Saturday, September 16, 2023

17-09-2023 EE DIVASA KANNADA DAILY NEWS PAPER

ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳು ಸಹಕಾರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ.ಚವ್ಹಾಣ

ಈ ದಿವಸ ವಾರ್ತೆ

ವಿಜಯಪುರ: ಮಕ್ಕಳ ಸರ್ವಾಂಗೀಣ ಬೆಳವಣಿಗೆ ಅಂಗನವಾಡಿ ಕೇಂದ್ರಗಳು ಸಹಕಾರಿಯಾಗಿವೆ ಎನ್ನುವ ನಂಬಿಕೆ ಕೂಡ ಪಾಲಕರಲ್ಲಿ ಮೂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ ಹೇಳಿದರು.

ಅವರು ನಗರದ ವಜ್ರಹನುಮಾನ ನಗರ ಕೊಡ್ ಸಂಖ್ಯೆ-522 ಅಂಗನವಾಡಿ ಕೇಂದ್ರದಲ್ಲಿ ನಗರ ವ್ಯಾಪ್ತಿಯಲ್ಲಿ ಬರುವ ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಪಾಲಕರ ಸಭೆಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಶಿಕ್ಷಣ ಕಲಿಯಬೇಕು. ಶಿಕ್ಷಣದಿಂದ ಮಾತ್ರ ಸುಂದರವಾದ ಬದುಕನ್ನು ನಿರ್ಮಿಸಿಕೊಳ್ಳಬಹುದಾಗಿದೆ ಎಂದರು. ಇಲಾಖೆಯಲ್ಲಿ ಸಾಕಷ್ಟು ಸೌಲಭ್ಯಗಳಿವೆ ಪ್ರತಿಯೊಬ್ಬ ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದರು.

ಶಿಶು ಅಭಿವೃದ್ಧಿ ವಿಜಯಪುರ ನಗರ ಯೋಜನಾಧಿಕಾರಿಗಳಾದ ದೀಪಾಕ್ಷಿ ಜಾನಕಿ ಸ್ವಾಗತ ನುಡಿಗಳನ್ನಾಡಿದರು.

ಇದೇ ಸಂದರ್ಭದಲ್ಲಿ ಅಂಗನವಾಡಿಗೆ ಆಗಮಿಸಿದ  ಪಾಲಕರು ಅಂಗನವಾಡಿ ಕೇಂದ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. 

ಕಾರ್ಯಕ್ರಮಕ್ಕೂ ಮುನ್ನ ಅಂಗನವಾಡಿ ಕೇಂದ್ರದಲ್ಲಿನ ಪುಟಾಣಿ ಅನ್ವಿಕಾ ಪಂಡೆಪಿವಳ ಪ್ರಾರ್ಥನೆಯೊಂದಿಗೆ ಸಭೆ ಆರಂಭವಾಯಿತು.

ವಲಯದ ಮೇಲ್ವಿಚಾರಕಿ ಪ್ರತಿಭಾ ಅಂಗಡಿಮಠ   ಕಾರ್ಯಕ್ರಮ ನಿರೂಪಿಸಿದರು.

ಈ ಕಾರ್ಯಕ್ರಮದಲ್ಲಿ ಎಲ್ಲಾ ತಾಯಂದಿರು ಗರ್ಭಿಣಿ, ಬಾಣಂತಿಯರು ಕಾರ್ಯಕರ್ತೆ, ಸಹಾಯಕಿಯರು ಮುದ್ದು ಮಕ್ಕಳು ಹಾಜರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಧಾನಿ ನರೇಂದ್ರ ಮೋದಿ ಅವರ 73 ಜನ್ಮದಿನ : ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ

ವಿಜಯಪುರ : ಪ್ರಧಾನಿ ನರೇಂದ್ರ ಮೋದಿ ಅವರ 73 ಜನ್ಮದಿನ ಹಾಗೂ ದೇಶ ರಕ್ಷಕರ ಪಡೆ 5 ನೇ ವರ್ಷಾಚರಣೆ ಪ್ರಯುಕ್ತ ಜೆ.ಎಸ್.ಎಸ್ ಆಸ್ಪತ್ರೆ, ಶ್ರೀ ರಾಮಸುಧಾ ಕಣ್ಣಿನ ಆಸ್ಪತ್ರೆ , ವಿಜಯಪುರ ರಕ್ತನಿಧಿ ಕೇಂದ್ರ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್ ಸಹೋಗದಲ್ಲಿ ಇದೇ ದಿ.17 ರವಿವಾರ ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರವನ್ನು ವಿಜಯಪುರ ನಗರದ ಶ್ರೀ ರುಕ್ಮಾಂಗದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ಖ್ಯಾತ ನೇತ್ರ ತಜ್ಞ ಡಾ.ಗುರುರಾಜ ಕುಲಕರ್ಣಿ, ಡಾ.ವಿಕಾಸ ಸೊನಗೆ, ಡಾ.ಭಾಗ್ಯಶ್ರೀ ಪೂಜಾರಿ ಚಿಕಿತ್ಸೆ ನೀಡಲಿದ್ದಾರೆ. ಖ್ಯಾತ ಮಧುಮೇಹ ತಜ್ಞ ಬಾಬೂರಾಜೆಂದ್ರ ನಾಯಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಶರಣ ಮಲಖೇಡಕರ, ಜೆ.ಎಸ್.ಎಸ್ ಆಸ್ಪತ್ರೆ ಸಿಇಓ, ಮಹಾನಗರ ಪಾಲಿಕೆ ಸದಸ್ಯ ಕಿರಣ ಪಾಟೀಲ, ವಿಶ್ವನಾಥ ಜೋಶಿ, ಗಿರೀಶ ನೀಲಗುಂದ ಉಪಸ್ಥಿತರಿರಲಿದ್ದಾರೆ ಎಂದು ದೇಶ ರಕ್ಷಕರ ಪಡೆ ಸಂಸ್ಥಾಪಕ ರೋಹನ ಆಪ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳಿಗೆ, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ ವ್ಯಾಟ್ಸಪ್ ಅಥವಾ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

ಚಿದಂಬರೇಶ್ವರ ಭಾವಚಿತ್ರ ಹಾಗೂ ಪಾಲಿಕೆ ಉತ್ಸವ ಮೂರ್ತಿಯ ಅದ್ಧೂರಿ ಮೆರವಣಿಗೆ


ವಿಜಯಪುರ: ಚಿದಂಬರೇಶ್ವರ ಭಾವಚಿತ್ರ ಹಾಗೂ ಪಾಲಿಕೆ ಉತ್ಸವ ಮೂರ್ತಿಯೊಂದಿಗೆ ಅದ್ಧೂರಿ ಮೆರವಣಿಗೆ ಜರುಗಿತು.

ವಿಜಯಪುರ ನಗರದ ಇಂಬ್ರಾಹಿAಪೂರ ವೆಂಕಟೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಶೋಭಾಯಾತ್ರೆಯು ಗಣೇಶ ನಗರ ಮುಖಾಂತರ ಚಿದಂಬರ ದೇವಸ್ಥಾನಕ್ಕೆ ತಲುಪಿತು.

ಈ ಸಂದರ್ಭದಲ್ಲಿ ಚಿದಂಬರ ಭಜನಾ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಕರಡಿ ಮಜಲು, ಗೊಂಬೆ ಕುಣಿತವು ಮೆರವಣಿಗೆ ಮೆರಗು ತಂದವು. 

ಈ ಸಂಭರ್ದದಲ್ಲಿ ಚಿದಂಬರ ಸೇವಾ ಸಮಿತಿ ಅಧ್ಯಕ್ಷರಾದ ಪಿ.ಬಿ. ಹಂಗರಗಿ, ವೇದ ಮೂರ್ತಿ ಶಂಕರಭಟ ಅಗ್ನಿಹೋರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಶ್ರೀಹರಿಗೊಳಸಂಗಿ, ಶ್ರೀನಿವಾಸ ಬೆಟಗೇರಿ, ಲಕ್ಷಿö್ಮÃಕಾಂತ ಕುಲಕರ್ಣಿ, ವಿಜಯ ಜೋಶಿ, ಮಧುಸೂಧನ ಜೋಶಿ, ಮಾಧವ ಜೋಶಿ, ರಮೇಶ ಕುಲಕರ್ಣಿ, ಪ್ರಾಣೇಶ ಕುಲಕರ್ಣಿ, ಸಚಿನಭಟ ಜೋಶಿ, ಜ್ಯೋತಿ ಹುನಗುಂದ, ವೆಂಕಟೇಶ ಜೋಶಿ, ವೆಂಕಟೇಶ ಜೋಶಿ ನಂದವಾಡಗಿ, ದೀಪಕ ಜೋಶಿ,ಸುಧೀಂದ್ರ ಕುಲಕರ್ಣಿ, ಸಿ.ಕೆ.ಪಾಟೀಲ ಪದ್ಮನಾಬ ಜೋಶಿ, ಅಜೀತ ಜೋಶಿ, ಚಿದಂಬರ ಜೋಶಿ, ರಾಘವೇಂದ್ರ ಕುಲಕರ್ಣಿ, ರಘೋತ್ತಮ ಪಾಟೀಲ, ಮಾಲತೇಶ ಕುಲಕರ್ಣಿ, ನಾಗರಾಜ ಜೋಶಿ, ಉಮೇಶ ಜೋಶಿ, ಉದಯ ಔರಸಂಗ, ರಾಘವೇಂದ್ರ ಜೋಶಿ ಸಂಕನಾಳ, ವಿಕಾಸ ಪದಕಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳಿಗೆ, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ ವ್ಯಾಟ್ಸಪ್ ಅಥವಾ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.

ಸೆ. 17 ರಂದು ದೂರದರ್ಶನ ಚಂದನ ವಾಹಿನಿಯಲ್ಲಿ ಮೂಕನಾಗಬೇಕು ಸಾಕ್ಷ್ಯಚಿತ್ರ ಪ್ರಸಾರ

 ಈ ದಿವಸ ವಾರ್ತೆ 

ವಿಜಯಪುರ: ವಿಜಯಪುರದ ಹೊಂಗನಸು ಮೀಡಿಯಾ ಪ್ರೈ.ಲಿ. ಅಡಿಯಲ್ಲಿ ತಯಾರಾದ ಮೊದಲ ಕಾಣಿಕೆ, ಬಾಗಲಕೋಟೆ ನಗರದ ಸಮಾಜ ಸೇವಕ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೂ ವಿ ನಾಯ್ಕರ ಅವರ ನಿರ್ಮಾಣದ, ಪ್ರಿನ್ಸ್ ಟಿವಿ ಅರ್ಪಿಸುವ, ಕರ್ನಾಟಕದ ಮಹಾನ್ ತತ್ವಜ್ಞಾನಿ, ಉತ್ತರ ಕರ್ನಾಟಕದ ಹೆಮ್ಮೆಯ ತತ್ವಪದಕಾರ ಕಡಕೋಳ ಮಡಿವಾಳಪ್ಪನವರ ಜೀವನ ಕುರಿತು ತಯಾರಾದ ಸಾಕ್ಷ್ಯಚಿತ್ರ ಮೂಕನಾಗಬೇಕು ದೂರದರ್ಶನ ಚಂದನ ವಾಹಿನಿಲ್ಲಿ ಇದೇ ದಿನಾಂಕ: 17.09.2023 ರಂದು ಭಾನುವಾರ ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ ಎಂದು ಚಿತ್ರದ ನಿರ್ದೇಶಕ ಶಿವಾನಂದ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶೇಷವಾಗಿ ಉತ್ತರ ಕರ್ನಾಟಕದ ಕಲಾವಿದರು, ತಂತ್ರಜ್ಞರು ಸೇರಿ ಮಾಡಿರುವ ಈ ಚಿತ್ರವನ್ನು, ಪ್ರೇಕ್ಷಕರು ವೀಕ್ಷಿಸುವುದರ ಮೂಲಕ ಆಶೀರ್ವಾದಿಸಬೇಕೆಂದು ಕೋರಿದ್ದಾರೆ. 

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳಿಗೆ, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ ವ್ಯಾಟ್ಸಪ್ ಅಥವಾ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.