Tuesday, August 18, 2026

ಇಂಡಿ ಶಾಸಕ ಯಶವಂತರಾಯಗೌಡರಿಗೆ 371(ಜೆ ) ಹೋರಾಟ ಸಮಿತಿ ಸದಸ್ಯರ ಮನವಿ


 ಇಂಡಿ :ವಿಜಯಪುರ ಜಿಲ್ಲಾ 371(ಜೆ ) ಹೋರಾಟ ಸಮಿತಿ ಸದಸ್ಯರು ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರಿಗೆ  371(ಜೆ) ಮೀಸಲಾತಿಗೆ ಆಗ್ರಹಿಸಿ ಮನವಿ ಸಲ್ಲಿಸಿದರು.

ಸಂವಿಧಾನದ 371(ಜೆ ) ಗೆ ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆ ಸೇರಿಸಲು ಮುಖ್ಯಮಂತ್ರಿಗಳ ಮನ ಒಲಿಸಿ   ರಾಜ್ಯ ಸರ್ಕಾರದಿಂದ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಿಕೊಡಬೇಕು ಹಾಗೂ ಮೀಸಲಾತಿಗೆ ಸೇರ್ಪಡೆಯಾಗುವವರೆಗೆ ತಾತ್ಕಾಲಿಕವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸೌಲಭ್ಯಗಳನ್ನು ವಿಜಯಪುರ ಜಿಲ್ಲೆಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ. ಮನವಿ ಸ್ವೀಕರಿಸಿದ  ಶಾಸಕರು ಹೋರಾಟ ಸಮಿತಿ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ 371(ಜೆ) ಮೀಸಲಾತಿ  ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ಹೇಳಿದ್ದಾರೆ.
ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಯುವಕರಿಗೆ ನೇಮಕಾತಿಯಲ್ಲಿ ಮೀಸಲಾತಿ,ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿಗುವ ವಿಶೇಷ ಅನುದಾನ ಸೌಲಭ್ಯ ಸೇರಿದಂತೆ ಜಿಲ್ಲೆಯ 25 ಲಕ್ಷ ಜನರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ 371(ಜೆ) ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಹೋರಾಟಗಾರರು ಇದೆ ಸಂದರ್ಭದಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೋರಾಟಗಾರರಾದ ವಿನೋದ ಖೇಡ, ಸಂಜೀವಗೌಡ ಪಾಟೀಲ(ಕನ್ನೂರ) ಮಲ್ಲನಗೌಡ ಪಾಟೀಲ (ಬರಟಗಿ) ಲಾಯಪ್ಪ ಇಂಗಳೆ ಚಂದ್ರಶೇಖರ ಹೊಸಮನಿ,ಸೇರಿದಂತೆ
ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, August 17, 2026

ನೇಕಾರ ಸಮ್ಮಾನ್ ಯೋಜನೆಗೆ: ಅರ್ಜಿ ಆಹ್ವಾನ

ವಿಜಯಪುರ : 2026-27ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿ ಜಿಲ್ಲೆಯ ಅರ್ಹ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ಹಾಗೂ ನೇಕಾರಿಕೆಗೆ ಸಂಬAಧಿಸಿದ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರಿಗೆ ವಾರ್ಷಿಕ ರೂ.5 ಸಾವರ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 23 ಕೊನೆಯ ದಿನವಾಗಿದೆ.

ಪ್ರಸ್ತುತ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಹಾಗೂ ಪಿಎಂಜೆಜೆಬಿವೈ-ಪಿಎAಎಸ್‌ಬಿವೈ ಯೋಜನೆಯಡಿ ನೋಂದಣಿಯಾಗಿರುವ ಅರ್ಹ ನೇಕಾರರು ಸೌಲಭ್ಯ ಪಡೆಯಲು ಅರ್ಹರಾಗಿದ್ದು, ಕಳೆದ ಸಾಲಿನಲ್ಲಿ ನೋಂದಣಿಯಾಗದ ಅರ್ಹ ನೇಕಾರರು ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೊಸದಾಗಿ ಅರ್ಜಿ ಸಲ್ಲಿಸುವವರು ಆಧಾರ್, ರೇಷನ್ ಕಾರ್ಡ್, ನೇಕಾರ ಸಮ್ಮಾನ್ ಐಡಿ ಅಥವಾ ಪೆಹಚಾನ್ ಕಾರ್ಡ್, ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಪಾಸ್‌ಬುಕ್, ನೇಕಾರರ ಗುರುತಿನ ಚೀಟಿ, ನೇಕಾರಿಕೆ ವೃತ್ತಿಯಲ್ಲಿ ತೊಡಗಿರುವ ಫೋಟೋ ಹಾಗೂ ಪಿಎಂಜೆಜೆಬಿವೈ-ಪಿಎAಎಸ್‌ಬಿವೈ ನೋಂದಣಿ ದಾಖಲೆಗಳ ಪ್ರತಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.9538114434 ,9611297674 ಹಾಗೂ ಅರ್ಹ ನೇಕಾರರು ಸ್ಥಳೀಯ ಕೈಮಗ್ಗ ಅಭಿವೃದ್ಧಿ ನಿಗಮ ಅಥವಾ ನೇಕಾರ ಸಹಕಾರ ಸಂಘಗಳ ಮೂಲಕ, ಇಲ್ಲವೇ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಡಿ.ಐ.ಸಿ. ಕಂಪೌAಡ್, ಶಿಖಾರಖಾನೆಯಲ್ಲಿರುವ ಕಚೆರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಮದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, August 14, 2026

ನಿವೃತ್ತ ಬಿಎಸ್‌ಎನ್‌ಎಲ್ ಸಿಬ್ಬಂದಿ, ರೈತ ಡಿ. ಶ್ರೀ ಶಂಕರಗೌಡ ಗೌಡಪ್ಪಗೌಡ ಬಿರಾದಾರ ನಿಧನ


ವಿಜಯಪುರ: ನಗರದ ನಿವಾಸಿ, ನಿವೃತ್ತ ಟೆಲಿಕಾಂ–ಬಿಎಸ್‌ಎನ್‌ಎಲ್ ಸಿಬ್ಬಂದಿ ಹಾಗೂ ಪ್ರಸಿದ್ಧ ರೈತರಾದ ಡಿ. ಶ್ರೀ ಶಂಕರಗೌಡ ಗೌಡಪ್ಪಗೌಡ ಬಿರಾದಾರ ಅವರು ಶುಕ್ರವಾರ, ಆಗಸ್ಟ್ 14, 2026ರಂದು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು 1953ರ ಜೂನ್ 1ರಂದು ಜನಿಸಿದ್ದರು.

ಸಮಾಜಮುಖಿ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದ್ದ ಅವರು ಸರಳ, ಸಜ್ಜನ ಸ್ವಭಾವದವರಾಗಿ ಕುಟುಂಬಸ್ಥರು, ಬಂಧುಗಳು, ಸ್ನೇಹಿತರು ಹಾಗೂ ಸಮಾಜದವರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಅವರ ನಿಧನದಿಂದ ಕುಟುಂಬ ಹಾಗೂ ಬಂಧುಬಳಗದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಮೃತರ ಅಂತ್ಯಕ್ರಿಯೆ ಶನಿವಾರ, ಆಗಸ್ಟ್ 15ರಂದು ಬೆಳಿಗ್ಗೆ ನಡೆಯಲಿದ್ದು, ವಿಜಯಪುರದ ಶಿವನಗಿ ರಸ್ತೆಯ ಸ್ವಗೃಹದಿಂದ ಅಂತಿಮ ಯಾತ್ರೆ ನೆರವೇರಲಿದೆ. ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಹೆಗಡಿಹಾಳದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ದೊರಕಲಿ ಎಂದು ಬಂಧುಗಳು, ಸ್ನೇಹಿತರು ಮತ್ತು ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Thursday, August 13, 2026

ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ಸೌಲಭ್ಯ ತಕ್ಷಣಕ್ಕೆ ಒದಗಿಸಬೇಕು: ಎಸ್.ಕೆ.ಘಾಟಿ


ಮುದ್ದೇಬಿಹಾಳ : 371 ಜೆ ಮೀಸಲಾತಿ ಅಡಿ ಬಿಟ್ಟು ಹೋದ ವಿಜಯಪುರ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಮೀಸಲಾತಿಗೆ ಸೇರಿಸಲು ಕೇಂದ್ರ ಸರಕಾಕ್ಕೆ ಶಿಫಾರಸ್ಸು ಕಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ ವಿವಿದೋದ್ದೇಶ (ಒಖW), ಗ್ರಾಮೀಣ ಪುನರ್ವಸತಿ (ಗಿಖW), ನಗರ ಪುನರ್ವಸತಿ (UಖW) ರಾಜ್ಯ ಒಕ್ಕೂಟ ಹಾಗೂ ತಾಲೂಕಾ ವಿಕಲಚೇತನರ ಸಂಘ -ಸಂಸ್ಥೆಗಳು ಮುದ್ದೇಬಿಹಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಶೇಷ ಚೇತನರ ವಿವಿಧೋದ್ದೇಶಗಳ ಒಕ್ಕೂಟದ ತಾಲೂಕಾ ಅಧ್ಯಕ್ಷ ಎಸ್.ಕೆ.ಘಾಟಿಯವರು ಮಾತನಾಡಿ, ಡಾ.ಡಿ.ಎಂ. ನಂಜುಡಪ್ಪ ವರದಿಯ ಪ್ರಕಾರ ರಾಜ್ಯದಲ್ಲಿ ಹಿಂದುಳಿದ ಜಿಲ್ಲೆಗಳಿಗೆ 371 ಜೆ ಮೀಸಲಾತಿ ಒದಗಿಸಲಾಗಿದೆ. ಮೀಸಲಾತಿ ಪಡೆದ ಈಗಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗಿಂತ ಅತ್ಯಂತ ಹಿಂದುಳಿದ ವಿಜಯಪುರ ಜಿಲ್ಲೆಗೆ ಮೀಸಲಾತಿಯಿಂದ ಕೈ ಬಿಟ್ಟಿದ್ದರಿಂದ ದೊಡ್ಡ ಅನ್ಯಾಯವಾಗಿದೆ. ಕೂಡಲೇ ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ಸೌಲಭ್ಯ ತಕ್ಷಣಕ್ಕೆಒದಗಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುವ ಮೂಲಕ ಅನ್ಯಾಯವನ್ನು ಸರಿಪಡಿಸಿ ಜಿಲ್ಲೆಯ ಜನತೆಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪದವಿದರ ಒಕ್ಕೂಟದ ಮುಖಂಡ ಚಂದ್ರಶೇಖರ ಹೊಸಮನಿ ಮಾತನಾಡಿ, ರಾಜ್ಯದಲ್ಲಿ ಪ್ರತಿಯೊಂದು ವಿಷಯದಲ್ಲಿ ಅನ್ಯಾಯಕ್ಕೊಳಗಾಗುತ್ತಿರುವ ಏಕೈಕ ಜಿಲ್ಲೆ ವಿಜಯಪುರವಾಗಿದೆ. ಅಖಂಡ ಹೈದ್ರಾಬಾದ್ ಪ್ರಾಂತದ ಭಾಗವಾಗಿದ್ದ ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಯಿಂದ ಹೊರಗಿಡುವ ಮೂಲಕ ಜಿಲ್ಲೆಯ ಜನರಿಗೆ ಅನ್ಯಾಯ ಮಾಡಿದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಜಿಲ್ಲೆಯ ಸಾರಿಗೆ ವ್ಯವಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ, ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯ, ಕರ್ನಾಟಕ ಆಡಳಿತ ಮಂಡಳಿ ಪ್ರಾಧಿಕಾರ, ಪ್ರಾಚ್ಯವಸ್ತು ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಕಲಬುರಗಿ ವಿಭಾಗದಲ್ಲಿ ಇದ್ದರು ಕೂಡಾ ವಿಜಯಪುರ ಜಿಲ್ಲೆಯನ್ನು 371 ಜೆ ಅಡಿ ಸೇರಿಸದೆ ಇರುವುದು ಖಂಡನೀಯ ಎಂದರು. ಜಿಲ್ಲೆಯ ಶಾಸಕರು, ಸಚಿವರು ಒಗ್ಗಟ್ಟಿನಿಂದ ಕೂಡಲೇ ಜಿಲ್ಲೆಯನ್ನು 371 ಜೆ ಮೀಸಲಾತಿ ಅಡಿ ಸೇರಿಸಿ ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರುಗಳಾದ ಈರಣ್ಣ ತಾರನಾಳ, ಬಸವರಾಜ ನಾಯ್ಕೋಡಿ, ಪವಾಡೆಪ್ಪ ಚಲವಾದಿ, ಗುರುರಾಜ ಡಂಬಳ, ಮಂಜುನಾಥ ಬಿರಾದಾರ, ಸುದೀಪ ಚಲವಾದಿ, ಸಂಗಮ್ಮ ಜಂಬಗಿ, ಸಂಗನಗೌಡ ಬಗಲಿ, ಶಶಿಕಾಂತ ಯಾಳಗಿ, ಪ್ರಭುಗೌಡ ಚಿಂಚೋಲಿ, ಮಹಾದೇವ ಮಾದಿನಾಳ, ರುದ್ರಗೌಡ ಜಿ. ಗೌಡರ, ಶಿವಪುತ್ರ ಮೋಟಗಿ, ಉಮೇಶ ಸಾತಿ, ನಾಗೇಶ ಅಮರಾವತಿ, ಬಾಲಪ್ಪ ಬಿಸಲದಿನ್ನಿ, ಅಡಿವೆಪ್ಪ ಪಡಗಾನೂರ, ಎಸ್.ಸಿ.ಮೇಟಿ, ಯಲ್ಲಪ್ಪ ಮಾದರ, ಸಂಗೀತಾ ಕೋಳೂರ ಸೇರಿದಂತೆ ನೂರಾರು ಜನ ಉಪಸ್ಥಿತರಿದ್ದರು.


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಜಯಪುರವನ್ನು 371ಜೆ ಯಿಂದ ಕೈ ಬಿಟ್ಟಿದ್ದು ಏಕೆ ಜಿಲ್ಲೆಯ ಸಚಿವರು ಶಾಸಕರು ಉತ್ತರಿಸಬೇಕು -ವಸಂತ ಭೈರಾಮಡಿ

ಚಡಚಣ :  371 ಜೆ  ಮೀಸಲಾತಿ     ಅಡಿ ಬಿಟ್ಟು ಹೋದ ವಿಜಯಪುರ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಮೀಸಲಾತಿಗೆ ಸೇರಿಸಲು ಕೇಂದ್ರ ಸರಕಾಕ್ಕೆ ಶಿಫಾರಸ್ಸು ಕಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಚಡಚಣ ತಾಲೂಕು ಘಟಕದ ಮುಖಂಡರು ತಹಶೀಲ್ದಾರ ಅವರ ಮೂಲಕ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ  ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ವಸಂತ ಭೈರಾಮಡಿ ಅವರು ಮಾತನಾಡಿ ಅಖಂಡ ಹೈದ್ರಾಬಾದ್ ಪ್ರಾಂತದ ಭಾಗವಾಗಿದ್ದ ವಿಜಯಪುರ ಜಿಲ್ಲೆಯನ್ನು 371ಜೆ ಮೀಸಲಾತಿಯಿಂದ ಹೊರಗಿಡುವ ಮೂಲಕ ಜಿಲ್ಲೆಯ ಜನರಿಗೆ  ಅನ್ಯಾಯ ಮಾಡಿದ್ದು  ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಮೀಸಲಾತಿಯಿಂದ ಕೈಬಿಟ್ಟಿದ್ದು ಏಕೆ ಎಂಬುದಕ್ಕೆ ಜಿಲ್ಲೆಯ ಸಚಿವರು, ಸಂಸದರು, ಉತ್ತರಿಸಬೇಕು ಆಗ್ರಹಿಸಿದರು.

ಜಿಲ್ಲೆಯ ಸಾರಿಗೆ ವ್ಯವಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಡಿ ಇದೆ,ನ್ಯಾಯಾಂಗ ವ್ಯವಸ್ಥೆ ಕೂಡಾ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಬರುತ್ತದೆ ಜೊತೆಗೆ ಹಲವು ಇಲಾಖೆಗಳು ಕಲಬುರಗಿ ವಿಭಾಗದಲ್ಲಿ ಇದ್ದರು ಕೂಡಾ ಜಿಲ್ಲೆಯನ್ನು 371 ಜೆ ಅಡಿ ಸೇರಿಸದೆ ಇರುವುದು ಖಂಡನೀಯ ಎಂದರು.

ನಂಜುಂಡಪ್ಪ ವರದಿ ಪ್ರಕಾರ ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಹಿಂದುಳಿದ ವಿಜಯಪುರ ಜಿಲ್ಲೆಗೆ 371 ಜೆ ಪ್ರಾದೇಶಿಕ ಮೀಸಲಾತಿ ಅಡಿ ಸೇರಿಸಲು ಕೂಡಲೇ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಂಡು ಭಾರತ ಸರಕಾರಕ್ಕೆ ಶಿಫಾರಸ್ಸು ಕಳಿಸಿ ವಿಜಯಪುರ ಜಿಲ್ಲೆಗೆ ನ್ಯಾಯ ಒದಗಿಸಿಕೊಡಲು ಸಚಿವರು ಶಾಸಕರು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಹೋರಾಟಗಾರ ಮಲ್ಲುಗೌಡ ಬಿರಾದಾರ ಅವರು  ಮಾತನಾಡಿ 371ಜೆ ಮೀಸಲಾತಿ ವಿಷಯದಲ್ಲಿ ವಿಜಯಪುರ ಜಿಲ್ಲೆಗೆ ಅನುದಾನದ ವಿಷಯದಲ್ಲಿ, ಸರಕಾರಿ ನೌಕರಿ ಮತ್ತು ಶಿಕ್ಷಣದಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ ಕೂಡಲೇ ಜಿಲ್ಲೆಯ ಸಚಿವರು ಶಾಸಕರು ಮೀಸಲಾತಿ ಒದಗಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುರುಗೇಂದ್ರ ಸಿಂಪಿ,ಭೀಮು ಜೀರಂಕಲಗಿ,ಪುಟ್ಟು ತೇಲಿ, ಆನಂದ ಕುರ್ಲಿ,ಉಜ್ವಲ ಡೊಳ್ಳಿ, ಅಂಬರೀಷ ಭೈರಗೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, June 11, 2026

ಅಭಿವೃದ್ಧಿ ಯೋಜನೆಗಳ ಜಾಗೃತಿ ಪತ್ರಕರ್ತರ ಆದ್ಯ ಕರ್ತವ್ಯ: ಯಡಳ್ಳಿ


ವಿಜಯಪುರ: ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಮತ್ತಿತರ ಅಭಿವೃದ್ಧಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಪತ್ರಕರ್ತರು ಮಕ್ಕಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕಾನಿಪ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಹೈದರಾಬಾದ್‍ನ ಯುನಿಸೆಫ್ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡ ಮಕ್ಕಳ ವಿಷಯಗಳ ಕುರಿತು ಕರ್ನಾಟಕ ರಾಜ್ಯದ ಪತ್ರಕರ್ತರಿಗೆ ಪರಿಚಯ ವಿಷಯದಡಿ ಕಿಶೋಧರ ಆರೋಗ್ಯ ಮತ್ತು ಪೌಷ್ಟಿಕತೆ, ಸಾಂಕ್ರಾಮಿಕವಲ್ಲದ ರೋಗಗಳು, ಆರೋಗ್ಯಕರ ಆಹಾರ ಪದ್ಧತಿ ಹಾಗೂ ರಸ್ತೆ ಸುರಕ್ಷತೆ ಕುರಿತ ಎರಡನೇ ದಿನದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಪತ್ರಕರ್ತರು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಯುನಿಸೆಫ್ ಮಕ್ಕಳಿಗಾಗಿ ಜಗತ್ತಿನಾದ್ಯಂತ ಸಕ್ರಿಯ ಕೆಲಸ ಮಾಡುತ್ತಿದೆ. ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಇನ್ನಿತರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಒಬ್ಬ ಪತ್ರಕರ್ತನಿಗೆ ಈ ಕಾರ್ಯಾಗಾರ ನೀಡುವುದರಿಂದ ಒಂದು ಲಕ್ಷ ಜನರಿಗೆ ಮಾಹಿತಿ ತಲುಪಿಸಿದಂತೆ ಆಗಲಿದೆ. ಒತ್ತಡದ ನಡುವೆಯೂ ನೀವೆಲ್ಲ ಕಾರ್ಯಾಗಾರಕ್ಕೆ ಬಂದಿದ್ದು ಖುಷಿ ತಂದಿದೆ. ಮಾಧ್ಯಮ ಬದಲಾಗಿದೆ. ಆದರೂ ಬದಲಾವಣೆ ಮಾಧ್ಯಮದಿಂದಲೇ ಸಾಧ್ಯ. ಇಂದು ರೀಲ್ಸ್ ಯುಗ ಬಂದಿದೆ. ಜನರಿಗೆ ಕೇಳಿಸಿಕೊಳ್ಳುವ ವ್ಯವಧಾನ ಇಲ್ಲ. ತಪ್ಪು ಮಾಹಿತಿ ನೀಡಿದರೂ ನಾವು ಸರಿಯಾದ ವಿಷಯ ಬರೆಯಬೇಕು ಎಂದರು.

ಎರಡು ದಿನದ ಕಾರ್ಯಾಗಾರ ಬಗ್ಗೆ ಪತ್ರಕರ್ತರು ತಮ್ಮ ಅನುಭವ ಹಂಚಿಕೊಂಡರು.

ಯುನಿಸೆಫ್ ಪ್ರತಿನಿಧಿ ಪ್ರಶೂನ್ ಸೇನ್, ಮೈಸೂರು ವಿವಿಯ ಸ್ವಪ್ನ ಎಂ.ಎಸ್., ಡಾ.ರಾಕೇಶ್, ಮಂಜುನಾಥ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಅಖಿಲ ಕರ್ನಾಟಕ ಜೊತಿಷಿಗಳ ಒಕ್ಕೂಟ : ಅಧ್ಯಕ್ಷರಾಗಿ ಗುರುರಾಜ ಆಚಾರ್ಯ ಆಯ್ಕೆ

 

ಅಖಿಲ ಕರ್ನಾಟಕ ಜೊತಿಷಿಗಳ ಒಕ್ಕೂಟ : ಅಧ್ಯಕ್ಷರಾಗಿ ಗುರುರಾಜ ಆಚಾರ್ಯ ಆಯ್ಕೆ

ವಿಜಯಪುರ : ಅಖಿಲ ಕರ್ನಾಟಕ ಜೊತಿಷಿಗಳ ಒಕ್ಕೂಟದ ನೂತನ ರಾಜ್ಯಾಧ್ಯಕ್ಷರಾಗಿ ವಿಜಯಪುರದ ಶ್ರೀ ಸಾಕ್ಷಿ ಪಂಚಾಂಗ ಕರ್ತ ಗುರುರಾಜ ಆಚಾರ್ಯ ಹೆರಕಲ್ಲ, ಉಪಾಧ್ಯಕ್ಷರಾಗಿ ಚಿದಂಬರ ಪಂಚಾಂಗ ಸಹಾಯಕ ಪಂಚಾಂಗ ಕರ್ತ ಭುಜಂಗಶರ್ಮಾ ವಿ.ಜೋಷಿ ಆಯ್ಕೆಯಾಗಿದ್ದಾರೆ.

ಧಾರವಾಡದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಡಾ.ಆನಂದ ಹಂದಿಗೋಳ, ಪೆÇ್ರ.ಶ್ರೀಕಾಂತ ಮಂಗಸೂಳಿ, ವಾಸ್ತು ತಜ್ಞ ಸುರೇಶ ಕೊಪ್ಪರ ಸೇರಿದಂತೆ ನಿರ್ದೇಶಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಇದೇ ದಿ.13, ಶನಿವಾರ ದಂದು ನೂತನ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವಿಜಯಪುರದಲ್ಲಿ ನಡೆಯಲಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.