Saturday, July 29, 2023

ಅಕ್ಷರಸ್ಥರು ಮತ್ತು ಪ್ರಜ್ಞಾವಂತರು ಎಂದು ಕರೆಸಿಕೊಳ್ಳುವವರಿಂದ ಅಪಾಯವಿದೆ:ಡಾ ರಾಮಚಂದ್ರ ಗಾಣಾಪುರೆ

 


ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ :ಶ್ರೀ ಸಿದ್ದೇಶ್ವರ ಸ್ವಾಮೀಜಿ ಮಂಟಪ, ಕುಮಾರ ಕಕ್ಕಯ್ಯ ಪೋಳ ವೇದಿಕೆ ಗೋಷ್ಠಿ -2:ದೇಶದಲ್ಲಿ ನಡೆದ ಅನೇಕ ದುಕೃತ್ಯಗಳನ್ನು ನೋಡಿದಾಗ ಸಂವಿಧಾನ ಅಪಾಯದಲ್ಲಿದೆ ಎಂಬ ಭಾವನೆ ಮೂಡುತ್ತದೆ ದೇಶದಲ್ಲಿ ಅಕ್ಷರಸ್ಥರು ಮತ್ತು ಪ್ರಜ್ಞಾವಂತರು ಎಂದು ಕರೆಸಿಕೊಳ್ಳುವವರಿಂದ ಅಪಾಯವಿದೆ ಹೊರತು ಅನಕ್ಷರಸ್ಥರಿಂದ ಅಲ್ಲ ಎಂದು ಡಾ ರಾಮಚಂದ್ರ ಗಾಣಾಪುರೆ ಅವರು ಹೇಳಿದರು.ಅವರು ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜುಲೈ 29 ಮತ್ತು 30 ರಂದು ಎರಡು ದಿನಗಳ ಕಾಲ ದಲಿತ ಸಾಹಿತ್ಯ ಪರಿಷತ್ತಿನ  ಬೆಳ್ಳಿ ಸಂಭ್ರಮ ನಿಮಿತ್ಯ  ನಡೆಯುತ್ತಿರುವ ಅಖಿಲ ಭಾರತ 10ನೇ ದಲಿತ ಸಾಹಿತ್ಯ ಸಮ್ಮೇಳನದ ಗೋಷ್ಠಿ 2ರಲ್ಲಿ ನಮ್ಮ ಸಂವಿಧಾನ ನಮ್ಮ ರಕ್ಷಣೆ ಕುರಿತು ಡಾ ಸಿದ್ದನಗೌಡ ಪಾಟೀಲ ಅವರು ಮಂಡಿಸಿದ ವಿಷಯಕ್ಕೆ ಅವರು ಪ್ರತಿಕ್ರಿಯಿಸಿ ಮಾತನಾಡಿದರು 

ಈ ಸಂದರ್ಭದಲ್ಲಿ ಡಾ. ಸುಜಾತಾ ಚಲವಾದಿ ಶ್ರೀದೇವಿ ಉತ್ಲಾಸರ, ಸಂದೀಪ ವಿಶ್ವನಾಥ, ಡಾ. ಗಾಂಧೀಜಿ ಮೊಳಕೇರಿ ವೇದಿಕೆಯಲ್ಲಿದ್ದರು.

ಈ ಸಂದರ್ಭದಲ್ಲಿ  ರಾಜ್ಯಾಧ್ಯಕ್ಷ ಡಾ. ಅರ್ಜುನ ಗೊಳಸಂಗಿ,  ಖಂಜಾಂಚಿ ಡಾ. ಎಚ್.‌ ಬಿ. ಕೋಲ್ಕಾರ, ಕಾರ್ಯದರ್ಶಿ ಸುಭಾಷ ಹೂಡ್ಲೂರ, ಉಪಾಧ್ಯಕ್ಷ ಡಾ.ವೈ.ಎಂ.ಭಜಂತ್ರಿ, ಸಂಯೋಜಕ ಬಸವರಾಜ ಜಾಲವಾದಿ, ಪ್ರಧಾನ ಸಂಯೋಜಕ ಶ್ರೀನಾಥ ಪೂಜಾರ, ಸಹ ಸಂಯೋಜಕ ಉಮೇಶ ಶಿವಶರಣ, ದಸಾಪ ತಾಲೂಕಾ ಅಧ್ಯಕ್ಷೆ ಡಾ. ಪೂರ್ಣಿಮಾ ಧಾಮಣ್ಣನವರ, ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ ಇದ್ದರು.

ಆರತಿ ಸವ್ವಾಸೆ ಸ್ವಾಗತಿಸಿದರು. ಡಾ. ಕಪಿಲದೇವ ಚಕ್ರವರ್ತಿ ನಿರೂಪಿಸಿದರು. ಡಾ. ಗೀತಾ ಅಥರ್ಗಾ ವಂದಿಸಿದರು.

No comments:

Post a Comment