Tuesday, February 13, 2024

ಸೆಕ್ಯುರಿಟಿ ಗಾರ್ಡ್ ನಿಂದಲೇ ಎಟಿಎಂನಲ್ಲಿರುವ ಹಣ ಕಳ್ಳತನಕ್ಕೆ ಯತ್ನ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಎಟಿಎಂ ಸೆಕ್ಯುರಿಟಿ ಗಾರ್ಡ್ ವೊಬ್ಬ ಎಟಿಎಂನಲ್ಲಿರುವ ಹಣ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿರುವ ಡಿಸಿಸಿಬ್ಯಾಂಕ್‌ನ ಎಟಿಎಂನಲ್ಲಿ ನಡೆದಿದೆ.

ಎಟಿಎಂ ಸೆಕ್ಯುರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರೇವಣ್ಣಸಿದ್ದ ಉರ್ಫ್ ಸಾಗರ ಲಾಳಸಂಗಿ ಎಂಬವನು, ತನ್ನ ದ್ವಿಚಕ್ರ ವಾಹನದಲ್ಲಿ ಕಬ್ಬಿಣ ಕಟ್ ಮಾಡುವ ಗ್ರ್ಯಾಂಡರ್ ಮಶೀನ, ಸುತ್ತಿಗೆ ತಂದು, ಕತ್ತರಿಸಲು ಯತ್ನ ಮಾಡಿದ್ದಾನೆ.

ಲಾಕರ್ ಕಟ್ ಆಗದೆ ಇದ್ದ ಕಾರಣ ಹಣ ಕಳ್ಳತನ ಮಾಡಲು ಸಾಧ್ಯವಾಗಿಲ್ಲ.

ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕ ಈರಣ್ಣ ತೆಲ್ಲೂರ ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment