Friday, July 28, 2023

ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎಚ್.ಟಿ.ಪೋತೆ ಅವರಿಗೆ ಅದ್ಧೂರಿ ಸ್ವಾಗತ

ಈ ದಿವಸ ವಾರ್ತೆ

ವಿಜಯಪುರ: ದಲಿತ ಸಾಹಿತ್ಯ ಪರಿಷತ್ತು (ರಿ) ರಾಜ್ಯ ಘಟಕ, ಗದಗ ಬೆಳ್ಳಿ ಸಂಭ್ರಮದ ನಿಮಿತ್ಯ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜುಲೈ 29 ಹಾಗೂ 30 ರಂದು ನಡೆಯಲಿರುವ 10ನೇಯ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸಮ್ಮೇಳನದ ಸರ್ವಾಧ್ಯಕ್ಷರಾದ ಪ್ರೊ.ಎಚ್.ಟಿ.ಪೋತೆ ಹಾಗೂ ಅವರ ಧರ್ಮಪತ್ನಿ ಲಲಿತಾ ಲಲಿತಾ ಪೋತೆ ಅವರು ವಿಜಯಪುರ ನಗರಕ್ಕೆ ಆಗಮಿಸಿದ ನಿಮಿತ್ಯ ವಿಜಯಪುರ ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು ಅದ್ಧೂರಿಯಾಗಿ ಪುಸ್ತಕ ನೀಡಿ ಆತ್ಮೀಯವಾಗಿ ಸ್ವಾಗತಿಸಿಕೊಂಡರು.

ಈ ಸಂದರ್ಭದಲ್ಲಿ ದ.ಸಾ.ಪ ರಾಜ್ಯಾಧ್ಯಕ್ಷರಾದ ಡಾ.ಅರ್ಜುನ ಗೊಳಸಂಗಿ, ಉಪಾಧ್ಯಕ್ಷ ಡಾ.ಎಚ್.ಬಿ.ಕೋಲಕಾರ, ಕಾರ್ಯದರ್ಶಿ ಸುಭಾಸ ಹುದ್ಲೂರ, ಸಮ್ಮೇಳನದ ಸಂಯೋಜಕ ಶ್ರೀನಾಥ ಪೂಜಾರಿ, ಸಹ ಸಂಯೋಜಕ ಉಮೇಶ ಶಿವಶರಣ, ದ.ಸಾ.ಪ ಜಿಲ್ಲಾಧ್ಯಕ್ಷ ಬಸವರಾಜ ಜಾಲವಾದಿ, ಬೆಳಗಾವಿ ವಿಭಾಗೀಯ ಅಧ್ಯಕ್ಷೆ ಡಾ. ಸುಜಾತಾ ಚಲವಾದಿ, ಸಾಹಿತಿ ದೊಡ್ಡಣ್ಣ ಭಜಂತ್ರಿ, ಹಿರಿಯ ಪತ್ರಕರ್ತ ಅನೀಲ ಹೊಸಮನಿ, ಪ್ರಭುಗೌಡ ಪಾಟೀಲ, ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ, ಮೋಹನ ಕಟ್ಟಿಮನಿ, ಚೆನ್ನು ಕಟ್ಟಿಮನಿ, ಫಯಾಜ ಕಲಾದಗಿ, ಡಾ.ಭುವನೇಶ್ವರಿ ಕಾಂಬಳೆ, ತ್ರಿವೇಣಿ ಬನಸೋಡೆ, ವನಜಾಕ್ಷಿ ನಿಡೋಣಿ, ಹೇಮಲತಾ ವಸ್ತ್ರದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

No comments:

Post a Comment