Sunday, September 17, 2023

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

 

ಈ ದಿವಸ ವಾರ್ತೆ

ಚಡಚಣ: ನಗರದ ಶ್ರೀ ಸಂಗಮೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ  ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.

ಸಂವಿಧಾನದ ಪೀಠಿಕೆ ಬೋಧಿಸಿ, ಮಾತನಾಡಿದ ಪ್ರಾಚಾರ್ಯರಾದ ಡಾ. ಎಸ್.ಬಿ.ರಾಠೋಡ ಅವರು 

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವು  ವಿಶ್ವದಲ್ಲಿನ ಪ್ರಜಾಪ್ರಭುತ್ವದ ಸ್ಥಿತಿಯನ್ನು ತಿಳಿಸುತ್ತದೆ. ಪ್ರಜಾಪ್ರಭುತ್ವದ ಆದರ್ಶ ತತ್ವವನ್ನು ಎಲ್ಲರೂ, ಎಲ್ಲೆಡೆ ಪಾಲಿಸುವದು ನಮ್ಮೆಲ್ಲರ ಆದ್ಯ ಕರ್ತವ್ಯ ಕೂಡ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಂಥಪಾಲಕರಾದ ಶ್ರೀ ಎಂ.ಕೆ.ಬಿರಾದಾರ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಮಾಹತೇಂಶ ಜನವಾಡ ಕಾರ್ಯಕ್ರಮ ನಿರ್ವಹಣೆ ಮಾಡಿದರು 

ಪ್ರೋ. ಐ.ಆರ್,ಜೋರಾಪುರ,ಪ್ರೋ. ವಿನೋದ ಘೇವಂಡೆ, ಪ್ರೋ.ಎಸ್.ಎಸ್.ಪಾಟೀಲ, ಮಹಾವಿದ್ಯಾಲಯದ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಮುತ್ತು ರಾಷ್ಟ್ರೀಯ ಸ್ವಯಂ ಸೇವಕರು ಇದ್ದರು.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳಿಗೆ, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.

ಕಲ್ಲಪ್ಪ ಶಿವಶರಣ

ವ್ಯವಸ್ಥಾಪಕ ಸಂಪಾದಕ

ಈ ದಿವಸ ಕನ್ನಡ ದಿನ ಪತ್ರಿಕೆ

 ಮೊ: 7204279187/     

          9900378892

ತಾವು ಟೈಪಿಸಿ ವ್ಯಾಟ್ಸಪ್ ಅಥವಾ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


18-09-2023 EE DIVASA KANNADA DAILY NEWS PAPER