Saturday, December 24, 2022

ದಸಾಪ ಜಿಲ್ಲಾಧ್ಯಕ್ಷರಾಗಿ ಬಸವರಾಜ ಜಾಲವಾದಿ ಆಯ್ಕೆ



 ಈ ದಿವಸ ವಾರ್ತೆ

ವಿಜಯಪುರ: ನಗರದ ಬಸವರಾಜ ಜಾಲವಾದಿ ಅವರನ್ನು ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ದಲಿತ ಸಾಹಿತ್ಯ ಪರಿಷತ್ ಬೆಳ್ಳಿ ಹಬ್ಬ ಆಚರಿಸುತ್ತಿರುವ ಈ ಸಂದರ್ಭ ರಾಜ್ಯದ ಜಿಲ್ಲಾ ಘಟಕಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಬಸವರಾಜ ಜಾಲವಾದಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಅರ್ಜುನ ಗೊಳಸಂಗಿ, ಕಾರ್ಯದರ್ಶಿ ಸುಭಾಷ ಹೊದ್ಲೂರ, ದಲಿತ ಸಾಹಿತ್ಯ ಪರಿಷತ್ ಬೆಳಗಾವಿ ವಿಭಾಗೀಯ ಸಂಯೋಜಕ ಡಾ.ಸುಜಾತಾ ಚಲವಾದಿ ಅವರು ಜಂಟಿ ಪತ್ರಿಕಾ ಪ್ರಕಟನೆ ನೀಡಿದ್ದಾರೆ.

ವಿಜಯಪುರ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ವಿವಿಧ ತಾಲೂಕು ಅಧ್ಯಕ್ಷರಾಗ ಬಯಸುವವರು ದಲಿತ ಸಾಹಿತ್ಯ, ಸಂಸ್ಕೃತಿ, ಕಲೆಯ ಬಗೆಗೆ ಆಸಕ್ತಿಯುಳ್ಳವರು ಜಿಲ್ಲಾ ಅಧ್ಯಕ್ಷ ಬಸವರಾಜ ಜಾಲವಾದಿ ಅವರನ್ನು (ಮೊ.9449292062) ಸಂಪರ್ಕಿಸಬಹುದಾಗಿದೆ ಎಂದು ಕೋರಲಾಗಿದೆ.