Saturday, June 29, 2024

ಪರಿಸರ ಕಾಳಜಿ ಯುವಕರ ಆಶಯವಾಗಲಿ: ವಿಜಯಪುರ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಕಲ್ಲನಗೌಡ ಪಾಟೀಲ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಚಡಚಣ:  ಶ್ರೀ ಸಂಗಮೇಶ್ವರ ಕಲಾ‌ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಚಡಚಣದ  ರಾಷ್ಟೀಯ ಸೇವಾ ಯೋಜನಾ ಘಟಕವು ಚಡಚಣ ತಾಲೂಕಿನ ಜಿಗಜೇವಣಿ ಗ್ರಾಮದಲ್ಲಿ  ಏಳು ದಿನಗಳ ವಿಶೇಷ ವಾರ್ಷಿಕ ಶಿಬಿರದ ಉದ್ಘಟನಾ ಸಮಾರಂಭ  ಹಮ್ಮಿಕೊಳ್ಳಲಾಯಿತು. 

ಎನ್ ಎಸ್ ಎಸ್ ಶಿಬಿರದ ಉದ್ಘಾಟನಾ ಸಮಾರಂಭವನ್ನು ಶ್ರೀ ಸಿದ್ದರಾಮೇಶ್ವರ ಪಟ್ಟದ ದೇವರುವರು (ಬೋರಚಿಂಚೋಳ್ಳಿ)  ದಿವ್ಯ ಸಾನಿಧ್ಯ ವಹಿಸಿ ಆಶಿರ್ವಚನ ನೀಡಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವಿಠ್ಠಲ ಬಿರಾದಾರ (ಗ್ರಾಂ ಪ ಅಧ್ಯಕ್ಷರು) ವಹಿಸಿಕೊಂಡಿದ್ದರು. ಉದ್ಘಾಟನೆಯನ್ನು ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಗೌರವಾನ್ವಿತ ಕಾರ್ಯದರ್ಶಿಗಳಾದ ಶ್ರೀ ವಿ ಎಸ್ ಗಿಡವಿರ  ನೆರವೆರಿಸಿದರು. 

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ  ವಿಜಯಪುರ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಕಲ್ಲನಗೌಡ ಪಾಟೀಲ ಸ್ವಯಂ ಸೇವಕರಲ್ಲಿ ಪ್ರಾಮಾಣಿಕತೆ ಇರಬೇಕು. ದೇಶದ ಭದ್ರತೆ ಮತ್ತು ಅಭಿವೃದ್ದಿ ದೃಷ್ಟಿಕೊನದಲ್ಲಿರಿಸಿಕೊಂಡು ಸೇವೆಯನ್ನು ಇವತ್ತಿನ ಯುವಕರು ಮಾಡಬೇಕು. ಯಾವುದೇ ಸ್ವಚ್ಛತೆಯೇ ಈ ಶಿಬಿರದ ಮೂಲ ತತ್ವವಾಗಲಿ.‌ ಪರಿಸರ ಕಾಳಜಿ ಯುವಕರ ಆಶಯವಾಗಲಿ ಎಂದು ತಿಳಿಸಿದರು. 

ಮಹಾವಿದ್ಯಾಲಯದ ಪ್ರಾಚಾರ್ಯರಾದ  ಡಾ. ಎಸ್ ಬಿ ರಾಠೋಡ ಪ್ರಾಸ್ತಾವಿಕ ಮಾತನಾಡುತ್ತಾ ನಾಡಿನ ಭವಿಷ್ಯ ಯುವಕರ ಕೈಯಲ್ಲಿ ಇದೆ.‌ ಸಂಸ್ಕಾರ ಮತ್ತು ಸಭ್ಯತೆಗಳನ್ನು ಕಲಿಯುವುದರ ಮೂಲಕ ಸ್ವಯಂ ಸೇವಕರು ಸಾಧನೆಯನ್ನು ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ  ಪ್ರೊ.ಎಂ ಕೆ ಬಿರಾದಾರ್,  ಪ್ರೊ.ಎ ಎಸ್ ಪಾಟೀಲ್, ಎಸ ಎಸ್ ಪಾಟೀಲ್ ,ಪ್ರೊ. ಬಸವರಾಜ ಯಳ್ಳೂರು, ಪ್ರೊ.ಎಸ್ ಎಸ್ ಅವಟಿ,  ಪ್ರೊ.ಪೂಜಾ ಬುರುಡ, ಪ್ರೊ.ಬಿ ಎಮ್ ಧೈವಾಡಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮದ ಹಿರಿಯರು ಮಹಾವಿದ್ಯಾಲಯದ ಸ್ವಯಂ ಸೇವಕರು ಉಪಸ್ಥಿತರಿದ್ದರು.  ಕಾರ್ಯಕ್ರಮ ಅಧಿಕಾರಿಗಳಾದ‌ ಮಹಾಂತೇಶ ಜನವಾಡ ಸ್ವಾಗತಿಸಿದರು ಡಾ.ಎಸ್ ಎಸ್ ದೇಸಾಯಿ ವಂದಿಸಿದರು. ಕು. ಅಕ್ಷತಾ ಉಮರಾಣಿ ನಿರೂಪಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment