Friday, October 13, 2023

ಪ್ರದೇಶ ಕುರುಬರ ಸಂಘಕ್ಕೆ ಸಂಘಟನಾ ಕಾರ್ಯದರ್ಶಿ ಯಾಗಿ ರವಿ ಕಿತ್ತೂರ ಅವಿರೋಧ ಆಯ್ಕೆ

ಈ ದಿವಸ ವಾರ್ತೆ

ವಿಜಯಪುರ: ಗಾಂಧಿನಗರ ಬೆಂಗಳೂರಿನಲ್ಲಿನ ಕರ್ನಾಟಕ ಪ್ರದೇಶ ಕುರುಬರ ಸಂಘಕ್ಕೆ 35 ಜನ ಪದಾಧಿಕಾರಿಗಳು ಚುನಾವಣೆಯಲ್ಲಿ 34 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಇದರಲ್ಲಿ ವಿಜಯಪುರದ ರವಿ ಕಿತ್ತೂರ ಅವರನ್ನು ಸಂಘದ ಸಂಘಟನಾ ಕಾರ್ಯದರ್ಶಿಯಾಗಿಯನ್ನಾಗಿ ಅವಿರೋಧ ಆಯ್ಕೆಮಾಡಲಾಗಿದೆ. 

35 ಜನ ಪದಾಧಿಕಾರಿಗಳ ಆಯ್ಕೆಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಸಚಿವರಾದ ಬೈರತಿ ಸುರೇಶ, ಮಾಜಿ ಸಚಿವರಾದ ಎಚ್. ಎಂ. ರೇವಣ್ಣ. ಎಚ್ ವಿಶ್ವನಾಥ್, ಬಂಡೆಪ್ಪ ಕಾಶಂಪುರ. ಮಾಜಿ ರಾಜ್ಯಾಧ್ಯಕ್ಷರಾದ ಡಾ. ರಾಜೇಂದ್ರ ಸಣ್ಣಕ್ಕಿ. ಸುಬ್ರಹ್ಮಣ್ಯ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪನವರು . ವೆಂಕಟೇಶ್ ಮೂರ್ತಿ. ರಾಮಕೃಷ್ಣರವರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

102 ವಷರ್À ಇತಿಹಾಸ ಹೊಂದಿದ ಕುರುಬ ಸಮಾಜದ ಸಂಘಕ್ಕೆ ಅಳೆದು ತೂಗಿ ಕಳೆದ ಬಾರಿ ರಾಜ್ಯ ಸಹ ಕಾರ್ಯದರ್ಶಿಯಾಗಿದ್ದ ಜಿಲ್ಲೆಯ ರವಿ ಕಿತ್ತೂರ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಡ್ತಿ ನೀಡಿ ಮರು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಆಯ್ಕೆಯಾಗಲು ಶ್ರಮಿಸಿದ ರಾಜ್ಯ ನಾಯಕರಿಗೆ ಹಾಗೂ ರಾಜ್ಯದ 118 ನಿರ್ದೇಶಕರಿಗೆ ಜಿಲ್ಲೆಯ ಹಾಲುಮತ ಸಮಾಜದ ಅಧ್ಯಕ್ಷರು. ಮುಖಂಡರು ನೌಕರರ ವರ್ಗದವರು ವಿವಿಧ ಸಂಘಟನೆಗಳ ಮುಖಂಡರು ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eeಜivಚಿsಚಿ@gmಚಿiಟ.ಛಿom ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

No comments:

Post a Comment