Saturday, July 8, 2023

ಸಮ್ಮೇಳನದ ಪೂರ್ವ ಸಿದ್ದತಾ ಸಭೆ

 ಈ ದಿವಸ ವಾರ್ತೆ

ವಿಜಯಪುರ: ದಲಿತ ಸಾಹಿತ್ಯ ಪರಿಷತ್ತು (ರಿ) ರಾಜ್ಯ ಘಟಕ ಗದಗ ಹಾಗೂ ಜಿಲ್ಲಾ ಘಟಕ ವಿಜಯಪುರ ಬೆಳ್ಳಿ ಸಂಭ್ರಮದ ನಿಮಿತ್ಯ‌ ಜುಲೈ ೨೯, ಮತ್ತು ೩೦- ೨೦೨೩ ರಂದು ಎರಡು ದಿನಗಳ ಕಾಲ ನಡೆಯುವ ೧೦ ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಪೂರ್ವ  ಸಿದ್ದತೆಗಾಗಿ 3ನೇ ಪೂರ್ವ ಭಾವಿ ಸಭೆಯನ್ನು  ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ವಿಜಯಪುರದಲ್ಲಿ ದಿನಾಂಕ ೯/೭/೨೦೨೩ ರಂದು ಬೆಳಿಗ್ಗೆ 10.00 ಗಂಟೆಗೆ ಕರೆಯಲಾಗಿದೆ. 

ಈ  ಪೂರ್ವಭಾವಿ ಸಭೆಗೆ ದಸಾಪದ ರಾಜ್ಯ/ಜಿಲ್ಲಾ/ತಾಲ್ಲೂಕಿನ ಎಲ್ಲ ಪದಾಧಿಕಾರಿಗಳು, ದಲಿತ ಸಾಹಿತಿಗಳು, ಪ್ರಗತಿಪರ  ಚಿಂತಕರು,ಮತ್ತು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಈ ಸಭೆಗೆ ಆಗಮಿಸಲು ರಾಜ್ಯ ಘಟಕದ ಅಧ್ಯಕ್ಷರಾದ ಡಾ. ಅರ್ಜುನ ಗೊಳಸಂಗಿ, ಬೆಳಗಾವಿ ವಿಭಾಗೀಯ ಸಂಯೋಜಕರಾದಕರಾದ ಡಾ.ಸುಜಾತಾ ಚಲವಾದಿ,ವಿಜಯಪುರ ,ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಬಸವರಾಜ ಜಾಲವಾದಿ ಜಂಟಿಯಾಗಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

No comments:

Post a Comment