Wednesday, July 17, 2024

ಕ್ರೀಡಾ ಅಸೋಶಿಯೆಷನ್ ಪದಾಧಿಕಾರಿಗಳ ಬೇಡಿಕೆ ಡಿಸಿ ಸ್ಪಂದನೆ



ವಿಜಯಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ ಹಾಗೂ ಎಸ್ಪಿ ರಿಷಿಕೇಶ ಸೋನಾವಣೆ ದಿಢೀರ್ ಭೇಟಿ ನೀಡಿದ ವೇಳೆ, ವಿವಿಧ ಕ್ರೀಡಾ ಅಸೋಶಿಯೆಷನ್ ಪದಾಧಿಕಾರಿಗಳ ಬೇಡಿಕೆ ಸ್ಪಂದಿಸಿದ್ದು, ಮೂಲಸೌಲಭ್ಯ ಒದಗಿಸುವ ಭರವಸೆ ನೀಡಿದರು.

ಕ್ರೀಡಾ ಅಸೋಶಿಯೆಷನ್ ಪದಾಧಿಕಾರಿಗಳ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಅವರು, ಇಲ್ಲಿನ ವಾಲಿಬಾಲ್‌ಗ್ರೌಂಡಗೆ ಪೆಡ್‌ಲೈಟ್ ಮಾಡಿಕೊಡುವುದು, ವೇಟ್ ಲಿಫ್ಟಿಂಗ್‌ರೂಮ್ ಸೇರಿದಂತೆ ಎಲ್ಲ ಸಾಮಗ್ರಿಗಳನ್ನು ಪೂರೈಸುವುದು, ಜೋಡೋ, ಕುಸ್ತಿ ಗರಡಿಮನೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಾಲಿಬಾಲ್ ಅಸೋಶಿಯೇಶನ್ ಅಧ್ಯಕ್ಷ ಬಿ.ಎಂ.ಕೋಕರೆ, ಫುಟ್‌ಬಾಲ್ ಅಸೋಶಿಯೇಷನ್ ಅಧ್ಯಕ್ಷ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವೇಟ್ ಲಿಪ್ಟಿಂಗ್ ಅಧ್ಯಕ್ಷ ದಾದಾಸಾಹೇಬ ಬಾಗಾಯತ, ಹಾಕಿ ಅಸೋಶಿಯೇಶನ್ ಅಧ್ಯಕ್ಷ ಎಸ್.ಕೆ. ಇನಾಂದಾರ, ಅಥ್ಲೇಟಿಕ್ಸ್ ಎಸ್.ಎಸ್. ಹಿರೇಮಠ, ಸ್ವಿಮ್ಮಿಂಗ್ ಅಸೋಶೀಯೇಶನ್ ಕಾರ್ಯದರ್ಶಿ ಚಂದ್ರಕಾAತ ತಾರನಾಳ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ.ಲೋಣ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment