ಇಂಡಿ :ವಿಜಯಪುರ ಜಿಲ್ಲಾ 371(ಜೆ ) ಹೋರಾಟ ಸಮಿತಿ ಸದಸ್ಯರು ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರಿಗೆ 371(ಜೆ) ಮೀಸಲಾತಿಗೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಸಂವಿಧಾನದ 371(ಜೆ ) ಗೆ ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆ ಸೇರಿಸಲು ಮುಖ್ಯಮಂತ್ರಿಗಳ ಮನ ಒಲಿಸಿ ರಾಜ್ಯ ಸರ್ಕಾರದಿಂದ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಿಕೊಡಬೇಕು ಹಾಗೂ ಮೀಸಲಾತಿಗೆ ಸೇರ್ಪಡೆಯಾಗುವವರೆಗೆ ತಾತ್ಕಾಲಿಕವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸೌಲಭ್ಯಗಳನ್ನು ವಿಜಯಪುರ ಜಿಲ್ಲೆಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ. ಮನವಿ ಸ್ವೀಕರಿಸಿದ ಶಾಸಕರು ಹೋರಾಟ ಸಮಿತಿ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ 371(ಜೆ) ಮೀಸಲಾತಿ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವದಾಗಿ ಹೇಳಿದ್ದಾರೆ.ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಯುವಕರಿಗೆ ನೇಮಕಾತಿಯಲ್ಲಿ ಮೀಸಲಾತಿ,ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿಗುವ ವಿಶೇಷ ಅನುದಾನ ಸೌಲಭ್ಯ ಸೇರಿದಂತೆ ಜಿಲ್ಲೆಯ 25 ಲಕ್ಷ ಜನರ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ 371(ಜೆ) ತಿದ್ದುಪಡಿ ಮಾಡಿ ವಿಜಯಪುರ ಜಿಲ್ಲೆಗೆ ನ್ಯಾಯ ಒದಗಿಸಬೇಕೆಂದು ಹೋರಾಟಗಾರರು ಇದೆ ಸಂದರ್ಭದಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹೋರಾಟಗಾರರಾದ ವಿನೋದ ಖೇಡ, ಸಂಜೀವಗೌಡ ಪಾಟೀಲ(ಕನ್ನೂರ) ಮಲ್ಲನಗೌಡ ಪಾಟೀಲ (ಬರಟಗಿ) ಲಾಯಪ್ಪ ಇಂಗಳೆ ಚಂದ್ರಶೇಖರ ಹೊಸಮನಿ,ಸೇರಿದಂತೆ
ಹಲವರು ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :
ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

.jpeg)



