ಸಿಂದಗಿ : ಹೈದ್ರಾಬಾದ್ ಪ್ರಾಂತ ವಿಮೋಚನೆ ಆಗಲು ಮುಖ್ಯ ಕಾರಣಿಕರ್ತರು ಸ್ವಾಮಿ ರಾಮಾನಂದ ತೀರ್ಥರು ವಿಮೋಚನಾ ದಿನದಂದು ಅವರ ಸ್ಮರಣೆ ಮಾಡುವುದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಎಂದು ರಾಷ್ಟ್ರ ವೀರ ಸ್ವಾಮಿ ರಾಮಾನಂದ ತೀರ್ಥ ಸೇವಾ ಸಮಿತಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.
ಅವರು ಸಿಂದಗಿಯ ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕದಲ್ಲಿ ರಾಷ್ಟ್ರ ವೀರ ಸ್ವಾಮಿ ರಾಮಾಂನಂದ ತೀರ್ಥ ಸೇವಾ ಸಮಿತಿಯಿಂದ ಹಮ್ಮಿಕೊಂಡಿದ್ದ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಸ್ವಾತಂತ್ರ್ಯ ಚಳುವಳಿಗೆ ದೊಡ್ಡ ಕೊಡುಗೆ ನೀಡಿದವರ ಸಾಲಿನಲ್ಲಿ ನಿಲ್ಲುವ ಪ್ರಮುಖ ನಾಯಕರೆಂದರೆ ಸ್ವಾಮಿ ರಾಮಾನಂದ ತೀರ್ಥರಾಗಿದ್ದಾರೆ. ಸರಕಾರ ಅವರ ಜನ್ಮ ದಿನವಾದ ಅಕ್ಟೋಬರ್ 3ರಂದು ಸರ್ಕಾರಿ ಜಯಂತಿಯಾಗಿ ಘೋಷಣೆ ಮಾಡಿ ಆಚರಿಸಿ ಸ್ವಾಮಿ ರಾಮಾನಂದ ತೀರ್ಥರಿಗೆ ಗೌರವಿಸಲ್ಲಿಸಬೇಕು, ಹಾಗೂ ಸಿಂದಗಿ ಯಲ್ಲಿರುವ ಅವರ ಸ್ಮಾರಕವನ್ನು ಅಭಿವೃದ್ಧಿಪಡಿಸಬೇಕೆಂದರು.
ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಪಾಟೀಲ ಹಾಗೂ ಎನ್ ಸುರೇಶಕುಮಾರ ಅವರು ಮಾತನಾಡಿ ಸಿಂದಗಿಯು ಹೈದ್ರಾಬಾದ್ ಪ್ರಾಂತ ವಿಮೋಚನಾ ಚಳುವಳಿಯ ಕೇಂದ್ರ ಸ್ಥಾನವಾಗಿದೆ. ಸಿಂದಗಿಯಲ್ಲಿ ಜನಸಿದ ಸ್ವಾಮಿ ರಾಮಾನಂದ ತೀರ್ಥರು ಚಳುವಳಿಯ ನೇತೃತ್ವ ವಹಿಸದೆ ಹೋದಲ್ಲಿ ಹೈದ್ರಾಬಾದ್ ಪ್ರಾಂತ ವಿಮೋಚನೆ ಆಗುತ್ತಿರಲಿಲ್ಲ ಅಂತಹ ಮಹಾತ್ಮರಿಗೆ ಗೌರವಿಸುವ ಕೆಲಸ ವಿಜಯಪುರ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ಮಾಡಬೇಕು ಎಂದರು.
ವಿಜಯಪುರ ಜಿಲ್ಲಾ 371 ಜೆ ಹೋರಾಟಗಾರ ಲಾಯಪ್ಪ ಇಂಗಳೆ ಅವರು ಮಾತನಾಡಿ ವಿಜಯಪುರ ಜಿಲ್ಲಾಡಳಿತ ಸಿಂದಗಿ ತಾಲೂಕು ಆಡಳಿತ ಮತ್ತು ರಾಜ್ಯ ಸರಕಾರ ವಿಮೋಚನಾ ದಿನದಂದು ಗೌರವ ಸಲ್ಲಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು ಸರಕಾರ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಅವರಿಗೆ ಗೌರವ ಸಲ್ಲಿಸದೆ ಅಗೌರವ ತೋರಿಸುವ ಕೆಲಸ ಮಾಡಿದೆ. ಕೂಡಲೇ ಸರಕಾರ ಸ್ವಾಮಿ ರಾಮಾನಂದ ತೀರ್ಥರ ಸಿಂದಗಿಯ ಸ್ಮಾರಕವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಮಾಡಬೇಕು ಜೊತೆಗೆ ಅಕ್ಟೋಬರ್ 3 ರ ಅವರ ಜನ್ಮ ದಿನವನ್ನು ರಾಷ್ಟ್ರೀಯ ದಿನಾಚರಣೆಯಾಗಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಘೋಷಣೆ ಮಾಡಿ ಆಚರಣೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹೈದ್ರಾಬಾದ್ ವಿಮೋಚನಾ ಚಳುವಳಿ ಪಿತಾಮಹ ಸ್ವಾಮಿ ಶ್ರೀ ರಾಮಾಂನಂದ ತೀರ್ಥರ ಪ್ರತಿಮೆಗೆ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ವಾಮಿ ರಾಮಾನಂದ ತೀರ್ಥರ ವಂಶಸ್ಥರಾದ ರಂಗರಾವ ಖೇಡಗಿ, ಸಮಿತಿಯ ಕಾರ್ಯದರ್ಶಿ ಪ್ರದೀಪ ದೇಶಪಾಂಡೆ, 371 ಜೆ ಹೋರಾಟಗಾರರಾದ ವಿನೋದ ಖೇಡ ಕಲ್ಲಪ್ಪ ಶಿವಶರಣ, ಚಂದ್ರಶೇಖರ ಹೊಸಮನಿ,ಬಸವರಾಜ ಕುಂಬಾರ, ಧರ್ಮಣ್ಣ ಗಬಸಾವಳಗಿ, ಬಸನಗೌಡ ಧರ್ಮಗೊಂಡ, ಶಿವಪ್ಪ ಸುಲ್ಪಿ, ಎಮ್ ಎಚ್ ಪಟೇಲ, ರಮೇಶ ದೊಡಮನಿ, ಶಬ್ಬೀರ ಪಟೇಲ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


