Tuesday, August 22, 2023

ದೇಶ ರಕ್ಷಕ ಪಡೆಯ 5ನೇ ವಾರ್ಷಿಕೋತ್ಸವ ಹಾಗೂ ಚಂದ್ರಯಾನ 3ರ ನೇರ ಪ್ರಸಾರ


 ಈ ದಿವಸ ವಾರ್ತೆ

ವಿಜಯಪುರ: ದೇಶ ರಕ್ಷಕರ ಪಡೆ 5ನೇ ವಾರ್ಷಿಕೋತ್ಸವ ಹಾಗೂ ಚಂದ್ರಯಾನ 3ರ ನೇರ ಪ್ರಸಾರ ಕಾರ್ಯಕ್ರಮವನ್ನು ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಎದುರುಗಡೆ ಬುಧವಾರ ಸಂಜೆ ಹಮ್ಮಿಕೊಳ್ಳಲಾಗಿದೆ.

ಮಧುಮೇಹ ತಜ್ಞರು ಹಾಗೂ ಬಿಜೆಪಿ ಮುಖಂಡರಾದ ಡಾ. ಬಾಬುರಾಜೇಂದ್ರ ನಾಯಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ.

ರಾಷ್ಟ್ರ ಮಟ್ಟದ ಉತ್ತಮ  ವಿಜ್ಞಾನ ಶಿಕ್ಷಕ ಪ್ರಶಸ್ತಿ ಪುರಸ್ಕøತರಾದ ನಾರಾಯಣ ಬಾಬಾನಗರ ಮುಖ್ಯ ವಕ್ತಾರರಾಗಿ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆ ಸದಸ್ಯರಾದ ಕಿರಣ ಪಾಟೀಲ ಭಾಗವಹಿಲಿಸದ್ದಾರೆ.

ವಿಶೇಷ ಆಹ್ವಾನಿತರಾಗಿ ಗೆಜ್ಜಿ ಕರಿಯರ ಅಕಾಡೆಮಿಯ ಸಂಸ್ಥಾಪಕರಾದ ಸುರೇಶ ಗೆಜ್ಜಿ ಅವರು ಭಾಗವಹಿಸಲಿದ್ದಾರೆ ಎಂದು ದೇಶ ರಕ್ಷಕ ಪಡೆಯ ರೋಹನ ಆಪ್ಟೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

No comments:

Post a Comment