Friday, July 21, 2023

22 ರಂದು ಗಾನಬನದಲ್ಲಿ ಗುರುವಂದನಾ ಕಾರ್ಯಕ್ರಮ


ವಿಜಯಪುರ : ಶ್ರೀ ಗುರು ಕುಮಾರೇಶ್ವರ ಪ್ರತಿμÁ್ಠನ (ರಿ) ಶ್ರೀ ಗಾನಯೋಗಿ ಪಂಚಾಕ್ಷರ ಪ್ರತಿμÁ್ಠನ (ರಿ) ವಿಜಯಪುರ ಇವರ ಸಹಯೋಗದಲ್ಲಿ ಶ್ರೀ ಶಿವಯೋಗಿ ಪುಟ್ಟರಾಜ ಗಾನಬನದ ಸಂಸ್ಥಾಪಕರಾದ ಗುರುಕಾರುಣ್ಯತೇಜ, ಗಾನಬನದ ಗಾನಗಂದರ್ವ, ಶ್ರೀ ಪಂ. ತೋಂಟದಾರ್ಯ ಕವಿಗವಾಯಿಗಳವರ 59ನೇ ಜನ್ಮದಿನದ ಅಂಗವಾಗಿ ಗುರುವಂದನಾ ಕಾರ್ಯಕ್ರಮವನ್ನು ದಿನಾಂಕ: 22-07-2023 ರಂದು ಶನಿವಾರ ರಂದು ಸಂಜೆ 6.30 ಗಂಟೆಗೆ ಶಿವಯೋಗಿ ಪುಟ್ಟರಾಜ ಗಾನಬನದ ಆವರಣ, ಎನ್.ಸಿ.ಸಿ. ಕಾರ್ಯಾಲಯದ ಹಿಂದುಗಡೆ, ಶ್ರೀ ಗಾನಯೋಗಿ ಪಂಚಾಕ್ಷರಿ ರಸ್ತೆ ವಿಜಯಪುರದಲ್ಲಿ ಹಮ್ಮಿಕೊಳ್ಳಲಾಗಿದೆ.

ದಿವ್ಯ ಸಾನ್ನಿಧ್ಯವನ್ನು ಬಸವನ ಬಾಗೇವಾಡಿ ಸಂಸ್ಥಾನ ಒಡೆಯರ ಹಿರೇಮಠದ ಶ್ರೀ ಷ.ಬ್ರ. ಶಿವಪ್ರಕಾಶ ಶೀವಾಚಾರ್ಯ ಮಹಾಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ. ಜ್ಞಾನ ಯೋಗಾಶ್ರಮದ ಅಧ್ಯಕ್ಷರಾದ ಪ.ಪೂ. ಬಸವಲಿಂಗ ಮಹಾಸ್ವಾಮಿಗಳು ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನ (ರಿ) ಗೌರವಾಧ್ಯಕ್ಷರಾದ ಬಸವರಾಜ ಪಿ. ಕೆಂಗನಾಳ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಜಯಪುರ ಜಿಲ್ಲೆಯ ಉಪನೋಂದಣಾಧಿಕಾರಿಗಳಾದ ಬಿ.ಎಸ್.ಬಿರಾದಾರ, ಪ್ರಥಮ ದರ್ಜೆ ಗುತ್ತಿಗೆದಾರರಾದ ಲಿಂಗರಾಜ ಹಿರೇಮಠ, ಚಿಕ್ಕಮಕ್ಕಳ ತಜ್ಞರಾದ ಡಾ. ಪರೀಕ್ಷಿತ ಕೋಟಿ ಭಾಗವಹಿಸಲಿದ್ದಾರೆ.

ಹಚ್ಯಾಳ ಹಿರೇಮಠದ ವೇ.ಮೂ. ವಿರುಪಾಕ್ಷಯ್ಯ ಶಾಶ್ತ್ರಿಗಳು ಪ್ರವಚನ ನುಡಿಗಳನ್ನಾಡಲಿದ್ದಾರೆ.

ತೊರವಿ ಹಿರೇಮಠದ ವೇ.ಮೂ. ಚಿದಾನಂದ ಶಾಸ್ತ್ರಿಗಳು ಉಪನ್ಯಾಸ ನೀಡಲಿದ್ದಾರೆ.

ಎಮ್.ವ್ಹಿ. ಹಿರೇಮಠ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ, ಶಿಕ್ಷಕರಾದ ಕೈಲಾಸನಾಥ ಮದಭಾವಿ ನಿರೂಪಿಸಲಿದ್ದಾರೆ. ಪಿ.ಸಿ. ಅರಕೇರಿಮಠ ಸ್ವಾಗತಿಸಲಿದ್ದಾರೆ. ಸುಭಾಸಚಂದ್ರ ಕನ್ನೂರ ವಂದಿಸಲಿದ್ದಾರೆ.  ಪಂ. ತೋಂಟದಾರ್ಯ ಕವಿ ಗವಾಯಿಗಳು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


No comments:

Post a Comment