ಈ ದಿವಸ ವಾರ್ತೆ
ವಿಜಯಪುರ : ಜಿಲ್ಲೆಯ ಚುನಾವಣೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ವಿಜಯ ಮಾಹಾಂತೇಶ ದಾನಮ್ಮನವರ ಮತ್ತು ಅವರ ಪತ್ನಿ ಶ್ರೀಮತಿ ಶ್ವೇತಾ ದಾನಮ್ಮನವರ ಕುಟುಂಬ ಸಮೇತರಾಗಿ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ದರಬಾರ ಶಾಲೆಯಲ್ಲಿ ಸ್ಥಾಪಿಲಾಗಿರುವ 219 ರ ಮತಗಟ್ಟೆಗೆ ತೆರಳಿ ತಮ್ಮ ಮತದಾನ ಹಕ್ಕನ್ನು ಚಲಾಯಿಸುವ ಮೂಲಕ ಮತದಾನ ಮಹತ್ವ ಸಾರಿದರು.
ಮತದಾನ ಒಂದು ಪವಿತ್ರವಾದ ಕರ್ತವ್ಯ, ಮತದಾನ ನಮ್ಮ ಹಕ್ಕು ಹಾಗೂ ಕರ್ತವ್ಯ ಕೂಡಾ. ನಮ್ಮ ಮತ ಪ್ರಗತಿಗೆ ಬರೆಯುವ ಮುನ್ನುಡಿ. ಮತದಾನ ನಮ್ಮೆಲ್ಲರ ಜವಾಬ್ದಾರಿಯೂ ಸಹ ಆಗಿದೆ ಎಂದು ಹೇಳಿದರು.