Sunday, October 8, 2023

ಹೊನ್ನಾವರದ ಶಾಂತಿ ನಾಯಕ ಅವರಿಗೆ “ದೇಸಿ ಸನ್ಮಾನ” ಪ್ರಶಸ್ತಿ

ಈ ದಿವಸ ವಾರ್ತೆ

ವಿಜಯಪುರ: ಸಿಂದಗಿಯ ನೆಲೆ ಪ್ರಕಾಶನ ಸಂಸ್ಥೆಯ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ'ವು ನಾಡಿನ ಹಿರಿಯ ಜಾನಪದ ವಿದ್ವಾಂಸರಿಗೆ ಕೊಡಮಾಡುವ ‘ದೇಸಿ ಸನ್ಮಾನ' ಪ್ರಶಸ್ತಿಗೆ ಹೊನ್ನಾವರದ ಹಿರಿಯ ಜಾನಪದ ವಿದ್ವಾಂಸರಾದ ಶಾಂತಿ ನಾಯಕ ಅವರು 2023ನೆಯ ಸಾಲಿಗೆ ಭಾಜನರಾಗಿದ್ದಾರೆ.

ಪಶಸ್ತಿ ಆಯ್ಕೆ ಸಮಿತಿಯ ಸದಸ್ಯರಾದ ಡಾ.ರಾಮಕೃಷ್ಣ ಮರಾಠೆ, ಡಾ.ವಿಜಯಕುಮಾರ ಕಟಗಿಹಳ್ಳಿಮಠ ಹಾಗೂ ಡಾ.ಎಫ್.ಟಿ.ಹಳ್ಳಿಕೇರಿ ಅವರು ಶಾಂತಿ ನಾಯಕ ಅವರ ಸಾಧನೆಯನ್ನು ಗಮನಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಸಿಂದಗಿಯಲ್ಲಿ ನವೆಂಬರ್ 5, 2023ರಂದು ಜರುಗಲಿದೆ. ಪುರಸ್ಕೃತರಿಗೆ ರೂ.11000/- ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು. ಅದೇ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ನಾಗರಾಜ ಹೆಗಡೆ, ಅಪಗಾಲ ಅವರು ರಚಿಸಿದ 'ಶಾಂತಿ ನಾಯಕ: ಬದುಕು-ಬರಹ' ಎನ್ನುವ ಕಿರುಹೊತ್ತಿಗೆಯನ್ನು ನೆಲೆ ಪ್ರಕಾಶನ ಸಂಸ್ಥೆಯು ಪ್ರಕಟಗೊಳಿಸಿ ಲೋಕಾರ್ಪಣೆ ಮಾಡುವುದು ಎಂದು ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಚಾಲಕರಾದ ಡಾ.ಚನ್ನಪ್ಪ ಕಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ಮೊ: 7204279187/     
          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.