Wednesday, July 31, 2024

"ವ್ಯಸನ ಮುಕ್ತಕ್ಕಾಗಿ ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ ಮಾಡಿದ ಡಾ. ಮಹಾಂತ ಶಿವಯೋಗಿ ಅಜ್ಜನವರು"

 ದೇಶಾದ್ಯಂತ ವ್ಯಸನ ಮುಕ್ತ ಜಾಗೃತಿ ಮೂಡಿಸಿದ ಶ್ರೀಗಳು| ಆಗಸ್ಟ್ 1 ವ್ಯಸನ ಮುಕ್ತ ದಿನಾಚರಣೆ

ಸಮಾಜದಲ್ಲಿ ಯಾವೊಬ್ಬ ವ್ಯಕ್ತಿಯೂ ವ್ಯಸನಗಳಿಗೆ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಪ್ರತಿಯೊಬ್ಬರು ಉತ್ತಮ ಆರೋಗ್ಯ ಪಡೆದುಕೊಂಡು ನೆಮ್ಮದಿಯ ಜೀವನ ನಡೆಸಬೇಕೆನ್ನುವ ಆರೋಗ್ಯಕರ ಸಮಾಜದ ಪರಿಕಲ್ಪನೆ ಇಟ್ಟುಕೊಂಡು ವ್ಯಸನ ಮುಕ್ತ ಸಮಾಜಕ್ಕಾಗಿ 'ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ' ಮೂಲಕ ಸಂಚರಿಸಿ, ವ್ಯಸನ ಹಾಗೂ ದುಷ್ಚಟಗಳ ಬಗ್ಗೆ ಜಾಗೃತಿ ಮೂಡಿಸಿ, ಜನರಲ್ಲಿ ಮನ ಪರಿವರ್ತಿಸಿದ ಲಿಂಗೈಕ್ಯ ಡಾ. ಮಹಾಂತ ಶಿವಯೋಗಿ ಅಜ್ಜನವರು.

       ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ 01 ಆಗಸ್ಟ್ 1930 ರಲ್ಲಿ ಜನಿಸಿದ ಡಾ. ಮಹಾಂತ ಶಿವಯೋಗಿಗಳು. ತಮ್ಮ 10 ನೇ ವಯಸ್ಸಿನಲ್ಲೇ ಸನ್ಯಾಸಿ ಜೀವನವನ್ನು ಸ್ವೀಕರಿಸಿ, ಸವದಿಯ ವಿರಕ್ತ ಮಠದ ಚಿಕ್ಕ ಸ್ವಾಮಿಜಿಗಳಾದರು.

      ಇವರು ಕಾಶಿಯಲ್ಲಿ ಸಂಸ್ಕೃತ, ಹಿಂದಿ ಯೋಗ, ಶಾಸ್ತ್ರೀಯ ಸಂಗೀತ, ಆಧ್ಯಾತ್ಮಿಕ ಪ್ರವಚನ ಹೀಗೆ ನಾನಾ ವಿಷಯಗಳಲ್ಲಿ ಪರಿಣಿತಿಯನ್ನು ಪಡೆದಿದ್ದರು.

       *ವ್ಯಸನ ಮುಕ್ತ ಸಮಾಜಕ್ಕೆ ಶ್ರೀಗಳ ಕೊಡುಗೆ:* 1970 ರಲ್ಲಿ ಇಳಕಲ್ (ಚಿತ್ತರಗಿ) ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19 ನೇ ಪೀಠಾಧಿಕಾರಿಗಳಾದ ಡಾ. ಮಹಾಂತ ಶಿವಯೋಗಿ ಅಜ್ಜನವರು. ಬಳಿಕ ಉತ್ತರ ಕರ್ನಾಟಕದಿಂದ 'ವ್ಯಸನ ಮುಕ್ತ'ಕ್ಕಾಗಿ ದೃಢ ಸಂಕಲ್ಪ ತೊಟ್ಟು,1975 ಕ್ಕೆ ಆರಂಭಿಸಿದ 'ಮಹಾಂತ ಜೋಳಿಗೆ ಕಾರ್ಯಕ್ರಮ'ದಡಿ ದೇಶಾದ್ಯಂತ ಅಷ್ಟೇ ಅಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ಸಂಚರಿಸಿದ ಶ್ರೀಗಳು 42 ವರ್ಷಗಳ ಕಾಲ ಮಾದಕ ಸೇವನೆ ಹಾಗೂ ದುಷ್ಚಟಗಳಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಿ, ತಮ್ಮ ಜೋಳಿಗೆ ಹಿಡಿದು ಜನರಲ್ಲಿನ ದುಶ್ಚಟಗಳ ಭಿಕ್ಷೆ ಬೇಡಿದರು.

        *ಬಹು ಸಮಾಜಮುಖಿ ಕೊಡುಗೆಯ ಜೋಳಿಗೆ ಹರಿಕಾರ:* ನಿರಂತರ ಅನ್ನ ದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನಾ ಸಂಸ್ಥೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್‌ ಸ್ಥಾಪನೆ, ನಿರುದ್ಯೋಗಿಗಳಿಗೆ ಮತ್ತು ವಿಧವೆಯರಿಗೆ ಕಾಯಕ ಸಂಜೀವಿನಿ ಸಂಸ್ಥೆ ಸ್ಥಾಪನೆ, ನಿಸರ್ಗ ಚಿಕಿತ್ಸೆ, ಯೋಗ ಕೇಂದ್ರ ಸ್ಥಾಪನೆ, ಶಾಖಾ ಮಠಗಳಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಯುವಕರಿಗೆ ಧರ್ಮ ಸಂಸ್ಕಾರ ನೀಡಿ ಪಟ್ಟಾಭಿಷೇಕ, ಮಹಿಳಾ ಸಾಧಕಿಯರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿಕಾರಿಯನ್ನಾಗಿ ಮಾಡಿದ್ದು, ಮಠದ ನೂರಾರು ಎಕರೆ ಜಮೀನು ಆಯಾ ಗ್ರಾಮಗಳ ರೈತರಿಗೆ ಕೃಷಿ ಮಾಡಿ  ಬದುಕಲು ಅನುಕೂಲ ನೀಡಿದರು. ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಎದುರಾದಾಗ ನಾನಾ ಗ್ರಾಮಗಳಲ್ಲಿ ಗಂಜಿ ಕೇಂದ್ರ ತೆರೆಯುವ ಜತೆಗೆ ಹಲವಾರು ಬಹು ಸಮಾಜಮುಖಿ ಕಾರ್ಯಗಳನ್ನು ಮಾಡಿದರು. 

        *ಮಹಾಂತ ಜೋಳಿಗೆ ಕಾರ್ಯಕ್ರಮಕ್ಕೆ ಕಾರಣ:* ವಿಪರೀತ ಮದ್ಯಪಾನ ಸೇವನೆಯಿಂದ ಯುವಕನೊಬ್ಬ ಸಾವನ್ನಪ್ಪಿದ ಸುದ್ದಿ ತಿಳಿದು ಕುಟುಂಬಕ್ಕೆ ಸಾಂತ್ವಾನ ಹೇಳಲು ಅವನ ಕೇರಿಗೆ ತೆರಳಿದ್ದ ಶ್ರೀಗಳು. ಅಲ್ಲಿ ಮೃತ ಯುವಕನ ಧರ್ಮಪತ್ನಿ ಹಾಗೂ ಮಕ್ಕಳು ಉಪವಾಸದಿಂದ ಕಣ್ಣಿರು ಹಾಕುತ್ತಿರುವುದು ಕಂಡರು. ಇದೇ ರೀತಿ ಸಾವಿರಾರು ಕುಟುಂಬಗಳಲ್ಲಿ ಗಂಡಂದಿರು ಮದ್ಯಪಾನ ಸೇವನೆ ಹಾಗೂ ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗಿ ಸಾವಿಗಿಡಾಗುತ್ತಿದ್ದಾರೆ. ಇದರಿಂದ ಹೆಂಡತಿ, ಮಕ್ಕಳು ಸೇರಿ ಕುಟುಂಬಸ್ಥರು ಬೀದಿ ಪಾಲಾಗುತ್ತಿದ್ದಾರೆ. ಇಂತಹ ದುಷ್ಚಟಗಳಿಗೆ ಜೀವನ ಹಾಳಾಗಿಸಿಕೊಳ್ಳುತ್ತಿರುವದನ್ನು ನಿರ್ಮೂಲನೆ ಮಾಡಲು 'ಮಹಾಂತ ಜೋಳಿಗೆ' ಆರಂಭಿಸಿದರು. 

        ಮಹಾಂತ ಸ್ವಾಮಿಜಿಯವರು ಕೆಂಪು ಬಟ್ಟೆಯ ಜೋಳಿಗೆ ಹಿಡಿದುಕೊಂಡು ಕುಡಿತ ಚಟದಿಂದ ಸಾವಿಗಿಡಾದ ಯುವಕನ ಕೇರಿಯ ಗುಡಿಸಲು ಮನೆಗಳಿಗೆ ತೆರಳಿ, ಜನರು ಮದ್ಯಪಾನ, ತಂಬಾಕು, ಗುಟ್ಕಾ ಸೇರಿದಂತೆ ದುಷ್ಚಟಗಳನ್ನು ತಮ್ಮ ಜೋಳಿಗೆಗೆ ಹಾಕಲು ಭಿಕ್ಷೆ ರೂಪದಲ್ಲಿ ಬೇಡಿದರು. 

         ಹೀಗೆ ವ್ಯಸನ ಮಕ್ತ ಸಮಾಜದ ಪರಿಕಲ್ಪನೆಯೊಂದಿಗೆ ಜನರಲ್ಲಿ ವ್ಯಸನದಿಂದ ಸಂಭವಿಸುವ ಕ್ಯಾನ್ಸರ್ ನಂತಹ ಆರೋಗ್ಯ ಹಾನಿ ಕುರಿತು ಮನಸ್ಸಿಗೆ ಮುಟ್ಟುವಂತೆ ತಿಳುವಳಿಕೆಯ ಮಾತನ್ನು ಹೇಳಿದರು. ಜತೆಗೆ ವೈದ್ಯರು, ಸಾಹಿತಿಗಳು, ಕವಿಗಳು, ಧರ್ಮಗಳು ಹೀಗೆ ಪ್ರಖ್ಯಾತ  ಮನಪರಿವರ್ತಿಸುವ ಜಾಗೃತಿ ಕಾರ್ಯಕ್ರಮ ಮುಂದುವರೆಸಿದರು.

          *ಶ್ರೀಗಳಿಗೆ ಸಂದ ಗೌರವ ಹಾಗೂ ಪ್ರಶಸ್ತಿಗಳು:* 1967 ರಲ್ಲಿ ಹಾವೇರಿಯ ಹುಕ್ಕೇರಿ ಮಠದಿಂದ 'ಅಭಿನವ ಚನ್ನಬಸವಣ್ಣ', 1968 ರಲ್ಲಿ ದಾವಣಗೆರೆಯ ಗಾನಯೋಗಿ ಪುಟ್ಟರಾಜ ಗವಾಯಿಗಳ ಪುರಾಣ ಸಮಿತಿಯಿಂದ 'ಕಾಯಕನಿಷ್ಠ ಶಿವಯೋಗಿ', 1969 ರಲ್ಲಿ ಬಾಗಲಕೋಟೆಯ ನಾಗರಿಕರಿಂದ 'ಪ್ರವಚನ ಪ್ರವೀಣ', 1990 ರಲ್ಲಿ ಚಿತ್ತರಗಿ-ಇಳಕಲ್ಲ ಸದ್ಭಕ್ತರಿಂದ 'ಶಿವಾನುಭವ ಚರವರ್ಯ', 1971ರಲ್ಲಿ ರಾವೂರ(ಚಿತ್ತಾಪುರ) ಭಕ್ತರಿಂದ 'ವೀರಶೈವ ತತ್ವವೆತ್ತ ಸಮಾಜ ಸಂಘಟಕ ಪ್ರಶಸ್ತಿ'ಗಳು ಸಂದಿವೆ.

        ಅಲ್ಲದೆ, 1976 ರಲ್ಲಿ ಚಿತ್ತರಗಿ ಪೀಠದ ಭಕ್ತರಿಂದ 'ಮಹಾಂತ ಜೋಳಿಗೆಯ ಶಿವಶಿಲ್ಪಿ', 1981 ರಲ್ಲಿ ಧಾರವಾಡದ ಶ್ರೀ ಮುರುಘಾಮಠದಿಂದ 'ಲಿಂಗವಂತ ಧರ್ಮ ಪ್ರಚಾರ ಧುರೀಣ', 1992 ರಲ್ಲಿ ಅಥಣಿ ತಾಲೂಕು ಯೂಥ್‌ ಫೆಡರೇಶನ್‌ದಿಂದ 'ಅರಿವಿನ ಮೂರ್ತಿ ಹಾಗೂ ಸವದಿ ಭಕ್ತರಿಂದ ಸವದಿಯ ಸಿರಿ', 1995 ರಲ್ಲಿ ಚಿತ್ರದುರ್ಗದ ಶ್ರೀ ಮುರುಘಾಮಠದಿಂದ 'ಕಾಯಕಯೋಗಿ', 1998 ರಲ್ಲಿ ಭಾಲ್ಕಿಯ ಹಿರೇಮಠ ಸಂಸ್ಥಾನದಿಂದ 'ದಲಿತೋದ್ಧಾರ ಮಹಾಂತ', 2001ರಲ್ಲಿ ಚಿತ್ರದುರ್ಗದ ಶ್ರೀ ಮುರುಘಾಮಠದಿಂದ 'ಸಮಾಜ ಸುಧಾರಕ', 2002 ರಲ್ಲಿ ಅಥಣಿಯ ವಿಮೋಚನಾ ಸಂಸ್ಥೆಯಿಂದ 'ಹೇ ಅಮೃತ ನಿಧಿ', 2003 ರಲ್ಲಿ ಇಂಡಿಯನ್‌ ಸೈಕಿಯಾಟ್ರಿಕ್‌ ಸೊಸೈಟಿಯಿಂದ 'ಸ್ಪಂದನ ಪ್ರಶಸ್ತಿ', 2006 ರಲ್ಲಿ ಗದಗ-ಬೆಟಗೇರಿಯ ಅಂಬಿಗೇರ ಪ್ರತಿಷ್ಠಾನದಿಂದ 'ಗಣಾಚಾರ ಪ್ರಶಸ್ತಿ', ಅಥಣಿಯ ಕನಕದಾಸ ಸಾಹಿತ್ಯ-ಸಂಸ್ಕೃತಿ ವೇದಿಕೆಯಿಂದ 'ಕನಕಶ್ರೀ ಪ್ರಶಸ್ತಿ', 2007 ರಲ್ಲಿ ಬಾಗಲಕೋಟೆ ಬಸವೇಶ್ವರ ವಿದ್ಯಾವರ್ಧಕ ಸಂಘದಿಂದ 'ನಾಡಿನ ಪುಣ್ಯದ ಶಿವಯೋಗಿ ಪ್ರಶಸ್ತಿ', 2018 ರಲ್ಲಿ ಟಿವಿ9  ವಾಹಿನಿಯಿಂದ 'ಯೋಗರತ್ನ ಪ್ರಶಸ್ತಿ' ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಹಾಗೂ ಮಠಮಾನ್ಯಗಳಿಂದ ಹಲವಾರು ಪ್ರಶಸ್ತಿಗಳಿಗೆ ಮಹಾಂತ ಶ್ರೀಗಳು ಭಾಜರಾಗಿದ್ದರು.

          ವ್ಯಸನ ಮುಕ್ತ ವ್ಯಕ್ತಿ, ಗ್ರಾಮ ಸೇರಿದಂತೆ ಇಡೀ ಮಾನವ ಸಮಾಜವೇ ದುಷ್ಚಟಗಳಿಂದ ಮುಕ್ತರಾಗಬೇಕು. ಎಲ್ಲ ಜನರು ಉತ್ತಮ ಆರೋಗ್ಯ ಪಡೆಯಬೇಕು ಎನ್ನುವ ಬಹು ಸಮಾಜಮುಖಿ ಉದ್ದೇಶದಿಂದ ಶ್ರಮಿಸಿದ ಡಾ. ಮಹಾಂತ ಶಿವಯೋಗಿ ಅಜ್ಜನವರು. 2018 ರಲ್ಲಿ ಶ್ರೀಗಳು ಅಪಾರ ಸಂಖ್ಯೆಯ ಭಕ್ತಗಣವನ್ನು ಬಿಟ್ಟು ಇಹಲೋಕವನ್ನು ತ್ಯಜಿಸಿ ಶಿವೈಕ್ಯರಾದರು.

          ಲಿಂಗೈಕ್ಯ ಡಾ. ಮಹಾಂತ ಶಿವಯೋಗಿ ಅಜ್ಜನವರು ದೇಶ-ವಿದೇಶಗಳಲ್ಲಿ ಸಂಚರಿಸಿ, ಜನರಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣದ ಜನಜಾಗೃತಿ ಮೂಡಿಸಲು ಶ್ರಮಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪ್ರತಿ ವರ್ಷವೂ ಶ್ರೀಗಳ ಜನ್ಮದಿನವಾದ 'ಆಗಸ್ಟ್ 01 ಅನ್ನು ವ್ಯಸನ ಮುಕ್ತ ದಿನಾಚರಣೆ'ಯನ್ನಾಗಿ ರಾಜ್ಯಾದ್ಯಂತ ಆಚರಿಸುವ ಮೂಲಕ ಶ್ರೀಗಳ ಸಮಾಜ ಸೇವೆ ಸ್ಮರಿಸಿಕೊಳ್ಳುತ್ತಾ, ಸಮಾಜದ ಯುವ ಜನತೆ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಚಟಗಳಿಗೆ ಅಂಟಿಕೊಳ್ಳದೇ ದೂರವಿದ್ದು, ಸಾರ್ವಜನಿಕರು ಆರೋಗ್ಯಯುತ ಬದುಕು ಕಟ್ಟಿಕೊಳ್ಳುವಂತೆ ಜಾಗೃತಿಯ ಸಂದೇಶ ಸಾರುತ್ತಿದೆ.


ವಿಶೇಷ ಲೇಖನ:-

ರೇವಣಸಿದ್ದ ಬಗಲಿ

(ಅಪ್ರೆಂಟಿಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ.)

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



01-08-2024 EE DIVASA KANNADA DAILY NEWS PAPER

Tuesday, July 30, 2024

'ನಮ್ಮೂರು ನಮ್ಮ ಶಾಲೆ' ಚಿತ್ರಕಲಾ ಸ್ಪರ್ಧೆ



ವಿಜಯಪುರ : ವಿಜಯಪುರದ ಡ್ರೀಮ್ಸ್ ಕಮ್ಸ್ ಟ್ರು ವತಿಯಿಂದ ವಿಜಯಪುರದ ಗಾಂಧೀವೃತ್ತದ ಬಳಿ ಇರುವ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ನಂ.೬ ರಲ್ಲಿ `ನಮ್ಮೂರು ನಮ್ಮ ಶಾಲೆ' ಎಂಬ ವಿಷಯಾಧಾರಿತ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.

ಮಕ್ಕಳು ಉತ್ಸಾಹದಿಂದ ವಿಜಯಪುರದ ಐತಿಹಾಸಿಕ ಸ್ಮಾರಕಗಳ ಹಾಗೂ ತಮ್ಮ ಶಾಲೆಯ ಮಹತ್ವವನ್ನು ಪ್ರತಿಬಿಂಬಿಸುವ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು. ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಿ ಪ್ರೋತ್ಸಾಹಿಸಲಾಯಿತು.

ಕಾರ್ಯಕ್ರಮದ ರೂವಾರಿ ಹಾಗೂ ಡ್ರೀಮ್ಸ್ ಕಮ್ಸ್ ಟ್ರು ಸಂಸ್ಥೆಯ ಅಧ್ಯಕ್ಷ ಸರ್ಫರಾಜ್ ಮಿರ್ದೇ ಮಾತನಾಡಿ, ಮಕ್ಕಳು ಪ್ರತಿಭೆಯ ಆಗರ, ಪ್ರತಿಯೊಬ್ಬ ಮಗುವಿನಲ್ಲಿಯೂ ಪ್ರತಿಭೆ ಅಡಕವಾಗಿದೆ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವುದಕ್ಕಾಗಿ ಡ್ರೀಮ್ ಕಮ್ಸ್ ಟ್ರು ಅನೇಕ ಸಾಮಾಜಿಕ ಕಾರ್ಯಕ್ರಮ, ಸ್ಪರ್ಧಾ ಚಟುವಟಿಕೆಗಳನ್ನು ಆಯೋಜಿಸುತ್ತಿದೆ, ನಾವು ಇರುವ ಸ್ಥಳದ ಬಗ್ಗೆ, ನಾವು ಕಲಿಯುತ್ತಿರುವ ಶಾಲೆಯ ಬಗ್ಗೆ ಮಕ್ಕಳು ಸಮಗ್ರ ಜ್ಞಾನ ಹೊಂದಬೇಕಾಗಿರುವುದು ಅಗತ್ಯವಾಗಿದೆ, ಹೀಗಾಗಿ ಚಿತ್ರಕಲೆಯ ಮೂಲಕ ಅವರಲ್ಲಿ ಈ ಜ್ಞಾನ ಬಿತ್ತುವುದಕ್ಕಾಗಿ ಈ ವಿಶಿಷ್ಠ ಪೂರ್ಣ ಕಾರ್ಯಕ್ರಮ ಆಯೋಜಿಸಲಾಗಿದೆ, ಮುಂಬರುವ ದಿನಗಳಲ್ಲಿಯೂ ನಮ್ಮ ಶ್ರೇಷ್ಠ ಸಂವಿಧಾನದ ಮಹತ್ವ ಸಾರುವ ಚರ್ಚಾಗೋಷ್ಠಿ, ಯುವಕರಲ್ಲಿ ಕ್ರೀಡಾ ಜಾಗೃತಿಗಾಗಿ ಪಂದ್ಯಾವಳಿಗಳ ಆಯೋಜನೆಗೆ ಸಂಸ್ಥೆ ಕಾರ್ಯಯೋಜನೆ ರೂಪಿಸಿದೆ, ಜನರ ಸೇವೆ ನಮ್ಮ ಸಂಸ್ಥೆಯ ಗುರಿ, ವಿದ್ಯಾರ್ಥಿಗಳ ಪ್ರಗತಿ ನಮ್ಮ ಧ್ಯೇಯ, ಯುವಕರ ಸಬಲೀಕರಣ ನಮ್ಮ ಸಂಸ್ಥೆಯ ಉಸಿರಾಗಿದೆ ಎಂದರು.

ಡ್ರೀಮ್ಸ್ ಕಮ್ಸ್ ಟ್ರು ಉಪಾಧ್ಯಕ್ಷ ವಸೀಮ್ ಜಂಬಗಿ, ಕಾರ್ಯದರ್ಶಿ ಝಿಯಾ ಪಠಾಣ, ಬಿಆರ್‌ಪಿ ಮುನೀರ್ ಗುರಡ್ಡಿ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಪಾಲ್ಗೊಂಡಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Sunday, July 28, 2024

ಬ್ಲಾಕ್ ಮೇಲ್ ಮಾಡೋರು ಕಾರ್ಯನಿರತ ಪತ್ರಕರ್ತರಲ್ಲ, ಅವ್ರು ಕಿಸೆ ಕತ್ತರಿಸುವ ಪತ್ರಕರ್ತರು : ಯತ್ನಾಳ



ವಿಜಯಪುರ: ಪತ್ರಿಕೆ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡುವವರು ಕಾರ್ಯನಿರತ ಪತ್ರಕರ್ತರಲ್ಲ, ಅವರು ಕಿಸೆ ಕತ್ತರಿಸುವ ಪತ್ರಕರ್ತರು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ವಿಜಯಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ಮುಂಭಾಗದಲ್ಲಿರುವ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ನಾನು ಸತ್ಯವನ್ನೇ ಮಾತನಾಡುತ್ತೇನೆ, ಯಾರೊಂದಿಗೂ ನಾನು ಅಡ್ಜೆಸ್ಟಮೆಂಟ್ ರಾಜಕಾರಣ ಮಾಡುವುದಿಲ್ಲ, ಒಳ್ಳೆಯದು ಮಾಡಿದರೆ ಅದನ್ನು ಹೊಗಳುತ್ತೇನೆ, ಕೆಟ್ಟದ್ದು ಮಾಡಿದರೆ ಅದನ್ನು ಟೀಕಿಸುತ್ತೇನೆ, ನಮ್ಮವರೇ ಇರಲಿ ಯಾರೇ ಇರಲಿ, ನಾನು ಎಂದಿಗೂ ಮುಖ್ಯಮಂತ್ರಿಗಳ ಕಚೇರಿಗೆ ಹೋಗಿ ನಿಲ್ಲುವುದಿಲ್ಲ ಎಂದರು. 

ಈ ಸಂದರ್ಭ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಮಾತನಾಡಿ, ಸರ್ಕಾರಗಳು ತಪ್ಪಿದಾಗ ಎಚ್ಚರಿಸುವ ಕೆಲಸ ಮಾಡುವ ಪತ್ರಕರ್ತರ ಜೀವನ ಮಾತ್ರ ಕಷ್ಟಕರವಾಗಿದೆ, ಹಗಲು ರಾತ್ರಿ ಎನ್ನದೇ ದುಡಿಯುವ ಪತ್ರಕರ್ತರು ಜೀವನದಲ್ಲಿ ಅನೇಕ ಸವಾಲುಗಳನ್ನು ಎದುರಿಸುವಂತಾಗಿದೆ ಎಂದರು.

ಶಾಸಕಾAಗ, ಕಾರ್ಯಾಂಗ, ನ್ಯಾಯಾಂಗದAತೆ ಮಾಧ್ಯಮ ರಂಗ ನಾಲ್ಕನೇಯ ಅಂಗವಾಗಿ ತನ್ನ ಜವಾಬ್ದಾರಿ ನಿಭಾಯಿಸುತ್ತಿದೆ, ಪತ್ರಕರ್ತರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಪತ್ರಕರ್ತರಿಗಾಗಿ ಬಿಎಲ್‌ಡಿಇ ಸಂಸ್ಥೆಯ ವತಿಯಿಂದ ಆರೋಗ್ಯ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ಬಸವಾದಿ ಶರಣರ ವಿಚಾರಗಳನ್ನು ಬೆಳಕಿಗೆ ತಂದ ಶ್ರೇಯಸ್ಸು ಡಾ.ಹಳಕಟ್ಟಿ ಅವರಿಗೆ ಸಲ್ಲುತ್ತದೆ, ಇಂತಹ ಶ್ರೇಷ್ಠ ವ್ಯಕ್ತಿ ಡಾ.ಹಳಕಟ್ಟಿ ಪತ್ರಕರ್ತರ ಬಳಗಕ್ಕೆ ಸೇರಿದವರು ಎಂಬುದು ಸಹ ಪತ್ರಕರ್ತರಿಗೆ ಹಮ್ಮೆಯ ಸಂಗತಿ ಎಂದರು. 

ಈ ಸಂದರ್ಭ ಮುಖ್ಯಮಂತ್ರಿಗಳ ಪ್ರಧಾನ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಮಾತನಾಡಿ, ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಹಾಗೂ ಪತ್ರಕರ್ತರಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಗೃಹ ಮಂಡಳಿಯಲ್ಲಿ ಶೇ.5 ರಷ್ಟು ನಿವೇಶನಗಳನ್ನು ಪತ್ರಕರ್ತರಿಗೆ ಮೀಸಲಿರಸಲಾಗುತ್ತದೆ, ಈ ಸೌಲಭ್ಯವನ್ನು ಈ ಭಾಗದ ಪತ್ರಕರ್ತರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ವ್ಯಕ್ತಿ ಕೇಂದ್ರಿತ ಸುದ್ದಿಗಳೇ ಇಂದು ಮಾಧ್ಯಮಗಳಲ್ಲಿ ರಾರಾಜಿಸುತ್ತಿವೆ, ಶ್ರೀಮಂತ ಕುಟುಂಬಗಳ ಮದುವೆಗಳು ಗಂಟೆಗಟ್ಟಲೇ ಬಿತ್ತರವಾಗುತ್ತಿವೆ, ಈ ಎಲ್ಲದರ ಮಧ್ಯೆ ಮಾಧ್ಯಮಗಳ ಮೇಲೆ ವಿಶ್ವಾಸಾರ್ಹತೆಯೂ ಕಡಿಮೆಯಾಗುತ್ತಾ ಸಾಗಿದೆ ಎಂದರು. 

ರೈತರ, ಜನಸಾಮಾನ್ಯರ ಸಮಸ್ಯೆಗಳು ಮಾಧ್ಯಮಗಳಲ್ಲಿ ಬೆಳಕು ಚೆಲ್ಲುವ ಕೆಲಸ ನಡೆಯುತ್ತಿಲ್ಲ, ಒಂದು ರೀತಿ ಮಾಧ್ಯಮಕ್ಕೂ ಕಾರ್ಪೋರೇಟ್ ಸಂಸ್ಕೃತಿ ಕಾಲಿಟ್ಟಿದೆ, ವ್ಯಕ್ತಿ ಕೇಂದ್ರಿತ ಸುದ್ದಿಗಳು, ಬ್ರೇಕಿಂಗ್ ನ್ಯೂಸ್ ಅಬ್ಬರದಲ್ಲಿ ವಿಶ್ವಾಸಾರ್ಹತೆಯ ಕೊರತೆಯಾಗುತ್ತಿದೆ, ಹೀಗಾಗಿ ವಿಶ್ವಾಸಾರ್ಹತೆಯನ್ನು ಪುನರ್ ಸ್ಥಾಪಿಸಿಕೊಳ್ಳುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇರಿಸಬೇಕಿದೆ ಎಂದರು. 

ಅಭಿವ್ಯಕ್ತಿಯ ಸ್ವಾತಂತ್ರö್ಯವೇ ಪತ್ರಕರ್ತರ ಶಕ್ತಿ, ಆದರೆ ಈ ಸ್ವಾತಂತ್ರö್ಯ ದುರಪಯೋಗವಾದರೆ ದೊಡ್ಡ ದುರಂತವೇ ನಡೆದು ಹೋಗುತ್ತದೆ, ಪತ್ರಕರ್ತರು ಒಂದು ರೀತಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ರೀತಿ ಇರಬೇಕು, ಯತ್ನಾಳರು ತಾವು ಪ್ರತಿನಿಧಿಸುವ ಪಕ್ಷದವರು ತಪ್ಪು ಮಾಡಿದರೂ ಎತ್ತಿ ತೋರಿಸುತ್ತಾರೆ, ಸರ್ಕಾರ ತಪ್ಪು ಮಾಡಿದರೂ ಅದನ್ನು ಎಚ್ಚರಿಸುತ್ತಾರೆ, ಆ ರೀತಿ ಪತ್ರಕರ್ತರು ತಪ್ಪುಗಳನ್ನು ಎತ್ತಿ ತೋರಿಸಬೇಕು ಎಂದರು. 

ಈ ಸಂದರ್ಭ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಮಾತನಾಡಿ, ಬ್ರೇಕಿಂಗ್ ಅಬ್ಬರದಲ್ಲಿ ಪತ್ರಕರ್ತರ ವಿಶ್ವಾಸಾರ್ಹತೆಯ ಪ್ರಶ್ನೆ ಮಾಡುವ ಪರಿಸ್ಥಿತಿ ಒಂದೆಡೆ ಸೃಜನೆಯಾದರೆ, ನಾನು ಪತ್ರಕರ್ತ, ನಾನು ಪತ್ರಕರ್ತ ಎಂಬ ಹೆಸರು ಹೇಳುವವರ ಸಂಖ್ಯೆ ಅಧಿಕವಾಗುತ್ತಿದೆ, ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವುದು ಅತ್ಯಂತ ಅವಶ್ಯವಾಗಿದೆ.

ಪತ್ರಕರ್ತರು ಎಂದು ಹೇಳಿ ಬ್ಲಾಕ್‌ಮೇಲ್ ಮಾಡುವವರ ಸಂಖ್ಯೆಯೂ ಇದೆ, ಈ ರೀತಿ ವೃತ್ತಿಗೆ ದ್ರೋಹ ಎಸಗುವ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕುವ ಕೆಲಸ ನಡೆಯಬೇಕಿದೆ, ಎಂದೋ ಒಂದು ದಿನ ಪತ್ರಿಕೆ ಹೊರತಂದು ಪತ್ರಕರ್ತರ ಎಂದು ಹೇಳಿಕೊಳ್ಳುವವರು ಇದ್ದಾರೆ ಎಂದರು.

ಶ್ರೇಷ್ಠ ಸಾಹಿತಿ ಡಾ.ಡಿ.ವಿ. ಗುಂಡಪ್ಪ ಅವರು ಸ್ಥಾಪಿಸಿದ ಕಾನಿಪ ಇಂದು ಹೆಮ್ಮರವಾಗಿ ಬೆಳೆದು ಕೇರಳ, ಮಹಾರಾಷ್ಟç ಮೊದಲಾದ ರಾಜ್ಯಗಳಲ್ಲಿ ವ್ಯಾಪಿಸಿಕೊಂಡು ವಿಸ್ತಾರವಾಗಿ ಬೆಳೆಯುತ್ತಾ ಸಾಗಿದೆ ಎಂದರು.

ಖಾದ್ರಿ ಶಾಮಣ್ಣ, ಎಸ್.ವಿ. ಜಯಶೀಲ್‌ರಾವ್ ಸೇರಿದಂತೆ ಅನೇಕ ಮಹಾನುಭಾವರು ಈ ಸಂಘದ ಸಾರಥ್ಯ ವಹಿಸಿ ಸಂಘವನ್ನು ಮುನ್ನಡೆಸಿದ ಪರಿಣಾಮ ಸಂಘ ಎತ್ತರಕ್ಕೆ ಬೆಳೆದಿದೆ, ಸುದೀರ್ಘ ಇತಿಹಾಸವುಳ್ಳ ಬೃಹತ್ ಸಂಘಟನೆಯಾಗಿ ತನ್ನ ಜವಾಬ್ದಾರಿಯನ್ನು ಕಾನಿಪ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದರು. 

ಸದನದಲ್ಲಿಯೂ ಪತ್ರಕರ್ತರ ಹಿತರಕ್ಷಣೆಯ ಬಗ್ಗೆ ಚರ್ಚೆಯಾಗುತ್ತಿದೆ. ಪತ್ರಕರ್ತರ ಹಿತರಕ್ಷಣೆಗೆ ಪೂರಕವಾದ ಸೌಲಭ್ಯ ಕಲ್ಪಿಸುವಂತೆ ಸರ್ಕಾರ, ಸಂಬAಧಿಸಿದ ಇಲಾಖೆಗಳಿಗೆ ನಿರಂತರವಾಗಿ ಮನವಿ, ಮನವರಿಕೆ ಮಾಡಿಕೊಡುವ ಕೆಲಸವನ್ನು ಸಂಘ ಮುಂಚೂಣಿಯಲ್ಲಿ ನಿಂತು ಮಾಡುತ್ತಿದೆ ಎಂದರು.

ಮಾಧ್ಯಮಗಳಿಗೆ ಅದಮ್ಯ ಶಕ್ತಿ ಇದೆ, ಮಾಧ್ಯಮಕ್ಕೆ ಒಂದು ದೊಡ್ಡ ಜವಾಬ್ದಾರಿ ಇದೆ, ಒಂದು ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಸಹ ಪತ್ರಿಕಾಗೋಷ್ಠಿ ನಡೆಸಿ ತಮ್ಮ ವಿಚಾರಗಳನ್ನು ಮಾಧ್ಯಮಗಳ ಮುಂದೆ ವ್ಯಕ್ತಪಡಿಸಿದ್ದರು ಎಂಬುದನ್ನು ಮರೆಯುವಂತಿಲ್ಲ ಎಂದರು.

ಈ ಸಂದರ್ಭ ಕಾನಿಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಜಿಲ್ಲಾಧಿಕಾರಿ ಟಿ. ಭೂಬಾಲನ್, ವಿಡಿಎ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಕಾನಿಪ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಕಾನಿಪ ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ ಸೋನಾವನೆ, ಚಾಣಕ್ಯ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಎನ್.ಎಂ. ಬಿರಾದಾರ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಕಾನಿಪ ರಾಜ್ಯ ಪದಾಧಿಕಾರಿ ದೇವರಾಜ್, ಡಾ.ಎಂ.ಎಸ್. ಮದಭಾವಿ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.





29-07-2024 EE DIVASA KANNADA DAILY NEWS PAPER

ಈ ಬೇರುಗಳನ್ನು ಗಟ್ಟಿಗೊಳಿಸುವ ಜವಾಬ್ದಾರಿ ಜಿಲ್ಲೆಯ ಪತ್ರಕರ್ತರ ಮೇಲಿದೆ: ಕೆವಿಪಿ



ಬಾಗಲಕೋಟೆ: ಗಾಂಧಿವಾದ ಮತ್ತು ಸಮಾಜವಾದಿ ಆಶಯಗಳು ಆಳವಾಗಿ ಬೇರೂರಿರುವ ನೆಲ ಬಾಗಲಕೋಟೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. 

ಈ ಬೇರುಗಳನ್ನು ಗಟ್ಟಿಗೊಳಿಸುವ ಜವಾಬ್ದಾರಿ ಜಿಲ್ಲೆಯ ಪತ್ರಕರ್ತರ ಮೇಲಿದೆ.‌ ಪ್ರಜಾಪ್ರಭುತ್ವ ವಚನ ಚಳವಳಿಯ ಅಂತರಾಳ. ಬಾಗಲಕೋಟೆ ಸೂಫಿ-ಶರಣರ-ವಚನ ಚಳವಳಿಯ ನಾಡು. ಪ್ರಜಾಪ್ರಭುತ್ವದ ಸ್ಥಾಪನೆ ಮತ್ತು ರಕ್ಷಣೆ ವಚನ ಚಳವಳಿಯ ಆಶಯವೂ ಆಗಿದೆ. ಇದು ಪತ್ರಿಕಾ ವೃತ್ತಿಯ ಹೊಣೆಗಾರಿಕೆಯೂ ಆಗಿದೆ ಎಂದರು. 

ನಾನು ಮುಖ್ಯಮಂತ್ರಿಗಳ ಜೊತೆಗಿದ್ದ ಈ ಹತ್ತು ವರ್ಷಗಳಲ್ಲಿ ನಾನು ಗಮನಿಸಿರುವುದು ಏನೆಂದರೆ, ಮುಖ್ಯಮಂತ್ರಿಗಳಿಗೆ ಭಾಗಲಕೋಟೆ ಜಿಲ್ಲೆಗೆ ಹೋಗೋದು ಅಂದರೆ ತಮ್ಮ ತವರು ಜಿಲ್ಲೆ ಮೈಸೂರಿಗೆ ಹೋದಷ್ಟೇ ಸಂಭ್ರಮ ಪಡುತ್ತಾರೆ.  ವಿಧಾನಸೌಧದಲ್ಲಿ ಬಾದಾಮಿಯವರು ಕಂಡರೆ ಕಾರು ನಿಲ್ಲಿಸಿ ಹತ್ತಿರಕ್ಕೆ ಕರೆದು ಆತ್ಮೀಯವಾಗಿ ಮಾತನಾಡುತ್ತಾರೆ ಎಂದು ತಮ್ಮ ಅನುಭವ ಹಂಚಿಕೊಂಡರು. 

ಪತ್ರಕರ್ತರು ತಮ್ಮ ಹಾಗೂ ಕುಟುಂಬದ ಆರೋಗ್ಯದ ಕಡೆಗೂ ಗಮನ ಹರಿಸಿ ಎಂದು ಕಿವಿ ಮಾತು ಹೇಳಿದ ಪ್ರಭಾಕರ್ ಅವರು, ಬಡ ಮತ್ತು ನಿಜವಾದ ವೃತ್ತಿಪರ ಪತ್ರಕರ್ತ ಕುಟುಂಬಗಳ ಯೋಗಕ್ಷೇಮಕ್ಕಾಗಿ ಒಂದು ಉತ್ತಮವಾದ ಯೋಜನೆ ರೂಪಿಸುವ ಅಗತ್ಯವಿದೆ. ಆ ದಿಕ್ಕಿನಲ್ಲಿ ಪ್ರಯತ್ನಗಳು ಸಾಗಿವೆ ಎಂದರು. 

ಮುಂದಿನ 15-20 ದಿನಗಳಲ್ಲಿ ಕಾರ್ಯನಿರತ ಗ್ರಾಮೀಣ ಪತ್ರಕರ್ತರ ಕೈಗೆ ಉಚಿತ ಬಸ್ ಪಾಸ್ ಸಿಗುವ ಸಿದ್ಧತೆಗಳು ಮುಗಿದಿವೆ. ಕಾರ್ಯ ಮರೆತ ಪತ್ರಕರ್ತರು ಮತ್ತು ವೃತ್ತಿ ತೊರೆದ ಪತ್ರಕರ್ತರು ಸರ್ಕಾರದ ಈ ಯೋಜನೆ ದುರುಪಯೋಗ ಆಗದಂತೆ ಸಹಕರಿಸಿ ಎಂದು ಮನವಿ ಮಾಡಿದರು. 

ಸರ್ಕಾರಿ ನಿವೇಶನ ಬಗ್ಗೆ ಸಚಿವರ ಜೊತೆ ಚರ್ಚಿಸಿದ ಕೆವಿಪಿ 

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅವರ ಜೊತೆ ಚರ್ಚಿಸಿದ ಪ್ರಭಾಕರ್ ಅವರು ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ಕೊಡಿಸುವ ಬಗ್ಗೆ ವಿನಂತಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ತಿಮ್ಮಾಪುರ್ , ಜಿಲ್ಲಾಧಿಕಾರಿ ಜಾನಕಿ, ಸಿಇಓ ಕುರೇನ್, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.‌

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಕಾರ್ಪೋರೇಟ್ ಗಳ ಶ್ರೀಮಂತಿಕೆಯ ವಿಜ್ರಂಭಣೆಯೇ ಪತ್ರಿಕೋದ್ಯಮಕ್ಕೆ ಆಧ್ಯತೆ ಆಗುತ್ತಿರುವುದು ನಾಚಿಕೆಗೇಡು: ಕೆವಿಪಿ



ವಿಜಯಪುರ : ಈ ನೆಲದ ಬಹುತ್ವವನ್ನು ಕಾಪಾಡುವುದೇ ಪತ್ರಿಕೋದ್ಯಮದ ಹೊಣೆಗಾರಿಕೆ ಆಗಬೇಕಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. 

ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ವಿಜಯಪುರ ಬಹು ಸಂಸ್ಕೃತಿ ಮತ್ತು ಬಹು ಭಾಷೆಗಳ, ಹಲವು ಸಂಸ್ಕಾರಗಳನ್ನು ಏಕ ಕಾಲಕ್ಕೆ ಆಚರಿಸುವ ಜಿಲ್ಲೆ. ಈ ಬಹುತ್ವವೇ ನಮ್ಮ ನಾಡಿನ ಹೆಮ್ಮೆ. ಈ ಬಹುತ್ವವನ್ನು ಕಾಪಾಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು. 

ಈ ವೇದಿಕೆಯ ಮೇಲೆ, ಈ ವೇದಿಕೆಯ ಮುಂಭಾಗದಲ್ಲಿ ಹಲವು ಸಂಸ್ಕೃತಿ ಮತ್ತು ಹಲವು ಭಾಷಿಕರು ನೆರೆದಿದ್ದೇವೆ. ಇದು ಈ ಜಿಲ್ಲೆಯ ಬಹುತ್ವದ ಸಂಕೇತ ಕೂಡ ಹೌದು. ಇಲ್ಲಿ, ನನ್ನ ಬಲಗಡೆ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಭಾವ ಚಿತ್ರಗಳನ್ನು ಅಳವಡಿದ್ದಾರೆ.  ಬುದ್ದನಿಂದ ಹಿಡಿದು ಅಂಬೇಡ್ಕರ್ ಅವರ ವರೆಗೂ ಏನೇನು ಹೇಳಿದ್ದಾರೋ, ಯಾವುದಕ್ಕಾಗಿ ಶ್ರಮಿಸಿದ್ದಾರೋ ಅದನ್ನು ಕಾಪಾಡಿಕೊಳ್ಳುವುದೇ ಪತ್ರಕರ್ತರ ಜವಾಬ್ದಾರಿ ಮತ್ತು ಪತ್ರಿಕೋದ್ಯಮದ ಹೊಣೆಗಾರಿಕೆ ಆಗಿದೆ. 

ನಮ್ಮ ಸಂವಿಧಾನದಲ್ಲಿ ಪತ್ರಕರ್ತರಿಗೆ ಪ್ರತ್ಯೇಕ ಹಕ್ಕು, ಅಧಿಕಾರಗಳನ್ನೇನೂ ನೀಡಿಲ್ಲ. ಸಂವಿಧಾನ ನೀಡಿರುವ ಅಭಿವ್ಯಕ್ತಿ‌ ಸ್ವಾತಂತ್ರ್ಯವೇ  ಪತ್ರಿಕಾ ಸ್ವಾತಂತ್ರ್ಯವೂ ಆಗಿದೆ. ಈ ಅಭಿವ್ಯಕ್ತ ಸ್ವಾತಂತ್ರ್ಯದ ದುರುಪಯೋಗ ಆದಾಗ ಎಂತೆಂಥಾ ಅನಾಹುತಗಳು ಆಗುತ್ತವೆ ಎನ್ನುವುದನ್ನು ಈಗಾಗಲೇ ಈ ಸಮಾಜ ಕಂಡಿದೆ ಎಂದು ಉದಾಹರಣೆಗಳ ಸಮೇತ ವಿವರಿಸಿದರು. 

ಸಂವಿಧಾನದ ರಕ್ಷಣೆಯಿಂದ ಮಾತ್ರ ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆ ಸಾಧ್ಯ. ಜನರ ನಿರೀಕ್ಷೆ ಮತ್ತು ಸಮಸ್ಯೆಗಳನ್ನು ಅರಿಯಲು ಸರ್ಕಾರಕ್ಕಾಗಲಿ, ವಿರೋಧ ಪಕ್ಷಕ್ಕಾಗಲಿ ಇರುವ ಬಹುಮುಖ್ಯ ಸಾಧನ ಮಾಧ್ಯಮ. ಮೊದಲೆಲ್ಲಾ ಜನರ ನಿರೀಕ್ಷೆಗಳನ್ಮು ಮಾಧ್ಯಮಗಳು ಸರ್ಕಾರದ ಗಮನಕ್ಕೆ ತರುತ್ತಿದ್ದವು. ಈಗ ಪರಿಸ್ಥಿತಿ ಬದಲಾಗಿದೆ. ಕಾರ್ಪೋರೇಟ್ ಶ್ರೀಮಂತರ ವೈಯುಕ್ತಿಕ ಹಿತಾಸಕ್ತಿಗಳೇ ಜನರ ಸಮಸ್ಯೆಗಳು ಎನ್ನುವಂತೆ ಬಿಂಬಿಸಲಾಗುತ್ತಿದೆ. 

ಕಾರ್ಪೋರೇಟ್ ಸಂಸ್ಥೆಗಳು ಮಾಧ್ಯಮ ಲೋಕವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡ ಬಳಿಕ ಮನರಂಜನೆ ಮತ್ತು ಸುದ್ದಿಗಳ ಆಧ್ಯತೆ ಎರಡೂ ಬದಲಾಗಿವೆ ಎಂದರು. 


ಕಾರ್ಪೋರೇಟ್ ಗಳ ಶ್ರೀಮಂತಿಕೆಯ ವಿಜ್ರಂಭಣೆ ಮತ್ತು ಸೆಲೆಬ್ರಿಟಿಗಳ ಜೀವನ ವಿಕೃತಿಗಳ ವಿಜ್ರಂಭಣೆಯೇ ಪತ್ರಿಕೋದ್ಯಮಕ್ಕೆ ಆಧ್ಯತೆ ಆಗುತ್ತಿರುವುದು  ನಾಚಿಕೆಗೇಡು ಅಲ್ಲವೇ ಎಂದು ಪ್ರಶ್ನಿಸಿದರು. 

ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ಫ.ಗು.ಹಳಕಟ್ಟಿಯವರ ಕುರಿತು ವಿಶೇಷ ಉಪನ್ಯಾಸ ನೀಡಲಾಯಿತು. 

ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾ ಮತ್ತು ತಾಲ್ಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Friday, July 26, 2024

ಐತಿಹಾಸಿಕ ತಾಜಬಾವಡಿ ಸುತ್ತಲಿನ ಅತಿಕ್ರಮಣ ತೆರವು


ವಿಜಯಪುರ : ಐತಿಹಾಸಿಕ ವಿಜಯಪುರ ನಗರವನ್ನು ಅಂತರರಾಷ್ಟಿçÃಯ ಮಟ್ಟದ ಪ್ರವಾಸಿ ತಾಣವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ತಾಜಬಾವಡಿ ಸುತ್ತಲಿನ ಪ್ರದೇಶದ ಅತಿಕ್ರಮಣವನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು. 

 ಐತಿಹಾಸಿಕ ತಾಜಬಾವಡಿ ಹತ್ತಿರದ ಸುತ್ತಮುತ್ತಲಿನ ಸಾರ್ವಜನಿಕ ರಸ್ತೆ, ಸರ್ಕಾರಿ ಜಾಗೆ ಮೆಲೆ ಅನಧಿಕೃತವಾಗಿ ಒತ್ತು ಮಾಡಿ ನಿರ್ಮಿಸಿದ ಕಟ್ಟಡಗಳ ಭಾಗ- ರಚನೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಕೈಗೊಳ್ಳಲಾಯಿತು. ಅನಧಿಕೃತವಾಗಿ ಒತ್ತುವರಿ ಮಾಡಿ ನಿರ್ಮಿಸಿದ ಕಟ್ಟಡಗಳ ಭಾಗ-ರಚನೆಗಳನ್ನು ತೆರವುಗೊಳಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಉನ್ನತೀಕರಿಸುವ ಕಾರ್ಯ ಕೈಗೊಳ್ಳುವುದು ಅವಶ್ಯಕವಿದ್ದ ಕಾರಣ ಈಗಾಗಲೇ ರಸ್ತೆ ಅತಿಕ್ರಮಣ ಮಾಡಿ ಕಟ್ಟಡ ನಿರ್ಮಿಸಿದ ಭಾಗಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಿ ಸೂಚನೆ ಸಹ ನೀಡಲಾಗಿತ್ತು. 

 ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ತೆರವು ಕಾರ್ಯಾಚರಣೆ ಪರಿಶೀಲನೆ ನಡೆಸಿ, ಐತಿಹಾಸಿಕ ತಾಜ್‌ಬಾವಡಿ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸಂರಕ್ಷಣೆ ಮಾಡಲು ವರ್ಲ್ಡ ಮಾನುಮೆಂಟ್ ಫಂಡ್ ಇಂಡಿಯಾ ಅಸೋಸಿಯೇಶನ್ ಸಂಸ್ಥೆ ನಿರ್ಧರಿಸಿದ್ದು, ಈ ಕಾರ್ಯಕ್ಕೆ ಟಿಸಿಎಸ್ ಫೌಂಡೇಶನ್ ಸಂಸ್ಥೆ ಸಿ.ಎಸ್.ಆರ್. ನಿಧಿಯಡಿ ಅಭಿವೃದ್ದಿಗೊಳಿಸಲು ಉದ್ದೇಶಿಸಲಾಗಿದೆಮುಂಬರುವ ದಿನಗಳಲ್ಲಿ ಕೂಡ ನಗರದ ವಿವಿಧೆಡೆ ಒತ್ತುವರಿಯಾಗಿರುವ ಪ್ರದೇಶವನ್ನು ಗುರುತಿಸಿ ನಿಯಮಾನುಸಾರ ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 



 ಅತಿಕ್ರಮಣ ತೆರವು ಕಾರ್ಯಾಚರಣೆಯು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಾಲಿಕೆಯ ವಲಯ ಆಯುಕ್ತ ಸುನೀಲ ಪಾಟೀಲ, ಉಪ ಆಯುಕ್ತ ವಿಠ್ಠಲ ಹೊನ್ನಳ್ಳಿ, ಕಾರ್ಯಪಾಲಕ ಅಭಿಯಂತರ ವಿದ್ಯಾಧರ ನ್ಯಾವಗೊಂಡ, ಸಹಾಯಕ ಕಾರ್ಯಪಾಲಕ ಅಭಿಯಂತರ ಯಲ್ಲಪ್ಪ ಹಳ್ಳಿ ಸೇರಿದಂತೆ ಪಾಲಿಕೆ ಅಧಿಕಾರಿ-ಸಿಬ್ಬಂದಿಗಳು ಭಾಗವಹಿಸಿದ್ದರು. ಕಾರ್ಯಾಚರಣೆ ಸಹಕಾರ ಹಾಗೂ ಭದ್ರತೆ ಒದಗಿಸಿದ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಪಾಲಿಕೆ ಆಯುಕ್ತರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

27-07-2024 EE DIVASA KANNADA DAILY NEWS PAPER

Thursday, July 25, 2024

26-07-2024 EE DIVASA KANNADA DAILY NEWS PAPER

ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ


ವಿಜಯಪುರ  : ಮಹಾರಾಷ್ಟçದ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯ ಪೂರ್ಣಗೊಳ್ಳುವ ಹಂತದಲ್ಲಿದ್ದು, ನದಿಪಾತ್ರಕ್ಕೆ ನೀರು ಹರಿಸುವುದರಿಂದ ಮುನ್ನೆಚ್ಚರಿಕೆಯಾಗಿ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಕೆಸ್ವಾನ ಸಭೆಯಲ್ಲಿ ಮಾತನಾಡಿ, ಜಲಾಶಯದಿಂದ ಹೆಚ್ಚುವರಿ ನೀರು ಹರಿಸುವುದರಿಂದ ಮುನ್ನೆಚ್ಚರಿಕೆಯಾಗಿ ಸಂಬAಧಿಸಿದ ತಹಶೀಲ್ದಾರರು ತಮ್ಮ ವ್ಯಾಪ್ತಿಯಲ್ಲಿ ಅಪಾಯಕ್ಕೊಳಗಾಗುವ ಪ್ರದೇಶವನ್ನು ಗುರುತಿಸಿಕೊಂಡು ಯಾವುದೇ ಹಾನಿ ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು. ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಜನ-ಜಾನುವಾರುಗಳಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಸೇರಿದಂತೆ ಸೂಕ್ತ ಸ್ಥಳಗಳಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. 

ಮುದ್ದೇಬಿಹಾಳ, ನಿಡಗುಂದಿ, ಕೋಲಾರ ತಾಲೂಕಿನ ಆಯಾ ತಹಶೀಲ್ದಾರ್‌ಗಳು ಕೆಬಿಜೆಎನ್‌ಎಲ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಂಟ್ರೋಲ್ ರೂಂ ಸ್ಥಾಪಿಸಿ, ದಿನದ 24 ಗಂಟೆ ನಿಗಾವಹಿಸಬೇಕು. ಕೃಷ್ಣಾ ನದಿತೀರದ ಜನ, ಜಾನುವಾರಗಳ ಸುರಕ್ಷತೆಗೆ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಟಾಸ್ಕ್ ಪೋರ್ಸ್ ಸಮಿತಿ ದಿನದ 24 ಗಂಟೆಯೂ ನಿರ್ವಹನೆಗೆ ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ಅವರು ಸೂಚನೆ ನೀಡಿದರು.

ಡೋಣಿ ನದಿ ಪಾತ್ರದ 23, ಭೀಮಾ ನದಿ ಪಾತ್ರದ 16, ಕೃಷ್ಣಾ ನದಿ ಪಾತ್ರದ 9 ಗ್ರಾಮ ಪಂಚಾಯತ್‌ಗಳು ನಿರಂತರ ನೀರಿನ ಮಟ್ಟದ ಮಾಹಿತಿಯನ್ನು ಸಂಗ್ರಹಿಸಬೇಕು. ಗ್ರಾಮ ಪಂಚಾಯತ್, ತಾಲೂಕು ಆಡಳಿತ, ಟಾಸ್ಕ್ ಪೋರ್ಸ ಸಭೆ ನಡೆಸಬೇಕು. ಮುನ್ನೆಚರಿಕೆ ಕ್ರಮವಾಗಿ ನದಿ ಪಾತ್ರಕ್ಕೆ ಜನ, ಜಾನುವಾರು ತೆರಳದಂತೆ ಡಂಗೂರ ಸಾರಿ ಜಾಗೃತಿ ಮೂಡಿಸಬೇಕು. ಜನ-ಜಾನುವಾರುಗಳ ಹಾನಿ ಸಂದರ್ಭದಲ್ಲಿ ನಿಯಮಾನುಸಾರ ಪರಿಹಾರಕ್ಕೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಡೆಂಗ್ಯೂ ನಿಯಂತ್ರಣ: ಡೆಂಗ್ಯೂ ನಿಯಂತ್ರಣಕ್ಕಾಗಿ ಮುಂಜಾಗೃತವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರು ನಿಲ್ಲದಂತೆ, ಹಾಗೂ ಚರಂಡಿ, ರಾಜಕಾಲುವೆಗಳ ಸ್ವಚ್ಚತೆ, ಫಾಗಿಂಗ್, ಬ್ಲೀಚಿಂಗ್ ಪೌಡರ್ , ಸಿಂಪರಣೆ ಮಾಡಬೇಕು. ಕೆರೆ, ನೀರು ನಿಲ್ಲುವ ಪ್ರದೇಶದಲ್ಲಿ ಮೀನುಮರಿಗಳನ್ನು ಬಿಡುವ ಮೂಲಕ ಸೊಳ್ಳೆಯ ಮೊಟ್ಟೆಗಳ ನಾಶಕ್ಕೆ ಕ್ರಮ ವಹಿಸಬೇಕು. ವಾರಕ್ಕೆ ಒಂದು ಸಲ ಕಡ್ಡಾಯವಾಗಿ ನೀರಿನ ತೊಟ್ಟಿ, ಟ್ಯಾಂಕರ್, ಶುಚಿಗೊಳಿಸಬೇಕು. ಹಳ್ಳಿಯಲ್ಲಿ ಗ್ರಾಮ ಪಂಚಾಯತಿಯ ಅಧಿಕಾರಿಗಳು, ತಾಲೂಕಿನಲ್ಲಿ ಪುರಸಭೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು. 

ಜಿಲ್ಲೆಯ ಎಲ್ಲಾ ಸರಕಾರಿ ಕಟ್ಟಡಗಳು, ಆಸ್ಪತ್ರೆಗಳ ಸ್ವಚ್ಚತೆಗೆ ಆಧÀ್ಯತೆ ನೀಡಬೇಕು. ಕಸ ವಿಂಗಡನೆ ಮಾಡಿ ಸಮರ್ಪಕವಾಗಿ ವಿಲೇವಾರಿ ಮಾಡಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆಗಳು ಹರಡದಂತೆ ಕಡಿವಾಣ ಹಾಕಬೇಕು ಈ ಕುರಿತು ಸಾರ್ವಜನಿಕರಲ್ಲಿ ಅಗತ್ಯ ಜಾಗೃತಿ ಮೂಡಿಸುವಂತೆ ಅವರು ಸೂಚನೆ ನೀಡಿದ ಅವರು, ಸಾರ್ವಜನಿಕರೂ ಸಹ ತಮ್ಮ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಸಹಕರಿಸಬೇಕು ಎಂದು ಈ ಸಂದರ್ಭದಲ್ಲಿ ಅವರು ಕೋರಿದ್ದಾರೆ.

ಆಯಾ ತಹಶೀಲ್ದಾರ್ ತಮ್ಮ ವ್ಯಾಪ್ತಿಯಲ್ಲಿನ ಪುರಸಭೆ ಮುಖ್ಯಾಧಿಕಾರಿ, ತಾಲೂಕಾ ಆರೋಗ್ಯ ಅಧಿಕಾರಿ, ತಾಲೂಕಾ ಪಂಚಾಯತ್ ಇಒ ಕಡ್ಡಾಯವಾಗಿ ತಾಲೂಕಿನಲ್ಲಿ ಟಾಸ್ಕ್ ಫೋರ್ಸ್ ಸಭೆ ನಡೆಸಬೇಕು. ಡೆಂಗ್ಯೂ ವಾರ್ ರೂಂ ನಿರ್ವಹಣೆ ವ್ಯವಸ್ಥಿತವಾಗಿ ನಡೆಸಬೇಕು. ದೂರು ಅಥವಾ ಕರೆ ಬಂದರೆ ತಕ್ಷಣ ಸ್ಪಂದಿಸಿ ಕ್ರಮ ವಹಿಸಬೇಕು. ಡೆಂಗ್ಯೂ ಜಾಗೃತಿ ಬಗ್ಗೆ ಕರಪತ್ರ, ಪೋಸ್ಟರ್, ತಿಳುವಳಿಕೆ, ಮೂಡಿಸಬೇಕು ಎಂದು ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಡೆಂಗ್ಯೂ ನಿಯಂತ್ರಣ ಸಲುವಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪಿಡಿಒ ಹಾಗೂ ಸಿಬ್ಬಂದಿಗಳಿಗೆ ಗ್ರಾಮಗಳಲ್ಲಿ ಸ್ವಚ್ಚತೆ ಹಾಗೂ ಜಾಗೃತಿ ಮೂಡಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.

 ಬೆಳೆ ಪರಿಹಾರ-ಸರ್ವೇ: ಬೆಳೆಗಳ ಬಗ್ಗೆ ಸರಿಯಾಗಿ ಮಾಹಿತಿ ಸಂಗ್ರಹಿಸಿ, ರೈತರು ಬೆಳೆದ ಬೆಳೆೆ ಮಾಹಿತಿ ದಾಖಲಿಸಿ ಅವರಿಗೆ ಬೆಳೆ ವಿಮೆ ಹಾಗೂ ಸರ್ಕಾರದ ಸೌಲಭ್ಯಗಳು ತಪ್ಪದಂತೆ ಕ್ರಮವಹಿಸಬೇಕು. ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಖುದ್ದಾಗಿ ರೈತರ ಹೊಲಗಳಿಗೆ ತೆರಳಿ ನಿಖರವಾದ ಮಾಹಿತಿ ಒದಗಿಸಬೇಕು. ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಅಸಡ್ಡೆ ತೋರಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ರಾಜಶೇಖರ ವಿಲಿಯಮ್ಸ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ರಾಹುಲಕುಮಾರ ಬಾಗಲದೊಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲೀಕ್ ಮಾನವರ, ತಾಲೂಕಿನ ತಹಶೀಲ್ದಾರ್, ಕೃಷಿ ಇಲಾಖೆ ಅಧಿಕಾರಿಗಳು, ಜಿಪಂ, ತಾಪಂ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, July 23, 2024

ರಾಜ್ಯಕ್ಕೆ ಚೊಂಬು ನೀಡಿದ ನಿರ್ಮಲಾ ಸೀತಾರಾಮನ್‌- ಸಿಎಂ

 


ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್‌ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಹಿತವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ರಾಜ್ಯದ ಜನತೆಯ ಕೈಗೆ ಚೊಂಬು ಕೊಟ್ಟಿದ್ದಾರೆ. ಪ್ರಧಾನ ಮಂತ್ರಿಗಳು ತನ್ನ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಕಡೆಗಣಿಸಿದ್ದಾರೆ ಎಂದರು.

ಬಜೆಟ್‌ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರ ಹಲವಾರು ಮನವಿಗಳನ್ನು ಮುಂದಿರಿಸಿತ್ತು. ಆದರೆ ಯಾವುದೇ ಬೇಡಿಕೆಗಳಿಗೂ ಕೇಂದ್ರ ಹಣಕಾಸು ಸಚಿವರು ಸ್ಪಂದಿಸಿಲ್ಲ.

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಒದಗಿಸುವುದಾಗಿ ಹಿಂದಿನ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮ್‌ ಅವರು ಘೋಷಿಸಿದ್ದರು. ಆದರೆ ಈ ಯೋಜನೆಗೆ ನಯಾ ಪೈಸೆ ಒದಗಿಸಿಲ್ಲ. ಈ ಆಯವ್ಯಯದಲ್ಲಿ ಒದಗಿಸುವಂತೆ ಕೋರಲಾಗಿತ್ತು. ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈ ವರ್ಷ 5ಸಾವಿರ ಕೋಟಿ ರೂ. ಅನುದಾನ ಒದಗಿಸುತ್ತಿದೆ. ಆದರೆ ಇದಕ್ಕೆ ಪೂರಕವಾಗಿ ಹಿಂದುಳಿದ ತಾಲ್ಲೂಕುಗಳಿಗೆ ಅನುದಾನ ಒದಗಿಸುವಂತೆ ಮನವಿ ಮಾಡಲಾಗಿತ್ತು. ಇದೇ ರೀತಿ ಮಹಾದಾಯಿ ಯೋಜನೆ, ಮೇಕೆದಾಟು ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡದೆ ರೈತರಿಗೆ ಮೋಸ ಮಾಡಿದ್ದಾರೆ.

15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಪೆರಿಫೆರಲ್‌ ರಸ್ತೆ ನಿರ್ಮಾಣ, ಕೆರೆಗಳ ಅಭಿವೃದ್ಧಿ, ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳಿಗೆ ಒಟ್ಟು 11,485 ಕೋಟಿ ರೂ. ಅನುದಾನವನ್ನು ನೀಡುವಂತೆ ಕೋರಲಾಗಿತ್ತು. ಜೊತೆಗೆ ಹಲವಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವಂತೆ ಬೇಡಿಕೆಯಿದ್ದು, ಬಜೆಟ್‌ ಪೂರ್ವಭಾವಿ ಸಭೆಯಲ್ಲಿಯೂ ಈ ಕುರಿತು ಬೇಡಿಕೆ ಸಲ್ಲಿಸಲಾಗಿತ್ತು. ಈ ಯಾವ ಮನವಿಗಳಿಗೂ ಕೇಂದ್ರ ಸರ್ಕಾರ ಮನ್ನಣೆ ನೀಡಿಲ್ಲ.

ಈ ಹಿಂದಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಘೋಷಿಸಿದ್ದ ಯೋಜನೆಗಳಿಗೇ ಕೇಂದ್ರ ಸರ್ಕಾರ ಇನ್ನೂ ಯಾವುದೇ ಅನುದಾನ ಒದಗಿಸಿಲ್ಲ. ಹೀಗಾಗಿ ಈ ಬಾರಿ ಕೈಗಾರಿಕಾ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿರುವುದು ಕೇವಲ ಘೋಷಣೆಯಾಗಿ ಮಾತ್ರ ಉಳಿಯಲಿದೆ ಎಂದರು.

ಈ ಬಜೆಟ್‌ ಜನವಿರೋಧಿಯಾಗಿದ್ದು, ವಿಶೇಷವಾಗಿ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. 

ಈ ಬಜೆಟ್ ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರೈತರು 5 ವರ್ಷಗಳಿಂದ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರಚಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಬಜೆಟ್ ನಲ್ಲಿ ಚಕಾರವನ್ನೇ ಎತ್ತಿಲ್ಲ. ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸುಗಳ ಜಾರಿ ಬಗ್ಗೆಯೂ ಯಾವುದೇ ಮಾತು ಆಡದೆ ರೈತರಿಗೆ ಪಂಗನಾಮ ಹಾಕಿದೆ ಎಂದು ಹೇಳಿದರು.

ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಜನ‌ ಸಚಿವರಾಗಿದ್ದರೂ, ರಾಜ್ಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ, ಈ‌ ಐದೂ ಮಂದಿ ರಾಜ್ಯಕ್ಕೆ ಅನುಕೂಲ ಮಾಡಿಸುವಲ್ಲಿ ವಿಫಲರಾಗಿದ್ದಾರೆ.

ಆರೋಗ್ಯ, ರಕ್ಷಣೆ, ಆರೋಗ್ಯ, ಐಟಿ ಮತ್ತು ಸಂವಹನ ಕ್ಷೇತ್ರಗಳಿಗೆ ಕಳೆದ ಫೆಬ್ರವರಿಯಲ್ಲಿ ಮಂಡಿಸಲಾಗಿದ್ದ ಮಧ್ಯಂತರ ಬಜೆಟ್‌ನಲ್ಲಿ ಘೋಷಿಸಿದ್ದ ಅನುದಾನವನ್ನು ಈಗ ಕಡಿತಗೊಳಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿಗೆ ಅನುದಾನದಲ್ಲೂ ಗಣನೀಯವಾಗಿ ಕಡಿತಗೊಳಿಸಿರುವುದು ಈ ಸಮುದಾಯಗಳಿಗೆ ಎಸಗಿರುವ ದ್ರೋಹವಾಗಿದೆ ಎಂದರು.

*ಆಗಸ್ಟ್‌ 28 ರಂದು ರಾಜ್ಯಕ್ಕೆ 16ನೇ ಹಣಕಾಸು ಆಯೋಗ ಭೇಟಿ*

ಕೇಂದ್ರದ 16 ನೇ ಹಣಕಾಸು ಆಯೋಗವು ಆಗಸ್ಟ್‌ 28 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಹಿಂದಿನ ಬಾರಿ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಲಾಗುವುದು. ಈ ಕುರಿತು ಸಮರ್ಥವಾಗಿ ವಿಷಯ ಮಂಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಆರ್ಥಿಕ‌ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್,  ರಾಜಕೀಯ ಕಾರ್ಯದರ್ಶಿಗಳಾದ ಗೋವದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


24-07-2024 EE DIVASA KANNADA DAILY NEWS PAPER

23-07-2024 EE DIVASA KANNADA DAILY NEWS PAPER

22-07-2024 EE DIVASA KANNADA DAILY NEWS PAPER

ಬೆಂಗಳೂರು ವಿವಿ: ಸಂಶೋಧನಾ ವಿದ್ಯಾರ್ಥಿ ಶ್ರೀನಿವಾಸ ಎನ್ ರವರಿಗೆ : 'ಕನ್ನಡ ಸಾಹಿತ್ಯ ಚಿನ್ನ ಪ್ರಶಸ್ತಿ' ಪ್ರಧಾನ

 

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಆಯೋಜಿಸಿದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಅಂಗವಾಗಿ 'ಮೀಡಿಯಾ ಸ್ಪಿಯರ್- 2024, "ಭಾರತೀಯ ಮಾಧ್ಯಮ ಉದ್ಯಮದ ರೂಪಾಂತರ" ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರು ವಿವಿಯ ಸಂವಹನ ವಿಭಾಗ, ಭಾರತೀಯ ಸಂವಹನ ಕಾಂಗ್ರೆಸ್ (ಐಸಿಸಿ) ಹಾಗೂ ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಮತ್ತು ಸಂವಹನ ಶಿಕ್ಷಕರ ಸಂಘ (ಕೆಎಸ್ ಜೆಸಿಟಿಎ) ಸಹಯೋಗದೊಂದಿಗೆ  ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ನಡೆಸಲಾಯಿತು.

ಇದರ ಪ್ರಯುಕ್ತ ಕನ್ನಡ ಸಾಹಿತ್ಯದಲ್ಲಿ ಸಾಧನೆಗೈದ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದಾರ್ಥಿ  ಶ್ರೀನಿವಾಸ ಎನ್ ರವರಿಗೆ: ' 'ಕನ್ನಡ ಸಾಹಿತ್ಯ ಚಿನ್ನ ಪ್ರಶಸ್ತಿ' ಪ್ರಧಾನವನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ , ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷ ಖಾನಂ, ಬೆಂವಿವಿಯ ಕುಲಸಚಿವ ಶೇಕ್ ಲತೀಫ್, ಮೌಲ್ಯಮಾಪನ ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ,  ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಬಿ. ಶೈಲಶ್ರೀ, ಭೂಪಾಲ್ ನ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಮಖನ್ ಲಾಲ್ ಚತುರ್ವೇದಿ, ರಾಷ್ಟ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಜಿ. ಸುರೇಶ್,  ಪಶ್ಚಿಮ ಬಂಗಾಳದ ವಿಶ್ವ ಭಾರತಿ ಕೇಂದ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿರುವ ಪ್ರೊ. ಬಿಪ್ಲಾಬ್ ಲೋಹೋ ಚೌದರಿ, (ಒಡಿಶಾ) ಭುವನೇಶ್ವರ್ ನ ಉತ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಉಪೇಂದ್ರ ಪಾಢಿ, ವಿವಿಯ ಬೋಧಕ ಮತ್ತು ಭೋಧಕೇತರ ವರ್ಗದವರು, ಸ್ನಾತಕೋತ್ತರ ಮತ್ತು ಸಂಶೋಧನಾರ್ಥಿಗಳು, ಮತ್ತಿತರರು ಸಮ್ಮುಖದಲ್ಲಿ ಸ್ಮರಿಣಿಕೆ ನೀಡಿ ಗೌರವಿಸಲಾಯಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಶ್ವಪ್ರಕಾಶ ಟಿ ಮಲಗೊಂಡಗೆ "ಬೆಸ್ಟ್ ಆಕ್ಟರ್" ಅವಾರ್ಡ್


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಗುಮ್ಮಟ ನಗರಿ ವಿಜಯಪುರದ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ಉಪ ಸಂಪಾದಕ ಚಲನಚಿತ್ರ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಕರುನಾಡು ಕಿರುಚಿತ್ರೋತ್ಸವದಲ್ಲಿ "ಬೆಸ್ಟ್ ಆಕ್ಟರ್" ಅವಾರ್ಡ್ ದೊರೆತಿದೆ.

ಭಾನುವಾರ ಕೊಪ್ಪಳದ ಜೆ.ಕೆ.ಎಸ್ ಹೊಟೇಲ್ ನಲ್ಲಿ ಕವಿತಾ ಮೀಡಿಯಾ ಸೋರ್ಸ ಪ್ರೈ.ಲಿ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿ ವಾಹಿನಿ ಆಯೋಜಿಸಿದ  "ಕರುನಾಡ ಕಿರುಚಿತ್ರೋತ್ಸವ" ದಲ್ಲಿ ವಿಶ್ವಪ್ರಕಾಶ ಟಿ ಮಲಗೊಂಡ ಅವರ ಸಿನಿಮಾ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ  ಕರುನಾಡ ಕಿರುಚಿತ್ರೋತ್ಸವದಲ್ಲಿ "ಸಿನಿ ಸಿರಿ" ಅವಾರ್ಡ್ ಈ ಪ್ರಶಸ್ತಿ ನೀಡಿ ಗೌರವಿಸಿದೆ. 

ಕರುನಾಡ ಕಿರುಚಿತ್ರೋತ್ಸವ (Short Film Festival) ಸ್ಪರ್ಧೆಯಲ್ಲಿ "ತುಷಾರ್"  ಚಿತ್ರವೂ ಸಹ ಭಾಗವಹಿಸಿತ್ತು. ಚಿತ್ರದಲ್ಲಿನ ನಾಯಕನ ಅಭಿನಯಕ್ಕೆ "ಬೆಸ್ಟ್ ಆಕ್ಟರ್ ಅವಾರ್ಡ" ನೀಡಿ ಗೌರವಿಸಿದೆ.

ಕಿರುಚಿತ್ರೋತ್ಸವದಲ್ಲಿ ರಾಜ್ಯದ ಹಲವು ಕಿರುಚಿತ್ರಗಳು ಭಾಗವಹಿಸಿದ್ದವು.  ಬೆಸ್ಟ್ ಶಾರ್ಟ ಫಿಲಂ, ಬೆಸ್ಟ್ ಸ್ಟೋರಿ, ಹೀಗೆ ಒಟ್ಟು ಹತ್ತು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ. 

ಅದರಲ್ಲಿ "2024 ಅತ್ಯುತ್ತಮ ನಟ ಬೆಸ್ಟ್ ಆಕ್ಟರ್"  ಎಂದು ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಅವಾರ್ಡ್ ನೀಡಲಾಗಿದೆ.

ಕಿರುಚಿತ್ರೋತ್ಸವದಲ್ಲಿ ಹಿರಿಯ ಚಲನಚಿತ್ರ ಸಾಹಿತಿ ಹಾಗೂ ಕಿರುಚಿತ್ರೋತ್ಸವದ ಅಧ್ಯಕ್ಷ ಮಹಾಂತೇಶ ಮಲ್ಲನಗೌಡರ, ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಂತಾರ ಚಿತ್ರದ ನಟ ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ ಚಲನಚಿತ್ರ ಖ್ಯಾತಿಯ ಶಿವಮ್ಮ ಯರೆಹಂಚಿನಾಳ, ಚಲನಚಿತ್ರ ನಿರ್ದೇಶಕ ಬಸವರಾಜ ಕೊಪ್ಪಳ, ಅಳವಂಡಿ ಪಿಎಸ್ಐ ನಾಗಪ್ಪ ಕೆ, ಹಿರಿಯ ಪತ್ರಕರ್ತ ಜಿ ಎಸ್ ಗೋನಾಳ, ಸಿನಿಮಾ ಪತ್ರಕರ್ತ ಬಸವರಾಜ ಕರುಗಲ್ , ಸಾಹಿತಿ ಸುರೇಶ ಕಂಬಳಿ, ಪ್ರಾಧ್ಯಾಪಕ ಪ್ರೊ. ಶರಣಪ್ಪ ಬಿಳಿಯಲಿ, ಸಮಾಜ ಸೇವಕಿ ಶಾರದಾ ಪಾನಘಂಟಿ, ಉಪನ್ಯಾಸಕ ಡಾ.ಸಿದ್ದಲಿಂಗಪ್ಫ ಕೋಟ್ನೆಕಲ್, ಹೈಬ್ರೀಡ್ ನ್ಯೂಸ್ ಸಂಸ್ಥಾಪಕ ಹಾಗೂ ಕಿರುಚಿತ್ರೋತ್ಸವ ಆಯೋಜಕ ಡಾ.ಬಿ ಎನ್ ಹೊರಪೇಟಿ,  ನಟ, ನಟಿ, ನಿರ್ದೇಶಕ, ನಿರ್ಮಾಪಕ, ಬರಹಗಾರರು, ಕೊಪ್ಪಳ ಸಿನಿಮಾ ಬಳಗ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, July 19, 2024

ತಂಬಾಕು ಸೇವನೆ ನಿಯಂತ್ರಣಕ್ಕೆ ಜೀವನಶೈಲಿ ಬದಲಾವಣೆ ಒಂದೇ ದಾರಿ


 

ವಿಜಯಪುರ: ಇತ್ತೀಚಿನ ದಿನಗಳಲ್ಲಿ ತಂಬಾಕು ಸೇವನೆ ಪಿಡುಗು ಹೆಚ್ಚಾಗುತ್ತಿದೆ, ಬಾಯಿ ಹುಣ್ಣು, ಅನ್ನನಾಳ, ಶ್ವಾಸಕೊಶ, ಮೂತ್ರಕೋಶ, ಗಂಟಲು ಕ್ಯಾನ್ಸರ್ ನಂತಹ ಭಯಾನಕ ರೋಗಗಳು ತಂಬಾಕು ಸೇವನೆಯಿಂದಲೆ ಹೆಚ್ಚಾಗಿ ಬರುತ್ತಿವೆ. ಎಂಬ ಅರಿವು ಸಾಮಾನ್ಯ ಜನರಿಗೆ ಗೊತ್ತಿಲ್ಲ, ಗೊತ್ತಿದ್ದರೂ ಸಹ ನಿರ್ಲಕ್ಷ ಮಾಡುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಯಾವುದೇ ವ್ಯಕ್ತಿ ತಮ್ಮ ಜೀವನದಲ್ಲಿ ನಿಲುವು ಮತ್ತು ಸರಿಯಾದ ಜೀವನಶೈಲಿ ಬದಲಾವಣೆ ಮಾಡಿಕೊಂಡಲರೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ತಡೆಗಟ್ಟಬಹುದು ಎಂದು ವಿಜಯಪುರ ತಾಲೂಕು ಆರೊಗ್ಯ ಅಧಿಕಾರಿಗಳಾದ ಡಾ|| ಪರಶುರಾಮ ಹಿಟ್ನಳ್ಳಿ ಹೇಳಿದರು.

 ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಬೆಂಗಳೂರು ಪಿ.ಜಿ.ಡಿ.ಹೆಚ್.ಪಿ.ಈ. ವಿಭಾಗದ ಮೇಲ್ವಿಚಾರಣೆ ಆಧಾರಿತ ಕ್ಷೇತ್ರ ತರಬೇತಿ 2024ರ ಅಡಿಯಲ್ಲಿ “ತಂಬಾಕು ಸೇವನೆ ದುಷ್ಪರಿಣಾಮ ಕುರಿತು ಜಾಗೃತಿ ಮತ್ತು ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ” ಉದ್ಘಾಟಿಸಿ ಡಾ|| ಪರಶುರಾಮ ಹಿಟ್ನಳ್ಳಿ ಮಾತನಾಡಿದರು.

 ಸಾರ್ವಜನಿಕ ಆರೋಗ್ಯ ಕುರಿತು ಹಲವಾರು ಯೋಜನೆಗಳು ಸರಕಾರದಿಂದ ಲಭ್ಯವಿದ್ದು, ಆ ಯೋಜನೆಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು, ವಿಶೇಷವಾಗಿ ಯುವಕರು/ಯುವತಿಯರು ಹೆಚ್ಚಾಗಿ ಭಾಗವಹಿಸಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಮಾಹಿತಿ ಪಡೆದುಕೊಂಡು ತಮ್ಮ ತಮ್ಮ ಮನೆಯ ಹಿರಿಯರಿಗೆ ಕಿರಿಯರಿಗೆ ಮಾಹಿತಿ ತಿಳಿಸಿಕೊಡಬೇಕು. ಎಂದು ಜುಮನಾಳ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಶ್ರೀ ಮುಕ್ಕಣ್ಣ ನಾಯಕ ಹೇಳಿದರು.

 ಯಾವುದೇ ಲಿಂಗ ಭೇಧವಿಲ್ಲದೆ ಪುರುಷರು, ಮಹಿಳೆಯರು, ಯುವಕ, ಯುವತಿಯರು ಎಲ್ಲರಲ್ಲೂ ತಂಬಾಕು ಸೇವನೆ ಒಂದು ಚಟವಾಗಿದೆ, ಈ ಚಟದಿಂದ ಪಾರಾಗಲು ಆರೋಗ್ಯ ಇಲಾಖೆ ವತಿಯಿಂದ ಹಲವಾರು (ಐ.ಈ.ಸಿ./ಬಿ.ಸಿ.ಸಿ) ಜಾಗೃತಿ, ಜ್ಞಾನ, ಅರಿವು ಮತ್ತು ವರ್ತನೆಗಳ ಬದಲಾವಣೆಯುತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ವಿಭಾಗದಿಂದ ಕರಪತ್ರಗಳು, ಬಿತ್ತಿಪತ್ರಗಳು, ಬೀದಿ ನಾಟಕ, ವಿವಿಧ ಜನಪದ ಕಲೆಗಳ ಮುಖಾಂತರ ಆರೋಗ್ಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಜಿ. ಎಮ್. ಕೊಲೂರ ಹೇಳಿದರು.

 ಉಸಿರು ಜೀವನಕ್ಕೆ ಅವಶ್ಯಕ, ಉಸಿರಾಡುವ ಗಾಳಿ ಸ್ವಚ್ಛವಾಗಿರುವುದು ಅತ್ಯಂತ ಅವಶ್ಯಕ ಆದರೆ ಧೂಮಪಾನಿಗಳು ತಾವು ಕೆಡುವುದಲ್ಲದೆ ಧೂಮಪಾನ ಮಾಡದೇ ಇರುವ ಅಮಾಯಕ ಮಕ್ಕಳು ಕುಟುಂಬಸ್ಥರು ತಂಬಾಕು ಹೊಗೆ ಮಿಶ್ರಿತ ಗಾಳಿ ಸೇವಿಸಲು ಪ್ರೋಕ್ಷವಾಗಿ ಕಾರಣರಾಗಿದ್ದಾರೆ. ಅದರಿಂದಾಗಿ ಮಕ್ಕಳಲ್ಲೂ ಸಹ ಕ್ಯಾನ್ಸರ ಅಂತಹ ಕಾಯಿಲೆಗಳು ಹೆಚ್ಚಾಗುತ್ತಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಪಿ.ಜಿ.ಡಿ.ಹೆಚ್.ಪಿ.ಈ ವಿಭಾಗದ ಉಪನ್ಯಾಸಕರಾದ ಡಾ|| ಮಂಜುನಾಥ ಟಿ. ಎ. ರವರು ಆತಂಕ ವ್ಯಕ್ತಪಡಿಸಿದರು.

 ತಂಬಾಕಿನಲ್ಲಿರುವ ಸುಮಾರು ಆರು ಸಾವಿರ ರಸಾಯನಿಕಗಳು ಹಲವಾರು ಭಯಂಕರ ರೋಗಗಳಿಗೆ ಕಾರಣವಾಗಿವೆ ಅದರಲ್ಲೂ ಕೂದಲು ಉದರುವುದು. ಕಣ್ಣಿನ ಪೊರೆ/ನರದೌರ್ಬಲ್ಯ, ದಂತಕ್ಷಯ, ಶ್ವಾಸಕೊಶ ಕ್ಯಾನ್ಸರ್, ಹೃದಯಾಘಾತ, ಹೊಟ್ಟೆ ಅಲ್ಸರ್, ಪಾರ್ಶ್ವವಾಯುದಂತ ಭಯಾನಕ ರೋಗಗಳು ಸಂಭವಿಸುತ್ತವೆ. ಧೂಮಪಾನಿಗಳಲ್ಲಿ ಕ್ಷಯರೋಗ ಬರುವ ಅಪಾಯ ಮೂರು ಪಟ್ಟು ಇತರರಿಗಿಂತ ಹೆಚ್ಚಿದೆ. ಅಂದರೆ ಮರಣ ಪ್ರಮಾಣ 3 ರಿಂದ 4 ಪಟ್ಟು ಹೆಚ್ಚಿದೆ ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಸುರೇಶ ಹೊಸಮನಿ ತಮ್ಮ ಸುಧೀರ್ಘ ಭಾಷಣದಲ್ಲಿ ಎಚ್ಚರಿಕೆ ಸಂದೇಶ ನೀಡಿದರು.

 ಈ ಆರೋಗ್ಯ ಜಾಗೃತಿ ಕಾರ್ಯಕ್ರಮ ಜುಮನಾಳ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಫಿರ್ದೋಶ ಮೆಹಬೂಬಸಾಬ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

 ಜಮನಾಳ ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀ ಸುರೇಶ ಕೊಲಕಾರ ಕಾರ್ಯಕ್ರಮಕ್ಕೆ ಸೌಲಭ್ಯಗಳನ್ನು ಒದಗಿಸಲು ಸಹಕರಿಸಿದರು. ಕಾರ್ಯಕ್ರಮವನ್ನು ಶ್ರೀ ದಿನೇಶ ಕೋರಿ ನಿರೂಪಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮತ್ತು ಪ್ರಶಿಕ್ಷಣಾರ್ಥಿ ಶ್ರೀ ಶಂಕರಪ್ಪ ಎಂ. ಚಲವಾದಿ ಕಾರ್ಯಕ್ರಮ ನೆರವೇರಿಸಿ ಕೊಟ್ಟರು. ಟಿ.ಹೆಚ್.ಓ. ಕಾರ್ಯಾಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎನ್. ಆರ್. ಬಾಗವಾನ ವಂದಿಸಿದರು.

 ಜುಮನಾಳ ಗ್ರಾಮ ಪಂಚಾಯತಿ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ಹೊನಕಟ್ಟಿ, ಎನ್. ಟಿ. ಸಿ. ಪಿ. ವಿಭಾಗದ ಶ್ರೀಕಾಂತ ಪೂಜಾರಿ, ಸಮುದಾಯ ಆರೋಗ್ಯ ಅಧಿಕಾರಿ ಬಸವರಾಜ ಬಿರಾದಾರ, ಶ್ರೀಮತಿ ಕೆ. ಸಿ. ಇಂಡಿಕರ, ಶ್ರೀಮತಿ ಆಶಾ ಬಿದರಿ, ಗಾಮದ ಪಂಚಾಯತ ಸದಸ್ಯರು ಆಶಾ ಕಾರ್ಯಕರ್ತರು ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 ರಾಜ್ಯ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ, ಬೆಂಗಳೂರು, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯಪುರ, ತಾಲ್ಲೂಕ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊನಗನಹಳ್ಳಿ ಹಾಗೂ ಜುಮನಾಳ ಗ್ರಾಮ ಪಂಚಾಯತಿ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Wednesday, July 17, 2024

18-07-2024 EE DIVASA KANNADA DAILY NEWS PAPER

ಕ್ರೀಡಾ ಅಸೋಶಿಯೆಷನ್ ಪದಾಧಿಕಾರಿಗಳ ಬೇಡಿಕೆ ಡಿಸಿ ಸ್ಪಂದನೆ



ವಿಜಯಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ ಹಾಗೂ ಎಸ್ಪಿ ರಿಷಿಕೇಶ ಸೋನಾವಣೆ ದಿಢೀರ್ ಭೇಟಿ ನೀಡಿದ ವೇಳೆ, ವಿವಿಧ ಕ್ರೀಡಾ ಅಸೋಶಿಯೆಷನ್ ಪದಾಧಿಕಾರಿಗಳ ಬೇಡಿಕೆ ಸ್ಪಂದಿಸಿದ್ದು, ಮೂಲಸೌಲಭ್ಯ ಒದಗಿಸುವ ಭರವಸೆ ನೀಡಿದರು.

ಕ್ರೀಡಾ ಅಸೋಶಿಯೆಷನ್ ಪದಾಧಿಕಾರಿಗಳ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಅವರು, ಇಲ್ಲಿನ ವಾಲಿಬಾಲ್‌ಗ್ರೌಂಡಗೆ ಪೆಡ್‌ಲೈಟ್ ಮಾಡಿಕೊಡುವುದು, ವೇಟ್ ಲಿಫ್ಟಿಂಗ್‌ರೂಮ್ ಸೇರಿದಂತೆ ಎಲ್ಲ ಸಾಮಗ್ರಿಗಳನ್ನು ಪೂರೈಸುವುದು, ಜೋಡೋ, ಕುಸ್ತಿ ಗರಡಿಮನೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಾಲಿಬಾಲ್ ಅಸೋಶಿಯೇಶನ್ ಅಧ್ಯಕ್ಷ ಬಿ.ಎಂ.ಕೋಕರೆ, ಫುಟ್‌ಬಾಲ್ ಅಸೋಶಿಯೇಷನ್ ಅಧ್ಯಕ್ಷ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವೇಟ್ ಲಿಪ್ಟಿಂಗ್ ಅಧ್ಯಕ್ಷ ದಾದಾಸಾಹೇಬ ಬಾಗಾಯತ, ಹಾಕಿ ಅಸೋಶಿಯೇಶನ್ ಅಧ್ಯಕ್ಷ ಎಸ್.ಕೆ. ಇನಾಂದಾರ, ಅಥ್ಲೇಟಿಕ್ಸ್ ಎಸ್.ಎಸ್. ಹಿರೇಮಠ, ಸ್ವಿಮ್ಮಿಂಗ್ ಅಸೋಶೀಯೇಶನ್ ಕಾರ್ಯದರ್ಶಿ ಚಂದ್ರಕಾAತ ತಾರನಾಳ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ.ಲೋಣ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಸೊಳ್ಳೆ ನಿಯಂತ್ರಣಕ್ಕೆ ಧೂಮೀಕರಣ, ಸ್ವಚ್ಛತೆಗೆ ಆಯುಕ್ತರ ಸೂಚನೆ



ವಿಜಯಪುರ: ಸೊಳ್ಳೆಗಳಿಂದ ಹರಡುವ ಡೆಂಘೀ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ವಾರ್ಡ್ಗಳಲ್ಲಿ ಸ್ವಚ್ಛತೆ ಹಾಗೂ ಧೂಮೀಕರಣ (ಫಾಗಿಂಗ್) ಕಾರ್ಯವನ್ನು ಕೈಗೊಳ್ಳಬೇಕು ಎಂದು ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಹೇಳಿದರು.

ಇಲ್ಲಿನ ಪಾಲಿಕೆ ಕಚೇರಿಯಲ್ಲಿ ಆರೋಗ್ಯಾಧಿಕಾರಿ, ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿ, ಸಿಬ್ಬಂದಿ, ಸಹಾಯಕ ಕಾರ್ಯಪಾಲಕ ಅಭಿಯಂತರರ ಹಾಗೂ ಆರೋಗ್ಯ ನಿರೀಕ್ಷಕ ಮತ್ತು ನೈರ್ಮಲ್ಯ ಮೇಲ್ವಿಚಾರಕರೊಂದಿಗೆ ಬುಧವಾರ ಹಮ್ಮಿಕೊಂಡ ಡೆಂಘೀ ಮತ್ತು ನಗರ ಸ್ವಚ್ಛತೆ ಕುರಿತಂತೆ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.

ನಗರದ ವಾರ್ಡ್ಗಳಲ್ಲಿ ಸ್ವಚ್ಛತೆಯನ್ನು ಕೈಗೊಂಡು, ಸೊಳ್ಳೆಗಳಿಂದ ಹರಡುವ ಡೆಂಘೀ ನಿಯಂತ್ರಣಕ್ಕೆ ಧೂಮೀಕರಣ ಹಾಗೂ ಬೈ ಲಾರ್ವಾ ಸಿಂಪಡಣೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.



ನಗರದ ಸಾರ್ವಜನಿಕರುಗಳು ಮತ್ತು ವರ್ತಕರು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಸವನ್ನು ಕಡ್ಡಾಯವಾಗಿ ಕಸದ ವಾಹನಕ್ಕೆ ನೀಡಬೇಕು. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಸಾರ್ವಜನಿಕರುಗಳು ತಮ್ಮ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಆವರಣದ ಹೂವಿನ ಕುಂಡಗಳಲ್ಲಿ, ನೀರು ಶೇಖರಿಸಿಟ್ಟ ಬಕೇಟ್‌ಗಳಲ್ಲಿ, ಹಳೆಯದಾದ ಟೈರ್‌ಗಳಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹವಾಗದAತೆ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಡೆಂಘೀ ಜ್ವರ ಹರಡುವುದನ್ನು ತಡೆಗಟ್ಟಲು ಮತ್ತು ನಗರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಪಾಲಿಕೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದರು.

ಸ್ವಚ್ಛತೆ ಕುರಿತು ಯಾವುದೇ ರೀತಿಯ ಉಲ್ಲಂಘನೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು ಸೂಕ್ತ ದಂಡ ವಿಧಿಸಿಲಾಗುವುದು ಎಂದು ಎಚ್ಚರಿಸಿದರು.

ಪಾಲಿಕೆ ಪರಿಸರ ಅಧಿಕಾರಿ ಅಶೋಕ ಸಜ್ಜನ, ಆರೋಗ್ಯಾಧಿಕಾರಿ ಸಂಗಣ್ಣ ಲಕ್ಕಣ್ಣವರ ಸೇರಿ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಎಸ್‌ಎಮ್‌ಎನ್ ಸೌಹಾರ್ದ ಕ್ಲೇಮ್‌ಗಳ ಮಾನದಂಡ ಸಡಲಿಕೆಗೆ ಒತ್ತಾಯ



ವಿಜಯಪುರ: ಎಸ್‌ಎಂಎನ್ ಸೌಹಾರ್ದ ಕ್ಲೇಮ್‌ಗಳ ಮಾನದಂಡ ಸಡಲಿಕೆ ಮಾಡುವಂತೆ ಆಗ್ರಹಿಸಿ ರೈತ ಮುಖಂಡ ಹಾಗೂ ಎಸ್‌ಎಂಎನ್ ಸೌಹಾರ್ದ ಹೋರಾಟ ಸಮಿತಿ ಅಧ್ಯಕ್ಷ ಅರವಿಂದ ಕುಲಕರ್ಣಿ ಒತ್ತಾಯಿಸಿದ್ದಾರೆ.

ನಗರದ ಗಗನ ಮಹಲ್‌ದಲ್ಲಿ ವಂಚಿತ ಠೇವಣಿದಾರರ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಎಂಎನ್ ಸೌಹಾರ್ದ ವಿವಿಧ ಶಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ತೊಡಗಿಸಿ ವಂಚನೆಗೊಳಗಾದ ಗ್ರಾಹಕರಿಗೆ ಹಣ ಮರುಪಾವತಿಸಲು ಬೆಂಗಳೂರಿನ ಸಹಾಯಕ ಪ್ರಾದೇಶಿಕ ಆಯುಕ್ತರು ಹಾಗೂ ಎಸ್‌ಎಂಎನ್ ಸೌಹಾರ್ದ ಸಕ್ಷಮ ಪ್ರಾಧಿಕಾರಿಯವರು ವಂಚಿತ ಠೇವಣಿದಾರರಿಗೆ ಕ್ಲೇಮ್‌ಗೆ ಅರ್ಜಿ ಸಲ್ಲಿಸಲು ಜು. 22, 2024 ರಿಂದ ಆ.21, 2024 ರವರೆಗೆ ಒಂದು ತಿಂಗಳ ಕಾಲಾವಧಿ ನಿಗದಿಪಡಿಸಿದ್ದಾರೆ. ಆದ್ದರಿಂದ ನಿಗದಿತ ಸಮಯಕ್ಕೆ ತಮ್ಮಲ್ಲಿರುವ ದಾಖಲಾತಿಗಳನ್ನು ಸಕ್ಷಮ ಪ್ರಾಧಿಕಾರಿ ಅವರಿಗೆ ಕ್ಲೇಮ್ ಸಲ್ಲಿಸಬೇಕು ಎಂದರು.

ಅಲ್ಲದೆ ಕ್ಲೇಮ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಹಲವು ಮಾನದಂಡಗಳನ್ನು ಅಳವಡಿಸಿದ್ದು, ಠೇವಣಿದಾರರಿಗೆ ಸಕ್ಷಮ ಪ್ರಾಧಿಕಾರಿಯವರು ಕೇಳಿದ ಮಾನದಂಡಗಳಲ್ಲಿ ಕೆಲವು ಮಾನದಂಡಗಳು ಪೂರೈಸಲು ಸಾಧ್ಯವಿಲ್ಲ. ನಾಮಿನಿ ಇದ್ದವರಿಗೆ ಒಂದು ಸಂದರ್ಭದಲ್ಲಿ ಡಿಪಾಜಿಟರ್ ಮೈತರಾದ್ದಲ್ಲಿ ನೇರವಾಗಿ ನಾಮಿನಿ ಇದ್ದವರಿಗೆ ಡಿಪಾಜಿಟ್‌ಬಾಂಡ್ ಪಡೆದುಕೊಂಡು ನೇರವಾಗಿ ಅವರ ಖಾತೆಗೆ ಹಣ ಜಮೆಮಾಡಬೇಕು. ಆದರೆ ವಂಶಾವಳಿ ಮತ್ತು ಉತ್ತರ ಜೀವಿತ, ವಾರ್ಸಾ ಇವೆಲ್ಲವುಗಳನ್ನು ಕೇಳಿದ್ದು ಕೇವಲ ಒಂದೇ ತಿಂಗಳಲ್ಲಿ ಇವೆಲ್ಲಗಳನ್ನು ತಹಶೀಲ್ದಾರ್ ಕಚೇರಿಯಿಂದ ಪಡೆದುಕೊಳ್ಳಲು ಸಾಧ್ಯವಿಲ್ಲ. ದೂಷಿತ ಸೌಹಾರ್ದದಿಂದ ಮ್ಯಾನೇಜರ್ ಅವರಿಂದ ದೃಢೀಕರಿಸಲ್ಪಟ್ಟ ಉಳಿತಾಯ ಖಾತೆಯ ನಕಲು ಪ್ರತಿಯನ್ನು ಕೇಳಿದ್ದಾರೆ. ಆದರೆ ದೂಷಿತ ಸೌಹಾರ್ದದ ಎಲ್ಲ ಶಾಖೆಗಳು ಬಂದ್‌ಗೊಳಿಸಿದ್ದರಿAದ ವಂಚಿತಗ್ರಾಹಕರು ಈ ದಾಖಲೆಗಳನ್ನು ಎಲ್ಲಿಂದ ಪೂರೈಸಬೇಕು ಇದರ ಕುರಿತು ಸಕ್ಷಮ ಪ್ರಾಧಿಕಾರ ಸ್ಪಷ್ಟಪಡಿಸುವುದು ಅಗತ್ಯವಿದೆ ಎಂದು ಆಗ್ರಹಿಸಿದರು.

ಈ ಸಭೆಯಲ್ಲಿ ಎನ್.ಕೆ. ಮನಗೊಂಡ, ಐ.ಬಿ. ಸಾರವಾಡ, ಎಸ್.ಜಿ. ಸಂಗೊAದಿಮಠ, ಕೆ.ಡಿ.ನರಗುಂದ, ಬಸವರಾಜ ಅವಟಿ, ಬಸವರಾಜ ಚಿಕ್ಕೊಂಡ, ಬಸವರಾಜ ಬಾಡಗಿ, ಬಸವರಾಜ ನಂದಿಹಾಳ, ಮುಕ್ಕಪ್ಪ ಹುದ್ದಾರ, ಮಹಾಂತೇಶ ನಡಕಟ್ಟಿ, ಶರಣಪ್ಪ ಕಲ್ಲೂರ, ಶಾಂತಪ್ಪ ಪಾಟೀಲ, ಜಿ.ಜಿ.ಬಳ್ಳಿಗೇರ, ಶಿವಪ್ಪ ಚಂದಾನವರ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Monday, July 15, 2024

16-07-2024 EE DIVASA KANNADA DAILY NEWS PAPER

ಸಂಶೋಧಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಕೆಲಸ ಮಾಡಬೇಕು: ತುಳಸಿಮಾಲ


ವಿಜಯಪುರ: ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಿಗೆ ಸರ್ಕಾರವು ಲಕ್ಷಾಂತರ ಹಣವನ್ನು ವ್ಯಯ ಮಾಡುತ್ತಿದೆ. ಆದಕಾರಣ ಸಂಶೋಧಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಕೆಲಸ ಮಾಡಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಮಹಿಳಾ ಅಧ್ಯಯನ ಕೇಂದ್ರ ಹಾಗೂ ಪ. ಜಾ/ ಪ. ಪಂ ನಿರ್ದೇಶನಾಲಯದ ಸಹಯೋಗದೊಂದಿಗೆ ಆಯೋಜಿಸಿದ್ದ 11 ದಿನಗಳ ಸಂಶೋಧನಾ ‘ಸಂಶೋಧನಾ ವೈಧಾನಿಕತೆ’ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. 

ಪ್ರಸ್ತುತ ಸೈದ್ಧಾಂತಿಕ ಸಂಶೋಧನೆಗಳಿಗಿAತ ಪ್ರಯೋಗಾತ್ಮಕ ಸಂಶೋಧನೆಗಳು ಹೆಚ್ಚಾಗುತ್ತಿವೆ. ಸಮಾಜ ವಿಜ್ಞಾನ, ವಿಜ್ಞಾನದ ಸಂಶೋಧನೆಗಳು ಇಂದು ಪ್ರತ್ಯೇಕವಾಗಿಲ್ಲ. ಸಾಮಾಜಿಕ ಹೊಣೆಗಾರಿಕೆಯನ್ನು ಬಿಟ್ಟು ಸಂಶೋಧನೆಗಳು ಇಲ್ಲ ಎಂದರು.

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಪ್ರತಿಯೊಬ್ಬ ಸಂಶೋಧಕರು ನೈತಿಕತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕು. ಮಹಿಳಾ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಮಹಿಳಾ ಸಮುದಾಯ ಸಬಲೀಕರಣಕ್ಕೆ ಕೊಡುಗೆ ನೀಡಬೇಕು ಎಂದರು. 

ಇದೇ ಸಂದರ್ಭದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಸಮಾಜಕಾರ್ಯ ಅಧ್ಯಯನ ವಿಭಾಗದ ಪ್ರೊ. ಸಂಗೀತಾ ಮಾನೆ ಮಾತನಾಡಿ, ಸಂಶೋಧನೆಗಳು ಸಮಾಜದ ಬದುಕನ್ನು, ಸ್ಥಿತಿಗತಿಯನ್ನು ಸುಧಾರಿಸುವ ಕೆಲಸ ಮಾಡಬೇಕು ಎಂದರು. 

ಮಹಿಳಾ ವಿವಿಯ ಪತ್ರಿಕೋದ್ಯಮದ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ಮಹಿಳಾ ವಿಶ್ವವಿದ್ಯಾನಿಲಯದ ಸಂಶೋಧನೆಗಳು ಮಹಿಳಾ ಸಮುದಾಯದ ಸಬಲೀಕರಣಕ್ಕೆ ಕೊಡುಗೆ ನೀಡಿವೆ ಎಂದರು.

ಸಮಾರAಭದಲ್ಲಿ ವಿವಿಯ ಸಮಾಜವಿಜ್ಞಾನ ನಿಕಾಯದ ಡೀನ ಪ್ರೊ. ಶಾಂತಾದೇವಿ ಟಿ ಮಾತನಾಡಿ, ಸಂಶೋಧನೆಗಳಿಗೆ ಸಾಮಾಜಿಕ ಜವಾಬ್ದಾರಿ ಇದ್ದಾಗ ಮಾತ್ರ ಸಂಶೋಧನೆಗಳಿಗೆ ಮೌಲ್ಯ ಬರುತ್ತದೆ ಎಂದರು. ಮಹಿಳಾ ವಿವಿಯ ಪ್ರೊ.ರಾಜು ಬಾಗಲಕೋಟ ಮಾತನಾಡಿ, ಸಂಶೋಧನೆಗಳಿಗೆ ಆಕರಗಳಿಗಿಂತ ವ್ಯಕ್ತಿಗಳ ಜೊತೆಗೆ ಚರ್ಚೆ, ಸಂದರ್ಶನ ಮಾಡಿದಾಗ ಸಂಶೋಧನೆಯ ದೃಷ್ಟಿಕೋನ ಮತ್ತು ಸಾಮಾಜಿಕ ಜವಾಬ್ದಾರಿಯ ಅರಿವು ಮೂಡುತ್ತದೆ ಎಂದರು. 

ಸಮಾರಂಭದಲ್ಲಿ ಪ್ರೊ. ವಿನಯ ಕುಲಕರ್ಣಿ, ಪ್ರೊ. ಜಿ. ಬಿ.ಸೋನಾರ, ಡಾ. ಕಲಾವತಿ ಕಾಂಬಳೆ ಮತ್ತು ವಿವಿಧ ವಿಭಾಗದ ಸಂಶೋಧನಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಲಕ್ಷ್ಮಿದೇವಿ ವಾಯ್ ವಂದಿಸಿದರು, ಡಾ. ಭಾಗ್ಯಶ್ರೀ ದೊಡಮನಿ ನಿರೂಪಿಸಿದರು, ಡಾ. ಸರೋಜಾ ಸಂತಿ ಪರಿಚಯಿಸಿದರು. ಸಂಶೋಧನಾ ವಿದ್ಯಾರ್ಥಿಗಳಾದ ನಿಶಾ ಜೋಷಿ, ಸಿದ್ಧಕಿ ಖಾನಮ್, ಅನುಷಾ, ಅನಿತಾ ತಮ್ಮ ಅನಿಸಿಕೆಗಳನ್ನು ಹೇಳಿದರು. 

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, July 12, 2024

13-07-2024 EE DIVASA KANNADA DAILY NEWS PAPER

ವಿಶೇಷ ಚೇತನರಲ್ಲಿ ವಿಶೇಷವಾದ ಶಕ್ತಿ ಇದೆ. ಅದನ್ನು ಹೊರಹಾಕಬೇಕಷ್ಟೇ: ರಿಷಿ ಆನಂದ

ವಿಜಯಪುರ: ಜೀವನದಲ್ಲಿ ಗುರಿ ಇರಬೇಕು ಇದನ್ನು ಸಾಧಿಸಲು ವಿಶೇಷ ಚೇತನ ಮಕ್ಕಳಿಗೆ ಪಾಲಕರು ಬಹಳ ಶ್ರಮ ವಹಿಸಿ ಕಾಳಜಿ ವಹಿಸಿ ಅವರ ಮೇಲೆ ನಿಗಾ ವಹಿಸಿ ಅವರನ್ನು ಸಾಧನೆಗೆ ಪ್ರೇರೆಪಿಸುವ ಕೆಲಸಮಾಡಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು.

ನಗರದ ಸರಕಾರಿ ಪಬ್ಲಿಕ್ ಸ್ಕೂಲ್ ಗಾಂಧಿ ಚೌಕದ ಶಾರದಾ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ವಿ ಹಿಯರ್ ಸಂಸ್ಥೆಯ ಯಸ್ ಬ್ಯಾಂಕ್ ಸಹಯೋಗದಲ್ಲಿ ಜಿಲ್ಲೆಯ 04 ವಲಯಗಳಾದ ಇಂಡಿ, ಸಿಂದಗಿ, ವಿಜಯಪುರ ನಗರ, ಹಾಗೂ ವಿಜಯಪುರ ಗ್ರಾಮೀಣಗಳಲ್ಲಿ ಶ್ರವಣದೋಷ ಹೊಂದಿದ ವಿಶೇಷ ಚೇತನ ಮಕ್ಕಳಿಗೆ ಶ್ರವಣೋಪಕರಣ ವಿತರಣಾ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಮಕ್ಕಳ ಪಾಲನೆ, ಪೋಷಣೆ ಮಾಡುವುದು ಪಾಲಕ ಜವಾಬ್ದಾರಿಯಾಗಿದೆ ಹಾಗೂ ಇಂತಹ ಮಕ್ಕಳಿಗೆ ನೂನ್ಯತೆಯು ಯಾವುದೇ ಕಾರಣದಿಂದ ಅಡ್ಡಿಯಾಗಬಾರದು, ಯಾವುದೇ ಸಮಸ್ಯೆಯನ್ನು ಆತ್ಮ ವಿಶ್ವಾಸದಿಂದ ಎದುರಿಸಬೇಕೆಂದರು. ವಿಶೇಷ ಚೇತನರಲ್ಲಿ ವಿಶೇಷವಾದ ಶಕ್ತಿ ಇದೆ. ಅದನ್ನು ಹೊರಹಾಕಬೇಕಷ್ಟೇ ಎಂದರು.


ಈ ಸಂದರ್ಭ ವಿಜಯಪುರ ಜಿಲ್ಲಾ ಉಪ ನಿರ್ದೇಶಕ ಎನ್.ಎಸ್.ನಾಗೂರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶೇಷ ಚೇತನ ಮಕ್ಕಳು ಹಾಗೂ ಪಾಲಕರು ಶ್ರವಣೋಪಕರಣಗಳನ್ನು ಪಡೆದುಕೊಂಡು ಅದನ್ನು ಬಳಸುವ ವಿಧಾನವನ್ನು ತಿಳಿಸುತ್ತಾರೆ, ಅದನ್ನು ತಿಳಿದುಕೊಂಡು ಜಾಗೃತಿಯಿಂದ ಬಳಸಬೇಕೆಂದರು.



ಈ ಸಂದರ್ಭ ಜಿಲ್ಲಾ ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ನಿರ್ದೇಶಕ ರಾಜಶೇಕರ ದೈವಾಡಗಿ ಮಾತನಾಡಿ, ಸಾಮಾನ್ಯ ಮಕ್ಕಳನ್ನು ನಿಭಾಯಿಸುವಾಗ ಕಷ್ಟವಾಗಿರುವಾಗ ಇಂತ ಮಕ್ಕಳನ್ನು ಸಾಕಿ ಅವರಿಗೆ ಶಿಕ್ಷಣ ಕೊಡುವುದು ತುಂಬಾ ಕಷ್ಟ ಅದೇ ರೀತಿ ಅಧಿಕಾರಿಗಳಲ್ಲಿ ಇಚ್ಚಾ ಶಕ್ತಿ ಇರಬೇಕು ಅಂದರೆ ಕಾರ್ಯಕ್ರಮ ಯಶಸ್ವಿಯಾಗುತ್ತದೆ. ಒಂದು ಅಂಗ ದುರ್ಬಲವಾದರೆ ಅದರ ಶಕ್ತಿ ಸಾಮರ್ಥ್ಯವನ್ನು ದೇವರು ಬೇರೆ ಅಂಗಕ್ಕೆ ಕೊಟ್ಟಿರುತ್ತಾರೆ ಎಂದರು.

ಈ ಸಂದರ್ಭ ವಿಜಯಪುರ ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಮಾತನಾಡಿ, ಅಂಗ ವಿಕರ ಶಿಕ್ಷಣವನ್ನು ಮೊದಲು ಖಾಸಗಿ ಸಂಸ್ಥೆಗಳಿಗೆ ಕೊಡಲಾಗಿತ್ತು ಅದನ್ನು 2005ರಿಂದ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಯಿತು. ಇಲ್ಲಿ ನೀಡುವ ವಿಕಲ ಚೇತನಮಕ್ಕಳಿಗೆ ಭತ್ಯೆಗಳನ್ನು ನೇರವಾಗಿ ತಲಪುವಂತೆ ಮಾಡಲಾಗುತ್ತದೆ ಇದರಿಂದ ಎಲ್ಲಿಯೂ ಹಣ ದುರ್ಬಕೆಯಾಗುವದಿಲ್ಲವೆಂದರು. ಮಂಜುನಾಥ ಎ ಗುಳೇದಗುಡ್ಡ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಯಸ್ ಬ್ಯಾಂಕ್‌ನ ಶಕಿಲಬಾಷಾ, ವಿ. ಹಿಯರ್ ವಾಗೇಲಾ ಸುದೀಪ ವೇದಿಕೆಯಲ್ಲಿದ್ದರು.

ಇದೇ ಸಂದರ್ಭ ಜಿಲ್ಲೆಯ ಎಲ್ಲ ವಲಯದ ಬಿಐಇಆರ್‌ಟಿಗಳು ಹಾಗೂ ವಿಶೇಷ ಚೇತನ ಮಕ್ಕಳು ಭಾಗವಹಿಸಿದ್ದರು.

ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಶ್ರೀಮತಿ ಟಿ.ಎಸ್.ಕೋಲ್ಹಾರ ರವರು ಸ್ವಾಗತಿಸಿದರು.

ಕಾರ್ಯಕ್ರಮವನ್ನು ಸಹಾಯಕ ಸಮನ್ವಯಾಧಿಕಾರಿ ಶಿವಾನಂದ ಪಡಶೆಟ್ಟಿ ನಿರೂಪಿಸಿದರು.

ಸಹಾಯಕ ಸಮನ್ವಯಾಧಿಕಾರಿ ಆರ್.ಬಿ.ಪಾಟೀಲ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Thursday, July 11, 2024

12-07-2024 EE DIVASA KANNADA DAILY NEWS PAPER

ಮಾಧ್ಯಮ ಅಕಾಡೆಮಿ ನೂತನ ಅಧ್ಯಕ್ಷೆಯಾಗಿ ನೇಮಕಗೊಂಡ ಹಿರಿಯ ಪತ್ರಕರ್ತೆ ಆಯೆಷಾ ಖಾನುಂ

 ಮಾಧ್ಯಮ ಅಕಾಡೆಮಿ ನೂತನ ಅಧ್ಯಕ್ಷೆಯಾಗಿ ನೇಮಕಗೊಂಡ ಹಿರಿಯ ಪತ್ರಕರ್ತೆ ಆಯೆಷಾ ಖಾನುಂ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್  ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು.‌


ಅಕಾಡೆಮಿ ಸದಸ್ಯರಾದ ಛಾಯಾಗ್ರಾಹಕ ವೆಂಕಟೇಶ್ ಮತ್ತು ಚಿತ್ರದುರ್ಗದ ಪತ್ರಕರ್ತ ಅಹೋಬಳಪತಿ ಜೊತೆಗಿದ್ದು ಧನ್ಯವಾದ ಅರ್ಪಿಸಿದರು. 

ಬಳಿಕ ಮಾಧ್ಯಮ ಅಕಾಡೆಮಿಯಲ್ಲಿ ನಡೆದ ಸರಳ ಮತ್ತು ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಅಧಿಕಾರ ವಹಿಸಿಕೊಂಡರು. 

ಕೆ.ವಿ.ಪ್ರಭಾಕರ್ ಅವರು ಇಡೀ ತಂಡಕ್ಕೆ ಶುಭ ಹಾರೈಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Wednesday, July 10, 2024

11-07-2024 EE DIVASA KANNADA DAILY NEWS PAPER

ನಾರಾಯಣಸ್ವಾಮಿ ಪರಿಷತ್‌ ವಿಪಕ್ಷ ನಾಯಕರಾಗಲಿ: ಗೋಪಾಲ ಘಟಕಾಂಬಳೆ

ವಿಜಯಪುರ: ಪಕ್ಷ ಸಂಘಟನೆಯಲ್ಲಿ ಹೋರಾಟ ಮಾಡುತ್ತ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವಲ್ಲಿ ಶ್ರಮಿಸಿರುವ ಬಿಜೆಪಿ ರಾಜ್ಯ ವಕ್ತಾರ, ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಬೇಕು ಎಂದು ಬಿಜೆಪಿ ಎಸ್ಸಿ ಮರ‍್ಚಾ ರಾಜ್ಯ ಉಪಾಧ್ಯಕ್ಷ ಗೋಪಾಲ ಘಟಕಾಂಬಳೆ ಆಗ್ರಹಿಸಿದ್ದಾರೆ.

ಬಿಜೆಪಿ ಎಸ್.ಸಿ ಮರ‍್ಚಾ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ ಅವರು ಅಲ್ಪ ಸಮಯದಲ್ಲೇ ರಾಜ್ಯ ಪ್ರವಾಸ ಮಾಡಿ ಪಕ್ಷ ಕಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ರ‍್ಥಿಗಳ ಪರವಾಗಿ ಪ್ರಚಾರ ಮಾಡಿ ಅವರ ಗೆಲುವಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆಮಾಡಿ ಸಾಮಾಜಿಕ ಪ್ರಾತಿನಿಧ್ಯ ಕೊಡೆಬೇಕು ಎಂದು ಪ್ರಕಟಣೆಯಲ್ಲಿ ಗೋಪಾಲ ಘಟಕಾಂಬಳೆ ತಿಳಿಸಿದ್ದಾರೆ.

ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕಾಗಿ ಕಾನೂನು ತಿದ್ದುಪಡಿ ಮಾಡಿ ಜಮೀನು ದಾರಿ ಸಮಸ್ಯೆ ಬಗೆಹರಿಸಲು ತಹಶೀಲ್ದಾರುಗಳಿಗೆ ಸಂಪೂರ್ಣ ಅಧಿಕಾರವನ್ನು ವಹಿಸಿಕೊಡಲು ಆಗ್ರಹ


ವಿಜಯಪುರ: ಜಮೀನು ದಾರಿ ಸಮಸ್ಯೆ ಇಥ್ಯರ್ತಕ್ಕಾಗಿ ಕಾನೂನು ತಿದ್ದುಪಡಿ ಮಾಡಲು ಈ ಗಂಭೀರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚಿಸಿ ಕ್ರಮ ವಹಿಸುವಂತೆ ಒತ್ತಾಯಿಸಿ ಕಂದಾಯ ಇಲಾಖೆ ಆಯುಕ್ತರಾದ ಪಿ. ಸುನೀಲ ಕುಮಾರ ಅವರನ್ನು ಬೆಂಗಳೂರಿನ ಬಹುಮಹಡಿ ಕಟ್ಟದ ಆಯುಕ್ತಾಲದಯಲ್ಲಿ ಭೇಟಿ ನೀಡಿ ಆಯುಕ್ತರೊಂದಿಗೆ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಬುಧವಾರ ದಿನಾಂಕ: 10-07-2024 ರಂದು ಚರ್ಚಿಸಿದರು.

ಈ ಸಂದರ್ಭದಲ್ಲಿ ಅರವಿಂದ ಕುಲಕರ್ಣಿ ಮಾತನಾಡಿ, ರಾಜ್ಯದ ರೈತರು ತಮ್ಮ ತಮ್ಮ ಜಮೀನುಗಳಿಗೆ ಹೋಗಲು ಮುಂದಿನ ರೈತರು ದಾರಿ ಕೊಡದ ಕಾರಣ ಜಮೀನು ಭಿತ್ತನೆ ಮಾಡದೆ ಜಮೀನು ಬೀಳು ಬಿದ್ದು ರೈತ ಕುಟುಂಬಗಳು ಉಪವಾಸ ಬೀಳುವ ಪರಸ್ಥಿತಿ ನಿರ್ಮಾಣವಾಗಿದೆ ಈ ವಿಷಯವಾಗಿ ಕಳೆದ 10 ವರ್ಷಗಳಿಂದ ಹೋರಾಟ ಮಾಡಿ ಸರಕಾರ ಗಮನ ಸೆಳೆಯಲಾಗಿತ್ತು ನಂತರ ಸರಕಾರ ಕಾಟಾಚಾರಕ್ಕೆ ಎಂಬAತೆ ಸುತ್ತೋಲೆ ಹೊರಡಿಸಿದೆ. ಆದರೆ ರಾಜ್ಯದ ಯಾವೊಬ್ಬ ತಹಶೀಲ್ದಾರಗಳು ದಾರಿ ಮಾಡಿಕೊಟ್ಟ ಉದಾಹರಣೆ ಇಲ್ಲ ತಹಶೀಲ್ದಾರಗಳನ್ನು ಕೇಳಿದರೆ ಸರಕಾರದ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ದಾರಿ ಮಾಡಿಕೊಡಲು ಆದೇಶ ವಿಲ್ಲ ಆದ್ದರಿಂದ ಮಾಡಿಕೊಡಲು ಸಾದ್ಯವಿಲ್ಲವೆಂದು ರೈತರಿಗೆ ಹೇಳುತಿದ್ದಾರೆ. ಇದರಿಂದ ಸರಕಾರದ ಸುತ್ತೋಲೆಗೆ ಬೆಲೆ ಇಲ್ಲದಂತಾಗಿದೆ ಆದ್ದರಿಂದ ಜುಲೈ 15 ರಂದು ಪ್ರಾರಂಭವಾಗಲಿರುವ ವಿಧಾನ ಸಭಾ ಅಧಿವೇಶನದಲ್ಲಿ ಜಮೀನು ದಾರಿ ವಿಷಯವನ್ನು ಚರ್ಚಿಸಿ ಸೂಕ್ತ ಕಾನೂನು ತಿದ್ದುಪಡಿ ಮಾಡಿ ತಹಶೀಲ್ದಾರುಗಳಿಗೆ ದಾರಿ ಮಾಡಿಕೊಡುವ ಅಧಿಕಾರವನ್ನು ವಹಿಸಿಕೊಡಬೇಕು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರದಂತೆ ಕಾನೂನು ತಿದ್ದುಪಡಿ ಮಾಡಬೇಕೆಂದು ಮತ್ತು ಕರ್ನಾಟಕ ವಿಧಾನಸಭೆ ಈ ಗಂಭೀರ ಸಮಸ್ಯೆಯನ್ನು ಅಧಿವೇಶನದಲ್ಲಿ ಚರ್ಚಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪಾಂಡು ಹ್ಯಾಟಿ, ವಿಠ್ಠಲ ಬಿರಾದಾರ, ಹೊನಕೇರೆಪ್ಪ ತೆಲಗಿ, ಮಲಗೆಪ್ಪಾ ಸಾಸನೂರ, ಲಾಲಸಾಬ ಹಳ್ಳೂರ, ಬಸಪ್ಪ ತೋಟದ, ಮುದನೂರ ಬಿ. ಗ್ರಾಮದ ಜಯಕರ್ನಾಟಕ ಸಂಘಟನೆ ಹುಣಸಗಿ ತಾಲೂಕಾಧ್ಯಕ್ಷ ಪ್ರಭುಗೌಡ ಪೋತರಡ್ಡಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ರಾಜ್ಯಾದ್ಯಂತ ಜುಲೈ 15. 2024 ರಿಂದ ಬಿಸಿಯೂಟ ಬಂದ್ ಅನಿರ್ದಿಷ್ಟಾವಧಿ ಹೋರಾಟ


ವಿಜಯಪುರ : ವಿಜಯಪುರ ನಗರದ ಬಾರಾ ಕಮಾನಿನಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ವಿಜಯಪುರ ಜಿಲ್ಲಾ ಸಮಿತಿ ಪದಾಧಿಕಾರಿಗಳ ಪೂರ್ವಭಾವಿ ಸಭೆ ಜರುಗಿತು.

ಈ ಸಂದರ್ಭದಲ್ಲಿ ಅಕ್ಷರದಾಸೋಹ ನೌಕರರ ಸಂಘದ ಅಧ್ಯಕ್ಷರಾದ ಕಾಳಮ್ಮ ಬಡಿಗೇರ ಮಾತನಾಡಿ, ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘಟನೆ (ಸಿಐಟಿಯು) ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ 2023 ಅಕ್ಟೋಬರ್ 30 ರಿಂದ ನವೆಂಬರ್ 10 ರವರೆಗೆ ಅನಿರ್ದಿಷ್ಟಾವಧಿ ಹೋರಾಟ ನಡೆದಿದೆ. ಈ ಹೋರಾಟದ ಸಂದರ್ಭದಲ್ಲಿ ನಮ್ಮ ಬೇಡಿಕೆಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು. ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿರ್ದೆಶಕರು ಮತ್ತು ಸಂಘಟನೆ ಮುಖಂಡರೊAದಿಗೆ 04-11-2023 ರಂದು ಆಯುಕ್ತರ ಕಛೇರಿಯಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. 10-11- 2023 ರಂದು ಮಾನ್ಯ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಂಘಟನೆಯ ಪದಾಧಿಕಾರಿಗಳ ಜೊತೆ ಸಭೆ ನಡೆದಿದೆ. 15-11-2023 ರಂದು ಮಾನ್ಯ ಶಿಕ್ಷಣ ಸಚಿವರು ನಮ್ಮ ಬೇಡಿಕೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ಶೀಘ್ರದಲ್ಲಿ ಕ್ರಮ ಕೈಗೊಳ್ಳುವ ಕುರಿತು ಲಿಖಿತವಾಗಿ ಪತ್ರ ಕಳುಹಿಸಿದ್ದರು. ಮತ್ತು ಹೋರಾಟವನ್ನು ವಾಪಸ್ಸು ಪಡೆಯಲು ಕೋರಿದ್ದರಿಂದ ಇಲಾಖೆಯ ಮಾತಿಗೆ ಗೌರವಿಸಿ ಹೋರಾಟವನ್ನು ವಾಪಸ್ಸು ಪಡೆಯಲಾಗಿತ್ತು.

ಅಕ್ಷರದಾಸೋಹ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಸುಮಂಗಲಾ ಆನಂದಶೆಟ್ಟಿ ಮಾತನಾಡಿ, 2022 ರಿಂದ 2024 ರವರೆಗೆ 10,500 ಕ್ಕೂ ಹೆಚ್ಚಿನ ನೌಕರರನ್ನು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ 3-4 ಹಂತದ ಹೋರಾಟಗಳು ನಡೆದಿವೆ. ಹೋರಾಟದ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಚಿವರು ಜಂಟಿ ಸಭೆಗಳನ್ನು ನಡೆಸಲಾಗಿದೆ. ಹೋರಾಟದ ಸಂದರ್ಭದಲ್ಲಿ ಮಾತುಕತೆ ನಡೆಸಿದಂತೆ ನಿವೃತ್ತಿ ಹೊಂದಿದ ಮತ್ತು ಹೊಂದುತ್ತಿರುವ ಅಡುಗೆ ನೌಕರರಿಗೆ ಇಡಿಗಂಟು ಜಾರಿ ಮಾಡಬೇಕು. ಚುನಾವಣಾ ಸಂದರ್ಭದಲ್ಲಿ ವೇತನ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೂ ಜಾರಿ ಆಗಿರುವುದಿಲ್ಲ. ಜಾರಿ ಆಗುವವರೆಗೆ ಯಾವುದೇ ನೌಕರರನ್ನು ಕೆಲಸದಿಂದ ಕೈ ಬಿಡಬಾರದು. ದಯಾಳುಗಳಾದ ತಾವು ಈ ಸಮಸ್ಯೆಯನ್ನು ಬಗೆಹರಿಸಿ ನ್ಯಾಯ ಒದಗಿಸಬೇಕೆಂದು ಹೇಳಿದರು.

ಅಕ್ಷರದಾಸೋಹ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಸುರೇಖಾ ವಾಗ್ಮೊಡೆ ಮಾತನಾಡಿ, ಇದುವರೆಗೂ ಯಾವುದೇ ಸಮಸ್ಯೆಗೆ ಪರಿಹಾರ ಸಿಗದೆ ಇರುವ ಕಾರಣಕ್ಕೆ ಆನಿವಾರ್ಯವಾಗಿ ಜುಲೈ 15. 2024 ರಿಂದ ಬಿಸಿಯೂಟ ನೌಕರರು ತಮ್ಮ ಕೆಲಸಸ್ಥಗಿತ ಗೊಳಿಸಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರು ವಿಜಯಪುರ ಜಿಲ್ಲೆಯಿಂದ ಪಾಲ್ಗೊಳ್ಳುತ್ತಿದ್ದಾರೆ.

ಈ ಸಂದರ್ಭದಲ್ಲಿ ಸುವರ್ಣ ರಾಠೋಡ, ಬಿಸ್ಮಿಲ್ಲಾ ಇನಾಂದಾರ, ಸೈನಾಜ ಮುಲ್ಲಾ, ಭಾರತಿ ಮಠಪತಿ, ರಾಜಶ್ರೀ ಬಗಲಿ, ದಾನಮ್ಮ ರೇಣುಕಾ, ಸುಮಂಗಲಾ ಹಿರೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

ಹಳೆಯ ಸಂಸತ್ ಭವನದ ಮೂಲ ಸ್ಥಳದಲ್ಲಿ ಪುನಃ ಪುತ್ಥಳಿ ಸ್ಥಾಪಿಸಲು ಆಗ್ರಹ



ವಿಜಯಪುರ : ನವದೆಹಲಿಯ ಐತಿಹಾಸಿಕ ಮಹತ್ವದ ಹಳೆಯ ಸಂಸತ್ ಭವನದ ಮುಂದಿದ್ದ, ರಾಷ್ಟçದ ಮಹಾನ್ ನಾಯಕರಾದ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿ ತೆರುವುಗೊಳಿಸಿದನ್ನು ಖಂಡಿಸಿ ಬುದ್ಧ, ಬಸವ, ಅಂಬೇಡ್ಕರ್ ಸೇವಾ ಸಂಸ್ಥೆಯವತಿಯಿAದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾ ರ‍್ಯಾಲಿಯ ನೇತೃತ್ವ ವಹಿಸಿದ್ದ ಬುದ್ಧ, ಬಸವ, ಅಂಬೇಡ್ಕರ್ ಸೇವಾ ಸಂಸ್ಥೆಯ ಅಧ್ಯಕ್ಷ ತುಳಸಿರಾಮ ಹರಿಜನ ಮಾತನಾಡಿ, ಭಾರತೀಯ ಚರಿತ್ರೆಯ ಪುಟದಲ್ಲಿ ಅಜರಾಮರವಾಗಿ ಉಳಿದ ವಿಶ್ವಮಾನ್ಯ ಅಮೂಲ್ಯ ರತ್ನಗಳೆಂದರೆ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಅಂತಹ ಮಹಾನ್ ನಾಯಕರಿಗೆ ಗೌರವ ಸಲ್ಲಿಸುವ ದ್ಯೋತಕವಾಗಿ ಹಿಂದಿನ ನಾಯಕರು ರಾಷ್ಟçದ ಐತಿಹಾಸಿಕ ಸಂಸತ್ ಭವನದ ಮುಂದೆ ಪುತ್ಥಳಿಗಳನ್ನು ನಿರ್ಮಿಸಿ ಚರಿತ್ರೆಯ ಪುಟದಲ್ಲಿ ಅಚ್ಛಳಿಯದಂತೆ ನೋಡಿಕೊಂಡಿದ್ದರು. ಆದರೆ ದೇಶದಲ್ಲಿರುವ ಈಗಿನ ಕೇಂದ್ರ ಸರ್ಕಾರ ಯಾವುದೇ ಸಕಾರಣವಿಲ್ಲದೇ ಏಕಾಏಕಿ ಪ್ರತಿಮೆಗಳನ್ನು ತೆರವುಗೊಳಿಸಿರುವ ಕ್ರಮ ವಿಶ್ವವ್ಯಾಪಿ ಇರುವ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಅಸಂಖ್ಯಾತ ಅನುಯಾಯಿಗಳಿಗೆ ಆಘಾತವನ್ನುಂಟು ಮಾಡಿದೆ. ಕೂಡಲೇ ರಾಷ್ಟçಪತಿಗಳು ಹಳೆಯ ಸಂಸತ್ ಭವನದ ಮೂಲ ಸ್ಥಳದಲ್ಲಿ ಪುನಃ ಪ್ರತಿಷ್ಠಾಪಿಸುವ ಮೂಲಕ ಗೌರವ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು. 

ಈ ಸಂದರ್ಭ ಯುವ ಮುಖಂಡ ಪ್ರತಾಪ ಚಿಕ್ಕಲಕಿ ಮಾತನಾಡಿ, ವಿದೇಶ ಮೂಲದ ಪರಕೀಯ ದಾಳಿಕೋರರ ದಾಳಿಗೆ ತುತ್ತಾದ ವಿಶ್ವಪ್ರಸಿದ್ಧ ನಳಂದಾ ವಿಶ್ವವಿದ್ಯಾಲಯವನ್ನು ಮರು ನಿರ್ಮಾಣ ಮಾಡುವ ಮೂಲಕ ಭಾರತವು ಎಲ್ಲ ದಾಳಿಗಳನ್ನು ತಡೆದುಕೊಂಡು ಮತ್ತೆ ಮತ್ತೆ ಪುಟಿದೇಳುತ್ತದೆ ಎಂಬುದನ್ನು ಸಾಬೀತು ಪಡಿಸಿದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದಾರೆ. ಇಂತಹ ಪ್ರಧಾನ ಮಂತ್ರಿಯವರು ಹಳೆಯ ಸಂಸತ್ ಭವನ ಮುಂದಿನ ಛತ್ರಪತಿ ಶಿವಾಜಿ ಮಹರಾಜರು ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗಳನ್ನು ಯಾವ ಉದ್ದೇಶಕ್ಕೆ ಸ್ಥಳಾಂತರ ಮಾಡಿದ್ದಾರೆ ಎಂಬುದನ್ನು ದೇಶದ ಜನತೆಗೆ ಮನವರಿಕೆ ಮಾಡಿಕೊಡಬೇಕು ಜೊತೆಗೆ ಮೂಲ ಸ್ಥಳದಲ್ಲಿಯೇ ಪುನಃ ಪ್ರತಿಷ್ಠಾಪನೆ ಮಾಡಬೇಕೆಂದು ಒತ್ತಾಯಿಸಿದರು. 

ಇದೇ ಸಂದರ್ಭ ಮುಖಂಡರಾದ ಜಿತೇಂದ್ರ ಕಾಂಬಳೆ, ಮತೀನಕುಮಾರ ದೇವದರ, ವೈ.ಸಿ. ಮಯೂರ, ಭಾರತಿ ಹೊಸಮನಿ, ನಾಗೇಶ ತಳಕೇರಿ, ಪರಶುರಾಮ ಚಲವಾದಿ, ರಮೇಶ ಕವಲಗಿ, ಅಕ್ಷಯ ಅಜಮನಿ, ಬಸವಕುಮಾರ ಕಾಂಬಳೆ, ಗೋಪಿನಾಥ ಚಲವಾದಿ, ಪ್ರದೀಪ ಚಲವಾದಿಯವರು ಮಾತನಾಡಿದರು. 

ಈ ಸಂದರ್ಭ ಸಂಜು ಮೇಲಿನಮನಿ, ರಘು ಕಣಮೇಶ್ವರ, ಮಲ್ಲು ಜಾಲಗೇರಿ, ವಿವೇಕ ಶಾಹಾಪೂರ, ವೆಂಕಟೇಶ ವಗ್ಯಾಣವರ, ಸಿದ್ಧು ರಾಯಣ್ಣವರ, ಶಂಕರ ಚಲವಾದಿ, ಸಂಜು ಕಂಬಾಗಿ, ಆಕಾಶ ಕಲ್ಲವಗೋಳ, ಬಾಗ್ಯಶ್ರೀ ವಗ್ಯಾಣವರ, ಲಕ್ಷö್ಮಣ ಬಿರಾದಾರ, ಮಲ್ಲಿಕಾರ್ಜುನ ಪಾಟೀಲ, ಲಕ್ಷö್ಮಣ ಚಲವಾದಿ, ರೋಹಿತ ಮಲಕಣ್ಣವರ, ಮಂಜುನಾಥ ಶಿವಶರಣ, ರಮೇಶ ಕಾಂಬಳೆ, ಅಪ್ಪಾಸಾಬ ಬನಸೋಡೆ, ಮಲ್ಲು ಬನಸೊಡೆ, ವಿಕಾಸ ಹೊಸಮನಿ, ರುದ್ರು ಬನಸೋಡೆ ಇದ್ದರು.

ಇದಕ್ಕೂ ಮುನ್ನ ಪ್ರತಿಭಟನಾ ರ‍್ಯಾಲಿಯು ನಗರದ ಶ್ರೀ ಸಿದ್ದೇಶ್ವರದಿಂದ ಆರಂಭಗೊAಡು ಗಾಂಧಿವೃತ್ತ, ಬಸವೇಶ್ವರ, ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, July 9, 2024

10-07-2024 EE DIVASA KANNADA DAILY NEWS PAPER

ಜುಲೈ 13ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ -ಜಿಲ್ಲಾ ನ್ಯಾಯಾಧೀಶ ಶಿವಾಜಿ ನಲವಡೆ


ವಿಜಯಪುರ :   ಜಿಲ್ಲೆಯಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜುಲೈ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತ್‌ನಲ್ಲಿ ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿರುವುದರಿಂದ ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶಿವಾಜಿ ಅನಂತ ನಲವಡೆ ಅವರು ತಿಳಿಸಿದರು.

ಬುಧವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಕಟ್ಟಡದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವಾನ್ವಿತ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ,ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕಾ ನ್ಯಾಯಾಲಯಗಳಲ್ಲಿ ಜುಲೈ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ರಾಜಿಗೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು,ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು,ವೈವಾಹಿಕ ಪ್ರಕರಣಗಳು,ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬAಧಪಟ್ಟ (ರೇರಾ) ಪ್ರಕರಣಗಳು,ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು,ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು(ಡಿ.ಆರ್.ಟಿ) ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ,ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು,ಕಾರ್ಮಿಕ ವಿವಾದಗಳು,ಭೂಸ್ವಾಧೀನ ಪ್ರಕರಣಗಳು,ವೇತನ ಮತ್ತು ಭತ್ಯೆಗಳಿಗೆ ಸಂಬAಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು,ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ ಎಂದು ಹೇಳಿದರು.

ಕಕ್ಷಿಗಾರರು ತಮ್ಮ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಪ್ರಕರಣ/ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿ ಜನರಿಗೆ ತ್ವರಿತವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಿಸಲಾಗುವುದು. ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು.

ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ದಿನಾಂಕ: 01.07.2024ಕ್ಕೆ ಒಟ್ಟು 66,736 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಇವುಗಳಲ್ಲಿ ಈಗಾಗಲೇ 16,393 ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಹೆಚ್ಚಿನ ಪ್ರಕರಣಗಳನ್ನು ರಾಜೀ ಸಂಬAಧಿಸಿದ ವಕೀಲರ ಹಾಗೂ ಕಕ್ಷಿದಾರರೊಂದಿಗೆ ಚರ್ಚಿಸಿ, ರಾಜಿಗಾಗಿ ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಕರಣಗಳು ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ರಾಜಿ ಮೂಲಕ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಜುಲೈ 13 ರಂದು ನಡೆಯುವÀ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅಪೌಷ್ಠಿಕ ನಿವಾರಣಾ ರಾಜ್ಯ ಸಲಹಾ ಸಮಿತಿಯಿಂದ ಉಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಾದ ಪ್ರಾಧಿಕಾರಕ್ಕೆ ನಿರ್ದೇಶನದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಒದಗಿಸಿರುವ ಮೂಲಭೂತ ಸೌಲಭ್ಯ ಅವುಗಳ ಸ್ಥಿತಿ ಗತಿ ಕುರಿತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಜುಲೈ.29ರಿಂದ ಆ.3ರವರೆಗೆ ವಿಶೇಷ ಲೋಕ ಅದಾಲತ್ : ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ 75ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ29ರಿಂದ ಆಗಸ್ಟ್ 3ರವರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ಲೋಕ ಅದಾಲತ್ ಕಾಯಕ್ರಮ ಹಮ್ಮಿಕೊಳ್ಳಲಾಗಿದೆ. 

 ಸರ್ವೋಚ್ಛ ನ್ಯಾಯಾಲಯದಲ್ಲಿ ಜಿಲ್ಲೆಯ 26 ಪ್ರಕರಣಗಳು ಬಾಕಿ ಇದ್ದು, ಈಗಾಗಲೇ ಸದರಿ ಪ್ರಕರಣಗಳನ್ನು ಪ್ರತಿ ದಿನ ಜಿಲ್ಲಾ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಪೂರ್ವ ಸಂಧಾನ ಮಾಡಲಾಗುತ್ತಿದ್ದು, ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿರುವ ಪಕ್ಷಗಾರರು ಖುದ್ದಾಗಿ ಅಥವಾ ವಕೀಲರೊಂದಿಗೆ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಪೂರ್ವ ಸಂಧಾನ ಮಾಡಿಕೊಳ್ಳುವಂತೆ ಅವರು ತಿಳಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಅಂಬಲಿ, 4ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಜೆಎಂಎಫ್ ಸಿ ಮಹೇಶ ಚಂದ್ರಕಾAತ ಅವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Sunday, July 7, 2024

ಘನತೆಯ ಬದುಕು ಸಾಗಿಸಲು ಕಾರಣ ನಮ್ಮ ಶ್ರೇಷ್ಠ ಸಂವಿಧಾನ

 


ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ : ಬದುಕಿರುವಾಗಲೂ ಬಾಬಾ ಸಾಹೇಬರು ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕಡೆಗೆ ಇದ್ದರು ಅವರ ಸಾವಿನ ನಂತರವೂ ಬಡವರನ್ನು ನಿಕೃಷ್ಟರನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಕಾಪಾಡುತ್ತಿರುವುದು ಬಾಬಾ ಸಾಹೇಬರು ಬರೆದ ಸಂವಿಧಾನವೇ ವಿನಹ ಯಾವ ವ್ಯಕ್ತಿಯೂ ಅಲ್ಲ ಸರಕಾರವೂ ಅಲ್ಲ. ಅಲ್ಲ ವೆಂದು ಕಲಬುರ್ಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪ ಡಾ. ಅಪ್ಪಗೆರೆ ಸೋಮಶೇಖರ್ ಹೇಳಿದರು.

 ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ  ಕರ್ನಾಟಕ ರಾಜ್ಯ ಛಲವಾದಿ ಸರಕಾರಿ ನೌಕರರ ಸಂಘದ ಉದ್ಘಾಟನೆ ಹಾಗೂ ಚಲವಾದಿ ಸರಕಾರಿ ನೌಕರರ ಸಂಘಟನೆಯ ಸಭೆಯ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

 ನಮ್ಮೆಲ್ಲರ ಘನತೆಯ ಬದುಕಿಗೆ ಕಾರಣವಾದದ್ದು ಈ ಸಂವಿಧಾನ ಇಂದು ಅಪಾಯದಲ್ಲಿದೆ ಅದನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಹೆಗಲ ಮೇಲಿದೆ ಎಂದರು.

 ಇನ್ನೋರ್ವ ಮುಖ್ಯ ಅತಿಥಿ ಪ್ರೊ ಬಸವರಾಜ ಜಾಲವಾದಿ ಮಾತನಾಡಿ ಆರ್ಥಿಕ ಭದ್ರತೆ ಇಲ್ಲದಿದ್ದರೆ ಮದುವೆಯನ್ನು ಮುಂದೂಡಿ. ನಿಮ್ಮ ಗಂಡ ಕುಡಿದು ಮನೆಗೆ ಬರುತ್ತಿದ್ದರೆ ಅವನಿಗೆ ಊಟ ಹಾಕಬೇಡಿ ಎಂದು ಮಾರ್ಮಿಕವಾಗಿ ನುಡಿದರು. ಪೂರ್ವಗ್ರಹ ಪೀಡಿತ ಸಾಹಿತ್ಯವನ್ನು ಓದದೆ,ಅತಿ ಹೆಚ್ಚು ಮೊಬೈಲ್ ಬಳಸದೆ  ಧನಾತ್ಮಕ ಸಾಹಿತ್ಯವನ್ನು ಓದುವುದರ ಮೂಲಕ ಬದುಕು ಮತ್ತು ಸಮಾಜವನ್ನು ಸರಿದಾರಿಗೆ ತರಬಹುದಾಗಿದೆ ಎಂದು ಎಂದು ಸಲಹೆ ನೀಡಿದರು.

 ಹೆಚ್ ಬಿ ಸಿಂಗ್ಯಾಗೋಳ್ ಮಾತನಾಡಿ ಸಮಾಜದ ಪ್ರತಿಭೆಗಳನ್ನು ಗುರುತಿಸಿ ದಾರಿ ತೋರಿಸುವ ಕೆಲಸ ದಲಿತ ನೌಕರರ ಹೆಗಲ ಮೇಲಿದೆ ಎಂದರು.

 ಸುರೇಶ ಸಿಂಧೂರ್ ಹಾಗೂ ಚಿದಾನಂದ ಕಾಂಬಳೆ ಮಾತನಾಡಿದರು. ಪೂಜ್ಯ ನಾಗರತ್ನ ಬಂತೇಜಿ ದಿವ್ಯ ಸಾನಿಧ್ಯ  ವಹಿಸಿ  ತ್ರಿಸರಣ ಬೋಧಿಸಿದರು. 



 ಜಗದೀಶ್ ಚೌರ್ , ಶ್ರೀಮತಿ ಅನುರಾಧ ಚಂಚಲಕರ್, ಡಿವೈಎಸ್ಪಿ ಸುನಿಲ್ ಕಾಂಬಳೆ, ಚಂದ್ರಕಾಂತ್ ಕಾಂಬಳೆ, ಶಿವಲಿಂಗ ಕುರಿಯನ್ನವರ್, ಮುದ್ದಣ್ಣ ಭೀಮನಗರ್ , ರಾಹು ಸಾಹೇಬ್ ಗವಾರಿ, ರಾಕೇಶ್ ಇಂಗಳಗಿ, ಡಾ. ಅರವಿಂದ ಲಂಬು ಹಾಜರಿದ್ದರು.



ರಾಜೇಶ್ ಚಲವಾದಿ  ಕ್ರಾಂತಿ ಗೀತೆ ಹಾಡಿದರು. ಶಶಿಕಾಂತ್ ಹಾರಿಮನಿ ಕಾರ್ಯಕ್ರಮ ನಿರ್ವಹಿಸಿದರು. 

ಇದೇ ಸಂದರ್ಭದಲ್ಲಿ ಛಲವಾದಿ ವಧು ವರರ ಸಮಾವೇಶ ಜರುಗಿತು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Thursday, July 4, 2024

05-07-2024 EE DIVASA KANNADA DAILY NEWS PAPER

ಸ್ವಾಸ್ತö್ಯ ಸಮಾಜ ನಿರ್ಮಿಸಲು ಸೇವಾ ಮನೋಭಾವನೆ ಅಗತ್ಯ : ಟಿ. ಭೂಬಾಲನ್



ವಿಜಯಪುರ : ವೈದ್ಯರ ಕಾರ್ಯ ಒಂದು ಆರೋಗ್ಯ ಪೂರ್ಣ ಸಮಾಜ ಕಟ್ಟುವುದು ಎಲ್ಲರೂ ಸೇವಾ ಮನೋಭಾವನೆಯಿಂದ ಕೆಲಸ ಮಾಡಿ ಆಗ ಸ್ವಾಸ್ತö್ಯ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಐಎಂಎ ಭವನದಲ್ಲಿ ಭಾರತೀಯ ವೈದ್ಯಕೀಯ ಸಂಘ ವಿಜಯಪುರ ಘಟಕದ ವತಿತಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವೈದ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಆರೋಗ್ಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಿಕ್ಕೆ ಖಾಸಗಿ ವೈದ್ಯರು, ಭಾರತೀಯ ವೈದ್ಯಕೀಯ ಸಂಘ ನಿರಂತರ ಸರ್ಕಾರಕ್ಕೆ ಸಹಕಾರ ನೀಡುತ್ತಿದ್ದಾರೆ. ಕೆಪಿಎಂಇ ಹಾಗೂ ಪಿಸಿಪಿಏನ್.ಡಿ.ಟಿ ಕಾಯ್ದೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ಹೆಣ್ಣು ಬ್ರೂಣ ಹತ್ಯೆಯಂತ ಸಮಾಜ ವಿರೋಧಿ ಪಿಡುಗುಗಳನ್ನು ಬೇರು ಸಹಿತ ಕಿತ್ತಿ ಎಸೆಯಬೇಕಾಗಿದೆ. ಕಾನೂನಿನ ಜೊತೆ ಜೊತೆಗೇ ವೈದ್ಯರ ಇಚ್ಚಾಶಕ್ತಿ ಹಾಗೂ ಸಹಕಾರ ಅತೀ ಮುಖ್ಯವಾಗಿದೆ ಎಂದರು.


ಬಿ.ಎಲ್.ಡಿ.ಈ ಡೀಮ್ಡ್ ವಿವಿ ಕುಲಪತಿ ಡಾ.ಆರ್.ಎಸ್.ಮುಧೋಳ್ ಮಾತನಾಡಿ, ವೈದ್ಯರು ನಿರಂತರ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುತ್ತಾರೆ, ಇಂತಹ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಆಗುಹೋಗುಗಳನ್ನು ಪರಸ್ಪರ ಚರ್ಚಿಸಿ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ರವಿಕುಮಾರ ಬಿರಾದಾರ ಮಾತನಾಡಿದರು.

ಈ ಸಂದರ್ಭದಲ್ಲಿ ಹಿರಿಯ ವೈದ್ಯ ಡಾ.ಅರುಣ ಇನಾಮದಾರ, ಡಾ.ತೇಜಶ್ವಿನಿ ವಲ್ಲಭ, ಡಾ.ಅನಿಲ ನಾವದಗಿ, ಡಾ.ಜೈಬನ್ನಿಸಾ ಬೀಳಗಿ, ಡಾ.ವಿಜಯಾ ಬಿರಾದಾರ, ಅಲ್ ಅಮಿನ್ ಮೆಡಿಕಲ್ ಕಾಲೇಜ್‌ನ ಡಾ.ಬಿ.ಎಸ್.ಪಾಟೀಲ, ಜೆ.ಎಸ್.ಎಸ್ ಆಸ್ಪತ್ರೆಯ ನರರೋಗ ತಜ್ಞ ಡಾ.ಮಯೂರ್ ಕಾಕು, ಡಾ.ಆನಂದ ಪಾಟೀಲ, ಡಾ.ದಯಾನಂದ ಬಿರಾದಾರ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Tuesday, July 2, 2024

03-07-2024 EE DIVASA KANNADA DAILY NEWS PAPER

ವಸತಿ ನಿಲಯಗಳ ಪರಿಶೀಲನೆ ಮಾಡಿದ ಜಿಪಂ ಸಿಇಒ ಪ್ರತಿದಿನವೂ ವಸತಿನಿಲಯಗಳ ನಿರ್ವಹಣೆಗೆ ಕ್ರಮವಹಿಸಿ: ರಿಷಿ ಆನಂದ ಸೂಚನೆ


ವಿಜಯಪೂರ: ವಸತಿ ನಿಲಯಗಳಲ್ಲಿ ಅಡುಗೆ ಕೋಣೆ, ಭೋಜನಾಲಯ, ದಾಸ್ತಾನು ಕೊಠಡಿ, ಸ್ನಾನದ ಗೃಹಗಳು, ಶುದ್ಧ ಕುಡಿಯುವ ನೀರಿನ ಘಟಕಗಳ ಸ್ವಚ್ಚತೆ ಹಾಗೂ ಕಲ್ಪಿಸಿರುವ ಮೂಲಭೂತ ಸೌಲಭ್ಯಗಳನ್ನು ಪ್ರತಿದಿನವೂ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಸೂಚಿಸಿದರು.

ಅವರು ಸೋಮವಾರ ವಿಜಯಪುರ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಮೂರು ಬಾಲಕಿಯರ ವಸತಿ ನಿಲಯಗಳು ಹಾಗೂ ಎರಡು ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ, ಅಲ್ಲಿನ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲಿನೆ ನಡೆಸಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿದ್ಯಾರ್ಥಿಗಳಿಗೆ ಸಮಯಾನುಸಾರ ಉಪಹಾರ, ಊಟ, ಶುದ್ಧ ಕುಡಿಯುವ ನೀರು ಮತ್ತು ಮೂಲಸೌಕರ್ಯಗಳನ್ನು ಒದಗಿಸಲು ಆಧ್ಯತೆ ನೀಡಬೇಕು. ವಸತಿ ನಿಲಯದ ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬAಧಿಸಿದ ಪುಸ್ತಕಗಳು, ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ಪೂರೈಸಬೇಕು. ಗಣಕಯಂತ್ರ ಕೊಠಡಿಗಳಲ್ಲಿ ಕಡ್ಡಾಯವಾಗಿ ಇಂಟರ್ನೆಟ್ ವ್ಯವಸ್ಥೆ ಒದಗಿಸಬೇಕು. ಪ್ರತಿ ಮಾಹೆ ತಪ್ಪದೇ ವೈದ್ಯಕೀಯ ತಪಾಸಣೆ ನಡೆಸಿ, ಅವರ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಪೂರೈಸಿ ಕ್ರೀಡೆಯಲ್ಲಿ ತೊಡಗುವಂತೆ ಪ್ರೇರೆಪಿಸಬೇಕು. ವಸತಿ ನಿಲಯದಲ್ಲಿ ಸಣ್ಣಪುಟ್ಟ ದುರಸ್ತಿ ಕಾರ್ಯಗಳು ಬಾಕಿ ಇದ್ದಲ್ಲಿ ತುರ್ತಾಗಿ ದುರಸ್ತಿಪಡಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.

ಅಡುಗೆ ಕೊಠಡಿ, ಭೋಜನಾಲಯ, ಸೋಲಾರ್ ವ್ಯವಸ್ಥೆ, ವಿದ್ಯಾರ್ಥಿ ತಂಗುವ ಕೊಠಡಿಗಳು, ಆಹಾರ ಪದಾರ್ಥಗಳ ಪರಿಶೀಲಿಸಿದರು.

ವಸತಿ ನಿಲಯದ ಆವರಣದಲ್ಲಿರುವ ಗ್ರಂಥಾಲಯಕ್ಕೆ ತೆರಳಿ, ವಿದ್ಯಾರ್ಥಿ ಜೀವನ ಬಹು ಪ್ರಮುಖ ಘಟ್ಟವಾಗಿದ್ದು, ಓದಿನೆಡೆಗೆ ಗಮನಹರಿಸಬೇಕು ಪಠ್ಯ ವಿಷಯ ಕರಗತ, ಮಾಡಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಜ್ಞಾನವೂ ಅಗತ್ಯ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಕೈಗೊಳ್ಳಬೇಕು. ಓದಿನಲ್ಲಿ ಆಸಕ್ತಿ ತಾಳಿದಾಗ ಗುರಿ ಸಾಧಿಸಲು ಸಾಧ್ಯ ಎಂದು ಸಂವಾದ ನಡೆಸಿದರು. 

ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದೃಢವಿಶ್ವಾಸದಿಂದ ಅಧ್ಯಯನ ಕೈಗೊಂಡು, ಉತ್ತಮ ಸಾಧನೆ ತೋರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಈರಣ್ಣ ಆಶಾಪುರ, ಸಹಾಯಕ ನಿರ್ದೇಶಕರಾದ ಎಸ್.ಎಮ್. ಪಾಟೀಲ ಹಾಗೂ ವಸತಿ ನಿಲಯಗಳ ನಿಲಯ ಪಾಲಕರಾದ ಟಿ.ವಿ.ಹಂಚನಾಳ, ಪಾರ್ವತಿ ಆಲಮೇಲ, ರೂಪಾ ಮೇತ್ರಿ, ಪೂಜಾ ನಿಕ್ಕಂ, ಶೀರಿನಾ ಅಗಸಿಮುಂದಿನ ಅವರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.