Monday, October 9, 2023

ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಪೀರಬಾಶಾ ಗಚ್ಚಿನಮಹಲ್ ನೇಮಕ


ಈ ದಿವಸ ವಾರ್ತೆ

ವಿಜಯಪುರ: ಪೀರಬಾಶಾ ಶಮಶೋದ್ದೀನ ಗಚ್ಚಿನಮಹಲ್ ಅವರನ್ನು ವಿಜಯಪುರ ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಜಿಲ್ಲಾ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜನತಾದಳ (ಜಾತ್ಯಾತೀತ) ಶಾಸಕಾಂಗ ಪಕ್ಷದ ನಾಯಕರಾದ ಎಚ್.ಡಿ. ಕುಮಾರಸ್ವಾಮಿಯವರ ಸೂಚನೆ ಮೇರೆಗೆ ನೇಮಕಮಾಡಿ ಆದೇಶ ಹೊರಡಿಸಿದೆ.

ಕೂಡಲೇ ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ದರಾಗಿ, ಪಕ್ಷದ ಎಲ್ಲ ಮುಖಂಡರನ್ನು ಹಾಗೂ ಅಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ವಿಜಯಪುರ ಜಿಲ್ಲೆಯ ಜನತಾದಳ (ಜಾತ್ಯಾತೀತ) ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಲು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ  ಲೇಖನ, ಕಥೆ, ಕವನ , ಶಾಲಾ ಕಾಲೇಜಿನ,ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಊರಿನ ಸಮಸ್ಯೆಗಳ ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಸಂಪರ್ಕಿಸಿರಿ.
ಕಲ್ಲಪ್ಪ ಶಿವಶರಣ
ವ್ಯವಸ್ಥಾಪಕ ಸಂಪಾದಕ
ಈ ದಿವಸ ಕನ್ನಡ ದಿನ ಪತ್ರಿಕೆ
 ಮೊ: 7204279187/     
          9900378892

ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಮಾಡಿರಿ.


No comments:

Post a Comment