Thursday, February 24, 2022

ಯುದ್ಧ ಹಿನ್ನೆಲೆ ಜಿಲ್ಲೆಯ ಸಾರ್ವಜನಿಕರಿಗಾಗಿ ಸಹಾಯವಾಣಿ


ಈ ದಿವಸ ವಾರ್ತೆ

 ವಿಜಯಪುರ: ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ಧ ನಡೆಯುವ ಸಂಭವವಿದ್ದು, ಈ ಸಂಧರ್ಭದಲ್ಲಿ ಉಕ್ರೇನ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ವಾಸವಾಗಿರುವ ವಿಜಯಪುರ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿ ಕಲೆ ಹಾಕುವ ಅವಶ್ಯಕತೆ ಇದ್ದು, ಅಂತಹವರ ಮಾಹಿತಿಯನ್ನು ಸಂಬಂಧಿಸಿರುವವರು ವಿಜಯಪುರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ :1077 ಗೆ 08352-221261, ಹಾಗು ರಾಕೇಶ್  ಜೈನಾಪುರ ಅವರ ಮೊಬೈಲ್ : 7019682740

ಕರೆ ಮಾಡಿ ಮಾಹಿತಿಯನ್ನು ನೀಡುವಂತೆ ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

25-02-2022 EE DIVASA KANNADA DAILY NEWS PAPER

Wednesday, February 23, 2022

24-02-2022 EE DIVASA KANNADA DAILY NEWS PAPER

ಕೆಪಿಸಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿಯಾಗಿ ಗೀತಾಂಜಲಿ ಪಾಟೀಲ್ ನೇಮಕ


ಗೀತಾಂಜಲಿ ಪಾಟೀಲ 

ಈ ದಿವಸ ವಾರ್ತೆ

ವಿಜಯಪುರ: ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಗೀತಾಂಜಲಿ ಪಾಟೀಲ ಅವರನ್ನು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರಾದ ಡಾ. ಬಿ. ಪುಷ್ಪ ಅಮರನಾಥ್ ಅವರು ಆದೇಶ ಹೊರಡಿಸಿದ್ದಾರೆ.
ಈ ಕೂಡಲೇ ಗೀತಾಂಜಲಿ ಪಾಟೀಲ ಅವರು ಮಹಿಳೆಯರನ್ನು ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ದೇಶದ ಆಡಳಿತದ ಮುಖ್ಯವಾಹಿನಿಗೆ ತರಲು ಹಾಗೂ ಪಕ್ಷದ ಸಂಘಟನೆ ಮತ್ತುಬಲವರ್ಧನೆಗಾಗಿ ಶ್ರಮಿಸಲು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

ಕಾನಿಪ ಜಿಲ್ಲಾ ಕಾಯ೯ದಶಿ೯ಯಾಗಿ ಅವಿನಾಶ ಬಿದರಿ ಅವಿರೋಧ ಆಯ್ಕೆ

ಈ ದಿವಸ ವಾರ್ತೆ

ವಿಜಯಪುರ:- ವಿಜಯಪುರ ಜಿಲ್ಲಾ ಕಾಯ೯ನಿರತ ಪತ್ರಕತ೯ರ ಸಂಘದ ಕಾಯ೯ದಶಿ೯ಯಾಗಿ ವಿಜಯಪುರ ನಗರದ  ಅವಿನಾಶ ಬಿದರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ಕೆ.ಮಲಗೊಂಡ ತಿಳಿಸಿದ್ದಾರೆ.

ಅವಿರೋಧ ಆಯ್ಕೆಯಾದ ಹಿನ್ನೆಲೆ ಹಿರಿಯ ಪತ್ರಕರ್ತರಾದ ಕೆ.ಕೆ ಕುಲಕರ್ಣಿ, ಸಿ.ಸಿ.ಕುಲಕರ್ಣಿ, ಮೋಹನ ಕುಲಕರ್ಣಿ, ಶರಣು ಮಸಳಿ, ವಿನೋದ ಸಾರವಾಡ, ಕಲ್ಲಪ್ಪ ಶಿವಶರಣ ಸೇರಿದಂತೆ ವಿಜಯಪುರ ಜಿಲ್ಲೆಯ ಕಾನಿಪ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.