Tuesday, April 21, 2026

ಮಹಿಳಾ ವಿವಿಯಲ್ಲಿ ಓದುವ ವಿದ್ಯಾರ್ಥಿನಿಯರು ಅಧ್ಯಯನ ಮಾಡುವಾಗಲೇ ಒಂದಷ್ಟು ದುಡ್ಡು ಸಂಪಾದಿಸುವ ಅವಕಾಶಗಳ ಸೃಷ್ಟಿ : ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ

 ವಿಜಯಪುರ: ಮುಂಬರುವ ದಿನಗಳಲ್ಲಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ “ಓದುತ್ತಿರುವಾಗಲೇ ಗಳಿಕೆ” ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿನಿಯರಿಗೆ ಬಯೋಡೀಸೆಲ್ ಘಟಕ, ಕಾಗದ ಮರುಬಳಕೆ ಘಟಕ, ಅನನ್ಯ ಆಹಾರ ಸಂಸ್ಕರಣಾ ಕೇಂದ್ರ ಮತ್ತು ಗ್ರೀನ್‌ಹೌಸ್‌ಗಳಲ್ಲಿ ವಿವಿಧ ಕೌಶಲಗಳನ್ನು ಕಲಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಅವರು ಘೋಷಿಸಿದರು.

ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ೧೭ನೆಯ ವಾರ್ಷಿಕ ಘಟಿಕೋತ್ಸವದಲ್ಲಿ ವಿವಿಯ ಪ್ರಗತಿ ವರದಿ ಮಂಡಿಸಿದ ಅವರು, ಕೌಶಲ್ಯ ಮಹಿಳಾ ತಂತ್ರಜ್ಞಾನ ಪಾರ್ಕ್ ಮೂಲಕ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಹಾಗೂ ಗ್ರಾಮೀಣ  ಮಹಿಳೆಯರಿಗೆ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶವಿದೆ ಎಂದರು.

ವಿದೇಶಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ವಾರಕ್ಕೆ ೨೦ ಗಂಟೆಗಳ ಕಾಲ ಪಾರ್ಟ್ ಟೈಂ ಕೆಲಸ ಮಾಡುವ ಪದ್ಧತಿ ವ್ಯಾಪಕವಾಗಿ ಬಳಕೆಯಲ್ಲಿದೆ. ಅದೇ ಮಾದರಿಯಲ್ಲಿ ಮಹಿಳಾ ವಿವಿಯಲ್ಲಿ ಓದುವ ವಿದ್ಯಾರ್ಥಿನಿಯರು ತಮ್ಮ ಬಿಡುವಿನ ವೇಳೆಯಲ್ಲಿ ಪಾರ್ಟ್ ಟೈಂ ಕೆಲಸ ಮಾಡುವ ಮೂಲಕ ವಿವಿಧ ಕೌಶಲಗಳನ್ನು ಕಲಿಯುವುದರ ಜತೆಗೆ ವಿವಿಧ ಕೋರ್ಸ್ಗಳಲ್ಲಿ ಅಧ್ಯಯನ ಮಾಡುವಾಗಲೇ ಒಂದಷ್ಟು ದುಡ್ಡು ಸಂಪಾದಿಸುವ ಅವಕಾಶಗಳನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿನಿಯರ ಪಾಲಕರ ಆರ್ಥಿಕ ಹೊರೆ ಒಂದಷ್ಟು ಕಡಿಮೆ ಮಾಡಬಹುದಾಗಿದೆ ಎಂದು ವಿವರಿಸಿದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕುಲಪತಿಗಳ ಸಮಾವೇಶದಲ್ಲಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ದೂರಶಿಕ್ಷಣ ಪುನರಾಂಭಿಸುವ ಬಗೆಗೆ ವಿಸ್ತೃತ ಚರ್ಚೆಗಳನ್ನು ನಡೆಸಿದ್ದು ಈ ಸಂಬAಧ ಅಗತ್ಯ ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಉನ್ನತ ಶಿಕ್ಷಣದ ಅಭಿವೃದ್ಧಿಯಲ್ಲಿ ಮೂಲಸೌಕರ್ಯದ ಮಹತ್ವವನ್ನು ಅರಿತು, ನಮ್ಮ ವಿಶ್ವವಿದ್ಯಾಲಯವು ಕ್ಯಾಂಪಸ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಕೊಂಡಿದೆ. ೨೦೨೫-೨೬ ನೇ ಶೈಕ್ಷಣಿಕ ವರ್ಷದಲ್ಲಿ ದಶಮಾನೋತ್ಸವದ ಮೊದಲ ಮಹಡಿಯಲ್ಲಿ  ರೂ. ೩.೭೩ ಕೋಟಿ ಅನುದಾನದಲ್ಲಿ  ಸ್ನಾತಕ  ಕೋರ್ಸುಗಳನ್ನು ನಡೆಸುವ  ಸಲುವಾಗಿ ತರಗತಿ  ಕೊಠಡಿಗಳನ್ನು  ನಿರ್ಮಾಣ ಮಾಡಲಾಗಿದೆ. ಕೇಂದ್ರ ಸರ್ಕಾರದ ಪಿಮ್_ಉಷಾ   ಯೋಜನೆಯಡಿ  ೯.೦೭ ಕೋಟಿ ಮೊತ್ತದ ಅನುದಾನದಲ್ಲಿ “ಮಹಿಳಾ ಕ್ಷೇಮಾಭಿವೃದ್ಧಿ ಕೇಂದ್ರ” ಹಾಗೂ  ಮಹಿಳಾ ಶೌಚಾಲಯಗಳ ನವೀಕರಣ ಕಟ್ಟಡ  ನಿರ್ಮಾಣದ  ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.  

ವಿವಿಯ ಜ್ಞಾನಶಕ್ತಿ ಕ್ಯಾಂಪಸ್‌ನಲ್ಲಿ ನಾಲ್ಕು ಸ್ನಾತಕೋತ್ತರ ವಿದ್ಯಾರ್ಥಿನಿಯರ ವಸತಿ ನಿಲಯಗಳು ಇವೆ. ಇದಲ್ಲದೆ, ಸ್ನಾತಕ ವಿದ್ಯಾರ್ಥಿನಿಯರಿಗಾಗಿ ಎರಡು ವಸತಿ ಸೌಲಭ್ಯಗಳನ್ನು ಒದಗಿಸಲಾಗಿದೆ. ವಿಶ್ವವಿದ್ಯಾಲಯವು ವಿದ್ಯಾರ್ಥಿನಿಯರಿಗೆ ೫೦೦ ಲೀಟರ್ ಸಾಮರ್ಥ್ಯದ ಆರ್.ಒ. ನೀರು ಶುದ್ಧೀಕರಣ ಯಂತ್ರ, ಗೀಸರ್‌ಗಳು, ಸೌರ ಹೀಟರ್‌ಗಳು, ಸೌರ ದೀಪಗಳು ಮತ್ತು ವಸತಿ ನಿಲಯಗಳ ಸುತ್ತಲೂ ಸೌರ ರಸ್ತೆ ದೀಪಗಳಂತಹ ಸೌಲಭ್ಯಗಳನ್ನು ಒದಗಿಸುತ್ತದೆ. ವಿದ್ಯಾರ್ಥಿನಿಯರ ಭದ್ರತೆಯನ್ನು ಖಚಿತಪಡಿಸಲು ೨೪ ಗಂಟೆಗಳ ಭದ್ರತಾ ವ್ಯವಸ್ಥೆ ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿನಿಯರ ಕಲ್ಯಾಣಕ್ಕಾಗಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ನರ್ಸ್ ನೇಮಕವಾಗಿದ್ದು, ಆರೋಗ್ಯ ಕೇಂದ್ರದಲ್ಲಿ ೨೪x೭ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲು ಆಂಬ್ಯುಲೆನ್ಸ್ ಸೇವೆಯೂ ಲಭ್ಯವಿದೆ ಎಂದೂ ಕುಲಪತಿಗಳು ವಿವರಿಸಿದರು.

ವೇದಿಕೆಯ ಮೇಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯ ಅತಿಥಿ ಮುಂಬೈನ ಎಸ್‌ಎನ್‌ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್, ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಶ್ರೀಮತಿ ಪಾರ್ವತೆವ್ವ ಸಿದ್ದಪ್ಪ ಹೊಂಗಲ್, ಡಾ.ಸಂಗೀತಾ ಎನ್ ಕಟ್ಟಿಮನಿ ಮತ್ತು ಶ್ರೀಮತಿ ಆಶಾದೇವಿ ಜಗದೀಶ ಗುಡಗುಂಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್.ಲಕ್ಕಣ್ಣವರ, ಆರ್ಥಿಕ ಅಧಿಕಾರಿ ರಾಮಣ್ಣ ಅಥಣಿ, ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Monday, April 20, 2026

ಬುದ್ಧ ಬಸವ ಭೀಮರ ತತ್ವ ದೇಶ ಆಳಿದರೆ ಅಸ್ಪೃಶ್ಯತೆ ನಿವಾರಣೆ ಸಾಧ್ಯ : ಡಾ. ಹೇಮಂತ ಭೂತ್ನಾಳ

ಶರಣ ಅಲ್ಲಮಪ್ರಭು ಶರಣ ಸಿದ್ದರಾಮೇಶ್ವರ ವೇದಿಕೆ

ವಿಜಯಪುರ : ಇವನಾರವ ಇವನಾರವ ಎಂದರೆ ಜಾತಿ ಇವ ಇವ ನಮ್ಮವ, ನಮ್ಮವ ಎಂದರೆ ಧರ್ಮ, ಪ್ರಧಾನಿ ಬಸವಣ್ಣವರಿಂದ ಎರಡು ಸಲ ಶರಣಾರ್ಥಿ ಪಡೆದ ಹರಳಯ್ಯ -ಕಲ್ಯಾಣಮ್ಮ ಮಾಡಿದ ತಮ್ಮ ಚರ್ಮದ ಚಮ್ಮಾವುಗೆಯಲ್ಲಿ ಕಲ್ಯಾಣ ಕ್ರಾಂತಿ ಬೀಜ ಅಡಗಿತ್ತು ದೇಶದಲ್ಲಿ 3600 ಜಾತಿಗಳಿವೆ ಪ್ರತಿ ಜಾತಿ ತನಗಿಂತ ಕೆಳಗ ಒಂದು ಜಾತಿ ಇರಬೇಕಂತ ಬಯಸುತ್ತದೆ, ಒಂದು ಜಾತಿ ಇನ್ನೊಂದು ಜಾತಿಯ ಪಕ್ಕ ಕೂರೂದಿಲ್ಲ ಈ ದೇಶದಲ್ಲಿ ಒಂದು ಜಾತಿ ಇನ್ನೊಂದು ಜಾತಿಯನ್ನು ಅಸ್ಪೃಶ್ಯತೆಯಿಂದ ಕಾಣುತ್ತಿದೆ ಇಡಿ ದೇಶ ಅಸ್ಪೃಶ್ಯತೆಯಿಂದ ಬಳಲುತ್ತಿದೆ ಬುದ್ಧ, ಬಸವ ಭೀಮರ ತತ್ವಗಳು ಈ ದೇಶವನ್ನು ಆಳಿದರೆ ಮಾತ್ರ ಅಸ್ಪೃಶ್ಯತೆ ನಿವಾರಣೆ ಸಾಧ್ಯ ಎಂದು ಕಾಲೇಜ್ ಶಿಕ್ಷಣ ಇಲಾಖೆಯ ವಿಶ್ರಾಂತ ನಿರ್ದೇಶಕ ಡಾ ಹೇಮಂತ ಭೂತನಾಳ ಹೇಳಿದರು,
ಬಸವ ಜಯಂತಿ ಉತ್ಸವ ಸಮಿತಿ ಹಾಗೂ ವಿಜಯಪುರ ಜಿಲ್ಲಾಡಳಿತದಿಂದ ನಗರದ ಕಂದಗಲ್ಲ ಹಣಮಂತರಾಯ ರಂಗಮAದಿರದಲ್ಲಿ ಏಪ್ರಿಲ್ 19, ಮತ್ತು 20ರಂದು ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ವಿಶ್ವಗುರು ಬಸವಣ್ಣನವರ 893 ನೇ ಜಯಂತಿ ಉತ್ಸವದ ಅಂಗವಾಗಿ ಎರಡನೇ ದಿನ ಕಲ್ಯಾಣ ಕ್ರಾಂತಿ ನೆನಪು ರಾಷ್ಟ್ರೀಯ ಬಹು ಭಾಷಾ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಈ ಸಂದರ್ಭ ಕಾರ್ಯಕ್ರಮವನ್ನು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಕಲಬುರಗಿಯ ಹಿರಿಯ ಸಾಹಿತಿ ಡಾ ಶ್ರೀಶೈಲ ನಾಗರಾಳ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಅಂಧಕಾರದಲ್ಲಿ ಮುಳುಗಿದ ಸಮಾಜದಲ್ಲಿ ಬಸವಣ್ಣ ಮತ್ತು ಶರಣರು ಹಚ್ಚಿದ ವಚನ ಸಾಹಿತ್ಯ ಜ್ಯೋತಿ ಹಚ್ಚಿದ್ದಾರೆ, ವಚನ ಸಾಹಿತ್ಯವೇ ಕನ್ನಡ ನೆಲದ ಮೊದಲ ಸಾಹಿತ್ಯದ ಫಸಲಾಗಿದೆ, ಶರಣರ ವಚನ ಸಾಹಿತ್ಯ ಪ್ರತಿಭಟನೆಯ ರೂಪವಾಗಿದೆ, ವಚನಗಳು ಬದುಕಿನ ಶೋಧ ಮಾಡುತ್ತವೆ, ಜಗತ್ತಿನಲ್ಲಿ ಮೊಟ್ಟ ಮೊದಲ ಬಾರಿಗೆ ಸಾಮಾಜಿಕ ಕಟ್ಟಳೆಗಳನ್ನು ಮೀರಿ ಬಸವಣ್ಣನ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ರಚನೆಯಾದದ್ದು ವಚನ ಸಾಹಿತ್ಯ ಎಂದರು.
ಶರಣರು ಮೆಟ್ಟಿದ ಕಲ್ಯಾಣ ನಾಡು ಭೂ ಕೈಲಾಸವಾಗಿತ್ತು ಜಗತ್ತಿನ ವಿವಿಧ ಭಾಗದ ಜನ ವಚನ ಚಳುವಳಿ ಪ್ರಭಾವಕ್ಕೆ ಒಳಪಟ್ಟು ಕಲ್ಯಾಣಕ್ಕೆ ಬಂದರು, ಕಾವ್ಯ ಏನು ಮಾಡಬಲ್ಲದು ಎಂಬುದಕ್ಕೆ ಉತ್ತರ ವಚನಗಳಲ್ಲಿಯೇ ಇದೆ ಎಂದರು.

ಕವಿಗೋಷ್ಠಿ ಆಶಯ ನುಡಿ ಆಡಿ ಪ್ರೊ ಬಸವರಾಜ ಜಾಲವಾದಿ ಅವರು ಮಾತನಾಡಿ, 21ನೇ ಶತಮಾನದಲ್ಲಿ ಬಸವಣ್ಣನ ಅರ್ಥ ಶಾಸ್ತ್ರವನ್ನು ನಾವೆಲ್ಲ ಅಪ್ಪಿಕೊಳ್ಳಬೇಕು, ಒಪ್ಪಿಕೊಳ್ಳಬೇಕು ಕಾಯಕ ಮಾಡಿದ ಸಂಪಾದನೆಯನ್ನು ಸಮಾಜಕ್ಕೆ ಸದುಪಯೋಗಪಡಿಸಬೇಕು ಎಂದು ಹೇಳಿದ ಬಸವಾದಿ ಶರಣರ ತತ್ವ ಎಲ್ಲರು ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮ ಸಂಯೋಜಕ ಶಂಕರ ಬೈಚಬಾಳ ಮಾತನಾಡಿ ಕನ್ನಡದ ಕವಿಗಳ ಸಂದೇಶ ಬೇರೆ ಭಾಷೆಗೆ ತಲುಪಿಸುವ ಉದ್ದೇಶದಿಂದ ಬಹುಭಾಷಾ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದರು.
ಕವಿಗೋಷ್ಠಿಯಲ್ಲಿ ಕನ್ನಡಲ್ಲಿ ಕಲಾವತಿ ಬೈಚಬಾಳ, ಬಸರಾಜ ಗವಿಮಠ, ಶೇಷರಾವ ಮಾನೆ, ಪರಶುರಾಮ ಶಿವಶರಣ, ಶಿವಪುತ್ರ ಅಜಮನಿ, ಕೆ ಎಸ್ ಬಾಗೇವಾಡಿ, ಇಂಗ್ಲಿಷ್‌ನಲ್ಲಿ ಬಸಮ್ಮ ಬಾಗೋಜಿ, ಅನು ಮುಲ್ಲಾ, ಎಸ್.ಬಿ. ಕಮತಿ, ಹಿಂದಿಯಲ್ಲಿ ಶಿವಣ್ಣ ಹದಿಮೂರ, ಸಂಸ್ಕೃತದಲ್ಲಿ ಗೀತಾ ಸನದಿ, ಕೊಂಕಣಿಯಲ್ಲಿ ಪ್ರಶಾಂತ ದೈವಜ್ಞ, ತೆಲಗುದಲ್ಲಿ ಡಿ. ಜೋಸೆಫ್, ಉರ್ದುದಲ್ಲಿ ಎಂ.ಎA.ಕಲಾಸಿ, ಡಾ. ಅಮೀರುದ್ದೀನ ಖಾಜಿ, ಲಂಬಾಣಿಯಲ್ಲಿ ವಸಂತ ಚವ್ಹಾಣ ಕವನ ವಾಚಿಸಿದರು.


ಕಾರ್ಯಕ್ರಮದಲ್ಲಿ ವೇದಿಕೆಯ ಮೇಲಿನ ಗಣ್ಯರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.


ವೇದಿಕೆಯಲ್ಲಿ ವಿದ್ಯಾವತಿ ಅಂಕಲಗಿ, ದಾನಮ್ಮ ಮಹಾಜನ, ಲಕ್ಷ್ಮೀ ಹೊಸಮನಿ, ಸುಭಾಸ ಕನ್ನೂರ, ಘನಶ್ಯಾಮ ತೋಸ್ನಿವಾಲಾ, ಮಹಾದೇವಿ ತೆಲಗಿ, ರಾಜಶೇಖರ ಉಮರಾಣಿ, ದಾನೇಶ ಅವಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಭುಗೌಡ ಪಾಟೀಲ, ಕೆ.ಎಫ್. ಅಂಕಲಗಿ, ಮಹಾದೇವಿ ಗೋಕಾಕ, ವ್ಹಿ.ಸಿ. ನಾಗಠಾಣ, ಅಡಿವೆಪ್ಪ ಸಾಲಗಲ್ಲ, ಅನಿಲ ಹೊಸಮನಿ, ಭಾರತಿ ಪಾಟೀಲ, ಶಾಂತವೀರ ಥಾಲಬಾವಡಿ, ಲಾಯಪ್ಪ ಇಂಗಳೆ, ಕಲ್ಲು ಶಿವಶರಣ, ಶರಣು ಕಿರಣಗಿ, ಬಸನಗೌಡ ಹರನಾಳ, ವ್ಹಿ.ಡಿ.ಐಹೊಳ್ಳಿ, ಜಂಬುನಾಥ ಕಂಚ್ಯಾಣಿ, ಸುಧಾರಾಣಿ ಬಿರಾದಾರ, ಸಂಗೀತಾ ಪೂಜಾರಿ, ಅನುಪ್ರಿಯಾ ಬಿರಾದಾರ, ಶಿವಾನಂದ ಸಾಂಗೋಲಿ, ಚೆನ್ನು ಕಟ್ಟಿಮನಿ, ತಿಪ್ಪಣ್ಣ ದೊಡಮನಿ, ಯಮನಪ್ಪ ಗುಣಕಿ, ಶ್ರೀನಾಥ ಪೂಜಾರಿ, ಸುಭಾಸ ಯಾದವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.