Friday, August 11, 2023

ಮಾನವ ಕಳ್ಳ ಸಾಗಾಣಿಕೆ ತಡೆ ದಿನ ಆಚರಣೆ

ಈ ದಿವಸ ವಾರ್ತೆ

ವಿಜಯಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಬಿವೃದ್ದಿ ಯೋಜನೆ ನಗರ ಹಾಗೂ ಗ್ರಾಮೀಣ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ರುಡ್‍ಸೆಟ್ ಸಂಸ್ಥೆಯಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನ ಆಚರಿಸಲಾಯಿತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಸ್.ಕುಂದರ ಅವರು ಉದ್ಘಾಟಿಸಿ, ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಕಾನೂನಿನ್ವಯ ಅಪರಾಧವಾಗಿದ್ದು, ಸಂವಿಧಾನ ಮಾನವ ಕಳ್ಳ ಸಾಗಾಣಿಕೆಯಿಂದ ಮುಕ್ತಗೊಳಿಸಲು ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಲವು ಕಾನೂನುಗಳಿದ್ದು, ಸೂಕ್ತ ಪಾಲನೆಯಿಂದ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಬಹುದಾಗಿದೆ ಎಂದು ಹೇಳಿದ ಅವರು, ಸವಿವರವಾಗಿ ಅಂಕಿ-ಅಂಶದೊಂದಿಗೆ ಮಾನವ ಕಳ್ಳ ಸಾಗಾಣಿಕೆ ಕುರಿತು ಮಾತನಾಡಿದರು.

ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ ಅವರು, ಬಂದಂತಹ ಅತಿಥಿ ಹಾಗೂ ಗಣ್ಯ ವ್ಯಕ್ತಿಗಳಿಗೆ ಸ್ವಾಗತವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಡಿವೈಎಸ್‍ಪಿ ಗಿರೀಶ ತಳಕಟ್ಟಿ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಶ್ರೀಧರ ಕುಲಕರ್ಣಿ ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು  ವಕೀಲರಾದ ಬಾಬು ಅವತಾಡೆ ಪೋಕ್ಸೊ ಕಾಯ್ದೆ ಕುರಿತು, ಮೇಲ್ವಿಚಾರಕಿ ಅಶ್ವಿನಿ ಸನದಿ ಮಾನವ ಕಳ್ಳ ಸಾಗಾಣಿಕೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶ್ರೀಮತಿ ಸಾವಿತ್ರಿ ಗುಗ್ಗರಿ, ಶ್ರೀಮತಿ ದೀಪಾ ಕಾಲೆ, ಶ್ರೀಮತಿ ದೀಪಾಕ್ಷಿ ಜಾನಕಿ, ಶ ಎಸ್.ಸಿ.ಮ್ಯಾಗೇರಿ, ಸಾಹೇಬಗೌಡ ಝುಂಜರವಾಡ, ಶ್ರೀಮತಿ ಜಯಶ್ರೀ ಪವಾರ, ರುಡಸೆಟ್ ಸಂಸ್ಥೆಯ ನಿರ್ದೇಶಕ ಮುತ್ತಣ್ಣ ಧನಗರ ಸೇರಿದಂತೆ ಇತರರು ಉಪಸ್ಥಿತರಿದ್ದರು.

No comments:

Post a Comment