Wednesday, July 17, 2024

ಸೊಳ್ಳೆ ನಿಯಂತ್ರಣಕ್ಕೆ ಧೂಮೀಕರಣ, ಸ್ವಚ್ಛತೆಗೆ ಆಯುಕ್ತರ ಸೂಚನೆ



ವಿಜಯಪುರ: ಸೊಳ್ಳೆಗಳಿಂದ ಹರಡುವ ಡೆಂಘೀ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ವಿವಿಧ ವಾರ್ಡ್ಗಳಲ್ಲಿ ಸ್ವಚ್ಛತೆ ಹಾಗೂ ಧೂಮೀಕರಣ (ಫಾಗಿಂಗ್) ಕಾರ್ಯವನ್ನು ಕೈಗೊಳ್ಳಬೇಕು ಎಂದು ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಹೇಳಿದರು.

ಇಲ್ಲಿನ ಪಾಲಿಕೆ ಕಚೇರಿಯಲ್ಲಿ ಆರೋಗ್ಯಾಧಿಕಾರಿ, ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿ, ಸಿಬ್ಬಂದಿ, ಸಹಾಯಕ ಕಾರ್ಯಪಾಲಕ ಅಭಿಯಂತರರ ಹಾಗೂ ಆರೋಗ್ಯ ನಿರೀಕ್ಷಕ ಮತ್ತು ನೈರ್ಮಲ್ಯ ಮೇಲ್ವಿಚಾರಕರೊಂದಿಗೆ ಬುಧವಾರ ಹಮ್ಮಿಕೊಂಡ ಡೆಂಘೀ ಮತ್ತು ನಗರ ಸ್ವಚ್ಛತೆ ಕುರಿತಂತೆ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.

ನಗರದ ವಾರ್ಡ್ಗಳಲ್ಲಿ ಸ್ವಚ್ಛತೆಯನ್ನು ಕೈಗೊಂಡು, ಸೊಳ್ಳೆಗಳಿಂದ ಹರಡುವ ಡೆಂಘೀ ನಿಯಂತ್ರಣಕ್ಕೆ ಧೂಮೀಕರಣ ಹಾಗೂ ಬೈ ಲಾರ್ವಾ ಸಿಂಪಡಣೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.



ನಗರದ ಸಾರ್ವಜನಿಕರುಗಳು ಮತ್ತು ವರ್ತಕರು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಸವನ್ನು ಕಡ್ಡಾಯವಾಗಿ ಕಸದ ವಾಹನಕ್ಕೆ ನೀಡಬೇಕು. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಸಾರ್ವಜನಿಕರುಗಳು ತಮ್ಮ ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಆವರಣದ ಹೂವಿನ ಕುಂಡಗಳಲ್ಲಿ, ನೀರು ಶೇಖರಿಸಿಟ್ಟ ಬಕೇಟ್‌ಗಳಲ್ಲಿ, ಹಳೆಯದಾದ ಟೈರ್‌ಗಳಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹವಾಗದAತೆ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಡೆಂಘೀ ಜ್ವರ ಹರಡುವುದನ್ನು ತಡೆಗಟ್ಟಲು ಮತ್ತು ನಗರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಪಾಲಿಕೆಯೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದರು.

ಸ್ವಚ್ಛತೆ ಕುರಿತು ಯಾವುದೇ ರೀತಿಯ ಉಲ್ಲಂಘನೆ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು ಸೂಕ್ತ ದಂಡ ವಿಧಿಸಿಲಾಗುವುದು ಎಂದು ಎಚ್ಚರಿಸಿದರು.

ಪಾಲಿಕೆ ಪರಿಸರ ಅಧಿಕಾರಿ ಅಶೋಕ ಸಜ್ಜನ, ಆರೋಗ್ಯಾಧಿಕಾರಿ ಸಂಗಣ್ಣ ಲಕ್ಕಣ್ಣವರ ಸೇರಿ ಇತರರು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment