ವಿಜಯಪುರ: ಶಿಶು ಅಭಿವೃದ್ಧಿ ಯೋಜನೆ ವಿಜಯಪುರ (ನಗರ) ಯೋಜನೆಯಲ್ಲಿ ಪೋಷಣ್ ಅಭಿಯಾಯಾನ ಯೋಜನೆಯಡಿಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಜರುಗಿತು.
ಸಂತೋಷ ಕುಂದರ್ ಹಿರಿಯ ಸಿವಿಲ್ ನ್ಯಾಯಾಧೀಶರು ಕಾನೂನು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ರವರು ಕಾರ್ಯಕ್ರಮ ಉದ್ಘಾಟಣೆ ನೆರವೆರಿಸಿ ಪೌಷ್ಠಿಕ ಆಹಾರ ಆರೋಗ್ಯಕ್ಕೆ ಎಷ್ಟು ಉತ್ತಮ ಅದರ ಮಹತ್ವವ ಏನು ಎಂಬುದನ್ನು ಸವಿಸ್ತಾರವಾಗಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ವಿವಿಧ ಪೌಷ್ಟಿಕಾಂಶ ಸಂಬಂಧಿತ ಯೋಜನೆಗಳ ಒಮ್ಮುಖವನ್ನು ಖಾತ್ರಿಪಡಿಸುವ ಮೂಲಕ ಅಪೌಷ್ಟಿಕತೆ ಮತ್ತು ಇತರ ಸಂಬಂಧಿತ ಸಮಸ್ಯೆಗಳನ್ನು ಕಡಿಮೆ ಮಾಡಲು ಇದು ಗುರಿಯಾಗಿದೆ. ಇದು ಕುಂಠಿತ, ಅಪೌಷ್ಟಿಕತೆ, ರಕ್ತಹೀನತೆ (ಚಿಕ್ಕ ಮಕ್ಕಳು, ಮಹಿಳೆಯರು ಮತ್ತು ಹದಿಹರೆಯದ ಹುಡುಗಿಯರಲ್ಲಿ) ಮತ್ತು ಕಡಿಮೆ ಜನನ ಪ್ರಮಾಣವನ್ನು ಗುರಿಯಾಗಿಸುತ್ತದೆ ಎಂದರು.
ಈ ಸಂದರ್ಭ ಮಹಾನಗರ ಪಾಲಿಕೆ ಸದಸ್ಯರು ದಿನೇಶ ಹಳ್ಳಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ದೀಪಾಕ್ಷಿ ಜಾನಕಿ ವಿಜಯಪುರ(ನಗರ) ಆಗಮಿಸಿದ ಗಣ್ಯರನ್ನು ಸ್ವಾಗತಿಸಿದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಾಹೇಬಗೌಡ ಝುಂಜರವಾಡ, ರಾಜಶೇಖರ ಜಿಲ್ಲಾ ಸಂಯೋಜಕರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಶ್ರೀಮತಿ ಅಶ್ವಿನಿ ಸನದಿ ಮೇಲ್ವಿಚಾರಕಿ ನಿರೂಪಿಸಿದರು.
ಇದೇ ಸಂಧರ್ಭದಲ್ಲಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಯಿತು. ಇದಕ್ಕು ಮುನ್ನ ಸಹಿ ಕ್ಯಾಂಪಿಯನ್ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಯಿತು. ಕೇಕ್ ಕಟ್ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ಮೇಲ್ವಿಚಾರಕಿಯರು, ಗರ್ಭಿಣಿ/ಬಾಣಂತಿಯರು ಕಾರ್ಯಕರ್ತೆ, ಸಹಾಯಕಿಯರು ಮುದ್ದು ಮಕ್ಕಳು ಹಾಜರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
No comments:
Post a Comment