ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ : ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯವಗಿದ್ದು, ಒಟ್ಟಾರೆ 4 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ತೆಗೆದುಕೊಳ್ಳುವ ಮೂಲಕ ಅಂತಿಮ ಕಣದಲ್ಲಿ 8 ಅಭ್ಯರ್ಥಿಗಳು ಇದ್ದಾರೆ.
ಪಕ್ಷೇತರ ಅಭ್ಯರ್ಥಿಗಳಾದ ಸಂಗಪ್ಪಾ ಹುಣಶಿಕಟ್ಟಿ, ಹಾಗೂ ಬಾಬುರಾಜೇಂದ್ರ ನಾಯಿಕ, ಭಾರತೀಯ ಜವಾನ್ ಕಿಸಾನ್ ಪಕ್ಷದ ಕುಲಪ್ಪಾ ಬಿ ಚವ್ಹಾಣ, ಬಿಎಸ್ಪಿ ಪಕ್ಷದ ಮಲ್ಲು ಹಾದಿಮನಿ ತಮ್ಮ ಉಮೇದುವಾರಿಕೆಯನ್ನು ಏ.22 ರಂದು ಹಿಂಪಡೆದಿದ್ದಾರೆ.
ಅಂತಿಮ ಕಣದಲ್ಲಿ ಭಾರತೀಯ ಜನತಾ ಪಕ್ಷದ ರಮೇಶ ಜಿಗಜಿಣಗಿ, ಕಾಂಗ್ರೇಸ್ನ ರಾಜು ಆಲಗೂರ, ಕಾರ್ನಾಟಕ ರಾಷ್ಟç ಸಮಿತಿ ಪಕ್ಷದ ಗಣಪತಿ ಲಾಲಸಿಂಗ ರಾಠೋಡ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಪಕ್ಷದ ಜಿತೇಂದ್ರ ಅಶೋಕ ಕಾಂಬ್ಲೆ, ಸೋಶಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ನಾಗಜ್ಯೋತಿ. ಬಿ. ಎನ್, ರಾಷ್ಟಿçಯ ಸಮಾಜ ಪಕ್ಷದ ರಾಜಕುಮಾರ್ ಅಪ್ಪಣಾ ಹೋನ್ನಕಟ್ಟಿ, ನಕಿ ಭಾರತೀಯ ಏಕತಾ ಪಕ್ಷದ ರಾಮಜಿ ಹರಿಜನ್, ಪಕೇತರ ಅಭ್ಯರ್ಥಿ ತಾರಾಬಾಯಿ ಬೋವಿ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಾಗಿದ್ದಾರೆ.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment