ವಿಜಯಪುರ : ಸಾಮಾಜಿಕ ಜಾಲತಾಣದಲ್ಲಿ ಮುಳುಗಿ ಹೋಗಿರುವ ಯುವಕರಿಗೆ ಹೊತ್ತಿಗೆಯ ಬಗ್ಗೆ ಒಲವು ಮೂಡಿಸಿ ಅವರಲ್ಲಿ ಬುದ್ಧ-ಬಸವ-ಬಾಬಾಸಾಹೇಬರ ಚಿಂತನೆಯನ್ನು ಬೆಳೆಸುವ ನಿಟ್ಟಿನಲ್ಲಿ ಪ್ರಥಮ ಪ್ರಯತ್ನವಾಗಿ ಮೇ ಸಾಹಿತ್ಯ ಬಳಗದಿಂದ ಸಂಘಟಿಸಲಾಗಿದ್ದ ಪುಸ್ತಕ ಮೇಳ ಯಶಸ್ವಿಯಾಗಿದ್ದು, 30 ಲಕ್ಷ ರೂ. ಮಿಕ್ಕಿ ವಹಿವಾಟು ನಡೆದಿದೆ, ಜನರು ಪುಸ್ತಕದ ಬಗ್ಗೆ ಒಲವು ಕಡಿಮೆಯಾಗಿಲ್ಲ ಎನ್ನುವುದು ಇದಕ್ಕೆ ಮತ್ತೊಮ್ಮೆ ಸಾಕ್ಷೀಕರಿಸಿದೆ, ಈ ಮೇಳವನ್ನು ಮುಂದಿನ ವರ್ಷವೂ ಅತ್ಯಂತ ಅಚ್ಚುಕಟ್ಟುತನಿಂದ ಆಯೋಜಿಸಲಾಗುವುದು ಎಂದು ಮೇ ಸಾಹಿತ್ಯ ಬಳಗದ ಅನಿಲ ಹೊಸಮನಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ಮೇ ಸಾಹಿತ್ಯ ಬಳಗ ಸಂಘಟಿಸಿದ ಪುಸ್ತಕ ಮೇಳ ಯಶಸ್ವಿಯಾಗಿದೆ, ಬುದ್ಧ, ಬಸವ ಹಾಗೂ ಬಾಬಾಸಾಹೇಬರ ತತ್ವ ಚಿಂತನೆ, ಆಶಯಗಳ ಆಧರಿಸಿ ಸಮಾಜ ಇನ್ನೂ ನಿರ್ಮಾಣವಾಗಿಲ್ಲ, ಈ ಮಹನೀಯರ ಸಮ ಸಮಾಜದ ಕನಸು ನನಸಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕಿದೆ, ಈ ಪ್ರಯತ್ನದ ಭಾಗವಾಗಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮುಳುಗಿ ಹೋಗಿರುವ ಯುವಜನರಿಗೆ ಪುಸ್ತಕಕದ ಕಡೆಗೆ ಒಲವು ಮೂಡಿಸುವ ನಿಟ್ಟಿನಲ್ಲಿ ಈ ಪುಸ್ತಕ ಮೇಳವನ್ನು ಆಯೋಜಿಸಲಾಗಿತ್ತು. ಪುಸ್ತಕ ಮೇಳದಲ್ಲಿ ಲಡಾಯಿ, ಸ್ವಪ್ನಾ ಬುಕ್ ಹೌಸ್, ನವ ಕರ್ನಾಟಕ, ಆರ್ ಎಸ್ ಬುಕ್ ವರ್ಲ್ಡ್ ಸೇರಿ 35 ಕ್ಕೂ ಹೆಚ್ಚು ಪ್ರಕಾಶನ ಸಂಸ್ಥೆಗಳು ಭಾಗವಹಿಸಿದ್ದವು ಎಂದರು.
ವಿಜಯಪುರದಲ್ಲಿ ಪುಸ್ತಕ ಖರೀದಿ ಆಗುವುದಿಲ್ಲ ಎಂಬ ಮನೋಭಾವ ಹೊಂದಿದ್ದ ಪ್ರಕಾಶಕರಿಗೆ ಮೇಳದಲ್ಲಿ ಭಾಗವಹಿಸಿದ ಮೇಲೆ ಅವರ ಅಭಿಪ್ರಾಯ ಹಾಗೂ ಮನೋಭಾವ ಬದಲಾಗಿದ್ದು, ಪುಸ್ತಕ ಪ್ರೇಮಿಗಳು ಆಸಕ್ತಿಯಿಂದ ಪುಸ್ತಕ ಖರೀದಿ ಮಾಡಿರುವುದು ಅನೇಕ ಪ್ರಕಾಶಕರಿಗೆ ಸಂತೋಷ ತಂದಿದೆ, ಹಲವು ಪ್ರಕಾಶರಿಗೆ ತಲಾ 5 ಲಕ್ಷ ರೂ.ಗಳಿಗೂ ಮಿಕ್ಕಿ ಪುಸ್ತಕದ ವ್ಯಾಪಾರ-ವಹಿವಾಟು ನಡೆದಿರುವುದು ಜನತೆ ಪುಸ್ತಕದ ಬಗ್ಗೆ ಹೊಂದಿರುವ ಒಲವಿಗೆ ಸಾಕ್ಷಿ ಎಂದರು.
ಸಾಮಾನ್ಯ ಬಡ ಕುಟುಂಬದಿAದ ಬಂದವರೇ ಸಂಘಟಿಸಿದ ಈ ಪುಸ್ತಕ ಮೇಳಕ್ಕೆ ಅನೇಕರು ಉದಾರವಾದ ಸಹಾಯ ಹಸ್ತ ಚಾಚಿದ್ದಾರೆ, ಅವರಿಗೆ ಮೇಳ ಚಿರ ಋಣಿಯಾಗಿದೆ, ಅನೇಕ ಸ್ವಯಂ ಪ್ರೇರಿತವಾಗಿ ಶ್ರಮಿಸಿದ ದೊಡ್ಡ ಪಡೆಯೇ ಇದೆ ಎಂದರು. ಅವರಿವರೆನ್ನದೆ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮೇ ಸಾಹಿತ್ಯ ಬಳಗದ ಪ್ರಮುಖರಾದ ಚೆನ್ನು ಕಟ್ಟಿಮನಿ, ಯಮನಪ್ಪ ಗುಣಕಿ ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ,ಸಾಯಬಣ್ಣ ಹಳ್ಳಿ, ಸೋಮಲಿಂಗ ರಣದೇವಿ, ಲಿಂಗರಾಜ ಬೀದರಕುಂದಿ ಇದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
.jpeg)