Saturday, July 29, 2023


 ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ :ಶ್ರೀ ಸಿದ್ದೇಶ್ವರ ಸ್ವಾಮೀಜಿ ಮಂಟಪ, ಕುಮಾರ ಕಕ್ಕಯ್ಯ ಪೋಳ ವೇದಿಕೆ ಗೋಷ್ಠಿ -3:ಆಧುನಿಕ ಭಾರತದಲ್ಲಿ ಹೆಚ್ಚು ಜನರಿಗೆ ತಲುಪಿದ ಯಾವುದಾದರು ಚಿಂತನೆ ಇದ್ದರೆ ಅದು ಅಂಬೇಡ್ಕರ್ ಚಿಂತನೆ ನಿಮ್ನ ವರ್ಗಗಳ ಬದುಕಿನ ಸುತ್ತ ಪೋತೆ ಅವರ ಸಾಹಿತ್ಯ ರಚನೆಗೊಂಡಿದೆ ಅವರು ಬಳಸಿದ ಶಬ್ದ ಲಹರಿ ಅವರು ಬರೆದ ಸಾಹಿತ್ಯ ನೋಡಿದರೆ ಒಂದು ಕ್ಷಣ ಅಚ್ಚರಿಯಾಗುತ್ತದೆ ಎಂದು ಚಳ್ಳಕೆರೆಯ ಪ್ರೊ ಡಿ ಅಂಜನಪ್ಪ ಹೇಳಿದರು.

ಅವರು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜುಲೈ 29 ಮತ್ತು 30 ರಂದು ಎರಡು ದಿನಗಳ ಕಾಲ ದಲಿತ ಸಾಹಿತ್ಯ ಪರಿಷತ್ತಿನ  ಬೆಳ್ಳಿ ಸಂಭ್ರಮ ನಿಮಿತ್ಯ  ನಡೆಯುತ್ತಿರುವ ಅಖಿಲ ಭಾರತ 10ನೇ ದಲಿತ ಸಾಹಿತ್ಯ ಸಮ್ಮೇಳನದ ಗೋಷ್ಠಿ 3ರ ಸಮ್ಮೇಳನಾಧ್ಯಕ್ಷರ ಸಾಹಿತ್ಯದ ಕುರಿತು ವಿವಿಧ ಉಪನ್ಯಾಸಕರು ಮಂಡಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿ ಮಾತನಾಡಿದರು. ವೇದಿಕೆಯಲ್ಲಿ ಸಮ್ಮೇಳನ ಅಧ್ಯಕ್ಷ ಪ್ರೊ ಎಚ್ ಟಿ ಪೋತೆ ಡಾ ಮೂದೇನೂರು ನಿಂಗಪ್ಪ, ಡಾ ಕಿರಣ ಗಾಜನೂರು, ಡಾ ಶಿವರಾಜ ಬ್ಯಾಡರಹಳ್ಳಿ,   ಜಂಬುನಾಥ ಕಂಚ್ಯಾಣಿ, ಜೈನೇಶ ಪ್ರಸಾದ, ದೇವು ಪತ್ತಾರ, ಬಸವರಾಜ ಪೂಜಾರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ  ರಾಜ್ಯಾಧ್ಯಕ್ಷ ಡಾ. ಅರ್ಜುನ ಗೊಳಸಂಗಿ,  ಖಂಜಾಂಚಿ ಡಾ. ಎಚ್.‌ ಬಿ. ಕೋಲ್ಕಾರ, ಕಾರ್ಯದರ್ಶಿ ಸುಭಾಷ ಹೂಡ್ಲೂರ, ಉಪಾಧ್ಯಕ್ಷ ಡಾ.ವೈ.ಎಂ.ಭಜಂತ್ರಿ, ಸಂಯೋಜಕ ಬಸವರಾಜ ಜಾಲವಾದಿ, ಪ್ರಧಾನ ಸಂಯೋಜಕ ಶ್ರೀನಾಥ ಪೂಜಾರ, ಸಹ ಸಂಯೋಜಕ ಉಮೇಶ ಶಿವಶರಣ, ದಸಾಪ ತಾಲೂಕಾ ಅಧ್ಯಕ್ಷೆ ಡಾ. ಪೂರ್ಣಿಮಾ ಧಾಮಣ್ಣನವರ, ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ ಇದ್ದರು.ಅನುಪ್ರಿಯಾ ಬಿರಾದಾರ ಸ್ವಾಗತಿಸಿದರು ಪೂಜಾ ಸಿಂಗೆ ನಿರೂಪಿಸಿದರು ಶಂಕ್ರೆಮ್ಮ ಈಳಗೇರ ವಂದಿಸಿದರು.

No comments:

Post a Comment