Wednesday, January 31, 2024

ರೇಷ್ಮಾ, ಇಂದಿರಾಬಾಯಿಗೆ ಪಿಎಚ್.ಡಿ ಪದವಿ

ರೇಷ್ಮಾ ಚೀರಲದಿನ್ನಿ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ರೇಷ್ಮಾ ಚೀರಲದಿನ್ನಿ ಅವರು ಸಲ್ಲಿಸಿದ್ದ “ಎಜ್ಯುಕೇಶನ್ ಕಾಂಟ್ರಿಬ್ಯೂಶನ್ಸ್ ಆಫ್ ಮೌಲಾನಾ ಅಬ್ದುಲ್ ಕಲಾಮ ಆಜಾದ ಆಂಡ್ ಇಟ್ಸ್ ರೆಲೆವನ್ಸ್ ಟು ಪ್ರಸೆಂಟ್ ಸಿನಾರಿಯೋ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.

ರೇಷ್ಮಾ ಚೀರಲದಿನ್ನಿ ಅವರು ಶಿಕ್ಷಣ ವಿಭಾಗದ ಪ್ರೊ.ಬಿ.ಎಲ್.ಲಕ್ಕಣ್ಣವರ್ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ರೇಷ್ಮಾ ಚೀರಲದಿನ್ನಿ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.




ಇಂದಿರಾಬಾಯಿ ಬೀರಲದಿನ್ನಿ 

 ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಇಂದಿರಾಬಾಯಿ ಬೀರಲದಿನ್ನಿ ಅವರು ಸಲ್ಲಿಸಿದ್ದ “ಇನ್-ಸಿಲಿಕೊ ಡ್ರಗ್ ಡಿಸೈನಿಂಗ್ ಸ್ಟಡೀಸ್ ಆಫ್ ಪೈಟೋಕೆಮಿಕಲ್ಸ್ ಐಸೋಲೇಟೆಡ್ ಫ್ರಮ್ ಲೂನಿಯಾ ಪ್ರೊಕುಂಬೆನ್ಸ್ ಅಗೆನೆಸ್ಟ್ ಡೈಯಬಿಟೀಸ್ ಮೆಲಿಟಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ. 

ಇಂದಿರಾಬಾಯಿ ಬೀರಲದಿನ್ನಿ ಅವರು ಜೈವಿಕ ಮಾಹಿತಿ ವಿಭಾಗದ ಪ್ರೊ.ಜಾಯ್.ಹೆಚ್.ಹೊಸ್ಕೇರಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಇಂದಿರಾಬಾಯಿ ಬೀರಲದಿನ್ನಿ ಅವರನ್ನು ಕುಲಪತಿ 

ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

ಪ. ಪೂ. ಶ್ರೀ ಮನ.ನಿ. ಪ್ರ. ಕುಮಾರ ಶಿವಯೋಗಿಗಳ 94ನೇ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಗಾನಯೋಗಿ ಶಿವಯೋಗಿ ಪಂ. ಪಂಚಾಕ್ಷರ ಗವಾಯಿಗಳವರ 132ನೇ ಜಯಂತ್ಯೋತ್ಸವ

ವಿಜಯಪುರ : ಶ್ರೀ ಗುರು ಕುಮಾರೇಶ್ವರ ಪ್ರತಿಷ್ಠಾನ (ರಿ) ಶ್ರೀ ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನ (ರಿ) ವಿಜಯಪುರ ಪ. ಪೂ. ಶ್ರೀ ಮನ.ನಿ. ಪ್ರ. ಕುಮಾರ ಶಿವಯೋಗಿಗಳ 94ನೇ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಗಾನಯೋಗಿ ಶಿವಯೋಗಿ ಪಂ. ಪಂಚಾಕ್ಷರ ಗವಾಯಿಗಳವರ 132ನೇ ಜಯಂತ್ಯೋತ್ಸವವನ್ನು ದಿನಾಂಕ: 02-02-2024 ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ನಗರದ ಗಾನಬನದ ಆವರಣ, ಎನ್.ಸಿ.ಸಿ. ಕಾರ್ಯಾಲಯದ ಹಿಂದುಗಡೆ ಶ್ರೀ ಗಾನಯೋಗಿ ಪಂಚಾಕ್ಷರ ಗವಾಯಿಗಳ ಮಾರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ 

ಶ್ರೀ ಸಿದ್ದಯ್ಯ ಪುರಾಣಿಕರ ವಿರಚಿತ ಶರಣ ಪರಿತಾಮೃತ ಪ್ರವಚನ ಕಾರ್ಯಕ್ರಮ ದಿನಾಂಕ 24-01-2024 ರಿಂದ ದಿನಾಂಕ 31-01-2024 ರವೆಗೆ ಡಾ. ಶಿವರಾಜ ಶಾಸ್ತಿçÃಗಳು ಹೆರೂರ ಇವರಿಂದ ಸಾಗಿ ಬಂದ ಪ್ರವಚನ ಮಂಗಲಗೊAಡಿತು.

ದಿನಾAಕ: 01-02-2024 ಗುರುವಾರ ಸಂಜೆ 6 ಗಂಟೆಗೆ ಸಂಗೀತ ಸಮಾರಂಭ ಜರುಗಲಿದೆ. ವಿರಕ್ತಮಠದ ಶ್ರೀ ಮ.ನಿ.ಪ್ರ. ಮುರಘೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿಕೊಳ್ಳಲಿದ್ದಾರೆ. ಸಂಗಮೇಶ್ವರ ಸಂಸ್ಥಾನ ಹಿರೇಮಠ, ಮುದ್ದಡಗಾ ಬಲಗುಂದಿ ಶ್ರೀ ಷ. ಬ್ರ. ವೈಧ್ಯಶ್ರೀ ಸದ್ಯೋಜಾತ ರೇಣುಕ ಶಿವಾಚಾರ್ಯರು ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಧರ್ಮ ಸುಧಾಕರ ಹಾಗೂ ಜಮಖಂಡಿಯ ಜನಪ್ರೀಯ ಶಾಸಕರಾದ ನಾಡೋಜ ಜಗದೀಶ ಗುಡಗುಂಟಿ ಉದ್ಘಾಟನೆಮಾಡಲಿದ್ದಾರೆ.

ಶ್ರೀ ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಬಸವರಾಜ ಪಿ. ಕೆಂಗನಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಬಾಗಲಕೋಟ ವಿಧಾನ ಪರಿಷತ್ ಸದಸ್ಯರಾದ ಪಿ.ಎಚ್.ಪೂಜಾರ, ಉಪನೋಂದಣಾಧಿಕಾರಿಗಳು ಹಾಗೂ ಮಹಾಪೋಷಕರು, ಶ್ರೀ ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನ ಬಿ.ಎಸ್. ಬಿರಾದಾರ, ಮಹಾನಗರ ಪಾಲಿಕೆ ಸದಸ್ಯರಾದ ಎಂ.ಎಸ್. ಕರಡಿ, ಜ್ಞಾನಜ್ಯೋತಿ ಸ್ಕೂಲ್‌ನ ಮಲ್ಲಿಕಾರ್ಜುನ ಲೋನಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸುಭಾಸಚಂದ್ರ ಕನ್ನೂರ ಕಾರ್ಯಕ್ರಮವನ್ನು ನಿರೂಪಿಸಲಿದ್ದಾರೆ.

ದಿನಾಂಕ: 02-02-2024 ಶುಕ್ರವಾರ ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಗುರುತ್ರಯರ ಶಿಲಾಮೂರ್ತಿಗಳಿಗೆ ವೇದೋಕ್ತ ಪೂಜಾ ಕೈಂಕರ್ಯ ನೆರವೇರುವುದು. ಬೆಳಿಗ್ಗೆ 9 ಗಂಟೆಗೆ ಗುರುವರ್ಯರ ಭಾವಚಿತ್ರದ ಮೆರವಣಿಗೆ ಜರುಗಲಿದೆ.

ತದನಂತರ ಧರ್ಮ ಸಭೆ ಜರುಗಲಿದೆ. ಜಮಖಂಡಿಯ ಓಲೆಮಠದ ಡಾ. ಶ್ರೀ ಮ.ನಿ.ಪ್ರ. ಅಭಿನವ ಕುಮಾರ ಚನ್ನಬಸವ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿಕೊಳ್ಳಲಿದ್ದಾರೆ. ವಿರಕ್ತಮಠ, ನಿಢೋಣಿ ಎರಡೆತ್ತಿನಮಠ, ಹುಬ್ಬಳ್ಳಿಯ ಶ್ರೀ ಮ.ನಿ.ಪ್ರ. ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಗವಿಮಠ, ಬೊಮ್ಮನಹಳ್ಳಿಯ ಶ್ರೀ ಷ.ಬ್ರ. ಗುರುಶಾಂತ ಶಿವಾಚಾರ್ಯ ಮಹಾಸ್ವಾಮಿಗಳು ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಸಂಗಮೇಶ್ವರ ಸಂಸ್ಥಾನ ಹಿರೇಮಠ, ಮುದ್ದಡಗಾ, ಬಿಲಗುಂದಿಯ ಶ್ರೀ ಷ.ಬ್ರ.ವೈಧ್ಯಶ್ರೀ ಸದ್ಯೋಜಾತ ರೇಣುಕ ಶಿವಾಚಾರ್ಯರ ಸಮ್ಮುಖ ವಹಿಸಿಕೊಳ್ಳಲಿದ್ದಾರೆ. ಆಯುಕ್ತರು ನಗರಾಭಿವೃದ್ಧಿ ಪ್ರಾಧಿಖಾರದ ವಿಜಯಪುರದ ರಾಜಶೇಖರ ಡಂಬಳ ಉದ್ಘಾಟಿಸಲಿದ್ದಾರೆ. ಶ್ರೀ ಪ್ರವಚನ ಕೇಸರಿ ವೇ.ಮೂ. ವಿರೂಪಾಕ್ಷಯ್ಯ ಶಾಸ್ತಿçಗಳು, ಅಧ್ಯಕ್ಷರು ಶ್ರೀ ಕುಮಾರೇಶ್ವರ ಪತ್ತಿನ ಸಹಕಾರಿ ಸಂಘದ ಎಂ.ಬಿ. ಹಂಗರಗಿ, ಕರ್ನಾಟಕ ಅಂಧರ ವಿಮೋಚನ ವೇದಿಕೆಯ ಮುದಿಗೆರೆ ರಮೇಶಕುಮಾರ, ನಾಗಯ್ಯ ಜಿ. ಹಿರೇಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಬಸವರಾಜ ಪಿ. ಕೆಂಗನಾಳ, ಗಾನಬನ ಗವಾಯಿಗಳಾದ ಪಂ.ತೋAಟದಾರ್ಯ ಕವಿ ಉಪಸ್ಥಿತರಿರಲಿದ್ದಾರೆ.

ಖ್ಯಾತ ಯುವ ಗಾಯಕರಾದ ಶ್ರೀ ವೆಂಕಟೇಶ ಅಲಕೋಡ ಅವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ.

ಸುಭಾಸಚಂದ್ರ ಕನ್ನೂರ, ಕೈಲಾಸನಾಥ ಮದಭಾವಿ ನಿರೂಪಿಸಲಿದ್ದಾರೆ. ಶ್ರೀ ಪಂ. ತೋಂಟಯರ್ದಾರ್ಯ ಕವಿ ಗವಾಯಿಗಳವರ ಸಂಗೀತದೊAದಿಗೆ ಕಾರ್ಯಕ್ರಮ ಸಂಪನ್ನಗೊಳ್ಳುವುದು ಎಂದು ಪ್ರಕಟಣೆಯಲ್ಲಿ ಪಂಚಾಕ್ಷರಿ ಶಾಸ್ತಿç ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

01-02-2024 EE DIVASA KANNADA DAILY NEWS PAPER

ಪ್ರಶಸ್ತಿ ನೀಡಿಕೆ ಮುಂದೂಡಬಾರದು. ಆಯಾ ವರ್ಷವೇ ನೀಡಿ ಗೌರವಿಸಬೇಕು: ಸಿ.ಎಂ.ಸಿದ್ದರಾಮಯ್ಯ ಸೂಚನೆ

ಈ ದಿವಸ ವಾರ್ತೆ

ಬೆಂಗಳೂರು : ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೀರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೀವಮಾನ ಸಾಧನೆಗಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳನ್ನು 75 ಮಹನೀಯರಿಗೆ ನೀಡಿ ಸನ್ಮಾನಿಸಿ ಮಾತನಾಡಿದರು. 

ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ. ನಮ್ಮ ಸಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದರು. 

ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೀರಿಸುವುದಿಲ್ಲ. ಈ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ ಎಲ್ಲರಿಗೂ ನಾನು ಅಷ್ಟೆ ನಿಷ್ಠುರವಾಗಿ ಹೇಳಿಬಿಡುತ್ತೇನೆ ಎಂದರು. 

ನಮ್ಮ ಸರ್ಕಾರ ಜನರ ನಂಬಿಕೆಗಳನ್ನು ಗೌರವಿಸುತ್ತದೆ. ಬಸವಣ್ಣನವರು ಮೌಡ್ಯ ಮುಕ್ತ, ಜಾತಿ ಮುಕ್ತ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ್ದರು. ಅದಕ್ಕೆ ದೇಹವೇ ದೇಗುಲ ಎಂದು ವಚನಕಾರರು ಪ್ರತಿಪಾದಿಸಿದ್ದಾರೆ. ಆದರೆ ಕೆಲವರು ದೇವಸ್ಥಾನದಲ್ಲಿ ಮಾತ್ರ ದೇವರಿದ್ದಾನೆ ಎಬ್ನುವ ನಂಬಿಕೆಯಿಂದ ಹೋಗುತ್ತಾರೆ. ಅವರ ನಂಬಿಕೆಯನ್ನೂ ಗೌರವಿಸುತ್ತೇವೆ. ದೇವಸ್ಥಾನಕ್ಕೆ ಹೋಗುವವರು ಅವರ ಇಷ್ಟದ ಉಡುಪು ಧರಿಸಿ ಹೋಗಬಹುದು. ಈ ವಿಚಾರದಲ್ಲೂ ನಮ್ಮದೇನೂ ಅಭ್ಯಂತರ ಇಲ್ಲ ಎಂದರು. 

ದೇವರು, ಧರ್ಮದ ಬಗ್ಗೆ ಯಾರ ನಂಬಿಕೆ ಏನೇ ಇದ್ದರೂ ಎಲ್ಲರೂ ಮೊದಲು ಮನುಷ್ಯರಾಗಬೇಕು. ಮನುಷ್ಯ ಮನುಷ್ಯರನ್ನು ದ್ವೇಷಿಸಬಾರದು. ಇದೇ ಅತ್ಯುನ್ನತ ಮೌಲ್ಯ ಎಂದರು. 

ರವೀಂದ್ರ ಕಲಾ ಕ್ಷೇತ್ರ ಮತ್ತು ಸಂಸ ರಂಗ ಮಂದಿರ ನವೀಕರಣಕ್ಕೆ ಇಷ್ಟೆ ಖರ್ಚು ಮಾಡಬೇಕು ಎನ್ನುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. 24 ಕೋಟಿ ಖರ್ಚು ಮಾಡಿ ನವೀಕರಣ ಮಾಡುತ್ತಿದೆ ಎನ್ನುವುದು ಸರಿಯಲ್ಲ. ಮೊತ್ತದ ಬಗ್ಗೆ ಯಾವ ತೀರ್ಮಾನವೂ ಆಗಿಲ್ಲ ಎಂದು ಪುನರುಚ್ಚರಿಸಿದರು. 

2020-21 ರಿಂದ 2023-24ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಪಂಡಿತ್ ಪಂಚಾಕ್ಷರಿ ಗವಾಯಿ ಪ್ರಶಸ್ತಿ, ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಅಕ್ಕಮಹಾದೇವಿ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ಪಂಪ ಪ್ರಶಸ್ತಿ, ಶ್ರೀ ನಿಜಗುಣ ಪುರಂದರ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ, ಶಾಂತಲಾನಾಟ್ಯ ರಾಣಿ ಪ್ರಶಸ್ತಿ, ಸಂತ ಶಿಶುನಾಳ ಷರೀಫ ಪ್ರಶಸ್ತಿ,  ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಬಿ.ವಿ.ಕಾರಂತ ಪ್ರಶಸ್ತಿ, ಡಾ.ಗುಬ್ಬಿ ವೀರಣ್ಣ ಪ್ರಶಸ್ತಿ, ಡಾ.ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದಶ್ರೀ ಪ್ರಶಸ್ತಿ ಪುರಸ್ಕೃತರಾದ ಒಟ್ಟು 75 ಮಂದಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ನೀಡಿ ಗೌರವಿಸಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಶರಣ ಶ್ರೇಷ್ಠರಾದ ಬಸವಣ್ಣನವರನ್ನು ಕನ್ನಡ ನಾಡಿನ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲಾಖೆ ಪರವಾಗಿ ಅಭಿನಂದನೆ ಸಲ್ಲಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Tuesday, January 30, 2024

31-01-2024 EE DIVASA KANNADA DAILY NEWS PAPER

ಜಿಲ್ಲಾ ಮಟ್ಟದ ದಿನ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಹೆಚ್ಚಿನ ಜಾಹೀರಾತು ನೀಡಿ ಸರ್ಕಾರ ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು. : ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ

ಈ ದಿವಸ ವಾರ್ತೆ

ವಿಜಯಪುರ : ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯ ಮಾಧ್ಯಮಪಟ್ಟಿಯಲ್ಲಿರುವ ದಿನ ಮತ್ತು ಪ್ರಾದೇಶಿಕ ಪತ್ರಿಕೆಗಳು ತೀರಾ ಸಂಕಷ್ಟ ಅನುಭವಿಸುತ್ತಿವೆ. ಸರ್ಕಾರದ ಜಾಹೀರಾತುಗಳು ನೀಡುವಲ್ಲಿ ತಾರತಮ್ಯವಾಗುತ್ತಿವೆ. ರಾಜ್ಯಮಟ್ಟದ ಪತ್ರಿಕೆಗಳಿಗೆ ಹೆಚ್ಚಿನ ಜಾಹೀರಾತುಗಳನ್ನು ರಾಜ್ಯ ಸರ್ಕಾರ ನೀಡಿ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ನೀಡದೇ ಅನ್ಯಾಯ ಮಾಡುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ ಗಂಭೀರ ಆರೋಪ ಮಾಡಿದರು.

ಅವರು ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ವಿಜಯಪುರ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 

ಸರ್ಕಾರ ಪತ್ರಿಕೆಗಳಿಗೆ ಕಳೆದ ಒಂದು ವರ್ಷದಿಂದ ಜಾಹೀರಾತು ದರ ಪರಿಷ್ಕರಣೆ ಮಾಡಿಲ್ಲ. ಪ್ರಕಟಗೊಂಡ ಜಾಹೀರಾತುಗಳ ಮೊತ್ತವನ್ನು ಏಜೆನ್ಸಿಗಳಿಗೆ ಕೊಡದೇ ಸತಾಯಿಸುತ್ತಿವೆ. ಇದರಿಂದ ಪತ್ರಿಕೆಗಳನ್ನು ಮುನ್ನೆಡೆಸುವುದಕ್ಕೆ ಸಂಪಾದಕರಿಗೆ ತೀರ ಕಷ್ಟವಾಗಿದೆ. ಇಂತಹ ಕ್ಲೀಷ್ಟ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ಪತ್ರಿಕೆಗಳ ನೆರವಿಗೆ ಬಂದು ತಾರತಮ್ಯ ನೀತಿ ಅನುಸರಿಸದೇ ಜಾಹೀರಾತು ನೀತಿ ಪ್ರಕಾರ ಜಿಲ್ಲಾ ಪ್ರಾದೇಶಿಕ ಪತ್ರಿಕೆಗಳಿಗೆ ಎಲ್ಲಾ ಬಗ್ಗೆಯ ಜಾಹೀರಾತುಗಳನ್ನು ಬಿಡುಗಡೆ ಮಾಡಬೇಕು. ಬಾಕಿ ಇರುವ ಜಾಹೀರಾತು ಬಿಲ್ಲುಗಳನ್ನು ಪಾವತಿಸಬೇಕು. ಹಣ ಕೊಡದೇ ಸತಾಯಿಸುವ ಏಜೆನ್ಸಿಗಳ ಮೇಲೆ ಕಠಿಣ ಕ್ರಮ ಜರಗಿಸಬೇಕು. ಕಾಮಗಾರಿಗಳ ಮೌಲ್ಯಕ್ಕೆ ತಕ್ಕಂತೆ ಟೆಂಡರ್‌ಗಳನ್ನು ಜಿಲ್ಲಾ ಪ್ರಾದೇಶಿಕ ಪತ್ರಿಕೆಗಳಿಗೆ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು. 

ಈ ಸಂದರ್ಭದಲ್ಲಿ ಜಿಲ್ಲಾ ದಿನ ಪತ್ರಿಕೆಗಳ ಸಂಪಾದಕರ ಸರ್ವಾನುಮತದ ನಿರ್ಣಯದಂತೆ ಗುಮ್ಮಟನಗರಿ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಮೊಹ್ಮದ್ ಇರ್ಪಾನ್ ಶೇಖ ಇವರನ್ನು ಅಧ್ಯಕ್ಷರನ್ನಾಗಿ ಮತ್ತು ಬಿಜಾಪುರ ವಾರ್ತಾ ಪತ್ರಿಕೆ ಸಂಪಾದಕರಾದ ಅವಿನಾಶ ಬಿದರಿ ಇವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಕೇಂದ್ರ ಸಂಘದ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರನ್ನಾಗಿ ಕೆ.ಕೆ. ಕುಲಕರ್ಣಿ, ಮಾಧವರಾವ್ ಕುಲಕರ್ಣಿ, ರಾಜು ಕೊಂಡಗೂಳಿ ಇವರನ್ನು ನೇಮಕ ಮಾಡಲಾಯಿತು. 

ಇದೇ ಸಂದರ್ಭದಲ್ಲಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಚನ್ನಬಸವ, ಉಪಾಧ್ಯಕ್ಷರಾದ ಮಂಜುನಾಥಅಬ್ಬಿಗೇರಿ, ಕಾರ್ಯದರ್ಶಿ ರಶ್ಮೀ ಪಾಟೀಲ, ಸುಚೇಂದ್ರ ಲಂಬು, ಖಜಾಂಚಿ ಖಾನ್‌ಸಾಬ ಮೋಮೀನ, ಗದಗ ಜಿಲ್ಲಾಧ್ಯಕ್ಷ ನೂರಮಹ್ಮದ ಅ. ಮಕಾನದಾರ ಸೇರಿದಂತೆ ಜಿಲ್ಲಾ ಪತ್ರಿಕೆಗಳ ಸಂಪಾದಕರಾದ ವಿನೋದ ಸಾರವಾಡ, ಚಿದಂಬರ ಕುಲಕರ್ಣಿ, ಉಮೇಶ ಶಿವಶರಣ, ಕೌಶಲ್ಯ ಪನಾಳಕರ, ಲಕ್ಷ್ಮೀ ವಾಲೀಕಾರ, ಸೀತಾರಾಮ ಕುಲಕರ್ಣಿ, ಫಯಾಜ ಕಲಾದಗಿ, ರಜಾಕ ಬಾಗೇವಾಡಿ, ಪರಶುರಾಮ ಪವಾರ, ಶರತ ಅರ್ಜುಣಗಿ, ಯೂಸೂಪ್ ನೇವಾರ, ಮಲ್ಲಿಕಾರ್ಜಿನ ಮಠ, ಮಲಕು ಹೂಗಾರ, ಶ್ರೀನಿವಾಸ ಸೊರಗೊಂಡ ಮತ್ತಿತ್ತರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, January 25, 2024

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಲಿಂಗ ತಾರತಮ್ಯ ಭಾವನೆ ತೊಡೆದು ಹಾಕಿ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ


ವಿಜಯಪುರ : ಗಂಡು-ಹೆಣ್ಣು ಎಂಬ ಬೇಧಭಾವ ಮಾಡದೇ ಇಬ್ಬರೂ ಸರಿಸಮಾನರು ಎಂಬ ಭಾವನೆ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಶು ಅಭಿವೃದ್ದಿ ಯೋಜನೆ ವಿಜಯಪುರ ನಗರ ಮತ್ತು ಗ್ರಾಮೀಣ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಮಗಳನ್ನು ರಕ್ಷಿಸಿ, ಮಗಳನ್ನು ಓದಿಸಿ ಯೋಜನೆಯಡಿ ಹಮ್ಮಿಕೊಂಡ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಸಮಾಜದಲ್ಲಿನ ಲಿಂಗ ತಾರತಮ್ಯ ಹೋಗಲಾಡಿಸಲು ಪ್ರತಿಯೊಬ್ಬರು ಗಂಡು-ಹೆಣ್ಣು ಎಂಬ ಬೇಧ ಭಾವಕ್ಕೆ ಅಂತ್ಯ ಹಾಡಬೇಕು. ಇಬ್ಬರೂ ಸರಿಸಮಾನರು ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ, ಬಾಲ್ಯ ವಿವಾಹ, ವರದಕ್ಷಿಣೆಯಂತಹ ಸಾಮಾಜಿಕ ಪಿಡುಗಳನ್ನು ತೊಡೆದು ಹಾಕಲು ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಹೇಳಿದರು. 


ಹೆಣ್ಣು ಮಗುವಿಗೆ ರಕ್ಷಣೆ ಮತ್ತು ಧೈರ್ಯ ತುಂಬಬೇಕು. ಹೆಣ್ಣು ಮಗುವಿನ ಜನನದಿಂದ ಗೌರವಪಡುವ ಮನೋಭಾವನೆ ಬೆಳೆಸಿಕೊಳ್ಳುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹೆಣ್ಣಾಗಲಿ, ಗಂಡಾಗಲಿ ಶಿಕ್ಷಣಕ್ಕೆ ಆದ್ಯತೆ ನೀಡಿ, ಸಮಾಜ, ದೇಶಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಉತ್ತಮ ಶಿಕ್ಷಣ ನೀಡುವ ಮೂಲಕ ಮಹದೆತ್ತರಕ್ಕೆ ಬೆಳೆಸಬೇಕು ಎಂದು ಅವರು ಹೇಳಿದರು. 

ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ ಅವರು ಮಾತನಾಡಿ, ಹೆಣ್ಣು ಮಗುವಿನ ಉಜ್ವಲ ಭವಿಷ್ಯ ರೂಪಿಸುವುದು ಪೋಷಕರ ಕರ್ತವ್ಯವಾಗಿದೆ. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಹೆಣ್ಣು ಹೊರೆ ಎಂಬ ಭಾವನೆ ತೊಡೆದು ಹಾಕಬೇಕು. ಬಾಲ್ಯವಿವಾಹ ಪದ್ಧತಿ ಕಾನೂನು ಬಾಹಿರವಾಗಿದ್ದು, ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮ ಕುರಿತು ಪಾಲಕರು ಜಾಗೃತಿ ಹೊಂದಿ ಬಾಲ್ಯ ವಿವಾಹ ತಡೆಗೆ ಮುಂದಾಗಬೇಕು ಎಂದು ಹೇಳಿದರು. 

ಪ್ರಾಸ್ತಾವಿಕವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ಮಾತನಾಡಿ, ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ. ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್, ಜಿಲ್ಲಾ ಮಟ್ಟದದಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ಯೋಜನೆಯಡಿ ಸಹಿ ಅಭಿಯಾನ ಹಾಗೂ ಸೆಲ್ಫಿ ವಿಥ್ ಡಾಟರ್ ಕಾರ್ಯಕ್ರಮ ಮತ್ತು ಯೋಜನೆಯ ಲೋಗೊ, ಮಾಹಿತಿ ಕೈಪಿಡಿ ಮತ್ತು ಕ್ಯಾಲೆಂಡರ್‌ನ್ನು ಬಿಡುಗಡೆಗೊಳಿಸಿದರು. ಭಾಗ್ಯಲಕ್ಷಿö್ಮÃ ಸುಕನ್ಯ ಸಮೃದ್ದಿ ಯೋಜನೆಯ ಫಲಾನುಭವಿಗೆ ಪಾಸ್ ಬುಕ್ ವಿತರಣೆ, ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ, ವಿವಿಧ ಸ್ಪರ್ಧೆ ವಿಜೇತರು ಹಾಗೂ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪಡೆದ ಮಕ್ಕಳಿಗೆ ಪ್ರಶಸ್ತಿ ಹಾಗೂ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸೇರಿದಂತೆ ತಾಲೂಕಿನ ವಿವಿಧ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಮಹಿಳಾ ಮೇಲ್ವಿಚಾರಕರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, January 23, 2024

24-01-2024 EE DIVASA KANNADA DAILY NEWS PAPER

23-01-2024 EE DIVASA KANNADA DAILY NEWS PAPER

22-01-2024 EE DIVASA KANNADA DAILY NEWS PAPER

ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಕಟ್ಟುನಿಟ್ಟಿನ ಸೂಚನೆ


ವಿಜಯಪುರ : ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ, ಕಳ್ಳಭಟ್ಟಿ ಸಾರಾಯಿ ಕಡಿವಾಣಕ್ಕೆ ಕಟ್ಟಿನಿಟ್ಟಿನ ಕ್ರಮ ಕೈಗೊಂಡು, ಕಳ್ಳಭಟ್ಟಿ ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಕಳ್ಳಭಟ್ಟಿ ನಿರ್ಮೂಲನೆ ಕುರಿತು ರಚಿಸಲಾದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಳ್ಳಭಟ್ಟಿ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಕುರಿತು ಗ್ರಾಮ ಸಭೆಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಆರೋಗ್ಯ ಕೇಂದ್ರಗಳ ವೈದ್ಯರು ಹಾಗೂ ಸರ್ಕಾರೇತರ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರನ್ನೊಳಗೊಂಡ ಗ್ರಾಮ ಸಭೆಗಳನ್ನು ಆಯೋಜಿಸಿ ಸೂಕ್ತ ಜಾಗೃತಿ ಮೂಡಿಸುವಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಅವರು ಸೂಚನೆ ನೀಡಿದರು.

ಕಳ್ಳಭಟ್ಟಿ ಮದ್ಯ ತಯಾರಿಕೆ, ಸಾಗಾಟ ಹಾಗೂ ಮಾರಾಟದಂತಹ ಅಕ್ರಮಗಳನ್ನು ಕಂಡುಬAದಲ್ಲಿ ಅಬಕಾರಿ ಇಲಾಖೆ ಗಮನಕ್ಕೆ ತರುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಾಹಿತಿ ನೀಡಿದ ವ್ಯಕ್ತಿಯ ಮಾಹಿತಿಯನ್ನು ಗೌಪ್ಯವಾಗಿರಿಸುವ ಕುರಿತು ಹಾಗೂ ಮಾಹಿತಿ ನೀಡಿದವರಿಗೆ ಸೂಕ್ತ ಪ್ರೊತ್ಸಾಹ ಒದಗಿಸುವ ಕುರಿತು ವ್ಯಾಪಕ ಪ್ರಚಾರ ಕೈಗೊಂಡು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಬೇಕು. ಅದರಂತೆ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನರು ಭಾಗವಹಿಸಿರುವುದರಿಂದ ಇಂತಹ ಕಾರ್ಯಕ್ರಮಗಳಲ್ಲಿ ಕಳ್ಳಭಟ್ಟಿ ಮದ್ಯ ತಯಾರಿಕೆ, ಮಾರಾಟದಂತಹ ಅಕ್ರಮಗಳ ಕುರಿತು ಅಬಕಾರಿ ಇಲಾಖೆಯಿಂದ ಅರಿವು ಮೂಡಿಸಲು ಕ್ರಮ ವಹಿಸಬೇಕು. ಕಳ್ಳಭಟ್ಟಿ ತಯಾರಿಕೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಮೇಲೆ ಸೂಕ್ತ ನಿಗಾ ಇಟ್ಟು, ಇಂತಹ ವಸ್ತುಗಳ ಸಾಗಾಟ ಕಂಡು ಬಂದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು. 

ಅಬಕಾರಿ ಇಲಾಖೆ ಅಧಿಕಾರಿಗಳು, ಕಂದಾಯ, ಪೊಲೀಸ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರ್‌ರಾಜ್, ಮೀನುಗಾರಿಕೆ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಕಳ್ಳಭಟ್ಟಿ ಕೇಂದ್ರಗಳಿಗೆ ದಾಳಿ ನಡೆಸಬೇಕು. ಕಳ್ಳಭಟ್ಟಿ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ನೊಂದಣಿಯಾಗದೇ ಇರುವ ವಾಹನಗಳಿಗೆ ಸಂಬAಧಿಸಿದAತೆ ವಾಹನ ಮಾಲೀಕರು ಪೂರಕ ದಾಖಲೆಗಳನ್ನು ಹಾಜರುಪಡಿಸಿದ್ದಲ್ಲಿ ಬಿಡುಗಡೆಗೆ ಕ್ರಮ ವಹಿಸಬೇಕು. ಬೇನಾಮಿ ದಾಖಲೆಯಿಲ್ಲದೇ ಇಂಜಿನ್ ನಂಬರ್ ಮತ್ತು ಚೆಸ್ಸಿ ನಂಬರ್ ಇರದೇ ಇರುವ ವಾಹನಗಳ ವಾರಸುದಾರರ ಮೇಲೆ ಕಾನೂನಾತ್ಮಕ ಕ್ರಮ ಜರುಗಿಸಬೇಕು. ಕಳ್ಳಭಟ್ಟಿ ಮುಕ್ತ ಜಿಲ್ಲೆಯನ್ನಾಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬAಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು. 

ಸಭೆಯಲ್ಲಿ ಅಬಕಾರಿ ಇಲಾಖೆ ಆಯುಕ್ತ ಸಂಗನಗೌಡ ಪಿ. ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Saturday, January 20, 2024

ಜ.23ರಿಂದ ಜಿಲ್ಲಾ ಅಹಿಂದ ನಾಯಕರ ತಾಲೂಕು ಪ್ರವಾಸ

ಈ ದಿವಸ ವಾರ್ತೆ

ವಿಜಯಪುರ : ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದಿಂದ ಜ. 28 ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ತಾಲೂಕಾವಾರು ಪೂರ್ವಭಾವಿ ಸಭೆ ನಡೆಸಲು ಜಿಲ್ಲಾ ಅಹಿಂದ ನಾಯಕರು ಜ. 23 ರಿಂದ ಈ ಕೆಳಗಿನಂತೆ ತಾಲೂಕಗಳ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ. 23 ರಂದು ಬೆಳಗ್ಗೆ 10 ಗಂಟೆಗೆ ದೇವರಹಿಪ್ಪರಗಿ, ಮಧ್ಯಾಹ್ನ 12 ಗಂಟೆಗೆ ಸಿಂದಗಿ, 2 ಗಂಟೆಗೆ ಅಲಮೇಲ 3 ಗಂಟೆಗೆ ಇಂಡಿ ಹಾಗೂ 5:30 ಕ್ಕೆ ಚಡಚಣದಲ್ಲಿ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಜ. 24 ರಂದು ಬೆಳಿಗ್ಗೆ 11 ಗಂಟೆಗೆ ಬಸವನ ಬಾಗೇವಾಡಿ, 1 ಗಂಟೆಗೆ ತಾಳಿಕೋಟೆ, 3 ಗಂಟೆಗೆ ಮುದ್ದೇಬಿಹಾಳ ಹಾಗೂ ಸಂಜೆ 5 ಗಂಟೆಗೆ ನಿಡಗುಂದಿಯಲ್ಲಿ ಜ. 25 ರಂದು ಬೆಳಗ್ಗೆ 10 ಗಂಟೆಗೆ ತಿಕೋಟಾ ಮಧ್ಯಾಹ್ನ 12 ಗಂಟೆಗೆ ಬಬಲೇಶ್ವರ, 3 ಗಂಟೆಗೆ ಕೊಲ್ದಾರ ಹಾಗೂ ಸಂಜೆ 6 ಕ್ಕೆ ವಿಜಯಪುರದಲ್ಲಿ ಸಭೆ ನಡೆಸಲಿದ್ದಾರೆ. ಅಹಿಂದ ಮುಖಂಡರಾದ ಎಸ್. ಎಂ. ಪಾಟೀಲ್ ಗಣಿಹಾರ, ಸೋಮನಾಥ ಕಳ್ಳಿಮನಿ, ನಾಗರಾಜ್ ಲಂಬು, ಜಕ್ಕಪ್ಪ ಯಡವೆ, ರವಿ ಕಿತ್ತೂರ, ವಿ.ಎಸ್. ಗಸ್ತಿ, ಪ್ರಭುಗೌಡ ಪಾಟೀಲ, ರಾಜಶ್ರೀ ಯರನಾಳ, ಶಿವಾಜಿ ಮೆಟಗಾರ, ಸಂಜು ಕಂಬಾಗಿ, ದೇವಾನಂದ ಲಚ್ಯಾಣ, ಚಂದ್ರಕಾಂತ್ ಶಿಂಘ, ಮಲ್ಲು ಬಿದರಿ, ಸತೀಶ್ ಅಡವಿ, ಅಭಿಷೇಕ್ ಚಕ್ರವರ್ತಿ, ಬಸವರಾಜ್ ಹಡಪದ, ಸಾಯಿಬಣ್ಣ ಮಡಿವಾಳ ಭಾಗವಹಿಸಲಿದ್ದಾರೆಂದು ಜಿಲ್ಲಾ ಅಹಿಂದ ಘಟಕ ಜಂಟಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

21-01-2024 EE DIVASA KANNADA DAILY NEWS PAPER

Sunday, January 14, 2024

ವಿಜಯಪುರ ಜಿಲ್ಲೆಯ ಶ್ರೀ ಶ್ರೀ ಪೂಜ್ಯ ಗೋಪಾಲ ನಂದುಲಾಲ ಮಹಾರಾಜಗೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರೋಹಣ ಕಾರ್ಯಕ್ರಮಕ್ಕೆ ಆಹ್ವಾನ


ವಿಜಯಪುರ: ದಿನಾಂಕ : 22-01-2024 ರಂದು ಅಯೋಧ್ಯಾದಲ್ಲಿನ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಲ್ಲಿ ಶ್ರೀ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರೋಹಣಕ್ಕೆ ವಿಜಯಪುರ ಜಿಲ್ಲೆಯಿಂದ ಶ್ರೀ ಪೂಜ್ಯ ಗೋಪಾಲ ನಂದುಲಾಲ ಮಹಾರಾಜ ಅವರನ್ನು ಆಹ್ವಾಸಲಾಗಿದೆ. 

ಈ ಸಂದರ್ಭ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಬಂಜಾರ ಸಮಾಜಕ್ಕೂ ಪ್ರಾತಿನಿಧ್ಯ ನೀಡಿ ಆಹ್ವಾನ ನೀಡಿದ್ದು ಖುಷಿಯ ಸಂಗತಿ. ರಾಮ ಮಂದಿರದ ಟ್ರಸ್ಟ್ ಸಮಿತಿಯವರಿಗೆ ಗೌರವಪೂರ್ವಕವಾಗಿ ಕೃತಜ್ಞತೆಗಳನ್ನು ಸಲ್ಲಿಸುವೆ. ವಿಜಯಪುರ ಜಿಲ್ಲೆಯ ತೊರವಿ ತಾಂಡಾ ಎಲ್.ಟಿ.ನಂ.1 ರಿಂದ ಅಯೋಧ್ಯೆಗೆ ಹೋಗುತ್ತಿರುವುದು ನನ್ನ ಸೌಭಾಗ್ಯ. ಸಂತ ಸೇವಾಲಾಲ ಮಹಾರಾಜರ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಆಶೀರ್ವಾದವೇ ಕಾರಣ ಎನ್ನಲು ಹೆಮ್ಮೆ ಎನಿಸುತ್ತಿದೆ. ಶ್ರೀ ರಾಮನ ದರ್ಶನಕ್ಕೆ ನಾನೂ ಕಾತರನಾಗಿದ್ದೇನೆ. ಸಮಸ್ತ ರಾಮ ಭಕ್ತರಿಗೆಲ್ಲರಿಗೂ ಮನಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಋಷಿ ಆನಂದ ಅಧಿಕಾರ ಸ್ವೀಕಾರ

 


ಈ ದಿವಸ ವಾರ್ತೆ

ವಿಜಯಪುರ : ವಿಜಯಪುರ ಜಿಲ್ಲಾ ಪಂಚಾಯತಿಯ ನೂತನ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಋಷಿ ಆನಂದ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ಶಿಂಧೆ ಅವರು ಬೆಳಗಾವಿ ಜಿಲ್ಲೆಗೆ ವರ್ಗಾವಣೆಗೊಂಡಿರುವುದರಿಂದ ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹುದ್ದೆಗೆ ಋಷಿ ಆನಂದ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.

ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹುದ್ದೆಗೆ ವರ್ಗಾವಣೆಗೊಂಡು ಆಗಮಿಸಿದ ಋಷಿ ಆನಂದ ಅವರನ್ನು ನಿರ್ಗಮಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸೇರಿದಂತೆ ಜಿಲ್ಲಾ ಪಂಚಾಯತಿಯ ವಿವಿಧ ಅಧಿಕಾರಿಗಳು, ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

Saturday, January 13, 2024

ಸಮೃದ್ಧಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

ವಿಜಯಪುರ: ನಗರದ ಡಾ|| ರಾಜಕುಮಾರ ಲೇಔಟನಲ್ಲಿರುವ ಸಮೃದ್ದಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದಿAದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ವಿಜೃಂಭಣೆಯಿAದ ಆಚರಿಸಿದರು. ಸಂಸ್ಥೆಯ ಮುಖ್ಯಸ್ಥ ರಮೇಶ ಮಾತನಾಡಿ, ವಿಶ್ವ ಕಂಡ ಅಪರೂಪದ ಮಹಾನ್ ಚೇತನ, ಇಡೀ ವಿಶ್ವವೇ ಭಾರತದತ್ತ ಕಣ್ಣು ತೆರೆದುನೋಡುವಂತೆ ಮಾಡಿದ ಮಹಾನ್ ಶಕ್ತಿ ಸ್ವಾಮಿ ವಿವೇಕಾನಂದರು ಎಂದು ಹೇಳಿದರು. 
ಇದೇ ಸಂದರ್ಭದಲ್ಲಿ ಮುಖ್ಯ ಗುರುಮಾತೆ ಶ್ರೀಮತಿ ಕಾಂತಾ ಬಿಂದುರಾವ ಕುಲಕರ್ಣಿ ಮಾತನಾಡಿದರು. ಈ ಒಂದು ಕಾರ್ಯಕ್ರಮದಲ್ಲಿ ಶ್ರೀಮತಿ ಸವಿತಾ ಭಜಂತ್ರಿ, ಶ್ರಿಮತಿ ಪರಿಮಳಾ ಕುಲಕರ್ಣಿ, ಶ್ರಿದೇವಿ ಶಿಂದೆ, ಜ್ಯೊತಿ ಬಸರಗಿ, ಅರಚನಾ ಕನಮಡಿ, ಕವಿತಾ ರಾಠೋಡ, ಭವಾನಿ ದೊಡ್ಡ ಪತ್ತಾರ, ವಿಶಾಲಾಕ್ಷಿ ಅಥಣಿ ಮುಂತಾದವರು ಪಾಲ್ಗೋಂಡಿದ್ದರು.

Wednesday, January 10, 2024

11-01-2024 EE DIVASA KANNADA DAILY NEWS PAPER

ಭಾರತದ ಇತಿಹಾಸದಲ್ಲೇ ಯಾವ ಸರ್ಕಾರವೂ ಇಷ್ಟು ದೊಡ್ಡ ಜನೋಪಯೋಗಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ: ಸಿಎಂ

 

ಬೆಂಗಳೂರು : ನಾವು ಸತ್ಯ ಹೇಳಿ  ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ  ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರ ಸಭೆಯಲ್ಲಿ ಅವರು ಮಾತನಾಡಿದರು.

ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರುಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು.  ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿಗಳನ್ನು ಕಾರ್ಯಕ್ರಮಗಳನ್ನು  ಜಾರಿ ಮಾಡಿಲ್ಲ. ಇದರಿಂದ  ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು , ಹಿಂದುಳಿದವರು , ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದರು. 

*ನಮ್ಮವರೇ ಅಪಪ್ರಚಾರ ಮಾಡುವುದನ್ನು ಬಿಡಬೇಕು.*

ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಿ. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು  ಹಣವಿಲ್ಲದೆ ನಡೆಯುತ್ತಿದೆಯೇ ಎಂದು ಪ್ರಶ್ನಿಸಿದ ಸಿಎಂ, ನಮ್ಮವರೇ ಬಿಜೆಪಿಯವರ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು.  ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ ಎಂದರು.

*ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ  ತೊಂದರೆಯಾಗಿಲ್ಲ*

ಗ್ಯಾರಂಟಿ ಜಾರಿಯಾಗಿರದಿದ್ದರೆ ಬರಗಾಲದ ಹಾಹಾಕಾರ ಎದ್ದಿರುತಿತ್ತು. ರಾಜ್ಯದ 223 ತಾಲ್ಲೂಕುಗಳು  ಬರಗಾಲ ಪೀಡಿತವಾಗಿದ್ದರೂ ಮೇವಿಗೆ, ಕುಡಿಯುವ ನೀರಿಗೆ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತೊಂದರೆಯಾಗಿಲ್ಲ ಎಂದರು.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ  ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಸಭೆ ಕರೆದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ಅಮಿತ್ ಷಾ ಅವರನ್ನು  ಭೇಟಿ ಮಾಡಿದಾಗ ಭರವಸೆ ನೀಡಿದ್ದರು. ಕೇಂದ್ರ ಸರ್ಕಾರ ಕೊಡುವವರೆಗೆ ಕಾಯಬಾರದು ಎಂದು 2000 ರೂ ವರೆಗೆ  ರೈತರಿಗೆ ಇನ್ ಪುಟ್ ಸಬ್ಸಿಡಿ ಪರಿಹಾರ ಪ್ರಾರಂಭಿಸಲಾಗಿದೆ ಎಂದರು.

ಬಿಜೆಪಿಯವರು ಬರಪರಿಹಾರ ಕೊಟ್ಟಿಲ್ಲ ಎಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಇವರಿಗೆ ಮರ್ಯಾದೆ ಇದೆಯೇ. 25 ಸಂಸದರು ರಾಜ್ಯದಿಂದ ಇದ್ದರೂ ಒಂದು ದಿನವೂ ಈ ಬಗ್ಗೆ ಮಾತನಾಡಿಲ್ಲ. 15 ನೇ ಹಣಕಾಸಿನ ಆಯೋಗವು 14-15 ನೇ ಸಾಲಿಗೆ 1.07 % ಹಣ ಕಡಿಮೆ ಮಾಡಿದರು. 1ಲಕ್ಷ  66 ಸಾವಿರ ಕೋಟಿ ರೂ.ಗಳು ನಮಗೆ ಬರಬೇಕಿತ್ತು. 15 ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5495 ಕೋಟಿ ರೂ.ಗಳನ್ನು ಕೊಡುವುದಾಗಿ ಹೇಳಿ ಕೊಟ್ಟಿಲ್ಲ. ಕರ್ನಾಟಕದ ಬಗ್ಗೆ ಇವರಿಗೆ ಕಾಳಜಿ ಇದೆಯೇ  ಎಂದು ಪ್ರಶ್ನಿಸಿದರು. 2018-19 ರಲ್ಲಿ ಕೇಂದ್ರದ ಬಜೆಟ್ ಗಾತ್ರ 23 ಲಕ್ಷ ಕೋಟಿ ರೂ.ಗಳಿತ್ತು . 35 ಸಾವಿರ ಕೋಟಿ ನಮ್ಮ ಪಾಲು ಇತ್ತು. ಈಗ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ ಬರುವುದು ಕೇವಲ 37 ಸಾವಿರ ಕೋಟಿ. ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಅವರು ಕೊಡುವುದು ನಮ್ಮ ತೆರಿಗೆಯ ಹಣವನ್ನೇ ಎಂದರು.
ಸೆಸ್ , ಸರ್ಚಾರ್ಜ್, ನಲ್ಲಿ ನಮಗೆ ಪಾಲಿಲ್ಲ. 4 ಲಕ್ಷ ಕೋಟಿ ರೂ.ಗಳನ್ನು ನಮ್ಮ ರಾಜ್ಯದಿಂದ ಸಂಗ್ರಹ ಮಾಡುತ್ತಾರೆ. 52 ಸಾವಿರ ಕೋಟಿ ರೂ ಗಳನ್ನು ಮಾತ್ರ ಕೊಡುತ್ತಾರೆ. ಎಲ್ಲಾ ಶಾಸಕರು, ಸಂಸದರು ಇದನ್ನು ಹೇಳಬೇಕು. ಈ 10 ವರ್ಷಗಳಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಜಿಎಸ್ ಟಿ ಯಿಂದಾಗುವ  ನಷ್ಟವನ್ನು ಭರಿಸುವುದಾಗಿ ಹೇಳಿದ್ದರೂ, ನಮಗೆ ಹಣವನ್ನು ಕೊಟ್ಟಿಲ್ಲ.  ರಾಜ್ಯದ  ಸಂಸದರೂ  ತುಟಿ ಪಿಟಕ್ಕೆನ್ನದೇ ಇದ್ದಾರೆ ಎಂದರು. ಆರ್ಥಿಕವಾಗಿ ಸ್ವಲ್ಪ ಭಾರವಾದರೂ ಗ್ಯಾರಂಟಿಗಳು ಜನರಿಗೆ ಮುಂದಿನ ದಿನಗಳಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿಯನ್ನು ತುಂಬುತ್ತದೆ ಎಂದರು.

*ಪಟ್ಟಿ ಕಳಿಸಿ*
ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯಗಳ ಬಗ್ಗೆ ಶಾಸಕರಿಗೆ ಪಟ್ಟಿ  ಕಳಿಸಿಕೊಟ್ಟು ಇದನ್ನು ಜನರಿಗೆ ತಲುಪಿಸಬೇಕು. ಜನರಿಗೆ ನಮ್ಮ ಗ್ಯಾರಂಟಿಗಳನ್ನು ತಲುಪಿಸಬೇಕು  ಎಂದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸಮೃದ್ಧಿ ಶಾಲೆಗೆ ಪ್ರಿಂಟರ್ ದೇಣಿಗೆ

ವಿಜಯಪುರ : ನಗರದ ರಾಜಕುಮಾರ ಲೇಔಟನಲ್ಲಿರುವ ಸಮೃದ್ಧಿ ಶಾಲೆಯಲ್ಲಿ ಇಂದು ಶೇಠ್ ತಾಪಿದಾಸ ತುಳಸಿದಾಸ ಮತ್ತು ವೈಜದಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ ರೂ. 20000 ಮೊತ್ತದ ಪ್ರಿಂಟರ್ ಅನ್ನು ಉಚಿತವಾಗಿ ನೀಡಿದರು. ಸಂಸ್ಥೆಯ ಸಮನ್ವಯಾಧಿಕಾರಿ ಶ್ರೀಯುತ ವಿಶ್ವನಾಥ .ಎಮ್. ಸಿಂದಗಿ ಸಮೃದ್ಧಿ ಶಾಲೆಯಲ್ಲಿ ಪ್ರಿಂಟರ್ ನ್ನು ಉದ್ಘಾಟಿಸಿ ಮಾತನಾಡಿ ಈ ಒಂದು ಪ್ರಿಂಟರನ್ನು ಮಕ್ಕಳ ಉದಯೋನ್ಮುಖ ಬೆಳವಣಿಗೆಗೆ ಉಪಯೋಗಿಸಿಕೊಳ್ಳಲು ಸಲಹೆ ನೀಡಿದರು. 

ಮುಖ್ಯ ಅಥಿತಿಗಳಾದ ಶ್ರೀಯುತ ಅಂಬಾದಾಸ ಜೋಷಿ ಅವರು ಮಾತನಾಡಿ ಇಂದಿನ ತಾಂತ್ರಿಕ ಯುಗದಲ್ಲಿ ಮಹಾನ್ ದಾನಿಗಳ ಕೊಡುಗೆಯನ್ನು ಶ್ಲಾಘಿಸಿದರು.

ಈ ಒಂದು ಕಾರ್ಯಕ್ರಮದಲ್ಲಿ ಸಂಸ್ಥೆಯಮುಖ್ಯಸ್ಥರಾದ ಶ್ರಿಯುತ ರಮೇಶರವರು ಮುಖ್ಯ ಗುರುಮಾತೆ ಕಾಂತಾ ಬಿ ಕುಲಕರಣಿ, ಶ್ರೀಮತಿ ಸವಿತಾ ಭಜಂತ್ರಿ , ಶ್ರೀಮತಿ ಶ್ರೀದೇವಿ ಶಿಂದೆ , ಶ್ರೀಮತಿ ಪರಿಮಳಾ ಕುಲಕರಣಿ, ಶ್ರೀಮತಿ ಜ್ಯೋತಿ ಬಸರಗಿ , ಶ್ರೀಮತಿ ಅರಚನಾ ಕನಮಡಿ ,ಶ್ರೀಮತಿ ಕವಿತಾ ರಾಠೋಡ , ಶ್ರೀಮತಿ ಭವಾನಿ ದೊಡ್ಡ ಪತ್ತಾರ, ಶ್ರೀಮತಿ ವಿಶಾಲಾಕ್ಷಿ ಅಥಣಿ ಮುಂತಾದವರು ಪಾಲ್ಗೊಂಡಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, January 9, 2024

10-01-2024 EE DIVASA KANNADA DAILY NEWS PAPER

ಕಬ್ಬು ಕಟಾವು ಗ್ಯಾಂಗ್‌ನವರಿAದ ಲಗಾಣಿ ವಸೂಲಾತಿಗೆ ಕಡಿವಾಣ ಹಾಕಲು ಅಖಂಡ ಕರ್ನಾಟಕ ರೈತ ಸಂಘದ ಮನವಿ


 ವಿಜಯಪುರ ಕಬ್ಬು ಕಟಾವು ಗ್ಯಾಂಗ್‌ನವರಿAದ ಲಗಾಣಿ ವಸೂಲಾತಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ವಿಜಯಪುರ ಜಿಲ್ಲೆ ಮೊದಲೇ ಬರಗಾಲ ಜಿಲ್ಲೆ ಎಂಬ ಹಣೆ ಪಟ್ಟಿಯನ್ನು ಕಟ್ಟಿಕೊಂಡಿದ್ದು ಸಕಾಲಕ್ಕೆ ಮಳೆಯಾಗದೆ ರೈತರು ಎಲ್ಲ ರೀತಿಯಿಂದಲೂ ಸಂಕಷ್ಟ ಎದುರಿಸುತ್ತಿದ್ದಾರೆ. ಅದರಲ್ಲಿ ಜಿಲ್ಲೆಯಲ್ಲಿ ಕಬ್ಬು ಬೆಳೆದ ರೈತರು Pಠಾವು ಮಾಡುವ ಸಂದರ್ಭದಲ್ಲಿ ಗ್ಯಾಂಗಿನವರು ಬೇಕಾ ಬಿಟ್ಟಿ ಲಗಾಣಿ ಕೇಳುತ್ತಿರುವುದರಿಂದ ಕಬ್ಬು ಬೆಳೆದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಕಬ್ಬು ಬೆಳೆಗಾರರು ಅಂದು ಕೊಂಡ ಹಾಗೆ ಸಮಯಕ್ಕೆ ಸರಿಯಾಗಿ ಕಬ್ಬು ಕಟಾವು ಆರಂಭವಾಗಿದ್ದರೆ ಜಿಲ್ಲೆಯಲ್ಲಿ ಈಗಾಗಲೇ ಶೇ 40 ರಿಂದ 50 ರಷ್ಟು ಕಬ್ಬು ಕಟಾವು ಆಗಿ ಕ್ರಸ್ಸಿಂಗ್ ಆಗಬೇಕಾಗಿತ್ತು ಆದರೆ ಕಬ್ಬು ಕಟಾವು ಮಾಡುವ ಗ್ಯಾಂಗಿನವರು ಅಂದಾಜು 20 ರಿಂದ 25 ಟನ್ ಕಟಾವು ಮಾಡಲು ನಾಲ್ಕರಿಂದ ಐದು ಸಾವಿರ ರೂಪಾಯಿ ವರೆಗೆ ಲಗಾಣಿ ಕೇಳುತ್ತಾರೆ. ಯಂತ್ರದ ಮುಖಾಂತರ ಕಟಾವು ಮಾಡಿಸಿದರೆ ಅವರು ಕೂಡ ಪ್ರತಿ ಎಕರೆಗೆ 7 ಸಾವಿರದಂತೆ ಹಣ ಕೇಳುತ್ತಾರೆ. ಇದರಿಂದ ಕಬ್ಬು ಬೆಳೆದ ರೈತರು ಗ್ಯಾಂಗಿನವರಿAದ ಶೋಷಣೆಗೆ ಒಳಗಾಗುತ್ತಿದ್ದಾರೆ. ಒಂದು ವೇಳೆ ಲಗಾಣಿ ಕೊಡದಿದ್ದರೆ ಕಬ್ಬು ಕಟಾವು ಮಾಡುವುದಿಲ್ಲ ಎಂದು ಹೇಳುತ್ತಾರೆ. ಆ ಗ್ಯಾಂಗಿನವರಿಗೆ ಸಕ್ಕರೆ ಕಾರ್ಖಾನೆಯವರೇ ನೋಡಿಕೊಳ್ಳಬೇಕು. ಮೊದಲೇ ಬರಗಾಲದಿಂದ ತತ್ತರಿಸಿದ ರೈತರಿಗೆ ಗ್ಯಾಂಗಿನವರಿAದ ಒಂದು ರೀತಿ ಲಗಾಣಿ ವಿಷಯದಲ್ಲಿ ಕಬ್ಬು ಬೆಳೆದ ರೈತರಿಗೆ ತಲೆ ನೋವಾಗಿ ಪರಿಣಮಿಸಿದೆ. ಪ್ರತಿ ಸಲ ಆರಂಭದಲ್ಲಿ ಕಡಿಮೆ ಲಗಾಣಿ 1000 ದಿಂದ 1500 ರೂಪಾಯಿ ವರೆಗೆ ಕೊಡುತ್ತಿದ್ದ ರೈತರಿಗೆ ಇದೀಗ ಕಟಾವು ತಡವಾಗಿ ಆರಂಭಿಸಿದ್ದರಿAದ ಕಟಾವು ಮಾಡುವ ಕಾರ್ಮಿಕರು ಒಂದು ಟ್ರಾö್ಯಕ್ಟರ್ (ಡಬಲ್ ಟ್ರೆöÊಲರಿಗೆ) ಕನಿಷ್ಠ 7 ಸಾವಿರ ರೂಪಾಯಿ ಲಗಾಣಿ ಕೇಳುತ್ತಿದ್ದಾರೆಂದು ಕಬ್ಬು ಬೆಳೆದ ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಇದರಿಂದ 10 ಟನ್ ಕಬ್ಬಿಗೆ ಒಂದು ಟನ್ ಕಬ್ಬಿನ ಬೆಲೆಗಿಂತಲೂ ಹೆಚ್ಚಿಗೆ ಕೊಡಬೇಕಾಗುತ್ತದೆ. ಇದು ರೈತರಿಗೆ ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಲಗಾಣಿ ಕೊಡಲು ಒಪ್ಪದಿದ್ದರೆ. ಬೇರೆ ರೈತನ ಹೊಲಕ್ಕೆ ಹೋಗುತ್ತಾರೆ. ಹೀಗಾಗಿ ರೈತರು ಜಿದ್ದಿಗೆ ಬಿದ್ದು ಲಗಾಣಿ ಕೊಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಅವಧಿ ಮೀರಿದ ಕಬ್ಬಿಗೆ ಗರಿ ಮೂಡಿದೆ. ಇದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸೇರಿದಂತೆ ನಾನಾ ಕಾರಣಗಳಿಂದ ಆಕಸ್ಮಿಕವಾಗಿ ಬೆಂಕಿ ತಗುಲಿ ಆಳೆತ್ತರಕ್ಕೆ ಬೆಳೆದು ನಿಂತ ಕಬ್ಬು ಬೆಂಕಿಗೆ ಆಹುತಿಯಾಗುತ್ತಿವೆ. ಈ ರೀತಿಯಾದ ಕಬ್ಬನ್ನು ಮರುದಿನವೇ ಕಾರ್ಖಾನೆಗೆ ಸಾಗಿಸಬೇಕು. ಇಲ್ಲದಿದ್ದರೆ ಕಬ್ಬಿನಲ್ಲಿನ ಸಕ್ಕರೆ ಅಂಶ ಸೋರಿಕೆಯಾಗಿ ಇಳುವರಿ ಕಡಿಮೆಯಾಗುತ್ತದೆ. ಕಬ್ಬಿಗೆ ಬೆಂಕಿ ಬಿದ್ದ ತಕ್ಷಣವೇ ಸಕ್ಕರೆ ಕಾರ್ಖಾನೆಯವರಿಗೆ ತಿಳಿಸಿದರು ಎರಡ್ಮೂರು ದಿನಗಳ ನಂತರ ಕಬ್ಬು ಕಟಾವು ಮಾಡಲು ಗ್ಯಾಂಗ್ ಕಳುಹಿಸಿಕೊಡುತ್ತಾರೆ. ಹೀಗಾಗಿ ಸಾಲ ಮಾಡಿ ಕಬ್ಬು ಬೆಳೆದರೂ ಮಾಡಿದ ಖರ್ಚು ಬಾರದ ಸ್ಥಿತಿ ನಿರ್ಮಾಣವಾಗುತ್ತಿದೆ. ಒಟ್ಟಾರೆಯಾಗಿ 14 ತಿಂಗಳು ಕಷ್ಟ ಪಟ್ಟು ಕಬ್ಬು ಬೆಳೆದಿರುವ ರೈತರಿಗೆ ಒಂದಿಲ್ಲೊAದು ಸಮಸ್ಯೆಗಳು ಎದುರಾಗುತ್ತಿವೆ. ಇದೀಗ ಲಗಾಣಿ ಬಿಸಿಗೆ ಕಬ್ಬು ಬೆಳೆದ ರೈತರು ನಲಗುವಂತಾಗಿದೆ. ಆದ್ದರಿಂದ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಎಲ್ಲ ಸಕ್ಕರೆ ಕಾರ್ಖಾನೆಯ ಮುಖ್ಯಸ್ಥರ ಸಭೆ ನಡೆಸಬೇಕು ಹಾಗೂ ಸಭೆ ದಿನಾಂಕ ನಿಗಧಿಪಡಿಸಿ ಸಭೆಯಲ್ಲಿ ರೈತ ಮುಖಂಡರನ್ನು ಆಹ್ವಾನಿಸಬೇಕು. ಕಬ್ಬು ಬೆಳೆದ ರೈತರಿಂದ ಗ್ಯಾಂಗಿನವರು ಲಗಾಣಿ ಕೇಳದಂತೆ ಕಡಿವಾಣ ಹಾಕಬೇಕೆಂದು ಅಖಂಡ ಕರ್ನಾಟಕ ರೈತ ಸಂಘ ಒತ್ತಾಯಿಸುತ್ತದೆ.

ಈ ಸಂದರ್ಭದಲ್ಲಿ ಹೊನಕೇರೆಪ್ಪ ತೆಲಗಿ, ಬಾಲಪ್ಪಗೌಡ ಲಿಂಗದಳ್ಳಿ, ಸೋಮನಗೌಡ ಕೋಳೂರ, ರಾಮನಗೌಡ ಹಾದಿಮನಿ, ಬಸನಗೌಡ ಪಾಟೀಲ, ಯಂಕನಗೌಡ ಪಾಟೀಲ, ಹಣಮಂತರಾಯ ಗುಣಕಿ, ಅಪ್ಪಾಸಾಹೇಬಗೌಡ ಕೊಳಗೇರಿ, ಮಲ್ಲಿಕಾರ್ಜುನ ನಾವಿ, ಹಣಮಗೌಡ ಮಂಗ್ಯಾಳ, ಶಿವನಗೌಡ ಪಾಟೀಲ, ರುದ್ರಗೌಡ ಬಿರಾದಾರ, ಬಸನಿಂಗಪ್ಪಗೌಡ ಬಿರಾದಾರ, ಶರಣಪ್ಪಗೌಡ ನರಸಲಗಿ, ಭೀಮಶಪ್ಪಗೌಡ ಬಿರಾದಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, January 4, 2024

ನೂತನ ಶಾಲಾ ಸುದಾರಣ ಸಮಿತಿ ರಚನೆ


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ 

ವಿಜಯಪುರ:

ಮೋರಟಗಿ ಸ್ಥಳಿಯ ಗ್ರಾಮದ ಜನತಾ ಕಾಲೂನಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನೂತನ ಶಾಲಾ ಸುದಾರಣ ಸಮಿತಿ ರಚನೆ ಮಾಡಲಾಯಿತು.
ಸರಕಾರ ಮಕ್ಕಳ ಶಿಕ್ಷಣಕ್ಕಾಗಿ ಹತ್ತು ಹಲವು ವಿಧಗಳಲ್ಲಿ ಅನುದಾನ ಒದಗಿಸಿ ಮಕ್ಕಳ ಕಲಿಕಾ ವೃತ್ತಿಗೆ ಸಹಕಾರ ನೀಡುತ್ತಿದ್ದು ಇದನ್ನು ಸದ್ಭಳಕೆ ಮಾಡಲು ಸರಕಾರಿ ಶಾಲೆಯಲ್ಲಿ ವಿದ್ಯ ಕಲಿಯುವಂತ ಮಕ್ಕಳ ಪಾಲಕರು ಉಸ್ತುವಾರಿ ವಹಿಸಿದರೆ ಸರಕಾರದ ಕನಸು ನನಸಾಗುವುದು ಎಂದು ಮಕ್ಕಳ ಪಾಲಕರಿಗೆ ಅಧೀಕಾರ ಕೊಡುವಂತ ದಿಟ್ಟ ನಿರ್ಧಾರ ಕೈಗೊಂಡಿತು.ಅದರಂತೆ ಜನತಾ ಕಾಲೂನಿ ಸರಕಾರಿ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ.ಅಧ್ಯಕ್ಷರಾಗಿ ಬಸವರಾಜ ಸುಂಟ್ಯಾಣ (ಮ್ಯಾಗೇರಿ) ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಸಂತೋಷ ಕೆರಿಗೊಂಡ ಅವಿರೋಧವಾಗಿ ಆಯ್ಕೆಯಾದರು.
ಶಿಕ್ಷಣ ಸಂಯೋಜಕರಾದ ರವಿ ಬಿರಾದಾರ ಮುಖ್ಯಗುರುಗಳಾದ ವೈಜನಾಥ ಅಂಕಲಗಿ ಅರುಣಕುಮಾರ ಸಿಂಗೆ ರವಿಕಾಂತ ನಡುವಿನಕೆರಿ ಸಹ ಶಿಕ್ಷಕರಾದ ಶ್ರೀಶೈಲ ನಾಟೀಕಾರ ಸೇರಿದಂತೆ ಹಲವರು ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

05-01-2024 EE DIVASA KANNADA DAILY NEWS PAPER

ಶತಕಂಠ ಗಾಯನ ಕಾರ್ಯಕ್ರಮ ಅದ್ಧೂರಿ ಯಶಸ್ವಿ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ 

ವಿಜಯಪುರ: ನೂರುಕಂಠಗಳಲ್ಲಿ ಒಂದೇ ಧ್ವನಿಯಾಗಿ ಗಾಯನ ಹೊರಹೊಮ್ಮುತ್ತಿದ್ದರೆ ಕೇಳಲು ಮಧುರವೋ ಮಧುರ. ಅಂತಹ ಒಂದು ಮಾಧುರ್ಯ ಪೂರ್ಣವಾದ ಶತಕಂಠ ಗಾಯನ ಕಾರ್ಯಕ್ರಮ ನಡೆದದ್ದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರದ ಆಡಳಿತ ಭವನದ ಎದುರಿನಲ್ಲಿ ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳು ಸೇರಿಕೊಂಡು ಸಂಗೀತ ವಿಭಾಗದ ಮುಂದಾಳತ್ವದಲ್ಲಿ ಶತಕಂಠ ಗಾಯನ ಎಂಬ ನೂರು ವಿದ್ಯಾರ್ಥಿನಿಯರ ಗಾಯನ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು. ಆರಂಭದಲ್ಲಿ ವಿಶ್ವವಿದ್ಯಾನಿಲಯದ ಧ್ಯೇಯಗೀತೆಯಾದ ನಾವೆಲ್ಲರೂ ಒಂದೇ ಜಾತಿ ಎಂಬ ಗೀತೆಯನ್ನು ಮಧುರವಾಗಿ ಪ್ರಸ್ತುತಪಡಿಸಿದರು. 

ನಂತರ ಬಸವಣ್ಣನವರ ವಚನವಾದ ದಯವಿಲ್ಲದ ಧರ್ಮ ಅದಾವುದಯ್ಯ ಎಂದು ಹಾಡಿದರು. ಇತನಿ ಶಕ್ತಿ ಹಮೆ ದೇನಾ ದಾತಾ ಎಂಬ ಜಾಗೃತ ಗೀತೆಯನ್ನು ಹಾಡುವುದರ ಮೂಲಕ ನೆರೆದಿದ್ದ ಕಲಾಎಸಿಕರ ಪ್ರಶಂಸೆಗೆ ಒಳಗಾದರು. ಕೊನೆಯದಾಗಿ ವಿಶ್ವ ವಿನೂತನ ವಿದ್ಯಾ ಚೇತನ ಎಂಬ ಗೀತೆಯನ್ನು ಹಾಡುವುದರ ಮೂಲಕ ದೂರದ ಊರಿನಿಂದ ಆಗಮಿಸಿದ್ದ ನ್ಯಾಕ್ ಸದಸ್ಯರ ಪ್ರಶಂಸೆಗೆ ಒಳಗಾದರು. ಇದಕ್ಕೆ ತರಬೇತಿಯನ್ನು ಡಾ. ಗಂಗಾಧರ ಸೋನಾರ್ ಅವರ ನೇತೃತ್ವದಲ್ಲಿ ಡಾ. ಹರೀಶ ಹೆಗಡೆ, ಶ್ರೀಮತಿ ಸಂಗೀತಾ ಹಿರೇಮಠ ಮತ್ತು ಶ್ರೀ ವಿನಯ್ ಕುಲಕರ್ಣಿ ಅವರು ನೀಡಿದ್ದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ ಬಿ ಕೆ ತುಳಸಿಮಾಲಾ, ಕುಲಸಚಿವರಾದ ಎಸ್ ಎಸ್ ಸೋಮನಾಳಕ, ಕುಲಸಚಿವ ಮೌಲ್ಯಮಾಪನ, ಆರ್ಥಿಕ ಅಧಿಕಾರಿಗಳು, ಡೀನರು, ಎಲ್ಲಾ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿನಿಯರು ಮತ್ತು ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, January 3, 2024

04-01-2024 EE DIVASA KANNADA DAILY NEWS PAPER

ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ : ಭಾರತೀಯ ಜನತಾ ಪಾರ್ಟಿ ಪ್ರತಿಭಟನಾ ಮೆರವಣಿಗೆ


 ವಿಜಯಪುರ : ರಾಮ ಭಕ್ತರ ಮೇಲೆ ನಕಲಿ ಕೇಸ್ ಹಾಕಿರುವ ಹಿಂದೂ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಘಟಕದವತಿಯಿಂದ ನಗರದ ಗಾಂಧಿವೃತ್ತದಿAದ ಹಲಗಿ ಬಾರಿಸುವ ಮೂಲಕ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.

ಗಾಂಧಿವೃತ್ತದಿAದ ನಗರ ಪ್ರಮುಖ ರಸ್ತೆಗಳಾದ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಗೆ ಬೃಹತ್ ಮೆರವಣಿಗೆ ಮೂಲಕ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಮಾತನಾಡಿ, ಕಳೆದ ಮೂವತ್ತು ವರ್ಷ ಹಳೆಯದಾದ ಕೇಸನ್ನು ಮತ್ತೆ ಪ್ರಾರಂಭಿಸಿ ಹುಬ್ಬಳ್ಳಿಯ ಶ್ರೀಕಾಂತ ಪೂಜಾರಿ ಎಂಬ ಹಿಂದು ಕಾರ್ಯಕರ್ತನನ್ನು ಬಂಧಿಸಿರುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರ ತಾನು ಹಿಂದೂ ವಿರೋಧಿಯೆಂಬುದನ್ನು ಪದೇ ಪದೇ ಸಾಬೀತುಪಡಿಸುತ್ತಿದೆ. ಅಯೋಧ್ಯೆಯಲ್ಲಿ ಜನವರಿ 22 ರಂದು ಪ್ರಭು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯಾಗುವ ಶುಭ ಸಂದರ್ಭದಲ್ಲಿ ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇರುವುದು ಕಾಂಗ್ರೆಸ್ಸಿಗರಿಗೆ ನೋಡಲಾಗುತ್ತಿಲ್ಲ. ಮೊದಲಿನಿಂದಲೂ ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡುತ್ತಾ ಬಂದಿರುವ ಕಾಂಗ್ರೆಸ್ ಈಗ ಅಯೋಧ್ಯೆಯಲ್ಲಿನ ಭವ್ಯ ಮಂದಿರದ ಉದ್ಘಾಟನೆಯ ಸಂದರ್ಭದಲ್ಲಿ ದೇಶದ ವಾತಾವರಣ ಕೆಡಿಸಲು ಹುನ್ನಾರ ನಡೆಸಿದೆ ಎಂದರು.

ಮೊದಲಿನಿAದಲೂ ಮೊಘಲರು, ಡಚ್ಚರು, ಪೋರ್ಚುಗೀಸರು ಹಾಗೂ ಬ್ರಿಟೀಷರು ಈ ದೇಶದ ಸಂಪತ್ತು ಹಾಗೂ ನಮ್ಮ ಸಂಸ್ಕೃತಿಯನ್ನು ಹಾಳುಮಾಡಲು ಪ್ರಯತ್ನಿಸಿ ವಿಫಲರಾಗಿದ್ದಾರೆ, ಸ್ವಾತಂತ್ರಾನAತರ ಕಾಂಗ್ರೆಸ್ ಈ ಕೆಲಸವನ್ನು ದೇಶವಿರೋಧಿ ಶಕ್ತಿಗಳ ಜೊತೆಗೂಡಿ ಮಾಡುವ ಮೂಲಕ ಅಸಂಖ್ಯಾತ ಹಿಂದುಗಳಿಗೆ ಅಪಮಾನ ಮಾಡುತ್ತಿದೆ. ಆದಿಕಾಲದಲ್ಲಿ ಒಳ್ಳೆಯ ಕೆಲಸವಾಗುತ್ತಿರುವಾಗ ಅಸುರ ಶಕ್ತಿಗಳು ಅದನ್ನು ಹಾಳುಗೆಡುವಲು ಪ್ರಯತ್ನಿಸುತ್ತಿದ್ದವು. ಹಾಗೆಯೇ ಪ್ರಸ್ತುತ ಕಾಂಗ್ರೆಸ್ ಸರ್ಕಾರ ರಾಮಜನ್ಮಭೂಮಿಯ ಉದ್ಘಾಟನೆಯ ಸಮಯದಲ್ಲಿ ಈ ರೀತಿ ಹಿಂದೂ ಕಾರ್ಯಕರ್ತರನ್ನು ಬಂಧಿಸಿ ದಬ್ಬಾಳಿಕೆ ಮಾಡುತ್ತಿರುವುದನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಮುಖಂಡರಾದ ವಿಜುಗೌಡ ಪಾಟೀಲ, ಚಂದ್ರಶೇಖರ ಕವಟಗಿ, ಪ್ರಕಾಶ ಅಕ್ಕಲಕೋಟ, ಸುರೇಶ ಬಿರಾದಾರ, ಶಿವರುದ್ರ ಬಾಗಲಕೋಟ, ಮಳುಗೌಡ ಪಾಟೀಲ, ಬಸವರಾಜ ಬಿರಾದಾರ, ಸಂಜೀವ ಐಹೊಳ್ಳಿ, ಸಂಜಯ ಪಾಟೀಲ ಕನಮಡಿ, ಭೀಮಾಶಂಕರ ಹದನೂರ, ಉಮೇಶ ಕೋಳಕೂರ, ಬಾಬುರಾಜೇಂದ್ರ ನಾಯಕ, ಕೃಷ್ಣಾ ಗುನಾಳಕರ, ವಿಜಯ ಜೋಶಿ, ಶಿಲ್ಪಾ ಕುದರಗೊಂಡ, ಮಲ್ಲಮ್ಮ ಜೋಗುರ, ಲಕ್ಷಿö್ಮÃ ಕನ್ನೊಳ್ಳಿ, ಮಹಾನಗರ ಪಾಲಿಕೆ ಸದಸ್ಯ ರಾಜು ಕುರಿಯವರ, ರಾಹುಲ ಜಾಧವ, ಎಂ.ಎಸ್.ಕರಡಿ, ಪ್ರೇಮಾನಂದ ಬಿರಾದಾರ, ಹಾಗೂ ಈರಣ್ಣ ರಾವುರ, ಭೀಮನಗೌಡ ಸಿದ್ದರಡ್ಡಿ, ಬಸವರಾಜ ಹೂಗಾರ, ರಾಜೇಶ ತವಸೆ, ಸಂದೀಪ ಪಾಟೀಲ, ಕಾಂತು ಶಿಂಧೆ, ಶ್ರೀಧರ ಬಿಜ್ಜರಗಿ, ಪಾಪುಸಿಂಗ ರಜಪೂತ, ಸಂಗಮೇಶ ಹೌದೆ, ವಿಜಯಕುಮಾರ ಕುಡಿಗನೂರ, ವಿಕ್ರಮ ಗಾಯಕವಾಡ, ಜಗದೀಶ ಮುಚ್ಚಂಡಿ, ವಿಠ್ಠಲ ನಡುವಿನಕೇರಿ, ವಿನಾಯಕ ದಹಿಂಡೆ, ಆನಂದ ಮುಚ್ಚಂಡಿ, ವಿಕಾಸ ಪದಕಿ, ಸಂಪತ್ ಕೋಹಳ್ಳಿ, ಎ.ಎಸ್.ಪಾಟೀಲ, ಶರಣು ಕಾಖಂಡಕಿ, ವಿಜಯ ಹಿರೇಮಠ, ಮಧು ಕಲಾದಗಿ, ಗುರು ದೇಶಪಾಂಡೆ, ರವಿ ಬಿರಾದಾರ ನಾಗಠಾಣ, ಸುಶ್ಮಿತಾ ವಾಡಕರ, ವಿಜಯಲಕ್ಷಿö್ಮÃ ರೂಗಿಮಠ, ಗಾಯತ್ರಿ ದೇವೂರ, ಮಿತಾ ದೇಸಾಯಿ, ಶರಣಬಸು ಕುಂಬಾರ , ವಾರೀಶ ಕುಲಕರ್ಣಿ, ಉದಯ ಕನ್ನೊಳ್ಳಿ, sಸೈನಾಜ, ಮಾಯಾ ಚೌಧರಿ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, January 2, 2024

ಭಾಷಣ ಕಲೆ ಎಂಬುದು ಒಂದು ಕಲಿಕೆಯ ಕ್ರಮ : ಡಾ.ವಿಷ್ಣು ಶಿಂದೆ

ಸಿಂದಗಿ: ಭಾಷಣ ಕಲೆ ಎಂಬುದು ಒಂದು ಕಲಿಕೆಯ ಕ್ರಮ ಹಾಗಾಗಿ ಅದನ್ನು ಈಗಿನ ರಾಷ್ಟಿçÃಯ ಹೊಸ ಶಿಕ್ಷಣ ನೀತಿಯಲ್ಲಿ ಅಳವಡಿಸಲಾಗಿದೆ ಎಂದು ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾದ ಡಾ.ವಿಷ್ಣು ಶಿಂದೆ ಹೇಳಿದರು.

 ಪಟ್ಟಣದ ಶ್ರೀ ಪದ್ಮಾರಾಜ ಮಹಿಳಾ ಪದವಿ ಮಹಾವಿದ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಂಡ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುವ ವೇದಿಕೆಯೇ ಈ ಪಠ್ಯಪೂರ ಚಟುವಟಿಕೆಯಾಗಿದೆ. ಪದವಿ ಶಿಕ್ಷಣ ಸರಿಯಾದರೆ ಬದುಕು ನಿರ್ಮಾಣ ಒಂದು ವೇಳೆ ಸರಿಯಾಗದಿದ್ದರೆ ಬದುಕೇ ನಿರ್ಣಾಮ ಹಾಗಾಗಿ ನಿಮ್ಮ ಬದುಕನ್ನು ಬದಲಾವಣೆ ಮಾಡುವುದೇ ಪದವಿ ಶಿಕ್ಷಣ ಎಂದರು.

 ಈ ವೇಳೆ ಅತಿಥಿ ಸ್ಥಾನವನ್ನು ಅಲಂಕರಿಸಿದ ಸಂಸ್ಥೆಯ ಆಡಳಿತಾಧಿಕಾರಿ ಡಾ.ಬಿ.ಜಿ. ಮಠ ಮಾತನಾಡಿ, ಈ ಸಂಸ್ಥೆಯ ನೀಡುವ ಎಲ್ಲ ರೀತಿಯ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಸ್ವ-ಉದ್ಯೋಗಗಳನ್ನು ಮುಂದುವರೆಸಿಕೊAಡು ಹೋಗಬೇಕು. ಕೀಳರಿಮೆಯನ್ನು ಹೋಗಲಾಡಿಸಿಕೊಂಡು ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

 ಈ ವೇಳೆ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ ಸಾರಂಗಮಠದ ಚೇರಮನ್ನರಾದ ಗುರುಕುಲ ಭಾಸ್ಕರ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಪ್ರಾಚಾರ್ಯ ಎಸ್.ಎಂ. ಪೂಜಾರಿ ಅಧ್ಯಕ್ಷೀಯ ಮಾತುಗಳನ್ನಾಡಿದರು.

 ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಮಹಾಂತೇಶ ನೂಲಾನವರ, ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಪಿ.ಎಮ್ ಮಾಲಿಪಾಟೀಲ್, ಅನೀಲಕುಮಾರ ರಜಪೂತ, ಎಸ್.ಎಮ್. ಹೂಗಾರ, ಎಮ್.ಕೆ. ಬಿರಾದಾರ, ಎಸ್.ಸಿ ದುದ್ದಗಿ, ಜಿ.ವಿ ಪಾಟೀಲ್, ಮಂಗಳಾ ಈಳಗೇರ, ಡಿ.ಎಂ. ಪಾಟೀಲ, ಶಂಕರ ಕುಂಬಾರ, ಮಮತಾ ಹರನಾಳ ಸೇರಿದಂತೆ ಮಾಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

 ಈ ವೇಳೆ ವಿದ್ಯಾರ್ಥಿ ಸಂಘಡ ಕಾರ್ಯಾಧ್ಯಕ್ಷ ಯು.ಸಿ ಪೂಜೇರಿ ಸ್ವಾಗತಿಸಿ ಪರಿಚಯಿಸಿದರು.. ವಿದ್ಯಾರ್ಥಿ ಈರಮ್ಮ ಹಿರೇಮಠ ಪ್ರಾರ್ಥಿಸಿದರು. ನೀಲಗಂಗಾ ದೇವರಮನಿ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಕಾವೇರಿ ರೇವೂರ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

03-01-2024 EE DIVASA KANNADA DAILY NEWS PAPER

02-01-2024 EE DIVASA KANNADA DAILY NEWS PAPER

ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ನಮನ: ಮುಖ್ಯಮಂತ್ರಿ ಸಿದ್ದರಾಮಯ್ಯ




ಈ ದಿವಸ ವಾರ್ತೆ

ವಿಜಯಪುರ ಜ 2 : ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಸಲ್ಲಿಸಿದರು. 

ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 



ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ತೆರೆದಿಟ್ಟರು. 

ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಆ ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು. 

ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು ಮನುಷ್ಯ ಸಮಾಜವನ್ನು ತಿದ್ದುವ ಗುರಿ ಹೊಂದಿದ್ದ ಕಾರಣಕ್ಕೇ ಇವರು ದಾರ್ಶನಿಕರಾಗಿದ್ದರು ಎಂದು ವಿವರಿಸಿದರು.  

ಜಿಲ್ಲೆಯ ಸಚಿವರು ಮತ್ತು ಸಂತರು ಹೇಳಿದ ರೀತಿಯಲ್ಲಿ ಸಿದ್ದೇಶ್ವರ ಶ್ರೀಗಳ ಬದುಕಿನ ಸಂದೇಶ ಮತ್ತು ಆದರ್ಶಗಳನ್ನು ಕಾಪಾಡುವ ಸ್ಮರಣಾರ್ಥ ಕಾರ್ಯ ಮಾಡಲು ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು. 

ಸಿದ್ದೇಶ್ವರ ಸ್ವಾಮಿಗಳಿಗೆ ಗುರುನಮನ ಸಲ್ಲಿಸುವುದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ. ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ನನಗೆ ವಿಶೇಷ ಗೌರವ ಮತ್ತು ಪ್ರೀತಿ. 

ಸಿದ್ದಗಿರಿ ಕನ್ನೇರಿಮಠ ಕೊಲ್ಲಾಪುರದ   ಅದೃಶ್ಯ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿಗಳು, ಸಿರಿಗಿರೆಯ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು,  ಶಿವಮೂರ್ತಿ ಶಿವಾಚಾರ್ಯ ಮಹಾ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿಗಳು ಮತ್ತು ಹಲವು ಸಿದ್ದ ಸಂತರ ಸಾನ್ನಿಧ್ಯದಲ್ಲಿ ಲಕ್ಷಾಂತರ ಅನುಯಾಯಿಗಳ ಸಮ್ಮುಖದಲ್ಲಿ ಗುರುನಮನ ಕಾರ್ಯಕ್ರಮ ಉದ್ಘಾಟನೆಯಾಯಿತು. 

ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಸಚಿವರಾದ ಎಚ್.ಕೆ.ಪಾಟೀಲ್, ಶಿವಾನಂದ ಪಾಟೀಲ್, ಮಾಜಿ ಸಚಿವರಾದ ಶಾಸಕ ವಿನಯ್ ಕುಲಕರ್ಣಿ ಮತ್ತು ಶಾಸಕರಾದ ಸಿ.ಎಸ್.ನಾಡಗೌಡ, ಅಶೋಕ್ ಮನಗೋಳಿ ಸೇರಿ ಹಲವು ಪ್ರಮುಖರು ಗುರುನಮನಕ್ಕೆ ಸಾಕ್ಷಿಯಾದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, January 1, 2024

ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ:

ಬೆಂಗಳೂರು 01:  ವಿಶ್ವಕರ್ಮ ಸಮುದಾಯದ  ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. 

ಇತಿಹಾಸ ಎಲ್ಲರಿಗೂ ತಿಳಿಯಬೇಕು. ಇತಿಹಾಸ ತಿಳಿಯದವರು  ಇತಿಹಾಸ ರಚಿಸಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ವಾಗಬೇಕು ಎಂದರು. 

ರಾಜ್ಯಮಟ್ಟದ  ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕು:

ಅಮರಾಶಿಲ್ಪಿ ಜಕಣಾಚಾರಿ ಸಂಸ್ಮರಣೆ 2019 ರಲ್ಲಿ ಪ್ರಾರಂಭವಾದರೂ ಕೋವಿಡ್ ಇದ್ದುದರಿಂದ  ಆಚರಿಸಲಾಗಲಿಲ್ಲ. ಕಳೆದ ವರ್ಷ ವಿಜಯನಗರ ಜಿಲ್ಲೆಯಲ್ಲಿ ಆಚರಿಸಲಾಗಿತ್ತು ಎಂದರು. 

ರಾಜ್ಯಮಟ್ಟದ  ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕೆಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಲಾಗುತ್ತದೆ ಎಂದರು. 

ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು:

ಜಕಣಾಚಾರಿ ಇಡೀ ರಾಜ್ಯಕ್ಕೆ ಗೊತ್ತಿರುವವರು. ಅವರ ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು. ಜಕಣಾಚಾರಿ ವಿಶ್ವಕರ್ಮ ಸಮಾಜದಲ್ಲಿ ಹುಟ್ಟಿದವರು. ಅವರು ಬೆಳೆದ ಎತ್ತರ ಜನರಿಗೆ ತಿಳಿಯಬಾರದೆಂದು ಇತಿಹಾಸ ತಿರುಚುವ ಪ್ರಯತ್ನ ಮಾಡಲಾಗಿದೆ. 

ಪಟ್ಟಭದ್ರ ಹಿತಾಸಕ್ತಿಗಳು ಈ ಕೆಲಸ ಮಾಡಿದ್ದರೂ ಮಾಡಿರಬಹುದು. ಅಮರ ಶಿಲ್ಪಿ ಜಕಣಾಚಾರಿ ಇತಿಹಾಸ ನಮ್ಮ ಮುಂದಿದೆ ಎಂದರು. 

ವಿಶ್ವಕರ್ಮ ಅಭಿವೃದ್ಧಿ ನಿಗಮ, ವಿಶ್ವಕರ್ಮ ಜಯಂತಿಯನ್ನು ಆಚರಿಸುವ ತೀರ್ಮಾನ ನಮ್ಮ ಸರ್ಕಾರವೇ ಹಿಂದೆ ಮಾಡಿತ್ತು ಎಂದು ಸ್ಮರಿಸಿದರು. 

ಜಾತ್ಯಾತೀತ ಸಮಸಮಾಜ ನಿರ್ಮಾಣ:

ನಮ್ಮ ಸಂವಿಧಾನ ಜಾತಿ ರಹಿತ, ವರ್ಗರಹಿತ,  ಜಾತ್ಯಾತೀತ ಸಮಸಮಾಜ ನಿರ್ಮಾಣ ಮಾಡಬೇಕೆಂದು ಹೇಳಿದೆ. ಸ್ವಾರ್ಥಕ್ಕಾಗಿ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಶತಶತಮಾನಗಳಿಂದ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಅಸಮಾನತೆಗೆ ಬಲಿಯಾಗಿರುವ ವರ್ಗದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರು ಮುಖ್ಯವಾಹಿನಿಗೆ ಸೇರುವಂತಾಗಬೇಕು.  ಎಲ್ಲರಿಗೂ ಅವಕಾಶ ಒದಗಿಸುವುದು ಸರ್ಕಾರದ ಜವಾಬ್ದಾರಿ ಹಾಗೂ ಕರ್ತವ್ಯ ಎಂದರು.  


ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು:

ಚಲನಶೀಲತೆ ಇಲ್ಲದ ಸಮಾಜದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅದಕ್ಕಾಗಿಯೇ ಸಂವಿಧಾನದ ಪೀಠಿಕೆವನ್ನು ಓದಿ ಅರ್ಥಮಾಡಿಕೊಂಡು ಅದರಂತೆ ನಡೆಯಬೇಕು. ಸಂವಿಧಾನದ ವಿರೋಧಿಗಳು ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ. ಸಂವಿಧಾನದ ಆಶಯಗಳನ್ನು  ಈಡೇರಿಸಬೇಕು. ಇದಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದರು. 

ಇದೇ ಸಂದರ್ಭದಲ್ಲಿ ನಾಲ್ಕು ಶಿಲ್ಪಿಗಳಿಗೆ ಜಕಣಾಚಾರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಾಸನದ ಅರೆಮಾದನಹಳ್ಳಿಯ ವಿಶ್ವಕರ್ಮ ಜಗದ್ಗುರು ಪೀಠಾಧಿಪತಿ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಇಲಾಖೆ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಸೇರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.