Friday, July 21, 2023

ಕುವೆಂಪು ಪ್ರಶಸ್ತಿಗೆ ಹಿರಿಯ ಸಾಹಿತಿ ಮಲ್ಲಿಕಾ ಘಂಟಿ ಆಯ್ಕೆ

           

ಈ ದಿವಸ ವಾರ್ತೆ

ವಿಜಯಪುರ: ಕುವೆಂಪು ಕಲಾನಿಕೇತನ ಸಂಸ್ಥೆಯು ರಾಷ್ಟ್ರಕವಿ ಕುವೆಂಪುರವರ 119ನೇ ಜಯಂತಿ ಅಂಗವಾಗಿ ಪ್ರತಿ ವರ್ಷ ನೀಡುವ 'ರಾಷ್ಟ್ರ ಕವಿ ಕುವೆಂಪು ಪ್ರಶಸ್ತಿ'ಗೆ ಹಿರಿಯ ಸಾಹಿತಿ ಹಾಗೂ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಎಸ್‌.ಘಂಟಿ ಆಯ್ಕೆಯಾಗಿದ್ದಾರೆ. 

ಈ ಪ್ರಶಸ್ತಿಯು 25 ಸಾವಿರ ನಗದು, ಬೆಳ್ಳಿ ಪದಕ, ಪ್ರಶಸ್ತಿ ಪತ್ರ ಒಳಗೊಂಡಿದೆ. ಆ.8ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಸಾಹಿತಿ ಡಾ.ಮಲ್ಲಿಕಾ ಎಸ್‌.ಘಂಟಿ ಅವರಿಗೆ ಪ್ರದಾನ ಮಾಡಲಿದ್ದಾರೆಂದು ಸಂಸ್ಥೆ ಅಧ್ಯಕ್ಷ ಕುವೆಂಪು ಪ್ರಕಾಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಹಿರಿಯ ಸಾಹಿತಿ ಮಲ್ಲಿಕಾ ಘಂಟಿ ಕುವೆಂಪು ಪ್ರಶಸ್ತಿಗೆ ಭಾಜನ ರಾದ ಹಿನ್ನೆಲೆ ವಿಜಯಪುರ ಜಿಲ್ಲೆಯ ಮಲ್ಲಿಕಾ ಘಂಟಿ ಅವರ ಅಭಿಮಾನಿ ಬಳಗದವರು ಅಭಿನಂದಿಸಿದ್ದಾರೆ.

No comments:

Post a Comment