Friday, April 12, 2024

ಮಹಾನ ನಾಯಕ

 


ತಾಯಿಯ ಗರ್ಭದಲ್ಲಿ ಇರುವಾಗಲೆ ಚಿಕ್ಕಪ್ಪನಾದ ಸನ್ಯಾಸಿಯ ವಾಣಿಯಂತೆ ಇತಿಹಾಸ ಪುರುಷನೊಬ್ಬ ಮಗನಾಗುತ್ತಾನೆ ಅವನಿಂದ ನಿಮ್ಮ ಕೀರ್ತಿ ಬೆಳೆಯುವುದು

ಎಪ್ರಿಲ್ ಹದಿನಾಲ್ಕು ಭರತ ಭೂಮಿಗೆ ಹರ್ಷವೆ ಹರ್ಷಾ ನೀನು ಉದಯಿಸಿದ ದಿನ ನಿನ್ನ ತಾಯಿ ತಂದೆಯರಿಗೆ ಅಷ್ಟೆ ಅಲ್ಲಾ ದಿನ ದಲಿತರಿಗೂ ಅರುಣೋದಯ ಅಂದು

ಬರೋಡಾದ ಗಾಯಕವಾಡ ದೊರೆ ಸಯಾಜಿ ರಾವ್ ಇಪ್ಪತ್ತೈದು ರೂಪಾಯಿಗಳ ವಿದ್ಯಾರ್ಥಿ ವೇತನ ಪಡೆದು ಹತ್ತಾರು ಶಾಸ್ತ್ರ ವಿಷಯಗಳ ಜ್ಞಾನ ಪಡೆದವನು

ಮನುಷ್ಯ ಜಾತಿ ತಾನೊಂದೆ ವಲಂ ಎಂದು ಮನುಷ್ಯ ವರ್ಗದ ಸಮಾನತೆ ಸೌಹಾರ್ದತೆ ಸ್ನೇಹ ಬಾಂಧವ್ಯದ ಗುಣವ ಬೆಳೆಸಿದೆ ಬುದ್ದ ಬಸವರಾದಿಯಂತೆ ನೆಡೆದವನು

ಭಾರತ ಸಂವಿಧಾನ ಶಿಲ್ಪಿಯಾಗಿ ಗುರುಗಳಿಂದ ಅಂಬೇಡ್ಕರ ಕರೆಸಿಕೊಂಡವನು ಭಾರತ ಜನರ ಪಾಲಿಗೆ ಬಾಬಾನಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾನಾಯಕ

ಮಾಹೋ ಯಿಂದ ದೇಶ ವಿದೇಶಗಳಲ್ಲಿ ಸನ್ಮಾರ್ಗವನ್ನು ಉಪದೇಶವನ್ನು ಸಾರಿರುವನು ತೋರು ಬೆರಳಿನಲ್ಲಿ ಅನೇಕ ಸಂದೇಶಗಳನ್ನು ಅಡಗಿಸಿದವನು ಭಾರತಾಂಬೆಯ ಸೇವೆಗೈದ ಮಹಾನ ಪುರುಷ

ಇವತ್ತು ನೀನು ವೀರನಾಯಕ ಅವತ್ತು ನಿನ್ನನು ಕೀಳಾಗಿ ಕಂಡ ಮನಸ್ಸು ಇಂದು ಹೃದಯಪೂರ್ವಕವಾಗಿ ಕೈ ಎತ್ತಿ ನಮಸ್ಕರಿಸುವಂತ್ತೆ ಮಾಡಿದ ಚಮತ್ಕಾರಿ ನೀನು


                      ರಾಜೇಶ್ವರಿ ಪಿ ಸಾಲಿಮಠ


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

14-04-2024 EE DIVASA KANNADA DAILY NEWS PAPER

ವಿಜಯಪುರ ಮ.ನ.ಪಾ ವತಿಯಿಂದ ಸ್ವೀಪ್ ಅಡಿ ನಗರದ ವಿವಿಧ ಸ್ತ್ರೀ ಶಕ್ತಿ ಮತ್ತು ಸ್ವ-ಸಹಾಯದ ಮಹಿಳೆಯರಿಂದ ಮತದಾನದ ಜಾಗೃತಿ ಮೂಡಿಸಲು ಸಭೆ

 


ಈ ದಿವಸ ಕನ್ನಡ ದಿ‌ನ ಪತ್ರಿಕೆ ವಾರ್ತೆ

ವಿಜಯಪುರ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಮತದಾನದ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ಸ್ತ್ರೀ ಶಕ್ತಿ ಮತ್ತು ಸ್ವ-ಸಹಾಯ ಸಂಘದ ಗುಂಪುಗಳ ಪ್ರತಿನಿಧಿಗಳಿಗೆ ಸಭೆ ನಡೆಸಿ ತಮ್ಮ ಗುಂಪಿನ ಸದಸ್ಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಮತದಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಕುರಿತು ಅರಿವು ಮೂಡಿಸಲು ಆಯೋಜಿಸಿರುವ ಸ್ವೀಪ್ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನೇರವೆರಿಸಲು ಮಹಾನಗರ ಪಾಲಿಕೆ ಸಭಾ ಭವನದಲ್ಲಿ ಸಭೆ ಜರುಗಿತು.


ಸಹಾಯಕ ಚುನಾವಣಾ ಅಧಿಕಾರಿಗಳು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ವಿಜಯಪುರ ನಗರ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಅಶಾದ್ ಉರ್ ರೆಹಮಾನ್ ಷರೀಫ್ ಇವರು ಮಾತನಾಡುತ್ತ ನಮ್ಮ ಭಾರತಿಯರಿಗೆ ರಾಷ್ಟ್ರ ಪ್ರೇಮ ಮತ್ತು ಪ್ರಜಾಪ್ರಭುತ್ವದ ಮೇಲೆ ತುಂಬಾ ಹೆಮ್ಮೆ, ನ್ಯಾಯ ಸಮ್ಮತ ಚುನಾವಣೆ ಪ್ರಜಾಪ್ರಭುತ್ವದ ಆಧಾರ ಸ್ತಂಭ, ಏಕೆಂದರೆ ಜನರ ಸರ್ಕಾರವು, ಜನರಿಂದ ಮತ್ತು ಜನರಗೊಸ್ಕರ ಎಂದು ಚುನಾವಣೆಗಳು ಖಚಿತ ಪಡಿಸುತ್ತವೆ, ಚುನಾವಣೆ ಎಂದರೆ ಜನರು ತಮ್ಮ ರಾಜಕೀಯ ನಾಯಕನನ್ನು ಆಯ್ಕೆ ಮಾಡುವ ಅಭಿಪ್ರಾಯವನ್ನು ವ್ಯಕ್ತಪಡಿಸುವ ಪ್ರಕ್ರಿಯೆ, ಸಮರ್ಥ ರಾಜಕೀಯ ನಾಯಕನನ್ನು ಆಯ್ಕೆ ಮಾಡಲು ಸಾರ್ವಜನಿಕ ಮತದಾನದ ಮೂಲಕ ಈ ಅಭಿಪ್ರಾಯವನ್ನು ವ್ಯಕ್ತಪಡಿಲಾಗುತ್ತದೆ. ಆಯ್ಕೆಯಾದ ಜನಪ್ರತಿನಿಧಿಯು ಶಾಸನಗಳನ್ನು ರೂಪಿಸಿ ದೇಶದ ಸವಾರ್ಂಗಿಣ ಅಭಿವೃದ್ಧಿಯ ಜೊತೆಗೆ ಸಾರ್ವಜನಿಕರ ಅಭಿವೃದ್ಧಿಯ ಚಿಂತನೆ ಸಹ ಮಾಡಬೇಕಾಗುತ್ತದೆ. ಹೀಗಾಗಿ ರಾಜಕೀಯ ನಾಯಕರನ್ನು ಆಯ್ಕೆ ಮಾಡಲು ಚುನಾವಣೆಗಳನ್ನು ನ್ಯಾಯ ಸಮೃತ, ಶಾಂತಿಯುತ ಮತ್ತು ಪರಿಣಾಮಕಾರಿಯಾಗಿ ಮಾಡಬೇಕಾದ ನೈತಿಕ ಹೊಣೆಗಾರಿಕೆ ಎಲ್ಲಾ ಮತದಾರರ ಮೇಲಿದೆ ಹಾಗೂ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಸ್ತ್ರೀ ಶಕ್ತಿ ಮತ್ತು ಸ್ವ-ಸಹಾಯ ಸಂಘದ ಗುಂಪುಗಳು ಈ ಅರಿವನ್ನು ಸಮಾಜದ ಸರ್ವರಿಗೂ ಮುಟ್ಟುವಂತೆ ಮಾಡುವ ಜವಾಬ್ದಾರಿ ವಹಿಸಿಕೊಳ್ಳಬೇಕಾಗಿದೆ ಎಂದು ತಿಳಿಸುತ್ತ ತಮ್ಮ ಗುಂಪಿನ ಸದಸ್ಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನೇರವೆರಿಸಬೇಕು ಹಾಗೂ ಎಲ್ಲರೂ ನೈತಿಕ ಹಾಗೂ ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸುವಂತೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ಕುರಿತು ಅರಿವು ಮೂಡಿಸಲು ಕೋರಿದರು.

ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಶ್ರೀ ಮಹಾವೀರ ಬೊರಣ್ಣವರ ಇವರು ಸ್ತ್ರೀ ಶಕ್ತಿ ಮತ್ತು ಸ್ವ-ಸಹಾಯ ಗುಂಪುಗಳು ನೆರೆವೇರಿಸುವ ಸ್ವೀಪ್ ಕಾರ್ಯಕ್ರಮದ ವೇಳಾಪಟ್ಟಿಯಂತೆ ಕ್ಯಾಂಡಲ್ ಮಾರ್ಚ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ಚೌಕ ವರಗೆ, ಮತಗಟ್ಟೆಗಳಲ್ಲಿ ಕುಂಭ ಮೇಳ ಕಾರ್ಯಕ್ರಮ, ದಿನಾಂಕ: ಅರಿಶನ ಕುಂಕುಮ ನೀಡಿ ಕಡಿಮೆ ಮತದಾನಯಾಗಿರುವ ಮತಗಟ್ಟೆಗಳಲ್ಲಿ ಅರಿವು ಮೂಡಿಸುವುದು, ಮತಗಟ್ಟೆಗಳಲ್ಲಿ ದ್ವಜಾರೋಹಣ, ಮತಗಟ್ಟೆಗಳಲ್ಲಿ ರಂಗೋಲಿ ಕಾರ್ಯಕ್ರಮಗಳನ್ನು ಹಮ್ಮಿಕೊಲು ವಿನಂತಿಸಿದರು ಹಾಗೂ ಮತದಾರರ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಯೋಜನಾಧಿಕಾರಿಗಳು ಶ್ರೀ ಬಸವರಾಜ ಜಗಳೂರ ಮಾತನಾಡುತ್ತ ಎಲ್ಲ ಸ್ತ್ರೀ ಶಕ್ತಿ ಸಂಘ ಹಾಗೂ ಸ್ವ-ಸಹಾಯ ಸಂಘದ ಮಹಿಳೆಯರು ಸಮನ್ವಯತೆಯನ್ನು ಸಾಧಿಸಿ ಸ್ವೀಪ್ ಕಾರ್ಯಕ್ರಮವನ್ನು ಯಶಸ್ವೀ ಗೋಳಿಸಲು ವಿನಂತಿದರು. ಇದೇ ಕಾಲಕ್ಕೆ ಮಹಾನಗರ ಪಾಲಿಕೆಯ ಶ್ರೀಮತಿ ಸಾವಿತ್ರಿ ತಿಪ್ಪನ್ನವರ ಶ್ರೀಮತಿ ಕೌಲಗೆ ಸಿಆರ್‌ಪಿಗಳಾದ ಪ್ರಗತಿ, ಮಮತಾ, ಪ್ರೀಯಾ ಮುಂತಾದವರು ಮಹಾನಗರ ಪಾಲಿಕೆಯ, ವೈದ್ಯಕಿಯ ಇಲಾಖೆಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಭೆಯಲ್ಲಿ 150ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

13-04-2024 EE DIVASA KANNADA DAILY NEWS PAPER

ಪಿಯು ಪರೀಕ್ಷೆಯಲ್ಲಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ ಡಿಸ್ಟಿಂಕ್ಷನ್

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ನಗರದ ನಾಗೂರ ಕ್ಯಾಂಪಸ್‌ನಲ್ಲಿನ ದ್ರೋಣ ಅಕಾಡೆಮಿ ಪಿಯು ವಿಜ್ಞಾನ ಕಾಲೇಜನ ವಿದ್ಯಾರ್ಥಿನಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದಾಳೆ.

ವಿದ್ಯಾರ್ಥಿನಿ ದಿವ್ಯಾ ರಾಜೇಂದ್ರಸಿಂಗ್ ಹಜೇರಿ 600 ಅಂಕಗಳ ಪೈಕಿ 538 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದು, ವಿದ್ಯಾರ್ಥಿನಿ ಸಾಧನೆಗೆ ಪಾಲಕರು, ಶಿಕ್ಷರು ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿ ಆಲಗೂರರಿಂದ ನಾಮತ್ರ ಸಲ್ಲಿಕೆ


 ಈ‌ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್‌ನ ಕೆಲಸ ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು.

ನನಗೆ ಪೂರ್ತಿ ಜಿಲ್ಲೆ ಗೊತ್ತಿಲ್ಲ ಎನ್ನುವ ಸಂಸದ ರಮೇಶ ಜಿಗಜಿಣಗಿಯವರಿಗೆ ಏನು ಹೇಳಬೇಕು. ನಾನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಇಡೀ ಜಿಲ್ಲೆ ಪರಿಚಿತನಿದ್ದೇನೆ. ಎರಡು ಸಲ ಶಾಸಕನಾಗಿದ್ದೇನೆ. ನನಗೆ ರಾಜಕೀಯದ ಇತಿಹಾಸವಿದೆ, ದುಡಿದಿದ್ದೇನೆ. ಆದರೆ, ಚಿರಪರಿಚಿತರಾಗಿರುವ ಜಿಗಜಿಣಗಿಯವರ ಮುಖವನ್ನೇ ಜನರು ಮರೆತಿದ್ದಾರಲ್ಲ, ಯಾಕೆಂದರೆ ಇವರು ಯಾರಿಗೆ ಮುಖ ತೋರಿಸಿದ್ದಾರೆ ಹೇಳಿ ಎಂದು ವ್ಯಂಗ್ಯವಾಡಿದರು.

ಯಾರು ಏನೇ ಮಾತಾಡಿದರೂ ಮತದಾರರಿಗೆ ಕಾಂಗ್ರೆಸ್ ಪಕ್ಷ ಜನಾನುರಾಗಿ ಅಂತ ಗೊತ್ತಾಗಿದೆ. ಅಭಿವೃದ್ಧಿ ಮಂತ್ರವಾಗಿಸಿಕೊಂಡು ಅವರ ಮುಂದೆ ನಾನೀಗ ನಿತಿದ್ದೇನೆ. ಗೆಲುವು ಆಗೇ ಆಗುತ್ತದೆ, ಜನರ ಪ್ರತಿಕ್ರಿಯೆ-ಉತ್ಸಾಹದಿಂದ ಈ ಮಾತು ಹೇಳುತ್ತಿರುವೆ. ಗೆದ್ದರೆ ಅವರ ಋಣ ತೀರಿಸುತ್ತೇನೆ ಎಂದು ಹೇಳಿದರು.

15ಕ್ಕೆ ಮತ್ತೆ ನಾಮಪತ್ರ

ಸಾವಿರಾರು ಸಂಖ್ಯೆಯ ಬೆಂಬಲಿಗರು, ಮುಖಂಡರು, ಪಕ್ಷದ ಕಾರ್ಯಕರ್ತರೊಂದಿಗೆ ಸೋಮವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ಆಲಗೂರ್ ತಿಳಿಸಿದರು.

ಜಿಲ್ಲೆಯ ಉಸ್ತುವಾರಿ ಸಚಿವರಾದ ಎಂ‌.ಬಿ.ಪಾಟೀಲರು ಸೇರಿದಂತೆ ಅನೇಕರು ಜತೆಗೆ ಇರಲಿದ್ದಾರೆ. ಜಿಲ್ಲೆಯ ಎಲ್ಲ ಕಡೆಯಿಂದ ಜನರು ಬರಲಿದ್ದಾರೆ ಎಂದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಸಶಕ್ತ ರಾಷ್ಟ್ರ ನಿರ್ಮಾಣಕ್ಕಾಗಿ ಮತ ಚಲಾಯಿಸಿ : ಜಿಲ್ಲಾಧಿಕಾರಿ ಟಿ.ಭೂಬಾಲನ್

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಸಧೃಡ  ರಾಷ್ಟ್ರ ನಿರ್ಮಾಣಕ್ಕಾಗಿ,  ಭಾರತವನ್ನು ಮುನ್ನೆಡಸಲು ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಲು ಮತದಾನ ಅತ್ಯಗತ್ಯವಾಗಿದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲೋಕಸಭೆ ಚುನಾವಣೆ-2024ರ ನಿಮಿತ್ತ ಮತದಾನ ಜಾಗೃತಿ ಮೂಡಿಸುವ ಸ್ಥಬ್ಧಚಿತ್ರ ವಾಹನಕ್ಕೆ ಶುಕ್ರವಾರ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಮತ ಚಲಾಯಿಸುವುದರ ಮೂಲಕ ದೇಶದ ಸಮಗ್ರತೆ ಹಾಗೂ ಪ್ರಗತಿಗೆ ಮುನ್ನುಡಿ ಬರೆಯಬೇಕು. ನಾವು ಹಾಕುವ ಮತ ಕೇವಲ ಒಬ್ಬ ವ್ಯಕ್ತಿಗೆ ಸೀಮಿತವಾಗಿರುವುದಿಲ್ಲ ಅದು ದೇಶದ ಭವಿಶ್ಯವನ್ನು ನಿರ್ಮಾಣ ಮಾಡುವ, ಅಭಿವೃದ್ಧಿಗೆ ಪೂರಕವಾಗಿರುವ ಮೆಟ್ಟಿಲು ಆಗಿರುತ್ತದೆ ಎಂದು ಹೇಳಿದರು.



ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಮಾತನಾಡಿ, ಮತದಾನದಿಂದ ದೇಶದ ಆಭಿವೃದ್ಧಿ ಸಾಧ್ಯ. ನನ್ನ ಒಂದು ಒಂದು ಮತವೂ ದೇಶದ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂಬುದನ್ನು ಅರಿತುಕೊಂಡು ಮತ ಚಲಾಯಿಸಬೇಕು. ಬಹುದೊಡ್ಡ ಪ್ರಜಾಪ್ರಭುತ್ವದ ಭಾರತಕ್ಕೆ ಮತದಾನ ಎಂಬುದು ಅತ್ಯಂತ ಪ್ರಾಮುಖ್ಯತೆ ಹೊದಿಂರುವ ಕರ್ತವ್ಯವಾಗಿದೆ ಎಂದರು.

ಈಗಾಗಲೇ ಸ್ವೀಪ್ ವತಿಯಿಂದ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲೆಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರೂ ತಪ್ಪದೆ ಮತ ಚಲಾಯಿಸಿ ಸುಭದ್ರ ದೇಶ ನಿರ್ಮಾಣ ಮಾಡಲು ಸಹಕರಿಸಬೇಕು ಎಂದರು.

ಈ ವೇಳೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ಅರ್ಷದ,  ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ,   ಸೇರಿದಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಪಿಯು ಪರೀಕ್ಷೆ: ರಕ್ಷಿತಾ ಸಿದ್ದರೆಡ್ಡಿ ಡಿಸ್ಟಿಂಕ್ಸನ್


 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ನಗರದ ಎಕ್ಸಲೆಂಟ್ ಪಿಯು ವಿಜ್ಞಾನ ಕಾಲೇಜನ ವಿದ್ಯಾರ್ಥಿನಿ ರಕ್ಷಿತಾ ಸಿದ್ದರೆಡ್ಡಿ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಡಿಸ್ಟಿಂಕ್ಸನ್ ಪಡೆದಿದ್ದಾಳೆ.

ವಿದ್ಯಾರ್ಥಿನಿ ರಕ್ಷಿತಾ ಸಿದ್ದರೆಡ್ಡಿ 600 ಅಂಕಗಳ ಪೈಕಿ 556 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದು, ವಿದ್ಯಾರ್ಥಿನಿ ಸಾಧನೆಗೆ ಪಾಲಕರು, ಶಿಕ್ಷರು ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.