Monday, May 27, 2024

ಐವರು ಅಧಿಕಾರಿಗಳ ಅಮಾನತು : ಖಡಕ್ ಜಿಲ್ಲಾಧಿಕಾರಿ ಜಾನಕಿ ಆದೇಶ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಜಮಖಂಡಿ: ನಗರದ ಸರಕಾರಿ ರಮಾ ನಿವಾಸ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಪಂಚಾಯತ ಅಧಿಕಾರಿ, ಇಂಜಿಯರಗಳು ಮತ್ತು ಲೋಕೋಪಯೋಗಿ ಇಲಾಖೆಯ ಇಂಜಿನಿಯರ ಸೇರಿದಂತೆ ಐದು ಜನ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆಂದು ಬಾಗಲಕೋಟ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅವರು ಆದೇಶ ಹೊರಡಿಸಿದ್ದಾರೆ. ನೀತಿ ಸಂಹಿತೆ ಮಧ್ಯೆ ಕಚೇರಿ ಕೆಲಸಕ್ಕೆ ಚಕ್ಕರ ಹೊಡೆದು ಎಣ್ಣೆ ಪಾರ್ಟಿಯಲ್ಲಿ ಭಾಗಿಯಾಗಿದ್ದ ಜಿಲ್ಲಾ ಪಂಚಾಯತ ಎಇಇ ಎಸ್.ಎಂ. ನಾಯಕ, ಇಂಜಿನಿಯರ್‌ಗಳಾದ ರಾಮಪ್ಪ ರಾಠೋಡ, ಜಗದೀಶ ನಾಡಗೌಡ, ಗಜಾನನ ಪಾಟೀಲ ಅವರು ಸೇರಿಕೊಂಡು ಗುತ್ತಿಗೆದಾರೊಂದಿಗೆ ಮಧ್ಯೆ ಸೇವನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮಗಳಲ್ಲಿ ವರದಿಯ ಮೇಲೆ ನೋಟಿಸ್ ನೀಡಲಾಗಿದ್ದು, ತಹಶೀಲ್ದಾರ ಸದಾಶಿವ ಮಕ್ಕೋಜಿ ಅವರು ಐವರು ಸರಕಾರಿ ಪ್ರವಾಸಿ ಮಂದಿರ ಪಡೆದುಕೊಂಡಿದಾರೆಂದು ಸಲ್ಲಿಸಿದ ವರದಿ ಆಧರಿಸಿ ಹಾಗೂ ಲೋಕೊಪಯೋಗಿ ಇಲಾಖೆ ಇಂಜಿನಿಯರ ಎಸ್.ಆರ್. ಜಂಬಗಿ ಕೊಠಡಿಯನ್ನು ನೀಡಿದ್ದಾರೆಂದು ಆಧರಿಸಿ ಒಟ್ಟು ಐದು ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

No comments:

Post a Comment