Saturday, March 2, 2024

ಐಎಎಸ್ ಅಧಿಕಾರಿ ಕೆ. ಶಿವರಾಮು ರವರಿಗೆ ಭಾವಪೂರ್ಣ ಶ್ರದ್ದಾಂಜಲಿ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಛಲವಾದಿ ಮಹಾಸಭಾದ ಸಂಸ್ಥಾಪಕರು ಹಾಗೂ ರಾಜ್ಯ ಅಧ್ಯಕ್ಷರು, ಹಿರಿಯ ಐಎಎಸ್ ಅಧಿಕಾರಿಗಳು ಮತ್ತು ಚಲನಚಿತ್ರ ನಟರಾದ ಕೆ.ಶಿವರಾಮು ರವರ ಅಗಲಿಕೆಯಿಂದಾಗಿ ಭಾವಪೂರ್ಣ ಶ್ರದ್ದಾಂಜಲಿ ಸಭೆಯನ್ನು ವಿಜಯಪುರ ನಗರದ ಸರಕಾರಿ ನೌಕರರ ಭವನದಲ್ಲಿ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುನೀಲ ಹೊಸಳ್ಳಿ ಅಧ್ಯಕ್ಷರು ಮಾತನಾಡಿ, ಕೆ.ಶಿವರಾಮು ಸಾಹೇಬರು, ಒಬ್ಬ ಧೀಮಂತ ಹಿರಿಯ ಐಎಎಸ್ ಅಧಿಕಾರಿಗಳಾಗಿ ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲ ಜಾತಿ, ಮತ, ಪಂಥ ಜನಾಂಗದವರೊಂದಿಗೆ ಒಳ್ಳೆಯ ನಿಕಟ ಸಂಪರ್ಕವನ್ನು ಹೊಂದಿದ್ದರು. ಇವರು ಎಲ್ಲ ಜನರಿಗೆ ಸಹಾಯ ಸಹಕಾರ ನೀಡುತ್ತಾ ತಮ್ಮ ಕಾರ್ಯನಿಷ್ಠೆಯನ್ನು ಅತ್ಯಂತ ಶ್ರದ್ದೆಯಿಂದ ಸಲ್ಲಿಸಿದ ಮಹಾನ ನಾಯಕರಾದ ಇವರು ಸರಕಾರಿ ನೌಕರಿಯಿಂದಿಗೆ ತಮ್ಮನ್ನು ಗುರ್ತಿಸಿದ ಛಲವಾದಿ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಇದರೊಂದಿಗೆ ಇವರು ಚಲನಚಿತ್ರದಲ್ಲಿಯೂ ಸಹ ಅಚ್ಚಳಿಯದಂತಹ ಚಿತ್ರಗಳನ್ನು ನೀಡಿದ ಇವರು ನಟಿಸಿದ ಚಿತ್ರಗಳು ಹಾಡುಗಳು ಜನಮಾನಸದಲ್ಲಿ ಜನಾನುರಾಗಿ ಆಗಿವೆ ಎಂದು ನೆನಪು ಮಾಡಿಕೊಂಡರು.

ಈ ಸಂದರ್ಭದಲ್ಲಿ ಆಯಾಜ ಎಚ್. ರೋಜೆವಾಲೆ, ಯುನುಸ್ ವಿಜಯಪುರ, ಜಿ.ಡಿ.ಹೊಸಮನಿ, ಬಿ.ಆ‌ರ್. ಲಿಂಬೂಡಕರ, ಫಯಾಜ ಜಮಾದಾರ, ಎಮ್.ಆರ್. ಮೆಟಗಾರ, ಸುರೇಶ ಕೋಟ್ಯಾಳಕರ, ರಾಜಕುಮಾರ ಆರ್. ಕಟ್ಟಿ, ಇಬ್ರಾಹಿಂ ಒಂಟಿ, ಸಿದ್ದಾರ್ಥ ಅಹಿರಸಂಗ, ಶಶಿಕಾಂತ ಕಟ್ಟಿ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಮಾ. 6 ರಂದು ಕರ್ನಾಟಕ ಸರಕಾರ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪತ್ರಕರ್ತ, ಸಾಹಿತಿ ಕಲ್ಲಪ್ಪ ಶಿವಶರಣ ವಿರಚಿತ ಕಲ್ಲು ಮನಸ್ಸು ಕೃತಿ ಲೋಕಾರ್ಪಣೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಮಾ. 6  ರಂದು ಬುಧವಾರ ಸಂಜೆ 5.30 ಗಂಟೆಗೆ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಕರ್ನಾಟಕ ಸರಕಾರ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಆಯ್ಕೆಯಾದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಪತ್ರಕರ್ತ, ಸಾಹಿತಿ ಕಲ್ಲಪ್ಪ ಶಿವಶರಣ ವಿರಚಿತ ‘ಕಲ್ಲು ಮನಸ್ಸು’ ಕಲ್ಲರಳಿ ಹೂಮಸು ಕೃತಿ ಲೋಕಾರ್ಪಣೆ ಹಾಗೂ ಕಾರ್ಯಕ್ರಮದ ಉದ್ಘಾಟನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ನೆರವೇರಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಹೆಸರಾಂತ ಸಾಹಿತಿ ಶ್ರೀ ಜೋಗಿ (ಗಿರೀಶ್ ರಾವ್ ತ್ವಾರ್) ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಡಾ. ಧರಣಿದೇವಿ  ಭಾಗವಹಿಸಲಿದ್ದಾರೆ. ಅದರಂತೆ ಇದೇ ಸಂದರ್ಭದಲ್ಲಿ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಿಸಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳಾದ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.