Saturday, June 29, 2024

ಪರಿಸರ ಕಾಳಜಿ ಯುವಕರ ಆಶಯವಾಗಲಿ: ವಿಜಯಪುರ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಕಲ್ಲನಗೌಡ ಪಾಟೀಲ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಚಡಚಣ:  ಶ್ರೀ ಸಂಗಮೇಶ್ವರ ಕಲಾ‌ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಚಡಚಣದ  ರಾಷ್ಟೀಯ ಸೇವಾ ಯೋಜನಾ ಘಟಕವು ಚಡಚಣ ತಾಲೂಕಿನ ಜಿಗಜೇವಣಿ ಗ್ರಾಮದಲ್ಲಿ  ಏಳು ದಿನಗಳ ವಿಶೇಷ ವಾರ್ಷಿಕ ಶಿಬಿರದ ಉದ್ಘಟನಾ ಸಮಾರಂಭ  ಹಮ್ಮಿಕೊಳ್ಳಲಾಯಿತು. 

ಎನ್ ಎಸ್ ಎಸ್ ಶಿಬಿರದ ಉದ್ಘಾಟನಾ ಸಮಾರಂಭವನ್ನು ಶ್ರೀ ಸಿದ್ದರಾಮೇಶ್ವರ ಪಟ್ಟದ ದೇವರುವರು (ಬೋರಚಿಂಚೋಳ್ಳಿ)  ದಿವ್ಯ ಸಾನಿಧ್ಯ ವಹಿಸಿ ಆಶಿರ್ವಚನ ನೀಡಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವಿಠ್ಠಲ ಬಿರಾದಾರ (ಗ್ರಾಂ ಪ ಅಧ್ಯಕ್ಷರು) ವಹಿಸಿಕೊಂಡಿದ್ದರು. ಉದ್ಘಾಟನೆಯನ್ನು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಗೌರವಾನ್ವಿತ ಕಾರ್ಯದರ್ಶಿಗಳಾದ ಶ್ರೀ ವಿ ಎಸ್ ಗಿಡವಿರ  ನೆರವೆರಿಸಿದರು. 

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ  ವಿಜಯಪುರ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಕಲ್ಲನಗೌಡ ಪಾಟೀಲ ಸ್ವಯಂ ಸೇವಕರಲ್ಲಿ ಪ್ರಾಮಾಣಿಕತೆ ಇರಬೇಕು. ದೇಶದ ಭದ್ರತೆ ಮತ್ತು ಅಭಿವೃದ್ದಿ ದೃಷ್ಟಿಕೊನದಲ್ಲಿರಿಸಿಕೊಂಡು ಸೇವೆಯನ್ನು ಇವತ್ತಿನ ಯುವಕರು ಮಾಡಬೇಕು. ಯಾವುದೇ ಸ್ವಚ್ಛತೆಯೇ ಈ ಶಿಬಿರದ ಮೂಲ ತತ್ವವಾಗಲಿ.‌ ಪರಿಸರ ಕಾಳಜಿ ಯುವಕರ ಆಶಯವಾಗಲಿ ಎಂದು ತಿಳಿಸಿದರು. 

ಮಹಾವಿದ್ಯಾಲಯದ ಪ್ರಾಚಾರ್ಯರಾದ  ಡಾ. ಎಸ್ ಬಿ ರಾಠೋಡ ಪ್ರಾಸ್ತಾವಿಕ ಮಾತನಾಡುತ್ತಾ ನಾಡಿನ ಭವಿಷ್ಯ ಯುವಕರ ಕೈಯಲ್ಲಿ ಇದೆ.‌ ಸಂಸ್ಕಾರ ಮತ್ತು ಸಭ್ಯತೆಗಳನ್ನು ಕಲಿಯುವುದರ ಮೂಲಕ ಸ್ವಯಂ ಸೇವಕರು ಸಾಧನೆಯನ್ನು ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಪ್ರೊ.ಎಂ ಕೆ ಬಿರಾದಾರ್,  ಪ್ರೊ.ಎ ಎಸ್ ಪಾಟೀಲ್, ಎಸ ಎಸ್ ಪಾಟೀಲ್ ,ಪ್ರೊ. ಬಸವರಾಜ ಯಳ್ಳೂರು, ಪ್ರೊ.ಎಸ್ ಎಸ್ ಅವಟಿ,  ಪ್ರೊ.ಪೂಜಾ ಬುರುಡ, ಪ್ರೊ.ಬಿ ಎಮ್ ಧೈವಾಡಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮದ ಹಿರಿಯರು ಮಹಾವಿದ್ಯಾಲಯದ ಸ್ವಯಂ ಸೇವಕರು ಉಪಸ್ಥಿತರಿದ್ದರು.  ಕಾರ್ಯಕ್ರಮ ಅಧಿಕಾರಿಗಳಾದ‌ ಮಹಾಂತೇಶ ಜನವಾಡ ಸ್ವಾಗತಿಸಿದರು ಡಾ.ಎಸ್ ಎಸ್ ದೇಸಾಯಿ ವಂದಿಸಿದರು. ಕು. ಅಕ್ಷತಾ ಉಮರಾಣಿ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಕೇಂದ್ರ ಗೃಹ ಸಚಿವ ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ನವದೆಹಲಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.


ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.


ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200  ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು.


ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera  ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3  ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಕೋರಲಾಯಿತು.

ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಜಾಕ್ವೆಲ್‌ಗಳ ನಿರ್ವಹಣೆಗೆ ಸಕಾಲಕ್ಕೆ ಹಣ ಒದಗಿಸಲು ಆಗ್ರಹ

ವಿಜಯಪುರ : ಲಾಲಬಹಾದ್ದೂರ ಜಲಾಶಯದ ಬಳೂತಿ ಜಾಕ್ವೆಲ್ ಸೇರಿದಂತೆ ಉಳಿದ ಜಾಕ್ವೆಲ್‌ಗಳ ನಿರ್ವಹಣೆಗೆ ಸರಕಾರ ಸಕಾಲಕ್ಕೆ ಹಣ ಬಿಡುಗಡೆ ಗೊಳಿಸಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಶನಿವಾರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಇವರ ಮುಖಾಂತರ ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ ಅವರಿಗೆ  ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಯಂತ್ರೋಪಕರಣ ಕಾರ್ಯನಿರ್ವಹಣೆ ರಿಪೇರಿ ಸೇರಿದಂತೆ ಇನ್ನೂಳಿದ ನಿರ್ವಹಣೆಗಾಗಿ ಸರಕಾರ ಪ್ರತಿವರ್ಷ ಹಣ ಒದಗಿಸಬೇಕು. ಆದರೆ ಈ ವರ್ಷ ಹಣ ಒದಗಿಸುವಲ್ಲಿ ವಿಳಂಬನೀತಿ ಅನುಸರಿಸುತ್ತದೆ. ಇದರಿಂದ ಯಂತ್ರೋಪಕರಣಗಳ ರಿಪೇರಿ ಹಾಗೂ ಇನ್ನೂಳಿದ ಕೆಲಸಗಳು ಕುಂಠಿತಗೊಳುತ್ತಿದೆ. ಒಂದು ವೇಳೆ ಸಕಾಲಕ್ಕೆ ಹಣ ಒದಗಿಸದಿದ್ದಲ್ಲಿ. ಯಂತ್ರೋಪಕರಣಗಳ ದುರಸ್ತಿ ಕಾರ್ಯ ಹಾಗೂ ಅದಕ್ಕೆ ಆಯಿಲಿಂಗ್ ಹಾಗೂ ಗ್ರಿಸ್ ಸೇರಿದಂತೆ ಉಳಿದ ರಿಪೇರಿಗಳು ಸಕಾಲಕ್ಕೆ ಮಾಡದಿದ್ದರೆ ಮೋಟರುಗಳು ಹಾಳಾಗುತ್ತವೆ. ಒಂದು ವೇಳೆ ಯಂತ್ರೋಪಕರಗಳು ಕೆಟ್ಟು ನಿಂತಲ್ಲಿ ಕಾಲುವೆಗಳಿಗೆ ನೀರು ಹರಿಸಲು ಕಷ್ಟವಾಗುತ್ತದೆ. ರೈತರಿಗೆ ಯಾವ ಸಂದರ್ಭದಲ್ಲಿ ನೀರು ಅಗತ್ಯವಿರುತ್ತದೆ ಎಂಬುದು ಹೇಳಲಾಗುವುದಿಲ್ಲ ಅಂತಹ ಸಂದರ್ಭದಲ್ಲಿ ಯಂತ್ರೋಪಕರಣಗಳು ಕೆಟ್ಟರೆ ರೈತರಿಗೆ ತೊಂದರೆಯಾಗುತ್ತದೆ. ಮತ್ತು ಹೊಸ ಮೋಟಾರಗಳ ಬೆಲೆ ಅಂದಾಜು ಒಂದುಕೋಟಿ ಹಣಕ್ಕಿಂತಲೂ ಮೇಲ್ಪಟ್ಟಿವೆ. ಒಂದೇ ಮೋಟಾರು ಕೆಟ್ಟರೂ ಕೋಟಿಗಿಂತಲೂ ಹೆಚ್ಚು ಹಣ ಹಾಳಾಗುತ್ತದೆ. ಈ ಮೊದಲು ಜಾಕ್ವೆಲ್‌ಗಳ ನಿರ್ಮಾಣ ಮಾಡಿದ ಮೆಗಾ ಕಂಪನಿಯವರ ನಿರ್ವಹಣಾ ಅವಧಿ ಮುಕ್ತಾಯಗೊಂಡಿದ್ದು, ಈಗ ಸರಕಾರವೇ ನಿರ್ವಾಹಣ ವೆಚ್ಚ ಭರಿಸಬೇಕಾಗಿದೆ. ಆದರಿಂದ ಪ್ರತಿ ವರ್ಷವೂ ಸಕಾಲಕ್ಕೆ ಅದಕ್ಕೆ ತಗುಲುವ ನಿರ್ವಹಣೆ ವೆಚ್ಚವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಮನವಿ ಮೂಲಕ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಈ ಸಂದರ್ಭದಲ್ಲಿ ಬ.ಬಾಗೇವಾಡಿ ಪ್ರ.ಕಾರ್ಯದರ್ಶಿ ಪ್ರಹ್ಲಾದ ನಾಗರಾಳ, ತಾ.ಉಪಾಧ್ಯಕ್ಷ ಹೊನ್ನಕೇರಪ್ಪ ತೆಲಗಿ, ಚನ್ನಬಸಪ್ಪ ಸಿಂದೂರ, ಶಿವಪ್ಪ ಸುಂಟ್ಯಾನ, ದಾವಲಸಾಬ ನಧಾಪ್, ರಾಜೇಸಾಬ ವಾಲೀಕಾರ, ಪ್ರಭು ದಸ್ತವಾಡ, ಸಿದ್ದಪ್ಪ ಕಲಬೀಳಗಿ, ರೇವಣಸಿದ್ದ ಕೊಂಡಗೂಳಿ, ರಮೇಶ ಕೆಂಪವಾಡ, ಶ್ರೀನಿವಾಸ ಭತಗುಣಕಿ, ಎಸ್.ಜಿ. ಸಂಗೋAದಿಮಠ, ಎನ್.ಕೆ. ಮನಗೊಂಡ, ಬಸವರಾಜ ಬಾಡಗಿ ಮತ್ತಿತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



ಜಿಲ್ಲಾ ಮಟ್ಟದ ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಸಭೆ ಕೃಷಿ-ಶಿಕ್ಷಣ-ವ್ಯವಹಾರ ಸಾಲಗಳಿಗೆ ಒತ್ತು ನೀಡಿ ಪ್ರಗತಿ ಸಾಧಿಸಲು ಸಿಇಓ ಸೂಚನೆ

ವಿಜಯಪುರ :  ಜಿಲ್ಲೆಯಲ್ಲಿ  ಪ್ರಸಕ್ತ ಸಾಲಿನಲ್ಲಿ ವಿವಿಧ ಬ್ಯಾಂಕುಗಳಿAದ ಒಟ್ಟು ೧೭೦೯೩ ಕೋಟಿ ರೂ. ಸಾಲ ಒದಗಿಸಿದ್ದು, ಕಳೆದ ವರ್ಷಕ್ಕಿಂತ ಶೇ.೩.೮೮ ಪ್ರಗತಿ ಸಾಧಿಸಲಾಗಿದೆ. ಕೃಷಿ, ಶಿಕ್ಷಣ, ವ್ಯವಹಾರ ಮನೆ ಸಾಲಗಳ ಮೇಲೆ ಒತ್ತು ನೀಡಿ ಇನ್ನಷ್ಟು ಹೆಚ್ಚಿನ  ಪ್ರಗತಿ ಸಾಧಿಸುವಂತೆ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚನೆ ನೀಡಿದರು. 

ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ತ್ರೈಮಾಸಿಕ ಜಿಲ್ಲಾ ಸಲಹಾ ಸಮಿತಿ (ಡಿಎಲ್‌ಸಿ) ಸಭೆ ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ (ಡಿಎಲ್‌ಆರ್‌ಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು ರೂ.೧೭೦೯೩ ಕೋಟಿ ರೂ. ಸಾಲ ಒದಗಿಸಿದ್ದು, ರೂ.೧೮೬೭೬ ಕೋಟಿ ಠೇವಣಿ ಇದೆ. ಕಳೆದ ವರ್ಷಕ್ಕಿಂತ ೩.೮೮% ಸಾಲದಲ್ಲಿ ಪ್ರಗತಿ ಸಾಧಿಸಿದ್ದು ಠೇವಣಿಯಲ್ಲಿ ೧೨.೦೨% ಪ್ರಗತಿ ಸಾಧಿಸಲಾಗಿದೆ. ಜೊತೆಗೆ ಪ್ರಸ್ತುತ ೨೦೨೪-೨೫ ಸಾಲಿನಲ್ಲಿ ೪.೮೧% ಹೆಚ್ಚುವರಿ ಗುರಿ ಹೊಂದಿದ್ದು, ಎಲ್ಲ ಬ್ಯಾಂಕ್‌ಗಳು  ತಮಗೆ ಕೊಟ್ಟ ಗುರಿಯನ್ನು ಸಾಧಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ, ಶಿಕ್ಷಣ, ವ್ಯವಹಾರ ಮನೆ ಸಾಲಗಳ ಮೇಲೆ ಒತ್ತು ನೀಡಿ ಪ್ರಗತಿ ಸಾಧಿಸಬೇಕು.  ತೋಟಗಾರಿಕೆ ಇಲಾಖೆಗೆ ಜಿಲ್ಲೆಯ ಬೆಳೆ ವಿಮೆ ಬಗ್ಗೆ ಜಾಹೀರಾತು ನೀಡಲು ಎಲ್ಲಾ ಬೆಳೆ ವಿಮೆ ಪರಿಹಾರ ಅರ್ಜಿಗಳು ಮುಂದಿನ ಹದಿನೈದು ದಿನಗಳೊಳಗೆ ಪರಿಹರಿಸಬೇಕು ಮತ್ತು ಬ್ಯಾಂಕಿನವರಿಗೆ ಎಲ್ಲಾ ಸರಕಾರಿ ಸಾಲದ ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡಬೇಕೆಂದು ಸೂಚನೆ ನೀಡಿದರು.

ಜಿಲ್ಲಾ ಉಪ ಪೊಲೀಸ್ ಅಧೀಕ್ಷಕರಾದ ಶಂಕರ ಮಾರಿಹಾಳ ಅವರು, ಮಾತನಾಡಿ, ಬ್ಯಾಂಕ್‌ಗಳಲ್ಲಿ ಹಾಗೂ ಎ.ಟಿ.ಎಮ್‌ಗಳಲ್ಲಿ ಸೈಬರ್ ಅಪರಾಧಗಳ ಕಡಿವಾಣಕ್ಕೆ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಿಬೇಕು ಹಾಗೂ ಸೈಬರ್ ವಂಚನೆಯಾಗದAತೆ ತಡೆಗಟ್ಟಲು ಸಾರ್ವಜನಿಕರಲ್ಲಿ ಸೂಕ್ತ ತಿಳುವಳಿಕೆ-ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು. 

ಸಭೆಯಲ್ಲಿ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ನೇತಾಜಿ ಗೌಡರ್ ಜಿಲ್ಲೆಯ ತ್ರೈಮಾಸಿಕ ವರದಿ ಮಾರ್ಚ್ ೨೦೨೪ ಪೂರ್ಣ ವಿವರಣೆಯನ್ನು ಪ್ರಸ್ತುತ ಪಡಿಸಿದರು. 

ಈ ಸಂದರ್ಭದಲ್ಲಿ ಭಾರತೀಯ ರಿಜರ್ವ್ ಬ್ಯಾಂಕ್ ನ ಲೀಡ್ ಡಿಸ್ಟ್ರಿಕ್ಟ್ ಆಫೀಸರ್ ಅಲೋಕ್ ಸಿನ್ಹಾ, ನಬಾರ್ಡ್ ಜಿಲ್ಲಾ ಅಭಿವೃದ್ದಿ ವ್ಯವಸ್ಥಾಪಕ ವಿಕಾಸ್ ರಾಠೋಡ, ಕೆನರಾ ಬ್ಯಾಂಕ್ ಕ್ಷೇತ್ರೀಯ ಕಾರ್ಯಾಲಯದ ರೇಣುಕಾ ಹಾಗೂ ಜಿಲ್ಲೆಯ ಎಲ್ಲ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಜಯಪುರದಲ್ಲಿ ಕೆಫೆ ಇನ್ ಉದ್ಘಾಟಿಸಿದ ಕನ್ನಡ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ

ವಿಜಯಪುರ : ನಾನು ಜಾಸ್ತಿ ದುಡ್ಡು ಮಾಡಬೇಕಾಗಿದ್ರೆ ತೆಲುಗು ತಮಿಳು ಚಿತ್ರರಂಗಕ್ಕೆ ಹೋಗಬೇಕಾಗಿತ್ತು. ಆದ್ರೆ ಕನ್ನಡದ ಪ್ರೇಕ್ಷಕರು, ಅಭಿಮಾನಿಗಳು ಕೊಟ್ಟಿರೋ ಪ್ರೀತಿನೆ ಸಾಕು ಎಂದು ಕನ್ನಡದ ಚಿತ್ರಗಳಲ್ಲಿ ಹಾಸ್ಯ ಕಲಾವಿದನಾಗಿ ಪಾತ್ರ ಮಾಡುತ್ತಾ ಬಂದಿದ್ದೇನೆ, ಉತ್ತರ ರ‍್ನಾಟಕ ಭಾಗದ ಹಳ್ಳಿಗಳು ನನಗೆ ಚಿರಪರಿಚಿತ ಎಂದು ಕನ್ನಡದ ಖ್ಯಾತ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಹೇಳಿದರು.

ವಿಜಯಪುರ ನಗರದ ಸೊಲ್ಲಾಪುರ ರಸ್ತೆಯಲ್ಲಿ ಕೆಫೆ ಇನ್ ಉದ್ಘಾಟಿಸಿ ಅವರು ಮಾತನಾಡಿದರು, ಡಾ,ರಾಜ್ ಕುಮಾರ್, ವಿಷ್ಣುರ‍್ಧನ್ ಸೇರಿದಂತೆ ಹಲವು ನಟರೊಂದಿಗೆ ಪಾತ್ರ ಮಾಡಿರೋದು ಪ್ರೇಕ್ಷಕರು ಅಭಿಮಾನಿಗಳ ಆಶರ‍್ವಾದದಿಂದ,ನಾನು ಹುಟ್ಟಿದ್ದು ಬೆಂಗಳೂರು,ಈಗ ಸಿಂಗಾಪುರ ಆಗಿದೆ‌. ನಮ್ಮ ತಂದೆ ಟೆನ್ನಿಸ್ ಕೋಚ್ ಆಗಿದ್ದರು .ನಾನು ಟೆನ್ನಿಸ್ ಕೋಚ್ ಆಗಿದ್ದೆ, ಚಿತ್ರರಂಗಕ್ಕೆ ಬಂದ್ಮೇಲೆ ಟೆನ್ನಿಸ್ ಕೃಷ್ಣ ಅಂತ ಹೆಸರು ಇಟ್ಟುಕೊಂಡೆ, ಚಿತ್ರರಂಗದಲ್ಲಿ ಹೊನ್ನಾಳಿ ಕೃಷ್ಣ, ಬೆಕ್ಕಿನ ಕಣ್ಣು ಕೃಷ್ಣ ಇದ್ದಾರೆ.ಹೀಗಾಗಿ ಟೆನ್ನಿಸ್ ಕೃಷ್ಣ ಎಂದು ಹೆಸರು ಬದಲಾಯಿಸಿಕೊಂಡೆ, ನಾನು ಒಂದೇ ಒಂದು ಡ್ರಾಪ್ ಸಹಿತ ಮದ್ಯ ಸೇವನೆ ಮಾಡೋಲ್ಲ, ಆದ್ರು ಕುಡಕನ ಪಾತ್ರ ಅಭಿನಯಿಸಿದ್ದೇನೆ ಎಂದು ಕಿಚ್ಚ ಸುದೀಪ್ ಅಭಿನಯದ ವೀರಮದಕರಿ ಸಿನೇಮಾದ ಕುಡುಕನ ಸನ್ನಿವೇಶದ ಡೈಲಾಗ್ ಹೇಳಿದ್ರು. ವಿಜಯಪುರದಲ್ಲಿ ಕೆಫೆ ಇನ್ ಉದ್ಘಾಟಿಸಿದ್ದು ನನಗೆ ಸಂತಸ ತಂದಿದೆ ಎಂದರು.ಇದೇ ವೇಳೆ ತಮ್ಮ ಕೆಲವು ಅಭಿನಯದ ಚಿತ್ರಗಳ ಡೈಲಾಗ್ ಹೇಳಿ  ಪ್ರೇಕ್ಷಕರನ್ನು ರಂಜಿಸಿದ್ರು. ಯುವ ಮುಖಂಡ ರಾಮನಗೌಡ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ವಿಜಯಪುರ ನಗರ ಬೆಳೆಯುತ್ತಿದೆ, ಜೊತೆಗೆ ಹೊಟೇಲ್ ಉದ್ಯಮವೂ ಸಹ ಪೂರಕವಾಗಿ ಬೆಳೆಯುತ್ತಿದ್ದು, ಕೆಫೆ ಇನ್ ಸುತ್ತಲೂ ಕಾಲೇಜಿಗಳಿದ್ದು, ವ್ಯಾಪಾರಕ್ಕೆ ಪೂರಕವಾಗಿದೆ ಎಂದರು. ವೇದಿಕೆ ಮೇಲೆ ಕಲ್ಪನಾ ಚಿತ್ರದ ನರ‍್ಮಾಪಕ ಚಿದಂಬರಂ,  ಟೌನ್ ಪ್ಯಾಲೇಸ್ ಮಾಲೀಕ ಹನುಮಂತರಾಯಗೌಡ ಬಿರಾದಾರ, ಕೆಫೆ ಇನ್ ಮಾಲೀಕ ಉಮೇಶ್  ತೊಂಡಿಕಟ್ಟಿ , ಸಂತೋಷ್ ಗಣಿ, ರಾಜು ಬಿಜ್ಜರಗಿ, ಯಶ್ವಂತ್ ಗುಗ್ಗರಿ, ಅಭಿಲಾಷ್ ಹಳಕಟ್ಟಿ , ಮುನಾಫ್ ಇನಾಂದಾರ್, ಶಿವಾನಂದ ತೊಂಡಿಕಟ್ಟಿ , ಈರಣ್ಣ ತೊಂಡಿಕಟ್ಟಿ ಸೇರಿದಂತೆ ಹಲವರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಸರಕಾರೀ ಶಾಲೆಗೇ ಅಭಿನಂದನಾ ಗ್ರಂಥ ಸಲ್ಲಿಸಿದ ಹಳೆಯ ವಿದ್ಯಾರ್ಥಿಗಳು


ಆಲಮಟ್ಟಿ: ಇಲ್ಲಿನ

ಸರಕಾರಿ  ಶಾಲೆಯ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲೆಯ ೬೦ನೆಯ ವರ್ಷಾಚರಣೆಯ ಸಂದರ್ಭದಲ್ಲಿ ಕಲಿತ ಶಾಲೆ ಅಕ್ಷರ ತೋರಣ ಎಂಬ ಅಭಿನಂದನ ಗ್ರಂಥವನ್ನು ಅರ್ಪಿಸಿರುವುದು ಇಡೀ ರಾಜ್ಯಕ್ಕೆ ಮಾದರಿ ಕೆಲಸವಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಣ್ಣಿಸಿದರು.

ಇಲ್ಲಿನ ಸಮುದಾಯ ಭವನದಲ್ಲಿ ಕರ್ನಾಟಕ ಗಾಂ ಮಂಜಪ್ಪ ಹರ್ಡೇಕರ ಪ್ರೇರಿತ ಎಂಪಿಎಸ್ ಮತ್ತು ಎಂಎಚ್‌ಎ.  ಶಾಲೆಗಳ ಹಳೆಯ ವಿದ್ಯಾರ್ಥಿಗಳ ಬಳಗದಿಂದ ಹಮ್ಮಿಕೊಂಡ 'ಕಲಿತ ಶಾಲೆಗೆ ಅಕ್ಷರ ತೋರಣ' ಹಾಗೂ ಗುರು ಶಿಷ್ಯರ ಮಹಾಸಂಗಮ ಕಾರ್ಯಕ್ರಮದಲ್ಲಿ ಶುಕ್ರವಾರ  ಗ್ರಂಥ ಬಿಡುಗಡೆಗೊಳಿಸಿ ಅವರು ಮಾತನಾಡಿದ ಅವರು, ಹುಟ್ಟಿದ ಊರು, ಹೆತ್ತ ತಂದೆ ತಾಯಿ, ಕಲಿತ ಶಾಲೆ, ಕಷ್ಟದಲ್ಲಿ ಸಹಾಯ ಮಾಡಿದವರನ್ನು ಎಂದೂ ಮರೆಯಬಾರದು. ಉತ್ತಮ ತಾಯಿ ನೂರು ಜನ ಶಿಕ್ಷಕರಿಗೆ ಸಮ. ಗುರು ಶಿಷ್ಯರ ಸಂಬಂಧ ಉತ್ತಮವಾಗಿರಬೇಕು ಎಂದು ಹೇಳಿದರು.
ಸರಕಾರೀ ಶಾಲೆಗಳ ಅಗತ್ಯವನ್ನು ಒತ್ತಿ ಹೇಳುತ್ತ, ತಾವು  ಶಿಕ್ಷಣ ಸಚಿವನಾಗಿದ್ದಾಗ ೧೦೩೯ ಪ್ರೌಢ ಶಾಲೆ ಮತ್ತು ೫೦೦ ಪಿಯು ಕಾಲೇಜ್‌ಗಳು ಮಂಜೂರು ಮಾಡಿ ೫ ಸಾವಿರ ಕೋಟಿ ರೂ.ಗಳನ್ನು ಕಟ್ಟಡಕ್ಕಾಗಿ ದೊರಕಿಸಿಕೊಟ್ಟಿದ್ದನ್ನು ನೆನಪಿಸಿಕೊಂಡರಲ್ಲದೆ, ಆಲಮಟ್ಟಿಯ ಎಂಎಚ್‌ಎಂ. ಶಿಕ್ಷಣ ಸಂಸ್ಥೆಯವರು ಡಿಪ್ಲೋಮಾ ಹಾಗೂ ಐಟಿಐ ಕಾಲೇಜ್ ಆರಂಭಿಸಲು ಪ್ರಸ್ತಾವನೆ  ಸಲ್ಲಿಸಿದರೆ ಮಂಜೂರು ಮಾಡಿಸುವ ಜವಾಬ್ದಾರಿ ನನ್ನದಾಗಿದೆ. ಎಂದರು.
ಮುಂದುವರಿದು ಮಾತನಾಡಿದ ಅವರು  ಗುರು ಶಿಷ್ಯರ ನಡುವಿನ ಸಂಬಂಧ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದದ್ದು, ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು, ಗುರು ಶಿಷ್ಯರ ನಡುವಿನ ಸಂಬಂಧದ ಶ್ರೇಷ್ಠತೆಯನ್ನು ಇಂದಿನ ಯುವ ಜನಾಂಗ ಅರಿಯಬೇಕು ಎಂದು ಕರೆ ನೀಡಿದರು.
ಓದಿ ಉನ್ನತ ಮಟ್ಟದ ಹುದ್ದೆ ಅಲಂಕರಿಸಿದವರು ಇಂದು ತಮ್ಮ ಗುರುಗಳನ್ನು ನೆನೆದು ಓದಿದ ಶಾಲೆಗೆ ಅಕ್ಷರ ತೋರಣ ಕಟ್ಟಿದ ಹಳೆಯ ವಿದ್ಯಾರ್ಥಿಗಳ ಕಾರ್ಯ ಅಭಿನಂದನೀಯ ಹಾಗೂ ಅನುಕರಣೀಯ ವಾಗಿದ್ದು ಎಂದು ಅಭಿಪ್ರಾಯಪಟ್ಟರು.
ಕೃಷಿ ಪ್ರಧಾನವಾದ ಕುಟುಂಬದಲ್ಲಿ ಬೆಳೆದಿದ್ದ ತಾವು  ೮ ನೇ ತರಗತಿಯಲ್ಲಿರುವಾಗಲೇ ಅನಕ್ಷರಸ್ಥೆಯಾಗಿದ್ದ ತಮ್ಮ ಅಕ್ಕನಿಗೆ ಬಾಲ್ಯವಿವಾಹವಾಗಿದ್ದನ್ನು ನೆನಪಿಸಿಕೊಂಡ ಅವರು, " ಇದು ನನ್ನ ಮನಸ್ಸಿನ ಮೇಲೆ ಗಾ ಢವಾದ ಪರಿಣಾಮ ಬೀರಿತು. ಮುಂದೆ ನಾನು ಶಿಕ್ಷಣ ಸಚಿವನಾದ ಬಳಿಕ ಹೆಣ್ಣು ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡಿದೆ. ಅಕ್ಕನ ಅನಕ್ಷರತೆಯೇ ಹೆಣ್ಣು ಮಕ್ಕಳ ಕಲಿಕೆಗೆ ಆದ್ಯತೆ ನೀಡಲು ಮೂಲ ಕಾರಣವಾಯ್ತು"  ಎಂದು ವಿವರಿಸಿದರು.
ಮುಂಡರಗಿ ತೋಂಟದಾರ್ಯಮಠದ ನಿಜಗುಣಪ್ರಭು ತೋಂಟದಾರ್ಯ ಶ್ರೀಗಳು ಮಾತನಾಡಿ, ಬಸವಣ್ಣನವರು ಸಾವಿರ ವರ್ಷಗಳ ಹಿಂದೆ ಅಕ್ಷರದ ಕ್ರಾಂತಿ ಮಾಡಿದರು. ಹೀಗಾಗಿ ಕೆಳವರ್ಗದ ಜನರೂ ಕೂಡ ವಚನ ಬರೆಯುಂತಾಯಿತು. ಕನ್ನಡ ಭಾಷೆ ಉಳಿವಿಗೆ ಬಸವಣ್ಣನವರು ಅನ್ಯ ರಾಜ್ಯಗಳಿಂದ ವಚನಕಾರರಿಂದ ಕನ್ನಡದಲ್ಲಿಯೇ ವಚನಗಳನ್ನು ಬರೆಯಿಸಿದರು. ಪ್ರಜಾಪ್ರಭುತ್ವ ಚಿಂತನೆ ಆರಂಭವಾಗಿದ್ದೆ ಬಸವನಬಾಗೇವಾಡಿಯಲ್ಲಿ ಅದನ್ನು ಕಟ್ಟಿದವರು ಬಸವಣ್ಣನವರು. ಪ್ರಜಾಪ್ರಭುತ್ವ ಜಾರಿಗಾಗಿಯೇ ವಚನಕ್ರಾಂತಿ ಮಾಡಿದರು ಎಂದರಲ್ಲದೆ ವಿಜಯಪುರ ಜಿಲ್ಲೆ ಶರಣರ ಕಾಲದಲ್ಲಿಯೇ ಶಿಕ್ಷಣ ಕ್ರಾಂತಿ ಮಾಡಿದ ಜಿಲ್ಲೆಯಾಗಿದೆ ಎಂದು ವಿಶ್ಲೇಷಿಸಿದರು.
ಆಲಮಟ್ಟಿಯಲ್ಲಿ  ಹರ್ಡೇಕರ ಮಂಜಪ್ಪನವರ ಜೀವನವನ್ನು ಸಾರುವ ಥೀಮ್ ಪಾರ್ಕ್ ಅವಶ್ಯಕತೆಯನ್ನು ಒತ್ತಿ ಹೇಳಿದ ಶ್ರೀಗಳು, ಹರ್ಡೇಕರ ಅವರ ಆಶಯದಂತೆ ನಿಸರ್ಗ ಚಿಕಿತ್ಸಾ ಕೇಂದ್ರದ ಸ್ಥಾಪನೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದರು.
ವಿಜಯಪುರ ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ ಮಾತನಾಡಿ, ಬಹುತೇಕ ಶಾಸಕರು ತಮ್ಮ ಅನುದಾನವನ್ನು ಕೇವಲ ದೇವಸ್ಥಾನ ಮತ್ತು ಸಮುದಾಯ ಭವನಗಳಿಗೆ ನೀಡುವ ಬದಲು ಶಿಕ್ಷಣ ಕ್ಷೇತ್ರಕ್ಕೆ ನೀಡಬೇಕು. ದೇಶ ಮುಂದುವರೆಯಲು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಡಬೇಕಾಗಿದೆ. ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನವನ್ನು ಮೀಸಲಿಡಬೇಕು ಎಂದು ಪ್ರತಿಪಾಸಿದರು.
ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣ  ಮಾತನಾಡಿ, ಇದೊಂದು ಹೃದಯ ಸ್ಪರ್ಶಿ ಹಾಗೂ ಮಾದರಿಯಾದ ಕಾರ್ಯಕ್ರಮ. ಕಲಿತ ಶಾಲೆಯನ್ನು ನೆನಪಿಸಿಕೊಂಡು ಗುರುನಮನ ಜತೆಗೆ ಶಾಲೆ ಕುರಿತ ಅಭಿನಂದನ ಗ್ರಂಥ ಬಿಡುಗಡೆ ಮಾಡಿರುವುದು ಸಂತೋಷ ತಂದಿದೆ. ಆಲಮಟ್ಟಿ ಶಿಕ್ಷಣ ಕ್ಷೇತ್ರವಾಗಿ ಹಾಗೂ ಪ್ರಮುಖ ಪ್ರವಾಸಿ ತಾಣವಾಗಿ ಇನ್ನಷ್ಟು ಬೆಳೆಯಲು, ಆಲಮಟ್ಟಿಯಲ್ಲಿ ಯಾತ್ರಿ ನಿವಾಸ ಹಾಗೂ ಕಲ್ಯಾಣ ಮಂಟಪದ  ಅವಶ್ಯಕತೆ ಇದೆ ಅಂದು ಅಭಿಪ್ರಾಯ ಪಟ್ಟರು.
ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೋಹನರಾಜ್ ಕೆ.ಪಿ.  ಮಾತನಾಡಿ ಸಾಮಾನ್ಯವಾಗಿ ಒಂದೊಂದು ಬ್ಯಾಚಿನವರು ಗುರುವಂದನ ಮಾಡುವುದನ್ನು ಕಾಣುತ್ತೇವೆ, ಆದರೆ ೬೦ ವರ್ಷಗಳ ಎಲ್ಲ ಬ್ಯಾಚಿನವರು ಸೇರಿ ಗುರುಶಿಷ್ಯರ ಮಹಾಸಂಗಮ ಬಹುಷಃ ಕರ್ನಾಟಕದಲ್ಲಿ ಎಲ್ಲಿಯೂ ನಡೆದಿಲ್ಲ ಎಂದು ಹೇಳಿದರು.
ಮಾಜಿ ಸಚಿವರಾದ ಎಸ್.ಕೆ.ಬೆಳ್ಳುಬ್ಬಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಬೇಲೂರಿನ ಗುರುಬಸವ ಮಠದ ಮಹಾಂತ ಸ್ವಾಮೀಜಿ, ಗದಗದ ತೋಂಟದಾರ್ಯ ವಿದ್ಯಾಪೀಠದ ಆಡಳಿತಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಸದಾಶಿವ ದಳವಾಯಿ ಸೇರಿದಂತೆ ಇತರರಿದ್ದರು.
ಇದೇ ಸಂದರ್ಭದಲ್ಲಿ ಎಂಪಿಎಸ್ ಮತ್ತು ಎಂಎಚ್‌ಎಂ  ಪ್ರೌಢ ಶಾಲೆಯ ಸುಮಾರು ೭೦ ನಿವೃತ್ತ ಹಾಗೂ ಹಾಲಿ  ಗುರುಗಳು-ಗುರುಮಾತೆಯರನ್ನು ಸನ್ಮಾನಿಸಲಾಯಿತು.  ಚಂದ್ರಶೇಖರ ನುಗ್ಲಿ, ಸಂಗಮೇಶ ಮೆಣಸಿನಕಾಯಿ, ವಿಠ್ಠಲ್ ಪಾಟೀಲ್, ಸಾವಿತ್ರಿ ಹಿರೆಗೊಂಡ, ಶೈಲಶ್ರೀ ಜೋಶಿ, ತನುಜಾ ಪೂಜಾರಿ, ಸಂಗಮೇಶ್ ಚನ್ನಿಗಾವಿ ಮುಂತಾದವರು ಉಪಸ್ಥಿತರಿದ್ದರು.
ಮಧ್ಯಾಹ್ನ 'ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಹೇಗೆ?' ಎಂಬ ವಿಷಯಾಗಿ ಸದ್ಯದ ವಿದ್ಯಾರ್ಥಿಗಳೊಂದಿಗೆ ಹಳೆಯ ಸಾಧಕ ವಿದ್ಯಾರ್ಥಿಗಳಾದ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಾಧ್ಯಾಪಕ ಡಾ.ಅರುಣ ಉಳ್ಳಾಗಡ್ಡಿ, ಹಿರಿಯ ಕೆ. ಎ. ಎಸ್. ಅಧಿಕಾರಿ  ಮಮತಾ ಹೊಸಗೌಡರ, ಪೊಲೀಸ್ ಇನ್ಸ್ಪೆಕ್ಟರ್ ಗಳಾದ ರಮೇಶ ರೊಟ್ಟಿ, ಸಚಿನ ಚಲವಾದಿ, ಸಂಗಮೇಶ ದಿಡಗಿನಾಳ, ಪುಣೆಯ ಚಾರ್ಟರ್ಡ್ ಅಕೌಂಟಂಟ್ ವಾಣಿಶ್ರೀ ಅಮರಗೊಂಡ, ಸರಕಾರೀ ಅಭಿಯೋಜಕಿ ಗೀತಾ ಹೊಸಗಣಿಗೇರ, ಆರ್ಕಿಟೆಕ್ಟ್ ಸತೀಶ್ ನಡುವಿನಮನಿ, ಸಂವಾದ ನಡೆಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, June 27, 2024

28-06-2024 EE DIVASA KANNADA DAILY NEWS PAPER

ಜೂನ್ 29 ರಂದು ಎಸ್.ಎಂ.ಎನ್. ಸೌಹಾರ್ದ ಸಂಘದ ವಂಚಿತ ಗ್ರಾಹಕರ ಹೋರಾಟ ಸಮಿತಿ ಸಭೆ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಹೋರಾಟದ ಮುಂದಿನ ರೂಪರೇಷೆ ಚರ್ಚಿಸಲು ದಿನಾಂಕ 24.06.2024, ಸೋಮವಾರ ವಿಜಯಪುರದಲ್ಲಿ ಸಭೆ ಕರೆಯಲಾಗಿತ್ತು. ನಮ್ಮ ಹೋರಾಟದ ನೇತೃತ್ವ ವಹಿಸಿರುವ ರೈತ ಮುಖಂಡ ಅರವಿಂದ ಕುಲಕರ್ಣಿ ಅವರು ಕೆಲ ಕಾರಣಗಳಿಂದ ಈ ಸಭೆಯನ್ನು ದಿನಾಂಕ 29.06.2024, ಶನಿವಾರ ಬೆಳಗ್ಗೆ 10.30 ಗಂಟೆಗೆ ವಿಜಯಪುರದ ಗಗನ್ ಮಹಲ್‌ದಲ್ಲಿ ನಡೆಸಲು ನಿರ್ಣಯಿಸಿದ್ದಾರೆ. ಆದ ಕಾರಣ ಎಸ್.ಎಂ.ಎನ್. ವಂಚಿತ ಎಲ್ಲ ಬಾಂಧವರು ಶನಿವಾರ ನಡೆಯುವ ಸಭೆಗೆ ತಪ್ಪದೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಎಸ್.ಎಂ.ಎನ್. ಸೌಹಾರ್ದ ಸಂಘದ ವಂಚಿತ ಗ್ರಾಹಕರ ಹೋರಾಟ ಸಮಿತಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ರಾಗಂ ಅವರ "ಯೋಗಸ್ಥ" ಕೃತಿ ಲೋಕರ್ಪಣೆ ಸಮಾರಂಭ'

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ
ವಿಜಯಪುರ : ವಿಜಯಪುರ ಜಿಲ್ಲೆ ಚಡಚಣ ಪಟ್ಟಣದ ಪ್ರಸ್ತುತ ಬೆಂಗಳೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ಡಾ. ರಾಜಶೇಖರ ಗಂಗಯ್ಯ.ಮಠಪತಿ (ರಾಗಂ) ಅವರು ರಚಿಸಿದ ಸಂತೆಯಿAದ ಸಂತನೆಡೆಗೆ "ಯೋಗಸ್ಥ" ಕೃತಿ ದ್ವಿತೀಯ ಮುದ್ರಣ ಶನಿವಾರ ದಿನಾಂಕ: 29-06-2024 ರಂದು ಬೆಳಿಗ್ಗೆ 10-00 ಘಂಟೆಗೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಶ್ರೀ ಗುರುಬಸಪ್ಪ ರೋಡಗಿ ಕಲ್ಯಾಣ ಮಂಟಪದಲ್ಲಿ ಲೋಕಾರ್ಪಣೆಗೊಳ್ಳಲಿದೆ.
ರಾಜಶೇಖರ ಮಠಪತಿ ರಾಗಂ ಅವರು ಭೀಮಾ ತೀರದ ಕರ್ನಾಟಕ--ಮಹಾರಾಷ್ಟ್ರದ ಗಡಿಯಂಚಿನ ಗ್ರಾಮೀಣ ಸೊಗಡಿನ ಸಂತರ, ಸಾಹಿತಿಗಳ ಜನ ಪದರ ಗಟ್ಟಿ ಸಂಸ್ಕೃತಿಯಲ್ಲಿ ಬೆಳೆದು, 50 ರ ಕಿರಿಯ ಪ್ರಾಯದಲ್ಲಿಯೇ ನೂರೊಂದು ಮೌಲಿಕ ಕೃತಿಗಳನ್ನು ರಚಿಸಿ ಸಾರಸ್ವತ ಲೋಕದ ಹಿರಿಮೆಯನ್ನು ಹೆಚ್ಚಿಸಿದ ಪ್ರತಿಭಾವಂತ ಸಾಹಿತಿ.
ಹಿಂದಿ ಚಲನಚಿತ್ರದ ಹಿರಿಯ ನಿರ್ದೇಶಕ ಏ.ಕೆ.ಅಬ್ಬಾಸ್ ಅವರ ಜೀವನ ಸಾಧನೆ ಕುರಿತು ಮಹತ್ವಪೂರ್ಣ ಗ್ರಂಥ ಬರೆದು ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಶ್ರೇಷ್ಠ ಸಾಹಿತಿಗಳಾದ ಹಲಸಂಗಿ ಗೆಳೆಯರ ಬಳಗದ ಹಿರಿಯ ಸಾಹಿತಿ ಸಿಂಪಿ ಲಿಂಗಣ್ಣ ಅವರ ಒಡನಾಟ, ಶಿಶು ಸಂಗಮೇಶ, ಶಂ.ಗು. ಬಿರದಾರರಂಥ ಅನೇಕ ಸಾಹಿತ್ಯ ದಿಗ್ಗಜರ, ಶಿಕ್ಷಕರ ಮಾರ್ಗದರ್ಶನ. ಆಚಾರ ವಿಚಾರ ಸಂಸ್ಕೃತಿಯುಳ್ಳ ಶಿಕ್ಷಕ ತಂದೆ-ತಾಯಿಯ ಸಂಸ್ಕಾರದಲ್ಲಿ ಬೆಳೆದು. ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಅಚ್ಚು ಮೆಚ್ಚಿನ ಶಿಷ್ಯರಾಗಿದ್ಧವರು. ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಕುರಿತು ಮಹತ್ವಪೂರ್ಣ ಹಲವಾರು ವಿಚಾರಗಳನ್ನು ಈ ಸಂತೆಯಿAದ ಸಂತನವರೆಗೆ ಎಂಬ ಅಡಿಬರಹ ಹೊಂದಿದ “ಯೋಗಸ್ಥ” ಕೃತಿ ಇತ್ತೀಚೆಗೆ ಕಳೆದ ಹದಿನೈದು ದಿನಗಳ ಹಿಂದೆ ಗುಡೂರಿನಲ್ಲಿ ಸಾಹಿತ್ಯ ಪ್ರಿಯರಿಂದ ಬಿಡುಗಡೆಗೊಂಡು, ಕೇವಲ ಹದಿನೈದು ದಿನಗಳಲ್ಲಿ ಸಾವಿರಾರು ಕೃತಿಗಳು ಓದುಗರ ಕೈಸೇರಿ ಓದುಗರಿಂದ ಬೇಡಿಕೆ ಹೆಚ್ಚಿದ್ದು ಈಗ ಮತ್ತೇ ಸಾವಿರಾರು ಕೃತಿಗಳು ಬಿಡುಗಡೆಗೆ ಸಿದ್ಧಗೊಂಡಿವೆ. ಇದೇ ಶನಿವಾರ ತೆಲಸಂಗ ಗ್ರಾಮದ ಸಮಸ್ತ ಜನತೆಯ ಸಹಕಾರದೊಂದಿಗೆ ಲೋಕಾರ್ಪಣೆಗೊಳ್ಳಲಿವೆ. ಅಂದಿನ ಕೃತಿ ಬಿಡುಗಡೆ ಸಮಾರಂಭದಲ್ಲಿ ಬೆಂಗಳೂರಿನ ಆಧ್ಯಾತ್ಮ ಚಿಂತಕರಾದ ಶ್ರೀ ಜಂಬುನಾಥ ಮಳಿಮಠ ಅವರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಯೋಗಸ್ಥ ಕೃತಿಯನ್ನು ತೆಲಸಂಗ ಹಿರೇಮಠದ ಶ್ರೀ ವೀರೇಶ ದೇವರು ತಮ್ಮ ಅಮೃತ ಹಸ್ತದಿಂದ ಲೋಕಾರ್ಪಣೆಗೊಳಿಸಲಿದ್ದಾರೆ. ಕೃತಿಯ ಕುರಿತು ಕಜ್ಜಿಡೋಣಿಯ ಶ್ರೀ ಕೃಷ್ಣಾನಂದ ಶರಣರು ಆಶಯ ನುಡಿಗಳನ್ನು ಹೇಳಲಿದ್ದಾರೆ. ವಿಜಯಪುರ ಡಿವೈಎಸ್ಪಿ ಬಸವರಾಜ್ ಯಲಿಗಾರ. ಲೋಕಾಯುಕ್ತ ಡಿವೈಎಸ್ಪಿ ಸುರೇಶ ರೆಡ್ಡಿ ಅಭಿನಂದನಾ ನುಡಿಗಳನ್ನು ಹೇಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ವೀರಲೋಕ, ವಿಷ್ಣುಸೇನೆ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ, ಹುಮನಾಬಾದ ಕಾಲೇಜು ಉಪನ್ಯಾಸಕ ದಿಲೀಪ್ ಕುಮಾರ್ ಪತಂಗೆ, ಅಕ್ಕಲಕೋಟೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಗುರುಲಿಂಗಪ್ಪ ಡಬಾಲೆ, ಅಶೋಕ ಖೇಣಿ ಯೂಥ್ ಮೂವಮೆಂಟ್ ವಿಜಯಪುರ ಜಿಲ್ಲಾ ಘಟಕ ಅಧ್ಯಕ್ಷ ಕುಶರಾಜ ಪರಣ್ಣವರ ಮುಂತಾದವರು ಭಾಗವಹಿಸಲಿದ್ದಾರೆ.
ಇದೆ ಸಂದರ್ಭದಲ್ಲಿ ಬಹುಮುಖ ಪ್ರತಿಭೆಯ ಉಪನ್ಯಾಸಕ ಕವಿ,ಸಾಹಿತಿ,ಖ್ಯಾತ ವಾಗ್ಮಿ, ಕೃತಿಕಾರ ರಾಜಶೇಖರ ಮಠಪತಿ (ರಾಗಂ) ಅವರನ್ನು ಹಾಗು ವಿವಿಧ ಕ್ಷೇತ್ರಗಳ ಅನೇಕ ಸಾಧಕರ ಸನ್ಮಾನ ಜರುಗಲಿದೆ. ಕಾರಣ ವಿಜಯಪುರ,ಅಥಣಿ, ತೆಲಸಂಗ ಗ್ರಾಮದ ಸುತ್ತ ಮುತ್ತಲಿನ ಸಮಸ್ತ ಜನತೆ ಉಪಸ್ಥಿತರಿದ್ದು ಶೋಭೆ ತರಬೇಕೆಂದು ಕಾರ್ಯಕ್ರಮ ಸಂಯೋಜಕರಾದ ನ್ಯಾಯವಾದಿ ದಾನೇಶ ಅವಟಿ, ಯುವ ಮುಖಂಡ ಸಂತೋಷ ಹತ್ತಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, June 25, 2024

26-06-2024 EE DIVASA KANNADA DAILY NEWS PAPER

ಡಿಸೆಂಬರ್ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ


ಈ ದಿವಸ ಕನ್ನಡ ದಿನ ಪತ್ರಿಕೆ 

ಬೆಂಗಳೂರು:

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.



ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.



ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ತಿಳಿಸಿದರು.

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌,  ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Saturday, June 22, 2024

23-06-2024 EE DIVASA KANNADA DAILY NEWS PAPER

ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ



ಬೆಂಗಳೂರು : ಕನ್ನಡದ ಉತ್ತಮ  ಸಾಹಿತಿಯನ್ನು ನಾವು  ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

 ಅವರು ಇಂದು ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು.

ಕಮಲಾ ಹಂಪನಾ ಅವರನ್ನು  ನಾಲ್ಕೈದು ತಿಂಗಳ ಹಿಂದೆ  ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು  ಅಂದರೆ 48  ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ  ಕೆಲಸ ಮಾಡಿದ್ದಾರೆ ಎಂದರು.



 ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಎನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, June 21, 2024

22-06-2024 EE DIVASA KANNADA DAILY NEWS PAPER

10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಧೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಿ -ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ : ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ನಗರ ಶಾಸPರಾದÀ ಬಸನಗೌಡ ಪಾಟೀಲ ಯತ್ನಾಳ ಅವರು ಕರೆ ನೀಡಿದರು.ಅವರು ಆಯುಷ್ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜೂನ್ 21ರಂದು ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ದೈಹಿಕ, ಮಾನಸಿಕ ಸದೃಢÀತೆಗೆ ಯೋಗ ಸಹಕಾರಿ. ಜೀವನದಲ್ಲಿ ಪ್ರತಿನಿತ್ಯ ಯೋಗ ರೂಡಿಸಿಕೊಳ್ಳಬೇಕು. ನಿಯಮಿತ ಯೋಗ ಮಾಡುವುದರ ಮೂಲಕ ಆರೋಗ್ಯ ದೃಢತೆ ಹಾಗೂ ಚೈತನ್ಯಯುಕ್ತ ಬದುಕು ನಡೆಸಬಹುದಾಗಿದೆ. ಯೋU ರೂಢಿಸಿಕೊಳ್ಳುವ ಮೂಲಕ ಆರೋಗ್ಯಯುತ ಜೀವನ ನಡೆಸಬಹುದು. 

ವಿಶ್ವಕ್ಕೆ ಯೋಗ ಪರಿಚಯಿಸಿದ್ದು ಭಾರತ. ಜೂನ್21 ರಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ದೇಶಗಳು ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಸಾಮೂಹಿಕ ಯೋಗಾಭ್ಯಾಸ: ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯೋಗಾಸಕ್ತರಿಗೆ 45 ನಿಮಿಷಗ¼ ಕಾಲ ಯೋಗಾಭ್ಯಾಸ ಮಾಡಿಸಲಾಯಿತು. ಶ್ರೀಮತಿ ಸುನೀತಾ ಬಿರಾದಾರ ಅವರು ಯೋಗಾಸನÀ ಹಾಗೂ ಚಂದ್ರಶೇಖರ ಮತ್ತು ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕಿ ಗೀತಾಂಜಲಿ ದಾಸರ್ ಅವರು ಪ್ರಾಣಾಯಾಮದ ಅಭ್ಯಾಸ ಮಾಡಿಸಿದರು. 

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳಾದ ಡಾ. ರಾಮನಗೌಡ ಎಸ್. ಪಾಟೀಲ್,ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ್ ಮಾನವರ ಸೇರಿದಂತೆ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಕರ್ನಾಟಕ ರಿಸರ್ವ ಬಟಾಲಿಯನ್, ಸ್ಕೌಟ್ಸ್ ಹಾಗೂ ಗೈಡ್ಸ್, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾರತಿ ಕುಂದನಗಾರ ತಂಡದಿAದ ನಾಡಗೀತೆ ಪ್ರಸ್ತುತಪಡಿಸಲಾಯಿತು. ವೈದ್ಯಾಧಿಕಾರಿ ಡಾ. ವಿದ್ಯಾವತಿ. ಎಂ. ಅಥಣಿ ಪ್ರಾರ್ಥನೆ ಗೀತೆ ಹಾಡಿದರು. ಡಾ. ಬಿ.ಎನ್. ವಗದರ್ಣಿ ಸ್ವಾಗತಿಸಿದರು. ಡಾ. ವಿಜಯ ಮಹಾಂತೇಶ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಭಾರತ ಸರ್ಕಾರ ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಸಹಯೋಗದಲ್ಲಿ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಯೋಗ ದಿನ ಆಚರಣೆ

ವಿಜಯಪುರ:  ಭಾರತ ಸರ್ಕಾರ ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ವಿದ್ಯಾವರ್ಧಕ ಸಂಘದ ಬನ್ಸಿಲಾಲ್ ವಿಟ್ಟಲ್ ದಾಸ್ ಪದವಿ ಮಹಾವಿದ್ಯಾಲಯದಲ್ಲಿ ಇಂದು ನೆಹರು ಯುವ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಶುಕ್ರವಾರ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು. 

ಯೋಗ ದಿನಾಚರಣೆ ಕಾರ್ಯಕ್ರಮವನ್ನು ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಕೃಷ್ಣಮೂರ್ತಿ ದೇಶಪಾಂಡೆ ಅವರು ಉದ್ಘಾಟಿಸಿ ಮಾತನಾಡಿ,  ವಿಜಯಪುರ: ದಿನನಿತ್ಯ ಯೋಗಾಭ್ಯಾಸ ಮಾಡುವುದರಿಂದ ಶಾಂತಿ ಸಹ ಬಾಳ್ವೆ ಬದುಕು ರೂಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಪೋಷಕರು ಶಿಕ್ಷಣದ ಜೊತೆಗೆ ಯೋಗ ಶಿಕ್ಷಣ ನೀಡಲು ಮಕ್ಕಳಿಗೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು. 

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜೇಶ್ ದರ್ಬಾರ್ ಅವರು ಮಾತನಾಡಿ ಸುಮಾರು 5000 ವರ್ಷಗಳ ಇತಿಹಾಸವಿರುವ ಯೋಗ ಕಲೆಯನ್ನು ಜಗತ್ತಿಗೆ ಪರಿಚಯಿಸಿದ ಹಿರಿಮೆ ಭಾರತ ಹೊಂದಿದೆ.ಪ್ರತಿಯೊಬ್ಬ ಭಾರತೀಯ ಹೆಮ್ಮೆಯ ಪ್ರತೀಕವಾದ ಯೋಗ ದಿನಾಚರಣೆಯನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ ಎಂದು ಹೇಳಿದರು.

 ಕೇಂದ್ರ ಸಂವಹನ ಇಲಾಖೆ ಸಿ.ಕೆ ಸುರೇಶ್ ಪ್ರಸ್ತಾವಿಕವಾಗಿ ಮಾತನಾಡಿ, ಪ್ರತಿನಿತ್ಯ ಯೋಗ ಮಾಡುವುದರಿಂದ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಮನುಷ್ಯ ಸದೃಢನಾಗುತ್ತಾನೆ ಎಂದರು. 

ಯೋಗ ಗುರು ಮಾತೆಯಾದ ಕಲಾವತಿ ಅಪರಾಜ ವಿದ್ಯಾರ್ಥಿ ,ವಿದ್ಯಾರ್ಥಿನಿಯರಿಗೆ ಯೋಗಾಭ್ಯಾಸದ ಕುರಿತು ಮಾಹಿತಿಯನ್ನು ನೀಡಿದರು. 

ಚಿತ್ರಕಲೆ, ರಂಗೋಲಿ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ದಿಲೀಪ್ ದರ್ಬಾರ್, ದೈಹಿಕ ನಿರ್ದೇಶಕಿ ಕಲಾವತಿ ಅಪರಾಜ, ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ|| ಪ್ರಕಾಶ್ ರಾಥೋಡ್, ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ರಾಹುಲ್ ಡೋಂಗ್ರೆ, ದರ್ಬಾರ್ ಪದವಿ ಮಹಾವಿದ್ಯಾಲಯ ಪ್ರಾಚಾರ್ಯ ಗಿರಿಶ್. ಎಚ್. ಮಣ್ಣುರ, ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮ ಅಧಿಕಾರಿ ರಾಜು ಕಪಾಳಿ, ದರ್ಬಾರ್ ಪದವಿ ಮಹಾವಿದ್ಯಾಲಯದ ಉಪನ್ಯಾಸಕಿ ಸೀಮಾ ಪಾಟೀಲ್, ಉಪನ್ಯಾಸಕ ಜಗದೀಶ್ , ಸುನಿತಾ, ಕಾಶೀನಾಥ್, ಪ್ರಾಥಮಿಕ ಶಾಲೆಯ ಮುಖ್ಯಸ್ಥರು ರಮೇಶ್ ಕೋಟ್ಯಾಳ ಮತ್ತಿತರು ಉಪಸ್ಥಿತಿದ್ದರು. ಕಾರ್ಯಕ್ರಮವನ್ನು ರಾಜು ಕಪಾಳಿ, ಸ್ವಾಗತಿಸಿದರು, ಜಗದೀಶ್ ಸಾತ್ಯಾಳ ನಿರೂಪಿಸಿ, ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

"ಯೋಗ ಬಲ್ಲವನಿಗೆ ರೋಗವಿಲ್ಲ"



ಅಂತರಾಷ್ಟ್ರೀಯ ಯೋಗ ದಿನಚಾರಣೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ವಿಜಯಪುರದ ಗೋಲ್ ಗುಂಬಜ್ ಆವರಣದಲ್ಲಿ ದಿನಾಂಕ 21 ಜೂನ್ 2024 ರಂದು 10ನೇ ಅಂತಾರಾಷ್ಟ್ರೀಯ ಯೋಗವನ್ನು ಆಚಾರಿಸಲಾಯಿತು.

ಈ ವಿಶೇಷ ಯೋಗ ದಿನದ ನಿಮಿತ್ತ ವೃತ್ತಿಪರ ಯೋಗ ತರಬೇತುದಾರರಾದ ಶ್ರೀ. ಸುರೇಶ್ ಆನಂದಿ, ಅಂತರಾಷ್ಟ್ರೀಯ ಯೋಗದ ತೀರ್ಪುಗಾರರು, ಎವರಿಡೇ ಯೋಗ ಗುರುಗಳನ್ನು ಆವ್ಹಾನಿಸಲಾಗಿತ್ತು. ಇವರು ವಿವಿಧ ಯೋಗದ ವ್ಯಾಯಾಮಗಳನ್ನು ಶ್ಲೋಕದೊಂದಿಗೆ ಆರಂಭಿಸಿದ ಈ ಹಿಂದೆ ಖುಷಿ-ಮುನಿಗಳು ಮಾತ್ರ ಅಭ್ಯಾಸ ಮಾಡುತ್ತಿದ್ದ ಯೋಗವನ್ನು ಈಗ ಪ್ರತಿಯೊಬ್ಬರಲ್ಲೂ ಕಲಿಯುತ್ತಿದ್ದು, ವೈಜ್ಞಾನಿಕವಾಗಿ ಯೋಗದ ಮಹತ್ವ ಸಾಬೀತಾಗಿದೆ, ಯೋಗವು  ಒತ್ತಡವನ್ನು ನಿವಾರಿಸಲು ಮತ್ತು ಮಾನಸಿಕ ಶಾಂತಿಯನ್ನು ನೀಡಲು ಅತ್ಯುತ್ತಮ ಔಷಧವಾಗಿದೆ. ದಿನನಿತ್ಯದ ಯೋಗ ಪ್ರದರ್ಶನವು ಹಲವು ಪ್ರಯೋಜನಗಳಿಗೆ ಸಾಕ್ಷಿಯಾಗುತ್ತದೆ. ನಮ್ಮ ಜ್ಞಾನವೃಧ್ದಿ, ಮತ್ತು ಕೆಲಸದ ಕಾರ್ಯಕ್ಕೆ ಉತ್ತಮ ಸಾಧನೆವಾಗುತ್ತದೆ ಎಂದು ತಿಳಿಸುತ್ತಾ ವಿವಿಧ ಯೋಗಭ್ಯಾಸ ಜೊತೆಗೆ ಅದರ ಪ್ರಯೋಜನಗಳನ್ನು ತಿಳಿಸಿದರು.

ಈ ಕಾರ್ಯಕ್ರಮಕ್ಕೆ ವಿಕಾಸ ಪ್ರಾಢಶಾಲೆ, ವಿಜಯಪುರ, ಎ.ಎಸ್.ಪಾಟೀಲ್ ವಾಣಿಜ್ಯ, ಕಾಲೇಜು, ವಿಜಯಪುರ ಹಾಗೂ ಸರ್ಕಾರಿ ಶಾಲೆ ನಂ. 03, ವಿಜಯಪುರದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರಾದ ಎಸ್.ಎಂ. ಬಿರಾದರ್,, ಸಹ ಶಿಕ್ಷಕರರಾದ ಸಂಜೀವ್‍ಕುಮಾರ್, ವಿಜಯಕುಮಾರ್ ತಳವಾರ, ಮುಖ್ಯೋಪಾಧ್ಯಯರಾದ ಬಿ.ಡಿ. ಬೆಳೆಣೆನವರು, ಭಾಗವಹಿಸಿದರು. 

ವಿಶೇಷ ನೊಡಲ್ ಅಧಿಕಾರಿಯಾಗಿ ಶ್ರೀ. ರಾಕೇಶ್ ಸಿಂಧೆ, ಎ.ಎಸ್.ಎ.ಇ. ಧಾರವಾಡ ವಲಯ ಇವರು ಉಪಸ್ಥಿತರಿದ್ದರು, ಅಂತರರಾಷ್ಟ್ರೀಯ ಯೋಗದ ಪ್ರಾಮುಖ್ಯತೆ ಹಾಗೂ ಈ ವರ್ಷದ ಧ್ಯೇಯವಾಕ್ಯವಾದ "ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ" ಎಂಬುದರ ಬಗ್ಗೆ ತಿಳಿಸಿದರು.  ಜೊತೆಗೆ ಇಲಾಖೆಯ ಶ್ರೀ. ಎನ್. ಪ್ರಸನ್ನಕುಮಾರ್, ಶ್ರೀ. ವಿಜಯಕುಮಾರ್, ಶ್ರೀ. ಆರ್.ಎಂ.ಕರ್ಜಗಿ, ಶ್ರೀ ಮನೀಶ್‍ಕುಮಾರ್, ಶ್ರೀ ವಿಶ್ರøತ್‍ಗೌಡ,  ಹಾಗೂ ಇಲಾಖೆಯ ವಸ್ತುಸಂಗ್ರಹಾಲಯ, ಉಪವಲಯ, ಗಾರ್ಡನ್‍ನ ಎಲ್ಲಾ ಸಿಬ್ಬಂಧಿವರ್ಗ ಭಾಗವಹಿಸಿದರು. ನಿರೂಪಣೆಯನ್ನು ಶ್ರೀ ಬಿರಾದರುರವರು ಮಾಡಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, June 20, 2024

21-06-2024 EE DIVASA KANNADA DAILY NEWS PAPER

ಲಕ್ಷ್ಮೀ ಅಂಗಡಿಗೆ ಪಿಎಚ್‌ಡಿ ಪದವಿ


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ ವಿಜಯಪುರ: 

 ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಲಕ್ಷ್ಮೀ ಅಂಗಡಿ  ಅವರು ಸಲ್ಲಿಸಿದ್ದ “ಕನ್ನಡ ಕಾವ್ಯದಲ್ಲಿ ಬಸವಣ್ಣ: ಒಂದು ಅಧ್ಯಯನ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ. 

 ಲಕ್ಷ್ಮೀ ಅಂಗಡಿ ಅವರು ಕನ್ನಡ ಅಧ್ಯಯನ ವಿಭಾಗದ ಪ್ರೊ.ವಿಜಯಶ್ರೀ ಸಬರದ(ನಿವೃತ್ತ) ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಲಕ್ಷ್ಮೀ ಅಂಗಡಿ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Thursday, June 13, 2024

14-06-2024 EE DIVASA KANNADA DAILY NEWS PAPER

ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಮಾರ್ಗ : ಮಹಿಳಾ ವಿವಿಯ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ


 ವಿಜಯಪುರ: ಸಮುದಾಯದ ಅಭಿವೃದ್ಧಿಗೆ ಶಿಕ್ಷಣವೇ ಮಾರ್ಗ ಅದರ ಮೂಲಕ ಸಮಾಜ ನಿರ್ಮಾಣದ ಕಾರ್ಯ ನಡೆಯಬೇಕಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ ಹೇಳಿದರು.

ವಿಜಯಪುರ ಜಿಲ್ಲೆಯ ಯಲಗೂರು ಗ್ರಾಮದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ಅಧ್ಯಯನ ವಿಭಾಗದ ಪ್ರಶಿಕ್ಷಣಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ನಾಗರಿಕ ಪೌರತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸಮುದಾಯವು ಪ್ರತಿನಿತ್ಯ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಅಂತಹ ಸಮಸ್ಯೆಗಳನ್ನು ಬಗೆಹರಿಸಬೇಕಾದರೆ ಶಿಕ್ಷಣದ ಅಗತ್ಯ ಅತೀ ಮುಖ್ಯ. ಶಿಕ್ಷಣದ ಮೂಲಕ ಮಾತ್ರ ಉತ್ತಮ ಪರಿಹಾರಗಳನ್ನು ಕಂಡುಕೊಳ್ಳಲು ಸಾಧ್ಯ. ಹೀಗಾಗಿ ತಾವು ಕಲಿತ ವಿದ್ಯೆಯನ್ನು ಸಮುದಾಯಕ್ಕೆ ಧಾರೆ ಏರೆಯಬೇಕು. ಗ್ರಾಮೀಣ ಭಾಗದ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಉತ್ಕçಷ್ಟವಾದರೆ, ಗುಣಮಟ್ಟದ ಶಿಕ್ಷಣ ನೀಡಿದರೆ, ನಮ್ಮ ಗ್ರಾಮಗಳು ಸುಧಾರಣೆಯಾಗಲು ಸಾಧ್ಯ ಎಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಎಸ್. ಸೋಮನಾಳ ಮಾತನಾಡಿ, ನಾಗರಿಕತ್ವವು ಪ್ರಜ್ಞಾಪೂರ್ವಕವಾಗಿ ನಡೆಯುವ ಪ್ರಕ್ರಿಯೆಯಾಗಿದೆ. ನಮ್ಮ ಸಮುದಾಯದಲ್ಲಿ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸುವ ಮೂಲಕ ಶಿಕ್ಷಕರು ವೈಜ್ಞಾನಿಕ ಮನೋಬಾವ ಬೆಳೆಸಬೇಕು ಎಂದರು. 

ಕಾರ್ಯಕ್ರಮದಲ್ಲಿ ಪ್ರೊ. ಅಶೋಕಕುಮಾರ ಸುರಾಪುರ, ಡಾ.ಪ್ರಕಾಶ.ಸಣ್ಣಕ್ಕನವರ, ವಿಭಾಗದ ಅತಿಥಿ ಉಪನ್ಯಾಸಕರು ಹಾಗೂ ಯಲಗೂರ ಗ್ರಾಮದ ಗಣ್ಯರಾದ ಶಾಮ್ ಪಾತ್ರದ, ಗೋವಿಂದಪ್ಪಾ ಪೂಜಾರ, ಭೀಮಣ್ಣ ಅವಟಗೇರ, ಶ್ರೀಶೈಲ ಹೂಗಾರ, ಗುಂಡಪ್ಪ ತಳವಾರ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು. 

ಈ ಸಂದರ್ಭದಲ್ಲಿ ಶಿಕ್ಷಣ ವಿಭಾಗದ ಮುಖ್ಯಸ್ಥ ಪ್ರೊ. ವಿಷ್ಣು. ಶಿಂದೆ ಶಿಬಿರದ ಗುರಿ-ಉದ್ಧೇಶಗಳನ್ನು ತಿಳಿಸಿಕೊಟ್ಟರು. ಶಿಬಿರದ ಸಂಯೋಜಕ ಪ್ರೊ. ಯು. ಕೆ ಕುಲಕರ್ಣಿ ಸ್ವಾಗತಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Wednesday, June 12, 2024

13-06-2024 EE DIVASA KANNADA DAILY NEWS PAPER

ಡೋಣಿ ಪ್ರವಾಹ ನಿರ್ವಹಣೆಗೆ ಮುಂಜಾಗೃತ ಕ್ರಮ ಕೈಗೊಳ್ಳಿ : ಜಿಪಂ ಸಿಇಒ ರಿಷಿ ಆನಂದ


ವಿಜಯಪುರ : ಹೆಗಡಿಹಾಳ, ಸಾತಿಹಾಳ ಹಾಗೂ ಯಾಳವಾರ ಗ್ರಾಮಗಳಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳುವಂತೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚಿಸಿದರು.

 ಬುಧವಾರ ಜಿಲ್ಲೆಯ ಹೆಗಡಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಕುಮನಾಳ ಗ್ರಾಮದಲ್ಲಿ ಈ ಹಿಂದೆ ಪ್ರವಾಹ ಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಪ್ರವಾಹವು ಸರಾಗವಾಗಿ ಸಾಗುವಂತೆ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಬಾರೀ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತೀವೃಷ್ಟಿಯಿಂದ ಪ್ರವಾಹ ಬರುವ ಸಂಭವವಿದ್ದು, ಪ್ರವಾಹ ನಿಯಂತ್ರಣದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವುದು, ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕಾರ್ಯಾತ್ಮಕ ಸ್ಥಿತಿಯಲ್ಲಿಡಬೇಕು ಹಾಗೂ ಗ್ರಾಮದಲ್ಲಿನ ಚರಂಡಿಗಳನ್ನು ಸ್ವಚ್ಚಗೊಳಿಸಬೇಕು. ಸಾರ್ವಜನಿಕರಿಗೆ ಕುಡಿಯಲು ಯೋಗ್ಯವಾದ ನೀರನ್ನು ಕ್ಲೋರೀಕರಣಗೊಳಿಸಿ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ಬಳಿಕ ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಡೋಣಿ ನದಿಯ ಸೇತುವೆ, ಗ್ರಾಮದಲ್ಲಿನ ಚರಂಡಿಗಳು, ನೀರಿನ ಟ್ಯಾಂಕ್, ಗ್ರಾಮದ ರಸ್ತೆಗಳು ಮತ್ತು ಯಾಳವಾರ ಗ್ರಾಮದ ಡೋಣಿ ನದಿ ಸೇತುವೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಯಿಂದಾಗಿ ಡೋಣಿ ನದಿ ತುಂಬಿ ಹರಿಯುತ್ತಿದ್ದು, ನೀರು ಸರಾಗವಾಗಿ ಸಾಗಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ಡೋಣಿ ನದಿ ನದಿ ದಂಡೆಯಲ್ಲಿರುವ ಎಲ್ಲ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಗ್ರಾಮ ಪಂಚಾಯತಿ ವತಿಯಿಂದ ಡಂಗೂರ ಸಾರಿ ಪ್ರವಾಹ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. ಗ್ರಾಮ ಪಂಚಾಯತಿ ಮಟ್ಟದ ವಿಪತ್ತು ನಿರ್ವಹಣಾ ಸಭೆಯನ್ನು ಆಧ್ಯತೆ ಮೇರೆಗೆ ಏರ್ಪಡಿಸಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ನಂತರ ದೇವರ ಹಿಪ್ಪರಗಿ ತಾಲೂಕ ಪಂಚಾಯಿತಿಗೆ ಭೇಟಿ ನೀಡಿ, ಹಳೆಯ ಪ್ರವಾಸಿ ಮಂದಿರದಲ್ಲಿ ತಾಲೂಕ ಪಂಚಾಯತ ಕಚೇರಿ ಕಾರ್ಯ ನಿರ್ವಹಿಸುತಿದ್ದು, ಹೊಸ ತಾಲೂಕು ಪಂಚಾಯಿತಿ ಕಚೇರಿ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಿ ಜಿಲ್ಲಾ ಪಂಚಾಯಿತಿಗೆ ವರದಿ ನೀಡುವಂತೆ ತಾಲುಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮು ಅಗ್ನಿ ಅವರಿಗೆ ಸೂಚಿಸಿದರು.

ಪ್ರತಿ ತಿಂಗಳ ಮೊದಲನೇ ಶನಿವಾರವನ್ನು “ಸ್ವಚ್ಛ ಶನಿವಾರ” ಎಂಬ ಪರಿಕಲ್ಪನೆ ಇಟ್ಟುಕೊಂಡು ತಾಲೂಕ ಪಂಚಾಯಿತಿ ಒಳಾಂಗಣ ಹಾಗೂ ಹೊರಾಂಗಣ ಆವರಣಗಳನ್ನು ಸ್ವಚ್ಚಗೊಳಿಸಬೇಕು, ೆÃಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ವಿಜಯಪುರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ಹೊಂಗಯ್ಯ, ದೇವರ ಹಿಪ್ಪರಗಿ ತಾಲೂಕಿನ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮು ಜಿ ಅಗ್ನಿ, ಸಹಾಯಕ ನಿರ್ದೇಶಕರು (ಪಂಚಾಯತ್ ರಾಜ್) ಶಿವಾನಂದ ಮೂಲಿಮನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಸತೀಶ ಪಾಟೀಲ ಮತ್ತು ಸೆಕ್ಷನ್ ಅಧಿಕಾರಿ ಎಚ್. ಎಮ್. ಸಾರವಾಡ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಜಿ. ವಾಯ್. ಮುರಾಳ, ಬಸವನ ಬಾಗೇವಾಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಾಠೋಡ, ಹೆಗಡಿಹಾಳ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ಸರಿತಾ ಟಿ. ನಾಯಕ, ಸಾತಿಹಾಳ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ಎಂ. ಎನ್. ಕತ್ತಿ, ಯಾಳವಾರ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿ ಮಲ್ಲು ಮಸಳಿ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ತಾಲೂಕ ಪಂಚಾಯತ Iಇಅ ಸಂಯೋಜಕರಾದ ರಾಘವೇಂದ್ರ ಭಜಂತ್ರಿ, ಸಿದ್ದಪ್ಪ ಕಾಂಬಳೆ ಮತ್ತು ಗ್ರಾಮ ಪಂಚಾಯತ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಬಾಲಕಾರ್ಮಿಕ ನಿರ್ಮೂಲನೆಗೆ ಜಾಗೃತಿ ಅಗತ್ಯ: ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ : ಬಾಲಕಾರ್ಮಿಕತೆ ಅನಿಷ್ಠ ಪದ್ದತಿಯಾಗಿದ್ದು, ಇದರ ನಿರ್ಮೂಲನೆಗೆ ಪರಿಣಾಮಕಾರಿ ಜಾಗೃತಿ ಅಗತ್ಯವಾಗಿದ್ದು, ಎಲ್ಲಾ ಅಧಿಕಾರಿಗಳು, ಸಂಘ- ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಕರೆ ನೀಡಿದರು.

ಬುಧವಾರ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೆÇಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಇವರ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲಕಾರ್ಮಿಕ ಪದ್ಧತಿ ನಿμÉೀಧಿಸಲಾಗಿದೆ. ಇದೊಂದು ಅಪರಾಧವಾಗಿದೆ ಎಂಬುದರ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಿ, ಸಂಪೂರ್ಣ ನಿರ್ಮೂಲನೆಗೆ ಕೈಜೋಡಿಸಬೇಕು. ಬಾಲಕಾರ್ಮಿಕ ಪ್ರಕರಣಗಳು ಕಂಡುಬಂದ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ – 1098ಕ್ಕೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ಕಾರ್ಮಿಕ ಇಲಾಖೆಯು ಸೇರಿದಂತೆ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ರಕ್ಷಿಸಿದ ಮಕ್ಕಳನ್ನು ಬಾಲಮಂದಿರಕ್ಕೆ ದಾಖಲಿಸಿ ಅವರ ಪುನರ್ವಸತಿ ಕಲ್ಪಿಸಿ ಅವರಿಗೆ ಪೂರಕವಾದ ಶಿಕ್ಷಣ, ಕೌಶಲಗಳ ತರಬೇತಿ ಒದಗಿಸಲಾಗುತ್ತಿದೆ ಎಂದು ಹೇಳಿದರು.

ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಕ್ರೋಢೀಕರಿಸಿಕೊಂಡು ಆ ಬಗ್ಗೆ   ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು. ಬಾಲಕಾರ್ಮಿಕ ಕಾರ್ಮಿಕ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಶಾಲಾ ಮುಖ್ಯಸ್ಥರೊಂದಿಗೆ ಸಮನ್ವಯ ಸಾಧಿಸಬೇಕು. ವಲಸೆ ಕಾರ್ಮಿಕ ಕುಟುಂಬಗಳ ಬಗ್ಗೆ ಮಾಹಿತಿ ಪಡೆÉದುಕೊಂಡು ಅವರ ಮಕ್ಕಳ ಶಿಕ್ಷಣ, ಮೂಲಭೂತ ಹಕ್ಕುಗಳ ಸಂರಕ್ಷಣೆ ಮಾಡಬೇಕು. ಮಕ್ಕಳ ಭವಿಷ್ಯ ಸುಂದರವಾಗಿಸಲು ಬಾಲಕಾರ್ಮಿಕತೆ ಪಿಡುಗನ್ನು ತೊಲಗಿಸಬೇಕು.  

 ಕಾರ್ಮಿಕ ನಿರೀಕ್ಷಕರಾದ ಜಗದೇವಿ ಸಜ್ಜನ ಬಾಲಕಾರ್ಮಿಕ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ ಹೆಚ್ಚುವರಿ  ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಯಾದ ರಾಮನಗೌಡ ಹಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕರಾದ ನೀಲಮ್ಮಾ ಖೇಡಗಿ, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಎಸ್.ಜಿ. ಕೈನೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಚಾದೋ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಜಿ. ಕುಲಕರ್ಣಿ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Tuesday, June 11, 2024

12-06-2024 EE DIVASA KANNADA DAILY NEWS PAPER

ಅಕ್ರಮ ಜಾನುವಾರು ಸಾಗಾಟ , ವಧೆ ತಡೆಗಟ್ಟಿ : ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ : ಜಿಲ್ಲೆಯಲ್ಲಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಜಾನುವಾರು ಸಾಗಾಟ ಹಾಗೂ ವಧೆಯನ್ನು ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರಗಳ ಸಾಗಾಟ ಹಾಗೂ ವಧೆ ತಡೆಗಟ್ಟುವ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2020-21 ನೇ ಕರ್ನಾಟಕ ಅಧ್ಯಾದೇಶ ಸಂಖ್ಯೆ ಕರ್ನಾಟಕ ಜಾನುವಾರು ಹತ್ಯೆ ಪ್ರಭಂದಕ ಮತ್ತು ಸಂರಕ್ಷಣಾ ಅಧ್ಯಾದೇಶ ರನ್ವಯ ಎಲ್ಲಾ ವಯಸ್ಸಿನ ಆಕಳು, ಆಕಳು ಕರ, ಹೋರಿ, 13 ವರ್ಷದೊಳಗಿನ ಎಮ್ಮೆ ಕೋಣಗಳ ವಧೆ ಮಾಡುವಂತಿಲ್ಲ. ಈ ಕಾಯ್ದೆ ಉಲ್ಲಘನೆಯಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಅನಧಿಕೃತ ಜಾನುವಾರುಗಳ ಅಕ್ರಮ ಸಾಗಟು ತಡೆಗೆ ಜಿಲ್ಲೆಯ ಕನಮಡಿ, ಅರಕೇರಿ ಸಿದ್ಧಾಪುರ, ಯತ್ನಾಳ, ಧೂಲಕೇಡ - ಶಿರದೋಣ, ಅಗರಖೇಡ ನಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಹಬ್ಬದ ಹಿಂದಿನ ಮೂರು ದಿನಗಳು ಅಧಿಕಾರಿಗಳು ಕಟ್ಟುನಿಟ್ಟಾಗಿ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಬೇಕು ಎಂದರು. ಹಬ್ಬದ ಮುಂಚಿನ ಮೂರು ದಿನಗಳಲ್ಲಿ ನಗರಪಾಲಿಕೆ, ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ತಾಲೂಕು ವ್ಯಾಪ್ತಿಯಲ್ಲಿ ತಹಶೀಲ್ದಾರ್ ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಅಕ್ರಮ ಸಾಗಣೆ ಹಾಗೂ ವಧೆಯನ್ನು ತಡೆಗಟ್ಟಲು ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು 13 ವರ್ಷ ದಾಟಿದ ಎಮ್ಮೆ ಹಾಗೂ ಕೊಣಗಳುನ್ನು ವಧೆ ಮಾಡಬಹುದು. ಇದಕ್ಕೆ ಸಂಬಂಧಿಸಿದ ಪಶು ಇಲಾಖೆಯಿಂದ ನಿರಾಪೇಕ್ಷಣೆ ಪತ್ರ ಹಾಗೂ ವೈದ್ಯಕೀಯ ತಪಾಸಣೆ ಪತ್ರ ಹೊಂದಿರಬೇಕು ಎಂದು ತಿಳಿಸಿದರು. ಜಾನುವಾರುಗಳ ಸಾಗಾಟ ಮಾಡುವಾಗ , ಖರೀದಿಸುವಾಗ, ಮಾರಾಟ ಮಾಡುವ ಸಂದರ್ಭದಲ್ಲಿ ಜಾನುವಾರುಗಳಿಗೆ ಕಿವಿಯೋಲೆ ಇರುವುದು ಕಡ್ಡಾಯವಾಗಿರುತ್ತದೆ. ಹಾಗೂ ಸಾಗಾಣಿಕೆ ಸಂಬಂಧಪಟ್ಟಂತೆ ಸಂಭಂದಪಟ್ಟ ಅಧಿಕಾರಿ ಗಳಿಂದ ದೃಢೀಕರಣ ಪತ್ರ ತೆಗೆದುಕೊಂಡು ಸಾಗಾಣಿಕೆ ಮಾಡುವುದು ಕಡ್ಡಾಯವಾಗಿರುತ್ತದೆ ಎಂದರು. ಜಿಲ್ಲೆಯ ಎಲ್ಲಾ ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳಿಗೆ ಗುರುತಿನ ಸಂಖ್ಯೆ ಹೊಂದಿರುವ ಕಿವಿಯೋಲೆ ಹಾಕುವಂತೆ ನಿರ್ದೇಶನ ನೀಡಬೇಕು. ಹಬ್ಬದ ಸಂದರ್ಭದಲ್ಲಿ ಮಾಂಸದ ತಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡುವಂತಿಲ್ಲ. ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಮಹಾನಗರಪಾಲಿಕೆ, ನಗರಪಾಲಿಕೆ, ಗ್ರಾಮ್ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ಮಾಂಸ ಮಾರಾಟಗಾರರಿಗೆ ತಿಳಿವಳಿಕೆ ಮೂಡಿಸಬೇಕು, ಅನಧಿಕೃತವಾಗಿ ಜಾನುವಾರಗಳ ಸಾಗಾಟ ಮಾಡುವ ವಾಹನಗಳ ನೋಂದಣಿ ರದ್ದುಪಡಿಸುವ ಕುರಿತು ಕ್ರಮಕೈಗೊಳ್ಳಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಸೋನಾವಣೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪಶುಪಾಲನಾ ಮತ್ತು ಪಶವೈದ್ಯ ಸೇವಾ ಇಲಾಖೆಯ ಅಶೋಕ್ ಗುಣಸಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Saturday, June 8, 2024

09-06-2024 EE DIVASA KANNADA DAILY NEWS PAPER

ದಿ.15 ರಂದು ಶರಣ ಸಂಕುಲ ನೃತ್ಯ ರೂಪಕ ಕಾರ್ಯಕ್ರಮ

ಈ‌ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಸಿರಿಗೆರೆ ತರಳಬಾಳು ಕಲಾ ಸಂಘದ ವತಿಯಿಂದ ತರಳುಬಾಳು ಜಗದ್ಗುರು 1108 ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ “ಶರಣ ಸಂಕುಲ” ನೃತ್ಯರೂಪಕ ಕಾರ್ಯಕ್ರಮ ದಿ.15 ಶನಿವಾರ ಸಂ.6.30ಗಂಟೆಗೆ ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಜರುಗಲಿದೆ.

ಕಳೆದ 25 ವರ್ಷಗಳಿಂದ ದೇಶದೆಲ್ಲೆಡೆ 12 ನೇ ಶತಮಾನದ ಶಿವಶರಣರ ತತ್ವಗಳನ್ನು ಜನಸಾಮಾನ್ಯರಿಗೂ ಅರ್ಥವಾಗುವಂತೆ ನೃತ್ಯ, ಸಂಗೀತ ಮತ್ತು ಅಭಿನಯಗಳ ಮೂಲಕ ಪ್ರದರ್ಶಿಸುವ ‘ಶರಣಸಂಕುಲ’ ಕಾರ್ಯಕ್ರಮ ಇದೀಗ ರಜತ ಮಹೋತ್ಸವ ಆಚರಿಸುತ್ತಿದೆ. 

ವಿಜಯಪುರದಲ್ಲಿ ಅನುಭವ ಮಂಟಪದ ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ವಿಶ್ವಬಂಧು ಮರುಳಸಿದ್ಧರು, ಅಕ್ಕಮಹಾದೇವಿಗೆ ದೀಕ್ಷೆ ಕೊಡುವ ಹರಳಯ್ಯ, ನುಲಿಯ ಚಂದಯ್ಯ, ಮೋಳಿಗೆ ಮಾರಯ್ಯ ಅವರ ಬದುಕಿನ ಸಾಧನೆಯನ್ನು ‘ಶರಣ ಸಂಕುಲ’ ಕಾರ್ಯಕ್ರಮದ ಮೂಲಕ ಸಾದರಪಡಿಸುತ್ತಿದ್ದಾರೆ. ಅಲ್ಲದೇ, ಸಿರಿಗೆರೆ ತರಳಬಾಳು ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಂದ "ಮಲ್ಲ ಕಂಬ" ಹಾಗೂ "ಮಲ್ಲಿ ಹಗ್ಗ" ಸಾಹಸ ಕ್ರೀಡೆಗಳ ಪ್ರದರ್ಶನ ಏರ್ಪಾಡಾಗಿದೆ. 

ಅತ್ಯಂತ ವಿಶೇಷವಾಗಿರುವ ಈ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪಾಲಕರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಸಿರಿಗೆರೆ ತರಳಬಾಳು ಆಶ್ರಮದ ಭಕ್ತರಾಗಿರುವ ಹಣಮಂತ ಚಿಂಚಲಿ ಕೋರಿದ್ದಾರೆ. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಅಗಷ್ಟ್ 16 ಹಾಗೂ 18 ರಂದು ಮೈಸೂರಿನಲ್ಲಿ 2024-25ನೇ ರಾಜ್ಯ ಮಟ್ಟದ ವೇಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್

ವಿಜಯಪುರ : 5ನೇ ಯುವ ಜೂನಿಯರ್ ಬಾಲಕ ಬಾಲಕಿಯರ ಹಾಗೂ 51 ನೇ ಪುರುಷ ಮತ್ತು 35 ನೇ ಮಹಿಳೆಯರ ಜ್ಯೂನಿಯರ್ ಮತ್ತು ಸೀನಿಯರ್ ರಾಜ್ಯ ವೇಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ 2024-25 @ ಡಾ. ಎಪಿಜೆ ಅಬ್ದುಲ್ ಕಲಾಮ ಇಂಡೋರ ಸ್ಟೇಡಿಯಮ್ ಮಹಾಜನ ಕಾಲೇಜ ಜಯ ಲಕ್ಷಿö್ಮÃಪುರಂ ಮೈಸೂರಿನಲ್ಲಿ ಅಗಷ್ಟ್ 16 ಹಾಗೂ 18 2024 ರಂದು ಜರುಗಲಿದೆ ಎಂದು ಜಿಲ್ಲಾ ವೇಟ್ ಲಿಪ್ಟಿಂಗ್ ಅಧ್ಯಕ್ಷ ದಾದಾಸಾಹೇಬ ಬಾಗಾಯತ ಹಾಗೂ ಕಾರ್ಯದರ್ಶಿ ಚಂದ್ರಕಾAತ ತಾರನಾಳ ತಿಳಿಸಿದ್ದಾರೆ. 

ವೇಟ್ ಲಿಪ್ಟಿಂಗ್‌ನಲ್ಲಿ ಭಾಗವಹಿಸುವ ಆಸಕ್ತ ಬಾಲಕ- ಬಾಲಕಿಯರು ಹಾಗೂ ಪುರುಷ ಮತ್ತು ಮಹಿಳೆಯರು ಆಗಷ್ಟ್ 1 ರೊಳಗಾಗಿ ಸಂಬAಧಪಟ್ಟ ದಾಖಲಾತಿಗಳನ್ನು ಜನನ ಪ್ರಮಾಣ ಪತ್ರ, ಆಧಾರ ಕಾರ್ಡ್, ಮಾಕ್ಸ್ ಕಾರ್ಡ್ಗಳನ್ನು ತೆಗೆದುಕೊಂಡು ಕಚೇರಿಗೆ ಭೇಟಿ ಕೊಡಬಹುದಾಗಿದೆ. ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನಮಾಹಿತಿಗಾಗಿ ಮೊ: 9108073850 / 9739755435 ಕಾರ್ಯದರ್ಶಿ ಚಂದ್ರಕಾAತ ತಾರನಾಳ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, June 7, 2024

08-06-2024 EE DIVASA KANNADA DAILY NEWS PAPER

ಜೂ.9ಕ್ಕೆ ಪ್ರೊ. ಬಿ.ಕೆ. ಸಂಘರ್ಷ ದಿನಾಚರಣೆ


ವಿಜಯಪುರ : ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪರ 88ನೇ ಜನ್ಮ ದಿನಾಚರಣೆಯ ಅಂಗವಾಗಿ ಪ್ರೊ. ಬಿ.ಕೆ. ಸಂಘರ್ಷ ದಿನ ಎಂಬ ಘೋಷವಾಕ್ಯದೊಂದಿಗೆ ಜೂ. 9 ರಂದು ಬೆಳಗ್ಗೆ 11:30 ಕ್ಕೆ ಪುರಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾ ಪ್ರಧಾನ ಸಂಚಾಲಕರಾದ ಸಂಜು ವೈ. ಕಂಬಾಗಿ ತಿಳಿಸಿದ್ದಾರೆ.

ಅವರು ಪತ್ರಿಕಾ ಪ್ರಕಟಣೆ ನೀಡಿದ ಅವರು, ಶೋಷಿತ ಸಮುದಾಐಗಳ ಹೋರಾಟಗಾರ, ದಲಿತ ಚೇತನ ಬಿ. ಕೃಷ್ಣಪ್ಪ ಭದ್ರಾವತಿಯಲ್ಲಿ ಆರಂಭಮಾಡಿದ ಚಳವಳಿ, ಕರ್ನಾಟಕದ ಉದ್ದಗಲಕ್ಕೂ ವ್ಯಾಪಿಸಿ ಲಕ್ಷಾಂತರ ತಳ ಸಮುದಾಯ ಬಡವರ ವಿಮೋಚನೆಗಾಗಿ ದಸಂಸ ಹೋರಾಟ ಮಾಡುತ್ತಾ ಬಂದಿದೆ ಎಂದರು.

ಕೃಷ್ಣಪ್ಪ ತಮ್ಮ ಬದುಕಿನುದ್ದಕ್ಕೂ ಸರಳ ಜೀವನ ನಡೆಸಿದ್ದಾರೆ. ರಾಜಕೀಯವಾಗಿ ಶೋಷಿತರು ಸಬಲಾಗಬೇಕೆನ್ನುವ ಕನಸು ಹೊಂದಿದ್ದರು. ಜಾತೀಯತೆ, ಅಸ್ಪೃಶ್ಯತೆ, ವರ್ಗ ಅಸಮಾನತೆಗಳ ವಿರುದ್ಧ ಹೋರಾಟ ರೂಪಿಸಿದವರು. ಇಂದು ದಲಿತ ಶೋಷಿತ ಸಮುದಾಯದವರಿಗೆ ಅಲ್ಪ-ಸ್ವಲ್ಪ ಭೂಮಿ ಸಿಕ್ಕಿದೆ ಎಂದರೆ ಅದು ಬಿ. ಕೃಷ್ಣಪ್ಪರ ಹೋರಾಟದಿಂದಲೇ ಎಂದರು.

ವಿಜಯಪುರ ಜಿಲ್ಲೆಯಿಂದ 100 ಕ್ಕೂ ಹೆಚ್ಚು ಜನ ಕಾರ್ಯಕರ್ತರು ರೇಲ್ವೆ ಮುಖಾಂತರ ಬೆಂಗಳೂರಿನ ಕಾರ್ಯಕ್ರಮಕ್ಕೆ ತೆರಳಿಲಿದ್ದಾರೆ. ಅತಿ ಹೆಚ್ಚು ಕಾರ್ಯಕರ್ತರು ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ ಜಾರಕಿಹೋಳಿ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ನ ಅಧ್ಯಕ್ಷ ಇಂದಿರಾ ಕೃಷ್ಣಪ್ಪ, ಉಪನ್ಯಾಸಕ ಡಾ. ಸಿ.ಜಿ. ಲಕ್ಷಿö್ಮÃಪತಿ, ದಸಂಸ ರಾಜ್ಯ ಪ್ರಧಾನ ಸಂಚಾಲಕರಾದ ಮಾವಳ್ಳಿ ಶಂಕರ, ದಸಂಸ ಪದಾಧಿಕಾರಿಗಳಾದ ರಮೇಶ ಡಾಕುಳುಕಿ, ಎನ್. ನಾಗರಾಜ್ ಹಾಗೂ ಉಪ ಪ್ರಧಾನ ಸಂಚಾಲಕರಾದ ನಾಗಣ್ಣ ಬಡಿಗೇರ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಸಂಜು ಕಂಬಾಗಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಪರಿಸರ ನಾಶ ಜೀವ ಸಂಕುಲ ವಿನಾಶ: ಡಿ.ವೈ.ಎಸ್ಪಿ ಬಸವರಾಜ್ ಯಲಿಗಾರ

ವಿಜಯಪುರ : ಜನಸಂಖ್ಯೆ ಹೆಚ್ಚಳ, ನಗರೀಕರಣ, ಕಾರ್ಖಾನೆಗಳ ಬೆಳವಣಿಗೆ ವಾಹನಗಳ ಭರಾಟೆ, ಮಾನವನ ದುರಾಸೆಯಿಂದ ಕಾಡು-ಮೇಡು ನಾಶವಾಗಿ ಬಿಸಿಲಿನ ತಾಪ ಹೆಚ್ಚಿ, ಹಿಮಕರಗಿ, ಋತುಮಾನಗಳು ಬದಲಾವಣೆ ಆಗುತ್ತಿರುವದು ದುರದೃಷ್ಟಕರ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು. ಪರಿಸರ ನಾಶವಾದರೆ ಇಡೀ ಜೀವಸಂಕುಲವೇ ವಿನಾಶವಾದಂತೆ ಎಂದು ನಗರ ಪೊಲೀಸ್ ಉಪ ಅಧೀಕ್ಷಕರಾದ ಬಸವರಾಜ್ ಯಲಿಗಾರ ಎಚ್ಚರಿಸಿದರು.



ಅಫಜಲಪುರ ಟಕ್ಕೆ ಕಿರಿಯ ಬಾಲಕರ ಬಾಲಮಂದಿರದಲ್ಲಿ ಜೂನ್ 05 ರಂದು ವನಮಹೋತ್ಸವ ಕಾರ್ಯಕ್ರಮದಲ್ಲಿ ವಿವಿಧ ನಮೂನೆಯ ಸಸಿಗಳನ್ನು ನೆಟ್ಟು. ನೀರೆರೆರೆದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೆಪ ಮಾತ್ರಕ್ಕೆ ಪರಿಸರ ದಿನಾಚರಣೆ ಆಚರಿಸದೆ ಪ್ಲಾಸ್ಟಿಕ್ ಬಳಕೆ ನಿಷೇಧ. ನಿತ್ಯ ಸಸಿ ನೆಡುವ ಕಾರ್ಯ ಸಂಕಲ್ಪ ಮಾಡಿ ಜೀವನದ ದಿನಚರಿಯಾಗಿಸಿಕೊಳ್ಳಬೇಕು. ಹರಪ್ಪ ಮೆಹೆಂಜೋದಾರೋ ಕಾಲದಿಂದಲೂ ಮಾನವ ಜನಾಂಗ ನದಿ ತೀರದಲ್ಲಿ, ಕಾಡಿನ ನಡುವೆ ಬೆಳೆದು ಬಂದಿದೆ. ಕಾಡು ಇದ್ದರೆ ನಾಡು. ಶುದ್ಧವಾದ ಗಾಳಿ, ನೀರು, ಪರಿಸರ ವಿವಿಧ ಪ್ರಾಣಿ ಪಕ್ಷಿ, ಜೀವ ಸಂಕುಲ ಮುಂದಿನ ಜನಾಂಗಕ್ಕೆ ಉಳಿಸಿ ಕೊಡುವ ಪಜ್ಞಾವಂತಿಕೆ ಮೆರೆಯಬೇಕಾದರೆ ಇಂದೇ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿ ಕಾರ್ಯೋನ್ಮುಖರಾಗೋಣ ಎಂದು ಕರೆ ನೀಡಿದರು.

ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ್ ಜಿಗಳೂರು ಮಾತನಾಡಿ, ಪರಿಸರ ಸಂರಕ್ಷಣೆಯ ಕುರಿತು ಸರಕಾರ ಹಲವಾರು ರೀತಿ ಸಕಾರಾತ್ಮಕ ಯೋಜನೆಗಳನ್ನು ಜಾರಿಗೆ ತಂದಿದ್ದು.'ಮನೆಗೊAದು ಮರ ಊರಿಗೊಂದು ವನ' ಎಂಬ ಘೋಷವಾಕ್ಯದೊಂದಿಗೆ ಜನ ಜಾಗೃತಿ ಮೂಡಿಸುವದರೊಂದಿಗೆ ಉಚಿತ ಸಸಿ ವಿತರಣೆ, ನರ್ಸರಿ ಪ್ಲಾಂಟೇಶನ್ ಮಾಡಲು ಪ್ರೋತ್ಸಾಹ, ರೈತರಿಗೆ ಹೊಲಗದ್ದೆ ಬದುಗಳಲ್ಲಿ ವಿವಿಧ ಗಿಡ ಬೆಳೆಸಲು ಸಹಾಯ ಸಹಕಾರ ಅರಣ್ಯ ಇಲಾಖೆಯಿಂದ ನೀಡುತ್ತಿದೆ. ಶಾಲಾ ಕಾಲೇಜು ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡುತ್ತಿದೆ. ಸಾರ್ವಜನಿಕರು ಸಂಘ ಸಂಸ್ಥೆಗಳು ಈ ಪವಿತ್ರಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪರಿಸರ ಸಂರಕ್ಷಣೆಗೆ ಮುಂದಾಗಬೇಕೆAದು ಮನವಿ ಮಾಡಿದರು.

ಸಾನಿಧ್ಯ ವಹಿಸಿದ್ದ ರಾಮಕೃಷ್ಣ ಆಶ್ರಮದ ಪೂಜ್ಯಶ್ರೀ ನರೇಶಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಭಾರತೀಯ ಪರಂಪರೆಯಲ್ಲಿ ನಮ್ಮ ಋಷಿ ಮುನಿಗಳು ಗಿಡ ಮರಗಳಿಗೂ ಜೀವವಿದೆ ಎಂದು ಸಿದ್ಧಪಡಿಸಿದ್ದಲ್ಲದೆ. ಹಲವಾರು ಔಷಧೀಯ ಗುಣ, ಮಾನವನಿಗೆ ಉಪಯುಕ್ತ ಆಹಾರತತ್ವ ಒಳಗೊಂಡಿದೆ ಎಂದು ತೋರಿಸಿ ಕೊಟ್ಟಿದ್ದಾರೆ. ಕಾರಣ ಭಾರತೀಯರು ಗಿಡ ಮರಗಳನ್ನು, ರೈತರು ಬೆಳೆಗಳನ್ನು ದೇವರೆಂದು ನಂಬಿ ಭಕ್ತಿ ಶ್ರದ್ಧೆಯಿಂದ ಪೂಜಿಸುತ್ತಾರೆ. ನದಿಗಳಿಗೆ ಬಾಗಿನ ಅರ್ಪಣೆ, ಗಿಡ ಮರಗಳ ಪೂಜೆ, ವಿವಿಧ ಹಬ್ಬ ಹರಿದಿನಗಳಲ್ಲಿ ಮಣ್ಣಿನ ಮೂರ್ತಿಗಳ ಪೂಜೆ. ರೈತ ಬೆಳೆದ ಪೈರು, ಹೂ-ಹಣ್ಣುಗಳ ಪೂಜೆ ಇವೆಲ್ಲ ಈ ಭೂಮಿಗೆ ನಮಗೆ ಕಾಪಾಡುವ ಪರಿಸರಕ್ಕೆ ನಾವು ಸಲ್ಲಿಸುವ ಕೃತಜ್ಞತಾ ಭಾವ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ದೀಪಾಕ್ಷಿ ಜಾನಕಿ, ಮಾನ್ಯ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀಧರ ಕುಲಕರ್ಣಿ, ಸದಸ್ಯರಾದ ದಾನೇಶ ಅವಟಿ, ಯಲ್ಲಪ್ಪ ಇರಕಲ್. ಪೊಲೀಸ್ ನಿರೀಕ್ಷಕರಾದ ಪರಮೇಶ್ವರ್ ಕವಟಗಿ, ಮಲ್ಲಯ್ಯ ಮಠಪತಿ, ಸಂಗಮೇಶ ಪಾಟೀಲ್, ಮಹಾಂತೇಶ ಪಾಟೀಲ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಾಂದರ್ಭಿಕವಾಗಿ ಮಾತನಾಡಿದರು.

ಬಾಲ ಮಂದಿರದ ಅಧೀಕ್ಷಕಿ ಶ್ರೀಮತಿ ಜಯಶ್ರೀ ಪವಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಶಿವಲೀಲಾ ಶಿರಮಗೊಂಡ ಪ್ರಾರ್ಥಿಸಿದರು. ಶೀತಲ್ ಹೂಲಿ ನಿರೂಪಿಸಿದರು.ಮೂಖ್ಯೋಪಾದ್ಯಾಯ ಪಿ.ಬಿ.ತಳಕಟನಾಳ ವಂದಿಸಿದರು.

ವಿಷಯ ಪರಿವೀಕ್ಷಕಿ ಶ್ರೀಮತಿ ಭಾರತಿ ಹಡಪದ, ಎಸ್.ಎಚ್. ಹೊಸಮನಿ, ವಾಣಿಶ್ರೀ ನಿಂಬಾಳ, ಜ್ಯೋತಿ ತೇಲಿ, 

ಗ್ರೃಹಪೀತರಾದ ಶಿವಾನಂದ ಅವತಾಡೆ, ಶರಣು ಯರನಾಳ, ನಿವೃತ್ತ ವಿಷಯ ಪರಿವೀಕ್ಷಕರಾದ ಎ.ಡಿ.ಮಕಾನದಾರ, ಪ್ರಭು ಹಿರೇಮಠ, ಸಂತೋಷ ಮುಳವಾಡ, ಶ್ರೀಮತಿ ಅಮಿನಮ್ಮ ಮಣೂರ, ಬಸಮ್ಮ ಸಜ್ಜನ, ತಾರಾಬಾಯಿ ಬನಸೋಡೆ, ಮೌನೇಶ ಗಂಗನಹಳ್ಳಿ, ಮಾಳಪ್ಪ ಬೆಳಗಾವಿ ಇನ್ನೂ ಅನೇಕರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ರೈತರ ವಿವಿಧ ಬೇಡಿಕೆ ಈಡೇರಿಸಲು ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ



ವಿಜಯಪುರ : ಬಿತ್ತನೆ ಬೀಜ-ರಸಗೊಬ್ಬರ ಬೆಲೆ ಇಳಿಸಲು ಒತ್ತಾಯಿಸಿ, ನಕಲಿ ಕಳಪೆ ಮಾರಾಟ ತಡೆಗಟ್ಟಲು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆಯ ಮೇರೆಗೆ ಬಿತ್ತನೆ ಬೀಜ -ರಸಗೊಬ್ಬರ ಬೆಲೆಗಳನ್ನು ಇಳಿಸಲು ಆಗ್ರಹಿಸಿ, ಕಳಪೆ ಹಾಗೂ ನಕಲಿ ಬಿತ್ತನೆ ಬೀಜ -ರಸಗೊಬ್ಬರಗಳ ಮಾರಾಟವನ್ನು ತಡೆಗಟ್ಟಲು. ಕೃತಕ ಅಭಾವ ಸೃಷ್ಟಿಸಿ ಕಾಳಸಂತೆ ಮಾರಾಟದ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಏPಖS) ವಿಜಯಪುರ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮರಾಯ ಪೂಜಾರಿ ಮಾತನಾಡಿ, ಬಲವಂತದ ಸಾಲ ವಸೂಲಾತಿ ನಿಲ್ಲಬೇಕು. ಬರ ಪರಿಹಾರದ ಹಣವನ್ನು ಸಾಲಕ್ಕೆ ಕಟಾಯಿಸಿಕೊಳ್ಳಬಾರದು. ಸಾಲಕ್ಕೆ ಬರ ಪರಿಹಾರದ ಹಣ ಕಳೆದುಕೊಂಡಿರುವ ರೈತರ ಖಾತೆಗೆ ಹಣ ಮರಳಿಸಲು ಕ್ರಮ ಕೈಗೊಳ್ಳಬೇಕು ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟಬೇಕು. ಕೃಷಿ ಚಟುವಟಿಕೆಗಳಿಗೆ ಅಗತ್ಯ ಬೆಂಬಲ ಒದಗಿಸಬೇಕು ಮತ್ತು ಬೆಳೆ ವಿಮೆ ಪರಿಹಾರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ರಾಜ್ಯ, ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿ ರಾಜ್ಯಾದ್ಯಂತ ಕರೆ ನೀಡಲಾಗಿದೆ. ಕಳೆದ ವರ್ಷ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲವನ್ನು ರಾಜ್‌ಯ ಅನುಭವಿಸಿತ್ತು. ಯಾವುದೇ ಅರ್ಥ ಪೂರ್ಣ ಬರ ಪರಿಹಾರ ಕ್ರಮಗಳಿಲ್ಲದೇ ದೊಡ್ಡ ಪ್ರಮಾಣದ ಸಂಕಷ್ಟಕ್ಕೆ ಸಿಲುಕಿ ನರಳುತ್ತಿರುವ ರೈತಾಪಿ ಸಮುದಾಯವನ್ನು ಬಿತ್ತನೆ ಬೀಜ-ರಸಗೊಬ್ಬರ ಬೆಲೆಗಳ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಬೆಲೆಗಳನ್ನು ಇಳಿಸಬೇಕು. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸುವ ರೈತರನ್ನು ಬೀಜ ಗೊಬ್ಬರದ ವ್ಯಾಪಾರಿಗಳು ಶೋಷಣೆ ಮಾಡದಂತೆ ರಕ್ಷಣೆ ಒದಗಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ(ಏPಖS) ಕರ್ನಾಟಕ ರಾಜ್ಯ ಸಮಿತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜನವಾದಿ ಮಹಿಳಾ ಸಂಘದ ಜಿಲ್ಲಾಧ್ಯಕ್ಷರಾದ ಭಾರತಿ ವಾಲಿ ಮಾತನಾಡಿ, ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆ ಮಾರಾಟವನ್ನು ತಡೆಗಟ್ಟಬೇಕು, ಬಲವಂತದ ಸಾಲವಸೂಲಾತಿ ವಿರುದ್ಧ ರೈತರಿಗೆ ರಕ್ಷಣೆ ಒದಗಿಸಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ವ್ಯಾಪಕ ರೈತ ಆತ್ಮಹತ್ಯೆಗಳನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಅಭಿನೇಶ ಮಣೂರ, ಎ.ಆರ್.ಮುಂಜಣ್ಣಿ, ನಿತ್ಯಾನಂದ ಸಾಗರ, ಎಮ್.ಎ.ಜಮಾದಾರ, ಅನುಸೂಯಾ ಹಜೇರಿ, ಶಮಶಾದ ಬೆಗಂ, ಸಾಹೇಬಿ ಶೇಖ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Thursday, June 6, 2024

07-06-2024 EE DIVASA KANNADA DAILY NEWS PAPER

ಅರಣ್ಯ ಉಳಿಸಿ ಬೆಳೆಸುವ ಕಾರ್ಯವಾಗಲಿ ನಾವು ಪರಿಸರವನ್ನು ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ :  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಿಜಯಪುರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಜಯಪುರ, ಜಿಲ್ಲಾ ಪೋಲಿಸ್ ಇಲಾಖೆ ಮತ್ತು ಬಿ.ಎಲ್.ಡಿ.ಇ. ಸಂಸ್ಥೆ ವಿಜಯಪುರ ಇವರ ಸಂಯುಕ್ತಾ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ಯವಾಗಿ ಸಸಿ ನೇಡುವ ಕಾರ್ಯಕ್ರಮದಲ್ಲಿ ಶ್ರೀ. ರಮೇಶ ಎಸ್. ಕಡಪಟ್ಟಿ, ಪರಿವೀಕ್ಷಣಾಧಿಕಾರಿಗಳು, ಸರಕಾರಿ ವೀಕ್ಷಣಾಲಯ ವಿಜಯಪುರ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. 

ಜೂನ ತಿಂಗಳಿನಲ್ಲಿ ನೆಟ್ಟಿರುವ ಸಸಿಗಳು ಮರವಾಗಿವೆ. ಅದೇ ರೀತಿ ನಮ್ಮ ಸಂಸ್ಥೆಯ ಎಲ್ಲ ಸಿಬ್ಬಂದಿ ವರ್ಗದವರು ನೆಟ್ಟಿರುವ ಸಸಿಗಳನ್ನು ಮಗುವಿನಂತೆ ಗಾಳಿ ಮಳೆ ರಬಸದಲ್ಲಿ ಬೀಳದಂತೆ ಮುನ್ನೆಚರಿಕೆ ವಹಿಸಿರುವ ಕಾರಣಕ್ಕಾಗಿ ಇಂದು ಕಾನೂನಿನ ಸೌರಕ್ಷಣೆಗೆ ಒಳಗಾದ ಮಕ್ಕಳಿಗೆ ಹಾಗೂ ಪಾಲಕರಿಗೆ ನೇರಳಾಗಿವೆ. ಇದು ನಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೆಮ್ಮೆ ತರುವ ಸಂಗತಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 

ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀ ಮಲ್ಲಿಕಾರ್ಜುನ ಅಪ್ಪಾಸಾಹೆಬ ಅಂಬಲಿ ಗೌರವಾನ್ವಿತ ಪ್ರೀನ್ಸಿಪಲ್ ಸಿನೀಯರ್ ಸಿವೀಲ್ ಜಡ್ಜ್, ಸಿ.ಜೆ.ಎಮ್. ಮತ್ತು ಸದಸ್ಯ ಕಾರ್ಯದರ್ಶಗಳು ಕಾನೂನು ಸೇವಾ ಪ್ರಾಧಿಕಾರ ವಿಜಯಪುರ ರವರು ಮಾತನಾಡಿ ಬಸವಾದಿ ಶರಣರು ಪರಮ ಪೂಜ್ಯ, ಸಿದ್ದೇಶ್ವರ ಸ್ವಾಮಿಜಿಯವರು ಹುಟ್ಟಿದ ನಾಡು ವಿಜಯಪುರ ಇತಿಹಾಸವನ್ನು ನಿರ್ಮಿಸಿದ ಗೋಲಗುಂಬಜ ಹೊಂದಿದ ಅಂತಹ ಹೆಸರುಳ್ಳ ನಾಡಿನಲ್ಲಿ ಇಂದು ನಾವು ಈ ವಿಶ್ವ ಪರಿಸರದ ದಿನದಂದು ಸಸಿ ನೇಡುವುದರ ಜೊತೆಗೆ ಪರಿಸರ ಉಳಿಸಿ ಬೆಳೆಸುವುದು ಮಹತ್ತರ ಜವಾಬ್ದಾರಿ ನಮ್ಮದಾಗಿದೆ ಎಂದು ಹೇಳಿದರು. 

ಆ ನಿಟ್ಟಿನಲ್ಲಿ ನಮ್ಮ ರ‍್ವಜರು, ನಮ್ಮ ಹಿರಿಯರು ಪರಿಸರ ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ಆದರೆ ಇಂದು ತದ್ವಿರುದ್ದವಾಗಿ ಆಧುನಿಕರಣಕ್ಕೆ ಒಳಪಟ್ಟು ಪ್ರೀಡ್ಜ್, ಎ.ಸಿ., ಬಳಕೆ ಸಾಮಾನ್ಯವಾಗಿದೆ. ಈ ಒಂದು ಯಂತ್ರಗಳಿAದ ಹೊರಹೊಮ್ಮುವ ಕಲ್ಮಶಗಳಿಂದ ಓಝೋನ್ ಪದರಗಳಿಗೆ ರಂದ್ರಗಳಾಗುತ್ತಿರುವುದರಿAದ ಇಂದು ನಾವು ಏಚೇತ್ತವಾದ ಬೀಸಿಲಿನ ತಾಪವನ್ನು ಅನುಭವಿಸುತ್ತಿದ್ದೇವೆ. ಆದ್ದರಿಂದ ಇಂದು ಪರಿಸರ ದಿನದಂದು ನಾವು ಎಲ್ಲರೂ ಪ್ರಜ್ಞಾವಂತ ನಾಗರೀಕರಾಗಿ ಮನೆಗೊಂದು ಮರ ಬೆಳೆಸೋಣ ಮತ್ತು ನಮ್ಮ ಪೂರ್ವಜನರು, ಹಿರಿಯರು ಹಾಕಿ ಕೊಟ್ಟ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಉಳಿಸುವುದರಿಂದ ಪರಿಸರ ಉಳಿಯಲು ನಾವು ಕಾರಣಿಭೂತರಾಗೋಣ ಅದರಂತೆ ಮುಂದಿನ ಪೀಳಿಗೆಗೆ ಆರೋಗ್ಯವಂತ ಪರಿಸರವನ್ನು ಕೊಡೋಣ ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಮುಖ್ಯ ಅತಿಥಿಗಳಾದ ಬಸವರಾಜ ಯಲಿಗಾರ, ಡಿ.ವಾಯ್.ಎಸ್.ಪಿ. ವಿಜಯಪುರ ಶಹರ ರವರು ಮಾತನಾಡಿ ಪ್ಲಾಸ್ಟಿಕ್ ಮುಕ್ತ ಪರಿಸರ ನಮ್ಮದಾಗಿರಲಿ ಮತ್ತು ಒಬ್ಬ ಮನುಷ್ಯ ಜೀವನದಲ್ಲಿ ಸಾವಿರ ಸಸಿಗಳನ್ನು ನೆಟ್ಟು ಅವು ಮರವಾಗಿ ಬೆಳೆಯುವಂತೆ ನೀಗಾ ವಹಿಸೋಣ ಎಂದು ಕರೆ ನೀಡಿದರು. 

 ಶ್ರೀಕಾಂತ್ ಬಿರಾದಾರ್ ಆಪ್ತ ಸಮಾಲೋಚಕರು ಸರ್ಕಾರಿ ವೀಕ್ಷಣಾಲಯ ವಿಜಯಪುರ ರವರು ಮಾತನಾಡಿ ನಾವು ಹಳ್ಳಿಗಳಲ್ಲಿ ಪಕ್ಷಿಗಳ ದ್ವನಿಗಳನ್ನು ಕೇಳುವುದು ಸಹಜ ಆದರೆ ನಗರ ಪ್ರದೇಶಗಳ ಪಕ್ಷಿಗಳ ದ್ವನಿ ಕೇಳಿ ಬರುವುದು ತುಂಬಾ ವಿರಳ ಅದರ ತದ್ವಿರುದ್ದವಾಗಿ ಇಂದು ನಗರ ಪ್ರದೇಶದಲ್ಲಿರುವ ನಮ್ಮ ಸರಕಾರಿ ವೀಕ್ಷಣಾಲಯ ಆವರಣದಲ್ಲಿ ಸುಮಾರು 80 ಮರಗಳಿರುವ ಕಾರಣಕ್ಕಾಗಿ ಪಕ್ಷಿಗಳಲ್ಲಿ ಒಂದಾದ ಕೋಗಿಲೆಯ ಇಂಪಾದ ದ್ವನಿ ಕೇಳುತ್ತಿರುವುದು ಹೆಮ್ಮೆಯ ಸಂಗತಿ. ಸಂತೃಪ್ತಿಯನ್ನು ಹೊಂದಬೇಕಾದರೆ ದಿನನಿತ್ಯದ ಜೀವನದಲ್ಲಿ ಪರಿಸರವನ್ನು ಪ್ರೀತಿಸುವುದು, ಪರಿಸರದ ಕಾಳಜಿ, ಮತ್ತು ಪರಿಸರ ವೀಕ್ಷಣೆ ಮಾಡುವುದರಿಂದ ನಾವು ಒತ್ತಡ ಮುಕ್ತ ಜೀವನ ಸಾಗಿಸಲು ಸಾಧ್ಯವಿದೆ.

ಅಧ್ಯಕ್ಷರು ಶ್ರೀ ದೀಪಾಕ್ಷಿ ಜಾನಕಿ ಮಾನ್ಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯಪುರ ರವರು ಮಾತನಾಡಿ ನಾವು ಮನೆಯಲ್ಲಿ ಮಕ್ಕಳನ್ನು ಹೇಗೆ ಪಾಲನೆ ಪೋಷಣೆ ಮಾಡುತ್ತೇವೆ ಹಾಗೆ ಒಂದು ಸಸಿಯನ್ನು ನೆಟ್ಟು ಮರವಾಗುವವರೆಗೆ ಆ ಸಸಿಯನ್ನು ನಾವು ಮಗುವಿನಂತೆ ಬೆಳೆಸೋಣ ಎಂದು ಸಂಕಲ್ಪನೆ ಮಾಡಿದರು. ಶ್ರೀಕಾಂತ್ ಬಿರಾದಾರ್ ಆಪ್ತ ಸಮಾಲೋಚಕರು ಸರ್ಕಾರಿ ವೀಕ್ಷಣಾಲಯ ವಿಜಯಪುರ ಇವರು ನಿರೂಪಿಸಿದರು. ಸುನೀಲ ಕಳಸನ್ನವರ. ಗೃಹಪಾಲಕರು, ಸರ್ಕಾರಿ ವೀಕ್ಷಣಾಲಯ ವಿಜಯಪ, ರಾಜೇಶ ಉಕ್ಕಲಿ ವಂದಣಾರ್ಪಣೆ ನೆರವೇರಿಸಿದರು. 

ರಮೇಶ ಕಡಪಟ್ಟಿ, ಪರಿವೀಕ್ಷಣಾಧಿಕಾರಿಗಳು ಸರಕಾರಿ ವೀಕ್ಷಣಾಲಯ, ಶ್ರೀ. ರಮೇಶ ಜಿ. ಕುಲಕರ್ಣಿ, ಮಾನ್ಯ ಸದಸ್ಯರು ಬಾಲ ನ್ಯಾಯ ಮಂಡಳಿ , ಪರಮೇಶ್ವರ ಕವಟಗಿ, ಸಿ.ಪಿ.ಐ. ಎಸ್.ಪಿ. ಆಫೀಸ್ ವಿಜಯಪುರ, ಶ್ರೀ ಶಿವಾನಂದ ಕಟ್ಟಿಮನಿ, ಎ.ಎಸ್.ಐ. ಸಂಚಾರಿ ಪೋಲಿಸ್ ಠಾಣೆ ವಿಜಯಪುರ, ಶ್ರೀಮತಿ ವಾಣಿಶ್ರೀ ನಿಂಬಾಳ, ಶ್ರೀ ವಿಜಯಕುಮಾರ ತಳವಾರ, ಎನ್.ಎಸ್.ಎಸ್. ಪ್ರೋಗ್ರಾಮ್ ಆಫೀಸರ್, ಎನ್.ಎಸ್.ಎಸ್ ಶಿಬರ‍್ಥಿಗಳು ಬಿ.ಎಲ್.ಡಿ.ಈ. ಎ.ಎಸ್. ಪಾಟಿಲ್ ಕಾಲೆಜ್ ವಿಜಯಪುರ, ಕುಮಾರಿ ಶೋಭಾ ಕಾಂಬಳೆ, ಶ್ರೀಮತಿ ಸಾವಿತ್ರಿ ಹಿಟ್ನಳ್ಳಿ, ಶ್ರೀಮತಿ ಸರಸ್ವತಿ ನುಚ್ಚನ್ನವರ, ಶ್ರೀ.ಕುಮಾರ ದೇವರಗುಡಿ, ಲಕ್ಷ್ಮಣ್ ಭಜಂತ್ರಿ, ಶ್ರೀ. ಚಂದ್ರಕಾAತ ವಾಂಡಕರ ಹಾಗೂ ಶ್ರೀಶೈಲ ಕಾಂಬಳೆ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, June 5, 2024

06-06-2024 EE DIVASA KANNADA DAILY NEWS PAPER

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ : ಸಿಇಓ ರಿಷಿ ಆನಂದ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ ವಿಜಯಪುರ:

ಮಾನವ ಸಂಕುಲದ ಬದುಕುಳಿಯುವಿಕೆಗೆ ಅವಶ್ಯವಿರುವ ಮೂಲಭೂತ ಅವಶ್ಯಕತೆಗಳನ್ನು ಪರಿಸರ ಒದಗಿಸುತ್ತದೆ. ಮಾನವನ ಯೋಗಕ್ಷೇಮಕ್ಕೆ ಅವಶ್ಯವಿರುವ ಎಲ್ಲಾ ಸಂಪನ್ಮೂಲಗಳು ಈ ಭೂಮಿಯ ಮೇಲಿದೆ. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಿಷಿ ಆನಂದ ಹೇಳಿದರು.

 ಜಿಲ್ಲಾ ಪಂಚಾಯತ ಹಾಗೂ ಸಮಾಜಿಕ ಅರಣ್ಯ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಆವರಣದಲ್ಲಿ  ಬುಧವಾರ ಹಮ್ಮಿಕೊಳ್ಳಲಾಗಿದ್ದ 

"ವಿಶ್ವ ಪರಿಸರ ದಿನಾಚರಣೆ " ಕಾರ್ಯಕ್ರಮದಲ್ಲಿ  ಗಿಡ ನೆಟ್ಟು, ನೀರುಣಿಸಿ ಅವರು ಮಾತನಾಡಿದರು.

ಪ್ರಕೃತಿ ಸಂಪನ್ಮೂಲವನ್ನು ನಮಗೆ ಅವಶ್ಯಕತೆ ಇದ್ದಷ್ಟು ಮಾತ್ರ ಉಪಯೋಗಿಸೋಣ, ಅವಶ್ಯಕತೆಗಿಂತ ಹೆಚ್ಚು ಉಪಯೋಗ ಮಾಡದೇ ನಮ್ಮ ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಅತೀ ಹೆಚ್ಚು ಬಿಸಿಲಿನ ತಾಪಮಾನ ಇರುವುದರಿಂದ ಸಸಿಗಳನ್ನು ನೆಡುವುದು ಹಾಗೂ ಜಲ ಸಂರಕ್ಷಣೆ ಮಾಡುವುದು ಅವಶ್ಯಕವಾಗಿದೆ. ಜಲಸಂರಕ್ಷಣೆಗೆ ಅತ್ಯಂತ ಸೂಕ್ತ ವಿಧಾನ “ಮಳೆನೀರು ಕೊಯ್ಲು” ಈ ವಿಧಾನವನ್ನು ನಾವು ಅಳವಡಿಸಿಕೊಂಡು ಸಾರ್ವಜನಿಕರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದರು.

 ಮಾನವ ಮಾತ್ರ ಪ್ರಕೃತಿಯ ವಿಚಾರದಲ್ಲಿ ನಿರ್ದಯವಾಗಿದ್ದಾನೆ. ಮಾನವರು ನೈಸರ್ಗಿಕ ಸಂಪನ್ಮೂಲವನ್ನು ದಿನೇ ದಿನೇ ಹಾಳುಗೆಡುವುತ್ತಿದ್ದಾರೆ. ಕಾಡುಗಳನ್ನು ಕಡಿದು ಮಾಲಿನ್ಯ ಹಾಗೂ ಜಾಗತಿಕ ತಾಪಮಾನ ಹೆಚ್ಚಲು ಕಾರಣರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಂತೂ ಪರಿಸರ ಹಾನಿ ಎಷ್ಟರ ಮಟ್ಟಿಗೆ ಆಗಿದೆ ಎಂಬುದಕ್ಕೆ ಈ ವರ್ಷದ ಬಿಸಿಲಿಗಿಂತ ಉತ್ತಮ ಉದಾಹರಣೆ ಬೇಕಿಲ್ಲ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳಬೇಕು. ಪರಿಸರವನ್ನು ರಕ್ಷಿಸುವ ಕಾಯಕದಲ್ಲಿ ಇಂದಿನಿಂದಲೇ ತೊಡಗಬೇಕು ಎಂದು ಕರೆ ನೀಡಿದರು. 

ನಾವು ಪರಿಸರದ ಬಗ್ಗೆ ಜಾಗೃತರಾಗಿದ್ದರೆ ಮಾತ್ರ ಸಾಲದು ಪ್ರಕೃತಿ ನಮಗೆ ಒದಗಿಸುತ್ತಿರುವ ಎಲ್ಲ ಅವಶ್ಯಕತೆಗಳಿಗೂ ನಾವು ಹೆಚ್ಚಿನ ಗೌರವ ಮತ್ತು ಕಾಳಜಿಯನ್ನು ನೀಡಬೇಕಾಗಿದೆ. ಇದರ ಬಗ್ಗೆ ನಾವಷ್ಟೇ ಅಲ್ಲದೇ ಇತರರಿಗೂ ತಿಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಮ್ಮ ಪರಿಸರವನ್ನು ನಮಗೆ ಮಾತ್ರವಲ್ಲದೆ ಮುಂದಿನ ಪೀಳಿಗೆಗೂ ಸಹ ದೊರಕುವಂತೆ ಮಾಡೋಣ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿ ಬಿ. ಎಸ್. ಮೂಗನೂರಮಠ, ಯೋಜನಾ ನಿರ್ದೇಶಕ ಸಿ. ಆರ್. ಮುಂಡರಗಿ, ಸಾಮಾಜಿಕ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಬು ಚವ್ಹಾಣ, ವಲಯ ಅರಣ್ಯಾಧಿಕಾರಿ ಗಿರೀಶ ಹಲಕುಡೆ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ ಅಲ್ಲಾಪೂರ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಹಾಗೂ ಜಿಲ್ಲಾ ಪಂಚಾಯತಿಯ ಹಾಗೂ ಸಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ  ಸಿಬ್ಬಂದಿ ಪ್ರಕಟಿಸಲಾಗುವುದು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಬೆಂಗಳೂರು: ಜೂನ್ 05: ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ರಿಜಿಸ್ಟ್ರಾರ್ ಅವರ ಮಾರ್ಗದರ್ಶನದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಸಂಸ್ಥೆಯ ಆವರಣದಲ್ಲಿ ಹೊಸ ಗಿಡ, ಸಸಿಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು.  ಸಂಸ್ಥೆಯ ಸಿಬ್ಬಂದಿಗಳಾದ ರಾಜು ಕಾಂಬಳೆ, ಸಿದ್ದರಾಜು, ಪುನೀತ, ರಂಗಪ್ಪ, ಅಂಬರಮ್ಮ, ಶಂಕರಪ್ಪ, ಗೋವಿಂದರಾಜು, ಬಸವರಾಜು, ಲಕ್ಕಣ್ಣ ಮುಂತಾದವರು ಉಪಸ್ಥಿತರಿದ್ದರು. ನಂತರ ಸಿಹಿ ಹಂಚಲಾಯಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, June 3, 2024

04-06-2024 EE DIVASA KANNADA DAILY NEWS PAPER

ಮತ ಎಣಿಕೆಯ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದ ಡಿಸಿ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಲೋಕಸಭಾ ಚುನಾವಣೆಯ ಮತ ಎಣಿಕೆಯು ಮಂಗಳವಾರ(ಜೂ.4) ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಟಿ. ಭೂಬಾಲನ್  ಹೇಳಿದರು.

ವಿಜಯಪುರ ಮೀಸಲು(ಪ ಜಾ) ಲೋಕಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿರುವ ವಿಜಯಪುರ ನಗರದ  ಸೈನಿಕ ಶಾಲೆಯ ಆವರಣದಲ್ಲಿ ಸೋಮವಾರದಂದು ಚುನಾವಣ ವೀಕ್ಷಕರೊಂದಿಗೆ ಅಂತಿಮ ಹಂತದ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ  ಅವರು ಮಾತನಾಡಿದರು.

ಮತ ಎಣಿಕೆ ಆರಂಭಕ್ಕೆ ಮುನ್ನ  ಬೆಳಿಗ್ಗೆ 7 ಗಂಟೆಗೆ ಮತಯಂತ್ರಳನ್ನು ಇರಿಸಿದ ಭಧ್ರತಾ ಕೋಟಡಿಗಳನ್ನು ಚುನಾವಣಾ ವೀಕ್ಷಕರು, ಉಮೇದುವಾರರು ಹಾಗೂ ಚುನಾವಣಾ ಏಜೆಂಟರುಗಳ ಸಮ್ಮುಖದಲ್ಲಿ ತೆರೆಯಲಾಗುವುದು ಎಂದು ತಿಳಿಸಿದರು.



ಬೆಳಿಗ್ಗೆ 8 ಗಂಟೆಯಿಂದ  ಮತ ಎಣಿಕೆ ಕಾರ್ಯ ಆರಂಭಿಸಲಾಗುವುದು. ಅಂಚೆ ಮತಗಳ ಎಣಿಕೆಗೆ  ಪ್ರತ್ಯೇಕ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಮತ ಎಣಿಕೆಯ ದಿನವಾದ ಮಂಗಳವಾರದ  ಬೆಳಿಗ್ಗೆ 8 ಗಂಟೆಯವರೆಗೂ ಪೋಸ್ಟಲ್ ಬ್ಯಾಲೆಟ್ ಗಳನ್ನು ಸ್ವೀಕರಿಸಲಾಗುತ್ತದೆ ಎಂದರು

ಸೈನಿಕ್‌ ಶಾಲೆಯ ಒಡೆಯರ ಸದನದಲ್ಲಿ ಮುದ್ದೇಬಿಹಾಳ ಮತ್ತು ದೇವರ ಹಿಪ್ಪರಗಿ ಮತ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ. ಆದಿಲ್‌ಶಾಹಿ ಸದನದಲ್ಲಿ ಬಸವನ ಬಾಗೇವಾಡಿ ಮತ್ತು ಬಬಲೇಶ್ವರ ಕ್ಷೇತ್ರ, ಹೊಯ್ಸಳ ಸದನದಲ್ಲಿ ವಿಜಯಪುರ ನಗರ ಮತ್ತು ನಾಗಠಾಣ ಕ್ಷೇತ್ರ,  ವಿಜಯಪುರ ಸದನದಲ್ಲಿ ಇಂಡಿ ಮತ್ತು ಸಿಂದಗಿ ಕ್ಷೇತ್ರ ಹಾಗೂ ಹೊಯ್ಸಳ ಸದನದಲ್ಲಿ ಅಂಚೆ ಮತಗಳ ಎಣಿಕೆ ನಡೆಯಲಿದೆ ಎಂದು ಹೇಳಿದರು.

 ಆಯಾ ವಿಧಾನಸಭೆ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ವಿದ್ಯುನ್ಮಾನ ಮತ ಯಂತ್ರಗಳ ಎಣಿಕೆ ಕಾರ್ಯವನ್ನು ಕೈಗೊಳ್ಳಲು ಪ್ರತಿ ವಿಧಾನಸಭೆ ಮತಕ್ಷೇತ್ರಕ್ಕೆ 14 ಟೇಬಲ್‌ಗಳಂತೆ ಒಟ್ಟು 8 ಮತಕ್ಷೇತ್ರಗಳಿಗೆ 112 ಟೇಬಲ್‌ಗಳಲ್ಲಿ ಹಾಗೂ ಅಂಚೆ ಮತಪತ್ರಗಳ ಎಣಿಕೆ ಕಾರ್ಯಕ್ಕಾಗಿ 12 ಟೇಬಲ್‌ಗಳಲ್ಲಿ ಹಾಗೂ ಇಟಿಪಿಬಿಎಸ್‌ ಮತಪತ್ರಗಳ ಸ್ಕ್ಯಾನಿಂಗ್‌ ಕಾರ್ಯವನ್ನು 6 ಟೇಬಲ್‌ಗಳಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ಒಟ್ಟು 124 ಟೇಬಲ್ ಗಳಿಗೆ 12ಜನ ಸಹಾಯಕ ಚುನಾವಣಾ ಅಧಿಕಾರಿಗಳು, 124 ಸೂಪರ್ ವೈಸರ್, 136 ಅಸಿಸ್ಟೆಂಟ್ ಸೂಪರ್ ವೈಸರ್, 124 ಮೈಕ್ರೋ ಅಬ್ಸ್ ರವರ್, 87 ಜನ ರಿಸರ್ವ್ ಸಿಬ್ಬಂದಿ ಸೇರಿದಂತೆ ಒಟ್ಟು 483 ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು

ಮತ‌ ಎಣಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.

ಇದಲ್ಲದೇ ಮತ ಎಣಿಕೆ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಕೂಡ‌ ಜಾರಿ ಮಾಡಲಾಗಿದೆ ಎಂದರು.

 ಈ ಮೊದಲು ಮತ ಎಣಿಕೆ ಕೊಠಡಿ, ಪಾರ್ಕಿಂಗ್, ಭದ್ರತಾ ಸಿಬ್ಬಂದಿ ನಿಯೋಜನೆ, ಊಟೋಪಹಾರ ವ್ಯವಸ್ಥೆ, ಮಾಧ್ಯಮ ಕೇಂದ್ರ ಮತ್ತಿತರ ಸೌಕರ್ಯಗಳ ಕುರಿತು ಚುನಾವಣಾ ವೀಕ್ಷಕರಾದ ಡಾ.ರತನಕನ್ವರ ಗಂದವಿಚರಣ,  ಜಿಲ್ಲಾ ಚುನಾವಣಾಧಿಕಾರಿ ಟಿ. ಭೂಬಾಲನ್ ಹಾಗೂ ಜಿಲ್ಲಾ  ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ  ಮಹಾದೇವ ಮುರಗಿ, ತಹಶೀಲ್ದಾರ  ಕವಿತಾ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.