Tuesday, May 7, 2024

"ನಿವರಗಿಯಲ್ಲಿ ಶಾಂತಿಯುತವಾಗಿ ನಡೆದ ಮತದಾನ"


 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಚಡಚಣ: ತಾಲೂಕಿನ ನಿವರಗಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೇ ಲೋಕಸಭೆ ಚುನಾವಣೆ ಮಂಗಳವಾರ ಶಾಂತಿಯುತವಾಗಿ ಮತದಾನ ನಡೆಯಿತು.

ಮಂಗಳವಾರ ಬೆಳಗ್ಗೆ 7ಕ್ಕೆ ಶುರುವಾದ ಮತದಾನ ಆರಂಭದಲ್ಲಿ ಏರಿಕೆ ಕಂಡಿತ್ತು. ಬಳಿಕ ಮಧ್ನಾಹ್ನದ ಹೊತ್ತಿಗೆ   ಮಂದಗತಿಯಲ್ಲಿತ್ತು. ಇನ್ನೂ ಬಹುತೇಕ ಎಲ್ಲ ಮತಗಟ್ಟೆಗಳಲ್ಲೂ ಇದೇ ವಾತಾವರಣ ಇತ್ತು. ಸುಡು ಬಿಸಿಲನ್ನು ಲೆಕ್ಕಿಸದೆ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಸಾಯಂಕಾಲ ಹೊತ್ತಿಗೆ ಮತದಾನ ಏರಿಕೆ ಕಂಡಿತ್ತು.

ಮೊದಲ ಬಾರಿ ಮತ ಚಲಾಯಿಸಲು ಬಂದಿದ್ದ ಯುವ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ತೆರಳಿ ತಮ್ಮ ಮತದಾನದ ಹಕ್ಕನ್ನು  ಚಲಾಯಿಸಿದರು‌. ಸಾಮಾಜಿಕ ಜಾಲತಾಣಗಳಲ್ಲಿ ಗುರುತಿನ ಭಾವಚಿತ್ರದ ಬೆರಳಿನ ಶಾಯಿಯನ್ನು ತೋರಿಸುವ ಸೆಲ್ಫಿ ಚಿತ್ರಗಳನ್ನು ಹಂಚಿಕೊಂಡರು.

ಮತಗಟ್ಟೆಯಲ್ಲಿ ಮತದಾನಕ್ಕಾಗಿ ಬಂದ ಮತದಾರರಿಗೆ, ತಣ್ಣನೆ ಕುಡಿವ ನೀರು, ಶೌಚಾಲಯ, ಆರೋಗ್ಯ ಚಿಕಿತ್ಸೆ ಸೇರಿದಂತೆ ಹಲವು ರೀತಿಯ ವ್ಯವಸ್ಥೆಗಳು ಉಚಿತವಾಗಿ ಕಲ್ಪಿಸಿದ್ದು ಮತದಾರರನ್ನು ಆಕರ್ಷಿಸಿದವು.

ಮತಗಟ್ಟೆಯಲ್ಲಿದ್ದ ಸಿಬ್ಬಂದಿಗೆ ನೀರು, ಊಟ, ಶೌಚಾಲಯ, ಪೊಲೀಸ್‌ ಭದ್ರತೆ, ವಿದ್ಯುತ್‌ ಸೇರಿದಂತೆ ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Sunday, May 5, 2024

ಮುಕ್ತ - ನ್ಯಾಯಸಮ್ಮತ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ : ಮೇ. 7 ರಂದು ಮತದಾನ* , 19,46,090 ಮತದಾರರು - 2086 ಮತಗಟ್ಟೆಗಳ ಸ್ಥಾಪನೆ


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

 ವಿಜಯಪುರ : ಮುಕ್ತ ನ್ಯಾಯಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದಿಂದ,  ಮೇ.07ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ನಡೆಯಲಿರುವ ಮತದಾನಕ್ಕೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19,46,090 ಮತದಾರರಿದ್ದು, ಜಿಲ್ಲೆಯಾದ್ಯಂತ ಒಟ್ಟು 2086 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಇದೇ ಮೇ.7 ರಂದು ನಡೆಯುವ ಮತದಾನ ಹಾಗೂ ಜೂನ್. 4 ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತದಾರರ ವಿವರ : ಜಿಲ್ಲೆಯಲ್ಲಿ 9,87,974 ಗಂಡು, 9,57,906 ಹೆಣ್ಣು ಹಾಗೂ 210 ಇತರೆ ಮತದಾರರು ಸೇರಿದಂತೆ ಒಟ್ಟು 19,46,090 ಮತದಾರರಿದ್ದಾರೆ. 85 ವರ್ಷಕ್ಕಿಂತ ಮೇಲ್ಪಟ್ಟು ಒಟ್ಟು 2357 ಮತದಾರರ ಪೈಕಿ 2170 ಮತದಾರರು ತಮ್ಮ ಮನೆಯಿಂದ ಮತ ಚಲಾಯಿಸಿದ್ದು, ಶೇ.92.06 ರಷ್ಟು ಮತದಾನವಾಗಿದೆ. ಅದರಂತೆ ಶೇ.40ಕ್ಕಿಂತ ಹೆಚ್ಚಿನ ದಿವ್ಯಾಂಗವಿರುವ (ಪಿಡಬ್ಲೂಡಿ) ಒಟ್ಟು 886 ಮತದಾರರ ಪೈಕಿ 854 ಮತದಾರರು ಮತ ಚಲಾಯಿಸುವ ಮೂಲಕ ಶೇ.96.38 ರಷ್ಟು ಮತದಾನವಾಗಿದೆ. 

ಮತಗಟ್ಟೆಗಳ ವಿವರ : ವಿಜಯಪುರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಒಟ್ಟು 2086 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ ಪ್ರತಿ ವಿಧಾನಸಭಾವಾರು 05 ಸಖಿ ಮತಗಟ್ಟೆ, 08 ದಿವ್ಯಾಂಗ ಮತಗಟ್ಟೆ, 08 ಯುವ ಮತಗಟ್ಟೆ, 08 ಧ್ಯೇಯ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಾದ್ಯಂತ 171 ಸೂಕ್ಷ್ಮ ಹಾಗೂ 41 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.  ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಮೈಕ್ರೋ ಆಬ್ಜರ್ವರ್ ನೇಮಿಸಿದ್ದು, ವೆಬ್‍ಕಾಸ್ಟಿಂಗ್ ಮೂಲಕ ನಿಗಾ ಇಡಲಾಗುತ್ತಿದೆ. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳಾದ ರ್ಯಾಂಪ್ ವ್ಯವಸ್ಥೆ, ಕುಡಿಯುವ ನೀರಿನ, , ವಿದ್ಯುತ್ ವ್ಯವಸ್ಥೆ, ಪೀಠೋಪಕರಣ, ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ, ವಿಶ್ರಾಂತಿ ಕೊಠಡಿ, ಆಸನ ವ್ಯವಸ್ಥೆ, ತುರ್ತು ಸಂದರ್ಭದಲ್ಲಿ ಅಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. 


ವಿದ್ಯುನ್ಮಾನ ಮತಯಂತ್ರಗಳ ವಿವರ : ಚುನಾವಣೆಗಾಗಿ 2617 ಬಿ.ಯು, 2616 ಸಿ.ಯು, 2773 ವಿವಿಪ್ಯಾಟ್‍ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಚುನಾವಣೆ ನಂತರ ಮತ ಯಂತ್ರಗಳನ್ನು ಭದ್ರತೆಯಲ್ಲಿ ಇರಿಸಲು  ವಿಧಾನಸಭಾವಾರು ಮತ್ರಯಂತ್ರಗಳನ್ನು ಇರಿಸಲು ಸೈನಿಕಶಾಲೆಯಲ್ಲಿ ಭದ್ರತಾ ಕೊಠಡಿಗಳನ್ನು ಸ್ಥಾಪಿಸಲಾಗಿದ್ದು,  ವಿಧಾನಸಭಾವಾರು ವಿವರದಂತೆ ಮುದ್ದೇಬಿಹಾಳ ಹಾಗೂ ದೇವರಹಿಪ್ಪರಗಿ ವಿಧಾನಸಭಾ ಮತಕ್ಷೇತ್ರದ ಮತಯಂತ್ರಗಳನ್ನು ಸೈನಿಕ ಶಾಲೆಯ ಒಡೆಯರ ಸದನದಲ್ಲಿ, ಬಸವನಬಾಗೇವಾಡಿ ಹಾಗೂ ಬಬಲೇಶ್ವರ ಮತಕ್ಷೇತ್ರದ ಮತಯಂತ್ರಗಳನ್ನು ಆದಿಲ್‍ಶಾಹಿ ಸದನದಲ್ಲಿ, ವಿಜಯಪುರ ನಗರ ಹಾಗೂ ನಾಗಠಾಣ ಮತಕ್ಷೇತ್ರದ ಮತಯಂತ್ರಗಳನ್ನು ಹೊಯ್ಸಳ ಸದನದಲ್ಲಿ, ಇಂಡಿ ಹಾಗೂ ಸಿಂದಗಿ ಮತಕ್ಷೇತ್ರದ ಮತಯಂತ್ರಗಳನ್ನು ವಿಜಯಪುರ ನಗರ ಸದನದಲ್ಲಿ ವ್ಯವಸ್ಥೆ ಮಾಡಲಾಗಿದೆ. 

ಚುನಾವಣಾ ಸಿಬ್ಬಂದಿಗಳ ವಿವರ :  ಚುನಾವಣಾ ಕರ್ತವ್ಯಕ್ಕೆ 2527 ಪಿಆರ್‍ಓ, 2527 ಎಪಿಆರ್‍ಓ, 5054 ಪಿಓ, 184 ಮೈಕ್ರೋ ಆಬ್ಜರ್ವರ್‍ಗಳನ್ನು ನಿಯೋಜಿಸಲಾಗಿದೆ. ನಿಯೋಜಿತ ಸಿಬ್ಬಂದಿಗಳಿಗೆ ಪ್ರತಿ ಮತಗಟ್ಟೆಗಳಿಗೆ  ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರನ್ನು ಅವಶ್ಯಕ ಔಷಧೋಪಚಾರದೊಂದಿಗೆ  ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

 ಚುನಾವಣೆಗೆ ನಿಯೋಜಿಸಿರುವ ಸಿಬ್ಬಂದಿಗಳಿಗೆ ಆಯಾ ಮತಗಟ್ಟೆಗಳಲ್ಲಿ ಹಾಗೂ ಆಯಾ ಮಸ್ಟರಿಂಗ್ ಡಿ ಮಸ್ಟರಿಂಗ್ ಕೇಂದ್ರಗಳಲ್ಲಿ ಉಟೋಪಚಾರ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ ಸಿಬ್ಬಂದಿಗಳಿಗೆ 241 ಬಸ್ಸು, 124 ಕ್ರೂಸರ್ ಸೇರಿದಂತೆ ಒಟ್ಟು 365 ವಾಹನಗಳ ವ್ಯವಸ್ಥೆ ಮಾಡಲಾಗಿದೆ. ನಿಯೋಜಿತ  ಮತಗಟ್ಟೆ ಸಿಬ್ಬಂದಿಗಳ ಮಕ್ಕಳ ಪಾಲನೆ-ಪೋಷಣೆಗಾಗಿ ದಿನಾಂಕ : 06-05-2024 ಮತ್ತು 07-05-2024 ರಂದು ಮಕ್ಕಳನ್ನು ನೋಡಿಕೊಳ್ಳಲು ಮಸ್ಟರಿಂಗ್ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮೇಲ್ವಿಚಾರಣೆಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.  

ಮತದಾರ ಸೌಲಭ್ಯ ಕೇಂದ್ರ- ಅಂಚೆ ಮತದಾನ ವಿವರ : 

ಜಿಲ್ಲೆಯಲ್ಲಿ ಅಗತ್ಯ ಸೇವೆಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದ ಮತದಾರರಿರುವ ಬೇರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ  ಅಧಿಕಾರಿ-ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಸ್ಥಾಪಿಸಲಾದ ಮತದಾರರ ಸೌಲಭ್ಯ ಕೇಂದ್ರಗಳಲ್ಲಿ ಹಾಗೂ ಅಂಚೆ ಮತದಾನ ಕೇಂದ್ರಗಳ (ಎಫ್‍ಸಿ &ಪಿವಿಸಿ) ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು,  ಸದರಿ ಸೌಲಭ್ಯ ಕೇಂದ್ರಗಳಲ್ಲಿ ಅಗತ್ಯ ಸೇವೆಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 1969 ಮತದಾರರ ಪೈಕಿ 654 ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿ ಈ ಜಿಲ್ಲೆಯ ಮತದಾರರು ಹಾಗೂ ಈ ಜಿಲ್ಲೆಯ ಮತದಾರರು ಬೇರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರ ಮತದಾರರು ಒಟ್ಟು 1382ರ ಪೈಕಿ 743 ಮತದಾರರು ಮತ ಚಲಾಯಿಸಿದ್ದಾರೆ. 

ಮಾದರಿ ನೀತಿ ಸಂಹಿತೆ :  ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಣೆ ಪ್ರಕರಣಗಳ ಮೇಲೆ  ನಿಗಾ ಇಡಲು ರಚಿಸಲಾದ ಪೊಲೀಸ್-ಕ್ಷೀಪ್ರ ಪಡೆಗಳು (ಎಫ್‍ಎಸ್‍ಟಿ) ಸ್ಥಿರ ಕಣ್ಗಾವಲು ತಂಡಗಳು (ಎಸ್‍ಎಸ್‍ಟಿ), ಆದಾಯ ತೆರಿಗೆ ಸೇರಿದಂತೆ ಒಟ್ಟು 378.51 ಲಕ್ಷ ರೂ. ನಗದು, 21.10ಲಕ್ಷ ರೂ.ಮೌಲ್ಯದ 5210.798 ಲೀ.  ಮದ್ಯ, 4.05 ಲಕ್ಷ ರೂ. ಮೌಲ್ಯದ 44.832 ಕಿ.ಗ್ರಾಂ. ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಕುಂದು ಕೊರತೆ ಪರಿಹಾರ :  ಮತದಾರರ ಸಹಾಯವಾಣಿಯಿಂದ ಸ್ವೀಕೃತವಾದ ಒಟ್ಟು 290 ಕರೆಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ ಎನ್.ಜಿ.ಆರ್.ಎಸ್. ಪೋರ್ಟಲ್‍ನಲ್ಲಿ 281 ದೂರುಗಳನ್ನು ದಾಖಲಿಸಲಾಗಿದ್ದು, ಎಲ್ಲ 281 ದೂರುಗಳನ್ನು ವಿಲೇವಾರಿ ಮಾಡಲಾಗಿದೆ.  ನೀತಿ ಸಂಹಿತೆ ಉಲ್ಲಂಘನೆಯ 8 ದೂರುಗಳಿಗೆ ಸಂಬಂಧಿಸಿದಂತೆ 3 ದೂರುಗಳು ವಿಚಾರಣಾ ಹಂತದಲ್ಲಿದ್ದು, ಅಧಿಕಾರಿ-ನೌಕರರ ವಿರುದ್ದ ಸ್ವೀಕೃತವಾದ 38 ದೂರುಗಳ ಪೈಕಿ 36 ದೂರುಗಳನ್ನು ನಿಖಾಲಿ ಮಾಡಲಾಗಿದೆ. ಬಾಕಿ 2 ದೂರುಗಳು ವಿಚಾರಣೆಯಲ್ಲಿವೆ. ಇತರೆ ಚುನಾವಣೆಗೆ ಸಂಬಂಧಿಸಿದ 7 ದೂರುಗಳ ಪೈಕಿ 4 ದೂರುಗಳು ನಿಖಾಲಿಯಾಗಿದ್ದು, 3 ದೂರುಗಳು ವಿಚಾರಣೆ ಹಂತದಲ್ಲಿವೆ. ಸುವಿಧಾ ಅಡಿಯಲ್ಲಿ 250 ಅರ್ಜಿಗಳ ಪೈಕಿ 215 ಅರ್ಜಿ ಅಂಗೀಕರಿಸಲಾಗಿದೆ. 19 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 3 ಅರ್ಜಿಗಳು ಬಾಕಿ ಇವೆ, 13 ಅರ್ಜಿಗಳನ್ನು ರದ್ದುಗೊಳಿಸಲಾಗಿದೆ. 

ಕಾನೂನು ಸುವ್ಯವಸ್ಥೆ : ಜಿಲ್ಲೆಯಲ್ಲಿ ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಎಲ್ಲ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು 02 ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, 8 ಡಿಎಸ್‍ಪಿ, 26 ಸಿಪಿಐ, 95 ಪಿಎಸ್‍ಐ, 121 ಎಎಸ್‍ಐ, 704 ಹೆಚ್.ಸಿ., 1187 ಪಿಸಿ, 945 ಎಚ್‍ಜಿ, 11 ಎಫ್‍ಜಿ ಸೇರಿದಂತೆ 3099 ಜನರು ಸೇರಿದಂತೆ 55 ಸಿಎಪಿಎಫ್ ಹಾಗೂ 5 ಐಆರ್‍ಬಿ-ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಲೈಸನ್ಸ್ ಹೊಂದಿರುವ ಒಟ್ಟು 2363 ಆಯುಧಗಳ ಪೈಕಿ 2274 ಜಮಾ ಮಾಡಲಾಗಿದ್ದು, 54 ಆಯುಧಗಳನ್ನು ವಿನಾಯಿತಿ ನೀಡಲಾಗಿದೆ. 

ನಿಷೇಧಾಜ್ಞೆ : ಶೂನ್ಯ ಅವಧಿ (ಕೊನೆಯ 48 ಗಂಟೆಗಳು)ಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದು ನಿಷೇಧಿಸಲಾಗಿದೆ. 5ಕ್ಕಂತ ಹೆಚ್ಚಿನ ಜನರು ತಿರುಗಾಡುವುದನ್ನು ನಿಷೇಧಿಸಿದೆ. ಮದ್ಯಪಾನ ಮಾರಾಟ ನಿಷೇಧಿಸಿದೆ. ಧ್ವನಿವರ್ಧಕಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಕ್ಷೇತ್ರದ ಮತದಾರರಲ್ಲದ ರಾಜಕೀಯ ವ್ಯಕ್ತಿಗಳು ಕ್ಷೇತ್ರವನ್ನು ತೊರೆಯುವಂತೆ ತಿಳಿಸಿದೆ. 

ಪ್ರಜಾಸತ್ತಾತ್ಮಕ ವಿಧಾನದ ಮೂಲಕ ಸುಭದ್ರವಾದ ಸರ್ಕಾರವನ್ನು ರಚಿಸುವ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಮತವು ಅಮೂಲ್ಯವಾಗಿರುವುದರಿಂದ  ಜಿಲ್ಲೆಯ ಅರ್ಹ ಎಲ್ಲ ಮತದಾರರು ಮತದಾನದ ಹಬ್ಬದಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸುಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, May 3, 2024

04-05-2024 EE DIVASA KANNADA DAILY NEWS PAPER

03-05-2024 EE DIVASA KANNADA DAILY NEWS PAPER

ಮೇ 4 ರಂದು ಟಾಂಗಾ ಜಾಥಾ ಅಭಿಯಾನ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ರ ಮತದಾನ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮೇ 4 ರಂದು ಟಾಂಗಾ ಜಾಥಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. 

ನಗರದ ಸೆಟ್ ಲೈಟ್ ಬಸ್ ನಿಲ್ಲಾಣದಲ್ಲಿ ( ಹೊಸ ಬಸ್ ನಿಲ್ದಾಣ) ಸಂಜೆ 4 ಗಂಟೆಗೆ ಚಾಲನೆಗೊಳ್ಳುವ ಜಾಥಾ ಅಭಿಯಾನವು ಗ್ಯಾಂಗ್ ಬಾವಡಿ, ಮಹಾತ್ಮಾ ಗಾಂಧಿ ಶಾಲೆ, ಮಾನಸ ರೆಸಿಡೆನ್ಸಿ, ದರ್ಗಾ ಕ್ರಾಸ್, ಚಾಲುಕ್ಯ ನಗರ, ಉಮದಿ ಸೂಪರ್ ಬಜಾರ್ ಎದುರಿನ ರಸ್ತೆ, ಮಹೇಶ್ವರಿ ಭವನ ರಸ್ತೆ, ರೀಲೈನ್ಸ್ ಮಾಲ್ ರಸ್ತೆ, ಮಾರವಾಡಿ ಕಾಲೋನಿ, ಸಿದ್ದೇಶ್ವರ ದೇವಸ್ಥಾನ, ಗಾಂಧಿ ವೃತ್ತ ಮಾರ್ಗವಾಗಿ  ಸಂಚರಿಸಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತವನ್ನು ತಲುಪಲಿದೆ.

 ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಜ್ಞಾವಿಧಿ ಭೋಧಿಸುವುದರೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, May 2, 2024

ಆಕಾಶವಾಣಿ ಸುದ್ದಿ ಸೇವೆಗಳ ವಿಭಾಗದ ನೂತನ ಮಹಾನಿರ್ದೇಶಕರಾಗಿ ಭಾರತೀಯ ಸುದ್ದಿ ಸೇವೆಯ ಹಿರಿಯ ಅಧಿಕಾರಿ ಮೌಶೂಮಿ ಚಕ್ರವರ್ತಿ ಸ್ವೀಕಾರ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಭಾರತೀಯ ಸುದ್ದಿ ಸೇವೆಯ ಹಿರಿಯ ಅಧಿಕಾರಿ ಮೌಶೂಮಿ ಚಕ್ರವರ್ತಿ ಆಕಾಶವಾಣಿ ಸುದ್ದಿ ಸೇವೆಗಳ ವಿಭಾಗದ ನೂತನ ಮಹಾನಿರ್ದೇಶಕರಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

1991ರ ಐಐಎಸ್ ತಂಡದ ಅಧಿಕಾರಿಯಾಗಿರುವ ಅವರು ಮಾಧ್ಯಮ ಹಾಗೂ ಪ್ರಸಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಪಿಐಬಿ ಮತ್ತು ಕೇಂದ್ರೀಯ ಸಂವಹನ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ತಮ್ಮ 3 ದಶಕಗಳ ಸೇವಾನುಭವದಲ್ಲಿ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲೂ ಸಾಂದರ್ಭಿಕವಾಗಿ ಸೇವೆ ಸಲ್ಲಿಸಿದ್ದರು. ಆಕಾಶವಾಣಿ ಮಹಾ ನಿರ್ದೇಶಕರಾಗಿದ್ದ ವಸುಧಾ ಗುಪ್ತಾ ಅವರ ನಿವೃತ್ತಿ ಬಳಿಕ ಆ ಸ್ಥಾನಕ್ಕೆ ಮೌಶೂಮಿ ಚಕ್ರವರ್ತಿ ನೇಮಕಗೊಂಡಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.




Wednesday, May 1, 2024

02-05-2024 EE DIVASA KANNADA DAILY NEWS PAPER

ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚನೆ



ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚಿಸಿದರು. 

ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚುನಾವಣಾ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಈಗಾಗಲೇ ಜಿಲ್ಲೆಯಾದ್ಯಂತ ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇನ್ನಷ್ಟು ಪರಿಣಾಮಕಾರಿಯಾಗಿ ವಿಭಿನ್ನವಾಗಿ ಹಾಗೂ ವಿಶಿಷ್ಟವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಜಾಗೃತಿ ಕಾರ್ಯವನ್ನು ಗಂಭೀರವಾಗಿ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದರು.


ಮತದಾರ ಜಾಗೃತಿ ಕಾರ್ಯವನ್ನು ಚಾಲೇಂಜ್ ಆಗಿ ಸ್ವೀಕರಿಸಿ, ಮತ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಬೇಕು. ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಂಡಿರುವ ಕಾರ್ಯಗಳ ಫಲಿತಾಂಶ ಮತದಾನ ದಿನದಂದು ತಿಳಿಯಲಿದೆ. ನೀವು ಮಾಡಿದ ಪ್ರಯತ್ನಕ್ಕೆ ಮತದಾನ ದಿನದಂದು ಫಲ ಸಿಗಲಿದೆ. ಚುನಾವಣಾ ಆಯೋಗದಿಂದ ಮುದ್ರಿಸಲಾದ ವೋಟರ್ ಗೈಡ್‍ನಲ್ಲಿ ಸಂಪೂರ್ಣವಾದ ಮಾಹಿತಿ ನೀಡಲಾಗಿದೆ. ಈ ಮಾಹಿತಿಯನ್ನು ಬಿಎಲ್‍ಓಗಳು, ಸೂಪರ್‍ವೈಸರ್‍ಗಳು ಸೇರಿದಂತೆ ನಿಯೋಜಿತ ಎಲ್ಲ ಅಧಿಕಾರಿಗಳು ತಿಳಿದುಕೊಂಡು ಪ್ರತಿ ಮನೆ-ಮನೆಗೆ ಭೇಟಿ ಮತದಾರರಲ್ಲಿ ತಿಳುವಳಿಕೆ ಮೂಡಿಸಬೇಕು. ಮತಗಟ್ಟೆಗಳಲ್ಲಿ ಮತದಾರರರಿಗೆ ಕಲ್ಪಿಸಲಾಗಿರುವ ವ್ಯವಸ್ಥೆಗಳ ಕುರಿತು ಮನವರಿಕೆ ಮಾಡಬೇಕು. ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ತಂಪು ಕುಡಿಯುವ ನೀರಿನ ವ್ಯವಸ್ಥೆ, ರ್ಯಾಂಪ್ ವ್ಯವಸ್ಥೆ, ನಿರೀಕ್ಷಣಾ ಕೊಠಡಿ ವ್ಯವಸ್ಥೆ, ನೆರಳು ವ್ಯವಸ್ಥೆ, ತುರ್ತು ಸಂದರ್ಭಕ್ಕೆ ಅಂಬ್ಯೂಲೆನ್ಸ್ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ, ಓ.ಆರ್.ಎಸ್. ಪೊಟ್ಟಣಗಳು, ಶೌಚಾಲಯ ಸೇರಿದಂತೆ ಮತಗಟ್ಟೆಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಪ್ರತಿ ಮತದಾರರಿಗೆ ಮಾಹಿತಿ ಒದಗಿಸುವ ಮೂಲಕ ಅವರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಪ್ರೇರೆಪಿಸಬೇಕು. ಬಿಎಲ್‍ಓ, ಸೂಪರ್‍ವೈಸರ್, ಆಶಾ ಕಾರ್ಯಕರ್ತೆರು ಮನೆಗಳಿಗೆ ಭೇಟಿ ನೀಡಿ ಪ್ರತಿ ಮನೆಯಲ್ಲಿ  ಕನಿಷ್ಠ 5 ನಿಮಿಷ ತಿಳಿ ಹೇಳುವ ಮೂಲಕ ಜಾಗೃತಿ ಮೂಡಿಸಬೇಕು  ಎಂದು ಅವರು ಹೇಳಿದರು. 

ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸಹ ವಿವಿಧ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಸ್ಥಳಕ್ಕೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು. ಇದರಿಂದ ಬಿಎಲ್‍ಗಳಿಗೆ ಪ್ರೊತ್ಸಾಹ ದೊರೆಯಲಿದೆ. ಯುವ ಜನಾಂಗ, ಅಂಗವಿಕಲ ಮತದಾರ, ಹಿರಿಯ ನಾಗರೀಕ ಮತದಾರರಲ್ಲಿ ಹೆಚ್ಚಾಗಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯತಿಯ ಎ.ಬಿ.ಅಲ್ಲಾಪುರ ಅವರು ಮಾಹಿತಿ ನೀಡಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧೆಡೆ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡು  ಜಾಗೃತಿ ಮೂಡಿಸಲಾಗಿದೆ. ಮಾನವ ಸರಪಳಿ, ಕ್ಯಾಂಡಲ್ ಮಾರ್ಚ್, ಪ್ರಯಾಣಿಕರ ಜಾಗೃತಿಗಾಗಿ ವಿವಿಧ ಬಸ್ ನಿಲ್ದಾಣಗಳಲ್ಲಿ ಅನೌನ್ಸ್ಮೆಂಟ್ ಮೂಲಕ ಜಾಗೃತಿ, ವಿವಿಧ ನಿಲ್ದಾಣಗಳಲ್ಲಿ ಸೆಲ್ಫಿ ಸ್ಟ್ಯಾಂಡ್ ಅಳವಡಿಕೆ, ಬಸ್‍ಗಳಿಗೆ ಪೋಸ್ಟರ್ ಅಂಟಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ವಸತಿ ನಿಲಯದ ವಿದ್ಯಾರ್ಥಿಗಳಿಂದ ಪಾಲಕರಿಗೆ ಪತ್ರ ಅಭಿಯಾನ ಹಮ್ಮಿಕೊಂಡ ಜಾಗೃತಿ ಮೂಡಿಸುವುದು, ಜಿಲ್ಲೆಯ ಕಾರ್ಮಿಕರಿರುವ ಸ್ಥಳಗಳಿಗೆ ಭೇಟಿ ನೀಡಿ ಕಾರ್ಮಿಕರಲ್ಲಿ ಜಾಗೃತಿ, ವಿವಿಧ ಮಾಲ್, ಶೋರೂಂಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ. ಜಿಲ್ಲೆಯ 1528 ಸ್ಥಳಗಳಲ್ಲಿ ಚುನಾವಣಾ ಧ್ವಜಾರೋಹಣ, ಮಹಾನಗರ ಪಾಲಿಕೆ ವತಿಯಿಂದ 10 ಅಡಿ ಬಲೂನ್ ಅಳವಡಿಸಿ ಮತದಾನ ಜಾಗೃತಿ, ಸೇರಿದಂತೆ ಹತ್ತು ಹಲವಾರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಯ ಟಿ-ಶರ್ಟ್ ಹಾಗೂ ಕ್ಯಾಪ್‍ಗಳನ್ನು ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅವರು ಬಿಡುಗಡೆಗೊಳಿಸಿದರು. 

ಸಭೆಯಲ್ಲಿ    ಜಿಲ್ಲಾ ಸ್ವೀಪ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ,  ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ, ಮಹಾನಗರ ಪಾಲಿಕೆ ಆಯುಕ್ತ ಆರ್ಶದ ರೆಹಮಾನ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.