Saturday, August 26, 2023

ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ




 ದಿವಸ ವಾರ್ತೆ

ಬೆಂಗಳೂರು ಆ 26: ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಇದು ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ   ನಡೆದ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ, 2023ರ ಸಭೆಯಲ್ಲಿ ಮಾತನಾಡಿದರು. 

ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಬಾರದು. ಸರ್ಕಾರದ ಕೇಸುಗಳು ಎಂದರೆ ಜನರ ಕೇಸುಗಳು. ಜನರಿಗೆ ನ್ಯಾಯ ಸಿಗುವ ಪ್ರಮಾಣ ಇನ್ನೂ ಹೆಚ್ಚಾಗಬೇಕು. ಬಡವರಿಗೆ ಮೇಲಿನ ನ್ಯಾಯಾಲಯಗಳಿಗೆ ಹೋಗುವ ಶಕ್ತಿ ಇರುವುದಿಲ್ಲ. ಬಡವರಿಗೆ ನ್ಯಾಯ ಸಿಗದಿದ್ದರೆ ಸರಕಾರಿ ವಕೀಲರನ್ನು ನೇಮಿಸಿಕೊಂಡಿದ್ದು ಸಾರ್ಥಕ ಆಗುವುದಿಲ್ಲ ಎಂದರು. 

ಪ್ಲೀಡಿಂಗ್ಸ್ ಸರಿಯಾಗಿ, ಪರಿಣಾಮಕಾರಿಯಾಗಿ ಬರೆಯುವುದು ಬಹಳ ಮುಖ್ಯ. ಈ ಹಂತದಲ್ಲೇ ಅಸಡ್ಡೆ, ಉಡಾಫೆತನ ಪ್ರದರ್ಶಿಸಿದರೆ ನ್ಯಾಯ ಪ್ರಕ್ರಿಯೆಯ ಮುಂದಿನ ಎಲ್ಲಾ ಹಂತಗಳಲ್ಲಿ ವೈಫಲ್ಯ ಆಗುತ್ತದೆ. ಆದ್ದರಿಂದ ಬಹಳ ಜವಾಬ್ದಾರಿಯುತವಾಗಿ ಸರ್ಕಾರಿ ವಕೀಲರು ವರ್ತಿಸಬೇಕು ಎಂದು ಸೂಚಿಸಿದರು. 

ಸರ್ಕಾರಿ ವಕೀಲರು ಮತ್ತು ಅಧಿಕಾರಿಗಳ ವೈಫಲ್ಯಕ್ಕೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ವ್ಯಾಜ್ಯ ಸಣ್ಣದಿರಲಿ, ದೊಡ್ಡದಿರಲಿ ಅದನ್ನು ಗಂಭೀರವಾಗಿ ಪರಿಗಣಿಸಿ ಹೋಂ ವರ್ಕ್ ಮಾಡಿ. ನಮಗೆ ಹಣ ಕೊಡುವುದು ಜನರು. ಜನರ ಹಣದಲ್ಲಿ ನಮಗೆ ಸವಲತ್ತುಗಳು ಸಿಗುತ್ತಿವೆ. ಈ ಬಗ್ಗೆ ನಮಗೆ ಪ್ರಜ್ಞೆ ಮತ್ತು ಕರ್ತವ್ಯ ಪ್ರಜ್ಞೆ ಹಾಗೂ ಧನ್ಯತೆ ಇರಬೇಕು ಎಂದರು. 

ಕೆಲವು ನ್ಯಾಯಾಧೀಶರು ಮುಖ ನೋಡಿ ಮಣೆ ಹಾಕುತ್ತಾರೆ ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿದೆ. ಇದನ್ನು ಎಲ್ಲರೂ ಒಟ್ಟಾಗಿ ಅಳಿಸಬೇಕು. ಪ್ರಕರಣಗಳಲ್ಲಿ ಅನಗತ್ಯವಾಗಿ ದಿನಾಂಕ ಪಡೆಯಬಾರದು. ಕೇಸು ನಡೆಸಬೇಕು. ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡುವುದನ್ನು ಪರಿಣಾಮಕಾರಿಯಾಗಿ ವಿರೋಧಿಸಬೇಕು. ಅಲ್ಲೇ ನಿಮ್ಮಗಳ ಅರ್ಹತೆ ಗೊತ್ತಾಗುತ್ತದೆ ಎಂದು ಸೂಚ್ಯವಾಗಿ ಮುಖ್ಯಮಂತ್ರಿಗಳು ತಿಳಿ ಹೇಳಿದರು. 

ನ್ಯಾಯಾಂಗ ನಿಂಧನೆ ಆಗದಂತೆ ವೃತ್ತಿಪರತೆ ಪ್ರದರ್ಶಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಸರ್ಕಾರವೇ ನಿಮ್ಮ ಕಕ್ಷಿದಾರ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು.  ಕರ್ತವ್ಯ ಪ್ರಜ್ಞೆ ಮೆರೆಯಬೇಕು. ಸರ್ಕಾರ ಮತ್ತು ಜನರ ಹಿತ ಕಾಪಾಡುವ ಮತ್ತು ಸರ್ಕಾರದ ಆಸ್ತಿ ಉಳಿಸುವ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿದರು. 

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸಭೆಯಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರದ ಒಗ್ಗಟ್ಟಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿಸ್ತಿನ ಸೇನಾಪತಿ ಡಾ.ನಾ.ಸು.ಹಡೀ೯ಕರ್

 ಈ‌‌ ದಿವಸ ವಾರ್ತೆ

ವಿಜಯಪುರ - ಭಾರತದ ಇತಿಹಾಸ ಪುಟಗಳಲ್ಲಿ  ಸ್ವಾತಂತ್ರ್ಯದ ಕ್ರಾಂತಿ ಕಹಳೆ ಊದಿದ  ಭಾರತ ಸೇವಾದಳ ಸಂಸ್ಥಾಪಕರಾದ ಡಾ|| ನಾರಾಯಣ ಸುಬ್ಬರಾವ್ ಹಡಿ೯ಕರ್ ಅವರು  ಮೇ 7, 1889 ರಂದು ಆಗಿನ ಧಾರವಾಡ ಜಿಲ್ಲೆ (ಈಗಿನ ಹಾವೇರಿ ಜಿಲ್ಲೆ) ಹಾನಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ಜನಿಸಿದರು. ಶಿಸ್ತು,ಸಂಯಮ,ಸಂಘಟನೆ ಹಾಗೂ ಸಂಸ್ಕೃತಿಗಳ ವಿಚಾರಶೀಲರಾಗಿದ್ದ ಡಾ|| ಹಡಿ೯ಕರ್ ಅವರು ರಾಷ್ಟ್ರದ ಒಗ್ಗಟ್ಟಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ಧರು.ಅವರ ಆದಶ೯ ಜೀವನವು ನಮ್ಮ ನಾಡಿಗೆ ಅದರಲ್ಲೂ ಇಂದಿನ ಯುವಜನಾಂಗಕ್ಕೆ ದಾರಿ ದೀಪವಾಗಿದೆ ಎಂದು ಭಾರತ ಸೇವಾದಳದ ಜಿಲ್ಲಾ ಅಧ್ಯಕ್ಷ ಎಸ್ ಪಿ ಬಿರಾದಾರ (ಕಡ್ಲೇವಾಡ) ಹೇಳಿದರು.              ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ ಹಾಗೂ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ ನಂ - ೨೪ ಇವರುಗಳ ಸಹಯೋಗದಲ್ಲಿ ಆಯೋಜಿಸಲಾದ ಭಾರತ ಸೇವಾದಳ ಸಂಸ್ಥಾಪಕ ಪದ್ಮಭೂಷಣ ಡಾ|| ನಾ,ಸು, ಹಡೀ೯ಕರ ಅವರ ೪೮ ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ನಾ,ಸು, ಹಡೀ೯ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.                     ನಾ,ಸು, ಹಡೀ೯ಕರ ಅವರು ವೃತ್ತಿಯಲ್ಲಿ ವೈದ್ಯರಾಗಿರುವ ಕಾರಣ ತಮ್ಮ ಕೊನೆಯ ದಿನಗಳನ್ನು ಬೆಳಗಾವಿ ಜಿಲ್ಲೆಯ ಘಟಪ್ರಭಾದ ಆರೋಗ್ಯ ಧಾಮದಲ್ಲಿ ಬಡ ರೋಗಿಗಳ ಸೇವೆ ಮಾಡುತ್ತಾ 1975 ಅಗಸ್ಟ್ 26 ರಂದು ಕೊನೆಯುಸಿರೆಳೆದರು. ಅವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯೋಣ ಎಂದರು.         

                                 

 ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಪ್ರಾಸ್ತಾವಿಕವಾಗಿ ಮಾತನಾಡಿ ನಾ,ಸು ಹಡೀ೯ಕರ ಅವರ ಸಂಘಟನಾ ಚಾತುರ್ಯ ಮತ್ತು ಅವರ ತತ್ವ ಸಿದ್ಧಾಂತಗಳನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು. ಇದೇ ಸಂದರ್ಭದಲ್ಲಿ ಸೇವಾದಳದ ಜಿಲ್ಲಾ ಕಾಯ೯ದಶಿ೯ ಎಸ್ ಜಿ ಕೋರಿ, ಜಿಲ್ಲಾ ಕೋಶಾಧ್ಯಕ್ಷ ಡಿ ಬಿ ಹಿರೇಕುರುಬರ, ತಾಲೂಕು ಉಪಾಧ್ಯಕ್ಷ ರಾಜು ಹಿಪ್ಪರಗಿ, ಕೋಶಾಧ್ಯಕ್ಷ ಬಸವರಾಜ ಜೋರಾಪೂರ, ಸದಸ್ಯರಾದ ಡಾ, ಹೆಚ್ ಎಮ್ ಮುಜಾವರ, ತಾಲೂಕು ಕಾರ್ಯದರ್ಶಿ ಎಸ್ ಎಸ್ ಬ್ಯಾಕೋಡ, ಸಂಪನ್ಮೂಲ ಶಿಕ್ಷಕ ಸೋಮಶೇಖರ್ ರಾಠೋಡ ಶಾಲಾ ಮುಖ್ಯ ಗುರುಗಳಾದ ವಿ ಎಸ್ ಹಾಲವರ ಹಾಗೂ ಸೇವಾದಳ ಮಕ್ಕಳು ಉಪಸ್ಥಿತರಿದ್ದರು.

ದಲ್ಲಾಳಿಗಳಿಂದ ನಷ್ಟ ಅನುಭವಿಸುತ್ತಿರುವ ದ್ರಾಕ್ಷಿ ಬೆಳೆಗಾರರು ಒಣ ದ್ರಾಕ್ಷಿಗೆ ಬೆಂಬಲ ಬೆಲೆ ಘೋಷಣೆಗೆ ಒತ್ತಾಯ

 ಈ ದಿವಸ ವಾರ್ತೆ

ವಿಜಯಪುರ: ಇಡೀ ದೇಶದಲ್ಲಿ ದ್ರಾಕ್ಷಿ ಬೆಳೆಗೆ ಮಹಾರಾಷ್ಟç ರಾಜ್ಯ ಪ್ರಥಮ ಸ್ಥಾನ ಬಿಟ್ಟರೆ ಎರಡನೆಯದ್ದು ಕರ್ನಾಟಕ ರಾಜ್ಯ. ಅದರಲ್ಲಿ ವಿಶೇಷವಾಗಿ ವಿಜಯಪುರ ಜಿಲ್ಲೆಯಲ್ಲಿ ಶೇ.70 ರಷ್ಟು ದ್ರಾಕ್ಷಿ ಬೆಳೆದ ರೈತರಿದ್ದಾರೆ ಮತ್ತು ರುಚಿಕಟ್ಟಾದ ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಅಂಶ ಉಳ್ಳ ದ್ರಾಕ್ಷಿ ವಿಜಯಪುರ ಜಿಲ್ಲೆಯದ್ದಾಗಿದೆ. ಆದರೆ ಒಣ ದ್ರಾಕ್ಷಿಗೆ ಬೆಂಬಲ ಬೆಲೆ ಇಲ್ಲ. ಒಂದು ಕೆ.ಜಿ. ಒಣದ್ರಾಕ್ಷಿಗೆ ಈ ಸದ್ಯದ ಮಾರುಕಟ್ಟೆ ಬೆಲೆ ಪ್ರತಿ ಕೆ.ಜಿ.ಗೆ. ಕೇವಲ 60 ರಿಂದ 70 ರೂಪಾಯಿ ಮಾರಾಟವಾಗುತ್ತಿದೆ. ಕಳೆದ ವರ್ಷ ಅಲ್ಪಸ್ವಲ್ಪ ಒಣ ದ್ರಾಕ್ಷಿಗೆ 200 ರಿಂದ 250 ರೂ. ಬೆಲೆ ಇತ್ತು ಆದರೆ ಈ ಭಾರಿ ಸಂಪೂರ್ಣ ಬೆಲೆ ಕುಷಿತ ಕಂಡಿದೆ. ಇದರಿಂದ ದ್ರಾಕ್ಷಿ ಬೆಳೆದ ರೈತರು ತೀವ್ರ ಕಂಗಾಲಾಗಿದ್ದಾರೆ. ಒಣದ್ರಾಕ್ಷಿ ಮಾನವ ಕುಲಕ್ಕೆ ಅತ್ಯಂತ ಉಪಯುಕ್ತವಾಗಿದೆ. ಅದರಲ್ಲಿ ಸುಮಾರು 20 ಕ್ಕೂ ಹೆಚ್ಚು ರೋಗಗಳನ್ನು ಗುಣಪಡಿಸುವ ಪೋಷಕಾಂಶಗಳನ್ನು ಒಣ ದ್ರಾಕ್ಷಿ ಹೊಂದಿದೆ. ಅದರಲ್ಲಿ ವಿಟ್ಯಾಮಿನ್ ಬಿ6, ವಿಟ್ಯಾಮಿನ್ ಸಿ, ಗ್ಲೂಕೋಶ್ ಕ್ಯಾಲ್ಸಿಯಮ್ನ, ಮ್ಯಾಗ್ನಿಸಿಯಂ, ಪೊಟ್ಯಾಸಿಯಂ,. ಐರಾನ್ ಸೇರಿದಂತೆ ಹಲವಾರು ವಿಟ್ಯಾಮಿನ್‌ಗಳು ಒಣದ್ರಾಕ್ಷಿಯಲ್ಲಿ ಲಭ್ಯವಿವೆ. ಇದನ್ನು ಮಕ್ಕಳು ಸೇವಿಸುವದರಿಂದ ಅವರಲ್ಲಿ ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ. ಆಸ್ಪತ್ರೆಯಲ್ಲಿ ರೋಗಿಗಳು ಕೂಡ ನೀಡಿದರೆ ಅವರ ಆರೋಗ್ಯದಲ್ಲಿ ಸುಧಾರಣೆಯಾಗುತ್ತದೆ ಆದ್ದರಿಂದ ಸರ್ಕಾರ ಕನಿಷ್ಠ 50 ಗ್ರಾಮ ನಷ್ಟು ಮನುಕನ್ನು ವಿತರಣೆ ಮಾಡಬೇಕು ಎಂದು ದೇವರ ಹಿಪ್ಪರಗಿ ಸದಯ್ಯನ ಮಠದ ಶ್ರೀಗಳಾದ ವೀರಗಂಗಾಧರ ಸ್ವಾಮಿಗಳು ಹಾಗೂ ರೈತ ಮುಖಂಡ ಅರವಿಂದ ಕುಲಕರ್ಣಿ ಹೇಳಿದರು.

ಅವರು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಇಡೀ ವರ್ಷ ಕಷ್ಟ ಪಟ್ಟು ದ್ರಾಕ್ಷಿ ಬೆಳೆದು ನಂತರದ ಮನುಕು ತಯಾರಿಸಿ ಮಾರುಕಟ್ಟೆಗೆ ಸಾಗಿಸಿದರೆ ಕೇವಲ 60 ರಿಂದ 70 ರೂಪಾಯಿ ಪ್ರತಿ ಕೆ.ಜಿ.ಗೆ ಮಾರಾಟವಾಗುತ್ತಿವೆ. ಖರೀದಿ ಮಾಡಿದ ನಂತರ ದಲ್ಲಾಳಿಗಳು ಏನು ಕಷ್ಟ ಪಡದೆ 4 ಪಟ್ಟು ಲಾಭ ಪಡೆಯತ್ತಾರೆ. ದಲ್ಲಾಳಿಗಳು ಯಾವುದೇ ಬೆವರು ಸುರಿಸದೆ, ಕಷ್ಟ ಪಡದೆ ಹಣ ಗಳಿಸುತ್ತಾರೆ. ಆದರೆ ದ್ರಾಕ್ಷಿ ಬೆಳೆದ ರೈತ ಮಾತ್ರ ಇನ್ನು ಬಡತನದ ಬೇಗೆಯಲ್ಲಿ ಬಳಲುತ್ತಿದ್ದಾನೆ ಎಂದು ವಿಷಾದಿಸಿದರು.
ಈ ಸಂದರ್ಭದಲ್ಲಿ ಕರಭಂಟನಾಳದ ಶಿವಕುಮಾರ ಸ್ವಾಮೀಜಿ ಹಾಗೂ ಬಸವನ ಬಾಗೇವಾಡಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ದ್ರಾಕ್ಷಿ ಬೆಳೆಯನ್ನು ಅಂದಾಜು 90 ಸಾವಿರದಿಂದ 90 ಎಕರೆ ಪ್ರದೇಶದಲ್ಲಿ ಬೆಳೆಯುತ್ತಿದ್ದು 7 ರಿಂದ 8 ಮೆಟ್ರಿಕ್ ಟನ್ ದ್ರಾಕ್ಷಿ ಉತ್ಪನ್ನ ಮಾಡಲಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರವೇ ರೈತರಿಂದ ಬೆಂಬಲ ಬೆಲೆ ನೀಡಿ ನೇರವಾಗಿ ಖರೀದಿಸಬೇಕು. ಆದ್ದರಿಂದ ತಾವುಗಳು ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬೇದ ಮರೆತು ಮುಖ್ಯಮಂತ್ರಿಗಳ ಬಳಿ ನಿಯೋಗ ತೆಗೆದುಕೊಂಡು ಹೋಗಿ ಅವರಿಗೆ ಮನವರಿಕೆ ಮಾಡಿ ರಾಜ್ಯ ಸರ್ಕಾರದ ನೇತೃತ್ವದಲ್ಲಿ ರಾಜ್ಯದ ಮಠಾಧೀಶರ ಹಾಗೂ ರೈತರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಬಳಿ ನಿಯೋಗ ತೆಗೆದುಕೊಂಡು ಹೋಗಿ ಪ್ರಧಾನಮಂತ್ರಿಯವರಿಗೆ ಮನವರಿಕೆ ಮಾಡಿಕೊಟ್ಟು ಪ್ರತಿ ಕೆಜೆ ಒಣ ದ್ರಾಕ್ಷಿಗೆ ಕನಿಷ್ಠ 250 ರೂಪಾಯಿ ಬೆಲೆ ನಿಗಧಿಪಡಿಸಲು ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಒತ್ತಾಯಿಸಿದರು. ದಿನಾಂಕ: 07-09-2023 ರಂದು ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಕಿ ಕ್ರಾಸ್ ಬಳಿ ನಾಡಿನ ಹಲವಾರು ಮಠಾಧೀಶರ ಸಮ್ಮುಖದಲ್ಲಿ ಕನಿಷ್ಠ 5 ರಿಂದ 6 ಸಾವಿರ ದ್ರಾಕ್ಷಿ ಬೆಳೆದ ರೈತರು ರೈತಪರ ಸಂಘಟನೆಗಳವತಿಯಿAದ ಬೃಹತ್ ಪ್ರಮಾಣದ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮಕ್ಕೆ ವಿಜಯಪುರ ಜಿಲ್ಲೆಯ ದ್ರಾಕ್ಷಿ ಬೆಳೆಯುವ ರೈತರು ರೈತಪರ ಸಂಘಟನೆಗಳು ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಸಂಗಮೇಶ ಸಗರ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಾಸಿಂಪೀರ ವಾಲಿಕಾರ, ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಕಾರ್ಯದರ್ಶಿ ಜೀರದಾಳ ವಕೀಲರು, ಪ್ರೊ. ಐ.ಜಿ. ಹಿರೇಮಠ, ಸೇರಿದಂತೆ ಮುಂತಾದವರು ಇದ್ದರು.

ಪರ್ಯಾಯ ಕನ್ನಡ ಚಲನಚಿತ್ರದ ಟ್ರೇಲರ್ ಬಿಡುಗಡೆ

ಈ ದಿವಸ ವಾರ್ತೆ

ವಿಜಯಪುರ: ಮಮತಾ ಕ್ರಿಯೇಷನ್ ಬ್ಯಾನರ್ ನಲ್ಲಿ ನಿರ್ಮಾಣವಾಗಿರುವ ಕನ್ನಡ ಚಲನಚಿತ್ರ ಪರ್ಯಾಯ, ಮೂರು ವ್ಯಕ್ತಿಗಳು ಬದುಕು ಕಟ್ಟಿಕೊಳ್ಳುವ ಪ್ರಕ್ರಿಯೆಯಲ್ಲಿ ಹುಡುಕಿಕೊಂಡು ಹೋಗುವ ಪರ್ಯಾಯ ಮಾರ್ಗಗಳು ಅದರಿಂದ ಅಗುವ ಘಟನೆಗಳ ಸುತ್ತ ಪರ್ಯಾಯ ಕತೆ ಸಾಗುತ್ತದೆ, ಹೊಸ ಕಲಾವಿದರ ಒಂದು ವಿನೂತನ ಪ್ರಯೋಗದ ಮೂಲಕ ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡಲಿರುವ ಪರ್ಯಾಯ ವಾಸ್ತವ ನೆಲೆಗಟ್ಟಿನಲ್ಲಿ ಒಂದು ಉತ್ತಮ ಅಂಶವನ್ನು ಇಟ್ಟುಕೊಂಡು ಸಪ್ಟೆಂಬರ್ ಎಂಟರAದು ತೆರೆಗೆ ಬರಲಿದೆ ಎಂದು ನಿರ್ದೇಶಕ ರಮಾನಂದ ಮಿತ್ರ ಹೇಳಿದರು.

ಅವರು ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪರ್ಯಾಯ ಕನ್ನಡ ಚಲನಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು ಎಲ್ಲವೂ ಉತ್ತಮ ಸಂದೇಶ ನೀಡುವ ಹಾಡುಗಳಾಗಿವೆ, ಅಜಯ್ ವಾರಿಯರ್, ನಾದಿರಾ ಬಾನು, ಮೆಹಬೂಬ್ ಸಾಬ್, ಲೆಮನ್ ಪರಶುರಾಮ್ ಹಾಡಿದ್ದಾರೆ.

ರಾಜಕುಮಾರ್, ಶ್ರೀಮತಿ ಇಂದುಮತಿ ರಾಜಕುಮಾರ್ ನಿರ್ಮಾಪಕರಾಗಿದ್ದಾರೆ. ಮುರುಗೇಶ್ ಬಿ ಶಿವಪೂಜೆ, ಶಿವಾನಂದ ಚಿಕ್ಕಮಠ ಸಹ ನಿರ್ಮಾಪಕರಾಗಿದ್ದಾರೆ. ರವೀಶ್ ರಾಮ್ ಸಂಗೀತ ನೀಡಿದ್ದಾರೆ. ಜಿ. ರಂಗಸ್ವಾಮಿ ಛಾಯಾಗ್ರಹಣ ಮಾಡಿದ್ದಾರೆ. ಜೀವನ್ ಪ್ರಕಾಶ್ ಸಂಕಲನ ಮಾಡಿದ್ದಾರೆ. ಮೂರ್ತಿ ನಿಡುವಳ್ಳಿ ಪ್ರಸಾದನ ಸೇವೆ ನೀಡಿದ್ದಾರೆ.

ಈ ಚಿತ್ರದಲ್ಲಿ ರಾಜಕುಮಾರ್, ಮುರುಗೇಶ್ ಬಿ ಶಿವಪೂಜಿ, ರಂಜನ್ ಕುಮಾರ್, ಜಯಂತಿ ರೇವಡಿ, ಅರ್ಚನಾ ಶೆಟ್ಟಿ, ಪ್ರಿಯಾ ಕೊಠಾರಿ, ಭೀಮ ನಾಯಕ್, ಬೆಳಗಾವಿ ಕಟ್ಟಪ್ಪ, ದಿನೇಶ್ ಖಾಂಡ್ಯ, ಸುರೇಶ್ ಬೆಳಗಾವಿ, ಕಂಪರಾಜ್ ಇತರರು ಅಭಿನಯಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪರ್ಯಾಯ ಕನ್ನಡ ಚಲನಚಿತ್ರದ ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ನಗರದ ಅಧ್ಯಕ್ಷರಾದ ಫಯಾಜ ಕಲಾದಗಿ, ಹಿರಿಯ ಪತ್ರಕರ್ತರಾದ ಪ್ರದೀಪ ಕುಲಕರ್ಣಿ ಉಪಸ್ಥಿತರಿದ್ದರು.