Wednesday, December 28, 2022

ನೌಕರ-ವಿರೋಧಿ NPS ಯೋಜನೆಯನ್ನು ರದ್ದುಗೊಳಿಸಿ : ಜಿಲ್ಲಾ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷರು ಸುರೇಶ್ ಜೀಬಿ ಆಗ್ರಹ

 ಈ ದಿವಸ ವಾರ್ತೆ

ವಿಜಯಪುರ: ದಿನಾಂಕ: 01.04.2006 ರಿಂದ ರಾಜ್ಯದಲ್ಲಿ ಜಾರಿಗೆ ತರಲಾಗಿರುವ ಪಿ.ಎಫ್.ಆರ್.ಡಿ.ಎ ಕಾಯಿದೆ ಪ್ರಾಯೋಜಿತ ಎನ್.ಪಿ.ಎಸ್‌ಯೋಜನೆಯಿಂದಾಗಿ ರಾಜ್ಯ ಸರ್ಕಾರಿ ನೌಕರರಿಂದ ನಿಶ್ಚಿತ ಪಿಂಚಣ ಯನ್ನು ಕಸಿದುಕೊಳ್ಳಲಾಗಿರುತ್ತದೆ. ಎನ್.ಪಿ.ಎಸ್‌ಯೋಜನೆಯಡಿ ಸಂಗ್ರಹವಾಗುವ ಶೇ. 10ರಷ್ಟು ನೌಕರರ ವಂತಿಕೆ ಮತ್ತು ಶೇ. 12 ರಷ್ಟು ಸರ್ಕಾರದ ವಂತಿಕೆಯನ್ನು ಪಿ. ಎಫ್. ಆರ್. ಡಿ. ಎ ಸಂಸ್ಥೆಯು ಫಂಡ್‌ಮ್ಯಾನೇಜರುಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ತೊಡಗಿಸುತ್ತಿದ್ದು, ಕಳೆದ 18 ವರ್ಷಗಳ ಅನುಭವ ತೋರಿಸಿಕೊಟ್ಟಿರುವುದೇನೆಂದರೆ, ಸರ್ಕಾರಿ ನೌಕರರ ಹಣ ಖಾಸಗೀ ಕಂಪನಿಗಳ ಷೇರು ಖರೀದಿಗೆ ವಿನಿಯೋಗವಾಗುತ್ತಿದ್ದು, ಷೇರು ಮಾರುಕಟ್ಟೆಯು ಜೂಜುಕೋರ ವ್ಯವಸ್ಥೆಯಾಗಿರುವುದರಿಂದ, ನಿವೃತ್ತಿಯಾಗುತ್ತಿರುವ ನೌಕರರಿಗೆ/ ಮರಣ ಹೊಂದಿರುವ ನೌಕರರ ಕುಟುಂಬಕ್ಕೆ ಮಾಸಿಕ ಪಿಂಚಣ  ಕೇವಲ ರೂ. 2,000 ದಿಂದ ರೂ. 3,000 ಮಾತ್ರವೇ ಬರುತ್ತಿದ್ದು, ಇದು ಮನೆಯ ಬಾಡಿಗೆಯಿರಲಿ, ವಿದ್ಯುತ್ ಮತ್ತು ನೀರಿನ ಶುಲ್ಕ ಕಟ್ಟಲು ಸಾಕಾಗುತ್ತಿಲ್ಲ ಎಂದು ಜಿಲ್ಲಾ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷರು ಸುರೇಶ್ ಜೀಬಿ ಅವರು ತಿಳಿಸಿದ್ದಾರೆ.

ನೌಕರ-ವಿರೋಧಿ NPS ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ  ಪಿಂಚಣ  ಯೋಜನೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಓPS ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ನೌಕರ-ಪರ ಸಂಘಟನೆಗಳು ಒಡಗೂಡಿ ದಿನಾಂಕ: 19/12/2022 ರಿಂದ  ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣ  ಕಾರ್ಯಕ್ರಮವನ್ನು ನಡೆಸುತ್ತಿವೆ. ಇದಕ್ಕೆ ಬೆಂಬಲವಾಗಿ ಹಲವಾರು ನೌಕರ ಪರ ಸಂಘಟನೆಗಳು ಬೆಂಬಲವನ್ನು ವ್ಯಕ್ತಪಡಿಸಿ ನೌಕರ ಪರ ಈ  ಬೇಡಿಕೆಯನ್ನು ಈಡೇರಿಸುವಂತೆ  ಸರ್ಕಾರವನ್ನು ಚಂದ್ರಶೇಖರ ಎಚ್ ಲೆಂಡಿ ಜಿಲ್ಲಾ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣ ದಾರರ ಒಕ್ಕೂಟ ರಾಜ್ಯ ಉಪಾಧ್ಯಕ್ಷರು ಆಗ್ರಹಿಸಿದರು.    

ದೇಶದ ಸರ್ವೋಚ್ಛ ನ್ಯಾಯಾಲಯವು ಪಿಂಚಣ  ಎಂಬುವುದು ನೌಕರರಿಗೆ ನೀಡುವ ಭಿಕ್ಷೆಯಲ್ಲ, ನೌಕರರು ದೀರ್ಘಾವಧಿಗೆ ಮಾಡಿದ ಸೇವೆ ಹಾಗೂ ಸದರಿ ಸೇವಾವಧಿಯಲ್ಲಿ ನೌಕರರ ಶ್ರಮಕ್ಕೆ ಮಾರುಕಟ್ಟೆ ದರಕ್ಕಿಂತ ಕಡಿಮೆ ವೇತನ ನೀಡಿ ಉಳಿದ ಮೊತ್ತವನ್ನು ಪಿಂಚಣ ಯ ರೂಪದಲ್ಲಿ ಇಳಿವಯಸ್ಸಿನ ಸಾಮಾಜಿಕ-ಆರ್ಥಿಕ ಭದ್ರತೆಗಾಗಿ ನೀಡುವಂತಹುದ್ದಾಗಿದೆ. ಇದನ್ನು “ಆeಜಿeಡಿeಜ Wಚಿges”  ಎಂದು ಅರ್ಥೈಸಲಾಗಿದೆ. 'ಪಿಂಚಣ ' ಎಂಬುದು ನೌಕರರು ಮಾಡಿದ ಸರ್ಕಾರಿ ಸೇವೆಗಾಗಿ, ಇಳಿ ವಯಸ್ಸಿನಲ್ಲಿ ನೌಕರರ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ನೀಡುವ ಹಕ್ಕಿನಂಶದ ಹಣವೆಂದು ಪರಿಗಣ ಸುವಂತೆ ಹೇಳಿದೆ (ಂIಖ- 1983-Sಅ-130) ಚಂದ್ರಶೇಖರ ಎಚ್ ಲೆಂಡಿ ಅವರು ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ರಾಜ್ಯದ ಎನ್.ಪಿ.ಎಸ್ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಮಕ್ಕಳು ಮತ್ತು ಕುಟುಂಬವರ್ಗದವರೊAದಿಗೆ ಸೇರಿ ಅಹೋರಾತ್ರಿ ಧರಣ ಯನ್ನು ನಡೆಸುತ್ತಿದ್ದಾರೆ. ಆದರೆ, ಇದುವರೆಗೂ ರಾಜ್ಯ ಸರ್ಕಾರವು ಈ ಕುರಿತು ಗಮನ ಹರಿಸದೇ ಇರುವುದು ನೌಕರರ ಜ್ವಲಂತ ಬೇಡಿಕೆಯ ಕುರಿತು ಇರುವ ಉದಾಸೀನ ಎನ್ನಬೇಕಾಗುತ್ತದೆ. ಹಲವು ವರ್ಷಗಳ ನಂತರ ರಾಜಸ್ಥಾನ/ಛತ್ತೀಸ್ ಗಡ್/ ಜಾರ್ಖಂಡ್/ ಪಂಜಾಬ್ ರಾಜ್ಯ ಸರ್ಕಾರಗಳು ಮಹತ್ವದ ನಿರ್ಧಾರಗಳನ್ನು ಹೊರಡಿಸಿವೆ.  ಅದೇ ರೀತಿಯಲ್ಲಿ, ನಮ್ಮ ರಾಜ್ಯ ಸರ್ಕಾರವೂ ಸಹ ನೌಕರ-ವಿರೋಧಿ ಓPS ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ  ಪಿಂಚಣ  ಯೋಜನೆಯನ್ನು ಮರುಸ್ಥಾಪಿಸುವ ಬೇಡಿಕೆಯನ್ನು ಈಡೇರಿಸುವ ಮೂಲಕ ಮಾದರಿ ರಾಜ್ಯಗಳಲ್ಲೊಂದಾಗಬೇಕೆAದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು  ಸರ್ಕಾರವನ್ನು ಆಗ್ರಹಿಸುತ್ತದೆ ಎಂದು  ಅಶೋಕ ಇಲಕಲ್ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಅವರು ತಿಳಿಸಿದ್ದಾರೆ.