Saturday, December 30, 2023

ಪರಮಾಣು ವಿಕಿರಣಗಳಿಂದ ಮಾನವನ ಆರೋಗ್ಯದ ಮೇಲೆ ಪರಿಣಾಮ: ಡಾ.ಸುರೇಖಾ ಹೊರ್ತಿಕರ್

 

ಚಡಚಣ: ಪಟ್ಟಣದ ಶ್ರೀ ಸಂಗಮೇಶ್ವರ ಕಲಾ, ವಾಣಿಜ್ಯ,ಬಿಸಿಎ, ಬಿ ಎಸ್ ಡಬ್ಲ್ಯೂ, ಬಿ,ಎಸ್ ಸಿ ಮತ್ತು ಸ್ನಾತಕೋತ್ತರ ಕಾಲೇಜಿನ (ಎಮ್.ಕಾಂ ಮತ್ತು ಎಮ್,ಎಸ್ ಡಬ್ಲ್ಯೂ,) ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಭಾಗದ ವತಿಯಿಂದ  "ಪರಮಾಣು ವಿಕಿರಣದ ಅಪಾಯಗಳಿಂದ ಮಾನವನ ಆರೋಗ್ಯದ ಮೇಲೆ ಪರಿಣಾಮ  ಮತ್ತು ವಿಶ್ಲೇಷಣಾತ್ಮಕ ರಸಾಯನಶಾಸ್ತ್ರ‌" ಎಂಬ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಸುರೇಖಾ ಹೊರ್ತಿಕರ್, ಪ್ರಾಂಶುಪಾಲರು, ಎಸಿಎಸ್ ಕಾಲೇಜು, ಉಮದಿ (ಮಹಾರಾಷ್ಟ್ರ)  ಇವರು ಮಾತನಾಡಿ 

ಪರಮಾಣು ಅಪಾಯಗಳಿಂದ ವಿಕಿರಣ ಸಂಬಂಧಿಸಿದಂತೆ ರೋಗ, ಅಂಗಾಂಶ ಹಾನಿ, ಅಕಾಲಿಕ ವಯಸ್ಸು  ಮುಂತಾದ ರೋಗಗಳು ಬರುತ್ತವೆ ಎಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ.ಎಸ್.ಬಿ.ರಾಠೋಡ ಮಾತನಾಡಿ ಪರಮಾಣುವಿನಿಂದ ಮಾನವನ ಆರೋಗ್ಯದ ಜೊತೆಗೆ ಪರಿಸರ ಮಾಲಿನ್ಯ, ವಾಯುಮಾಲಿನ್ಯ, ಜಲಮಾಲಿನ್ಯ ಮುಂತಾದ   ತೊಂದರೆಗಳು ಬರುತ್ತವೆ ಎಂದರು.

ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ  ಎಸಿಎಸ್ ಕಾಲೇಜು, ಉಮದಿ (ಮಹಾರಾಷ್ಟ್ರ)ಯ ಸಿಬ್ಬಂದಿಯಾದ ಪ್ರೊ.ಮೇಘಾ ಖಾನಾಪುರ,  ಮತ್ತು ಪ್ರೊ.ವೀಣಾ ಬಿರಾದಾರ ಆಗಮಿಸಿ ಪರಮಾಣು ವಿಕಿರಣದಿಂದ ಆಗುವ ಅನಾಹುತಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ವಿಭಾಗದ ಸಂಯೋಜಕರಾದ   ಶ್ರೀ ಎಂ.ಕೆ.ಬಿರಾದಾರ, ಐಕ್ಯೂಎಸಿ ಸಂಯೋಜಕರಾದ ಡಾ.ಎಸ್.ಎಸ್.ದೇಸಾಯಿ

ಪ್ರೊ.ಎ.ಎಸ್.ಜಂಗಮಶೆಟ್ಟಿ, ಪ್ರೊ.ಎ.ಎ.ಬಿಡಗೇರ್, ಪ್ರೊ.ಅಶ್ವಿನಿ ಹಿರೇಮಠ,ಬಿಎಸ್ಸಿ ಮತ್ತು ವಿವಿಧ ವಿಭಾಗಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

ಪ್ರೊ.ಎ.ಆರ್.ಪಾಟೀಲ ನಿರೂಪಿಸಿದರು, ಪ್ರೊ.ದಿವ್ಯಶ್ರೀ ಬೋಗಾರ ಸ್ವಾಗತಿಸಿದರು, ಪ್ರೊ. ನೇಹಾ ಉಮರಾಣಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, December 29, 2023

ಶಿವಾನಂದ ಪಾಟೀಲರ ಮೇಲಿನ ಆರೋಪ ಸಲ್ಲದು : ಡಾ. ಬಾಬು ಬಿ. ಕುಚನೂರ


ವಿಜಯಪುರ: ಸಚಿವ ಶಿವಾನಂದ್ ಪಾಟೀಲ್‌ರ ಹೇಳಿಕೆಯನ್ನು, ತಿವಿಚಲಾಗಿದೆ, ಅವರು ರೈತರ ಮಗ, ರೈತರ ಹಿತ ಚಿಂತಕ, ಅವರನ್ನು ಎದುರಾಳಿಗಳು ಅವರನ್ನು, ತೇಜೋವದೇ ಮಾಡುವ ಉದ್ದೇಶ ದಿಂದ, ಅವರ ಹೇಳಿಕೆಯನ್ನು, ತಿವಿಚಿ ಅಪಪ್ರಚಾರ ಮಾಡುತಿದ್ದಾರೆ ಎಂದು ಕುಚನೂರ ಫೌಂಡೇಶನ್ ಅಧ್ಯಕ್ಷ ಹಾಗೂ ಕೋ- ಆಫರೇಟಿವ್ ಆಸ್ಪತ್ರೆ ನಿರ್ದಶಕ ಹಾಗೂ ಶ್ರೀ ಸಿದ್ಧಾರೂಢ ಮಠದ ಆಜೀವ ಸದಸ್ಯರಾದ ಡಾ. ಬಾಬು ಬಿ. ಕುಚನೂರ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಶಿವಾನಂದ ಪಾಟೀಲ ಅವರು ಸೌಮ್ಯ ಸ್ವಭಾವ ವ್ಯಕ್ತಿಯಾಗಿದ್ದಾರೆ. ಅವರು ರೈತರ ಕುರಿತು ಅಪಾರ ಕಾಳಜಿಯನ್ನು ಹೊಂದಿದ್ದಾರೆ. ಅವರು ರೈತ ವಿರೋಧಿ ಆಗಿದ್ದರೆ ಎಪಿಎಂಸಿ ಕಾಯ್ದೆ ತಿದ್ದುಪಡಿ ಗೆ ಹಾಗೂ ಕಬ್ಬು ಬೆಳೆಗಾರರಿಗೆ ಒಳ್ಳೆಯ ನಿಗದಿತ ಬೆಲೆ, ಮತ್ತು ಕಬ್ಬು ಬೆಳೆಗಾರಿಗೆ ಆಗುವ ಗಾತ್ರದಲ್ಲಿ, ವೈತ್ಯಾಸವನ್ನು ಅಧಿವೇಶನದಲ್ಲಿ ವಾದವನ್ನು ಮಂಡುಸುತ್ತಿರಲಿಲ್ಲ.. ಅದೇ ರೀತಿ ಡಿಸಿಸಿ ಬ್ಯಾಂಕ್ ಮುಖಾಂತರ ಅಪಾರ ರೈತ ಬಾಂಧವರಿಗೆ ಸಾಲ ಮನ್ನಾ ಮಾಡುವ ಮುಖಾಂತರ ರೈತರ ಮೆಚ್ಚುಗೆ ಪಾತ್ರರಾಗಿದ್ದಾರೆ. ಇಂತಹ ವಿಷಯಗಳನ್ನು ಎದುರಾಳಿಗಳು ಎಲ್ಲಿಯೂ ಹೇಳುವುದಿಲ್ಲ. ರೈತಬಾಂಧವರೇ, ನೀವು ಇಲ್ಲದೆ ದೇಶವೆ ಶೂನ್ಯ, ನಿಮ್ಮನ್ನು ಸಚಿವ ಶಿವಾನಂದ್ ಪಾಟೀಲರು ಅಷ್ಟೇ ಅಲ್ಲಾ ಬೇರೆ ಯಾವ ಸಚಿವರೂ ಕೂಡಾ, ಅವಹೇಳನೆ ಕಾರಿ ಮಾತುಗಳನ್ನು ಹೇಳಲು ಸಾಧ್ಯವಿಲ್ಲ, ಇದೆಲ್ಲ ವಿರೋಧ ಪಕ್ಷದ ಕೈವಾಡ, ರೈತರು ಯಾರು ಅನ್ಯತಾ ಭಾವಿಸದಿರಿ. ಶಿವಾನಂದ ಪಾಟೀಲರು ರೈತರ ಪರವಾಗಿದ್ದಾರೆ. ಅವರ ಏಳ್ಗೆ ಸಹಿಸದ ಕೆಲವು ಕುತಂತ್ರಿಗಳು ಈ ರೀತಿಯಾಗಿ ಅವರ ಹೆಸರನ್ನು ಕೆಡಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Thursday, December 28, 2023

ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಲು ಕರವೇ ಕಾರ್ಯಕರ್ತರ ಆಗ್ರಹ


ವಿಜಯಪುರ : ಕನ್ನಡ ನಾಮ ಫಲಕ ಹೋರಾಟದಲ್ಲಿ ಪಾಲ್ಗೊಂಡ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡರನ್ನು ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಹಾಗೂ ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.


ವಿಜಯಪುರ ನಗರ ಗಾಂಧಿವೃತ್ತದಲ್ಲಿ ಜಮಾಯಿಸಿದ ಕರವೇ ಪದಾಧಿಕಾರಿಗಳು ನಿನ್ನೆ ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಕನ್ನಡ ನಾಮ ಫಲಕ ಕಡ್ಡಾಯವಾಗಿ ಅಳವಡಿಸುವಂತೆ ಶಾಂತಿಯುತ ಹೋರಾಟ ಕೈಕೊಂಡ ರಾಜ್ಯಾಧ್ಯಕ್ಷರಾದ ಟಿ.,ಎ. ನಾರಾಯಣಗೌಡರನ್ನು ಸೇರಿದಂತೆ ಹಲವು ಕಾರ್ಯಕರ್ತರನ್ನು ಹಾಗೂ ವಿಜಯಪುರ ಜಿಲ್ಲಾಧ್ಯಕ್ಷರಾದ ಎಂ.ಸಿ. ಮುಲ್ಲಾ ಅವರನ್ನು ಬಂಧಿಸಿರುವ ಸರ್ಕಾರದ ಧೋರಣೆಯನ್ನು ನಾವು ಖಂಡಿಸುತ್ತೇವೆ. 

ಈ ಪ್ರತಿಭಟನೆಯನ್ನುದ್ದೇಶಿಸಿ ನಗರ ಅಧ್ಯಕ್ಷರಾದ ಫಯಾಜ ಕಲಾದಗಿಯವರು ಮಾತನಾಡಿ, ಸರ್ಕಾರದ ಕನ್ನಡ ವಿರೋಧಿ ನೀತಿ ನಾವು ಸಹಿಸಲು ಸಾಧ್ಯವಿಲ್ಲ ಕನ್ನಡಿಗರನ್ನು ಕೆಣಕಿದ ರಾಜ್ಯ ಸರ್ಕಾರದ ಹುನ್ನಾರದ ಸಲ್ಲದು ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಬಂಧಿತರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿದರು. ಮಾನ್ಯ ಮುಖ್ಯಮಂತ್ರಿಗಳು ಇದನ್ನು ಅರ್ಥೈಸಿಕೊಂಡು ಕೂಡಲೇ ಬಂಧಿತರನ್ನು ಬಿಡುಗಡೆಗೊಳಿಸಬೇಕು. ಇಲ್ಲದಿದ್ದರೆ ಉಗ್ರಹೋರಾಟ ಕೈಗೊಳ್ಳಲಾಗುವುದೆಂದು ಎಂದು ಎಚ್ಚರಿಸಿದರು.

ಜಿಲ್ಲಾ ಪ್ರಧಾನ ಕಾರ್ಯದಾರ್ಶಿ ಸುರೇಶ ಬಿಜಾಪೂರರವರು ಮಾತನಾಡಿ, ಉಗ್ರವಾಗಿ ಖಂಡಿಸಿದರು.

ಕರವೇ ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕರಾದ ದಸ್ತಗೀರ ಸಾಲೋಟಗಿ ಮಾತನಾಡಿ, ಸರ್ಕಾರದ ಕರವೇ ವಿರುದ್ಧ ನಡೆದುಕೊಳ್ಳುತ್ತಿರುವ, ರೀತಿ ನೀತಿ, ಸರಿ ಕಂಡು ಬರುತ್ತಿಲ್ಲ ಕರವೇಯಲ್ಲಿ ಪಕ್ಷಾತೀತ ಎಲ್ಲ ಧರ್ಮಿಯರು ಇರುವುದನ್ನು ಸರ್ಕಾರ ಗಮನಿಸಬೇಕು ಎಂದರು. ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಅಳವಡಿಸಿ ಕನ್ನಡ ಪ್ರೇಮವನ್ನು ಮೆರೆಯಬೇಕು ಎಂದರು.

ಪ್ರತಿಭಟನೆಯಲ್ಲಿ ಅಶೋಕ ನಾವಿ, ಬಸವರಾಜ ಚಪ್ರೆ, ದಯಾನಂದ ಸಾವಳಗಿ, ರವಿ ಮುರಗೋಡ, ಮನೋಹರ ತಾಜವ, ಬಸವರಾಜ ಬಿ.ಕೆ, ರಜಾಕ ಕಾಖಂಡಕಿ, ಆಸೀಫ ಪೀರವಾಲೆ, ತಾಜುದ್ದೀನ ಖಲಿಪಾ, ಸಂತೋಷ ಮುದೋಳ, ಡಿ.ಎಸ್.ಪೀರಜಾಧೆ, ಕೆ.ಕೆ.ಬನಹಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು ಪ್ರತಿಭಟನೆ ಕೈಕೊಂಡು ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಸಮಗ್ರ ನೀರಾವರಿಗಾಗಿ ಪ್ರತ್ಯೇಕ ವಿಶೇಷ ಅಧಿವೇಶನವನ್ನು ವಿಜಯಪುರದಲ್ಲಿ ನಡೆಸಲು ಅಖಂಡ ಕರ್ನಾಟಕ ರೈತ ಸಂಘ ಆಗ್ರಹ


ವಿಜಯಪುರ : ಸಮಗ್ರ ನೀರಾವರಿಗಾಗಿ ಪ್ರತ್ಯೇಕ ವಿಶೇಷ ಅಧಿವೇಶನವನ್ನು ವಿಜಯಪುರ ನಗರದಲ್ಲಿ ನಡೆಸಲು ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಜಲಾಶಯದ ನೀರಿನ ಮಟ್ಟ ಎತ್ತಿರಿಸುವುದು ಸೇರಿದಂತೆ ವಿವಿಧ  ಬೇಡಿಕೆ ಈಡೇರಿಸುವ ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 524.256ಕ್ಕೆ ನೀರು ನಿಲ್ಲಿಸಲು ನ್ಯಾಯಮೂರ್ತಿ ಬ್ರಿಜೇಶ್ ಕುಮಾರ ನೇತೃತ್ವದ 2ನೇ ನ್ಯಾಯಾಧೀಕರಣವು 2010 ರಲ್ಲಿ ತೀರ್ಪು ನೀಡಿತ್ತು. 2013ರಲ್ಲಿ ಅಂತಿಮ ತೀರ್ಪು ನೀಡಿದ್ದು ಇಲ್ಲಿವರೆಗೂ ಜಲಾಶಯದ ನೀರಿನಮಟ್ಟವನ್ನು ಎತ್ತರಿಸಲು ಇನ್ನೂವರೆಗೂ ಗೇಟ್ ಅಳವಡಿಸಿಲ್ಲ. ಹೀಗಾಗಿ ವಿಜಯಪುರ ಜಿಲ್ಲೆ ಇನ್ನೂ ಸಂಪೂರ್ಣ ನೀರಾವರಿಗೆ ಒಳಪಟ್ಟಿಲ್ಲ. ಬೇಸಿಗೆ ಸಂದರ್ಭದಲ್ಲಿ ಒಂದೊಂದು ಬಾರಿ ಕುಡಿಯಲು ಕೂಡ ನೀರಿನ ತತ್ವಾರ ಎದುರಾಗುತ್ತದೆ. 5 ನದಿಗಳು ಹರಿದು ಪಂಚ ನದಿಗಳ ಬೀಡು ಎಂದು ಹೇಳಿಕೊಳ್ಳಲು ಮಾತ್ರ ಸೀಮಿತವಾಗಿದೆ. ಆದರೆ ಸಮಗ್ರ ನೀರಾವರಿಗೆ ಸರ್ಕಾರ ಮನಸ್ಸು ಮಾಡುತ್ತಿಲ್ಲ. 524.256 ಕ್ಕೆ ನೀರು ನಿಲ್ಲಿಸಿದರೆ ಇನ್ನೂ ಅಂದಾಜು 20 ರಿಂದ 22 ಹಳ್ಳಿಗಳು ಬಾಧಿತಗೊಳ್ಳುತ್ತವೆ. ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಹೆಕ್ಟೆರ್ ಜಮೀನು ಮುಳುಗಡೆ ಹೊಂದುತ್ತವೆ. ಇವೆಲ್ಲವುಗಳಿಗೆ ಪುನರ್ವಸತಿ ಮತ್ತು ಪುನರ್‍ನಿರ್ಮಾಣ ಹಾಗೂ ಜಮೀನುಗಳ ಪರಿಹಾರಕ್ಕೆ ಅಂದಾಜು 75 ಸಾವಿರ ಕೋಟಿಯಿಂದ 1 ಲಕ್ಷ ಕೋಟಿ ವರೆಗೆ ಹಣ ಬೇಕು. ಈ ಕುರಿತು ಹಿಂದಿನ ಅಧಿವೇಶನದಲ್ಲಿಯೂ ಕೂಡ ಸರ್ಕಾರ ಆಲಮಟ್ಟಿ ಜಲಾಶಯದ ಕುರಿತು ಯಾವೊಬ್ಬರು ಶಾಸಕರಾಗಲಿ ಸಚಿವರಾಗಲಿ ಮಾತನಾಡಲಿಲ್ಲ. ಹೀಗಾಗಿ ಜಿಲ್ಲೆಯ ರೈತರು ಹತಾಶಗೊಂಡಿದ್ದಾರೆ. ಇನ್ನು ಮುಂದಾದರೂ ಸರ್ಕಾರ ಇದಕ್ಕಾಗಿಯೇ ಪ್ರತ್ಯೇಕವಾಗಿ ವಿಶೇಷ ಅಧಿವೇಶವನ್ನು ವಿಜಯಪುರ ನಗರದಲ್ಲಿಯೇ ಹಮ್ಮಿಕೊಂಡು ನೀರಾವರಿ ಕುರಿತು ಸಮಗ್ರ ಚರ್ಚಿಸಿ ನ್ಯಾಯಾಧೀಕರಣ ತೀರ್ಪಿನಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ವಿಜಯಪುರದಲ್ಲಿಯೇ ವಿಶೇಷ ಅಧಿವೇಶನ ನಡೆಸಿದರೆ ಅನಿವಾರ್ಯವಾಗಿ ಜಿಲ್ಲೆಯ ಶಾಸಕರು ಸಚಿವರು ಅನಿವಾರ್ಯವಾಗಿ ವಿಷಯವನ್ನು ಪ್ರಸ್ತಾಪ ಮಾಡಲೇಬೇಕಾಗುತ್ತದೆ ಎಂದರು.

ರಾಜ್ಯದ ರೈತರಿಗೆ ಸಬ್ಸಿಡಿ ರೀತಿಯಲ್ಲಿ ಸಮರ್ಪಕವಾಗಿ ಸ್ಪ್ರಿಂಕ್ಲರ್ ಸೆಟ್ಟುಗಳನ್ನು ರೈತರಿಗೆ ಕೊರತೆಯಾಗದಂತೆ ಪೂರೈಸಬೇಕು. ಹಿಂದಿನ ಸರ್ಕಾರದ ಅವಧಿಯಲ್ಲಿ ರೈತರಿಗೆ ಸ್ಪ್ರಿಂಕ್ಲರ್ ಉಪಕರಣಗಳನ್ನು ಸರಿಯಾಗಿ ಸರಬರಾಜು ಮಾಡದೆ ಇರುವುದರಿಂದ ಬಹುತೇಕ ರೈತರಿಗೆ ಉಪಕರಣಗಳು ಲಭ್ಯವಾಗಿಲ್ಲ. ಒಂದೊಂದು ಜಿಲ್ಲೆಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ರೈತರು ಎಲ್ಲ ಸೇರಿದರೂ ಕೇವಲ 10 ಸಾವಿರ ಸ್ಪ್ರಿಂಕ್ಲರ್ ಸೆಟ್ಟುಗಳನ್ನು ಪ್ರತಿಯೊಂದು ಜಿಲ್ಲೆಗೆ ಪೂರೈಸಿದ್ದಾರೆ. ಇದೇ ರೀತಿ ನಮ್ಮ ಜಿಲ್ಲೆಗೂ 10 ಸಾವಿರ ಸೆಟ್ಟುಗಳನ್ನು ಪೂರೈಸಿದ್ದಾರೆ. ಅತೀ ಕಡಿಮೆ ಸ್ಪ್ರಿಂಕರ್ ಸೆಟ್ಟುಗಳನ್ನು ಪೂರೈಸಿದ್ದರಿಂದ ಒಬ್ಬರಿಗೆ ಸಿಕ್ಕಿತ್ತು ಇನ್ನೊಬ್ಬ ರೈತರಿಗೆ ಸಿಕ್ಕಿಲ್ಲ ಎಂಬಂತಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ರೈತರ ಸಂಖ್ಯೆಯನ್ನು ಗಣನೆಗೆ ತೆಗೆದುಕೊಂಡು ಅಗತ್ಯವಿರುವಷ್ಟು ಸ್ಪ್ರಿಂಕ್ಲರ್ ಸೆಟ್ಟುಗಳನ್ನು ಪೂರೈಸಬೇಕೆಂದು ಒತ್ತಾಯಿಸಿದರು.

ಈ ಹಿಂದೆ ರೈತರು ಪೋಡಿಮಾಡಲು ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಎಷ್ಟೇ ಎಕರೆ ಜಮೀನು ಹೊಂದಿದ್ದರೂ ಈ ಮೊದಲು 1200 ರೂ. ಮಾತ್ರ ಭರಣಾಮಾಡಿಕೊಂಡು ಪೋಡಿ ಮಾಡಿಕೊಡುತ್ತಿದ್ದರು. ಈ ಸದ್ಯ ಪೋಡಿ ಮಾಡಲು 2 ಎಕರೆಗೆ 1500 ರೂ. ನಂತೆ ಭರಣಾ ಮಾಡಿಕೊಂಡು ಮುಂದೆ ಪ್ರತಿ ಎಕರೆಗೆ 400 ರೂಪಾಯಿಯಂತೆ ಭರಣಾ ಮಾಡಬೇಕಾಗುತ್ತದೆ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಮೊದಲಿನಂತೆ ಎಷ್ಟೇ ಎಕರೆ ಜಮೀನು ಹೊಂದಿದ್ದರೂ 1200 ರೂಪಾಯಿಯಲ್ಲಿ ಪೋಡಿ ಮಾಡಿ ಕೊಡಬೇಕೆಂದು ಆಗ್ರಹಿಸಿದರು.

ಬಸವನ ಬಾಗೇವಾಡಿ ತಾಲೂಕಿನ ಕವಲಗಿ, ಅಂಗಡಗೇರಿ, ತೆಲಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕೃಷಿ ಪಂಪ್ ಸೆಟ್ಟುಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಗುಣ ಮಟ್ಟದ ಪೂರೈಕೆ ಇಲ್ಲದ ಕಾರಣ ಮನೆಗಳ ವಿದ್ಯುತ್ ದೀಪಗಳು ಸಂಪೂರ್ಣ ಕಳಪೆ ಮಟ್ಟದಲ್ಲಿ ಇರುವುದರಿಂದ ಮೊಬೈಲ್ ಚಾರ್ಜ್‍ಕೂಡ ಆಗುವುದಿಲ್ಲ. ಕೃಷಿ ಪಂಪ್ ಸೆಟ್ಟುಗಳು ಪ್ರಾರಂಭವಾಗುವುದಿಲ್ಲ. ಆದ್ದರಿಂದ ಗುಣಮಟ್ಟದಿಂದ ವಿದ್ಯುತ್‍ನ್ನು ಪೂರೈಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ತಾ. ಉಪಾಧ್ಯಕ್ಷರು ಬ.ಬಾಗೇವಾಡಿ ಹೊನಕೇರೆಪ್ಪ ತೆಲಗಿ, ತಾಲೂಕ ಕಾರ್ಯಾಧ್ಯಕ್ಷರು ಸೋಮನಗೌಡ ಪಾಟೀಲ, ಸಿದ್ದಪ್ಪ ಕಲಬೀಳಗಿ, ಸಂಗಪ್ಪ ಮುಂಡಗನೂರ, ನಂದುಗೌಡ ಬಿರಾದಾರ, ಗುರಲಿಂಗಪ್ಪ ಪಡಸಲಗಿ, ದಾವಲಸಾಬ ನಧಾಫ, ಬಸಯ್ಯಮಠ, ರಾಮನಗೌಡ ಹಾದಿಮನಿ, ಶಿವರಾಜ ಬಿರಾದಾರ, ಬಸನಗೌಡ ಪಾಟೀಲ,ಅಪ್ಪಾಸಾಹೇಬಗೌಡ ಕೋಳೂರ, ಮಲ್ಲಿಕಾರ್ಜುನ ನಾವಿ ಸೇರಿದಂತೆ ಮುಂತಾದವರುಉಪಸ್ಥಿತರಿದ್ದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಉದ್ದೇಶಿತ ಫುಡ್ ಪಾರ್ಕ ಸ್ಥಳಕ್ಕೆ ಸಿಇಓ ರಾಹುಲ್ ಶಿಂಧೆ ಭೇಟಿ-ಪರಿಶೀಲನೆ


ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಡಿ.27ರ ಬುಧವಾರದಂದು ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. 

ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಸುಮಾರು 75 ಎಕರೆ ಭೂಮಿಯನ್ನು ಕರ್ನಾಟಕ ಆಹಾರ ನಿಯಮಿತ (ಫುಡ್ ಕರ್ನಾಟಕ ಲಿ.) ಸಂಸ್ಥೆಗೆ ಮೀಸಲಿಡಲಾಗಿದೆ. ಇಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗುತ್ತದೆ. ಮೊದಲನೇ ಹಂತದಲ್ಲಿ 25 ಎಕರೆ ಭೂಮಿಯನ್ನು ಅಭಿವೃದ್ಧಿಪಡಿಸಿ ಇಂಡಸ್ಟ್ರಿಯಲ್ ಫ್ಲಾಟ್‌ಗಳನ್ನು ತಯಾರಿಸಲಾಗುತ್ತದೆ. ಹಾಗೂ ಕೃಷಿ ಕೈಗಾರಿಕೆ ಮಾಡುವವರಿಗೂ ಸಹ ಅವಕಾಶ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಕೋಲ್ಡ್ ಸ್ಟೋರೇಜ್ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಪಡಿಸುವುದು ಮತ್ತು ಮೂರನೇ ಹಂತದಲ್ಲಿ ಒಳಚರಂಡಿ ಸಂಸ್ಕರಣಾ ಘಟಕ ಬಳಸಿದ ನೀರನ್ನು ಮರು ಬಳಕೆ ಮಾಡುವ ಉದ್ದೇಶದಿಂದ ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗುತ್ತದೆ. ಹೀಗೆ ಮೂರು ಹಂತಗಳಲ್ಲಿ ಈ ಫುಡ್ ಪಾರ್ಕ್ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಲಾಗಿದೆ. ಪ್ರಸ್ತುತದಲ್ಲಿ ರಸ್ತೆ ಸಂಪರ್ಕ, ಚರಂಡಿ ವ್ಯವಸ್ಥೆ, ನೀರು ಸರಬರಾಜು ಹಾಗೂ ವಿದ್ಯುತ್ ಸರಬರಾಜು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಇದನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖಾಂತರ ಅಭಿವೃದ್ಧಿ ಪಡಿಸಲು ಯೋಜನೆಯು ನಗರ ಯೋಜನಾ ಅನುಮೋದನೆ ಹಂತದಲ್ಲಿರುತ್ತದೆ. 

 ಈ ಸಂದರ್ಭದಲ್ಲಿ ಅಲ್ಲಿನ ಸ್ಥಿತಿಗತಿ ಹಾಗೂ ಸದರಿ ಕಾಮಗಾರಿಯನ್ನು ಕಡಿಮೆ ಸಮಯದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸುವ ವಿಧಾನದ ಕುರಿತು ಚರ್ಚೆ ನಡೆಸಿದರು. ಈ ಕಾಮಗಾರಿಗೆ ಸಂಪರ್ಕ ಹೊಂದುವ ಎರಡು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಹಾಗೂ ಹತ್ತಿರದ ಭೂತನಾಳ ಕೆರೆಯ ಮುಖಾಂತರ ನೀರು ಸರಬರಾಜು ಮಾಡುವುದು, ವಿದ್ಯುತ್ ಸರಬರಾಜು ಮಾಡುವ ಕುರಿತು ಆಯಾ ಇಲಾಖಾ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಸ್ಥಳದ ಸುತ್ತ ಮುತ್ತಲಿನ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಕೃಷಿ ಉತ್ಪನ್ನಗಳ ರಫ್ತಿನ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

 ಕೃಷಿ ಆಧಾರಿತ ಕೈಗಾರಿಕೆ ಅಭಿವೃದ್ಧಿಪಡಿಸುವ ಯೋಜನೆಯನ್ನು ರೂಪುಗೊಳಿಸುವ ಕುರಿತು ಪಾವರ್ ಪಾಯಿಂಟ್ ಪ್ರೆಸೆಂಟೇಶನ್ ಸಿದ್ಧಪಡಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ. ಪಾಟೀಲ ರವರ ಅಧ್ಯಕ್ಷತೆಯಲ್ಲಿ ಜರುಗಲಿರುವ ಸಭೆಯಲ್ಲಿ ಪ್ರಸ್ತುತ ಪಡಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರಶಾಂತ ಬಾರಿಗಿಡದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜಶೇಖರ ಆ.W, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ರಾಹುಲ್ ಭಾವಿದೊಡ್ಡಿ, ತಿಕೋಟಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ವಲಯ ಅರಣ್ಯಾಧಿಕಾರಿಗಳಾದ ಗಿರೀಶ ಹಲಕುಡೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ S. ಃ. ಪಾಟೀಲ, ಹೆಸ್ಕಾಂ ಇಲಾಖೆಯ ವಿಭಾಗಾಧಿಕಾರಿಗಳಾದ ಬಿ.ಓ. ರಾಠೋಡ, ಲೋಹಗಾಂವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪದ್ಮಿನಿ ಬಿರಾದಾರ, ಲೋಹಗಾಂವ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕೋವಿಡ್ ಜೆಎನ್.1 : ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ



ವಿಜಯಪುರ : ಕೋವಿಡ್-19 ಉಪತಳಿಯಾದ ಜೆಎನ್.1 ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. 

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಸೋಂಕು ಪತ್ತೆ, ಸೋಂಕಿತರ ಚಿಕಿತ್ಸೆ ವಿಶೇಷ ಘಟಕ, ಆಕ್ಸಿಜನ್ ಘಟಕ, ಔಷಧ ಸೇರಿದಂತೆ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದ ಅವರುಕ, ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ, ತುರ್ತು ನಿಗಾ ಘಟಕ, ಉಪಕರಣಗಳ ಪರಿಶೀಲನೆ, ಆಕ್ಸಿಜನ್ ಸಿಲಿಂಡರ್ ಮಾಹಿತಿ, ಐಸಿಯುದಲ್ಲಿ ಇರುವ ಯಂತ್ರೋಪಕರಣಗಳು ಮತ್ತು ಔಷಧಗಳ ಲಭ್ಯತೆ ಕುರಿತು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅವರು ಸೂಚನೆ ನೀಡಿದ್ದಾರೆ.

ಪ್ರಸ್ತುತ ಹವಾಮಾನ, ಚಳಿ, ವಾತಾವರಣ ಇರುವುದರಿಂದ ಸೋಂಕು ತಗಲುವ ಸಾಧ್ಯತೆ ಹೆಚ್ಚಾಗುವುದರಿಂದ ಆರೋಗ್ಯ ಇಲಾಖೆ ಸೂಚನೆಗಳನ್ನು ಪಾಲಿಸಬೇಕು. ಹಿರಿಯ ನಾಗರಿಕರು, ದೀರ್ಘಕಾಲಿನ ಸಮಸ್ಯೆ ಹೊಂದಿರುವವರು, ಗರ್ಭೀಣಿಯರು, ಬಾಣಂತಿಯರು ಮನೆಯಿಂದ ಹೊರಗೆ ಹೋಗುವಾಗ, ಜನಸಂದಣಿ ಪ್ರದೇಶದಲ್ಲಿ ಮಾಸ್ಕ ಧರಿಸಬೇಕು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಇರುವವರು ತಕ್ಷಣ ವೈದ್ಯರ ಸಲಹೆ ಪಡೆದುಕೊಳ್ಳಬೇಕು ಈ ಕುರಿತು ಮನೆ ಮನೆಗೆ ಹೋಗಿ ಆರೋಗ್ಯ ಶಿಕ್ಷಣ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಸೂಚಿಸಿದ್ದಾರೆ. 

 ಸರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಾ ಕೇಂದ್ರಗಳ ಆಸ್ಪತ್ರೆಯಲ್ಲಿ ಆಕ್ಸಿಜನ್, ಐ.ಸಿ.ಯು ಬೇಡ್, ಕೋವಿಡ್ ಪರೀಕ್ಷೆ, ಔಷಧಿ ಹಾಗೂ ಅಂಬ್ಯೂಲೆನ್ಸ್ ಲಭ್ಯತೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ಡಬ್ಲೂಎಚ್‌ಓ ಸರ್ವೇಲೆನ್ಸ್ ಅಧಿಕಾರಿ ಡಾ. ಮುಕುಂದ ಗಲಗಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡಮನಿ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಕೆ.ಡಿ.ಗುಂಡಬಾವಡಿ, ಜಿಲ್ಲಾ ಆಸ್ಪತ್ರೆಯ ಆರ್‌ಎಂಓ ಅಧಿಕಾರಿಗಳು, ಬಿಎಲ್‌ಡಿಇ ಸಂಸ್ಥೆಯ ವೈದ್ಯರು, ಖಾಸಗಿ ಆಸ್ಪತ್ರೆ ವೈದ್ಯರು, ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಬಸವರಾಜ ಹುಬ್ಬಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, December 26, 2023

ಸಚಿವ ಸತೀಶ ಜಾರಕಿಹೊಳಿ ಅವರಿಂದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ಶೀಘ್ರವೇ ಕಾಮಗಾರಿ ಪೂರ್ಣಗೊಂಡು ವಿಮಾನಗಳ ಹಾರಾಟದ ಭರವಸೆ


ವಿಜಯಪುರ : ವಿಜಯಪುರ ನಗರದ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಸೋಮವಾರ ಲೋಕೋಪಯೋಗಿ ಖಾತೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ಟರ್ಮಿನಲ್ ಕಟ್ಟಡ, ನಿಲ್ದಾಣದ ರನವೇ, ಟ್ಯಾಕ್ಸಿ ವೇ, ಬ್ಯಾಗೇಜ್ ಹ್ಯಾಂಡಲಿAಗ್ ವ್ಯವಸ್ಥೆ, ಸೆಕ್ಯುರಿಟಿ ಸ್ಕಾö್ಯನರ್ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಭದ್ರತಾ ಉಪಕರಣಳು ಸೇರಿದಂತೆ ಬಾಕಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಡರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸುವುದನ್ನು ಒಳಗೊಂಡAತೆ ಎಲ್ಲ ಭೌತಿಕ ಕಾಮಗಾರಿಗಳು ಶೇ.90ರಷ್ಟು ಪೂರ್ಣಗೊಂಡಿದ್ದು, ಶೀಘ್ರವೇ ಎಲ್ಲ ಕಾಮಗಾರಿಗಳು ಪೂರ್ಣಗೊಂಡು ವಿಮಾನಗಳ ಹಾರಾಟ ನಡೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಜನವರಿಯಲ್ಲಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ (ಡಿಜಿಸಿಎ) ಪರಿವೀಕ್ಷಣೆಗೆ ಆಗಮಿಸಿ ಪರಿವೀಕ್ಷಣೆ ನಡೆಸಲಿದ್ದಾರೆ ಎಂದು ಅವರು ಹೇಳಿದರು. 

ನೈಟ್ ಲ್ಯಾಂಡಿAಗ್ ವ್ಯವಸ್ಥೆ ಸೇರಿದಂತೆ ಬಾಕಿ ಇರುವ ಎಲ್ಲ ಲೋಕೋಪಯೋಗಿ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕೈಗೊಂಡು ಪೂರ್ಣಗೊಳಿಸಲು ಸೂಚಿಸಲಾಗಿದೆ. ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದ ನಂತರ ಈ ಭಾಗದ ಸರ್ವಾಂಗೀಣ ಬೆಳವಣಿಗೆಗೆ ಅನುಕೂಲವಾಗಲಿದ್ದು, ವಿಮಾನಗಳ ಹಾರಾಟದಿಂದ ಸಮಯದ ಉಳಿತಾಯದೊಂದಿಗೆÀ ಪ್ರಮುಖ ವಾಣಿಜ್ಯ ಬೆಳೆಯಾದ ದ್ರಾಕ್ಷಿ ಸೇರಿದಂತೆ ಇತರ ಕೃಷಿ ಉತ್ಪನ್ನಗಳ ರಫ್ತಿಗೂ ಅನುಕೂಲವಾಗಲಿದೆ. ವ್ಯಾಪಾರ ವಹಿವಾಟಕ್ಕೂ ಉತ್ತೇಜನ ದೊರೆಯಲಿದ್ದು, ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು. 

ಎರಡನೇ ಹಂತದ 125.00 ಕೋಟಿ ರೂ.ಗಳಲ್ಲಿ ಪುನ: ಎರಡು ಉಪ ಕಾಮಗಾರಿಗಳಾಗಿ ವಿಂಗಡಿಸಲಾಗಿದೆ. ಸಿವಿಲ್ ಕಾಮಗಾರಿಗಾಗಿ 105.60 ಕೋಟಿ ರೂ.ಗಳು ಹಾಗೂ ಏವಿಯೋನಿಕ್ಸ/ಸೆಕ್ಯೂರಿಟಿ ಉಪಕರಣಳ ಕಾಮಗಾರಿಗಾಗಿ 19.40 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಈ ಸಿವಿಲ್ ಕಾಮಗಾರಿಯು 105.60. ಕೋಟಿಗಳಲ್ಲಿ 86.20 ಕೋಟಿಗಳ ಮೊತ್ತದಲ್ಲಿ ಟರ್ಮಿನಲ್ ಕಟ್ಟಡ, ಎಟಿಸಿ ಟಾವರ್, ಸಿ.ಎಪ್.ಆರ್. ಕಟ್ಟಡ, ಕಂಪೌAಡ್ ಗೋಡೆ ಹಾಗೂ ಇತರೆ ಕಾಮಗಾರಿಗಳನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಕಾಮಗಾರಿ ಮುಕ್ತಾಯ ಹಂತದಲ್ಲಿದೆ ಎಂದು ಅವರು ಹೇಳಿದರು. 

ಸಿವಿಲ್ ಉಪಕಾಮಗಾರಿಗಳಲ್ಲಿ ಉಳಿದ ಮೊತ್ತ 19.40 ಕೋಟಿಗಳಲ್ಲಿ ವಿವಿಧ ಉಪಕಾಮಗಾರಿಗಳಿದ್ದು, ಮೊದಲನೇಯದಾಗಿ ರೂ.1.39 ಕೋಟಿ ಮೊತ್ತದಲ್ಲಿ ವಿಮಾನ ನಿಲ್ದಾಣ ಆವರಣದಲ್ಲಿರುವ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವುದನ್ನು ಪರಿಗಣಿಸಲಾಗಿದ್ದು ಕಾಮಗಾರಿ ಪೂರ್ಣಗೊಂಡಿದೆ. 5.94 ಕೋಟಿ ರೂ. ಮೊತ್ತದಲ್ಲಿ ವಿಮಾನ ನಿಲ್ದಾಣಕ್ಕೆ 24/7 ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ. 3.65 ಕೋಟಿ ರೂ. ಮೊತ್ತದ ವಿಮಾನ ನಿಲ್ದಾಣಕ್ಕೆ 2000 ಕಿ.ಲೋ.ವ್ಯಾಟ್ ನಿರಂತರ ವಿದ್ಯುತ್ ಸರಬರಾಜು ಕಾಮಗಾರಿ ಪ್ರಗತಿಯಲ್ಲಿದ್ದು, ಉಳಿದ ಮೊತ್ತದ ಕಾಮಗಾರಿಯ ಮೇಲ್ವಿಚಾರಣೆ ಮಾಡುವ ತಾಂತ್ರಿಕ ಸಂಸ್ಥೆಗೆ ಶುಲ್ಕ ಪಾವತಿ ಮಾಡುವುದು ಹಾಗೂ ಇತರೆ ಕಾಮಗಾರಿಗಳನ್ನು ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಯಶವಂತರಾಯಗೌಡ ಪಾಟೀಲ, ಸಿ.ಎಸ್.ನಾಡಗೌಡ, ಅಶೋಕ ಮನಗೂಳಿ, ಮಾಜಿ ಶಾಸಕ ರಾಜು ಆಲಗೂರ, ಲೋಕೋಪಯೋಗಿ ಇಲಾಖೆಯ ಧಾರವಾಡ ಉತ್ತರ ವಲಯದ ಮುಖ್ಯ ಅಭಿಯಂತರ ಎಚ್.ಸುರೇಶ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಕಾರ್ಯನಿರ್ವಾಹಕ ಅಭಿಯಂತರ ರಾಜುಕೃಷ್ಣ ಮುಜುಮದಾರ, ಗುತ್ತಿಗೆದಾರ ಎಸ್.ಎಸ್.ಆಲೂರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಎA.ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

27-12-2023 EE DIVASA KANNADA DAILY NEWS PAPER

Monday, December 25, 2023

ವ್ಯವಸ್ಥೆ ಹಾಳು ಮಾಡುವ ಹುನ್ನಾರ ನಡೆಯದು; ಶಾಸಕ ಯತ್ನಾಳ

 


ಈ ದಿವಸ ವಾರ್ತೆ

ವಿಜಯಪುರ: ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸುಗಮ ಸಂಚಾರ, ಸ್ವಚ್ಛತೆ, ವ್ಯಾಪಾರಸ್ಥರಿಗೆ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಕೆಲವರು ವ್ಯವಸ್ಥೆ ಕೆಡಿಸುವ ಹುನ್ನಾರ ನಡೆಸಿದ್ದು, ಯಾವುದೇ ಕಾರಣಕ್ಕೂ ಅದು ನಡೆಯದು ಎಂದು ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಯತ್ನಾಳ ಹೇಳಿದರು.

ನಗರದಲ್ಲಿ ಸೋಮವಾರ ವ್ಯಾಪಾರಸ್ಥರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆಯಲ್ಲಿನ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಬೀದಿ ದೀಪ ಅಳವಡಿಕೆ ಮಾಡಲಾಗಿದೆ, ಸ್ವಚ್ಛತೆಗೂ ಆದ್ಯತೆ ನೀಡಲಾಗಿದೆ. ದೇಶದಲ್ಲಿ ವಿಜಯಪುರ ಅತ್ಯುತ್ತಮ ವಾತಾರಣ ನಗರಗಳ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದಿರುವುದೇ ಸಾಕ್ಷಿ ಎಂದು ತಿಳಿಸಿದರು.

ಮುಂದೆ ಕೂಡ ಸ್ವಚ್ಛತೆಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಲು, ಪ್ರತಿ ನಾಲ್ಕೈದು ಅಂಗಡಿಗಳ ಮಧ್ಯ ಕಸದ ಡಬ್ಬಿ ಇಟ್ಟು, ಎರಡು ದಿನಕ್ಕೊಮ್ಮೆ ತೆಗೆದುಕೊಂಡು ಹೋಗಲು ಪಾಲಿಕೆ ಅಧಿಕಾರಿಗಳಿಗೆ ತಿಳಿಸಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ, ಸೂಕ್ತವಾದ ನಿಗದಿತ ಸ್ಥಳಾವಕಾಶ ಕಲ್ಪಿಸಿ, ಅಂಗಡಿಕಾರರಿಗೆ ಅನುಕೂಲ ಮಾಡಿಕೊಡಲು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಸುಮಾರು 35 ಕಡೆ ಕಾಯಿಪಲ್ಲೆ ಮಾರುಕಟ್ಟೆ ಮಾಡಿದ್ದರಿಂದ ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆ ಆಗಿದ್ದು, ಸಂಚಾರಕ್ಕೆ ಅಡೆತಡೆ ಆಗುತ್ತಿಲ್ಲ. ನಗರದ ಸುತ್ತಮುತ್ತಲಿನ ರೈತರು ಕಾಯಿಪಲ್ಲೆ ಮಾರಾಟ ಮಾಡಲು ಹಾಗೂ ಸಾರ್ವಜನಿಕರಿಗೆ ತಾಜಾ ಮತ್ತು ಸಮೀಪಲ್ಲೇ ಕಾಯಿಪಲ್ಲೆ ಸಿಗುವಂತಾಗಿದೆ ಎಂದು ಹೇಳಿದರು.

ಬಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಗೋಕುಲ ಮಹಿಂದ್ರಕರ ಮಾತನಾಡಿ, ಶಾಸಕ ಬಸನಗೌಡ ಪಾಟೀಲ ಯತ್ನಾಳರ ಅಭಿವೃದ್ಧಿ ಕಾಳಜಿಯಿಂದ ನಿರೀಕ್ಷೆ ಮೀರಿ ನಗರದ ಅಭಿವೃದ್ಧಿಗೊಂಡಿದೆ. ಕ್ರಮೇಣ ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಅದಕ್ಕೆ ಅನುಗುಣವಾಗಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರ ಸಂಚಾರಕ್ಕೆ ಅಡೆತಡೆ ಆಗುವುದನ್ನು ಸರಿಪಡಿಸಬೇಕು. ಬೀದಿ ಬದಿ ವ್ಯಾಪಾರಿಗಳಿಂದ ಅಂಗಡಿಕಾರರಿಗೆ ಆಗುತ್ತಿರುವ ಸಮಸ್ಯೆ ಸರಿಪಡಿಸಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.

ಮಹಾನಗರ ಪಾಲಿಕೆ ಸದಸ್ಯರು, ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು, ವ್ಯಾಪಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, December 24, 2023

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ವಿಷಯದ ಫೊನ್ ಇನ್ ಕಾರ್ಯಕ್ರಮ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಂಡ ವಿದ್ಯಾರ್ಥಿಗಳು : ಡಿಡಿಪಿಐ


ಈ ದಿವಸ ವಾರ್ತೆ

ವಿಜಯಪುರ: ಇಂಗ್ಲೀಷ್ ವಿಷಯದ ವ್ಯಾಕರಣ ಮತ್ತು ಪತ್ರಲೇಖನ ಪ್ಯಾರಾಗ್ರಾಫ್, ಪ್ರಬಂಧ ಬರವಣ ಗೆ ಹಾಗೂ ವಿಷಯ ಕರಗತ ಮಾಡಿಕೊಳ್ಳುವುದೂ ಸೇರಿದಂತೆ ತಮ್ಮ ಶೈಕ್ಷಣ ಕ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಸಂಪನ್ಮೂಲ ಶಿಕ್ಷಕರಿಂದ ಪರಿಹಾರ ಪಡೆದುಕೊಂಡರು. ಶಿಕ್ಷಕರು ವಿಷಯ ಸಮಸ್ಯೆ ಸೂಚಿಸುವುದರ ಜೊತೆಗೆ ಆತ್ಮವಿಶ್ವಾಸದ ಪಾಠ ಮಾಡಲಾಯಿತು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರ ತಿಳಿಸಿದ್ದಾರೆ. 

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಜಿಲ್ಲೆಯ ಎಸ್ಸೆಸ್ಸೆಲ್ಸಿಯ ವಿದ್ಯಾರ್ಥಿಗಳಿಗಾಗಿ ಶುಕ್ರವಾರ ಸಂಜೆ 6 ರಿಂದ ರಾತ್ರಿ 8.30ರವರೆಗೆ ಇಂಗ್ಲೀಷ್ ವಿಷಯದ ಕುರಿತಾಗಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ 2 ಗಂಟೆಗಳ ಅವಧಿಯಲ್ಲಿ 325 ವಿದ್ಯಾರ್ಥಿಗಳು ಕೇಳಿದ 458 ಪ್ರಶ್ನೆಗಳಿಗೆ ವಿಷಯ ಶಿಕ್ಷಕರು ಪರಿಹಾರ ಸೂಚಿಸಿದರು.

ವಿದ್ಯಾರ್ಥಿಗಳು ಕೇಳುವ ಪ್ರಶ್ನೆಗಳಿಂದ ವಿದ್ಯಾರ್ಥಿಗಳಲ್ಲಿ ಕಲಿಕೆಯ ಹಂಬಲ ಹೆಚ್ಚಾಗುತ್ತಿದೆ. ಕೆಲ ಸಣ್ಣ ಪುಟ್ಟ ಸಮಸ್ಯೆಗಳಿಗೆ ಪರಿಹಾರ ಬೋಧನೆಯಿಂದ ಮತ್ತಷ್ಟು ವಿಷಯ ಕರಗತವಾಗಿ ಅವರ ಕಲಿಕಾ ಮಟ್ಟ ಹೆಚ್ಚಾಗುತ್ತದೆ. ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಯಶಸ್ವಿ ಕಾರ್ಯಕ್ರಮವೆನಿಸಿದೆ. ಈಗಾಗಲೇ ವಿಜ್ಞಾನ ವಿಷಯದಲ್ಲಿ 438, ಗಣ ತದಲ್ಲಿ 425 ವಿದ್ಯಾರ್ಥಿಗಳು ಫೋನ್ ಇನ್ ಕಾರ್ಯಕ್ರಮದ ಮೂಲಕ ತಮ್ಮ ಸಮಸ್ಯಗೆಳಿಗೆ ಪರಿಹಾರ ಕಂಡುಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಈ ಕಾರ್ಯಕ್ರಮದಲ್ಲಿ ಪಿ. ಕುಂಬಾರ್, ಆರ್. ವಿ. ಕುಲಕಣ ð ಶ್ರೀಮತಿ ಆರ್.ಎಸ್.ಕೊರೆಗೊಳ್, ಎಸ್.ಎ ಕಮತಗಿ, ಪಿ. ಬಿ. ಕುಲಕಣ ð, ವಿ. ಎಸ್. ಬಶೆಟ್ಟಿ, ಪಿ. ಎಮ್ ಪಾಟೀಲ್ ಹಾಗೂ ಎಸ್.ವೈ ನಾಯಕ ಅವರೂ ಸೇರಿದಂತೆ 9 ಜನ ಶಿಕ್ಷಕರು ಇಂಗ್ಲೀಷ್ ವಿಷಯದ ಸಂಪನ್ಮೂಲ ವ್ಯಕ್ತಿಗಳು, ಹಾಗೂ ಇಂಗ್ಲೀಷ್ ವಿಷಯದ ಫೋನ್ ಇನ್ ಕಾರ್ಯಕ್ರಮದ ಸಂಯೋಜಕರೂ ಆದ ಬಸವನ ಬಾಗೇವಾಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ,ಇಂಗ್ಲೀಷ್ ವಿಷಯ ಪರಿವೀಕಕ್ಷರಾದ ಪಿ.ಕೆ.ರಾದಾರ, ವಿಜ್ಞಾನ ವಿಷಯ ಪರಿವೀಕ್ಷಕರಾದ ಎಸ್.ಎಸ್. ತಳ್ಳಳ್ಳಿ, ಉರ್ದು ಶಿಕ್ಷಣ ಸಂಯೋಜಕರಾದ ಝಡ್.ಎ.ಸತಾರೇಕರ, ಬಸವರಾಜ ನಾಗೂರ ಸೇರಿದಂತೆ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿದ್ದರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tuesday, December 19, 2023

20-12-2023 EE DIVASA KANNADA DAILY NEWS PAPER

ಎಂ. ಬಿ.ಪಾಟೀಲ ಹಿಟ್ಲರ ನೀತಿಗೆ ತೀವ್ರ ಖಂಡನೆ : ಸತೀಶ ಪಾಟೀಲ


ವಿಜಯಪುರ : ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚುವುದನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಬಿಡಬೇಕು. ಈಗಾಗಲೇ ಲಿಂಗಾಯತ ಧರ್ಮ ಪ್ರತ್ಯೇಕಿಸಲು ಪ್ರಯತ್ನಿಸಿ ಅಖಂಡ ಹಿಂದು ಧರ್ಮಕ್ಕೆ ಹಿಂದುತ್ವಕ್ಕೆ ಧಕ್ಕೆ ತಂದ ತಮ್ಮ ಹಿಂದೂ ಧರ್ಮ ವಿರೋಧಿನೀತಿಯನ್ನು ಜನ ಇನ್ನು ಮರೆತಿಲ್ಲ ಎಂದು ಶಿವಸೇನಾ ಮುಖಂಡ ಸತೀಶ ಪಾಟೀಲ ಹೇಳಿದರು.

ಈ ಕುರಿತು ಪ್ರಕಟಣೆ ನೀಡಿದ ಅವರು, ಆದ್ಯಾಗೂ ನಿನ್ನೆಯ ದಿನ ಹಿಂದೂ ಗಾಣಿಗ, ಹಿಂದೂ ಸಾಧರ ಈ ರೀತಿ ಬರೆದುಕೊಳ್ಳಬಾರದು ಲಿಂಗಾಯತ ಎಂದು ಉಪನಾಮದೊಂದಿಗೆ ತಮ್ಮ ಜಾತಿಯನ್ನು ಬರೆದುಕೊಳ್ಳಲು ಒತ್ತಾಯಿಸುತ್ತಿರಲು ತಾವೇನು ನಮ್ಮ ಸಮುಧಾಯದ ಧರ್ಮ ಗುರುವೇ ? ತಮ್ಮ ಈ ಸರ್ವಾಧಿಕಾರಿ ಧೋರಣೆಗೆ ನಾಡಿನ ಗಾಣಿಗ ಹಾಗೂ ಸಾಧರ ಸಮಾಜದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಆ ಸಮಾಜಗಳಿಗೆ 2 ಎ ಮೀಸಲಾತಿ ತಪ್ಪಿದ್ದೆ ಆದಲ್ಲಿ ತಮಗೆ ಮುಂದಿನ ದಿನಮಾನಗಳಲ್ಲಿ ನಮ್ಮ ಎಲ್ಲ ಸಮಾಜ ಬಾಂಧವರು ತಮಗೆ ತಕ್ಕ ಪಾಠ ಕಲಿಸಲಿದ್ದಾರೆ. ತಾವು ವಿಜಯಪುರ ಜಿಲ್ಲಾ ಉಸ್ತುವಾರಿಯಾಗಿದ್ದೀರಿ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳ ಹೂರಣಗಳಿವೆ. ಮೊದಲಿಗೆ ಅವುಗಳನ್ನು ಸರಿಪಡಿಸಿರಿ. ಅದರಲ್ಲಿ ಮುಖ್ಯವಾಗಿ ಜಿಲ್ಲೆಯು ಸಂಪೂರ್ಣವಾಗಿ ಬರಗಾಲದಿಂದ ತುತ್ತಾಗಿದ್ದು ಜಿಲ್ಲೆಯ ಜನತೆ ನಿರೀಕ್ಷೆಯು ಅಪಾರವಿದೆ. ಸುವರ್ಣಸೌಧದಲ್ಲಿ ವಿಜಯಪುರ ಜಿಲ್ಲೆಗೆ ಹೊಸ ಯೋಜನೆಯಾಗಲಿ, ಬರಗಾಲ ಜಿಲ್ಲೆ ಎಂದು ಘೋಷಣೆಯಾದರೂ ಇನ್ನೂ ಯಾವುದೇ ತರಹದ ವಿಶೇಷ ಅನುದಾನವಾಗಲಿ ಯಾವುದು ತರದ ತಮ್ಮ ನಡೆ ಜಿಲ್ಲೆ ಉಸ್ತುವಾರಿಯೋ ಸುಸ್ತುವಾರಿಯೋ ಆ ಭಗವಂತನೆ ಬಲ್ಲ. 

ತಮ್ಮ ಈ ಜಾತಿ ರಾಜಕಾರಣ, ಹಿಂದೂ ಧರ್ಮಗಳಲ್ಲಿ ಹೊಡೆದಾಳುವ ಬ್ರಿಟಿಷ್ ನೀತಿಯನ್ನು ಅನುಸರಿಸುತ್ತಿರುವ ತಮ್ಮ ಮನೋಧೋರಣೆ ಹಿಟ್ಲರಗಿಂತಲೂ ಕಡಿಮೆ ಇಲ್ಲ ಆದಷ್ಟು ಬೇಗನೆ ತಮಗೆ ದೇವರು ಬುದ್ಧಿಕೊಡಲಿ ಈಗಲೇ ಎಚ್ಚೆತ್ತುಕೊಳ್ಳಿರಿ ಎಂದು ಶಿವಸೇನಾ ಮುಖಂಡ ಸತೀಶ ಪಾಟೀಲ ಗಂಭೀರವಾಗಿ ಖಂಡಿಸಿ ಎಚ್ಚರಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, December 16, 2023

"ಜಾತಿ ವ್ಯವಸ್ಥೆ ವಿರೋಧಿಸಿದ ದಾಸ ಶ್ರೇಷ್ಟ ಕನಕದಾಸರು "ವಿದ್ಯಾ ಕಲ್ಯಾಣಶೆಟ್ಟಿ


 ಈ ದಿವಸ ವಾರ್ತೆ

ಚಡಚಣ : ದಾಸ ಶ್ರೇಷ್ಠರಾದ ಕನಕದಾಸರು ಮಾನವ ಜನಾಂಗಕ್ಕೆ ಕೊಟ್ಟ ಕೊಡುಗೆ ಅದ್ಭುತವಾದದ್ದು. ಕುಲ ಕುಲ ಎಂದು ಬಡದಾಡದಿರಿ ಹುಟ್ಟಿಗೆ ಕುಲವಿಲ್ಲ ನಮಗೇಕೆ ಜಾತಿ ವ್ಯವಸ್ಥೆ ಅಂತ ಜಾತಿ ವ್ಯವಸ್ಥೆ ವಿರುದ್ಧ ಸಿಡಿದ್ದೆದವರು. ಕಡಿಮೆ ಕುಲದವರಿಗೆ ದೇವಾಲಯ ಪ್ರವೇಶ ಇಲ್ಲದ ಕಾಲದಲ್ಲಿ ದೇವರು ನಿಮ್ಮೊಳಗೆ ಇದ್ದಾನೆ, ದೇವಾಲಯ ಪ್ರವೇಶದಿಂದ ಯಾವುದೇ ಲಾಭವಿಲ್ಲ ಮನದಲ್ಲಿ ದೇವರ ಗುಡಿ ನಿರ್ಮಾಣ ಮಾಡಿ ಎಂದು ಜನರಿಗೆ ಸಾರಿ ಹೇಳಿದರು . ಕೇಳ ದರ್ಜೆಯ ಜನರಿಗಾಗಿ ಕ್ರಾಂತಿ ಮಾಡಿ ಅವರಿಗೆ ದೇವಸ್ಥಾನದ ಪ್ರವೇಶ ಮಾಡಿಕೊಟ್ಟರು. ಮುಂದೆ ದಂಡನಾಯಕನಾದ ಕನಕರು ತಮ್ಮ ಅಧಿಕಾರ ತ್ಯಾಗ ಮಾಡಿ ದಾಸಕೂಟ ರಚಿಸಿ ಮಹಾನ ದಾಸರೆನಿಸಿಕೊಂಡರು ಎಂದು ಕದಳಿ ವೇದಿಕೆ ಅಧ್ಯಕ್ಷೆ  ವಿದ್ಯಾ ಕಲ್ಯಾಣಶೆಟ್ಟಿ  ಅಭಿಪ್ರಾಯ ಪಟ್ಟರು. ಪಟ್ಟಣದ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ  ಕನ್ನಡ ವಿಭಾಗ ಮತ್ತು ಕನ್ನಡ ಸಂಘ ವತಿಯಿಂದ ಹಮ್ಮಿಕೊಂಡ ದಾಸ ಶ್ರೇಷ್ಠ  ಕನಕದಾಸರ ಜಯಂತಿಯ ನಿಮಿತ್ಯ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 


ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್. ಬಿ. ರಾಠೋಡ ಮಾತನಾಡಿ ಕನಕದಾಸರು ಸರ್ವಕಾಲಿಕ ಶ್ರೇಷ್ಠರು. ಸರಳ ಬದುಕಿನ ಮೌಲ್ಯಗಳನ್ನು ಸಾರಿದ ಅವರು ಮೌಢ್ಯತೆಯ ವಿರುದ್ಧ ಹೋರಾಟಮಾಡಿದರು. ಅವರ ಕೀರ್ತನೆಗಳು ಪ್ರತಿಯೊಬ್ಬರ ಬಾಳಿಗೆ ದಾರಿದೀಪಗಳಾಗಿವೆ ಎಂದರು.

 ವೇದಿಕೆ ಮೇಲಿದ್ದ ನಿವೃತ್ತ ಪ್ರಾಂಶುಪಾಲರಾದ ಶ್ರೀ ಎಸ್. ಜಿ. ಜಂಗಮಶೆಟ್ಟಿ, ಕನ್ನಡ ವಿಭಾಗ ಮುಖ್ಯಸ್ಥ ಡಾ. ಎಂ. ಎಸ್. ಮಾಗಣಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಕಾರ್ಯಕ್ರಮದಲ್ಲಿ ಪ್ರೊ. ಎಂ. ಎ. ಜನವಾಡ ಸ್ವಾಗತಿಸಿದರೆ, ಪ್ರೊ. ಎಸ್. ಎಫ್. ಬಿರಾದಾರ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಗ್ರಂಥಪಾಲಕರಾದ ಶ್ರೀ ಎಂ. ಕೆ. ಬಿರಾದಾರ, ಪ್ರೊ.ಸದಾನಂದ ಪಾಟೀಲ, ಪ್ರೊ.ಬಸವರಾಜ ನೀಲವಾಣಿ ಮತ್ತು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, December 12, 2023

ಪ್ರತ್ಯೇಕ ಬೈಕ್ ಅಪಘಾತ: ಇಬ್ಬರು ಮಕ್ಕಳು ಸೇರಿ ಏಳು ಜನರಿಗೆ ಗಾಯ


ಮುದ್ದೇಬಿಹಾಳ: ಪಟ್ಟಣದಿಂದ ಢವಳಗಿ ಮಾರ್ಗವಾಗಿ ವಿಜಯಪುರದತ್ತ ತೆರಳುವ ಶಿರಾಡೋಣ-ಲಿಂಗಸುಗೂರ ರಾಜ್ಯ ಹೆದ್ದಾರಿಯ ಬಸರಕೋಡ ಕ್ರಾಸ್, ಮಡಿಕೇಶ್ವರ ಕ್ರಾಸ್ ಹತ್ತಿರ ಮಂಗಳವಾರ ಸಂಜೆ ಸಂಭವಿಸಿದ ಎರಡು ಪ್ರತ್ಯೇಕ ಬೈಕ್ ಅಪಘಾತಗಳಲ್ಲಿ ಪತಿ, ಪತ್ನಿ, ಇಬ್ಬರು ಮಕ್ಕಳು, ಮಾವ ಮತ್ತು ಅಳಿಯ ಸೇರಿ ಏಳು ಜನ ಗಾಯಗೊಂಡಿರುವ ಘಟನೆ ನಡೆದಿದೆ.

ಬಸರಕೋಡ ಕ್ರಾಸ್ ಹತ್ತಿರ ಢವಳಗಿಯ ತೋಟವೊಂದರಲ್ಲಿ ಕೆಲಸಕ್ಕೆ ಹೊರಟಿದ್ದ ಕುಂಚಗನೂರ ಗ್ರಾಮದ ನೀಲಪ್ಪ ಪೂಜಾರಿ ಎಂಬಾತ ಮದ್ಯದ ಅಮಲಿನಲ್ಲಿ ತಾನು ಓಡಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮುಳ್ಳುಕಂಟಿಗಳಲ್ಲಿ ಬಿದ್ದು ತೀವ್ರ ಗಾಯಗೊಂಡಿದ್ದಾನೆ. ಇನ್ನೊಂದು ಘಟನೆಯಲ್ಲಿ ಮಡಿಕೇಶ್ವರ ಕ್ರಾಸ್ ಹತ್ತಿರ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದು ಮುದ್ದೇಬಿಹಾಳ ತಾಲೂಕು ಸರೂರು ಗ್ರಾಮದಲ್ಲಿ ದೇವರಿಗೆ ಕಾಯಿ ಒಡೆಸಿಕೊಂಡು ಬಸವನ ಬಾಗೇವಾಡಿ ತಾಲೂಕು ವಡವಡಗಿ ಗ್ರಾಮಕ್ಕೆ ಹೊರಟಿದ್ದ ಸರೂರು ಗ್ರಾಮದ ಪತಿ ಸಂಗಪ್ಪ ಕಟಗೂರ, ಪತ್ನಿ ಪ್ರಿಯಾಂಕ, 5 ವರ್ಷದ ಪುತ್ರಿ ಚೈತ್ರಾ (ಸನ್ನಿಧಿ), 2 ವರ್ಷದ ಪುತ್ರ ಹಣಮಂತ ಗಂಭೀರ ಗಾಯಗೊಂಡಿದ್ದಾರೆ. ಎದುರಿನಿಂದ ಡಿಕ್ಕಿ ಹೊಡೆದ ಇನ್ನೊಂದು ಬೈಕ್‌ನಲ್ಲಿದ್ದ ಅಳಿಯ ಮುದ್ದೇಬಿಹಾಳದ ಸಂಗಮೇಶ ಕುಂಟೋಜಿ, ಮಾವ ನಾಗರಾಳ ಗ್ರಾಮದ ಮಲ್ಲಿಕಾರ್ಜುನ ಪಲಗಲದಿನ್ನಿ ಗಾಯಗೊಂಡಿದ್ದಾರೆ. ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳಿಸಿಕೊಡಲಾಗಿದೆ.

ಘಟನಾ ಸ್ಥಳಕ್ಕೆ ಪಿಎಸೈ ಸಂಜಯ್ ತಿಪ್ಪರಡ್ಡಿ, ಕಾನ್ಸಟೇಬಲ್ ಪರಶುರಾಮ ದೊಡಮನಿ ಅವರು ಭೇಟಿ ನೀಡಿ ಸ್ಥಳ ಪಂಚನಾಮೆ ನಡೆಸಿ ಕಾನೂನು ಕ್ರಮ ಕೈಕೊಂಡರು. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಎರಡು ಅಪಘಾತ ಸಂಭವಿಸಿ 7 ಜನರು ಗಾಯಗೊಂಡ ಘಟನೆ ಸ್ವಲ್ಪ ಸಮಯದ ಅಂತರದಲ್ಲಿ ನಡೆದ ಕಾರಣ ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳಿಸಿಕೊಡಲು ಉಚಿತ ಆರೋಗ್ಯ ಕವಚ ಅಂಬ್ಯೂಲೆನ್ಸ್ ಕೊರತೆ ಎದ್ದು ಕಂಡಿತು. ಮುದ್ದೇಬಿಹಾಳ ತಾಲೂಕು ಆಸ್ಪತ್ರೆ ಮತ್ತು ತಂಗಡಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಉಚಿತ ಆರೋಗ್ಯ ಕವಚ ಅಂಬ್ಯೂಲೆನ್ಸ್ಗಳು ಮೊದಲು ದಾಖಲಾದ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದವು. ಹೀಗಾಗಿ ನಂತರ ದಾಖಲಾದ ಕಟಗೂರ ಕುಟುಂಬ ಆರೋಗ್ಯ ಕವಚ ದೊರೆಯದೆ ಪರದಾಡುವಂತಾಯಿತು. ಆಸ್ಪತ್ರೆಯಲ್ಲಿದ್ದ ಇನ್ನೊಂದು ಅಂಬ್ಯೂಲೆನ್ಸ್ ಹೆರಿಗೆಯಲ್ಲಿ ತೊಂದರೆಯಾಗಿದ್ದ ತುಂಬು ಗರ್ಭಿಣಿಯನ್ನು ಕರೆದೊಯ್ದಿತ್ತು. ಆಸ್ಪತ್ರೆಯ ಇನ್ನುಳಿದ ಒಂದು ಅಂಬ್ಯೂಲೆನ್ಸ್ಗೆ ಡೀಜೈಲ್ ಹಾಕಿಸಿಕೊಂಡು ಹೋಗಬೇಕಿತ್ತು. ಕಟಗೂರ ಅವರು ಬಡವರಾಗಿದ್ದರಿಂದ ಡೀಜೈಲ್ ಹಾಕಿಸಲು ಆರ್ಥಿಕ ಸಮಸ್ಯೆ ಎದುರಾಯಿತು. ಆಗ ಸ್ಥಳದಲ್ಲಿದ್ದ ಸರೂರ ಗ್ರಾಮದವರೇ ಆಗಿರುವ ಸಮಾಜ ಸೇವಕ ಶ್ರೀ ಸಾಯಿ ಮಾರ್ಟ ಮಾಲಿಕ ಬಸನಗೌಡ ಪಾಟೀಲ (ಸರೂರ) ಅವರು ತಮ್ಮ ಸ್ವಂತ ಹಣದಲ್ಲಿ ಡೀಜೈಲ್ ಹಾಕಿಸಲು ನೆರವಿಗೆ ಬಂದರು. ಇನ್ನೇನು ಡೀಜೈಲ್ ಹಾಕಿಸಬೇಕು ಎನ್ನುವಷ್ಟರಲ್ಲಿ ಆರೋಗ್ಯ ಕವಚ ಬರುತ್ತಿರುವ ಮಾಹಿತಿ ಆಸ್ಪತ್ರೆಯವರಿಗೆ ಲಭ್ಯವಾಗಿ ಡೀಜೈಲ್ ಹಾಕಿಸುವುದನ್ನು ತಡೆದು ಆರೋಗ್ಯ ಕವಚದಲ್ಲಿಯೇ ಕಟಗೂರ ಕುಟುಂಬದವರನ್ನು ಜಿಲ್ಲಾಸ್ಪತ್ರೆಗೆ ಕಳಿಸಿದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

13-12-2023 EE DIVASA KANNADA DAILY NEWS PAPER

Monday, December 11, 2023

ವಿರೋಧ ಪಕ್ಷ ಯಾವುದೇ ವಿಚಾರ ಎತ್ತಿದರೂ ಕೂಡ ಉತ್ತರ ಕೊಡಲು ಸರ್ಕಾರ ಸಿದ್ಧವಿದೆ.: ಸಿಎಂ ಸಿದ್ದರಾಮಯ್ಯ

ಈ ದಿವಸ ವಾರ್ತೆ

ಬೆಳಗಾವಿ: ವಿರೋಧ ಪಕ್ಷಗಳು ಯಾವುದೇ ವಿಚಾರ ಎತ್ತಿದರೂ ಕೂಡ  ಉತ್ತರ ಕೊಡಲು ಸರ್ಕಾರ ಸಿದ್ಧವಿದೆ. ಯಾವುದನ್ನೂ ವಿಳಂಬ ಅಥವಾ ಕಾಲಹರಣ ಮಾಡುವುದಿಲ್ಲ ಎಂದು  ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 

 ಇವತ್ತಿನವರೆಗೆಯೂ ಬರಗಾಲದ ಚರ್ಚೆಯಾಯಿತು. ಇಂದು ಅದಕ್ಕೆ ಉತ್ತರ ನೀಡುತ್ತೇವೆ. ಈಗಾಗಲೇ ಪ್ರಸ್ತಾಪವಾಗಿರುವ ಬಗ್ಗೆ ಉತ್ತರ ನೀಡುತ್ತೇವೆ ಎಂದರು. 

ಬಿಜೆಪಿಯೊಳಗೆ  ಸಮನ್ವಯ ಸಾಧ್ಯವೇ ಇಲ್ಲ;

ಬಿಜೆಪಿ ನಾಯಕರ ಮಧ್ಯೆ ಸಮನ್ವಯದ ಕೊರತೆಯಿಂದ ಕಲಾಪದ ಸಮಯ ವ್ಯರ್ಥವಾಗುತ್ತಿದೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ  ಬಿಜೆಪಿಯೊಳಗೆ ಎಂದಿಗೂ ಸಮನ್ವಯ ಇಲ್ಲವೇ ಇಲ್ಲ. ಅವರು  ಆಪರೇಷನ್ ಕಮಲದ ಮುಖಾಂತರ ಅಧಿಕಾರಕ್ಕೆ ಬಂದಿದ್ದಾರೆ. ನಂತರ ಜನ ಅವರನ್ನು ತಿರಸ್ಕರಿಸಿದ್ದಾರೆ. ನಂತರ  ಸಮನ್ವಯ ಬರಲು ಸಾಧ್ಯವೇ ಇಲ್ಲ. ಅವರಲ್ಲಿ ಎರಡು ಗುಂಪುಗಳಿವೆ ಎಂದರು. 

ತಪ್ಪಿತಸ್ಥರ ವಿರುದ್ಧ ಕ್ರಮ

ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿರುವ ಬಗ್ಗೆ  ಮಾತನಾಡಿ ಯಾರು ತಪ್ಪಿತಸ್ಥರೊ ಅವರ ಮೇಲೆ ಕಠಿಣ  ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. 

ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ:

ಪಂಚಾಮಸಾಲಿ ನಾಯಕರ ಮನವಿಗೆ ಸ್ಪಂದಿಸಿಲ್ಲ ಎಂದು ಸ್ವಾಮೀಜಿಗಳು 13 ರಂದು ವಿಧಾನಸಭೆ ಅಧಿವೇಶನ ಮುಗಿದ ನಂತರ ಅವರೊಂದಿಗೆ ಚರ್ಚೆ  ಮಾಡಲಾಗುತ್ತವೆ ಎಂದು ತಿಳಿಸಲಾಗಿದೆ ಎಂದರು.  ಬೆಳಗಾವಿಯಲ್ಲಿ ಪಂಚಾಮಸಾಲಿ ನಾಯಕರು ಹಾಗೂ ಸ್ವಾಮೀಜಿ ಯವರೊಂದಿಗೆ ಮಾತನಾಡುತ್ತೇನೆ ಎಂದರು.

ವಿಧಾನಸಭಾಧ್ಯಕ್ಷರಿಗೆ ಸಂಬಂಧಿಸಿದ್ದು:

 ಸುವರ್ಣ ಸೌಧದಲ್ಲಿರುವ ಸಾರ್ವರ್ಕರ್ ಫೋಟೋ ತೆಗೆಯುವ ಬಗ್ಗೆ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ವಿಧಾನಸಭಾಧ್ಯಕ್ಷರಿಗೆ ಸಂಬಂಧಿಸಿದ್ದು ಎಂದರು. 

ಬಿಜೆಪಿ ಮತ್ತು ಜೆಡಿಎಸ್ ಭ್ರಮಾಲೋಕದಲ್ಲಿದ್ದಾರೆ:

ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ  ಬಿಜೆಪಿ ಮತ್ತು ಜೆಡಿಎಸ್ ನೀರಿನಿಂದ ತೆಗೆದ ಮೀನಿನಂತೆ ವಿಲಿ ವಿಲಿ ಎಂದು ಒದ್ದಾಡುತ್ತಿದ್ದು, ಭ್ರಮಾಲೋಕದಲ್ಲಿದ್ದಾರೆ ಎಂದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಬಾಲ್ಯವಿವಾಹ ತಡೆಗೆ ವ್ಯಾಪಕ ಜಾಗೃತಿ-ವಿವಾಹ ಪೂರ್ವ ಪತ್ತೆಗೆ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ


ಈ ದಿವಸ ವಾರ್ತೆ

 ವಿಜಯಪುರ : ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಸೇರಿದಂತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕ್ಕೊಳಗಾಗಿರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಮತ್ತು ಪುನರವಸತಿ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ 2023-24ನೇ ಸಾಲಿನ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬಾಲ್ಯವಿವಾಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹವಾಗದಂತೆ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸ್ಥಳೀಯ ಆಡಳಿತ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಬಾಲ್ಯ ವಿವಾಹಗಳನ್ನು ಪತ್ತೆ ಹಚ್ಚಿ, ಸಾಧ್ಯವಾದಷ್ಟು ಬಾಲ್ಯ ವಿವಾಹವಾಗುವ ಮೊದಲೇ ತಡೆಗಟ್ಟಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪೋಷಕರು ಹಾಗೂ ಬಾಲ್ಯವಿವಾಹಕ್ಕೆ ಪ್ರೊತ್ಸಾಹ ನೀಡುವವರ ಮೇಲೆ ಪ್ರಕರಣ ದಾಖಲಿಸಬೇಕು. ಬಾಲ್ಯವಿವಾಹ ನಿಷೇಧ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ಇದರಿಂದ ಮಕ್ಕಳ ಭವಿಷ್ಯ ಹಾಳಾಗುವ ಕುರಿತು ಜನರಲ್ಲಿ ತಿಳುವಳಿಕೆ ನೀಡುವ ಮೂಲಕ ಬಾಲ್ಯ ವಿವಾಹ ತಡೆಗೆ ಕ್ರಮ ವಹಿಸುವಂತೆ ಸೂಚಿಸಿದ ಅವರು, ಬಾಲ್ಯವಿವಾಹ ನಡೆಯುವ ಕುರಿತು ನೆರೆಹೊರೆಯವರು, ಸಾರ್ವಜನಿಕರು ಸಹ ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವ ಮೂಲಕ ಬಾಲ್ಯವಿವಾಹ ತಡೆಗಟ್ಟಲು ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿಕೊಂಡರು. 

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ 2005ರನ್ವಯ ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಪ್ರಕರಣಗಳನ್ನು ದಾಖಲಿಸಿ ಕೌಟುಂಬಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಿ, ತಾತ್ಕಾಲಿಕವಾಗಿ ಆಶ್ರಯ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು. 


ಕುಟುಂಬದಿಂದ ನಿರ್ಲಕ್ಷಿಸಪಟ್ಟವರು, ಕೌಟುಂಬಿಕ ಕಲಹ, ವಿವಾಹ ವಿಚ್ಛೇಧನ, ಪೊಕ್ಸೊ ಪ್ರಕರಣ ಸೇರಿದಂತೆ ಕೌಟುಂಬಿಕ ದೌರ್ಜನ್ಯಕ್ಕೊಳಗಾಗಿ ಶಕ್ತಿ ಸದನ ಸ್ವಾಧಾರ ಗೃಹ ಯೋಜನೆಯಡಿ ಆಶ್ರಯ ಪಡೆದ 1580 ಮಹಿಳೆಯರು ಮತ್ತು 273 ಮಕ್ಕಳಿಗೆ ಆಹಾರ, ಶಿಕ್ಷಣ, ಸಮಾಲೋಚನೆ, ವೈದ್ಯಕೀಯ ಕುಟುಂಬಕ್ಕೆ ಪುನರ್‌ಮಿಲನ್ ಮತ್ತು ಕಾನೂನಿನ ನೆರವಿನೊಂದಿಗೆ ಅವರ ನೈಪುಣ್ಯತೆಯನುಸಾರವಾಗಿ ಸ್ವಯಂ ಉದ್ಯೋಗ ತರಬೇತಿ ನೀಡುವ ಮೂಲಕ ಅವರನ್ನು ಸ್ವಾವಲಂಬಿಯನ್ನಾಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು. 

ಜಿಲ್ಲೆಯ ವಿಜಯಪುರ, ಸಿಂದಗಿ ಬಸವನಬಾಗೇವಾಡಿಯಲ್ಲಿನ ಬಾಲಕಿಯರ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ವಸತಿ ನಿಲಯಗಳಲ್ಲಿ ಅಳವಡಿಸಲಾದ ಸಿಸಿಟಿವಿಗಳ ಸ್ಥಿತಿಗತಿ ಕುರಿತು ಹಾಗೂ ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಿಂಗಳಲ್ಲಿ ಒಂದು ಬಾರಿ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಹಗಲು ಮತ್ತು ರಾತ್ರಿ ಮಹಿಳಾ ವಾರ್ಡಗಳು ಕಾರ್ಯನಿರತವಾಗಿರುವುದನ್ನು ಸಂಬಂಧಿಸಿದ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ವಿಜಯಪುರದ ಬಾಲಕಿಯರ ಬಾಲಮಂದಿರದ ಸುಧಾರಣೆ ಕ್ರಮ ಕೈಗೊಂಡು ಬಾಲಮಂದಿರದ ಮಕ್ಕಳು ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

ಮಾತೃವಂದನಾ ಯೋಜನೆಯಡಿ ನಿಗದಿತ ಪ್ರಗತಿ ಸಾಧಿಸಿ ಗುರಿ ಹೆಚ್ಚಿಸಬೇಕು. ಗರ್ಭೀಣ ಮಹಿಳೆಯರಿಗೆ ಸಮರ್ಪಕವಾಗಿ ಪೌಷ್ಠಿಕಾಂಶ ಆಹಾರ ಒದಗಿಸಬೇಕು. ಅಂಗನವಾಡಿ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅವರ ಜವಾಬ್ದಾರಿಗಳ ಕುರಿತು ತರಬೇತಿ ಒದಗಿಸಬೇಕು. ಜಿಲ್ಲೆಯಲ್ಲಿ ಶಾಲೆಯಿಂದ ಹೊರುಗಳಿದ ಹೆಣ್ಣು ಮಕ್ಕಳ ಸಮೀಕ್ಷೆ ನಡೆಸಬೇಕು. ಆ ಮಕ್ಕಳನ್ನು ಗುರುತಿಸಿ ಮರಳಿ ಶಾಲೆಗೆ ಕರೆ ತರಲು ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು. 

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಖಿ ಕೇಂದ್ರಗಳಲ್ಲಿ ಪೋಕ್ಸೋ, ಬಾಲ್ಯವಿವಾಹ, ಅಪಹರಣ, ಲೈಂಗಿಕ ಹಲ್ಲೆ, ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕ್ಕೊಳಗಾದವರನ್ನು ಕೌನ್ಸೆಲಿಂಗ ಪ್ರಕ್ರಿಯೆಗೊಳಪಡಿಸಿ ಮನೋಸ್ಥೈರ್ಯ ಹೆಚ್ಚಿಸಬೇಕು. ಈ ಸಖಿ ಕೇಂದ್ರಗಳು 24/7 ಕಾರ್ಯನಿರ್ವಹಿಸಬೇಕು. ಕೇಂದ್ರದಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ವ್ಯವಸ್ಥೆ ನಿರ್ವಹಣೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ ಸೂಚಿಸಿ, ಕೇಂದ್ರದಲ್ಲಿ ಡಿ ಗ್ರೂಪ್ ನೌಕರರ ನಿಯೋಜನೆ ಕ್ರಮ ವಹಿಸಲಾಗುವುದು ಎಂದು ಹೇಳಿದರು. 

ಕೌಟುಂಬಿಕ ದೌಜನ್ಯಕ್ಕೊಳಗಾದ ಮಹಿಳೆಯರಿಗೆ ಕೌನ್ಸೆಲಿಂಗ್ ನಡೆಸಬೇಕು.ಮೊದಲು ಪ್ರಕರಣ ದಾಖಲಿಸಿ ಪ್ರಕರಣ ವರದಿಯಾದ ನಂತರ ಕಾನೂನು ಸೇವಾ ಪ್ರಾಧಿಕಾರಕ್ಕೆ ಮಾಹಿತಿ ಒದಗಿಸಬೇಕು. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಪಠ್ಯೇತರ ಚಟುವಟಿಕೆಗೆ ಪ್ರೊತ್ಸಾಹ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ ಕುಂದರ್ ಹೇಳಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಕೌಶಲ್ಯಾಭಿವೃದ್ದಿ ಅಧಿಕಾರಿ ಸಿ.ಬಿ.ಕುಂಬಾರ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

12-12-2023 EE DIVASA KANNADA DAILY NEWS PAPER

Saturday, December 9, 2023

ಖೊಟ್ಟಿ ದಾಖಲೆ ಸೃಷ್ಠಿಸಿ ನೋಂದಣಿ ಮಾಡುವವರ ಮೇಲೆ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಲು ಸಚಿವ ಡಾ.ಎಂ.ಬಿ.ಪಾಟೀಲ ಖಡಕ್ ಸೂಚನೆ

ವಿಜಯಪುರ : ವಿಜಯಪುರ ನಗರ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖೊಟ್ಟಿ ದಾಖಲೆಗಳನ್ನು ಸೃಷ್ಠಿಸಿ ಆಸ್ತಿ ನೋಂದಣಿ ಮಾಡುವ ಪ್ರಕರಣಗಳು ಕಂಡು ಬಂದಿದ್ದು ಇಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಖಡಕ್ಕ್ಕಾಗಿ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಮಾತನಾಡಿದ ಅವರು, ಕೆಲವರು ಆಧಾರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಮೂಲಕ ಭೂ ಮಾಲೀಕರ ಹೆಸರಿನಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡುತ್ತಿರುವ 13 ಪ್ರಕರಣಗಳನ್ನು ಈಗಾಗಲೇ ದಾಖಲಿಸಲಾಗಿದೆ. ಖೊಟ್ಟಿ ದಾಖಲೆ ಸೃಷ್ಟಿ ಮಾಡಿ, ಆಸ್ತಿಗಳನ್ನು ನೋಂದಣಿ ಮಾಡುವ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರು ಬಾಂಡ್ ರೈಟರ್ಸ್ ಗುರತಿಸಿ, ಅವರ ಬಾಂಡ್ ರೈಟರ್ಸ್ ಲೈಸನ್ಸ್ ರದ್ದುಗೊಳಿಸವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅದರಂತೆ ಸಬ್ ರಜಿಸ್ಟರ್ ಆಫೀಸನಲ್ಲಿ ಉಪ ನೋಂದಣಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೆಲೆ ಮೇಲೆ ಹಲವು ದಿನಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವರನ್ನು ಜಿಲ್ಲಾ ವ್ಯಾಪ್ತಿಯಿಂದ ತಾಲೂಕು ಮಟ್ಟದಲ್ಲಿ ವರ್ಗಾವಣೆ ಮಾಡಿ, ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಕೆಲಸ ಮಾಡಲು ವರ್ಗಾವರ್ಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಅಕ್ರಮ ನೋಂದಣಿ ಪ್ರಕರಣಗಳು ಕಂಡು ಬಂದಲ್ಲಿ ಉಪ ನೋಂದಣಾಧಿಕಾರಿಗಳು ಜಿಲ್ಲಾ ನೋಂದಾಣಾಧಿಕಾರಿಗಳ ಅನುಮತಿ ಪಡೆದು ಸ್ಟೇಟ್ ಎಫ್‌ಐಆರ್ ಮಾಡಬೇಕು. ನೋಂದಣಿ ಮಾಡುವ ಸಂದರ್ಭದಲ್ಲಿ ಜಿಲ್ಲಾ ನೋಂದಣಾಧಿಕಾರಿಗಳಿಗೆ ಸಬ್ ರಜಿಸ್ಟರ್ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ವೋಟರ್ ಐಡಿ ಹಾಗೂ ರೇಶನ್ ಕಾರ್ಡ್ ಕೂಲಂಕೂಷವಾಗಿ ಪರಿಶೀಲಿಸಲು ಲಾಗಿನ್ ಐಡಿ ನೀಡಲಾಗುವುದು. ಮೂಲ ದಾಖಲೆಗಳನ್ನು ಪರಿಶೀಲಿಸಿ ನೋಂದಣಿ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಿದರು.

ನೋಂದಣಿ ಮಾಡುವ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ ತಮ್ಮ ಹೆಸರು ಹಾಗೂ ಹುದ್ದೆಯನ್ನು ಕಡ್ಡಾಯವಾಗಿ ನಮೂದಿಸಬೇಕು. 

ಜಿಲ್ಲೆಯಾದ್ಯಂತ ಅಕ್ರಮವಾಗಿ ಖೊಟ್ಟಿ ದಾಖಲೆಯನ್ನು ಸೃಷ್ಟಿಸಿ ಮಾರಾಟ ಮಾಡುವುದನ್ನು ತಡೆಗಟ್ಟಲು ತಹಶೀಲ್ದಾರರನ್ನು ನೋಡಲ್ ಅಧಿಕಾರಿಗಳನ್ನಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳಿಂದ ಓರ್ವ ಅಧಿಕಾರಿಯನ್ನು ನೇಮಕ ಮಾಡಿಕೊಳ್ಳಲು ತಿಳಿಸಿದರು. ಇಂತಹ ಪ್ರಕರಣಗಳಲ್ಲಿ ಮೋಸ ಹೋಗಿರುವ ಸಾರ್ವಜನಿಕರು ನೋಡಲ್ ಅಧಿಕಾರಿಗಳಿಗೆ ದೂರು ಸಲ್ಲಿಸಲು ಅನುಕೂಲವಾಗುವಂತೆ ನಿರ್ಣಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿಗಳಾದ ಬಸಣೆಪ್ಪ ಕಲಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ್ ಸೌದಾಗರ್, ವಿಜಯಪುರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಜಿಲ್ಲಾ ನೋಂದಣಾಧಿಕಾರಿಗಳಾದ ಜಿ.ಆರ್ ನಾಡಗೌಡ, ಉಪ ನೋಂದಣಾಧಿಕಾರಿ ಗಳಾದ ಬಿ.ಎಸ್.ಬಿರಾದಾರ್, ಮಲ್ಲಿಕಾರ್ಜುನ ಪಾಟೀಲ,ರವಿ ಹಂಚಿನಾಳ, ಐ.ಎಸ್.ಬಾಗಾಯತ್, ದೇವಪ್ಪ ಡಂಬಳ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

10-12-2023 EE DIVASA KANNADA DAILY NEWS PAPER

Thursday, December 7, 2023

ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು : ಸಿಎಂ ಸಿದ್ಧರಾಮಯ್ಯ

ಈ ದಿವಸ ವಾರ್ತೆ

ಬೆಳಗಾವಿ: ಮಹಿಳೆಯರು  ತಯಾರಿಸಿದ ವಸ್ತುಗಳಿಗೆ ಮಾರಾಟ ವ್ಯವಸ್ಥೆ ದೊರೆತಾಗ ಮಾತ್ರ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ಪಡೆಯಲು ಸಾಧ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಅವರು ಇಂದು ಸ್ವಸಹಾಯ ಸಂಘಗಳು ತಯಾರಿಸಿರುವ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಗಾಟಿಸಿ ಅವರು ಮಾತನಾಡಿದರು.

ಮಾರಾಟ ಹೆಚ್ಚಾದರೆ ಉತ್ಪನ್ನಗಳ ಉತ್ಪಾದನೆಯೂ ಹೆಚ್ಚಾಗಲು ಸಾಧ್ಯ. ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಕ್ಕು ಅದರಿಂದ ಜೀವನ ನಡೆಯಬೇಕು. ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ವಹಿಸುತ್ತಾರೆ. ಅವರು ಶ್ರಮಜೀವಿಗಳು. ಶೇ 50 ರಷ್ಟಿರುವ ಮಹಳೆಯರು ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಮಹಿಳೆಯರು ದೌರ್ಜನ್ಯ, ಶೋಷಣೆಗೆ ಒಳಗಾಗಿರುವ ವರ್ಗ.  ಈ ವರ್ಗ ಶಿಕ್ಷಣ ದೊರೆತು ಆರ್ಥಿಕವಾಗಿ ಸಬಲರಾಗಬೇಕು. ಶಕ್ತಿ ವೃದ್ಧಿ ಮಾಡಲು ವಸ್ತು ಪ್ರದರ್ಶನ ಮಾರಾಟ ಮೇಳಗಳನ್ನು ಸರ್ಕಾರ ಏರ್ಪಾಡು ಮಾಡಿದೆ. ಉದ್ಯೋಗ ಸೃಷ್ಟಿಸಲು ಆರ್ಥಿಕ ನೆರವು , ತರಬೇತಿ, ಸ್ವಯಂ ಉದ್ಯೋಗಕ್ಕೆ ಶಕ್ತಿ ಅಗತ್ಯ. ಗುಣಮಟ್ಟದ ವಸ್ತುಗಳನ್ನು ತಯಾರಿಸುವ ಶಕ್ತಿ ಉತ್ಪಾದಕರಿಗೆ ಇರಬೇಕು. ಸ್ಪರ್ಧಾತ್ಮಕ ಸಮಾಜದಲ್ಲಿ ನಾವೂ ನಮ್ಮ ಅಸ್ತಿತ್ವ ಕಾಪಾಡಿಕೊಳ್ಳಬೇಕು. ರಾಜ್ಯದಲ್ಲಿ 3.48 ಲಕ್ಷ ಸ್ವಸಹಾಯ ಸಂಘಗಳಿವೆ. 39.30 ಲಕ್ಷ ಕುಟುಂಬಗಳು ಗ್ರಾಮೀಣ ಜೀವನೋಪಾಯಡಿಯಲ್ಲಿ  ಬರುತ್ತವೆ. ನಗರ ಪ್ರದೇಶದಲ್ಲಿ 33 ಸಾವಿರ ಸ್ವಸಹಾಯ ಸಂಘಗಳಿವೆ. 3.96 ಲಕ್ಷ ಕುಟುಂಬಗಳು ತೊಡಗಿಸಿಕೊಂಡಿವೆ. ಇಷ್ಟೊಂದು ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ಸರ್ಕಾರ ನೀಡಿದೆ ಎಂದರು.

12600 ಗುಂಪುಗಳಿಗೆ 1 ಕೋಟಿ ರೂ.ಗಳು:

ಸ್ವಸಹಾಯ ಸಂಘಗಳಿಗೆ ಪ್ರತಿ ಸ್ವಸಹಾಯ ಸಂಘಗಳಿಗೆ 1 ಲಕ್ಷ ರೂ.ಗಳ ನೆರವು ನೀಡುತ್ತದೆ. 131 ಕೋಟಿ ರೂ.ಗಳನ್ನು ವ್ಯಯ ಮಾಡಿ 12600 ಗುಂಪುಗಳಿಗೆ ಈ ವರ್ಷ ಸಹಾಯ ಮಾಡಿದೆ. ಕಳೆದ ವರ್ಷ ವ್ಯಾಪಾರ ಮೇಳದಲ್ಲಿ 3 ಕೋಟಿ ರೂ.ಗಳ ವಹಿವಾಟು ನಡೆದಿದೆ. ಮಹಿಳೆಯರನ್ನು ಸಬಲರನ್ನಾಗಿ ಮಾಡಲು ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡುತ್ತಿದೆ. ಶಕ್ತಿ ಯೋಜನೆಯಡಿ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣವನ್ನು ನೀಡಿದ್ದು ಮಹಿಳೆಯರು ಮನೆಗಳಿಗೆ ಸೀಮಿತವಾಗದೆ ರಾಜ್ಯದ ಮೂಲೆ ಮೂಲೆಗಳಿಗೂ ಹೋಗಬೇಕು. 100 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಬಸ್ಸುಗಳಲ್ಲಿ ಓಡಾಡಿದ್ದಾರೆ. ಪ್ರತಿ ದಿನ 50-60 ಲಕ್ಷ ಜನ ಮಹಿಳೆಯರು ಬಸ್ಸುಗಳಲ್ಲಿ ಓಡಾಡಿದ್ದಾರೆ ಎಂದು ವಿವರಿಸಿದರು.

ಗೃಹ ಲಕ್ಷ್ಮೀ ಯೋಜನೆಯಡಿ 2000 ರೂ.ಗಳನ್ನು ಈವರೆಗೆ 1.17 ಕೋಟಿ ಜನ ನೋಂದಾಯಿಸಿಕೊಂಡಿದ್ದಾರೆ. 1.14 ಲಕ್ಷ ಮಹಿಳೆಯರಿಗೆ 2000 ರೂ.ಗಳನ್ನು ನೀಡಲಾಗುತ್ತಿದೆ. 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. 170 ರೂ.ಗಳನ್ನು ಪ್ರತಿಯೊಬ್ಬರಿಗೂ ಅಕ್ಕಿಗೆ ಬದಲಾಗಿ ಕೊಡುತ್ತಿದ್ದೇವೆ. ಯುವನಿಧಿ ಯೋಜನೆಯ ಪ್ರಕ್ರಿಯೆ ನಡೆಯುತ್ತಿದ್ದು ಜನವರಿಯಲ್ಲಿ ಕೊಡಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಮಹಿಳೆಯರು ದೇಶದ ಜಿಡಿಪಿಗೆ  ಕೊಡುಗೆಯನ್ನು ನೀಡಬೇಕು:

 ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಅವರೂ ದೇಶದ ಜಿಡಿಪಿಗೆ  ಕೊಡುಗೆಯನ್ನು ನೀಡಬೇಕು ಎಂದರು. ಆರು ತಿಂಗಳಲ್ಲಿ ಇವೆಲ್ಲವನ್ನೂ ಮಾಡಲಾಗಿದೆ. ಮಾರುಕಟ್ಟೆಯಲ್ಲಿ ಮಹಿಳೆಯರಿಗೆ ಹೆಚ್ಚು ಲಾಭ ಸಿಗಲು ಗುಣಮಟ್ಟದ ವಸ್ತುಗಳನ್ನು ತಯಾರು ಮಾಡಬೇಕು. ಅದಕ್ಕೆ ಅಗತ್ಯವಿರುವ ತಾಂತ್ರಿಕ ಜ್ಞಾನವನ್ನು ಕೊಡುವ ಕೆಲಸವನ್ನು ಇಲಾಖೆ ಮಾಡುತ್ತದೆ.   ಯುವಕ, ಯುವಕರಿಗೆ  ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಕೌಶಲ್ಯಾಭಿವೃದ್ಧಿ ಮಾಡಿದರೆ 2 ವರ್ಷಗಳಲ್ಲಿ ಉದ್ಯೋಗ ಸಿಗುವುದು ಸುಲಭವಾಗುತ್ತದೆ. ತರಬೇತಿ  ಮತ್ತು ಯುವನಿಧಿ ಎರಡೂ ಆದರೆ ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಬದಲಾವಣೆ ತರಲು ಸಾಧ್ಯವಾಗುತ್ತದೆ. ಯುವ ಶಕ್ತಿ, ಮಹಿಳೆಯರು ರಾಜ್ಯದ ಸಂಪತ್ತು. ಆದ್ದರಿಂದ ನಿಮಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದರು.

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್, ಅಧ್ಯಕ್ಷತೆಯನ್ನು ಶಾಸಕ ಆಸಿಫ್ ಸೇಠ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಅಪರ ಮುಖ್ಯ ಕಾರ್ಯದರ್ಶಿ ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್ ಅಧಿಕಾರಿಗಳು ಉಪಸ್ಥಿತರಿದ್ದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

08-12-2023 EE DIVASA KANNADA DAILY NEWS PAPER

ನ್ಯೂಯಾರ್ಕ್‍ನ ಬ್ರಾಂಕ್ಸ್‍ನ ಆಲ್ಬರ್ಟ್ ಐನ್‍ಸ್ಟೈನ್ ಕಾಲೇಜ್ ಆಫ್ ಮೆಡಿಸಿನ್‍ನಲ್ಲಿ ಪೋಸ್ಟ್ ಡಾಕ್ಟರಲ್ ರಿಸರ್ಚ್ ಫೆಲೋ ಆಗಿ ಡಾ. ನಿವೇದಿತಾ ಎಸ್. ಪೂಜಾರಿ ಆಯ್ಕೆ

ಈ ದಿವಸ ವಾರ್ತೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಬಯೋ ಇನ್ಫಮ್ರ್ಯಾಟಿಕ್ಸ್‍ನಲ್ಲಿ ಪಿಎಚ್‍ಡಿ ಗಳಿಸಿದ ಡಾ. ನಿವೇದಿತಾ ಎಸ್. ಪೂಜಾರಿ ನ್ಯೂಯಾರ್ಕ್‍ನ ಬ್ರಾಂಕ್ಸ್‍ನ ಆಲ್ಬರ್ಟ್ ಐನ್‍ಸ್ಟೈನ್ ಕಾಲೇಜ್ ಆಫ್ ಮೆಡಿಸಿನ್‍ನಲ್ಲಿ ಪೆÇೀಸ್ಟ್ ಡಾಕ್ಟರಲ್ ರಿಸರ್ಚ್ ಫೆಲೋ ಆಗಿ ಆಯ್ಕೆಯಾಗಿದ್ದಾರೆ.   

ಡಾ.ನಿವೇದಿತಾ ಅವರು ಡಾಕ್ಟರೇಟ್ ಸಂಶೋಧನೆಯನ್ನು ಡಾ. ಜಾಯ್ ಎಚ್. ಹೊಸಕೇರಿ ಅವರ ಮಾರ್ಗದರ್ಶನದಲ್ಲಿ ಕೈಕೊಂಡಿದ್ದು, ಮೈನರ್ ಮಿಲೆಟ್‍ಗಳ ಆಂಟಿ-ಹೈಪರ್ಲಿಪಿಡೆಮಿಕ್ ಪರಿಣಾಮಗಳನ್ನು ಮತ್ತು ಅವುಗಳ ಮಾಲ್ಟ್ ಪೆÇ್ರೀಟೀನ್‍ಗಳನ್ನು ಪ್ರತಿಲೇಖನ ವಿಶ್ಲೇಷಣೆಯ ಮೂಲಕ ಸಂಶೋಧನೆ ಕೈಕೊಂಡಿದ್ದರು. 

ಈಗ, ಆಲ್ಬರ್ಟ್ ಐನ್‍ಸ್ಟೈನ್ ಕಾಲೇಜ್ ಆಫ್ ಮೆಡಿಸಿನ್‍ನಲ್ಲಿ, ಡಾ. ನಿವೇದಿತಾ ಅವರು ನ್ಯೂರೋಟ್ರೋಪಿಕ್ ಹರ್ಪಿಸ್ ವೈರಸ್ ಅಸೆಂಬ್ಲಿ ಮತ್ತು ಟ್ರಾಫಿಕಿಂಗ್‍ನ ಮೈಕ್ರೋಸ್ಕೋಪಿಕ್ ಇಮೇಜಿಂಗ್ ವಿಶ್ಲೇಷಣೆ ಕುರಿತು ಸಂಶೋಧನೆ ನಡೆಸಲಿದ್ದು, ಪ್ರಾಯೋಜಕ ಸಂಸ್ಥೆಯಾದ ಆಲ್ಬರ್ಟ್ ಐನ್‍ಸ್ಟೈನ್ ಕಾಲೇಜ್ ಆಫ್ ಮೆಡಿಸಿನ್ ಡಾ.ನಿವೇದಿತಾ ಅವರಿಗೆ $58,179 ಡಾಲರ್ ಫೆಲೋಶಿಪ್ ನೀಡಿದೆ. 

ಡಾ. ನಿವೇದಿತಾ ಅವರು ವೈಜ್ಞಾನಿಕ ಜ್ಞಾನವನ್ನು ಮುಂದುವರೆಸಲು ಅವರ ಸಮರ್ಪಣೆ, ಅವರ ಅಲ್ಮಾ ಮೇಟರ್ ಮತ್ತು ಆಲ್ಬರ್ಟ್ ಐನ್‍ಸ್ಟೈನ್ ಕಾಲೇಜ್ ಆಫ್ ಮೆಡಿಸಿನ್‍ನ ಬೆಂಬಲದೊಂದಿಗೆ, ಬಯೋಇನ್‍ಫಮ್ರ್ಯಾಟಿಕ್ಸ್ ಮತ್ತು ನ್ಯೂರೋಟ್ರೋಪಿಕ್ ವೈರಸ್ ಸಂಶೋಧನೆಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡುವ ಭರವಸೆ ಇದೆ ಎಂದು ಡಾ.ಜಾಯ್ ಹೊಸಕೇರಿ ಆಶಯ ವ್ಯಕ್ತಪಡಿಸಿದ್ದಾರೆ. 

ಡಾ.ನಿವೇದಿತಾ ಅವರ ಸಾಧನೆಗೆ ವಿವಿಯ ಕುಲಪತಿ ಡಾ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ ಅವರು ಅಭಿನಂದಿಸಿದ್ದಾರೆ. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ರೇಖಾಗೆ ಪಿಎಚ್.ಡಿ ಪದವಿ

ಈ ದಿವಸ ವಾರ್ತೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ರೇಖಾ ಗಣಿಹಾರ ಅವರು ಸಲ್ಲಿಸಿದ್ದ “ಚೈಲ್ಡ್ ಮ್ಯಾರೇಜ್ ಆಂಡ್ ರಿಪ್ರೊಡಕ್ಟಿವ್ ಹೆಲ್ತ್: ಎ ಸೋಷಿಯೊಲಾಜಿಕಲ್ ಸ್ಟಡಿ ಇನ್ ವಿಜಯಪುರ ಡಿಸ್ಟ್ರಿಕ್ಟ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‍ಡಿ  ಪದವಿ ನೀಡಿದೆ. 

ರೇಖಾ ಗಣಿಹಾರ ಅವರು ಸಮಾಜಶಾಸ್ತ್ರ ವಿಭಾಗದ ಡಾ.ಎಮ್.ಪಿ.ಬಳಿಗಾರ ಅವರ ಮಾರ್ಗದರ್ಶನದಲ್ಲಿ  ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ರೇಖಾ ಗಣಿಹಾರ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ  ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

Tuesday, December 5, 2023

ರಾಜಗುರು ಫುಡ್ಸ್ ಗೋದಾಮಿನ ದುರಂತ ರಾಜ್ಯ ಸರ್ಕಾರದಿಂದ ಮೃತ ಕುಟುಂಬಗಳಿಗೆ 2ಲಕ್ಷ ರೂ.ಗಾಯಾಳುಗಳಿಗೆ 50 ಸಾವಿರ ರೂ : -ಸಚಿವ ಡಾ.ಎಂ.ಬಿ.ಪಾಟೀಲ

ವಿಜಯಪುರ : ತಾಲೂಕಿನ ಅಲಿಯಾಬಾದ್ ಗ್ರಾಮದ ಕೈಗಾರಿಕಾ ಪ್ರದೇಶದ ಬ್ಲಾಕ್-2ರಲ್ಲಿರುವ ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದ ದುರಂತದಲ್ಲಿ ಸಾವಿಗೀಡಾದ 7 ಜನ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.

ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಕಿಶೋರ ಜೈನ್ ಎಂಬುವರ ಒಡೆತನದ ರಾಜಗುರು ಫುಡ್ಸ್ ವ್ಯಾಪಾರ ಕೇಂದ್ರದಲ್ಲಿ 500 ರಿಂದ 600 ಟನ್ ಸಾಮಥ್ರ್ಯದ 3 ಸರಣಿ ಟ್ಯಾಂಕ್‍ಗಳಿದ್ದು, ಈ ಟ್ಯಾಂಕ್‍ಗಳ ಪೈಕಿ ಒಂದು ಟ್ಯಾಂಕ್ ಸರಣಿ ಕಂಬ ಮುರಿದು ಕುಸಿದು ಬಿದ್ದಿರುವುದರಿಂದ ಟ್ಯಾಂಕ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು. ಇದರಲ್ಲಿ 8 ಜನ ಕಾರ್ಮಿಕರ ಪೈಕಿ ಓರ್ವ ಕಾರ್ಮಿಕನನ್ನು ರಕ್ಷಿಸಿ ಗಾಯಾಳನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ ಹಾಗೂ ಈ ಘಟನೆಯಲ್ಲಿ  ದುರಾದೃಷ್ಟವಶಾತ್ 7 ಜನ ಕಾರ್ಮಿಕರು ಮೃತಪಟ್ಟಿದ್ದು, ಮೃತ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಿಸಿದ್ದು, ವ್ಯಾಪಾರ ಕೇಂದ್ರದ ಮಾಲೀಕರಿಂದ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ರಾಜ್ಯದ ಯಾವುದೇ ಕೈಗಾರಿಕೆಗಳಲ್ಲಿ ಅನಾಹುತಕ್ಕೆ ಆಸ್ಪದ ನೀಡದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಹಾಗೂ ಸುರಕ್ಷಾ ಕ್ರಮಗಳಿಗೆ ಆದ್ಯತೆ ನೀಡಲಾಗುವುದು. ಇಂತಹ ದುರ್ಘಟನೆಗಳು ಮರುಕಳಿಸದಂತೆ ಎಲ್ಲ ವ್ಯಾಪಾರ ಕೇಂದ್ರಗಳಿಗೂ ಹಾಗೂ ಕೈಗಾರಿಕಾ ಕೇಂದ್ರಗಳಲ್ಲಿ ಕಟ್ಟುನಿಟ್ಟಾಗಿ ಸುರಕ್ಷತಾ ಕ್ರಮ ಅಳವಡಿಸಿಕೊಳ್ಳುವಂತೆ ಕ್ರಮ ವಹಿಸಲಾಗುವುದು. ವ್ಯಾಪಾರ ಕೇಂದ್ರದಲ್ಲಿ ಆಗಿರುವ ಘಟನೆಗೆ ತಾಂತ್ರಿಕ ದೋಷ ಮತ್ತು ನ್ಯೂನ್ಯತೆಗಳ ಕುರಿತು ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು. 

ದಿನಾಂಕ : 04-12-2023 ರಂದು ಸಂಜೆ 5 ಗಂಟೆಗೆ ಈ ಘಟನೆ ಸಂಭವಿಸಿದ್ದು, ಘಟನೆ ಮಾಹಿತಿ ದೊರೆತ ನಂತರ ಸಚಿವರು ಬೆಳಗಾವಿಯಿಂದ ಮಧ್ಯರಾತ್ರಿ ಘಟನಾ ಸ್ಥಳಕ್ಕೆ ಆಗಮಿಸಿ, ಸ್ಥಳದಲ್ಲಿದ್ದ ಜಿಲ್ಲಾಧಿಕಾರಿಗಳಿಂದ ರಕ್ಷಣಾ ಕಾರ್ಯಾಚರಣೆ ಹಾಗೂ ಗಾಯಾಳುಗಳ ಚಿಕಿತ್ಸೆ ಕುರಿತು ಮಾಹಿತಿ ಪಡೆದುಕೊಂಡರು. ರಕ್ಷಣಾ ಕಾರ್ಯಾಚರಣೆಗೆ ಸೂಕ್ತ ನಿರ್ದೇಶನ ನೀಡಿದರು. ದುರಂತದಲ್ಲಿ ಗಾಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸೂಕ್ತ ವೈದ್ಯೋಪಚಾರ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೃತಪಟ್ಟ ಕಾರ್ಮಿಕರು : ಗೋದಾಮಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ 36 ವರ್ಷದ ರಂಭಿತ, 20 ವರ್ಷದ ರಾಜೇಶ ಮುಖಿಯಾ, 40 ವರ್ಷದ ಶಂಭು ಮುಖಿಯಾ, 40 ವರ್ಷದ ರಾಮಬಾಲಕ, 55 ವರ್ಷದ ಲುಕೋ ಯಾಧವ, 18 ವರ್ಷದ ಕೃಷ್ಣಕುಮಾರ ಮುಖಿಯಾ ಹಾಗೂ 33 ವರ್ಷದ ಧುಲಾಚಂದ ಮುಖಿಯಾ ಎಂಬ ಕಾರ್ಮಿಕರು ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ಘಟನೆಯ ವಿವರ : ತಾಲೂಕಿನ ಅಲಿಯಾಬಾದ ಕೈಗಾರಿಕಾ ಪ್ರದೇಶದಲ್ಲಿ ರಾಜಗುರು ಫುಡ್ಸ್ ಎಂಬ ವ್ಯಾಪಾರ ಕೇಂದ್ರದಲ್ಲಿ 40 ರಿಂದ 50 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರದಲ್ಲಿ ಅವಶ್ಯಕತೆಯನುಸಾರ 100 ರಿಂದ 150 ಕಾರ್ಮಿಕರನ್ನು ಗುತ್ತಿಗೆ  ಪಡೆಯಲಾಗುತ್ತದೆ. ಡಿ.4ರಂದು ಸಂಜೆ 5 ಗಂಟೆಗೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ  ಮೆಕ್ಕೆಜೋಳ ತುಂಬಿರುವ ಒಂದು ಟ್ಯಾಂಕ್ ಸರಣಿ ಕಂಬ ಮುರಿದು ಬಿದ್ದಿದ್ದು, ಕಾರ್ಮಿಕರು ಭಯಭೀತರಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಅಂದಾಜು 50 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ   8 ಜನ ಕಾರ್ಮಿಕರಿಗೆ ಅಲ್ಲಿಂದ ಪಾರಾಗಲು ಸಾಧ್ಯವಾಗದ ಕಾರಣ, ಮೆಕ್ಕೆಜೋಳದ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಘಟನೆ ಕುರಿತು ಸಂಜೆ 6 ಗಂಟೆಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಅಗ್ನಿಶಾಮಕ, ಮಹಾನಗರಪಾಲಿಕೆ ಪೋಲಿಸ್ ಸಿಬ್ಬಂದಿಯೊಂದಿಗೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಓರ್ವ ವ್ಯಕ್ತಿಯನ್ನು ರಕ್ಷಿಸಿ ಅವರನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಡಿಸಿದ್ದಾರೆ. ನಂತರ ಎಸ್‍ಡಿಆರ್‍ಎಫ್ ಮತ್ತು ಎನ್‍ಡಿಆರ್‍ಎಫ್ ತಂಡಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಅಂದಾಜು 12 ಗಂಟೆಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಸಿಲುಕಿಕೊಂಡಿರುವ 7 ಮೃತ ದೇಹಗಳನ್ನು  ಹೊರತೆಗೆಯಲಾಗಿದೆ.

ಮೃತ ದೇಹಗಳನ್ನು ಹತ್ತಿರದ ವಿಮಾನ ನಿಲ್ಧಾಣದಿಂದ ಏರ್ ಲಿಪ್ಟ್ ಮಾಡಿ ಪಾಟ್ನಾ ವಿಮಾನ ನಿಲ್ಧಾಣದಕ್ಕೆ ತಲುಪಿದ ನಂತರ ಮೃತ ದೇಹಗಳನ್ನು ಮೃತರ ಮನೆಯವರೆಗೆ ತಲುಪಿಸವ ವ್ಯವಸ್ಥೆಯನ್ನು ಮಾಡಲಾಗಿದೆ. ಸದರಿ ಕಾರ್ಯಾಚರಣೆಯಲ್ಲಿ  ಜೆಸಿಬಿ ಮತ್ತು ಹಿಟಾಚಿಗಳನ್ನು ಬಳಸಲಾಗಿದ್ದು, 24 ಜನ ಬೆಳಗಾವಿಯಿಂದ ಹಾಗೂ 26 ಜನ ಕಲಬುರಗಿಯಿಂದÀ ಎಸ್‍ಡಿಆರ್‍ಎಫ್ ತಂಡಗಳು, 30ಜನರನ್ನೊಳಗೊಂಡ ಮಹಾರಾಷ್ಟ್ರದ ಪುಣೆಯಿಂದ ಎನ್‍ಡಿಆರ್‍ಎಫ್ ತಂಡ ಭಾಗವಹಿಸಿತ್ತು. 

ಸಚಿವರಿಂದ ಶ್ರದ್ಧಾಂಜಲಿ : ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಮಂಗಳವಾರ ನಗರದ ಸರ್ಕಾರಿ ಆಸ್ಪತ್ರೆ  ಆವರಣಕ್ಕೆ ತೆರಳಿ ವಿಜಯಪುರ ಗೋದಾಮಿನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. 

ಸಚಿವರಿಂದ ಪ್ರಶಂಸೆ ಪತ್ರ : ರಾಜಗುರು ಫುಡ್ಸ್ ಗೋದಾಮಿನಲ್ಲಿ ನಡೆದ ದುರಂತದಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಡೆಪ್ಯೂಟಿ ಕಮಾಂಡೆಂಟರ್ ಆರ್.ಅರವಿಂದ ನೇತೃತ್ವದ ಬೆಳಗಾವಿ ಹಾಗೂ ಡೆಪ್ಯೂಟಿ ಕಮಾಂಡೆಂಟ್ ಸಲಾವುದ್ದೀನ್ ನೇತೃತ್ವದ ಕಲ್ಬುರ್ಗಿ  ಎಸ್‍ಡಿಆರ್‍ಎಫ್ ತಂಡ ಹಾಗೂ ಅನೀಲ ತಾಲಕೋಟ್ರಾ ನೇತೃತ್ವದ ಎನ್‍ಡಿಆರ್‍ಎಫ್ ತಂಡ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಸೊನಾವನೆ, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ್ ಸೌದಾಗರ, ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹಳ್ಳಿ, ಜಿಲ್ಲಾ ಆರೋಗ್ಯಾಧಿಕಾರಿ ಬಸವರಾಜ ಹುಬ್ಬಳ್ಳಿ, ಕಂದಾಯ ಇಲಾಖೆ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರಿಗೆ, ಬಿಎಲ್‍ಡಿಇ ಫಾರೆನ್ಸಿಕ್ ಎಚ್‍ಓಡಿ ಸೇರಿದಂತೆ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ ಎಲ್ಲ ಇಲಾಖೆ ಸಿಬ್ಬಂದಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಕೃತಜ್ಞತೆ ಸಲ್ಲಿಸಿ ಪ್ರಶಂಸೆ ಪತ್ರ ನೀಡಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.


06-12-2023 EE DIVASA KANNADA DAILY NEWS PAPER

ಡಿ.7 ರಂದು ರೈತರ ವಿವಿಧ ಜ್ವಲಂತ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಸುವರ್ಣ ಸೌಧಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆಯಿಂದ ಮುತ್ತಿಗೆ

ವಿಜಯಪುರ : ರಾಜ್ಯ ಹಾಗೂ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಹಿಂಪಡೆಯುವ ಹಾಗೂ ಬಗೆಹರಿಸುವಂತೆ ಆಗ್ರಹಿಸಿ ಡಿಸೆಂಬರ್ 7ರಂದು ಸುವರ್ಣ ಸೌಧ ಮುತ್ತಿಗೆ ಹಾಕಿ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ಧರಣಿ ಮಾಡಲಾಗುವುದು, ಜಿಲ್ಲೆಯಿಂದ 3000ಕ್ಕಿಂತಲೂ ಹೆಚ್ಚು ರೈತರು ರಾಜ್ಯಾಧ್ಯಕ್ಷರಾದ ಚುನಪ್ಪಾ ಪೂಜೇರಿ ಅವರ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು  20000 ಕ್ಕೂ ಹೆಚ್ಚು ರೈತರು ಹೋರಾಟದಲ್ಲಿ ಪಾಲ್ಗೊಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಕುಬಕಡ್ಡಿ ಹೇಳಿದರು.

ನಗರದಲ್ಲಿ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಬರಗಾಲ ಪರಿಹಾರ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆರಿಸಬೇಕು, ಈ ನಿಟ್ಟಿನಲ್ಲಿ ಬೆಳಗಾವಿ ಚಲೋ ಕರೆ ಕೊಡಲಾಗಿದೆ, ಕೂಡಲೇ ಸರಕಾರ ನೆಪ ಮಾತ್ರಕ್ಕೆ ಉತ್ತರ ಕರ್ನಾಟಕದಲ್ಲಿ 10 ದಿನಗಳ ಕಾಲ ಪ್ರವಾಸಕ್ಕೆ ಬಂದ ಹಾಗೆ ಬಂದು ಹೋಗುವ ನೆಪ ಮಾತ್ರದ ಅಧಿವೇಶನ ನಮಗೆ ಬೇಕಾಗಿಲ್ಲ, ಕೂಡಲೇ ರೈತರಿಗೆ ಅನುಕೂಲ ಆಗುವ ಯೋಜನೆಗಳನ್ನು ತರಬೇಕು ಎಮದು ಹೇಳಿದರು.

ಈ ಸಂದರ್ಭ ಜಿಲ್ಲಾಧ್ಯಕ್ಷರಾದ ಸಂಗಮೆಶ ಸಗರ ಮಾತನಾಡುತ್ತಾ ಬರಗಾಲದ ನಿಮಿತ್ಯ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಪ್ರತಿ ಎಕರೆಗೆ 50000 ಪರಿಹಾರ ನೀಡಬೇಕು, ರೈತರಿಗೆ ಕಂಟಕವಾಗಿರುವ ಕೃಷಿ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆ, ಜಾನುವಾರು ಹತ್ಯ ಕಾಯ್ದೆಗಳನ್ನು ಹಿಂಪಡೆಯಬೇಕು, ವಿದ್ಯುತ್ ಇಲಾಖೆಯನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದುನ್ನು ಬಿಟ್ಟು ಸರಕಾರದಿಂದಲೇ ಮುಂದುವರೆಸಬೇಕು, ಮೊದಲಿನಂತೆ ರೈತರ ಕೃಷಿ ಪಂಪಸೆಟ್‍ಗಳಿಗೆ ಹಗಲು 12 ಘಂಟೆ 3 ಫೆಸ್ ಹಾಗೂ ರಾತ್ರಿ ಸಿಂಗಲ್ ಫೆಸ್ ಉಚಿತ ವಿದ್ಯುತ್ ನೀಡಬೇಕು, ರೈತರಿಗೆ ಇಲ್ಲಿಯವರೆಗೆ 3-4 ವರ್ಷಗಳಿಂದ ಬಾಕಿ ಉಳಿದ ಬೆಳೆ ವಿಮೆಯನ್ನು ಕೂಡಲೇ ಕೊಡಬೇಕು, ಕೃಷ್ಣಾ ನದಿಯ ಆಲಿಮಟ್ಟಿ ಆಣೆಕಟ್ಟನ್ನು ಎತ್ತರಿಸಿ ಆದಕ್ಕೆ ನಷ್ಟಗೊಂಡ ರೈತರಿಗೆ ಪರಿಹಾರ ನೀಡಬೇಕು, ಕಬ್ಬಿಗೆ ಪ್ರತಿ ಟನ್ನಗೆ 5000 ರೂಪಾಯಿ ಘೋಷóಣೆ ಮಾಡಿ, ಕಬ್ಬಿಗೂ ವಿಮೆ ವ್ಯವಸ್ಥೆ ಮಾಡಬೇಕು, ಜಿಲ್ಲೆಯಲ್ಲಿ ಅತೀ ಹೆಚ್ಚು ಬೆಳೆಯುತ್ತಿರುವ ದ್ರಾಕ್ಷಿಗೆ, ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಅದರ ಉಪ ಉತ್ಪನ್ನಗಳನ್ನು ಮಾಡುವಂತೆ ಉತ್ತೆಜಿಸುವ ಯೋಜನೆ ಮಾಡಬೇಕು, ಜಿಲ್ಲೆಯಲ್ಲಿ ಮಾಡಲಾಗಿರುವ ಎಲ್ಲಾ ನೀರಾವರಿ ಯೋಜನೆಯ ಕಾಲುವೆ ಹಾಗೂ ಉಪ ಕಾಲುವೆಗಳಲ್ಲಿ ಮಣ್ಣು ಬಿದ್ದು, ಜಾಲಿಕಂಠಿಗಳು ಬೆಳೆದು ನೀರು ಸಾಗಲು ಆಗುತ್ತಿಲ್ಲ,  ಸ್ವಚ್ಛತೆ ಮಾಡಬೇಕು, ರೈತರಿಗೆ ಸಂಭಂದಿಸಿದ ಕೃಷಿ, ಅರಣ್ಯ, ತೋಟಗಾರಿಕೆ, ಪಶು ಸಂಗೋಪನೆ  ಇಲಾಖೆಯಲ್ಲಿ ಖಾಲಿ ಆಗಿರುವ ಹುದ್ದೆಗಳನ್ನು ತುಂಬಬೇಕು, ಹೊಸದಾಗಿ ತಾಲೂಕುಗಳನ್ನು ಘೋಷಣೆ ಮಾಡಿ ಸುಮಾರು 6-7 ವರ್ಷಗಳೇ ಕಳೆದರೂ ಇನ್ನೂ ಯಾವುದೇ ಇಲಾಖೆಯ ಕಚೇರಿ  ಆಗಿಲಿ ಅಭಿವೃದ್ದಿಯಾಗಲಿ ಆಗಿಲ್ಲ, ಕೂಡಲೇ ಮಾಡಬೇಕು. ಈ ಮೇಲಿನ ಎಲ್ಲಾ ಬೇಡಿಕೆಗಳನ್ನು ಸರಕಾರ ನಡೆಯುತ್ತಿರುವ ಚಳಿಗಾಲದ ಅಧಿವೆಶನದಲ್ಲಿ ಬೇಷರತ್ತಾಗಿ ಮಾಡಬೆಕು ಎಂದು ಆಗ್ರಹಿಸಿದರು.

ಕೋಲಾರ ತಾಲೂಕಾ ಅಧ್ಯಕ್ಷರಾದ ಸೋಮು ಬಿರಾದಾರ ಮಾತನಾಡುತ್ತಾ ರೈತರ ತುಟಿಗೆ ಜೇನು ಸವರಿ, ತುತ್ತು ಅನ್ನಕ್ಕೆ ವಿಷ ಬೆರೆಸಿ ರೈತರ ಬಾಳಿಗೆ ಕೊಳ್ಳಿ ಇಟ್ಟು ದ್ರೋಹ ಬಗೆಯುತ್ತಿರುವ ಸರಕಾರ ರೈತರ ಮರಣ ಶಾಸನ ಬರೆಯಲು ಹೊರಟಿದೆ, 224 ಶಾಸಕರು ರೈತರ ಸಮಸ್ಯೆ ಬಗ್ಗೆ ತುಟ್ಟಿ ಬಿಚ್ಚುತ್ತಿಲ್ಲ, ಅಂತವರು ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದಿರುವುದಾದರು ಮರೆಯದೇ ರೈತರ ಧ್ವನಿಯಾಗಿ ಅಧಿವೇಶನದಲ್ಲಿ ಮಾತನಾಡಬೇಕು ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ರೈತರೆಲ್ಲರೂ ಒಗ್ಗಟ್ಟಾಗಿ ಗಟ್ಟಿ ನಿರ್ಣಯ ಮಾಡುತ್ತೇವೆ ಎಂದರು.

ಪತ್ರಿಕಾ ಘೋಷ್ಠಿಯಲ್ಲಿ ಜಿಲ್ಲಾ ಗೌರವಾಧ್ಯಕ್ಷರಾದ ಕಲ್ಲಪ್ಪ ಪಾರಶೆಟ್ಟಿ, ಜಿಲ್ಲಾ ಸಂಚಾಲಕರಾದ  ರಾಮನಗೌಡ ಪಾಟೀಲ, ಸಂಚಾಲಕರಾದ ಪ್ರತಾಪ ನಾಗರಗೋಜಿ, ಜಿಲ್ಲಾ ಸಂಚಾಲಕರಾದ ನಜೀರ ನಂದರಗಿ,  ತಿಕೋಟಾ ಸಂಚಾಲಕರು  ಶಾನುರ ನಂದರಗಿ,  ಅಭಿಷೇಕ ಹೂಗಾರ, ಶಶಿಕಾಂತ ಬಿರಾದಾರ, ಖಾದರಸಾಬ ವಾಲಿಕಾರ, ಗುರುಲಿಂಗ ಕಾಳಿ, ಇಲಾಯೀ ವಾಲಿಕಾರ, ಆಕಾಶ ಜಾನವರ, ರಾಮು ಗೌರಗುಂಡ, ರಾಜಕುಮಾರ ಹಿರೇಕುರಬರ, ಸುಧಾಕರ ನಲವಡೆ, ರಿಯಾಜ್ ವಾಲಿಕಾರ,  ಸೇರಿದಂತೆ ಅನೇಕರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ (ಹೈ-ಕ) 371ಜೆ ಕಲಂ ವ್ಯಾಪ್ತಿಗೆ ಸೇರಿಸಿ


 
ವಿಜಯಪುರ: ಶೈಕ್ಷಣಿಕ, ರಾಜಕೀಯ, ಆರ್ಥಿಕ, ಓದ್ಯೋಗಿಕವಾಗಿ ತೀರಾ ಹಿಂದುಳಿದ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ. ದೇವರ ಹಿಪ್ಪರಗಿ ತಾಳಿಕೋಟೆ ಸಿಂದಗಿ ಆಲಮೇಲ ಮುದ್ದೇಬಿಹಾಳ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳು ಅತಿ ಹಿಂದುಳಿದಿದ್ದು ಕೂಡಲೇ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ(371 ಜೆ) ವ್ಯಾಪ್ತಿಗೆ ಸೇರಿಸಿ ಅಭಿವೃದ್ಧಿಪಡಿಸಬೇಕೆಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷರಾದ ಶಂಕರಗೌಡ ಬಿರಾದಾರ ಸರ್ಕಾರವನ್ನು ಆಗ್ರಹಿಸಿದ್ದಾರೆ ಈ ಹಿಂದೆ ಕೂಡ ಹೈದರಾಬಾದ್ ಕರ್ನಾಟಕ 371ಜೆ ವ್ಯಾಪ್ತಿಗೆ ಸೇರ್ಪಡೆ ಮಾಡಬೇಕು ಎಂದು ಸಾಕಷ್ಟು ಹೋರಾಟವನ್ನು ಮಾಡಿದ್ದೆವು ಆದರೆ ಕೆಲವು ಪಟ್ಟಭದ್ರ ರಾಜಕೀಯ ವ್ಯಕ್ತಿಗಳಿಂದ ವಿಜಯಪುರ ಜಿಲ್ಲೆಗೆ ಅನ್ಯಾಯವಾಯಿತು, ಇದೀಗ ಕಾಲ ಮಿಂಚಿಲ್ಲ ಸತತ ಬರಗಾಲ, ಬೆಳೆ ಹಾನಿ ನಿರುದ್ಯೋಗ, ಸರ್ಕಾರದ ಯಾವುದೇ ರೀತಿಯ ಮೀಸಲಾತಿ ಇಲ್ಲದೆ ನಮ್ಮ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ ನಮ್ಮ ಜಿಲ್ಲೆಯ ರೈತರು ಸದಾ ಒಂದಲ್ಲ ಒಂದು ರೀತಿಯಲ್ಲಿ ಬರಗಾಲಕ್ಕೆ ತುತ್ತಾಗಿ ಈ ಭಾಗದ ಬಹುತೇಕ ರೈತರು ಕೃಷಿ ಕಾರ್ಮಿಕರು ಗೋವಾ ಮಹಾರಾಷ್ಟ್ರ ಸೇರಿದಂತೆ ಇತೆರೆ ರಾಜ್ಯಗಳಿಗೆ ದುಡಿಯಲು ಗುಳೇ ಹೋಗಿ ತಮ್ಮ ಬದುಕು ಕಟ್ಟಿಕೊಳ್ಳುತ್ತಿದ್ದಾರೆ ಅದರಲ್ಲೂ ವಿಶೇಷವಾಗಿ ಅಖಂಡ ಬಸವನಬಾಗೇವಾಡಿ ತಾಲೂಕಿಗೆ ಎಲ್ಲ ಸರ್ಕಾರಗಳು ಬಹಳಷ್ಟು ಮೋಸ ಮಾಡುತ್ತಾ ಬಂದಿವೆ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಅಣೆಕಟ್ಟೆ ಕಟ್ಟಲು ಈ ಭಾಗದ ರೈತರು ಬಹಳಷ್ಟು ಭೂಮಿಯನ್ನು ಕಳೆದುಕೊಂಡಿದ್ದಾರೆ ಆದರೆ ಇಲ್ಲಿವರೆಗೂ ಕೂಡ ರೈತರ ಹೊಲಗಳಿಗೆ ಪೂರ್ಣ ಪ್ರಮಾಣದ ನೀರಾವರಿ ಯೋಜನೆಗಳು ತಲುಪದೇ ಇರುವುದು ನಮ್ಮ ಭಾಗದ ಜನರ ದುರಾದೃಷ್ಟಕರ ವಿಶ್ವಗುರು ಬಸವಣ್ಣನವರು ಜನಿಸಿದ ಬಸವನ ಬಾಗೇವಾಡಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬಸವ ಜನ್ಮಸ್ಥಳ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಬೇಕೆಂದು ದಶಕಗಳಿಂದ ಹೋರಾಟ ನಡೆದರೂ ಕೂಡ ಯಾವುದೇ ಸರಕಾರ ಮುತುವರ್ಜಿ ವಹಿಸುತ್ತಿಲ್ಲ ಹೈದರಾಬಾದ್ ನಿಜಾಮನ ಆಳ್ವಿಕೆಯಿಂದ ಮುಕ್ತಿಗೊಂಡು ಮುಂಬೈ ಕರ್ನಾಟಕಕ್ಕೆ ಒಳಗೊಂಡು ವಿಜಯಪುರ ಜಿಲ್ಲೆ ಇಂದಿನವರೆಗೆ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದೆ ಜಿಲ್ಲೆಯ ಗಡಿ ಭಾಗದಲ್ಲಿರುವ ಅನೇಕ ತಾಲೂಕುಗಳು ಕೂಡಾ ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿವೆ ಇಂಡಿ ಪಟ್ಟಣಕ್ಕೆ ಹೋಗುವ ಒಂದು ರಸ್ತೆ ಕೂಡ ಗುಣಮಟ್ಟದ ಇಲ್ಲದೆ ಇರುವುದು ಇದಕ್ಕೆ ಸಾಕ್ಷಿ ಆಗಿದೆ ನಮ್ಮ ಜಿಲ್ಲೆಯಲ್ಲಿ ರೈಲ್ವೆ ಯೋಜನೆಗಳಿಂದ ಕೂಡ ನಾವು ಬಹಳಷ್ಟು ಹಿಂದುಳಿದಿದ್ದೇವೆ ನಮ್ಮ ಜಿಲ್ಲೆ ಈಗಾಗಲೇ ತಾಂತ್ರಿಕವಾಗಿ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿದೆ ಉದಾಹರಣೆಗೆ ನಮ್ಮ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಹಾಗೂ ಉಚ್ಚ ನ್ಯಾಯಾಲಯ ಕಲ್ಬುರ್ಗಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತೇವೆ ಕೂಡಲೇ ನಮ್ಮ ಜಿಲ್ಲೆಯ, ಸಚಿವರು, ಎಲ್ಲ ಶಾಸಕರು ಸಂಸದರು ಸೇರಿ ವಿಜಯಪುರ ಜಿಲ್ಲೆಯನ್ನು ಹೈದರಾಬಾದ್ ಕರ್ನಾಟಕ(371ಜೆ)ವ್ಯಾಪ್ತಿಗೆ ಸೇರ್ಪಡೆ ಮಾಡಿ ಇಲ್ಲವೇ ವಿಜಯಪುರ ಜಿಲ್ಲೆಗೆ ಶೈಕ್ಷಣಿಕ ಔದ್ಯೋಗಿಕ ಸಾಮಾಜಿಕ ರಾಜಕೀಯ ವಿಶೇಷ ಮೀಸಲಾತಿಯನ್ನು ಕಲ್ಪಿಸಲು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ನಮ್ಮ ಜಿಲ್ಲೆಯ ಶಾಸಕರು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

ಕಾರ್ಮಿಕರ ದಾರುಣ ಸಾವಿಗೆ ಕಾರಣರಾದ ಮಾಲೀಕರ ಮೇಲೆ ಹಾಗೂ ಕಾರ್ಮಿಕ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪಾಟೀಲ ಆಗ್ರಹ

ವಿಜಯಪುರ: ಜಿಲ್ಲೆಯಲ್ಲಿ ಅಕ್ರಮವಾಗಿ ಹೊರ ರಾಜ್ಯದ ಕಾರ್ಮಿಕರನ್ನು ಕರೆದುಕೊಂಡು ಬಂದು ಕಾರ್ಮಿಕರ ಮೂಲಭೂತ ಸೌಲಭ್ಯ ಒದಗಿಸದೆ ಕಾನೂನು ಬಾಹೀರವಾಗಿ ಅವರಿಗೆ ಕಡಿಮೆ ದುಡ್ಡು ನೀಡಿ ದುಡಿಸಿಕೊಳ್ಳುತ್ತಿರುವುದು ಮಾಲಿಕರ ಮೇಲೆ ಹಾಗೂ ಕಾರ್ಮಿಕ ಅಧಿಕಾರಿಗಳ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಮುಖಂಡ ಪ್ರಭುಗೌಡ ಪಾಟೀಲ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಟ್ಟಡ ಕಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಸಂಘಟಿತ ವಲಯದಲ್ಲಿ ಹೊರ ರಾಜ್ಯದವರು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದಾರೆ. ಅಂತವರ ಜಾಡನ್ನು ಸರ್ಕಾರ ಗುರುತಿಸಬೇಕಾಗಿದೆ. ಹೊರ ರಾಜ್ಯದ ಕಾರ್ಮಿಕರ ನುಸುಳುವಿಕೆಯನ್ನು ತಡೆಗಟ್ಟುವಲ್ಲಿ ಕಾರ್ಮಿಕ ಇಲಾಖೆಯು ಸಂಪೂರ್ಣ ವಿಫಲವಾಗಿದೆ. ಇಂತಹ ವಿಷಯಗಳನ್ನು ಅಧಿಕಾರಿಗಳ ಗಮನಕ್ಕೆ ಸಾಕಷ್ಟು ಬಾರಿ ತಂದರು ಮೌನವಹಿಸಿದ್ದಾರೆ. ಅವರು ಮೌನ ವಹಿಸಿದ್ದರ ಫಲವಾಗಿ ಇಂದು ಇಂತಹ ದುಷ್ಕತ್ಯಗಳು ನಡೆದಿದೆ.

ಈಗಾಗಲೇ ಹೊರ ರಾಜ್ಯದ ಕಾರ್ಮಿಕರನ್ನು ಮೆಕ್ಕೆಜೋಳ ಸಂಗ್ರಹಿಸಿಟ್ಟದ್ದ ಕಭ್ಭಿಣದ ಮೇಲ್ಪಟ್ಟ ಕುಸಿದು ಬಿದ್ದು ಕಲೆದ ರಾತ್ರಿಯಿಂದ ಜೀವನ್ಮರಣದಲ್ಲಿ ನರಳುತ್ತಿದ್ದ ಬಿಹಾರದ 8 ಕಾರ್ಮಿಕರ ಪೈಕಿ 7 ಜನ ಕಾರ್ಮಿಕರು ದಾರುಣ ಸಾವಿಗೀಡಾದ ಹೃದಯವಿದ್ರಾವಕ ಘಟನೆ ನಗರದ ಹೊರ ಭಾಗದಲ್ಲಿ ಕೈಗಾರಿಕಾ ಪ್ರದೇಶದ ರಾಜಗುರು ಫುಡ್ಸ್ ನ ಬೃಹತ್ ಗೋದಾಮಿನಲ್ಲಿ ನಡೆದಿದೆ. ಅದರಂತೆ ಇನ್ನು ಅನೇಕ ಘಟನೆಗಳು ಕೈಗಾರಿಕೆಗಳಲ್ಲಿ ಘಟನೆಗಳು ಸಂಭವಿಸಿರಬಹುದು ಅವುಗಳ ಬೆಳಕಿಗೆ ಬರದಂತೆ ಮಾಲಿಕರು ಮುಚ್ಚಿಹಾಕಿದ್ದಾರೆ ಎಂದು ಆರೋಪಿಸಿದರು. ಕೂಡಲೇ ಇಂತಹ ಘಟನೆಗಳ ಮರುಕಳಿಸಬಾರದಂತಾಗಬಾರದೆಂದರೆ ಕಾರ್ಮಿಕರ ಸುರಕ್ಷತಾ ಕ್ರಮದ ಜಾಗೃತಿ, ಕಾರ್ಮಿಕರ ಹಕ್ಕುಗಳ, ಕರ್ತವ್ಯ, ಸೌಲಭ್ಯಗಳ ಮಾಹಿತಿಯನ್ನು ಸರಿಯಾಗಿ ಒದಗಿಸಬೇಕು. ಪ್ರತಿ ತಿಂಗಳಿಗೊಮ್ಮೆ ಕಾರ್ಮಿಕ ಕುಂದು ಕೊರತೆ ಸಭೆ ನಡೆಸಬೇಕು. ಅದರಂತೆ ಕಾರ್ಮಿಕ ಅಧಿಕಾರಿಗಳ ಮೇಲೆ ಹಾಗೂ ಮಾಲಿಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಶಿಕ್ಷೆ ನೀಡಬೇಕು. ಕಾರ್ಮಿಕರ ಕುಟುಂಬಕ್ಕೆ ಹೆಚ್ಚು ಪರಿಹಾರ ಧನ ನೀಡಬೇಕೆಂದು ಪಾಟೀಲ ಆಗ್ರಹಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು.

Monday, December 4, 2023

ಅಮೋಘ ಲೋಗಾಂವಿ ವಿಜಯಪುರ ನಗರ ಅಧ್ಯಕ್ಷರಾಗಿ ಆಯ್ಕೆ

 


ಈ ದಿವಸ ವಾರ್ತೆ

ವಿಜಯಪುರ : ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ‌ ವಿಜಯಪುರ ನಗರಾಧ್ಯಕ್ಷರನ್ನಾಗಿ ಯುವ ಮುಖಂಡ ಅಮೋಘ ಲೋಗಾಂವಿ ಅವರನ್ನ ನೇಮಕ‌ ಮಾಡಲಾಗಿದೆ‌.

ಸಮಾಜದಲ್ಲಿ ಶೋಷಿತ ,ನೊಂದ ಹಾಗೂ ಧ್ವನಿ‌ಇಲ್ಲದವರ ಪರವಾಗಿ ಅಮೋಘ ಅವರು ಸಾಕಷ್ಟು ಹೋರಾಟ ಹಾಗೂ ಸೇವೆ ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಪರಿಗಣಿಸಿ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ರಾದ ಅಮಿತ್ ಎ.ಕೆ. ಹಾಗೂ ಪ್ರಧಾನ‌ ಕಾರ್ಯದರ್ಶಿ ಗಳಾದ ಶಂಕರ್ ಬಿ.ಜೆ. ಅವರು ವಿಜಯಪುರ ನಗರ ಘಟಕದ ಹಿತರಕ್ಷಣಾ ಸಮಿತಿಯ‌ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸಮಾಜದ ಹಿತದೃಷ್ಟಿಯಿಂದ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯ ಪ್ರಗತಿಗಾಗಿ ಮತ್ತು ಸಮಾಜದ ಜಾಗೃತಿಗಾಗಿ ಅಮೋಘ ಅವರು ತೋರಿಸುವ ಕಾಳಜಿ‌ಯಿಂದ ಅವರನ್ನ‌ ನೇಮಕ‌ ಮಾಡಲಾಗಿದ್ದು ಮುಂಬರುವ ದಿನಗಳಲ್ಲಿ ಸಮಾಜವನ್ನು‌ ಇನ್ನಷ್ಟು ಒಗ್ಗೂಡಿಸಲು‌ ಹಾಗೂ ನ್ಯಾಯ ಕೊಡಿಸಲು‌ ಪ್ರಾಮಾಣಿಕ ಪ್ರಯತ್ನ ಮಾಡಬೇಕು  ಸಮಿತಿ‌ಯ ಪದಾಧಿಕಾರಿಗಳು ಆಶಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಅವಘಡದಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು : ಸಚಿವ ಪಾಟೀಲ

ಈ ದಿವಸ ವಾರ್ತೆ

ವಿಜಯಪುರ; ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಇಂಡಸ್ಟ್ರೀಸ್ ನ ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿದ್ದ ಸಚಿವರು ಸೋಮವಾರ ಸಂಜೆ ನಡೆದ ಈ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ತಡರಾತ್ರಿ ವಿಜಯಪುರ ನಗರಕ್ಕೆ ದೌಡಾಯಿಸಿದರು.  ಅಲ್ಲದೇ, ಘಟನಾ ಸ್ಥಳಕ್ಕೆ ತೆರಳಿ ಮಧ್ಯರಾತ್ರಿ ಬಹಳ ಹೊತ್ತಿನವರೆಗೂ ರಕ್ಷಣಾ ಕಾರ್ಯಾಚರಣೆ ಪರಿಶೀಲನೆ ನಡೆಸಿದರು.  ಘಟನೆಯ ಕುರಿತು ಜಿಲ್ಲಾಧಿಕಾರಿ ಟಿ. ಭೂಬಾಲನ್, ಎಸ್ಪಿ ಋಷಿಕೇಶ ಸೋನಾವಣೆ, ಜಿ. ಪಂ. ಸಿಇಓ ರಾಹುಲ ಶಿಂಧೆ ಅವರಿಂದ ಘಟನೆ ಮತ್ತು ನಂತರ ಕೈಗೊಳ್ಳಲಾದ ರಕ್ಷಣಾ ಕಾರ್ಯಾಚರಣೆಯ ಕುರಿತು ಸಂಪೂರ್ಣ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಸೇರಿದ್ದ ಉಳಿದ ಕಾರ್ಮಿಕರೊಂದಿಗೆ ಮಾತನಾಡಿದ ಸಚಿವರು, ಈ ಅವಘಡದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುವುದು.  ಮೆಕ್ಕೆಜೋಳದ ರಾಶಿಯಡಿ ಸಿಲುಕಿರುವ ಎಲ್ಲ ಕಾರ್ಮಿಕರ ಶವಗಳನ್ನು ಹೊರತೆಗೆದು ಶವ ಪರೀಕ್ಷೆಯ ಬಳಿಕ ಅವರ ಮೂಲ ರಾಜ್ಯವಾದ ಬಿಹಾರಕ್ಕೆ ಗೌರವಪೂರಕವಾಗಿ ಕಳುಹಿಸಿ ಕೊಡಲಾಗುವುದು.  ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಾಂತ್ವನ ಹೇಳಿದರು.  ಅಲ್ಲದೇ, ಅವರಿಗೆ ನೈತಿಕವಾಗಿ ಧೈರ್ಯ ತುಂಬಿದರು.  

ಈ ದುರ್ಘಟನೆಯಲ್ಲಿ ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಲಾಗುವುದು.  ಇದರ ಜೊತೆಗೆ ರಾಜಗುರು ಇಂಡಸ್ಟ್ರಿಸ್  ಮಾಲಿಕರಿಂದಲೂ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.  ಜಿಲ್ಲಾ ಉಸ್ತುವಾರಿ ಸಚಿವನಾಗಿ ಸರಕಾರದಿಂದ ಎಲ್ಲ ರೀತಿಯ ನೆರವು ಒದಗಿಸುವುದಾಗಿ ಕಾರ್ಮಿಕರಿಗೆ ಭರವಸೆ ನೀಡಿದರು.

ಇದಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಘಟನೆ ಮನಸಿಗೆ ನೋವುಂಟು ಮಾಡಿದೆ.  ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ, ಬೆಳಗಾವಿ ಅಧಿವೇಶನದಿಂದ ಇಲ್ಲಿಗೆ ನೇರವಾಗಿ ಬಂದಿದ್ದೇನೆ.  ಘಟನೆ ನಡೆದ ತಕ್ಷಣದಿಂದ ಡಿಸಿ, ಎಸ್ಪಿ ಜೊತೆ ಸತತ ಸಂಪರ್ಕದಲ್ಲಿದ್ದು, ರಕ್ಷಣಾ ಕಾರ್ಯಾಚರಣೆಯ ಕುರಿತು ಸತತವಾಗಿ ಮಾಹಿತಿ ಪಡೆದಿದ್ದೇನೆ.  ಈಗ ಮೆಕ್ಕೆಜೋಳದ ರಾಶಿಯಡಿ ಸಿಲುಕಿರುವ ಕಾರ್ಮಿಕರನ್ನು ಹೊರ ತೆಗೆಯಲು ಮೊದಲ ಆದ್ಯತೆ ನೀಡಲಾಗುತ್ತಿದೆ.  ಈ ಘಟನೆಯಲ್ಲಿ ಸಾವಿಗೀಡಾದವರ ಮೃತದೇಹಗಳನ್ನು ಹೊರತೆಗೆದು ಶವಪರೀಕ್ಷೆಯ ಬಳಿಕ ಅವರ ಊರುಗಳಿಗೆ ಕಳುಹಿಸಲಾಗುವುದು.  ಬಿಹಾರದ ಆಯಾ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಆಯಾ ಕಾರ್ಮಿಕರ ಊರುಗಳಿಗೆ ಪಾರ್ಥಿವ ಶರೀರ ಕಳುಹಿಸಲು ಸಕಲ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.  

ಈ ಘಟನೆಗೆ ನಿಖರ ಕಾರಣ ಏನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.  ಈ ಕುರಿತು ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.  ಈ ಘಟನೆಯಲ್ಲಿ ಯಾರದೇ ತಪ್ಪಿದ್ದರೂ ಆ ಕುರಿತೂ ವಿಚಾರಣೆ ನಡೆಸಲಾಗುವುದು.  ಒಟ್ಟಾರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.  ಅಲ್ಲದೇ, ಸಾವಿಗೀಡಾದ ಕಾರ್ಮಿಕರ ಕುಟುಂಬಗಳಿಗೆ ಮಾನವೀಯತೆ ದೃಷ್ಠಿಯಿಂದ ರಾಜ್ಯ ಸರಕಾರದಿಂದ ಪರಿಹಾರ ನೀಡಲು ಸಿಎಂ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.  ಅಷ್ಟೇ ಅಲ್ಲ, ರಾಜಗುರು ಇಂಡಸ್ಟ್ರಿಸ್ ಮಾಲಿಕರಿಂದಲೂ ಪರಿಹಾರ ನೀಡುವಂತೆ ಸೂಚಿಸಲಾಗುವುದು.  ಗಾಯಾಳುಗಳಿಗೂ ಪರಿಹಾರ ನೀಡಲಾಗುವುದು ಎಂದು ಎಂ. ಬಿ. ಪಾಟೀಲ ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಡಿವೈಎಸ್ಪಿ ಬಸವರಾಜ ಯಲಿಗಾರ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಮುಂಬರುವ ಲೋಕಸಭೆ ಚುನಾವಣೆಯ ಬಿಜೆಪಿ ಗೆಲುವಿನ ಮುನ್ನುಡಿ : ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ

ವಿಜಯಪುರ:

 ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಮುಂಬರುವ ಲೋಕಸಭೆ ಚುನಾವಣೆಯ ಬಿಜೆಪಿ ಗೆಲುವಿನ ಮುನ್ನುಡಿಯಾಗಿದ್ದು, ಈ ಗೆಲುವಿನ ನಗೆ ಇದೇ ರೀತಿ ಮುನ್ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷಗಳು ಎಷ್ಟೇ ಬಿಜೆಪಿ ಬಗ್ಗೆ ವಿರೋಧ ನಿಲುವು ಬಿತ್ತಲು ಪ್ರಯತ್ನಿಸಿದರೂ ಸಹ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿ ಮತ್ತೊಮ್ಮೆ ಮೋದಿ ಎನ್ನುವ ಸಂದೇಶವನ್ನು ಈ ಚುನಾವಣೆ‌ ಮೂಲಕ ಇಂದೇ ರವಾನಿಸಿದ್ದಾರೆ. ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಘಢ  ಹೀಗೆ ಮೂರು ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಪ್ರಧಾನಮಂತ್ರಿ ‌ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಶುದ್ದ ಆಡಳಿತ,‌ ಬಿಜೆಪಿ ಜನಪರ ಚಿಂತನೆ,ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಇದು ಖಂಡಿತವಾಗಿಯೂ ಲೋಕಸಭಾ ಚುನಾವಣೆ ದಿಕ್ಸೂಚಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅರಳುವುದು ಖಚಿತವಾಗಿದೆ, ಈ ಗೆಲುವು ಸಮಸ್ತ ಕಾರ್ಯಕರ್ತರ ಗೆಲುವಾಗಿದೆ ಎಂದು ಅವರು ಹೇಳಿದ್ದಾರೆ.
ಕಿಸಾನ್ ಸಮ್ಮಾನ್, ಉಜ್ವಲ ಯೋಜನೆ, ಜನಧನ್ ಹೀಗೆ ಜನರನ್ನು ನೇರವಾಗಿ ತಲುಪುವ ಅನೇಕ ಯೋಜನೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿದೆ, ಹೀಗಾಗಿ ಅಭಿವೃದ್ಧಿಗೆ ಜನತೆ ಬಿಜೆಪಿಗೆ‌ ಬೆಂಬಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

Saturday, December 2, 2023

ವಿ ಪಿ ಸಿಂಗ್ ಪ್ರಶಸ್ತಿ: ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿಗೆ ಪ್ರಧಾನ

ಬೆಂಗಳೂರು:  ಶುಕ್ರವಾರ ಸಂಜೆ ಬೆಂಗಳೂರಿನ ಕ್ವೀನ್ಸ್‌ ರಸ್ತೆಯ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್‌ ಪ್ರಕಾಶನ ಸಹಯೋಗದಲ್ಲಿ ‘ಮಂಡಲ್‌ ವರದಿ ಆಗಿದ್ದೇನು?’ ವಿಷಯ ಕುರಿತು ವಿಚಾರ ಸಂಕಿರಣ ಅಂಗವಾಗಿ ಕರ್ನಾಟಕ ರಾಜ್ಯ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಗೌರವಾಧ್ಯಕ್ಷರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ 

ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಅವರಿಗೆ ವಿ ಪಿ ಸಿಂಗ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಎಚ್‌.ಎಂ.ರೇವಣ್ಣ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌, ಮಾಜಿ ಸಚಿವ ಎಚ್‌.ಆಂಜನೇಯ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಆದಿಜಾಂಬವ ಬೃಹನ್ಮಠದ ಷಡಕ್ಷರ ಮುನಿ ದೇಶೀಕೇಂದ್ರ ಸ್ವಾಮೀಜಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ, ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ಡಾ. ಮನೋಹರ್ ಯಾದವ್, ಪ್ರಜಾಪ್ರಗತಿ ಕನ್ನಡ ಪತ್ರಿಕೆ ಸಂಪಾದಕ ಎಸ್ ನಾಗಣ್ಣ, ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ,

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಕೆ.ಆರ್‌.ನೀಲಕಂಠ ಮತ್ತಿತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು

ಹೆಣ್ಣು ಭ್ರೂಣ ಹತ್ಯೆ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಒತ್ತಾಯ

ವಿಜಯಪುರ: ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಹೆಣ್ಣುಭ್ರೂಣ ಹತ್ಯೆಯನ್ನು ತಡೆದು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಗರದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಮೈಸೂರಿ, ಮಂಡ್ಯ ಜಿಲ್ಲೆಯಗಳಲ್ಲಿ ಹೆಣ್ಣು ಭ್ರೂಣಲಿಂಗ ಪತ್ತೆ- ಹತ್ಯೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಪೆÇಲೀಸ್‍ರ ಕಾರ್ಯ ಪ್ರಶಂಸನಿಯ. ಆದರೆ ಕೇವಲ ಈ ಜಾಲ ದಕ್ಷಿಣ ಕರ್ನಾಟಕವಲ್ಲದೇ ಉತ್ತರ ಕರ್ನಾಟಕದಲ್ಲಿಯೂ ಸಕ್ರಿಯವಾಗಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಅದರಲ್ಲೂ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿರುವ ರಾಜಕಾರಣಿಗಳು ಉದ್ಯಮಿಗಳು ಸರ್ಕಾರಿ ಅಧಿಕಾರಿಗಳ ಸಂಬಂಧಿಕರ ಆಸ್ಪತ್ರೆಗಳಲ್ಲಿ ಈ ರೀತಿಯ ಪ್ರಕರಣಗಳು ಯಥೇಚ್ಛವಾಗಿ ನಡೆಯುತ್ತಿದೆ ಇದನ್ನು ತಡೆಯುವಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಜಿಲ್ಲಾ ಆರೋಗ್ಯ ಅಧಿಕಾರಿಗಳ ನಿರ್ಲಕ್ಷದಿಂದ ಇಂತಹ ಪಾಪ ಕೃತ್ಯಗಳು ಬೆಳಕಿಗೆ ಬಂದಿಲ್ಲ. ಸರ್ಕಾರ ಈ ಕೂಡಲೇ ಒಂದು ತನಿಖಾ ತಂಡ ರಚಿಸಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಜಿಲ್ಲೆಯಲ್ಲಿ ನಡೆದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಮೈಸೂರು- ಮಂಡ್ಯ ಜಿಲ್ಲೆಯಲ್ಲಿ ಬಂಧನಕ್ಕೆ ಒಳಗಾದ ಈ ಜಾಲದ ಆರೋಪಿಗಳು ಹೇಳುವಂತೆ ಪ್ರತಿ ತಿಂಗಳು 22 ರಿಂದ 25 ಗರ್ಭಪಾತಗಳನ್ನು ಮಾಡಿಸಿದ್ದು, ಕಳೆದ ಎರಡು ವರ್ಷಗಳಲ್ಲಿ ಸುಮಾರು 900 ಭ್ರೂಣ ಹತ್ಯೆಯನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಇದೊಂದು ದೊಡ್ಡ ಅಪರಾಧ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸುವುದು ಸರ್ಕಾರದ ಕರ್ತವ್ಯ ವ್ಯವಸ್ಥಿತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ರಾಕೇಶ ಇಂಗಳಗಿ, ಹಮೀದ್ ಇನಾಮ್ದಾರ್, ಮಾಳಪ್ಪ ಮಯೂರ, ಶ್ರೀಶೈಲ ಮಠ, ಮೈಬೂಬ ತಾಂಬೋಳಿ, ರಾಘವೇಂದ್ರ ಚಲವಾದಿ, ಸುರೇಂದ್ರ ಕುನಸಲೆ, ಕಾಂತು ಕಗ್ಗೋಡ, ಪ್ರಕಾಶ ದಂಡಿನ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಪಡಿಸಲಾಗುವುದು