ದೇಶದಲ್ಲಿ ಸೆಪ್ಟೆಂಬರ್ ವೇಳೆಗೆ 35 ಲಕ್ಷಕ್ಕೂ ಅಧಿಕ ಮತ್ತು ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಕರೋನಾ ವೈರಸ್ ನಿಯಂತ್ರಣಕ್ಕೆ ಸರಕಾರಗಳು, ವೈದ್ಯರ ಜೊತೆಗೆ  ಸಮಾಜದ ಸಹಕಾರ ಅತ್ಯಗತ್ಯವಾಗಿ ಬೇಕಾಗಿದೆ. ಇಂದಿನ ಯುವ ಪೀಳಿಗೆ ಅದರಲ್ಲೂ ವಿದ್ಯಾರ್ಥಿಗಳೂ ಈ ನಿಟ್ಟಿನಲ್ಲಿ ಚಿಂತನೆ ಮಾಡುವ ಅವಶ್ಯಕತೆ ಅಧಿಕವಾಗಿದೆ. ಮೊದಲನೆಯದಾಗಿ ಯಾರಿಗೂ ಕರೋನಾ ವೈರಸ್ ಹರಡದಂತೆ ಎಚ್ಚರಕೆ ವಹಿಸುವ ಅವಶ್ಯಕತೆ ಹೆಚ್ಚಿದೆ. ಸ್ವಚ್ಛತೆ, ಮುಖಗವಸು ಬಳಸುವುದು, ಕಣ್ಣು, ಬಾಯಿ, ಮೂಗನ್ನು ಮುಟ್ಟಿಕೊಳ್ಳುವ ಸಂದರ್ಭ ಬಂದಾಗ ಕೈಯನ್ನು ಸೋಪಿನಿಂದ ಕೈಯನ್ನು ಸ್ವಚ್ಛಗೊಳಿಸಿಕೊಳ್ಳಬೇಕು.  ಬಿಸಿ ನೀರು ಸೇವನೆ, ಸಮಾಜಿಕ ಅಂತರ ಪಾಲನೆ ಹಲವು ವಿಷಯಗಳ ಬಗ್ಗೆ ಇತರರಿಗೆ ಸಾಧ್ಯವಾದಷ್ಟು ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು.
ಕುಮಾರಿ ಸುಶ್ಮಾ ನಾಯಕ, ಸಂಶೋಧನಾ ವಿದ್ಯಾರ್ಥಿ, ವಿಜಯಪುರ ಇವರು ಸಹ ಮಾತಾನಾಡಿದರು.
ವಿದ್ಯಾವರ್ಧಕ ಸಂಘದ ಕಲಾ, ವಾಣಿಜ್ಯ ಮತ್ತು ಬಿಸಿಎ ಮಹಾವಿದ್ಯಾಲಯ, ವಿಜಯಪುರದ ಪ್ರಾಚಾರ್ಯರಾದ ಗಿರೀಶ್ ಎಂ ಮಣ್ಣೂರ, ಅಧ್ಯಕ್ಷೀಯ ಭಾಷಣ ಮಾಡಿದರು.
ಉಪನ್ಯಾಸಕರಾದ ಮಂಜುನಾಥ ಜನಗೊಂಡ, ಅರುಣ್ ಕುಮಾರ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ವೆಬಿನಾರ್‌ನಲ್ಲಿ ಭಾಗವಹಿಸಿದ್ದರು. ಕ್ಷೇತ್ರ ಪ್ರಚಾರ ಅಧಿಕಾರಿಗಳಾದ ಜಿ ತುಕಾರಾಮಗೌಡ ಪ್ರಾಸ್ತಾವಕವಾಗಿ ಮಾತನಾಡಿದರು.
ಸಿ ಕೆ ಸುರೇಶ್ ಸ್ವಾಗತಿಸಿ ವಂದಿಸಿದರು.