Wednesday, January 31, 2024

ರೇಷ್ಮಾ, ಇಂದಿರಾಬಾಯಿಗೆ ಪಿಎಚ್.ಡಿ ಪದವಿ

ರೇಷ್ಮಾ ಚೀರಲದಿನ್ನಿ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ರೇಷ್ಮಾ ಚೀರಲದಿನ್ನಿ ಅವರು ಸಲ್ಲಿಸಿದ್ದ “ಎಜ್ಯುಕೇಶನ್ ಕಾಂಟ್ರಿಬ್ಯೂಶನ್ಸ್ ಆಫ್ ಮೌಲಾನಾ ಅಬ್ದುಲ್ ಕಲಾಮ ಆಜಾದ ಆಂಡ್ ಇಟ್ಸ್ ರೆಲೆವನ್ಸ್ ಟು ಪ್ರಸೆಂಟ್ ಸಿನಾರಿಯೋ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.

ರೇಷ್ಮಾ ಚೀರಲದಿನ್ನಿ ಅವರು ಶಿಕ್ಷಣ ವಿಭಾಗದ ಪ್ರೊ.ಬಿ.ಎಲ್.ಲಕ್ಕಣ್ಣವರ್ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ರೇಷ್ಮಾ ಚೀರಲದಿನ್ನಿ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.




ಇಂದಿರಾಬಾಯಿ ಬೀರಲದಿನ್ನಿ 

 ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಇಂದಿರಾಬಾಯಿ ಬೀರಲದಿನ್ನಿ ಅವರು ಸಲ್ಲಿಸಿದ್ದ “ಇನ್-ಸಿಲಿಕೊ ಡ್ರಗ್ ಡಿಸೈನಿಂಗ್ ಸ್ಟಡೀಸ್ ಆಫ್ ಪೈಟೋಕೆಮಿಕಲ್ಸ್ ಐಸೋಲೇಟೆಡ್ ಫ್ರಮ್ ಲೂನಿಯಾ ಪ್ರೊಕುಂಬೆನ್ಸ್ ಅಗೆನೆಸ್ಟ್ ಡೈಯಬಿಟೀಸ್ ಮೆಲಿಟಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ. 

ಇಂದಿರಾಬಾಯಿ ಬೀರಲದಿನ್ನಿ ಅವರು ಜೈವಿಕ ಮಾಹಿತಿ ವಿಭಾಗದ ಪ್ರೊ.ಜಾಯ್.ಹೆಚ್.ಹೊಸ್ಕೇರಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಇಂದಿರಾಬಾಯಿ ಬೀರಲದಿನ್ನಿ ಅವರನ್ನು ಕುಲಪತಿ 

ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು

ಪ. ಪೂ. ಶ್ರೀ ಮನ.ನಿ. ಪ್ರ. ಕುಮಾರ ಶಿವಯೋಗಿಗಳ 94ನೇ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಗಾನಯೋಗಿ ಶಿವಯೋಗಿ ಪಂ. ಪಂಚಾಕ್ಷರ ಗವಾಯಿಗಳವರ 132ನೇ ಜಯಂತ್ಯೋತ್ಸವ

ವಿಜಯಪುರ : ಶ್ರೀ ಗುರು ಕುಮಾರೇಶ್ವರ ಪ್ರತಿಷ್ಠಾನ (ರಿ) ಶ್ರೀ ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನ (ರಿ) ವಿಜಯಪುರ ಪ. ಪೂ. ಶ್ರೀ ಮನ.ನಿ. ಪ್ರ. ಕುಮಾರ ಶಿವಯೋಗಿಗಳ 94ನೇ ಪುಣ್ಯಸ್ಮರಣೋತ್ಸವ ಹಾಗೂ ಶ್ರೀ ಗಾನಯೋಗಿ ಶಿವಯೋಗಿ ಪಂ. ಪಂಚಾಕ್ಷರ ಗವಾಯಿಗಳವರ 132ನೇ ಜಯಂತ್ಯೋತ್ಸವವನ್ನು ದಿನಾಂಕ: 02-02-2024 ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ನಗರದ ಗಾನಬನದ ಆವರಣ, ಎನ್.ಸಿ.ಸಿ. ಕಾರ್ಯಾಲಯದ ಹಿಂದುಗಡೆ ಶ್ರೀ ಗಾನಯೋಗಿ ಪಂಚಾಕ್ಷರ ಗವಾಯಿಗಳ ಮಾರ್ಗದಲ್ಲಿ ಹಮ್ಮಿಕೊಳ್ಳಲಾಗಿದೆ 

ಶ್ರೀ ಸಿದ್ದಯ್ಯ ಪುರಾಣಿಕರ ವಿರಚಿತ ಶರಣ ಪರಿತಾಮೃತ ಪ್ರವಚನ ಕಾರ್ಯಕ್ರಮ ದಿನಾಂಕ 24-01-2024 ರಿಂದ ದಿನಾಂಕ 31-01-2024 ರವೆಗೆ ಡಾ. ಶಿವರಾಜ ಶಾಸ್ತಿçÃಗಳು ಹೆರೂರ ಇವರಿಂದ ಸಾಗಿ ಬಂದ ಪ್ರವಚನ ಮಂಗಲಗೊAಡಿತು.

ದಿನಾAಕ: 01-02-2024 ಗುರುವಾರ ಸಂಜೆ 6 ಗಂಟೆಗೆ ಸಂಗೀತ ಸಮಾರಂಭ ಜರುಗಲಿದೆ. ವಿರಕ್ತಮಠದ ಶ್ರೀ ಮ.ನಿ.ಪ್ರ. ಮುರಘೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿಕೊಳ್ಳಲಿದ್ದಾರೆ. ಸಂಗಮೇಶ್ವರ ಸಂಸ್ಥಾನ ಹಿರೇಮಠ, ಮುದ್ದಡಗಾ ಬಲಗುಂದಿ ಶ್ರೀ ಷ. ಬ್ರ. ವೈಧ್ಯಶ್ರೀ ಸದ್ಯೋಜಾತ ರೇಣುಕ ಶಿವಾಚಾರ್ಯರು ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಧರ್ಮ ಸುಧಾಕರ ಹಾಗೂ ಜಮಖಂಡಿಯ ಜನಪ್ರೀಯ ಶಾಸಕರಾದ ನಾಡೋಜ ಜಗದೀಶ ಗುಡಗುಂಟಿ ಉದ್ಘಾಟನೆಮಾಡಲಿದ್ದಾರೆ.

ಶ್ರೀ ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಬಸವರಾಜ ಪಿ. ಕೆಂಗನಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಬಾಗಲಕೋಟ ವಿಧಾನ ಪರಿಷತ್ ಸದಸ್ಯರಾದ ಪಿ.ಎಚ್.ಪೂಜಾರ, ಉಪನೋಂದಣಾಧಿಕಾರಿಗಳು ಹಾಗೂ ಮಹಾಪೋಷಕರು, ಶ್ರೀ ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನ ಬಿ.ಎಸ್. ಬಿರಾದಾರ, ಮಹಾನಗರ ಪಾಲಿಕೆ ಸದಸ್ಯರಾದ ಎಂ.ಎಸ್. ಕರಡಿ, ಜ್ಞಾನಜ್ಯೋತಿ ಸ್ಕೂಲ್‌ನ ಮಲ್ಲಿಕಾರ್ಜುನ ಲೋನಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸುಭಾಸಚಂದ್ರ ಕನ್ನೂರ ಕಾರ್ಯಕ್ರಮವನ್ನು ನಿರೂಪಿಸಲಿದ್ದಾರೆ.

ದಿನಾಂಕ: 02-02-2024 ಶುಕ್ರವಾರ ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಗುರುತ್ರಯರ ಶಿಲಾಮೂರ್ತಿಗಳಿಗೆ ವೇದೋಕ್ತ ಪೂಜಾ ಕೈಂಕರ್ಯ ನೆರವೇರುವುದು. ಬೆಳಿಗ್ಗೆ 9 ಗಂಟೆಗೆ ಗುರುವರ್ಯರ ಭಾವಚಿತ್ರದ ಮೆರವಣಿಗೆ ಜರುಗಲಿದೆ.

ತದನಂತರ ಧರ್ಮ ಸಭೆ ಜರುಗಲಿದೆ. ಜಮಖಂಡಿಯ ಓಲೆಮಠದ ಡಾ. ಶ್ರೀ ಮ.ನಿ.ಪ್ರ. ಅಭಿನವ ಕುಮಾರ ಚನ್ನಬಸವ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿಕೊಳ್ಳಲಿದ್ದಾರೆ. ವಿರಕ್ತಮಠ, ನಿಢೋಣಿ ಎರಡೆತ್ತಿನಮಠ, ಹುಬ್ಬಳ್ಳಿಯ ಶ್ರೀ ಮ.ನಿ.ಪ್ರ. ಸಿದ್ಧಲಿಂಗೇಶ್ವರ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಗವಿಮಠ, ಬೊಮ್ಮನಹಳ್ಳಿಯ ಶ್ರೀ ಷ.ಬ್ರ. ಗುರುಶಾಂತ ಶಿವಾಚಾರ್ಯ ಮಹಾಸ್ವಾಮಿಗಳು ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಸಂಗಮೇಶ್ವರ ಸಂಸ್ಥಾನ ಹಿರೇಮಠ, ಮುದ್ದಡಗಾ, ಬಿಲಗುಂದಿಯ ಶ್ರೀ ಷ.ಬ್ರ.ವೈಧ್ಯಶ್ರೀ ಸದ್ಯೋಜಾತ ರೇಣುಕ ಶಿವಾಚಾರ್ಯರ ಸಮ್ಮುಖ ವಹಿಸಿಕೊಳ್ಳಲಿದ್ದಾರೆ. ಆಯುಕ್ತರು ನಗರಾಭಿವೃದ್ಧಿ ಪ್ರಾಧಿಖಾರದ ವಿಜಯಪುರದ ರಾಜಶೇಖರ ಡಂಬಳ ಉದ್ಘಾಟಿಸಲಿದ್ದಾರೆ. ಶ್ರೀ ಪ್ರವಚನ ಕೇಸರಿ ವೇ.ಮೂ. ವಿರೂಪಾಕ್ಷಯ್ಯ ಶಾಸ್ತಿçಗಳು, ಅಧ್ಯಕ್ಷರು ಶ್ರೀ ಕುಮಾರೇಶ್ವರ ಪತ್ತಿನ ಸಹಕಾರಿ ಸಂಘದ ಎಂ.ಬಿ. ಹಂಗರಗಿ, ಕರ್ನಾಟಕ ಅಂಧರ ವಿಮೋಚನ ವೇದಿಕೆಯ ಮುದಿಗೆರೆ ರಮೇಶಕುಮಾರ, ನಾಗಯ್ಯ ಜಿ. ಹಿರೇಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಗಾನಯೋಗಿ ಪಂಚಾಕ್ಷರ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಬಸವರಾಜ ಪಿ. ಕೆಂಗನಾಳ, ಗಾನಬನ ಗವಾಯಿಗಳಾದ ಪಂ.ತೋAಟದಾರ್ಯ ಕವಿ ಉಪಸ್ಥಿತರಿರಲಿದ್ದಾರೆ.

ಖ್ಯಾತ ಯುವ ಗಾಯಕರಾದ ಶ್ರೀ ವೆಂಕಟೇಶ ಅಲಕೋಡ ಅವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ.

ಸುಭಾಸಚಂದ್ರ ಕನ್ನೂರ, ಕೈಲಾಸನಾಥ ಮದಭಾವಿ ನಿರೂಪಿಸಲಿದ್ದಾರೆ. ಶ್ರೀ ಪಂ. ತೋಂಟಯರ್ದಾರ್ಯ ಕವಿ ಗವಾಯಿಗಳವರ ಸಂಗೀತದೊAದಿಗೆ ಕಾರ್ಯಕ್ರಮ ಸಂಪನ್ನಗೊಳ್ಳುವುದು ಎಂದು ಪ್ರಕಟಣೆಯಲ್ಲಿ ಪಂಚಾಕ್ಷರಿ ಶಾಸ್ತಿç ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

01-02-2024 EE DIVASA KANNADA DAILY NEWS PAPER

ಪ್ರಶಸ್ತಿ ನೀಡಿಕೆ ಮುಂದೂಡಬಾರದು. ಆಯಾ ವರ್ಷವೇ ನೀಡಿ ಗೌರವಿಸಬೇಕು: ಸಿ.ಎಂ.ಸಿದ್ದರಾಮಯ್ಯ ಸೂಚನೆ

ಈ ದಿವಸ ವಾರ್ತೆ

ಬೆಂಗಳೂರು : ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೀರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೀವಮಾನ ಸಾಧನೆಗಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳನ್ನು 75 ಮಹನೀಯರಿಗೆ ನೀಡಿ ಸನ್ಮಾನಿಸಿ ಮಾತನಾಡಿದರು. 

ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ. ನಮ್ಮ ಸಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದರು. 

ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೀರಿಸುವುದಿಲ್ಲ. ಈ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ ಎಲ್ಲರಿಗೂ ನಾನು ಅಷ್ಟೆ ನಿಷ್ಠುರವಾಗಿ ಹೇಳಿಬಿಡುತ್ತೇನೆ ಎಂದರು. 

ನಮ್ಮ ಸರ್ಕಾರ ಜನರ ನಂಬಿಕೆಗಳನ್ನು ಗೌರವಿಸುತ್ತದೆ. ಬಸವಣ್ಣನವರು ಮೌಡ್ಯ ಮುಕ್ತ, ಜಾತಿ ಮುಕ್ತ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ್ದರು. ಅದಕ್ಕೆ ದೇಹವೇ ದೇಗುಲ ಎಂದು ವಚನಕಾರರು ಪ್ರತಿಪಾದಿಸಿದ್ದಾರೆ. ಆದರೆ ಕೆಲವರು ದೇವಸ್ಥಾನದಲ್ಲಿ ಮಾತ್ರ ದೇವರಿದ್ದಾನೆ ಎಬ್ನುವ ನಂಬಿಕೆಯಿಂದ ಹೋಗುತ್ತಾರೆ. ಅವರ ನಂಬಿಕೆಯನ್ನೂ ಗೌರವಿಸುತ್ತೇವೆ. ದೇವಸ್ಥಾನಕ್ಕೆ ಹೋಗುವವರು ಅವರ ಇಷ್ಟದ ಉಡುಪು ಧರಿಸಿ ಹೋಗಬಹುದು. ಈ ವಿಚಾರದಲ್ಲೂ ನಮ್ಮದೇನೂ ಅಭ್ಯಂತರ ಇಲ್ಲ ಎಂದರು. 

ದೇವರು, ಧರ್ಮದ ಬಗ್ಗೆ ಯಾರ ನಂಬಿಕೆ ಏನೇ ಇದ್ದರೂ ಎಲ್ಲರೂ ಮೊದಲು ಮನುಷ್ಯರಾಗಬೇಕು. ಮನುಷ್ಯ ಮನುಷ್ಯರನ್ನು ದ್ವೇಷಿಸಬಾರದು. ಇದೇ ಅತ್ಯುನ್ನತ ಮೌಲ್ಯ ಎಂದರು. 

ರವೀಂದ್ರ ಕಲಾ ಕ್ಷೇತ್ರ ಮತ್ತು ಸಂಸ ರಂಗ ಮಂದಿರ ನವೀಕರಣಕ್ಕೆ ಇಷ್ಟೆ ಖರ್ಚು ಮಾಡಬೇಕು ಎನ್ನುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. 24 ಕೋಟಿ ಖರ್ಚು ಮಾಡಿ ನವೀಕರಣ ಮಾಡುತ್ತಿದೆ ಎನ್ನುವುದು ಸರಿಯಲ್ಲ. ಮೊತ್ತದ ಬಗ್ಗೆ ಯಾವ ತೀರ್ಮಾನವೂ ಆಗಿಲ್ಲ ಎಂದು ಪುನರುಚ್ಚರಿಸಿದರು. 

2020-21 ರಿಂದ 2023-24ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಪಂಡಿತ್ ಪಂಚಾಕ್ಷರಿ ಗವಾಯಿ ಪ್ರಶಸ್ತಿ, ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಅಕ್ಕಮಹಾದೇವಿ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ಪಂಪ ಪ್ರಶಸ್ತಿ, ಶ್ರೀ ನಿಜಗುಣ ಪುರಂದರ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ, ಶಾಂತಲಾನಾಟ್ಯ ರಾಣಿ ಪ್ರಶಸ್ತಿ, ಸಂತ ಶಿಶುನಾಳ ಷರೀಫ ಪ್ರಶಸ್ತಿ,  ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಬಿ.ವಿ.ಕಾರಂತ ಪ್ರಶಸ್ತಿ, ಡಾ.ಗುಬ್ಬಿ ವೀರಣ್ಣ ಪ್ರಶಸ್ತಿ, ಡಾ.ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದಶ್ರೀ ಪ್ರಶಸ್ತಿ ಪುರಸ್ಕೃತರಾದ ಒಟ್ಟು 75 ಮಂದಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ನೀಡಿ ಗೌರವಿಸಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಶರಣ ಶ್ರೇಷ್ಠರಾದ ಬಸವಣ್ಣನವರನ್ನು ಕನ್ನಡ ನಾಡಿನ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲಾಖೆ ಪರವಾಗಿ ಅಭಿನಂದನೆ ಸಲ್ಲಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು