Tuesday, November 15, 2022

ಕಂಪ್ಯೂಟರ್ ಸಾಕ್ಷರತೆ ಕಾರ್ಯಾಗಾರ ಇದೇ ದಿ.17 ರಂದು




ಈ ದಿವಸ ವಾರ್ತೆ

 ವಿಜಯಪುರ : ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ ನಿಯಮ 1(3) ರಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಹೊರತುಪಡಿಸಿ ಇನ್ನಿತರ ಎಲ್ಲಾ ಅಭ್ಯರ್ಥಿಗಳು ದಿನಾಂಕ 31-12 -2022 ರೊಳಗೆ  ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗ ಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಇದೇ ದಿ.17 ರಂದು ವಿಜಯಪುರದ ಸರ್ಕಾರಿ ಬಾಲಕರ ಪದವಿಪೂರ್ವ  ಪ್ರೌಢಶಾಲೆಯಲ್ಲಿರುವ ಶ್ರೀ ವಿಶ್ವೇಶ್ವರಯ್ಯ ಸಭಾಭವನದಲ್ಲಿ ಕಂಪ್ಯೂಟರ್ ಸಾಕ್ಷರತೆ ಕುರಿತಾದ ಕಾರ್ಯಾಗಾರ ಆಯೋಜಿಸಲಾಗಿದೆ. ಶಿಕ್ಷಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಈ ಕಾರ್ಯಾಗಾರ ಸಂಘಟಿಸಲಾಗಿದೆ, ಭಾಗವಹಿಸುವ ಶಿಕ್ಷಕರಿಗೆ ಓಓಡಿ ಸೌಲಭ್ಯವಿದೆ. ಶಿಕ್ಷಕರು ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬೇಕು.  ಮುಖ್ಯ ಉಪಾಧ್ಯರಾಗಿ ಭಡ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಸಹ ನೆರವೇರಿಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಶಿವರಾಜ್ ಬಿರಾದಾರ ತಿಳಿಸಿದ್ದಾರೆ.

No comments:

Post a Comment