Thursday, September 17, 2026

ಸಿಂದಗಿಯಲ್ಲಿ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಅಕ್ಟೋಬರ್ 3 ರಂದು ಸ್ವಾಮಿ ರಾಮಾನಂದ ತೀರ್ಥರ ಜಯಂತಿ ಸರಕಾರ ಆಚರಿಸಲಿ -ಅಶೋಕ ಅಲ್ಲಾಪುರ


ಸಿಂದಗಿ : ಹೈದ್ರಾಬಾದ್ ಪ್ರಾಂತ ವಿಮೋಚನೆ ಆಗಲು ಮುಖ್ಯ ಕಾರಣಿಕರ್ತರು ಸ್ವಾಮಿ ರಾಮಾನಂದ ತೀರ್ಥರು ವಿಮೋಚನಾ ದಿನದಂದು ಅವರ ಸ್ಮರಣೆ ಮಾಡುವುದು ದೇಶದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಎಂದು ರಾಷ್ಟ್ರ ವೀರ ಸ್ವಾಮಿ ರಾಮಾನಂದ ತೀರ್ಥ ಸೇವಾ ಸಮಿತಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.

ಅವರು ಸಿಂದಗಿಯ ಸ್ವಾಮಿ ರಾಮಾನಂದ ತೀರ್ಥರ ಸ್ಮಾರಕದಲ್ಲಿ ರಾಷ್ಟ್ರ ವೀರ ಸ್ವಾಮಿ ರಾಮಾಂನಂದ ತೀರ್ಥ ಸೇವಾ ಸಮಿತಿಯಿಂದ ಹಮ್ಮಿಕೊಂಡಿದ್ದ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಸ್ವಾತಂತ್ರ್ಯ ಚಳುವಳಿಗೆ ದೊಡ್ಡ ಕೊಡುಗೆ ನೀಡಿದವರ ಸಾಲಿನಲ್ಲಿ ನಿಲ್ಲುವ ಪ್ರಮುಖ ನಾಯಕರೆಂದರೆ ಸ್ವಾಮಿ ರಾಮಾನಂದ ತೀರ್ಥರಾಗಿದ್ದಾರೆ. ಸರಕಾರ ಅವರ ಜನ್ಮ ದಿನವಾದ ಅಕ್ಟೋಬರ್ 3ರಂದು ಸರ್ಕಾರಿ ಜಯಂತಿಯಾಗಿ ಘೋಷಣೆ ಮಾಡಿ ಆಚರಿಸಿ ಸ್ವಾಮಿ ರಾಮಾನಂದ ತೀರ್ಥರಿಗೆ ಗೌರವಿಸಲ್ಲಿಸಬೇಕು, ಹಾಗೂ ಸಿಂದಗಿ ಯಲ್ಲಿರುವ ಅವರ ಸ್ಮಾರಕವನ್ನು ಅಭಿವೃದ್ಧಿಪಡಿಸಬೇಕೆಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ದನಗೌಡ ಪಾಟೀಲ ಹಾಗೂ ಎನ್ ಸುರೇಶಕುಮಾರ ಅವರು ಮಾತನಾಡಿ  ಸಿಂದಗಿಯು ಹೈದ್ರಾಬಾದ್ ಪ್ರಾಂತ ವಿಮೋಚನಾ ಚಳುವಳಿಯ ಕೇಂದ್ರ ಸ್ಥಾನವಾಗಿದೆ. ಸಿಂದಗಿಯಲ್ಲಿ ಜನಸಿದ ಸ್ವಾಮಿ ರಾಮಾನಂದ ತೀರ್ಥರು ಚಳುವಳಿಯ ನೇತೃತ್ವ ವಹಿಸದೆ ಹೋದಲ್ಲಿ ಹೈದ್ರಾಬಾದ್ ಪ್ರಾಂತ ವಿಮೋಚನೆ ಆಗುತ್ತಿರಲಿಲ್ಲ ಅಂತಹ ಮಹಾತ್ಮರಿಗೆ ಗೌರವಿಸುವ ಕೆಲಸ ವಿಜಯಪುರ ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ಮಾಡಬೇಕು ಎಂದರು.

ವಿಜಯಪುರ ಜಿಲ್ಲಾ 371 ಜೆ ಹೋರಾಟಗಾರ ಲಾಯಪ್ಪ ಇಂಗಳೆ ಅವರು ಮಾತನಾಡಿ ವಿಜಯಪುರ ಜಿಲ್ಲಾಡಳಿತ ಸಿಂದಗಿ ತಾಲೂಕು ಆಡಳಿತ ಮತ್ತು ರಾಜ್ಯ ಸರಕಾರ ವಿಮೋಚನಾ ದಿನದಂದು ಗೌರವ ಸಲ್ಲಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿತ್ತು ಸರಕಾರ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಅವರಿಗೆ ಗೌರವ ಸಲ್ಲಿಸದೆ  ಅಗೌರವ ತೋರಿಸುವ ಕೆಲಸ ಮಾಡಿದೆ. ಕೂಡಲೇ ಸರಕಾರ ಸ್ವಾಮಿ ರಾಮಾನಂದ ತೀರ್ಥರ ಸಿಂದಗಿಯ ಸ್ಮಾರಕವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಮಾಡಬೇಕು ಜೊತೆಗೆ ಅಕ್ಟೋಬರ್ 3 ರ ಅವರ ಜನ್ಮ ದಿನವನ್ನು ರಾಷ್ಟ್ರೀಯ ದಿನಾಚರಣೆಯಾಗಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಘೋಷಣೆ ಮಾಡಿ ಆಚರಣೆ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೈದ್ರಾಬಾದ್ ವಿಮೋಚನಾ ಚಳುವಳಿ ಪಿತಾಮಹ ಸ್ವಾಮಿ ಶ್ರೀ ರಾಮಾಂನಂದ ತೀರ್ಥರ ಪ್ರತಿಮೆಗೆ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ  ಸ್ವಾಮಿ ರಾಮಾನಂದ ತೀರ್ಥರ ವಂಶಸ್ಥರಾದ ರಂಗರಾವ ಖೇಡಗಿ, ಸಮಿತಿಯ ಕಾರ್ಯದರ್ಶಿ ಪ್ರದೀಪ ದೇಶಪಾಂಡೆ, 371 ಜೆ ಹೋರಾಟಗಾರರಾದ ವಿನೋದ ಖೇಡ ಕಲ್ಲಪ್ಪ ಶಿವಶರಣ, ಚಂದ್ರಶೇಖರ ಹೊಸಮನಿ,ಬಸವರಾಜ ಕುಂಬಾರ, ಧರ್ಮಣ್ಣ ಗಬಸಾವಳಗಿ, ಬಸನಗೌಡ ಧರ್ಮಗೊಂಡ, ಶಿವಪ್ಪ ಸುಲ್ಪಿ, ಎಮ್ ಎಚ್ ಪಟೇಲ, ರಮೇಶ ದೊಡಮನಿ, ಶಬ್ಬೀರ ಪಟೇಲ ಬಿರಾದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ವಿಜಯಪುರದಲ್ಲಿ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ನಮ್ಮ ಯುವಜನಾಂಗಕ್ಕೆ ಸ್ಫೂರ್ತಿ : ಜಗದೇವ ಸೂರ್ಯವಂಶಿ

ವಿಜಯಪುರ : ನಗರದ   ವಲ್ಲಭಾಯಿ ಪಟೇಲ ವೃತ್ತದಲ್ಲಿ ವಿಜಯಪುರ ಜಿಲ್ಲಾ 371 (ಜೆ) ಹೋರಾಟ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ  ಸ್ವಾಭಿಮಾನಿ ಸೇನೆ ವತಿಯಿಂದ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಆಚರಿಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ರಾಜ್ಯಾಧ್ಯಕ್ಷ ಜಗದೇವ ಸೂರ್ಯವಂಶಿ ಅವರು ಮಾತನಾಡಿ  ಆಪರೇಷನ್ ಪೋಲೊ ಮೂಲಕ ಹೈದ್ರಾಬಾದ್ ಪ್ರಾಂತವನ್ನು ಭಾರತದ ಒಕ್ಕೂಟದಲ್ಲಿ ಸೇರಿಸಿದ ಕೀರ್ತಿ ಸರದಾರ ವಲ್ಲಭಾಯಿ ಪಟೇಲ ಅವರಿಗೆ ಸಲ್ಲುತ್ತದೆ. ಅಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ನಮ್ಮ ಯುವಜನಾಂಗಕ್ಕೆ ಸ್ಫೂರ್ತಿ ಎಂದು ಹೇಳಿದರು.

ವಿಜಯಪುರ ಜಿಲ್ಲೆಯು ಹೈದ್ರಾಬಾದ್ ರಾಜ್ಯದ ಭಾಗವಾಗಿತ್ತು ಜಿಲ್ಲೆಯ ಸ್ವಾಮಿ ರಾಮಾನಂದ ತೀರ್ಥರು ವಿಮೋಚನಾ ಚಳುವಳಿಯ ನೇತೃತ್ವ ವಹಿಸಿ ವಿಮೋಚನಾ ಚಳುವಳಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

371 (ಜೆ ) ಹೋರಾಟಗಾರರಾದ ವಿನೋದ ಖೇಡ, ಕರವೇ ಸ್ವಾಭಿಮಾನಿ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ಎಮ್ ಆರ್ ಗುರಿಕಾರ ಅವರು ಮಾತನಾಡಿ , ಹೈದ್ರಾಬಾದ್ ಪ್ರಾಂತ ವಿಮೋಚನಾ ಚಳುವಳಿಗೆ  ಜಿಲ್ಲೆಯ ಸಾವಿರಾರು ಜನ ಯೋಧರು ಬಲಿದಾನ ಗೈದಿದ್ದಾರೆ. ಸರ್ದಾರ ಬಸವರಾಜ ನಾಗೂರ , ಸಿದ್ದಗೊಂಡಪ್ಪಗೌಡ‌ ಪಾಟೀಲ, ಸಂಗಯ್ಯ ಹಿರೇಮಠ ಸೇರಿದಂತೆ ಹಲವರು ವಿಮೋಚನಾ ಚಳುವಳಿಗೆ ಅವಿರತವಾಗಿ ಶ್ರಮಿಸಿದ ಫಲವಾಗಿ ಹೈದ್ರಾಬಾದ್ ಪ್ರಾಂಥವು ಭಾರತದ ಒಕ್ಕೂಟ ವ್ಯವಸ್ಥೆಯ ಭಾಗವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 371 ಜೆ ಹೊರಾಟಗಾರ ಲಾಯಪ್ಪ ಇಂಗಳೆ, ಕಲ್ಲಪ್ಪ ಶಿವಶರಣ ಮಾತನಾಡಿ, ವಿಜಯಪುರ ಜಿಲ್ಲೆಯು  ಅಖಂಡ ಹೈದ್ರಾಬಾದ ಪ್ರಾಂತದ ಸ್ವಾತಂತ್ರ್ಯ ಚಳುವಳಿಯ ಹೆಬ್ಬಾಗಿಲಾಗಿದೆ. ಇಲ್ಲಿನ ಚಳುವಳಿಗಾರರು ನೇತೃತ್ವ ವಹಿಸಿದ್ದಕ್ಕಾಗಿ ಹೈದ್ರಾಬಾದ್ ಪ್ರಾಂತ ವಿಮೋಚನೆಗೊಂಡಿದೆ. ವಿಮೋಚನೆ ಚಳುವಳಿಯ ಶ್ರೇಯಸ್ಸು ಸ್ವಾಮಿ ರಾಮಾನಂದ ತೀರ್ಥರಿಗೆ ಸಲ್ಲಬೇಕು ಎಂದು ಹೇಳಿದ ಅವರು ವಿಜಯಪುರ ಜಿಲ್ಲೆಯನ್ನು ಸರ್ಕಾರ 371 ಜೆ ಮೀಸಲಾತಿ ಅಡಿ ಸೇರಿಸಿ ಜಿಲ್ಲೆಯ ಹೈದ್ರಾಬಾದ ವಿಮೋಚನಾ ಚಳುವಳಿಗಾರರಿಗೆ ಗೌರವ ಸಲ್ಲಿಸಬೇಕೆಂದರು.

ಕಾರ್ಯಕ್ರಮದಲ್ಲಿ ಹೋರಾಟಗಾರರಾದ ಮಲ್ಲಿಕಾರ್ಜುನ ಬಟಗಿ, ಅನಿಲ ಇಕ್ಕಡೆ, ಚಂದ್ರಶೇಖರ ಹೊಸಮನಿ, ಮಲ್ಲನಗೌಡ ಬಿರಾದಾರ,ಮಲ್ಲಿಕಾರ್ಜುನ ಲಂಗೋಟಿ, ಅಂಬಣ್ಣ ಗುನ್ನಾಪೂರ, ನೀಲಾಂಬಿಕಾ ಬಿರಾದಾರ , ಈಶ್ವರ ಚಂದ್ರ ಪಡಗಾನೂರ, ಶಂಕರ ಸಾತಪೋತೆ, ಶರಣಪ್ಪ ಕಟ್ಟಿ, ತಿಮ್ಮನಗೌಡ ಪಾಟೀಲ, ರಾಜಕುಮಾರ ಉಪ್ಪಾರ, ಚಿದಾನಂದ ಹಳ್ಳಿ, ವಿಠ್ಠಲ ಕರಿಗಾರ, ಉಮೇಶ ದೊಡಮನಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Sunday, September 13, 2026

ಗ್ರಂಥಾಲಯಗಳು ನಿಜ ಮನುಷ್ಯರನು ಸೃಷ್ಟಿಸುತ್ತವೆ: ಕುಲಸಚಿವ ಸೋಮಲಿಂಗ ಗೆಣ್ಣೂರ


ವಿಜಯಪುರ: ಪುಸ್ತಕಗಳು ನಮ್ಮ ದಿನನಿತ್ಯದ ಗೆಳೆಯರಾಗಬೇಕು, ಪುಸ್ತಕಪ್ರೀತಿಯಿಂದ ಮನುಷ್ಯರೂಪದ ಜೀವಿಯೊಬ್ಬ ನಿಜವಾದ ಮನುಷ್ಯನಾಗಿ ರೂಪುಗೊಳ್ಳುವುದು ಸಾಧ್ಯವಾಗುತ್ತದೆಂದು ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಸಚಿವರು ಹಾಗೂ ಈ ಹಿಂದಿನ ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾಗಿದ್ದ ಸೋಮಲಿಂಗ ಗೆಣ್ಣೂರ ಹೇಳಿದರು. 

ವಿಜಯಪುರದ ನವರಸಪುರದಲ್ಲಿರುವ ತಿಕೋಟಾದ ನೇತ್ರಾಧಿಕಾರಿ ಡಾ. ಪ್ರಕಾಶ ಪರಣಾಕಾರ ಅವರ ಮನೆಯಲ್ಲಿ ನಡೆದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಪ್ರತಿಯೊಂದು, ನಿಜವಾದ ಪುಸ್ತಕದ ಒಳಗೂ ನಮ್ಮೊಂದಿಗೆ ಸಂವಾದಕ್ಕೆ ಹಾತೊರೆಯುವ ಒಂದು ವ್ಯಕ್ತಿತ್ವ ಮತ್ತು ಮನಸ್ಸಿದೆ ದಿಕ್ಕು ತಪ್ಪಿಸುವ, ಮೌಢ್ಯಬಿತ್ತುವ ಕಂದಾಚಾರಕ್ಕೆ ದೂಡುವ ಪುಸ್ತಕಗಳ ತಿರಸ್ಕರಿಸಿ, ವೈಚಾರಿಕ ಹಾಗೂ ವೈಜ್ಞಾನಿಕತೆ ಬಿತ್ತುವ ಪುಸ್ತಕಗಳ ಓದಬೇಕು ಎಂದರು.

ಈ ಸಂದರ್ಭ ಡಾ. ಮಹಾಂತೇಶ ಬಿರಾದಾರ ಮಾತನಾಡಿ, ಒಂದು ಪುಸ್ತಕವನ್ನೋದುವುದೆಂದರೆ ಬಸವಣ್ಣನ ಸಮಸಮಾಜವನು ಮುನ್ನಡೆಸುವುದು ಎಂದರ್ಥ. ಅದೊಂದು ಹೊಸ ಅನುಭವ ಹಾಗೂ ಪ್ರಪಂಚದಲ್ಲಿ ಸಹೃದಯರು ಕೈಗೊಳ್ಳುವ ಪರ್ಯಟನವೋ ಅಥವಾ ರಸಯಾತ್ರೆಯೋ ಆಗಿರುತ್ತದೆ ಎಂದರು.

ಕನ್ನಡ ಪುಸ್ತಕ ಪ್ರಾಧಿಕಾರದ ವಿಜಯಪುರ ಜಿಲ್ಲಾ ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯ ಪ್ರೊ. ಬಸವರಾಜ ಜಾಲವಾದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪುಸ್ತಕ ಓದುವವನು ಒಂದೇ ಜನ್ಮದಲ್ಲಿ ಸಾವಿರ ಜೀವನ ಕಾಣಬಲ್ಲ, ಆದರೆ ಪುಸ್ತಕ ಓದದವನು ಒಂದು ಹುಟ್ಟಿನಲ್ಲಿ ಕೇವಲ ಒಂದೇ ಜೀವನ ಅನುಭವಿಸಬಲ್ಲ’ ಎಂದು ನೆನಪಿಸಿ, ಬುದ್ಧ, ಬಸವ, ಅಂಬೇಡ್ಕರರೇ ಈ ಜನ್ಮಕೆಷ್ಟು ಪುಸ್ತಕ ಓದಿದ ಬಳಿಕ ಇವನಾರವ, ಇವನಾರವ ಎನ್ನದೇ ಇಂವ ನಮ್ಮಂವ, ಇಂವ ನಮ್ಮವ ಎಂದಾದರೆ ಓದಿದ್ದಕ್ಕೂ ಸಾರ್ಥಕವಾಯಿತು ಎಂದು ಪುಸ್ತಕದ ಮಹತ್ವ ಸಾರಿದರು.

ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕಕಮರಿ ಗುರುದೇವಾಶ್ರಮದ ಪರಮಪೂಜ್ಯ ಶ್ರೀ ಆತ್ಮಾರಾಮ ಮಹಾಸ್ವಾಮಿಗಳು ಕನ್ನಡ ಪುಸ್ತಕ ಪ್ರಾಧಿಕಾರದವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿ, ಇದೊಂದು ಆದರ್ಶ ಕಾರ್ಯಕ್ರಮ ಪ್ರತಿಯೊಬ್ಬರ ಮನೆಯಲ್ಲೂ ಈ ತರದ ಕಾರ್ಯಕ್ರಮಗಳನ್ನ ಮಾಡಿದಾಗ ಪುಸ್ತಕ ಪ್ರೀತಿಯ ಬಗ್ಗೆ ಒಲವು ಮೂಡುತ್ತದೆ ಹಾಗೂ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಬೇಕೆಂದು ಕರೆಕೊಟ್ಟರು. ಸ್ವಾಮಿಗಳಾದವರ ನಿಜವಾದ ಅಭಿಲಾಶೆಯೂ ಇದೇ ಆಗಿರುತ್ತದೆ. ಸಮಾಜ ಈ ತರದ ಕಾರ್ಯಕ್ರಮ ಹಮ್ಮಿಕೊಂಡು ಕತ್ತಲಿನಿಂದ ಹೊರಬರಲು ಕರೆಕೊಟ್ಟರು.

ಯರಡೋಣದ ಕುಮಾರೇಶ್ವರ ಸ್ವಾಮಿಗಳು, ಪ್ರಗತಿಪರ ರೈತ ಮಲ್ಲಿಕಾರ್ಜುನ ಹಂಜಗಿ, ಶ್ರೀಧರ್ ಮುರಾಳೆ, ಬಾಬೂರಾವ ಮಹಾರಾಜ, ವೀರೇಶ ಹಿರೇಮಠ ವೇದಿಕೆ ಮೇಲಿದ್ದರು.

ಬಸವರಾಜ ಬೆಳಗಲಿ ಸ್ವಾಗತಿಸಿದರು.ಸಿದ್ಧಾರ್ಥ ಪರಣಾಕರ ವಂದಿಸಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ :

ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.