Thursday, August 29, 2024

ಆರೋಗ್ಯಯುತ ಜೀವನಕ್ಕೆ ಕ್ರೀಡೆ ಅತ್ಯಗತ್ಯ : ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ

 

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಆರೋಗ್ಯಯುತ ಜೀವನಕ್ಕೆ ಕ್ರೀಡೆ ಅತ್ಯಗತ್ಯ. ಕ್ರೀಡೆ ಎನ್ನುವುದು ನಮ್ಮ ಪ್ರತಿನಿತ್ಯ ಜೀವನದ ಒಂದು ಭಾಗವಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ, ಹಾಗೂ ದೈಹಿಕ ಶಿಕ್ಷಣ ಅಧ್ಯಯನ ವಿಭಾಗ, ದೈಹಿಕ ಶಿಕ್ಷಣ ನಿರ್ದೇಶಕರು ಸಂಘ  ಮತ್ತು ವಿಜಯಪುರ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ಇವುಗಳ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ‘ಮಹಿಳಾ ಕಬಡ್ಡಿ ವೈಭವ-2024’ ಅಂತಾರಾಜ್ಯ ಹೊನಲು ಬೆಳಕಿನ ಮಹಿಳಾ ಮುಕ್ತ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುವಜನತೆ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ಎಲ್ಲರಿಗೂ ಕ್ರೀಡಾಶಕ್ತಿಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸದಲ್ಲಿ ನೀವೆಲ್ಲರೂ ಭಾಗಿಯಾಗಿದ್ದು ಹೆಮ್ಮೆಯ ವಿಷಯ ಎಂದರು.


ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಕಬಡ್ಡಿ ಗ್ರಾಮೀಣ ಕ್ರೀಡೆ ಎಂದೇ ಪ್ರಖ್ಯಾತಿಯನ್ನು ಪಡೆದುಕೊಂಡಿದೆ. ಈ ಪಂದ್ಯ ಮನೋಲ್ಲಾಸವನ್ನು ಹೆಚ್ಚಿಸುವ ಮೂಲಕ ದೈಹಿಕವಾಗಿ ನಮ್ಮನ್ನು ಸದೃಡರನ್ನಾಗಿಡುತ್ತದೆ. ನಿಮಗೆ ಇದೊಂದು ಒಳ್ಳೆಯ ಅವಕಾಶ. ಸೋಲು-ಗೆಲವು ಎಲ್ಲದರಲ್ಲೂ ಇರುತ್ತದೆ. ಭಾಗವಹಿಸುವುದು ಅತೀ ಮುಖ್ಯ. ನಿಮ್ಮೆಲ್ಲರಿಗೂ ಶುಭವಾಗಲಿ ಎಂದು ವಿದ್ಯಾರ್ಥಿನಿಯರಿಗೆ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, ಕ್ರೀಡೆಗಳು ವ್ಯಕ್ತಿಯ ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವುದರ ಜೊತೆಗೆ, ಸಹಕಾರ ಮತ್ತು ಸಂಯಮದಂತಹ ಶ್ರೇಷ್ಠ ಮೌಲ್ಯಗಳನ್ನು ಬೆಳೆಸುತ್ತವೆ. ಕ್ರೀಡಾ ಸ್ಪರ್ಧೆಗಳು ಆಟಗಾರರಿಗೆ ಸೋಲು-ಗೆಲುವಿನ ಅನುಭವವನ್ನು ಕಲಿಸುತ್ತವೆ. ಇದರಿಂದ ಜೀವನದ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಮತ್ತು ಸಹನೆ ಬೆಳೆಯುತ್ತದೆ. 

ಕ್ರೀಡೆಗಳಿಂದ ದೊರೆಯುವ ಶಿಸ್ತು, ಕಠಿಣ ಪರಿಶ್ರಮ, ಮತ್ತು ತಂಡದ ಆತ್ಮವಿಶ್ವಾಸವು ವ್ಯಕ್ತಿಯ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿಯಾಗುತ್ತದೆ. ಇದರಿಂದ ಕ್ರೀಡೆ ಕೇವಲ ವೈಯಕ್ತಿಕ ಬೆಳವಣ ಗೆಯಲ್ಲ, ಇಡೀ ಸಮುದಾಯದ ಸಮಗ್ರ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತದೆ ಎಂದರು.

ಭಾರತದ ಹಾಕಿ ದಂತಕಥೆ, ಮೇಜರ ಧ್ಯಾನಚಂದರವರ ಜನ್ಮದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಗಣ್ಯರು ಧ್ಯಾನಚಂದ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಬಡ್ಡಿ ಸಂಸ್ಥೆಯ ಅಧ್ಯಕ್ಷ ರಮೇಶ ಪಾಟೀಲ, ವಿವಿಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಶಿವಯೋಗಿ ಎಲಿ, ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು, ವಿವಿಧ ರಾಜ್ಯಗಳ ಕಬಡ್ಡಿ ತಂಡ, ನಗರದ ವಿವಿಧ ಕಾಲೇಜಿನ ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕರು, ವಿವಿಯ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಗೀತ ವಿಭಾಗದ ವಿದ್ಯಾರ್ಥಿನಿಯರು ನಾಡಗೀತೆ ಮತ್ತು ಮಹಿಳಾ ಗೀತೆ ಹಾಡಿದರು. ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ.ಸಕ್ಪಾಲ್ ಹೂವಣ್ಣ ಸ್ವಾಗತಿಸಿದರು. ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ವಿಷ್ಣು ಶಿಂದೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, August 26, 2024

ಸೆ.1 ರಂದು ಹಿರಿಯ ಹೋರಾಟಗಾರ ಕಾಂ. ಭೀಮಶಿ ಕಲಾದಗಿರವರಿಗೆ ನುಡಿ ನಮನ ಕಾರ್ಯಕ್ರಮ

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ:   ನಗರದ ಇಂಡಿ ರೋಡ ಎಪಿಎಂಸಿ ಯಾರ್ಡ್ ದಲ್ಲಿನ ಶ್ರೀ ನೀಲಕಂಠೇಶ್ವರ ಮಂಗಲ ಕಾರ್ಯಾಲಯ ವಿಜಯಪುರದಲ್ಲಿ  ದಿನಾಂಕ: 01-09-2024 ರಂದು ರವಿವಾರ ಬೆಳಗ್ಗೆ 11-00 ಘಂಟೆಗೆ ದಿವಂಗತ ಕಾಂ. ಭೀಮಶಿ ಕಲಾದಗಿ ರವರ  "ನುಡಿ ನಮನ" ಕಾರ್ಯಕ್ರಮವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ವಿಜಯಪುರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ. ಬಿ.ಪಾಟೀಲ, ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕಾಂ, ಯು ಬಸವರಾಜ,  ಸಿಐಟಿಯು ರಾಜ್ಯ ಅದ್ಯಕ್ಷೆ, ಅಂಗನವಾಡಿ ನೌಕರರ ಸಂಘದ ರಾಜ್ಯ ಅದ್ಯಕ್ಷರಾದ ಎಸ್ ವರಲಕ್ಷ್ಮೀ, ಅಖಿಲ ಭಾರತ ಜನವಾದಿ ಮಹಿಳಾ ಸಂಘದ ರಾಜ್ಯ ಉಪಾಧ್ಯಕ್ಷರಾದ  ಕಾಂ. ಕೆ ನೀಲಾ,  ಕ,ರಾ,ಗ್ರಾಮ ಪಂಚಾಯತ ನೌಕರರ ಸಂಘದ ರಾಜ್ಯಾದ್ಯಕ್ಷರಾದ ಕಾಂ, ಎಂ ಬಿ ನಾಡಗೌಡ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾದ್ಯಕ್ಷರಾದ ಕಾಂ ಬಿ ಎಸ್ ಸೊಪ್ಪಿನ, ಕಾಂ ಜಿ ನಾಗರಾಜ ಪ್ರ, ಕಾರ್ಯದರ್ಶಿ ಕಾಂ. ಟಿ ಯಶವಂತ ,  ಹಾಗೂ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಮುಖಂಡರು, ರೈತ-ಕಾರ್ಮಿಕರು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ  ಅಣ್ಣಾರಾಯ ಈಳಗೆರ ತಿಳಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Saturday, August 24, 2024

ಜಿಲ್ಲಾಸ್ಪತ್ರೆ ಹಾಗೂ ವಿವಿಧ ವಸತಿ ನಿಲಯಗಳಿಗೆ ಉಪಲೋಕಾಯುಕ್ತರ ಭೇಟಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಸೂಚನೆ


 ಈ ದಿವಸ ವಾರ್ತೆ

ವಿಜಯಪುರ: ಕರ್ನಾಟಕ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರು ಶನಿವಾರ ನಗರದ ಜಿಲ್ಲಾಸ್ಪತ್ರೆಗೆ ದಿಡೀರ್ ಭೇಟಿ ನೀಡುವ ಮೂಲಕ ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲಿಸಿದರು.

 ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳರೋಗಿಗಳಿಂದ ಅಲ್ಲಿನ ವ್ಯವಸ್ಥೆ ಕುರಿತು ವಿಚಾರಿಸಿದಾಗ, ಇಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದ್ದು, ಸರಿಯಾದ ಸಮಯಕ್ಕೆ ವೈದ್ಯರು ತಪಾಸಣೆ ಮಾಡಿ ಅಗತ್ಯ ಸಲಹೆ ಸೂಚನೆ ನೀಡುವ ಮೂಲಕ ಔಷಧೋಪಾಚಾರ, ನಿಗದಿತ ಸಮಯದಂತೆ ಆಸ್ಪತ್ರೆಯಿಂದ ಆಹಾರ ಒದಗಿಸುತ್ತಾರೆ ಎಂದು ಮಾಹಿತಿ ನೀಡಿದರು.

 ಆಸ್ಪತ್ರೆಯ ಪ್ರತಿ ಹಂತದ ವಾರ್ಡ್ಗಳಲ್ಲಿಯೂ ದಾಖಲಾಗಿರುವ ರೋಗಿ ಹಾಗೂ ಅವರ ಸಂಬAಧಿಕರ ಆರೋಗ್ಯ ವಿಚಾರಿಸುತ್ತಾ,ಅಲ್ಲಿನ ಹೊರ ರೋಗಿಗಳ ವಿಭಾಗ, ಕಣ್ಣಿನ ವಿಭಾಗ, ಮಕ್ಕಳ ಒಳರೋಗಿ ಚಿಕಿತ್ಸಾ ವಿಭಾಗ ಪರಿಶೀಲನೆ ನಡೆಸಿ ಉತ್ತಮ ಚಿಕಿತ್ಸೆ, ಔಷಧ ಅಗತ್ಯ ಸೌಲಭ್ಯ ಒದಗಿಸುತ್ತಿರುವ ಬಗ್ಗೆ ಮಾಹಿತಿ ಮಾಹಿತಿ ಕ್ರೋಡಿಕರಿಸಿದರು.


 ಡೆಂಗ್ಯೂ ವಾರ್ಡ್ಗೆ ಭೇಟಿ ನೀಡಿ ಅಲ್ಲಿ ಒದಗಿಸಲಾಗಿತ್ತಿರುವÀ ಚಿಕಿತ್ಸಾ ಸೌಕರ್ಯಗಳ ಬಗ್ಗೆ, ಚಿಕ್ಕಮಕ್ಕಳ ತೀವ್ರ ನಿಗಾ ಘಟಕಮಕ್ಕಳ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರದಲ್ಲಿ ಮಕ್ಕಳಿಗೆ ಪೂರೈಸಲಾಗುತ್ತಿರುವ ಆಹಾರದ ಗುಣಮಟ್ಟ ಪರೀಕ್ಷಿಸಿ ಯಾವುದೇ ಲೋಪವಾಗದಂತೆ ಮಕ್ಕಳ ಆರೋಗ್ಯದ ಕಾಳಜಿ ವಹಿಸಬೇಕು ಎಂದು ಹೇಳಿದರು. ಆಸ್ಪತ್ರೆಯಲ್ಲಿರುವ ಸಿಟಿ ಸ್ಕ್ಯಾನ್ ವಿಭಾಗಕ್ಕೆ ತೆರಳಿ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಂತ್ರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. 

 ಅದಲ್ಲದೆ ತಾಯಿಮಕ್ಕಳ ವಿಭಾಗ, ವಿಶೇಷ ನವಜಾತ ಶಿಶು ಆರೈಕೆ ಘಟಕ, ಪ್ರಸೂತಿ ಅವಲಂಬನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಉಪ ಲೋಕಾಯುಕ್ತ ತಂಡದ ಇತರ ಸದಸ್ಯರು ಜಿಲ್ಲಾಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಗತಿ ಕುರಿತು ಉಪ ಲೋಕಾಯುಕ್ತರಿಗೆ ವರದಿ ನೀಡಿದರು. ಆಸ್ಪತ್ರೆಯ ಸ್ವಚ್ಚತೆ ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆಗೆ ಆಧ್ಯತೆ ನೀಡುವಂತೆ ಜಿಲ್ಲಾ ಶಸ್ತçಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೋಳಿ ಅವರಿಗೆ ಸೂಚಿಸಿದರು.

ವಸತಿ ನಿಲಯಗಳಿಗೆ ಭೇಟಿ, ಪರಿಶೀಲನೆ: 

ಕರ್ನಾಟಕ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಅವರು ಶನಿವಾರ ನಗರದ ಅರಕೇರಿ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.

 ಅಲ್ಲಿದ್ದ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಪಡೆದುಕೊಂಡ ಅವರು ಊಟದ ಕೋಣೆ, ಅಡುಗೆ ಕೋಣೆಯನ್ನು ಪರಿಶೀಲಿಸಿ ಸ್ವಚ್ಚತೆಗೆ ಆಧ್ಯತೆ ನೀಡಿ ಗುಣಮಟ್ಟದ ಆಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಶೌಚಾಲಯಗಳ ಸ್ವಚ್ಚತೆ, ಶುದ್ಧ ಕುಡಿಯುವ ನೀರು, ವಿದ್ಯಾರ್ಥಿಗಳಿಗೆ ಬೆಡ್, ಹಾಸಿಗೆಗಳನ್ನು ಸಮರ್ಪಕವಾಗಿ ಪೂರೈಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಹದಿನೈದು ದಿನಗಳ ಕಾಲ ಮಿತಿಯೊಳಗೆ ಇಲ್ಲಿನ ನ್ಯೂನತೆಗಳನ್ನು ಸರಿಪಡಿಸಿ ವರದಿ ಸಲ್ಲಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

 ನಂತರ ನಗರದ ಅಡವಿ ಶಂಕರಲಿAಗ ದೇವಸ್ಥಾನದ ಹತ್ತಿರ ಇರುವ ಮೆಟ್ರಿಕ್ ನಂತರದ ಬಾಲಕಿಯರ ಇಂಜನೀಯರ್ ಮತ್ತು ಮೆಡಿಕಲ್ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿz ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಈ ವಸತಿನಿಲಯದಲ್ಲಿ ಗ್ರಂಥಾಲಯ, ಕಂಪ್ಯೂಟರ್ ಕೋಣೆಯನ್ನು ಪರಿವೀಕ್ಷೀಸಿ ಅಲ್ಲಿದ್ದ ವಿದ್ಯಾರ್ಥಿನಿಯರಿಂದ ಊಟದ ವ್ಯವಸ್ಥೆ, ಇತರ ಸಮಸ್ಯೆಗಳ ಕುರಿತಾಗಿ ಕುಂದುಕೊರತೆಯನ್ನು ಆಲಿಸಿದರು. 

ವಿದ್ಯಾರ್ಥಿನಿಯರು ಇಲಾಖೆ ನಿಗದಿಪಡಿಸಿರುವ ಮೆನುವಿನ ಪ್ರಕಾರ ಊಟ ನೀಡುತ್ತಾರೆ ಎಂದು ಮಾಹಿತಿ ನೀಡಿದರು. ವಿದ್ಯಾರ್ಥಿನಿಯರೊಂದಿಗೆ ಸಮಾಲೋಚಿಸಿದ ಉಪಲೋಕಾಯುಕ್ತರು, ಸ್ವಚ್ಚತೆ ಕಾಪಾಡಿಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಸಲಹೆ ನೀಡಿ, ನಿಯಮಿತವಾಗಿ ವೈದ್ಯರಿಂದ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಬೇಕು. ಗ್ರಂಥಾಲಯಗಳಿಗೆ ಉತ್ತಮ ಪುಸ್ತಕಗಳನ್ನು ಹಾಗೂ ಕಂಪ್ಯೂಟರ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚಿಸಿದರು.

 ಊಟದ ಕೋಣೆಯನ್ನು ಪರಿಶೀಲಿಸಿದ ಉಪಲೋಕಾಯುಕ್ತರು, ಅಡುಗೆಗೆ ಬಳಸುವ ಸಾಮಗ್ರಿಗಳ, ಆಹಾರದ ಗುಣಮಟ್ಟದ ಬಗ್ಗೆ ಅಡುಗೆ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಕೇವಲ ಸಂಬಳಕ್ಕಾಗಿ ಕೆಲಸ ಮಾಡದೇ ಇದು ಸ್ವತಃ ತಮ್ಮದೇ ಮನೆಯೆಂದು ತಿಳಿದು ಅಡುಗೆ ಕೋಣೆಯ ಶುಚಿತ್ವ ಕಾಪಾಡಿಕೊಳ್ಳಬೇಕೆಂದು ಹೇಳಿ ಸಿಬ್ಬಂದಿಯ ಹಾಜರಾತಿ ದಾಖಲೆ ಹಾಗೂ ಸಂಬಳದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

 ವಸತಿ ನಿಲಯದ ಕಟ್ಟಡವನ್ನು ಸರಿಯಾಗಿ ನಿರ್ವಹಿಸಿಕೊಂಡು,ವಸತಿನಿಲಯದ ಸುತ್ತಮುತ್ತ ಸ್ವಚ್ಚತೆಗೆ ಆದ್ಯತೆ ನೀಡಿ, ಭದ್ರತಾ ದೃಷ್ಟಿಯಿಂದ ರಾತ್ರಿಯ ವೇಳೆ ಪೊಲೀಸ್ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ವಸತಿನಿಲಯದ ಸುತ್ತಲೂ ಕಂಪೌAಡ್ ಗೋಡೆ, ಅವರಣದಲ್ಲಿ ಬೀದಿ ದೀಪಗಳ ವ್ಯವಸ್ಥೆ ಒದಗಿಸಿ ಸುರಕ್ಷತೆಗೆ ಆಧ್ಯತೆ ನೀಡಿ ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

 ಈ ಸಂದರ್ಭ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹಿರಿಯ ಸಿವ್ಹಿಲ್ ನ್ಯಾಯಾಧೀಶರಾz ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್.ಹಾಗರಗಿ, ಲೋಕಾಯುಕ್ತ ವಿಚಾರಣೆ ಶಾಖೆ ಉಪನಿಬಂಧಕ ಪ್ರಕಾಶ ಎಲ್. ನಾಡಗೇರ, ಲೋಕಾಯುಕ್ತ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕ ಶುಭವೀರ, ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ.ಪಾಟೀಲ, ಜಿಲ್ಲಾ ಲೋಕಾಯುಕ್ತ ಅಧಿಕ್ಷಕರಾದ ಟಿ.ಮಲ್ಲೇಶ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಈರಣ್ಣ ಆಶಾÁಪೂರ ಆಹಾರ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಡಿವೈಎಸ್‌ಪಿ ಸುರೇಶ ರೆಡ್ಡಿ, ಇನಸ್ಪೆಕ್ಟರ್ ಆನಂದ ಟಕ್ಕಣ್ಣವರ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, August 23, 2024

ಗಡಿ ಭಾಗದ ಕನ್ನಡ ಶಾಲೆಗಳಿಗೆ ಕನ್ನಡ ಸಾಹಿತ್ಯ ಒದಗಿಸಬೇಕು: ಬಿಜ್ಜರಗಿ



ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಜಿಲ್ಲೆಯ ಮಹಾರಾಷ್ಟ್ರ ಗಡಿ ಭಾಗದ ಕನ್ನಡ ಶಾಲೆಗಳಿಗೆ ರಾಜ್ಯ ಸರ್ಕಾರ ಕನ್ನಡ ಭಾಷೆಯ ನಲಿಕಲಿ ಸಾಹಿತ್ಯವನ್ನು  ಒದಗಿಸಬೇಕು ಎಂದು ಯುವ ವಿಕಾಸ ಸಂಘದ ಸಂಸ್ಥಾಪಕ ಅಧ್ಯಕ್ಷ ಶ್ರೀಧರ ಬಿಜ್ಜರಗಿ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಹೊಂದಿಕೊಂಡಿರುವ ಮಹರಾಷ್ಟ್ರದ ಗಡಿಯಲ್ಲಿ ಅನೇಕ ಕನ್ನಡ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಕನ್ನಡದ ಶಾಲೆಗಳು ಕನ್ನಡ ಭಾಷೆ, ಸಾಹಿತ್ಯ ಸೇರಿದಂತೆ ಕನ್ನಡದ ಕಂಪನ್ನು ಮಹರಾಷ್ಟ್ರದ ನೆಲದಲ್ಲಿ ಪಸರಿಸುತ್ತಿವೆ. ಇನ್ನು ಕನ್ನಡ ಶಾಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಬಂದು ಕಲಿಯುತ್ತಿದ್ದಾರೆ. ಕನ್ನಡ ಶಾಲೆಗಳಿಗೆ ಮಹರಾಷ್ಟ್ರ ಸರ್ಕಾರ ಅನೇಕ ಸವಲತ್ತುಗಳನ್ನು ನೀಡಿದೆ. ಕನ್ನಡ ಶಾಲೆಗೆ ಉಚಿತ ಪುಸ್ತಕಗಳು, ನೋಟ ಬುಕ್ ಗಳು ಸೇರಿದಂತೆ ಪಠ್ಯಕ್ಕೆ ಬೇಕಾಗುವ ಉಪಕರಣಗಳನ್ನು ನೀಡುತ್ತಿದೆ. ಆದರೆ ನಲಿಕಲಿ ಸಾಹಿತ್ಯಗಳು ಮರಾಠಿಯಲ್ಲಿ ಒದಗಿಸಲಾಗಿದೆ. ಕಾರಣ ಕನ್ನಡದ ಕಂದಮ್ಮಗಳಿಗೆ ಅದನ್ನು ಕನ್ನಡದ ಶಿಕ್ಷಕರು ತರ್ಜುಮೆ ಮಾಡಿ ಹೇಳಬೇಕಾದ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಕನ್ನಡದ ಪುಟಾಣಿ ಕಣ್ಮಣಿಗಳಿಗೆ ಅದನ್ನ ಅರ್ಥೈಸಿಕೊಳ್ಳುವುದು ಕಷ್ಟಸಾಧ್ಯವಾಗುತ್ತಿದೆ. ಕಾರಣ ಗಡಿ ಭಾಗದ ಕನ್ನಡ ಶಾಲೆಗೆ ರಾಜ್ಯ ಸರ್ಕಾರ ನಲಿಕಲಿ ಕನ್ನಡದ ಸಾಹಿತ್ಯಗಳನ್ನು ಒದಗಿಸಬೇಕು. ಇದರಿಂದ ಕನ್ನಡದ ಕಂದಮ್ಮಗಳಿಗೆ ಅನುಕೂಲವಾಗಲಿದೆ ಎಂದರು.

ರಾಜ್ಯದ ಎಲ್ಲ ಗಡಿ ಭಾಗದ ಕನ್ನಡ ಶಾಲೆಗೆ ನಲಿಕಲಿ ಕನ್ನಡದ ಸಾಹಿತ್ಯಗಳನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಆಗ್ರಹಿಸಿದರು.

ಯುವ ವಿಕಾಸ ಸಂಘದ ಸದಸ್ಯ ಪ್ರಕಾಶ ಮೇಟಿ, ಪ್ರವೀಣ ಕುರ್ಲೆ, ಸಚಿನ್ ಗದ್ಯಾಳ, ರಾಜಕುಮಾರ ಗೌಂಡಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



Thursday, August 22, 2024

ಸಿಟಿಐ, ಸಿವಿಲ್ ಪಿಎಸ್'ಐ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು: ಯತ್ನಾಳ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: 245 ಸಿಟಿಐ ಮತ್ತು 545 ಸಿವಿಲ್ ಪಿಎಸ್'ಐ ಹುದ್ದೆಗಳ ನೇಮಕಾತಿ ಸೇರಿದಂತೆ ಈಗಾಗಲೇ ನಡೆದಿರುವ ಲಿಖಿತ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ ಲೋಕಸೇವಾ ಆಯೋಗ ಆದಷ್ಟು ಬೇಗ ಪ್ರಕಟಿಸಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಟ್ವಿಟ್ ಮಾಡಿರುವ ಅವರು, ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಪಿಸಿ (ಸಿವಿಲ್, ಸಿಎಆರ್,ಡಿಎಆರ್) ಹುದ್ದೆಯಿಂದ ದೂರ ಉಳಿಯುತ್ತಾರೆ. ಇದರಿಂದ ಬೇರೆಯವರಿಗೂ ಅವಕಾಶ ಸಿಗುತ್ತದೆ ಹಾಗೂ ತೇರ್ಗಡೆಯಾದವರಿಗೆ ಮತ್ತೆ ಪರೀಕ್ಷೆ ಬರೆಯುವ ಅವಶ್ಯಕತೆ ಇರುವುದಿಲ್ಲ.

ಪಿಸಿ ಪರೀಕ್ಷೆಯ ಫಲಿತಾಂಶ ಮೊದಲು ಬಿಡುಗಡೆಯಾಗಿ, ನಂತರ ಪಿಎಸ್'ಐ ಆಗಿ ಎರಡರಲ್ಲೂ ತೇರ್ಗಡೆಯಾದವರು ಪಿಸಿ ಬಿಟ್ಟು ಪಿಎಸ್'ಐ ಆಯ್ಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮತ್ತೆ ಬ್ಯಾಕ್ಲಾಗ್ ಆಗಿ ಸರ್ಕಾರಕ್ಕೂ ಅಭ್ಯರ್ಥಿಗಳಿಗೂ ತೊಂದರೆಯಾಗುವುದು ಖಚಿತ. 

ಒಂದು ಉದ್ಯೋಗ ಸಿಗುವುದರಿಂದ ಒಂದು ಮನೆಗೆ ಸಾಕಷ್ಟು ಆರ್ಥಿಕ ನೆರವಾಗುತ್ತದೆ. ಅಭ್ಯರ್ಥಿಯ ಭವಿಷ್ಯ ಸಧೃಡವಾಗುತ್ತದೆ. ಪರೀಕ್ಷೆ ಫಲಿತಾಂಶದ ವಿಳಂಬ, ಅನಿಶ್ಚಿತತೆ, ಅವೈಜ್ಞಾನಿಕ ವೇಳಾಪಟ್ಟಿ, ಅಭ್ಯರ್ಥಿ ಇರುವ ಊರಿಂದ ಬೇರೆ ಊರಿಗೆ ಪರೀಕ್ಷೆ ಸೆಂಟರ್ ನಿಗದಿ ಮಾಡುವುದನ್ನು ಬಿಟ್ಟು ಪರೀಕ್ಷಾರ್ಥಿಗಳ ಪರ ಆಯೋಗ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Wednesday, August 21, 2024

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

 

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ವಿಜಯಪುರ: ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪಿನನ್ವಯ ರಾಜ್ಯಕ್ಕೆ 130 ಟಿಎಂಸಿ ನೀರು ಹೆಚ್ಚುವರಿಯಾಗಿ ದೊರೆಯಲಿದ್ದು,  ಇದಕ್ಕಾಗಿ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸುವ ಕುರಿತು ಅಧಿಸೂಚನೆ ಹೊರಡಿಸಲು ಈಗಾಗಲೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.



ಆಲಮಟ್ಟಿ ಜಲಾಶಯದ ಈಗಿನ ಎತ್ತರ 519.60 ಮೀಟರ್ ನಿಂದ 524.25 ಮೀಟರ್ ಎತ್ತರಕ್ಕೆ ಹೆಚ್ಚಿಸಬೇಕಾಗಿದೆ. ಆದರೆ ಇದಕ್ಕೆ ಕೇಂದ್ರಸರ್ಕಾರದ ನೋಟಿಫಿಕೇಶನ್ ಇನ್ನೂ ಆಗಿರುವುದರಿಂದ  ಎತ್ತರವನ್ನು ಹೆಚ್ಚಿಸಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಕೇಂದ್ರಸರ್ಕಾರವು , ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಹಾಗೂ ಕರ್ನಾಟಕ ರಾಜ್ಯಗಳೊಂದಿಗೆ ಚರ್ಚೆ ನಡೆಸಿ ಇತ್ಯರ್ಥ ಮಾಡಿಸುವುದು ಅಗತ್ಯವಿದೆ.  ಕೃಷ್ಣಾ ನ್ಯಾಯಾಧೀಕರಣ-2ರ ಅಂತಿಮ ತೀರ್ಪಿಗೆ ಕೇಂದ್ರ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲು ನಾನು ಮತ್ತು ಉಪಮುಖ್ಯಮಂತ್ರಿ ಅವರು ಈಗಾಗಲೇ  ಪ್ರಧಾನಮಂತ್ರಿ ಅವರನ್ನು ಹಾಗೂ  ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ್ದೇವೆ ಎಂದರು.

 ಇದಕ್ಕೆ ಸಂಬಂಧಿಸಿದಂತೆ ನಾವು ಪುನರ್‌ ವಸತಿ ಮತ್ತು ಪುನರ್‌ ನಿರ್ಮಾಣಕ್ಕಾಗಿ ಸಿದ್ದರಿದ್ದೇವೆ.  ನಮ್ಮ ಹಿಂದಿನ ಅವಧಿಯಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ 51,148 ಕೋಟಿ ರೂ.ಗಳ ಅಂದಾಜಿಗೆ ಅನುಮೋದನೆ ನೀಡಲಾಗಿತ್ತು. ಈಗ ಈ ಮೊತ್ತ 80 ಸಾವಿರ ಕೋಟಿ ರೂ.ಗಳಷ್ಟಾಗಬಹುದು ಎಂಬ ಅಂದಾಜಿದೆ. ಪ್ರತಿ ವರ್ಷ ನಮ್ಮ ಸರ್ಕಾರ 20,000 ಕೋಟಿ ಖರ್ಚು ಮಾಡುವ ಮೂಲಕ, 5 ವರ್ಷಕ್ಕೆ ಅಂದಾಜು 1 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಬೇಕೆಂಬುದು ನಮ್ಮ ಸರ್ಕಾರದ ಉದ್ದೇಶಿಸಲಾಗಿದೆ.  ಆದರೆ ಇದಕ್ಕೆ ಮೊದಲು ಕೇಂದ್ರ ಸರ್ಕಾರದ ನೋಟಿಫಿಕೇಷನ್ ಆಗಬೇಕಿರುವುದರಿಂದ, ಪ್ರಧಾನಮಂತ್ರಿಗಳ ಮಧ್ಯಸ್ಥಿಕೆಯಲ್ಲಿ ನಿರ್ಣಯವಾದರೆ, ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಯೋಜನೆಗೆ ನಾವು ಚಾಲನೆ ನೀಡಬಹುದು. 

ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಡಿ 16.47 ಲಕ್ಷ ಎಕರೆ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ. ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳದಿಂದ ಯೋಜನೆಯಿಂದ ಒಟ್ಟು 5.94 ಲಕ್ಷ ಹೆಕ್ಟೇರ್ (14.68 ಲಕ್ಷ ಎಕರೆ)  ಅಚ್ಚುಕಟ್ಟು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ.  ಬಾಗಲಕೋಟೆ, ಬಿಜಾಪುರ, ಯಲಬುರ್ಗಾ, ಕೊಪ್ಪಳರಾಯಚೂರು, ಬಳ್ಳಾರಿ, ಗುಲ್ಬರ್ಗ, ಯಾದಗಿರಿ ಇವರ ಜನಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ, ಪುನರ್ವಸತಿ, ಪುನರ್ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ ಮಾಡಲಿದ್ದೇವೆ.

ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಲ್ಲಿ ಹೂಳು ತುಂಬಿರುವುದರಿಂದ, ಇಲ್ಲಿಯೂ  ಸಮಾನಾಂತರ ಜಲಾಶಯ ನಿರ್ಮಾಣದ ಪ್ರಸ್ತಾಪ ತಮ್ಮ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಜಲಾಶಯದಲ್ಲಿ ಹೂಳು ತುಂಬಿರುವ ಪ್ರಮಾಣ, ನೀರಿನ ಸಾಮರ್ಥ್ಯ, ಇದರಿಂದ ರೈತರಿಗಾಗಬಹುದಾದ ತೊಂದರೆ ಬಗ್ಗೆ ಚರ್ಚೆ ನಡೆಸುತ್ತೇವೆ.

ರೈತರ ಅನುಕೂಲಕ್ಕಾಗಿ ಬಸವ ಸಾಗರ ಸೇರಿದಂತೆ ಇತರ ಜಲಾಶಯಗಳಿಗೆ ನೀರು ಮರುಹಂಚಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಯೋಜನೆಯಲ್ಲಿ ಸ್ಕೀಂ ಎ ಮತ್ತು ಬಿ ಎರಡು ವಿಧವಿದ್ದು, ಯೋಜನಾವಾರು 3ನೇ ಹಂತದಲ್ಲಿ ಹಂಚಿಕೆಯಾಗಿದೆ. ಕೃಷ್ಣಾ ನ್ಯಾಯಾಧೀಕರಣ-1ರ ತೀರ್ಪಿನನ್ವಯ ಯುಕೆಪಿ 1 ಹಾಗೂ2ರಲ್ಲಿ 173 ಟಿಎಂಸಿ ನೀರಿನ ಹಂಚಿಕೆಯಾಗಿದೆ. ಈ ನೀರನ್ನು ಸಂಬಂಧಪಟ್ಟ ಜಿಲ್ಲೆಗೆ ನೀರು ಮರುಹಂಚಿಕೆ  ಮಾಡುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್‌ಗೇಟ್ ಅಳವಡಿಕೆಯನ್ನು ಮೂರ್ನಾಲ್ಕು ದಿನಗಳ ಒಳಗಾಗಿ ಪೂರ್ಣಗೊಳಿಸಲಾಗಿದೆ. ದುರಸ್ತಿಯ ಅವಧಿಯಲ್ಲಿ 35 ಟಿಎಂಸಿ ನೀರು ಮಾತ್ರ ಪೋಲಾಗಿದೆ. ಇಂದಿಗೂ ಜಲಾಶಯದಲ್ಲಿ ಸುಮಾರು 78 ಟಿಎಂಸಿ ನೀರಿದೆ.    ಇನ್ನೂ 20 ಟಿಎಂಸಿ ನೀರು ಹರಿದುಬಂದರೆ, ಜಲಾಶಯ ಶೇ.95 ರಷ್ಟು ಭರ್ತಿಯಾಗುತ್ತದೆ. ಈಗಾಗಲೇ ಕರ್ನಾಟಕ, ತೆಲಂಗಾಣ, ಆಂಧ್ರದ ರೈತರ  ಮೊದಲ ಬೆಳೆಗೆ ನೀರು ಬಿಡಲಾಗಿದೆ. ಆದ್ದರಿಂದ ರೈತರಿಗೆ ಯಾವುದೇ ಆತಂಕ  ಬೇಡ ಎಂದು ಹೇಳಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

Monday, August 19, 2024

'ಸ್ನಾತಕೋತ್ತರ ಪತ್ರಿಕೋದ್ಯಮ ಪದವಿಯಲ್ಲಿ ಗುಮ್ಮಟ ನಗರಿಗೆ ಚಿನ್ನದ ಸಂತೋಷ'' ತುಮಕೂರು ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಥಮ ರ‍್ಯಾಂಕ್ | ರಾಜ್ಯಪಾಲರಿಂದ ಗೋಲ್ಡ್ ಮೆಡಲ್ ಪ್ರದಾನ

ವಿಜಯಪುರ(ಚಡಚಣ): ಗುಮ್ಮಟ ನಗರಿ ಜಿಲ್ಲೆಯಿಂದ ಕಲ್ಪತರು ನಾಡಿನ ಕಡೆ ಉನ್ನತ ವ್ಯಾಸಂಗಕ್ಕೆ ಪಯಣ ಬೆಳೆಸಿ, ಎಲೆಕ್ಟ್ರಾನಿಕ್ ಮೀಡಿಯಾ ಸ್ನಾತಕೋತ್ತರ ಪದವಿ ಅಧ್ಯಯನಕ್ಕಾಗಿ ತುಮಕೂರು ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ಗೋಲ್ಡ್ ಮೆಡಲ್ ಮುಡಿಗೇರಿಸಿಕೊಂಡ ಯುವಕ ಸಂತೋಷ.

      ತುಮಕೂರು ವಿಶ್ವವಿದ್ಯಾಲಯದ 17 ನೇ ಘಟಿಕೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಚಡಚಣ ಪಟ್ಟಣದ ನಿವೃತ್ತ ಶಿಕ್ಷಕ ಮಲ್ಲಿಕಾರ್ಜುನ ಬಗಲಿಯವರ ತೃತೀಯ ಪುತ್ರನಾದ ಸಂತೋಷ ಬಗಲಿ 'ಚಿನ್ನದ ಪದಕ'ವನ್ನು ರಾಜ್ಯಪಾಲರಾದ ಡಾ. ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪಡೆದು ವಿಜಯಪುರ ಜಿಲ್ಲೆಯ ಕೀರ್ತಿ ಇಮ್ಮಡಿಗೊಳಿಸಿದ್ದಾನೆ.

        ತುಮಕೂರಿನ ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ಪದವಿ ವಿಭಾಗದ ವಿದ್ಯಾರ್ಥಿ ಸಂತೋಷ. ಚಿಕ್ಕಂದಿನಿಂದ ಮಧ್ಯಮ ವರ್ಗದ ಕುಟುಂಬದಲ್ಲಿ ಬೆಳೆದು ಚಡಚಣ ಪಟ್ಟಣದಲ್ಲೆ ಬಿ.ಎಸ್.ಡಬ್ಲ್ಯೂ ಪದವಿ ವರೆಗೂ ವ್ಯಾಸಂಗ ಮುಗಿಸಿ, ಸದ್ಯ ಸ್ನಾತಕೋತ್ತರ ಪದವಿ ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತನ್ನ ಕುಟುಂಬಕ್ಕೆ ಮೊದಲ 'ಗೋಲ್ಡ್ ಮೆಡಲ್' ನ ಸಾಧನೆ ತಂದಿದ್ದಾರೆ.

         ಅಂದು ಊರಲ್ಲಿ ದಿನಪತ್ರಿಕೆಗಳನ್ನು ಮನೆ ಮನೆಗೆ ವಿತರಿಸುತ್ತಿದ್ದ ಯುವಕ ಸಂತೋಷ. ಪತ್ರಿಕೋದ್ಯಮ ಪದವಿ ಕಲಿಯಬೇಕೆಂದು ನಿರಂತರ ಅಧ್ಯಯನ ಮಾಡಿ, ಇಂದು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್  ಪಡೆದುಕೊಂಡು ಚಿನ್ನದ ಬೇಟೆಯಾಡಿದ್ದಾನೆ.

       ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆಯುತ್ತಿರುವ ಸಂತೋಷ, ಮುಂದಿನ ದಿನಗಳಲ್ಲಿ ರಾಜ್ಯಪಾಲರಿಂದ ಪಿ.ಎಚ್.ಡಿ ಪದವಿ ಕೂಡಾ ಪಡೆದುಕೊಳ್ಳಬೇಕು ಎನ್ನುವ ಬಹುದೊಡ್ಡ ಕನಸು ಹೊತ್ತಿದ್ದಾನೆ. 


  ''ತಾಳ್ಮೆ, ನಿರಂತರ ಓದು ಹಾಗೂ ಶಿಕ್ಷಕರ ಮಾರ್ಗದರ್ಶನದ ಜತೆಗೆ ಕುಟುಂಬ, ಸ್ನೇಹಿತರ ಸಹಕಾರದಿಂದ ಈ ಗೋಲ್ಡ್ ಮೆಡಲ್ ನ ಕನಸು ಸಾಕಾರವಾಯಿತು. ಈ 'ಚಿನ್ನದ ಪದಕ' ಇನ್ನಷ್ಟು ಓದುವ ಹವ್ಯಾಸವನ್ನು ನನ್ನಲ್ಲಿ ಪ್ರೇರಣೆ ತುಂಬಿದೆ.

-ಸಂತೋಷ ಬಗಲಿ(ಗೋಲ್ಡ್ ಮೆಡಲಿಸ್ಟ್, ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವಿಭಾಗದ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)


"ಸ್ಪಷ್ಟ ಮತ್ತು ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸಂತೋಷ ಅಧ್ಯಯನ ಮಾಡಿದ್ದನು. ಹಾಗಾಗಿ ರ‍್ಯಾಂಕ್ ಗಳಿಸಲು ಸಾಧ್ಯವಾಯಿತು. ಜೊತೆಗೆ ಉದ್ಯೋಗ ಕೂಡ ಸಿಕ್ಕಿದೆ. ಇದು ಅವರ ನಿರಂತರ ಪರಿಶ್ರಮದ ಫಲ. ರಾತ್ರಿ 9 ರ ತನಕ  ನಮ್ಮಲ್ಲಿರುವ ರೇಡಿಯೋ & ಟಿವಿ ಸ್ಟುಡಿಯೋಗಳಲ್ಲಿ ಕೆಲಸ ಮಾಡಿದ್ದಾನೆ. ಇದು ಅವನ ಕಾರ್ಯತತ್ಪರತೆಯನ್ನು ಮತ್ತು ಬದ್ದತೆಯನ್ನು ತೋರಿಸುತ್ತದೆ. 

 - ಡಾ. ಬಿ.ಟಿ ಮುದ್ದೇಶ (ನಿದೇರ್ಶಕರು, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ತುಮಕೂರು)


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


20-08-2024 EE DIVASA KANNADA DAILY NEWS PAPER

ಆ.21 ರಂದು ಮುಖ್ಯಮಂತ್ರಿಗಳಿAದ ಕೃಷ್ಣೆಗೆ ಬಾಗಿನ ಅರ್ಪಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಆ.21 ರಂದು ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಅಂದು ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಿ, 10.50 ಕ್ಕೆ ಗಿಣಿಗೆರಾ ಏರಸ್ಟಿçಪ್ ಕೊಪ್ಪಳ ಜಿಲ್ಲೆಗೆ ಆಗಮಿಸಿ, ಬೆಳಗ್ಗೆ 11 ಗಂಟೆಗೆ ಕೊಪ್ಪಳದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ 12.30ಕ್ಕೆ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಿ,  ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಆಶ್ರಯದಲ್ಲಿ ಆ.21 ರಂದು ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತಿç ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ನಾಡಿನ ಪ್ರತಿಷ್ಠಿತ ಆಲಮಟ್ಟಿ ಅಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ನಿಮಿತ್ತ ಅಂದು ಮಧ್ಯಾಹ್ನ 1 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ ಉಪಸ್ಥಿತಿ ವಹಿಸಲಿದ್ದು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆದ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪೂರ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.



19-08-2024 EE DIVASA KANNADA DAILY NEWS PAPER

Saturday, August 17, 2024

18-08-2024 EE DIVASA KANNADA DAILY NEWS PAPER

ಕ್ರೀಡೆಯಿಂದ ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾಗಿ ವಿಶಾಲಗೊಳಿಸುತ್ತದೆ : ಎಲ್.ಆರ್.ಹಳ್ಳದಮನಿ

ವಿಜಯಪುರ : ವಿಜಯಪುರ ನಗರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿಜಯಪುರ ಹಾಗೂ ಅಲ್ ಹಸ್ನಾತ ಪದವಿ ಪೂರ್ವ ಕಾಲೇಜು ವಿಜಯಪುರ ಸಂಯುಕ್ತ ಆಶ್ರಯದಲ್ಲಿ ನಡೆದ 2024-25 ನೇ ಸಾಲಿನ ವಿಜಯಪುರ ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಎಲ್.ಆರ್. ಹಳ್ಳದಮನಿ ಪ್ರಾಚಾರ್ಯರು ಸರ್ಕಾರಿ ಪದವಿ ಪೂರ್ವ ಕಾಲೇಜು ಕನ್ನೂರವರು ಕ್ರೀಡೆ ಮಕ್ಕಳ ಮನಸ್ಸು ಮುದ ನೀಡುತ್ತದೆ. ವಿದ್ಯಾರ್ಥಿಗಳಿಗೆ ದೈಹಿಕ ಹಾಗೂ ಮಾನಸಿಕವಾಗಿ ವಿಶಾಲಗೊಳಿಸುತ್ತದೆ ಎಂದು ಹೇಳಿದರು.

ಮಕ್ಕಳ ಮನಸ್ಸು ಕಲಿಕೆಯತ್ತ ಸಾಗಿಸಲು ದೈಹಿಕ ಶಿಕ್ಷಣದ ಅವರ್ಶಯಕತೆ ಇದೆ. ಮಕ್ಕಳು ದೈನಂದಿನ ಕೆಲಸ ಕಾರ್ಯಗಳ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಅಲ್ ಹಸ್ನಾತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎ.ಎ. ಬಿಜಾಪುರ ಮಾತನಾಡಿದರು.

ಅಲ್ ಹಸ್ನಾತ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಂ.ಡಿ. ರೂಗಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಎ.ಎ.ಶಟಗಾರ, ಉಪನ್ಯಾಸಕರಾದ ಬಿ.ಎಸ್.ಗೌರಿ, ಕ್ರೀಡಾ ಸಂಯೋಜಕರಾದ ಎಸ್.ಆರ್.ಮುತ್ತಗಿ, ಗಣೇಶ ಗುನ್ನಾಪೂರ, ಪ್ರೌಢಶಾಲೆಯ ಮುಖ್ಯಗುರುಗಳಾದ ಎಸ್.ಎಸ್.ಹರಿಯಾಲ, ಹಾಗೂ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಎಂ.ಬಿ.ಅವಟಿ, ಕ್ರೀಡಾ ಸಂಘಟನಾ ಕಾರ್ಯದರ್ಶಿಗಳಾದ ಆಬೀದ ಬಾಗವಾನ, ದೈಹಿಕ ಶಿಕ್ಷಕರಾದ ಡಾ. ಮೊಹ್ಮದ ಸಲೀಂ ಮಕಾಂದಾರ, ನಿವೃತ್ತ ಮುಖ್ಯಗುರುಗಳಾದ ಎ.ಜೆ.ಜಮಾದಾರ, ನಿವೃತ್ತ ಶಿಕ್ಷಕರಾದ ಎ.ಎಚ್.ಬಾಗವಾನ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಡಾ. ಎಸ್.ಸಿ.ಮುಲ್ಲಾ ನಿರೂಪಿಸಿದರು. ಫೀರದೋಸ ಮಣಿಯಾರ ಸ್ವಾಗತಿಸಿದರು. ರಿಜ್ವಾನಾ ಚೌಧರಿ ವಂದಿಸಿದರು.

ಇದೇ ಸಂದರ್ಭದಲ್ಲಿ ವಿಜಯಪುರ ತಾಲೂಕಾ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಎಸ್.ಎಸ್.ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮಸ್ಥಾನ ಹಾಗೂ ಕೋನಿಕಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

ಇದೇ ಸಂದರ್ಭದಲ್ಲಿ ವಿಜಯಪುರ ತಾಲೂಕಾ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಬಾಲಕಿಯರ ವಿಭಾಗದದಲ್ಲಿ ಎಸ್.ಎಸ್.ಪದವಿಪೂರ್ವ ಮಹಾವಿದ್ಯಾಲಯ ವಿದ್ಯಾರ್ಥಿಗಳು ಪ್ರಥಮಸ್ಥಾನ ಹಾಗೂ ಲೋಯೋಲಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಇದೇ ಸಂದರ್ಭದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಅಲ್ ಹಸ್ನಾತ ಪದವಿ ಪೂರ್ವ ಕಾಲೇಜನ ವಿದ್ಯಾರ್ಥಿನಿಯರಾದ ಮದಿಯಾ ಅರಬ, ಅನಿಸಾ ಅನಾಸೂರ ಪ್ರಾರ್ಥಿಸಿದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ಅದ್ಧೂರಿಯಾಗಿ ಜರುಗಿದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ


ವಿಜಯಪುರ : ವಿಜಯಪುರ ಜಿಲ್ಲಾ ಹೂಗಾರ ಸಮಾಜ ಹಾಗೂ ಶ್ರೀ ಕಲ್ಮೇಶ್ವರ ಶೈವ ಗುರವ ಸಂಸ್ಥಾನ ಮಠ ಹಾವಿನಾಳ ಇವರ ಸಹಯೋಗದಲ್ಲಿ ಇತ್ತೀಚೆಗೆ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವು ಅದ್ಧೂರಿಯಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜ್ಞಾನ ಯೋಗಾಶ್ರಮದ ನಿಂಗಯ್ಯ ಶ್ರೀಗಳು ಆಗಮಿಸಿದ್ದರು. ಅಧ್ಯಕ್ಷತೆಯನ್ನು ಸಿದ್ದರಾಮಯ್ಯ ಮಠ ದಿವ್ಯ ಸಾನಿಧ್ಯವನ್ನು ಶರಣಬಸವ ಶರಣರು ಚಿಂಚೋಳಿ ಉದ್ಘಾಟಕರಾಗಿ ಬಿ ಎಸ್ ಬಿರಾದಾರ ಸಮಾಜದ ಜಿಲ್ಲಾಧ್ಯಕ್ಷರಾದ ಸಂಗಮೇಶ ಗುರವ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹೂಗಾರ ಸಮಾಜದ 2023-24ನೇ ಸಾಲಿನ ಪ್ರತಿಭಾನ್ವಿತ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಸೇರಿದಂತೆ ಸಮಾಜದ ಪರವಾಗಿ ಶಿಕ್ಷಣ,ಕ್ರೀಡೆ, ಸಾಮಾಜಿಕ ಸೇವೆ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕು ಅಧ್ಯಕ್ಷರುಗಳು ಸೇರಿದಂತೆ ಸಮಾಜದ ಎಲ್ಲ ಬಂದವರು ಭಾಗವಹಿಸಿದ್ದರು. ಕಾರ್ಯಕ್ರಮದ ಆಯೋಜನೆಯನ್ನು ಜಿಲ್ಲಾಧ್ಯಕ್ಷರಾದ ಸಂಗಮೇಶ ಗುರವ ಹಾಗೂ ಉಪಾಧ್ಯಕ್ಷರಾದ ಮಹೇಶ ಗುರವ ಆಯೋಜಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರಸಾದ( ಸುರೇಶ)ಪೂಜಾರಿ ಯಶಸ್ವಿಯಾಗಿ ನಡೆಸಿಕೊಟ್ಟರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Friday, August 16, 2024

ಕೆನರಾ ಬ್ಯಾಂಕಿನಿಂದ ಕೆನರಾ ವಿದ್ಯಾ ಜ್ಯೋತಿ ವಿದ್ಯಾರ್ಥಿ ವೇತನ ವಿತರಣೆ.

ಕೆನರಾ ಬ್ಯಾಂಕಿನ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮಗಳ ಭಾಗವಾಗಿರುವ "ಕೆನರಾ ವಿದ್ಯಾ ಜ್ಯೋತಿ" ಯೋಜನೆಯಲ್ಲಿ ಸರಕಾರಿ ಹಾಗೂ ಅನುದಾನಿತ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಡ ವಿದ್ಯಾರ್ಥಿನಿಯರಿಗೆ ಕೆನರಾ ವಿದ್ಯಾಜ್ಯೋತಿ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮವು ದಾವಣಗೆರೆಯ ಕೆನರಾ ಬ್ಯಾಂಕ್ ವಿದ್ಯಾನಗರ ಶಾಖೆಯಲ್ಲಿ ನಡೆಯಿತು‌. 


ಕೆನರಾ ಬ್ಯಾಂಕ್ ದಾವಣಗೆರೆ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾ ಪ್ರಬಂಧಕ ವೈ.ವಿ.ಎನ್‌.ಶಿವಪ್ರಸಾದ್ ವಿದ್ಯಾರ್ಥಿ ವೇತನವನ್ನು ವಿತರಿಸಿ ಮಾತನಾಡುತ್ತಾ 1906 ರಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ ಅವರು ಕೆನರಾ ಬ್ಯಾಂಕನ್ನು ಸ್ಥಾಪಿಸುವಾಗ ಹೊಂದಿದ್ದ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯನ್ನು ಕೆನರಾ ಬ್ಯಾಂಕ್ ಇಂದಿಗೂ ಮುಂದುವರೆಸಿಕೊಂಡು ಬರುತ್ತಿದೆ. ಈ ಯೋಜನೆಯಡಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ ಮತ್ತು ಪಂಗಡದ 5, 6, 7 ನೇ ತರಗತಿಯ ವಿದ್ಯಾರ್ಥಿನಿಯರಿಗೆ ತಲಾ ರೂ.2,500 ಹಾಗೂ 8, 9, 10 ನೇ ತರಗತಿಯ ವಿದ್ಯಾರ್ಥಿನಿಯರಿಗೆ ತಲಾ ರೂ‌.5000 ವಿದ್ಯಾರ್ಥಿ ವೇತನ ವಿತರಿಸುತ್ತಿದ್ದೇವೆ ಎಂದರು. ದಾವಣಗೆರೆಯ ಕೆನರಾ ಬ್ಯಾಂಕ್ ವಿದ್ಯಾನಗರ ಶಾಖೆ, ವಿನೋಬ ನಗರ ಶಾಖೆ, ಪಿಜೆ ಬಡಾವಣೆ ಶಾಖೆ ಹಾಗೂ ಎಸ್‌ಎಂಇ ಶಾಖೆಗಳು ಗುರುತಿಸಿರುವ ವಿವಿಧ ಶಾಲೆಗಳ 40 ವಿದ್ಯಾರ್ಥಿನಿಯರನ್ನು ಕೆನರಾ ಬ್ಯಾಂಕಿಗೆ ಬರಮಾಡಿಕೊಂಡು ವಿದ್ಯಾರ್ಥಿ ವೇತನವನ್ನು ಅವರು ವಿತರಿಸಿ ಮಾತನಾಡಿದರು.

ದಾವಣಗೆರೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೊಟ್ರೇಶ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿ ಎಮ್.ಹೆಚ್‌.ಬಸವರಾಜ್ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿ ನವೀನ್ ಮಠದ್ ಅವರು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೆನರಾ ಬ್ಯಾಂಕಿನ ಸಾಮಾಜಿಕ ಜವಾಬ್ದಾರಿ ಯೋಜನೆಯನ್ನು ಶ್ಲಾಘಿಸಿದರು.

ಕೆನರಾ ಬ್ಯಾಂಕಿನ ಪ್ರಾದೇಶಿಕ ಕಛೇರಿಯ ವಿಭಾಗೀಯ ಪ್ರಬಂಧಕಿ ರವಿಕಲಾ ಮಾತನಾಡಿ ದೇಶದ ಎಲ್ಲ ಕೆನರಾ ಬ್ಯಾಂಕ್ ಶಾಖೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಈ ಯೋಜನೆಯ ಫಲಾನುಭವಿ ವಿದ್ಯಾರ್ಥಿನಿಯರು ಮುಂದೆ ಕೆನರಾ ಬ್ಯಾಂಕಿನ ಜೊತೆಯೇ ವ್ಯವಹಾರಗಳನ್ನು ನಡೆಸಲು ಮನವಿ ಮಾಡಿದರು. ಸಮಾರಂಭದಲ್ಲಿ ಬ್ಯಾಂಕಿನ ವಿದ್ಯಾನಗರ ಶಾಖೆಯ ಮುಖ್ಯ ಪ್ರಬಂಧಕಿ ಶಿಲ್ಪಾ ಎಂ. ಗಾಯಕವಾಡ್, ವಿನೋಬ ನಗರ ಶಾಖೆಯ ಮುಖ್ಯ ಪ್ರಬಂಧಕಿ ಚಂಚಲಾ ಕುಮಾರಿ, ಪಿ.ಜೆ‌.ಬಡಾವಣೆ ಶಾಖೆಯ ಮುಖ್ಯ ಪ್ರಬಂಧಕ ಶಬೀರ್ ಬಶೀರ್, ಎಸ್‌ಎಂಇ ಶಾಖೆಯ ಮುಖ್ಯ ಪ್ರಬಂಧಕ ಎಸ್.ವಿ.ಕಿರುಬ ಶಂಕರ್ ಹಾಗೂ ಬ್ಯಾಂಕಿನ ಹಿರಿಯ ಅಧಿಕಾರಿಗಳಾದ ಅನಿಲ್ ನಾಯಕ್, ಗೋಪಾಲ ಕೃಷ್ಣ, ವಿ.ಆರ್.ಹರೀಶ್, ಕೆ.ಭಾರ್ಗವಿ, ಸಿ.ಸುವೇಶ್ ಚಂದ್ರ, ಎನ್.ಪಾರ್ವತಿ, ಹೆಚ್.ಜೆ.ಆಶಾ, ಡಿ.ಎ.ಸಾಕಮ್ಮ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ದೇಶಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಗೂಢಾಚಾರಿಗಳ ವಿಶೇಷ ಕಾರ್ಯಕ್ರಮ "ಏಜೆಂಟ್​​ 001" ಶನಿವಾರದಿಂದ ನ್ಯೂಸ್​ಫಸ್ಟ್​ನಲ್ಲಿ

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಇವತ್ತು ನಾವು ನೀವು ಸುರಕ್ಷಿತವಾಗಿ ಇದ್ದೀವಿ ಅಂದ್ರೆ ನಮಗೋಸ್ಕರ ಮತ್ಯಾರೋ ತಮ್ಮ ಪ್ರಾಣವನ್ನ ಒತ್ತೆಯಿಟ್ಟು ಹೋರಾಡ್ತಿದ್ದಾರೆ. ಗಡಿಯಲ್ಲಿ ನಿಂತು ಸಾವಿನ ಜೊತೆ ಸರಸ ಆಡ್ತಿದ್ದಾರೆ. ಸಮವಸ್ತ್ರದಲ್ಲಿ ಹೋರಾಡ್ತಿರೋ ಯೋಧರು ಒಂದು ಕಡೆಯಾದ್ರೆ, ತಾವು ಯಾರು ಅನ್ನೋದನ್ನ ಜಗತ್ತಿಗೂ ಹೇಳದೇ ತಮ್ಮ ಕುಟುಂಬದವರಿಗೂ ಗೊತ್ತಿಲ್ಲದೇ ಹೋರಾಡ್ತಿರೋರು ಮತ್ತೊಂದು ಕಡೆ. ಹುಟ್ಟ ಊರು ಬಿಟ್ಟು ಬೇಱವುದೋ ದೇಶದಲ್ಲಿ ಗೂಡಚಾರಿಗಳಾಗಿ ಕೆಲಸ ಮಾಡ್ತಾ ದೇಶ ಸೇವೆ ಮಾಡ್ತಿದ್ದಾರೆ. ಪ್ರತಿಕ್ಷಣವೂ ಚಾಲೆಂಜ್​ ಆಗಿರುವಂತಹ ಸನ್ನಿವೇಶದಲ್ಲೇ ಬದುಕಿದ ಸೀಕ್ರೆಟ್​ ಏಜೆಂಟ್​​ಗಳ ಕುರಿತ ವಿಶೇಷ ಸೀರೀಸ್​ ಶನಿವಾರದಿಂದ ನ್ಯೂಸ್​ಫಸ್ಟ್​​ನಲ್ಲಿ ಪ್ರಸಾರವಾಗಲಿದೆ. ಏಜೆಂಟ್​​ 001 ಹೆಸರಿನ ಈ ಕಾರ್ಯಕ್ರಮ ಪ್ರತಿ ಶನಿವಾರ ಸಂಜೆ 7 ಗಂಟೆಗೆ ಹಾಗೂ ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಇಷ್ಟವಾಗುವಂತಹ ಕಾರ್ಯಕ್ರಮ ಇದಾಗಿದೆ. 

ಹಲವು ಪುಸ್ತಕಗಳು ಹಾಗೂ ದಾಖಲೆಗಳನ್ನು ಅಧ್ಯಯನ ಮಾಡಿ ನಿಖರ ಮಾಹಿತಿ ಸಂಗ್ರಹಿಸಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿ ಅತ್ಯುತ್ತಮ ಗುಣಮಟ್ಟದಿಂದ ಕಾರ್ಯಕ್ರಮ ನಿರ್ಮಾಣ ಮಾಡಲಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಇಷ್ಟವಾಗುವಂತಹ ವಿಷಯಗಳನ್ನು ಇದು ಒಳಗೊಂಡಿದೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು ವಿಷಯಗಳನ್ನ ತಿಳಿಸಿಕೊಡುವ ನಿಟ್ಟಿನಲ್ಲಿ ಇದನ್ನ ರೂಪಿಸಲಾಗಿದೆ. 

ಇದಕ್ಕೂ ಮೊದಲು ಚುನಾವಣಾ ಸಂದರ್ಭದಲ್ಲಿ ದಿ ಲೀಡರ್​ ಎಂಬ ವಿಶೇಷ ಕಾರ್ಯಕ್ರಮ ನ್ಯೂಸ್​ಫಸ್ಟ್​​ನಲ್ಲಿ ಪ್ರಸಾರವಾಗಿತ್ತು. ದೇಶ ಕಟ್ಟಿದ್ದ ಪ್ರಧಾನಮಂತ್ರಿಗಳು ಅವರು ಎದುರಿಸಿದ ಸವಾಲುಗಳು ಅವರು ಮಾಡಿದ ಸಾಧನೆ ಕುರಿತ ಲೀಡರ್​ ಕಾರ್ಯಕ್ರಮಕ್ಕೆ ರಾಜ್ಯದ ಜನರಿಂದ ಅಭೂತಪೂರ್ವ ಯಶಸ್ಸು ದೊರೆತಿತ್ತು. ನ್ಯೂಸ್​ಫಸ್ಟ್​​ನ ಎಂಡಿ ಹಾಗೂ ಸಿಇಒ ಆಗಿರುವ ಎಸ್.ರವಿಕುಮಾರ್​ ​ ಅವರು ಲೀಡರ್​ ಕಾರ್ಯಕ್ರಮದ ನಿರೂಪಣೆ ಮಾಡಿದ್ದರು. ಸದ್ಯ ಏಜೆಂಟ್​ 001 ಕಾರ್ಯಕ್ರಮವನ್ನ ಸಹ ಅವರೇ ನಿರೂಪಣೆ ಮಾಡುತ್ತಿದ್ದಾರೆ. ​

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


ವಿಆರ್‌ಎಲ್ ಲಾಜಿಸ್ಟಿಕ್ಸ್, ವಿಜಯಾನಂದ ಟ್ರಾವೆಲ್ಸ್‌ಗೆ ಪ್ರತಿಷ್ಠಿತ ‘ರಸ್ತೆ ಸಾರಿಗೆ ಪ್ರಶಸ್ತಿ’

 ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ನವದೆಹಲಿ: ಪ್ರಸಕ್ತ ವರ್ಷದ ಪ್ರತಿಷ್ಠಿತ ‘ರಸ್ತೆ ಸಾರಿಗೆ ಪ್ರಶಸ್ತಿ’ಯ ಸರಕು ಸಾಗಣೆ ವಿಭಾಗದಲ್ಲಿ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಅವರು  ‘ವರ್ಷದ ವ್ಯಕ್ತಿ’ (ಬಿಜಿನೆಸ್ ಪರ್ಸನ್ ಆಫ್ ದ ಇಯರ್) ಪುರಸ್ಕಾರ ಪಡೆದಿದ್ದಾರೆ. ಕಂಪನಿಯನ್ನು ಮುನ್ನಡೆಸುವಲ್ಲಿ ಅವರು ಮಾಡಿದ ಗಣನೀಯ ಪ್ರಯತ್ನಗಳನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

ಟಿವಿ9 ನೆಟ್‌ವರ್ಕ್ ಮತ್ತು ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಅವಾರ್ಡ್ಸ್ ಸಂಸ್ಥೆಯು ಕಾಂಟಿನೆಂಟಲ್ ಟೈರ್ಸ್‌ ಸಹಯೋಗದೊಂದಿಗೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ರಾಜ್ಯ ಸಚಿವ ಹರ್ಷ ಮಲ್ಹೋತ್ರಾ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಆನಂದ ಸಂಕೇಶ್ವರ ಅವರು, ವಿಆರ್‌ಎಲ್ ಸಮೂಹದ ಪ್ರತಿಯೊಬ್ಬ ಉದ್ಯೋಗಿಯ ಪರಿಶ್ರಮ ಮತ್ತು 1976ರಲ್ಲಿ ಕೇವಲ ಒಂದು ಟ್ರಕ್‌ನೊಂದಿಗೆ ಕಂಪನಿಯನ್ನು ಆರಂಭಿಸಿ ಈ ಮಟ್ಟಕ್ಕೆ ಬೆಳೆಸಿದ ತಮ್ಮ ತಂದೆ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರ ದೂರದರ್ಶಿತ್ವವನ್ನು ಸ್ಮರಿಸಿದರು. ‘‘ಕಂಪನಿ ಇಂದು 6100ಕ್ಕೂ ಹೆಚ್ಚು ವಾಹನಗಳನ್ನು ಹೊಂದಿದ್ದು ವಾಣಿಜ್ಯ ವಾಹನಗಳ ಕ್ಷೇತ್ರದಲ್ಲಿ ಅತಿ ದೊಡ್ಡ ಸಂಸ್ಥೆಯಾಗಿ ಹೊರಹೊಮ್ಮಿದೆ’’ ಎಂದು ಡಾ. ಆನಂದ ಸಂಕೇಶ್ವರ ವಿವರಿಸಿದಾಗ, ಸಭಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಯಿತು.

ವಿಟಿಪಿಎಲ್‌ಗೂ ಪುರಸ್ಕಾರ:

ಇದೇ ವೇಳೆ, ಶಿವಾ ಸಂಕೇಶ್ವರ ನೇತೃತ್ವದ ವಿಜಯಾನಂದ ಟ್ರಾವೆಲ್ಸ್ ಪ್ರೈವೇಟ್ ಲಿಮಿಟೆಡ್ (ವಿಟಿಪಿಎಲ್), ಬಸ್ ಆಪರೇಟರ್ಸ್ ವಿಭಾಗದಲ್ಲಿ ‘ಎಮರ್ಜಿಂಗ್ ಬ್ರಾೃಂಡ್ ಆಫ್ ದ ಇಯರ್’ ಎಂಬ ಪ್ರಶಸ್ತಿಗೆ  ಪಾತ್ರವಾಯಿತು. ಬಸ್ ಕಾರ್ಯಾಚರಣೆ ಬಿಜಿನೆಸ್ಸನ್ನು ವಿಆರ್‌ಎಲ್ ಲಾಜಿಸ್ಟಿಕ್ಸ್‌ನಿಂದ 2023ರಲ್ಲಿ ಪ್ರತ್ಯೇಕಿಸಲಾಗಿದ್ದು, ಅದು ಈಗ ಸ್ವತಂತ್ರ ಕಂಪನಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಹೆಚ್ಚು ಬಸ್‌ಗಳನ್ನು ಕ್ಷಿಪ್ರ ಅವಧಿಯಲ್ಲಿ ಸೇರ್ಪಡೆ ಮಾಡಿರುವುದು, ಹೊಸಹೊಸ ಮಾರ್ಗಗಳನ್ನು ಪ್ರಾರಂಭಿಸಿರುವುದು, ನವನವೀನ ಅಭ್ಯಾಸಗಳನ್ನು ಅಳವಡಿಸಿರುವುದು ಮುಂತಾದ ಕಾರಣಗಳಿಂದ ಮುಂದಿನ ದಿನಗಳಲ್ಲಿ ಭಾರಿ ಯಶಸ್ಸು ಸಾಧಿಸಲಿರುವ ಹಿನ್ನೆಲೆಯಲ್ಲಿ ವಿಟಿಪಿಎಲ್‌ನ್ನು ‘ವರ್ಷದ ಎಮರ್ಜಿಂಗ್ ಬ್ರಾೃಂಡ್’ ಆಗಿ ಆಯ್ಕೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ, ವಿ-ಟ್ರಾನ್ಸ್, ಗ್ಯಾನ್ ಲಾಜಿಸ್ಟಿಕ್ಸ್ ಪ್ರೈ.ಲಿ., ಜೆಕೆಎಂ ಟ್ರಾನ್ಸ್‌ಪೋರ್ಟ್, ಎಚ್‌ಬಿಆರ್ ಟ್ರಾನ್ಸ್‌ಪೋರ್ಟ್, ಪಂಕಜ್ ಟ್ರಾನ್ಸ್‌ಪೋರ್ಟ್ ಮುಂತಾದ ಕಂಪನಿಗಳಿಗೂ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. 50-200 ವಾಣಿಜ್ಯ ವಾಹನಗಳ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿರುವ ಕೆಲವು ಮಹಿಳಾ ಉದ್ಯಮಿಗಳನ್ನೂ ಗುರುತಿಸಿ ಪುರಸ್ಕರಿಸಲಾಯಿತು.

ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರದಲ್ಲಿ ವ್ಯಕ್ತಿಗಳು ಮತ್ತು ಸಂಸ್ಥೆಗಳು ಮಾಡಿರುವ ಸಾಧನೆಯನ್ನು ಗುರುತಿಸಿ ಪುರಸ್ಕರಿಸುವುದು ಈ ಪ್ರಶಸ್ತಿಯ ಹಿಂದಿನ ಉದ್ದೇಶವಾಗಿದೆ. ಯಾವುದೇ ವಾಣಿಜ್ಯ ಉದ್ದೇಶಗಳಿಲ್ಲದೆ, ಸಂಪೂರ್ಣವಾಗಿ ಸಾಧನೆಯನ್ನೇ ಆಧರಿಸಿ ಆಯ್ಕೆ ಮಾಡಿದ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು, ವಿಆರ್‌ಎಲ್‌ನ ಎರಡು ಸಂಸ್ಥೆಗಳು ಈ ಮೂಲಕ ರಾಷ್ಟ್ರಮಟ್ಟದ ಗೌರವಕ್ಕೆ ಭಾಜನವಾಗಿವೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

17-08-2024 EE DIVASA KANNADA DAILY NEWS PAPER

Wednesday, August 14, 2024

ಅಖಂಡ ಭಾರತ ತುಂಡು.. ತುಂಡು..ಸಮಸ್ಯೆಗಳು.!

 


 ಸಮಸ್ತ ಭಾರತೀಯರೀಗ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದಲ್ಲಿ ಮುಳುಗಿದ್ದಾರೆ. ಇದು ಸಕಲ ಭಾರತೀಯರೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳುವ ಕಾಲ ದೇಶದ ಪ್ರಗತಿ ಕುಂಟುತ್ತ ಸಾಗಿದೆ. ಮಹಿಳೆಯರಿಗೆ ಸಿಗಬೇಕಾದ ಸ್ಥಾನಮಾನಗಳು ಸರಿಯಾಗಿ ಸಿಗುತ್ತಿಲ್ಲ. ಉದ್ಯೋಗದ ಅವಕಾಶಗಳು ಪ್ರಬಲ ಪುರುಷರ ಜಾತಿ ಪಾಲಾಗಿದೆ. ಹೆಣ್ಣು ಮಕ್ಕಳ ದುಡಿಮೆಗೆ ಬೆಲೆಯಿಲ್ಲದಂತಾಗಿ, ಮಕ್ಕಳು ಮತ್ತು ಮಹಿಳೆಯರು ಶ್ರಮಜೀವಿಗಳಾಗಿ ಬದುಕುತ್ತಿದ್ದಾರೆ. ಮಹಿಳೆಯರ ರಾಜಕಾರಣ ಸ್ಥಿತಿಗತಿ ಅಯೋಮಯವಾಗಿದೆ. ಗ್ರಾಮ ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳಲ್ಲಿ ಅವರು ಆಯ್ಕೆಯಾಗಿದ್ದರೂ ಪುರುಷರೇ ಅಧಿಕಾರ ನಡೆಸುತ್ತಿದ್ದಾರೆ. ಉನ್ನತ ಶಿಕ್ಷಣದಿಂದ ಮಹಿಳೆಯರು ವಂಚಿತರಾಗುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಮೇಲುಗೈ ಸಾಧಿಸಿದ ಹುಡುಗಿಯರು ಪಿಯುಸಿಯ ನಂತರ ಅಡುಗೆ ಮನೆಗೆ ಸೇರಿಕೊಳ್ಳುತ್ತಾರೆ. ಅವರ ಉನ್ನತಿ ಸಂಸಾರದಲ್ಲಿ ಮಂಕಾಗುತ್ತದೆ. ಮಕ್ಕಳ, ಗಂಡನ ಅಂಡು ತೊಳೆಯುವುದರಲ್ಲಿಯೇ ಅವರು ಮುದುಕಿಯರಾಗುತ್ತಾರೆ. ಮಕ್ಕಳು ಬಾಲಕಾರ್ಮಿಕರಾಗುತ್ತಿದ್ದಾರೆ. ಬಾಲ್ಯವಿವಾಹಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶ್ರೀಮಂತರ ಮನೆಯಲ್ಲಿ ಬಡವರ ಮನೆಯ ಹೆಣ್ಣುಮಕ್ಕಳು ಜೀತಕ್ಕೆ, ಗುಲಾಮಗಿರಿಗೆ ಒಂದು ಹೊತ್ತಿನ ಊಟಕ್ಕೆ ಕೂಲಿಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಅದೇಷ್ಟೋ ಮಾನವ ಕಳ್ಳಸಾಗಣೆ ನಿರಂತರವಾಗಿ ನಡೆಯುತ್ತಿದೆ. ಸಮಾಜದಲ್ಲಿ ಭಿಕ್ಷಕರ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲಸವಿಲ್ಲದ ಯುವಕರು, ಯುವತಿಯವರು ಅಡ್ಡದಾರಿ ಹಿಡಿಯುತ್ತಿದ್ದಾರೆ. ಸರ್ಕಾರದಂತಹ ಉನ್ನತ ಪರೀಕ್ಷೆಗಳು ಸ್ಫರ್ಧಾತ್ಮಕ ಪರೀಕ್ಷೆಗಳು ಲಂಚಕ್ಕೆ ಮಾರಾಟವಾಗುತ್ತಿವೆ. ಅಂಕಗಳು, ಅಂಕಪಟ್ಟಿಗಳು ಲಕ್ಷ ಲಕ್ಷ ರೂಪಾಯಿಗಳಿಗೆ ಬಹಿರಂಗವಾಗಿ ಮಾರಾಟವಾಗುತ್ತಿದೆ. ಶಿಕ್ಷಣ ಕ್ಷೇತ್ರಗಳು ಮತ್ತು ರಾಜಕಾರಣಿಗಳು, ಶ್ರೀಮಂತರು ಮಠದ ಧರ್ಮಗುರುಗಳು ಹಂಚಿಕೊಂಡು ಶಿಕ್ಷಣವನ್ನು ವ್ಯಾಪಾರಿಗಳು ಮಾಡುತ್ತಿದ್ದಾರೆ. ನಾಡಿನ ವಿಶ್ವವಿದ್ಯಾಲಯಗಳು ಪಿಎಚ್‌ಡಿ ಪದವಿ ನೀಡಲು ವಿದ್ಯಾರ್ಥಿಗಳನ್ನು ಶೋಷಣೆಮಾಡಿ ಹೆಚ್ಚಿನ ಹಣ ಕೀಳುತ್ತಾರೆ. ಪಿಎಚ್‌ಡಿ ಮುಗಿಸಿದ ವಿದ್ಯಾರ್ಥಿಗಳಿಂದ ಚಿನ್ನ, ಬೆಳ್ಳಿ, ಉಡುಗೊರೆಗಳನ್ನು ಒತ್ತಾಯ ಪೂರ್ವಕವಾಗಿ ಬಯಸುತ್ತಾರೆ. ಮಾರ್ಗದರ್ಶಕರು ಮಾರ್ಗ ತಪ್ಪಿದ್ದಾರೆ. ಪಿಎಚ್.ಡಿ., ಪದವಿ ಪಡೆದ ಬಡವರ ಮಕ್ಕಳು ದಿನಗೂಲಿ ಕೆಲಸಕ್ಕೆ ಸೇರಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಸೇಲ್ಸ್‌ಮನಗಳಾಗಿದ್ದಾರೆ. ಕೆಲವು ಲಂಚ ಕೊಟ್ಟು ನೌಕರಿ ಸೇರಿ ಕೊಟ್ಟ ಹಣಕ್ಕೆ ಲಂಚ ಪಡೆಯು ತ್ತಿದ್ದಾರೆ. ಪೆಟ್ರೋಲ್ ಬೆಲೆ ಗಗನಕ್ಕೇರಿದೆ. ಅಡುಗೆ ಅನೀಲ , ಅಕ್ಕಿ, ಬೆಳೆ, ಗೋಧಿ, ದಿನಸಿ ವಸ್ತುಗಳು ಶ್ರೀಮಂತರ ಕೈಗೆಟಕುತ್ತವೆ. ಬಡವರ ಕೈ ತಪ್ಪುತ್ತಿವೆ. ಕೇರಿಗೆ ಹಬ್ಬ ಹರಿದಿನಗಳಲ್ಲಿ ಜನಸಾಮಾನ್ಯರು ಪ್ರಯಾಣಿಸಬೇಕಾದರೆ ಬಸ್ ದರಗಳು ಬೇಕಾಬಿಟ್ಟಿಯಾಗಿ ಏರಿಕೆಯಾಗುತ್ತವೆ. ಸರ್ಕಾರಿ ಬಸ್ಸುಗಳು , ರೈಲುಗಳು, ವಿಮಾನಗಳು ಮುಂಗಾರು ಸೀಟು ಕಾಯ್ದಿರಿಸುವಿಕೆಯಲ್ಲಿ ಹೆಚ್ಚಿನ ಹಣವನ್ನು ಪಡೆಯುತ್ತಿವೆ. ಸರ್ಕಾರಿ ಕಚೇರಿಗಳು ಹಸಿದ ಭೂತಬರೆಹ. ಲಂಚವೆAಬ ಆಹಾರ ನೀಡಿದರೆ ಮಾತ್ರ. ಫೈಲು ಮುಂದು ಸರಿಯುತ್ತಿದೆ. ಇಲ್ಲದಿದ್ದರೆ ಉಪಯುಕ್ತ ಫೈಲ್ಗಳು (ಮೂಲವ್ಯಾದಿ) ಹೊರಬರುತ್ತದೆ. ಬದುಕು ತಂತಿಯ ಮೇಲೆ ನಡೆದಂತೆ ಭಾಸವಾಗುತ್ತಿದೆ. ಬಸ್ಸುಗಳಲ್ಲಿ ಸಂಚಾರ ಮಾಡುವಾಗ ಒಂದು ಕ್ಷಣದ ಸೀಟಿಗಾಗಿ ಜಗಳಗಳಾಗುತ್ತವೆ. ನ್ಯಾಯ ಬೆಲೆ ಅಂಗಡಿಯ ಸರದಿ ಸಾಲಿನಲ್ಲಿ ಯಾರೋ ಒಳನುಳಿಸಿದರೆ ಹೊರದೇಶಿ ಗಡಿ ಪ್ರವೇಶಿಸಿದಂತೆ ಜಗಳವಾಗುತ್ತಿವೆ. ಜನರು ಸಹನೆ ಕಳೆದುಕೊಳ್ಳುತ್ತಿದ್ದಾರೆ. ಯುವಕರು ಮತ್ತು ಯುವತಿಯರು ತುಂಬಾಕಿನ ದಾಸರಾಗಿದ್ದಾರೆ. ಮಾಧಕ ದ್ರವ್ಯಗಳ ವ್ಯಸನಿಗಳಾಗಿದ್ದಾರೆ. ಮಟ್ಕಾ, ಮಾವ, ಬೀದಿ, ಸಿಗರೇಟ್ ಮಾರಾಟ ನಿರಂತರವಾಗಿದೆ. ಗ್ರಂಥಾಲಯಗಳು, ಪುಸ್ತಕಗಳು, ಪುಸ್ತಕಗಳು ಕೈಗೆ ಸೇರದೆ ಕೊಳೆಯುತ್ತಿವೆ. ಮೊಬೈಲ್ ಬಂದು ಮನುಷ್ಯರ ಐಲುಗಳನ್ನು ಹೆಚ್ಚಿಗೆ ಗೊಳಿಸಿವೆ. ಪಾರ್ಲೆಜಿ ಬಯಸುವ ಮಕ್ಕಳು 5 ಜಿ ಮೊಬೈಲ್ ಬಯಸುತ್ತಿದ್ದಾರೆ. 

 ತಿನ್ನುವ ಆಹಾರ ಕಲುಷಿತಗೊಳ್ಳುತ್ತಿವೆ. ಪಾಸ್ಟ್ ಫುಡ್ಗಳು ಜನರ ಜೇಬಿಗೆ ಕತ್ತರಿ ಹಾಕುತ್ತಿವೆ. ಬದುಕು ಬದಲಾದಂತೆ ದೇಶದ ತುಂಬಾ ಬರೀ ಋಣಾತ್ಮಕ ಅಂಶಗಳೇ ಕಾಣುತ್ತಿವೆ. ಧನಾತ್ಮಕ ಅಂಶಗಳು ಕೊಳೆಯುತ್ತಿವೆ. ರೋಗರುಜಿನಗಳು ಹೆಚ್ಚಾಗಿವೆ. ಇತರರು ಮನಬಂದಂತೆ ಸುಳಿಯುತ್ತಿದ್ದಾರೆ. ರೋಗಿಗಳ ಆಸ್ಪತ್ರೆಗಳಿಗೆ ಹೋಗದೆ ಮನೆಯಲ್ಲಿಯೇ ಆಯುರ್ವೇದ ಚಿಕಿತ್ಸೆಗಳು ಹೆಚ್ಚು ಹೋಗುತ್ತಿವೆ. ಯೋಗ, ಧ್ಯಾನ, ಸಾತ್ವಿಕ ಚಿಂತನೆ ಆಧುನಿಕ ಬದುಕಿಗೆ ಚೈತನ್ಯ ನೀಡುತ್ತದೆ. 

 ಒಳ್ಳೆಯ ಸಾಧು, ಸಂತರು, ತತ್ವಜ್ಞಾನಿಗಳು, ಈ ದೇಶವನ್ನು ಕಟ್ಟಿದ್ದಾರೆ. ಈ ನೆಲದ ಸಂಸ್ಕೃತಿ ಪರಂಪರೆಯನ್ನು ಆಧುನಿಕತೆ ಹಾಳುಮಾಡುತ್ತಿವೆ. ಹಬ್ಬ ಹರಿದಿನಗಳು ಯಾಂತ್ರಿಕ ಸಮಯ. ಇಂತಹ ಸಂದರ್ಭದಲ್ಲಿ ದೇಶ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಬನ್ನಿ ನಾವೆಲ್ಲ ಸೇರಿ ಒಂದೆ ಮಾತರಂ. ಜೈ ಹಿಂದ್ ಎನ್ನೋಣ...


ಕಲ್ಲಪ್ಪ ಶಿವಶರಣ

ಪತ್ರಕರ್ತ 

ಮೊ: 7204279187


ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜು, ವಿಶ್ವವಿದ್ಯಾನಿಲಯ ವರದಿ, ಹೋರಾಟಗಾರರ ಮನವಿ, ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳ ಸಮಸ್ಯೆಗಳು ಸೇರಿದಂತೆ ಇತರ ಸುದ್ದಿಗಳು ಮತ್ತು ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸ್ವೀಕರಿಸಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗಿದೆ.


15-08-2024 EE DIVASA KANNADA DAILY NEWS PAPER

Tuesday, August 13, 2024

14-08-2024 EE DIVASA KANNADA DAILY NEWS PAPER

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಬಳಸಿ ಸರ್ವಾಂಗೀಣ ಅಭಿವೃದ್ದಿಗೆ ಕ್ರಮ - ಶ್ರೀಮತಿ ಸುಧಾಮೂರ್ತಿ


 ವಿಜಯಪುರ  : ಜಿಲ್ಲೆಯ ಗೋಲಗುಂಬಜ್ , ಬಾರಾ ಕಮಾನ್, ಗಗನ ಮಹಲ, ಇಬ್ರಾಹಿಮ್ ರೋಜಾ, ಬಸವನ ಬಾಗೇವಾಡಿ ಹಾಗೂ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳನ್ನು ಸ್ವಚ್ಚತೆಯನ್ನು ಕಲ್ಪಿಸಿ ಪ್ರವಾಸಿಗರಿಗೆ ಕುಡಿಯುವ ನೀರು, ಶೌಚಾಲಯ, ಮಾಹಿತಿ ಕೇಂದ್ರ, ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಕ್ಕಾಗಿ ಸಂಸದರ ಪ್ರದೇಶಾಭಿವೃದ್ಧಿ ಯೋಜನೆ ಬಳಸಲಾಗುವುದು ಎಂದು ರಾಜ್ಯಸಭೆ ಸಂಸದರಾದ ಶ್ರೀಮತಿ ಸುಧಾಮೂರ್ತಿ ಹೇಳಿದರು. 

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ವಿಜಯಪುರ ನಗರ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಸ್ಮಾರಕಗಳಿಗೆ ಹೆಸರುವಾಸಿಯಾಗಿದೆ. ವಿಜಯಪುರ ಜಿಲ್ಲೆಯ ಜೊತೆ ನನಗೆ ಭಾವನಾತ್ಮಕ ಸಂಬAಧ ಇರುವುದಂದ ನೋಡಲ್ ಜಿಲ್ಲೆಯನ್ನಾಗಿ ವಿಜಯಪುರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಬಳಸಿಕೊಂಡು ಸಮಗ್ರ ಅಭಿವೃದ್ದಿಗೆ ಕ್ರಮ ವಹಿಸಲು ಜಿಲ್ಲೆಯ ಎಲ್ಲ ಅಧಿಕಾರಿಗಳು ಸಮನ್ವಯತೆ ಸಾಧಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿ ಜನರ ಜೀವನ ಮಟ್ಟ ಸುಧಾರಣೆಗೆ ಶ್ರಮಿಸಬೇಕು ಎಂದು ಹೇಳಿದರು.

ಜಿಲ್ಲಾಸ್ಪತ್ರೆ ಆವರಣದಲ್ಲಿ ಧರ್ಮಶಾಲೆಯನ್ನು ತೆರೆದು ಸಾರ್ವಜನಿಕರಿಗೆ ಅನೂಕೂಲ ಕಲ್ಪಿಸುವುದು ಹಾಗೂ ತಾಳಿಕೊಟೆ, ಬಸವನ ಬಾಗೇವಾಡಿ, ಸಿಂದಗಿಯಲ್ಲಿ ಸುಸಜ್ಜಿತವಾದ ಗ್ರಂಥಾಲಯ ನಿರ್ಮಾಣ, ಸರಕಾರಿ ಜಾಗದಲ್ಲಿ ಸುಸಜ್ಜಿತವಾದ ಜಿಮ್ ನಿರ್ಮಾಣ ಮಾಡಲು ಸಿದ್ಧತೆ ನಡೆಸಲಾಗಿದೆ. ಕುಮಟಗಿಯಲ್ಲಿರುವ ವಾಟರ್‌ಪೆವಿಲಿಯನ್‌ನ್ನು ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿ ಅಲ್ಲಿನ ಕೆರೆಯ ಸಂರಕ್ಷಣೆ ಹಾಗೂ ಅರಮನೆ, ಕೊಟೆಯನ್ನು ಪ್ರೇಕ್ಷಣಿಯ ಸ್ಥಳವಾಗಿ ಅಭಿವೃದ್ಧಿ ಪಡಿಸಲು ಯೋಜನೆ ಹಮ್ಮಿಕೊಳ್ಳಲಾಗಿದ್ದು, ಅಧಿಕಾರಿಗಳು ಅಗತ್ಯ ಸಹಕಾರ ಒದಗಿಸಬೇಕು ಎಂದು ಹೇಳಿದರು. 

ಶಾಲೆ, ಅಂಗನವಾಡಿ, ಹಾಸ್ಟೇಲ್‌ಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಕಲ್ಪಿಸಿ ಸಮಪರ್ಕವಾಗಿ ನಿರ್ವಹಣೆ ಮಾಡಬೇಕು. ಆರೋಗ್ಯ ಹಾಗೂ ವ್ಯಯಕ್ತಿಕ ಸ್ಚಚ್ಚತೆಯ ಬಗ್ಗೆ ತಿಳುವಳಿಕೆ ಮೂಡಿಸಿ ಶೌಚಾಲಯಗಳ ಬಳಕೆ ಮಾಡುವಂತೆ ಜಾಗೃತಿ ಮೂಡಿಸುವುದು ಅತಿ ಅವಶ್ಯಕವಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿನಿಲಯಗಳಲ್ಲಿ ಓದುತ್ತಿರುವ ಹೆಣ್ಣು ಮಕ್ಕಳ ಸಮಗ್ರ ವ್ಯಕ್ತಿತ್ವದ ಬೆಳವಣಿಗೆಗ ಪೂರಕವಾಗುವಂತೆ, ಗ್ರಂಥಾಲಯದ ಅನುಕೂಲ, ವ್ಯಕ್ತಿತ್ವ ವಿಕಸನ, ಈಜು, ಕ್ರೀಡೆಯಂತಹ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಸಂಸದರ ಪ್ರದೇಶಾಭಿವೃದ್ಧಿ ಯೋಜನೆಗೆ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಹಕಾರ ನೀಡುವುದಾಗಿಯೂ, ಜಿಲ್ಲಾ ವ್ಯಾಪ್ತಿಯಲ್ಲಿಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆಯ ಡಾ. ಬಸವರಾಜ ಹುಬ್ಬಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ ಮಾನವರ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಕೆಯ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಹಿಂದುಳಿದ ಕಲ್ಯಾಣ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಆಶಾಪೂರ, ಪ್ರಮಾಸೋಧ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ವಾಣ, ಮಹಾನಗರಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣನವರ ಸೇರಿದಮತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Monday, August 12, 2024

13-08-2024 EE DIVASA KANNADA DAILY NEWS PAPER

ಸಾರ್ವಜನಿಕರ ಸಮಸ್ಯೆಗಳಿಗೆ ತತಕ್ಷಣಕ್ಕೆ ಸ್ಪಂದಿಸಿ ಪರಿಹಾರಕ್ಕೆ ಕ್ರಮ ವಹಿಸಿ -ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ

 


ವಿಜಯಪುರ: ಮಕ್ಕಳ ಆರೋಗ್ಯ ಕಾಳಜಿ, ಸಮರ್ಪಕ ತ್ಯಾಜ್ಯ ನಿರ್ವಹಣೆ, ಗ್ರಾಮ-ನಗರಗಳ ನಿರ್ವಹಣೆ, ಬಯಲು ಬಹಿರ್ದೆಸೆ ಮುಕ್ತ, ಕೆರೆಗಳ ಸಂರಕ್ಷಣೆ, ಸಾರ್ವಜನಿಕರ ಆರೋಗ್ಯ, ಶಾಲಾ ಮಕ್ಕಳ ಶಿಕ್ಷಣ ಗುಣಮಟ್ಟ ಸುಧಾರಣೆ, ಆಸ್ತಿ ಸುಸ್ಥಿತಿ, ಸಾರ್ವಜನಿಕ ರಕ್ಷಣೆ, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ. , ಹಸರದ ದೃಷ್ಟಿಯಲ್ಲಿ ಅರಣ ಯÃಕರಣ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು, ಪರಿಹಾರ ಕಲ್ಪಿಸುವ ಯೋಜನೆ ಯೋಜನೆ ಬದ್ಧವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ. 



ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಅವರ ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಚಿಕ್ಕ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರದ ಕಟ್ಟಡಗಳನ್ನು ಕಿಟಕಿಗಳಿಗೆ ಅಳವಡಿಸಿ ಸೊಳ್ಳೆಗಳು ಬರದಂತೆ ನೋಡಿಕೊಂಡು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಜಲಮೂಲಗಳ ಸಂರಕ್ಷಣೆ ನಮ್ಮ ಜವಾಬ್ದಾರಿ, ಜಿಲ್ಲೆಯಲ್ಲಿ ಕೆರೆಕಟ್ಟೆಗಳ ಸಮೀಕ್ಷೆ ನಡೆಸುವ ಮೂಲಕ ಜೀವಜಲ ಸಂರಕ್ಷಣೆಗೆ ಆದ್ಯತೆ ನೀಡುವಂತೆ ಅವರ ಸೂಚನೆಗಳನ್ನು ಸೂಚಿಸಲಾಗಿದೆ. 



ಗ್ರಾಮೀಣ ಭಾಗಕ್ಕೆ ಇತ್ಯಾದಿ. ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿಸುವ ಕಾಲಮಿತಿ ಹಾಕಿಕೊಂಡು ಪ್ರಗತಿ ಸಾಧಿಸಬೇಕು.ಜನರಲ್ಲಿ ಸೂಕ್ತ ಅರಿವು ಮೂಡಿಸಬೇಕು ಎಂಬ ಸೂಚನೆ. 

ನಗರ ಪ್ರದೇಶಗಳಲ್ಲಿ ತ್ಯಾಜ್ಯಗಳನ್ನು ವಿಂಗಡಿಸಿ ಸಮರ್ಪಕವಾಗಿ ವಿಲೇವಾರಿಗೆ ಕ್ರಮ ವಹಿಸಬೇಕು. ಪ್ರತಿ ಗ್ರಾಮ ಪಂಚಾಯತ್ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಕುಡಿಯುವ ನೀರಿಗೆ ಆಧ್ಯತೆ ನೀಡಿ ಜನರ ಜೀವನ ಮಟ್ಟ ಸುಧಾರಣೆ ಕ್ರಮ ವಹಿಸಬೇಕು. ಚರಂಡಿಯ ನೀರು ಒಂದೆಡೆ ನಿಲ್ಲದೆ ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಕ್ರಮಗಳನ್ನು ಅವರು ಸೂಚಿಸಿದರು. 



ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸುರಕ್ಷತೆ ಕಲ್ಪಿಸುವ ಕಟ್ಟಡ ಶಿಥಿಲಾವಸ್ಥೆಯಲ್ಲಿರುವ ಶಾಲಾ ಮಾಹಿತಿ ಸಂಗ್ರಹಣೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮಂಜಾಗೃತೆ ವಹಿಸಲು ಯೋಜನೆಗಳನ್ನು ಸಿದ್ಧಪಡಿಸಬೇಕು ಎಂದು ಅವರು ಹೇಳಿದರು. 

ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸಮನ್ವಯದಲ್ಲಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕಾರ್ಯಕ್ರಮಗಳನ್ನು ನಡೆಸಿ ದುಶ್ಚಟಗಳ ನಿವಾರಣೆಗೆ ಶ್ರಮಿಸಬೇಕು.

ಜಿಲ್ಲೆಯಲ್ಲಿ ತೆರೆದ ಕೊಳವೆ ಬಾವಿಗಳು ಇರದಂತೆ ನೋಡಿಕೊಳ್ಳಬೇಕು. ನಿಷ್ಕ್ರೀಯ ಬೋರವೆಲ್ಗಳನ್ನು ಕೂಡಲೇ ಮುಚ್ಚಲು ಕ್ರಮ ಕೈಗೊಳ್ಳಬೇಕು. ದೇಶ-ವಿದೇಶಗಳಿಂದ ಸಂಗ್ರಹಿಸುವ ಐತಿಹಾಸಿಕ ನಗರ ವಿಜಯಪುರಕ್ಕೆ ಆಗಮಿಸಿರುವ ಹಿನ್ನಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಕಾರ್ಯಕ್ರಮದ ಆಯ್ಕೆಗೆ ಆದ್ಯತೆ. ಹೆಚ್ಚಿನದನ್ನು ಆಕರ್ಷಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.

 ಜಿಲ್ಲಾಧಿಕಾರಿ ಟಿ,ಭೂಬಾಲನ್ ಅವರು ಮಾತನಾಡಿ, ಜಿಲ್ಲೆಯಲ್ಲಿ 264 ಕೆರೆಗಳ ಮೇಲಕ್ಕೆ 247 ಕೆರೆಗಳ ಅಳತೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 17 ಕೆರೆಗಳು ಬಾಕಿ ಇದ್ದು, ಸೆಪ್ಟೆಂಬರ್ ಅಂತ್ಯಕ್ಕೆ ಸಾಧ್ಯವಾಗಿತ್ತು. ಜಿಲ್ಲೆಯಲ್ಲಿ ವಿಫಲ ಕೊಳವೆಬಾವಿಗಳ ಕುರಿತು ಪ್ರತಿ ತಾಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿದೆ. ವಿಫಲ ಮತ್ತು ನಿಷ್ಕ್ರೀಯ ಕೊಳವೆ ಬಾವಿಗಳ ಮುಚ್ಚುವಲ್ಲಿ ಪಿಡಿಯೊಗಳಿಗೆ ಸೂಚಿಸಲಾಗಿದೆ, ಕೊಳವೆ ಬಾವಿ ಕೊರೆಸಲು ಗ್ರಾಪಂ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು, ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಶನಿವಾರದಂದು ಶಿಬಿರ ನಡೆಸಿ ಜಾಗೃತಿ ಮೂಡಿಸಲಾಯಿತು. ಗುಣಮಟ್ಟದ ಶಿಕ್ಷಣ ಹಾಗೂ ಶಾಲಾ ಕೊಠಡಿಗಳ ಸುಸ್ಥಿತಿ ಕುರಿತು ಕಾಲಕಾಲಕ್ಕೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಕ್ಷೇತ್ರ ವೀಕ್ಷಣೆ ಮಾಡುವ ಮೂಲಕ ಶಾಲೆಯ ಬಗ್ಗೆ ತಿಳಿಸಲಾಗಿದೆ, ಕುಡಿಯುವ ನೀರಿನ ವ್ಯವಸ್ಥೆ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವ ಸ್ಥಿತಿಗತಿಗಳನ್ನು ಅರಿತು ಅಗತ್ಯ ಕ್ರಮಗಳನ್ನು ವಹಿಸಲಾಗಿದೆ.

ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಸಾರ್ವಜನಿಕರ ಕುಂದು-ಕೊರತೆ, ಅಹವಾಲುಗಳನ್ನು ಆಲಿಸಿ ಸಂಬಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ಕಾರ್ಯದರ್ಶಿಗಳಾದ ಕೆ.ಶ್ರೀನಾಥ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಕರ್ನಾಟಕ ಲೋಕಾಯುಕ್ತ ವಿಜಯಪುರ ಪೊಲೀಸ್ ಅಧೀಕ್ಷಕ ಟಿ.ಮಲ್ಲೇಶ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಅಧಿಕಾರಿಗಳು ಇದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜು, ವಿಶ್ವವಿದ್ಯಾನಿಲಯ ವರದಿ, ಹೋರಾಟಗಾರರ ಮನವಿ, ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳ ಸಮಸ್ಯೆಗಳು ಸೇರಿದಂತೆ ಇತರ ಸುದ್ದಿಗಳು ಮತ್ತು ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸ್ವೀಕರಿಸಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗಿದೆ.


Thursday, August 8, 2024

09-08-2024 EE DIVASA KANNADA DAILY NEWS PAPER

ಬಸವನ ಜನ್ಮಸ್ಥಳಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಡಿಸಿ ಭೂಬಾಲನ್

ವಿಜಯಪುರ : ಬಸವ ಜನ್ಮಸ್ಥಳವಾದ ಇಂಗಳೇಶ್ವರ ಗ್ರಾಮಕ್ಕೆ ಇಂದು  ಜಿಲ್ಲಾಧಿಕಾರಿಗಳಾದ ಟಿ ಭೂಬಾಲನ್ ಅವರು ಭೇಟಿ ಮಾಡಿ  ಬಸವೇಶ್ವರರ  ಪುತ್ತಳಿ ನಿರ್ಮಾಣ ಕುರಿತು ಸಮೀಕ್ಷೆ ನಡೆಸಿ ಮತ್ತೆ ಸ್ಮಾರಕಕ್ಕೆ ತೆರಳಿ ವೀಕ್ಷಣೆ ಮಾಡಿ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ವೀಕ್ಷಣೆ ಮಾಡಿದರು.

ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮಕ್ಕೆ ಬೇಟಿ ಶ್ರೀ ಬಸವೇಶ್ವರ ಸರ್ಕಲ್ & ಮೂರ್ತಿ ಪ್ರತಿಷ್ಠಾಪನಾ ನಿರ್ಮಾಣ ಕುರಿತು ಸಂಬAಧಿಸಿದ ತಹಶೀಲ್ದಾರರಿಂದ ಮಾಹಿತಿ ಪಡೆದ ಅವರು, ಗಾವಠಾಣ ಜಾಗದಲ್ಲಿ ಬಸ್ ನಿಲ್ದಾಣ  ನಿರ್ಮಾಣ  ಕುರಿತು ಪರಿಶೀಲನೆ ನಡೆಸಿದರು.

ಬಸವೇಶ್ವರ ಬಸವ ಸ್ಮಾರಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಿರ್ಮಾಣ ಹಂತದಲ್ಲಿರುವ ಅಂಬಿಗರ ಚೌಡಯ್ಯ ಸಮುದಾಯ ಭವನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.  ಹಾಲು ಬಾವಿ ಹಾಗೂ ವಿರಕ್ತಮಠದ ವಚನ ಶಿಲಾ ಮಂಟಪ ವೀಕ್ಷಣೆ ಮಾಡಿದರು.

ಬಸವನ ಬಾಗೇವಾಡಿಯ ಮೆಗಾ ಮಾರ್ಕೆಟ್ ಮತ್ತು ನಂದಿ  ಮಾರ್ಕೆಟ್‌ಗೆೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಜೆ ಬಸವನ ಬಾಗೇವಾಡಿಯಲ್ಲಿರುವ  ಇಂದಿರಾ ಕ್ಯಾಂಟೀನಗೆ ದಿಢೀರ  ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಕ್ಯಾಂಟೀನದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಆಹಾರ ಸವಿಯುವ ಮೂಲಕ ಆಹಾರ ಗುಣಮಟ್ಟ ಪರೀಕ್ಷಿಸಿದರು.

ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Wednesday, August 7, 2024

08-08-2024 EE DIVASA KANNADA DAILY NEWS PAPER

ರಾಜ್ಯದಾದ್ಯಂತ ಅನಿರ್ದಿಷ್ಟ ಕಾಲಾವಧಿಗೆ ಮುಷ್ಕರಕ್ಕೆ ನಿರ್ಧಾರ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಶಿಕ್ಷಕರ ಸಂಘದಿ0ದ ಮನವಿ

ವಿಜಯಪುರ : ಶಿಕ್ಷಕರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲಾ ಘಟಕದಿಂದ ಇಂದು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಶಿಕ್ಷಕರ ವಿವಿಧ ಬೇಡಿಕೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸಂಘದ ಜಿಲ್ಲಾಧ್ಯಕ್ಷರಾದ ಜಿ.ಎಸ್. ಬೆವನೂರ ಇವರ ನೇತೃತ್ವದಲ್ಲಿ ಮನವಿ ಸಲ್ಲಿಸಿ, ದಿನಾಂಕ : 12-08-2024 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ರಾಜ್ಯದ ಸಮಸ್ತ ಶಿಕ್ಷಕರು ಕೈಗೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದಕ್ಕೆ ಸರಕಾರ ಸಕರಾತ್ಮಕವಾಗಿ ಸ್ಪಂಧಿಸದಿದ್ದಲ್ಲಿ ರಾಜ್ಯಾದ್ಯಂತ PSಖಿ ಶಿಕ್ಷಕರು ಶಾಲಾ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟ ಮುಷ್ಕರ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಉಲ್ಲೇಖ (1)ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ “ಪದವೀಧರ ಶಿಕ್ಷಕರೆಂದು” ಪದನಾಮೀಕರಿಸುವುದು. ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ: 1-7/8 ಕ್ಕೆ ನೇಮಕ ಹೊಂದಿದವರನ್ನು PSಖಿ ಎಂದು ಪದನಾಮ ಮಾಡಿ 1-5 ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. 

ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಅರ್ಹ ವಿದ್ಯಾರ್ಹತೆ (ಪದವಿ+ಶಿಕ್ಷಣ ತರಬೇತಿ) ಹೊಂದಿದ 2016ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆ (ಅಚಿಡಿಡಿಥಿ ಈoಡಿತಿಚಿಡಿಜiಟಿg Seಟಿioಡಿiಣಥಿ) ಯೊಂದಿಗೆ ಬಡ್ತಿ ನೀಡುವುದ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗಿದೆ. 

ಈ ಸಂದರ್ಭದಲ್ಲಿ ರಾಜ್ಯ ಕೋಶಾಧ್ಯಕ್ಷರಾದ ಸುರೇಶ ಶೇಡಶ್ಯಾಳ ಅರ್ಜುನ.ಜಿ. ಲಮಾಣಿ, ಜುಬೇರ ಕೆರೂರ, ಬಿ.ಟಿ. ಗೌಡರ, ರವೀಂದ್ರ ಉಗಾರ, ನಿಜು ಎಂ. ಮೇಲಿನಕೇರಿ, ಎಮ್.ಎಮ್. ವಾಲಿಕಾರ, ಶ್ರೀಮತಿ ಪುಷ್ಪಾ ಗಚ್ಚಿನಮಠ, ಶ್ರೀಮತಿ ರೇಣುಕಾ ಆಳೂರ, ಶ್ರೀಮತಿ ಎಸ್.ಎಸ್. ಕುಲಕರ್ಣಿ, ಗಿರಿಶ ಗತಾಟೆ, ಟಿ.ಕೆ. ಜಂಬಗಿ, ಆರ್.ಆರ್. ಹುಣಶಿಗಿಡದ, ಎಸ್.ಎನ್. ಪಡಶೆಟ್ಟಿ, ಸಾಹೇಬಲಾಲ ದಳವಾಯಿ, ಎಚ್. ಎಮ್. ಚಿತ್ತರಕಿ, ವಾಯ್. ಟಿ. ಪಾಟೀಲ, ಆನಂದ ಭೂಸನೂರ, ಎ.ಬಿ. ಧಡಕೆ, ಎಸ್.ಎಸ್. ಸೊನ್ನಗಿ, ಎ.ಎಚ್. ವಾಲಿಕಾರ, ಶ್ರೀ ಬಿ.ಎಸ್. ಮಠ, ಎಮ್.ಎಸ್. ಮುಕಾರ್ತಿಹಾಳ, ಬಿ.ಟಿ. ವಜ್ಜಲ, ಬಿ.ಎಸ್. ಮಜ್ಜಗಿ, ಹಾಗೂ ಎಸ್.ಡಿ. ಪಾಟೀಲ, ಶ್ರೀವಾನಂದ ಮಂಗಾನವರ, ಎಸ್.ಆರ್. ಪಾಟೀಲ ಮತ್ತು ಎಲ್ಲ ತಾಲೂಕುಗಳ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಪ್ರತಿನಿಧಿಗಳು, ಶಿಕ್ಷಕರು ಭಾಗವಹಿಸಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


Tuesday, August 6, 2024

07-08-2024 EE DIVASA KANNADA DAILY NEWS PAPER

ಹಿರಿಯ ಹೋರಾಟಗಾರ ಭೀಮಶಿ ಕಲಾದಗಿ ಅವರಿಗೆ ಸರ್ಕಾರಿ ಗೌರವ


ವಿಜಯಪುರ: ಹಿರಿಯ ರೈತ ಮುಖಂಡ ಶ್ರೀ ಶ್ರೀಶಿ ಕಲಾದಗಿ ಅವರ ಅಂತ್ಯಕ್ರಿಯೆ ಸರಕಾರಿ ಇಂಡಿ ಉಪ ವಿಭಾಗಾಧಿಕಾರಿ ಅಭಿದ್ ಗದ್ಯಾಳ ನೇತೃತ್ವದಲ್ಲಿ ಸರಕಾರಿ ಪೊಲೀಸ್ ಗೌರವದೊಂದಿಗೆ ಇಂದು ತಾಲೂಕಿನ ಹಂಜಗಿ ಗ್ರಾಮದ ತೋಟದಲ್ಲಿ ನೆರವೇರಿತು. ಈ ಸಂಧರ್ಭದಲ್ಲಿ ಇಂಡಿ ಆಡಳಿತದ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು, ವಿಜಯಪುರ ಜಿಲ್ಲೆ ಸೇರಿದಂತೆ ನಾಡಿನ ಹಲವು ಪ್ರಮುಖ ಸಾವಿರಾರು ಅಭಿಮಾನಿಗಳು ಹಾಗೂ ಕುಟುಂಬಸ್ಥರು ಇದ್ದರು.

Monday, August 5, 2024

ಅಗಲಿದ ಹಿರಿಯ ಹೋರಾಟಗಾರ ಭೀಮಶಿ ಕಲಾದಗಿ ಅವರಿಗೆ ಸಕಲ ಸರಕಾರಿ ಗೌರವ ಸಲ್ಲಿಸಲು ಒತ್ತಾಯ

 

ವಿಜಯಪುರ ಜಿಲ್ಲೆಯ ಹಿರಿಯ ಹೋರಾಟಗಾರ, ಕಮ್ಯುನಿಷ್ಟ ಮುಖಂಡ ಭೀಮಶಿ ಕಲಾದಗಿ (87) ಸೋಮವಾರ ರಾತ್ರಿ 9.40 ಗಂಟೆಗೆ ವಿಧಿವಶರಾಗಿದ್ದಾರೆ.

ತಮ್ಮ ಜನಪರ ಹೋರಾಟಗಳಿಂದ ನಾಡಿನಾದ್ಯಂತ ಹೆಸರಾಗಿದ್ದ ಭೀಮಶಿ ಕಲಾದಗಿಯವರು ಬರಗಾಲ ಭೀಮಶಿ ಎಂದೇ ಪ್ರಸಿದ್ಧ ಪಡೆದಿದ್ದರು. ಜಿಲ್ಲೆಯಲ್ಲಿ ಮುಳವಾಡ ಏತನೀರಾವರಿ ಸೇರಿದಂತೆ  ಸಮಗ್ರ ನೀರಾವರಿಗಾಗಿ, ರೈತರಿಗಾಗಿ, ಕಾರ್ಮಿಕರಿಗಾಗಿ, ದಲಿತರಿಗಾಗಿ ಅಲ್ಲದೆ ಅನ್ಯಾಯ, ದೌರ್ಜನ್ಯಕ್ಕೆ ಒಳಗಾದವರ ಧ್ವನಿಯಾಗಿ ಜೀವನವಿಡಿ ಹೋರಾಟ ಮಾಡಿದ್ದರು.ಅವರ ಅಗಲಿಕೆಯಿಂದ ಹಿರಿಯ ಹೋರಾಟದ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ‌‌‌. 

ತಮ್ಮ ನೇರ ನಡೆ- ನುಡಿಯ ಹೋರಾಟದಿಂದ ಆಳುವ ವರ್ಗ ಹಾಗೂ ಸರ್ಕಾರಗಳನ್ನು ಬಡಿದೆಬ್ಬಿಸುತ್ತಿದ್ದರು‌‌ ಹಿರಿಯ ಚೇತನ ಕಲಾದಗಿ ಅವರು ಹಾಕಿದ ಹೋರಾಟದ ಮಾರ್ಗ ಜಿಲ್ಲೆಯಲ್ಲಿ ಹೋರಾಟವನ್ನು ಮುನ್ನಡೆಸಲಿದೆ.              ಜಿಲ್ಲೆಯಲ್ಲಿ ಜನಪರ ಹೋರಾಟ ಮುನ್ನಡೆಸಿದ ನಾಯಕನಿಗೆ ಆಳುವ ಸರಕಾರಗಳು ಜೀವಿತ ಅವಧಿಯಲ್ಲಿ ಗುರುತಿಸಲಿಲ್ಲ ಅವರ ಹೋರಾಟಗಳು ಜನಪರ ಆಗಿದ್ದು ಬಹುಷಃ ಮುಳುವಾಯಿತೇನೋ?  ಯಾರ್ಯಾರನ್ನೋ ಸನ್ಮಾನಿಸಿ ಗೌರವಿಸುವ ಸರಕಾರ ಕಲಾದಗಿ ಅವರನ್ನು ಯಾಕೆ ಗುರುತಿಸಲಿಲ್ಲ ಎಂಬುದು ರಾಜ್ಯದ ಪ್ರತಿಯೊಬ್ಬರಿಗೂ ಕಾಡುವ ಪ್ರಶ್ನೆಯಾಗಿದೆ .ಸರಕಾರ ಕೊಡುವ ಮಾನ ಸಮ್ಮಾನಗಳಿಗೆ ಜೋತು ಬೀಳದ ನೇರ ನಿಷ್ಟುರ ಧೃಡ ವ್ಯಕ್ತಿತ್ವ ಕಲಾದಗಿ ಅವರದಾಗಿತ್ತು. ಕೊನೆ ಪಕ್ಷ ರಾಜ್ಯ ಸರಕಾರ ಸರಕಾರಿ ಸಕಲ ಗೌರವದೊಂದಿಗೆ ಅವರಿಗೆ ಅಂತಿಮ ನಮನ ಸಲ್ಲಿಸಿ ಜನಪರ ಹೋರಾಟಗಾರನಿಗೆ ನೈಜ ಗೌರವ ಸಲ್ಲಿಸಬೇಕು ಎಂಬುದು ರಾಜ್ಯದ ಪ್ರತಿಯೊಬ್ಬ ಅವರ ಅಭಿಮಾನಿಯ ಒತ್ತಾಯವಾಗಿದೆ . ಕೂಡಲೇ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಅಂತಿಮ ಸಂಸ್ಕಾರದ ಉಸ್ತುವಾರಿ ತೆಗೆದುಕೊಂಡು ರಾಜ್ಯದ ಮೂಲೆ ಮೂಲೆಯಿಂದ ಬರುವ ವಿವಿಧ ಸಂಘಟನೆಗಳ ಮುಖಂಡರು, ರೈತರು, ಕಾರ್ಮಿಕರು ಹಾಗೂ ಪ್ರತಿಯೊಬ್ಬ ಅವರ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು ಜನಪರ ಹೋರಾಟಗಾರನಿಗೆ ಗೌರವದಿಂದ ಕಳಿಸಿಕೊಡಬೇಕೆಂದು ಕಾಂ. ಭೀಮಶಿ ಕಲಾದಗಿ ಅವರ ಅಭಿಮಾನಿಗಳು ವಿನಂತಿಸಿಕೊಂಡಿದ್ದಾರೆ.



ಹಿರಿಯ ಹೋರಾಟಗಾರ ಭೀಮಶಿ ಕಲಾದಗಿ ವಿಧಿವಶ

 


ವಿಜಯಪುರ: ಜಿಲ್ಲೆಯ ಹಿರಿಯ ಹೋರಾಟಗಾರ, ಕಮ್ಯುನಿಷ್ಟ ಮುಖಂಡ ಭೀಮಶಿ ಕಲಾದಗಿ (87) ಸೋಮವಾರ ರಾತ್ರಿ 9.40 ಗಂಟೆಗೆ ವಿಧಿವಶರಾಗಿದ್ದಾರೆ.

ತಮ್ಮ ಜನಪರ ಹೋರಾಟಗಳಿಂದ ನಾಡಿನಾದ್ಯಂತ ಹೆಸರಾಗಿದ್ದ ಭೀಮಶಿ ಕಲಾದಗಿಯವರು ಬರಗಾಲ ಭೀಮಶಿಯೆಂದೆ ಪ್ರಸಿದ್ಧ ಪಡೆದಿದ್ದರು. ಜಿಲ್ಲೆಯ ಮುಳವಾಡ ಏತನೀರಾವರಿ ಸೇರಿದಂತೆ ಜಿಲ್ಲೆಯ ಸಮಗ್ರ ನೀರಾವರಿಗಾಗಿ, ರೈತರಿಗಾಗಿ, ಕಾರ್ಮಿಕರಿಗಾಗಿ, ದಲಿತರಿಗಾಗಿ ಅಲ್ಲದೆ ಅನ್ಯಾಯ, ದೌರ್ಜನ್ಯಕ್ಕೆ ಒಳಗಾದವರ ಧ್ವನಿಯಾಗಿ ಜೀವನವಿಡಿ ಹೋರಾಟ ಮಾಡಿದವರು. ಅವರ ಅಗಲಿಕೆಯಿಂದ ಹಿರಿಯ ಹೋರಾಟದ ಕೊಂಡಿಯೊಂದು ಕಳಚಿದಂತಾಗಿದೆ‌‌‌. 

ತಮ್ಮ ನೇರ ನಡೆ- ನುಡಿ, ಹೋರಾಟದಿಂದ ಆಳುವ ವರ್ಗ ಹಾಗೂ ಸರ್ಕಾರಗಳನ್ನು ಬಡಿದೆಬ್ಬಿಸುತ್ತಿದ್ದರು‌‌. ಇಂತಹ ಹಿರಿಯ ಹೋರಾಟ ಚೇತನ ಇಹಲೋಕ ತ್ಯಜಿಸಿದಕ್ಕೆ ಜಿಲ್ಲೆಯ ಜನಪ್ರತಿನಿಧಿ, ಮುಖಂಡರು ಹಾಗೂ ಅವರ ಅಭಿಮಾನಿ ವರ್ಗ ಕಂಬನಿ ಮಿಡಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು - ಬಳಗವನ್ನು ಅಗಲಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

06-08-2024 EE DIVASA KANNADA DAILY NEWS PAPER

ವಿಜಯಪುರ-ತಾಲೂಕಾ ಶಿಕ್ಷಕರ ಸಂಘದ ತಾಲೂಕಾ ಘಟಕದಿಂದ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ


ವಿಜಯಪುರ : ಶಿಕ್ಷಕರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಗ್ರಾಮೀಣ ಹಾಗೂ ತಿಕೋಟಾ ತಾಲೂಕಾ ಘಟಕದಿಂದ ಇಂದು ವಿಜಯಪುರ ಹಾಗೂ ತಿಕೋಟಾ ತಹಶೀಲ್ದಾರ ಅವರಿಗೆ ಸಲ್ಲಿಸಲಾಯಿತು. 

ಶಿಕ್ಷಕರ ಬಹುದಿನಗಳ ಬೇಡಿಕೆ ಈಡೇರಿಸುವ ಮೂಲಕ ಅನ್ಯಾಯ ಸರಿಪಡಿಸುವ ಕುರಿತಂತೆ ರಾಜ್ಯ ಮಟ್ಟದ ಹೋರಾಟದ ರೂಪರೇಷೆಗಳ ತಹಶೀಲ್ದಾರಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದು, ಮನವಿಯಲ್ಲಿ 2017ರವರೆಗೆ ನೇಮಕವಾದ ಶಿಕ್ಷಕರನ್ನು 1ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಬೆಕು. ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು. ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕವಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದವೀಧರ ಶಿಕ್ಷಕರೆಂದು ಪದನಾಮಿಕರಿಸಬೇಕು. 2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ ಮೂಲತ: 1-7/8ಕ್ಕೆ ನೇಮಕ ಹೊಂದಿದವರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1-5ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯುವAತೆ ಒತ್ತಾಯಿಸಲಾಗಿದೆ. 

 ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು. ಅರ್ಹ ವಿದ್ಯಾರ್ಹತೆ (ಪದವಿ+ಶಿಕ್ಷಣ ತರಬೇತಿ) ಹೊಂದಿದ 2016ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆಯೊಂದಿಗೆ ಬಡ್ತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಶೀಲ್ದಾರ ಅವರ ಮೂಲ ಸರ್ಕಾರಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ. 

ಅರ್ಜುನ ಲಮಾಣಿ, ಹಣಮಂತ ಕೊಣದಿ, ಸಿ.ಟಿ.ಜತ್ತಿ, ಅಶೋಕ ಚನ್ನಬಸಪ್ಪಗೋಳ, ಎಂ.ಎಸ್.ಟಕ್ಕಳಕಿ, ಅಶೋಕ ಬೂದಿಹಾಳ, ಡಿ.ಎಸ್.ಮಠ, ಅಶೋಕ ಧಡಕೆ, ಝಡ್.ಆಯ್.ಇಂಡಿಕರ, ಅಶೋಕ ಭಜಂತ್ರಿ ಸಾಬು ಗಗನಮಲಿ, ವೀರಭದ್ರಪ್ಪ ಬಸು ಬೇನೂರ, ವಿಜಯಕುಮಾರ ದೇಸಾಯಿ, ಪ್ರವೀಣ ಪತ್ತಾರ, ಪ್ರಕಾಶ ಕೂಲಂಗಿ, ಕೊರಬು, ರಾಜು ಉಮರಾಣಿ, ಎಂ.ಎನ್.ನಾಯ್ಕ, ಆರ್.ಎಸ್.ಮಸಳಿ, ಸೋಮನಾಥ ಬಾಗಲಕೋಟ, ಪಪ್ಪು ಗಚ್ಚಿನಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

05-08-2024 EE DIVASA KANNADA DAILY NEWS PAPER

Friday, August 2, 2024

ವಾರ್ತಾಧಿಕಾರಿ ಮಮತ ಇನ್ನಿಲ್ಲ

 

ಈ ದಿವಸ ಕನ್ನಡ ದಿನ ಪತ್ರಿಕೆ ವಾರ್ತೆ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ ಆರ್ ಮಮತ ಅವರು ಇಂದು ದೈವಾಧೀನರಾಗಿದ್ದಾರೆ.

ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪತಿ‌ ಹಿರಿಯ ಪತ್ರಕರ್ತ ಎಚ್ ಆರ್ ರವೀಶ್, ಮಗ ಪ್ರಜ್ವಲ್ ಹಾಗೂ ಅಪಾರ ಬಂಧುಬಾಂಧವರನ್ನು ಅಗಲಿದ್ದಾರೆ.

ಮಮತ ಅವರ ಅಂತ್ಯಕ್ರಿಯೆ ತುಮಕೂರು ತಾಲ್ಲೂಕು ಹಾಲನೂರು ಗ್ರಾಮದ ಅವರ ತೋಟದಲ್ಲಿ ಶನಿವಾರ ಮಧ್ಯಾಹ್ನ ನೆರವೇರಲಿದೆ.

ಬೆಂಗಳೂರಿನ ಅವರ ಮನೆಯಲ್ಲಿ ನಾಳೆ ಬೆಳಿಗ್ಗೆ 9 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

ಈ ದಿವಸ ಪತ್ರಿಕಾ ಬಳಗದಿಂದ ಸಂತಾಪ:

ಹಿರಿಯ ವಾರ್ತಾಧಿಕಾರಿ ಮಮತಾ ಅವರ ನಿಧನಕ್ಕೆ ಈ ದಿವಸ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಕಲ್ಲಪ್ಪ ಶಿವಶರಣ, ಹಾಗೂ ಈ ದಿವಸ ಪತ್ರಿಕಾ ಬಳಗ ಸಂತಾಪ ಸೂಚಿಸಿದ್ದಾರೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.

03-08-2024 EE DIVASA KANNADA DAILY NEWS PAPER

Thursday, August 1, 2024

02-08-2024 EE DIVASA KANNADA DAILY NEWS PAPER

ಆಗಷ್ಟ್ 3 ರಂದು ನವರಸ ಪ್ರದರ್ಶಕ ಕಲೆಗಳ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭ

 

ವಿಜಯಪುರ : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರಿಂದ ಮಾನ್ಯತೆ ಪಡೆದುಕೊಂಡಿರುವ ಉತ್ತರ ಕರ್ನಾಟಕದ ಹೆಮ್ಮೆಯ ಸಂಸ್ಥೆ ಖ್ಯಾತ ಅಂತಾರಾಷ್ಟಿçÃಯ ನೃತ್ಯ ಕಲಾವಿದ ದಂಪತಿಗಳಾದ ಶ್ರೀ ರಂಗನಾಥ ಹಾಗೂ ಸುನಂದಾ ಬತ್ತಾಸಿ ದಂಪತಿಗಳ ಸಾರಥ್ಯಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ವಿಜಯಪುರ ನಗರದ ನವರಸ ಪ್ರದರ್ಶಕ ಕಲೆಗಳ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭ ಶನಿವಾರ ದಿನಾಂಕ : 03-08-2024 ರಂದು ಸಂಜೆ 5 ಗಂಟೆಗೆ ವಿಜಯಪುರದ ಜಲನಗರ ಕಾಲೋನಿಯ ಬುದ್ಧ ವಿಹಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನವರಸ ನೃತ್ಯ ಕಲಾ ಸಂಸ್ಥೆಯ, ನವರಸ ಪ್ರದರ್ಶಕ ಕಲೆಗಳ ಮಹಾವಿದ್ಯಾಲಯ ವಿಜಯಪುರ ಸಂಸ್ಥಾಪಕ ಹಾಗೂ ನಿರ್ದೇಶಕರಾದ ರಂಗನಾಥ ವಿ ಬತ್ತಾಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಟಿ. ಭೂಬಾಲನ್ ಉದ್ಘಾಟಿಸಲಿದ್ದಾರೆ. ಪ್ರೊ. ಬಿ.ಕೆ. ತುಳಸಿಮಾಲ ಅಧ್ಯಕ್ಷತೆ ವಹಿಸಲಿದ್ದಾರೆ. ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಿದೂಶಿಲತಾ ಜಹಾಗಿರದಾರ, ಡಾ. ಹರೀಶ ಹೆಗಡೆ ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭದಲ್ಲಿ ನವರಸ ನೃತ್ಯ ಕಲಾ ಸಂಸ್ಥೆ (ರಿ) ವತಿಯಿಂದ ಹಿಂದುಸ್ತಾನಿ ಸಂಗೀತ, ಕರ್ನಾಟಕ ಸಂಗೀತ ಹಾಗೂ ತಬಲಾ ವಾದನ, ಕಥಕ್, ಭರತನಾಟ್ಯ ಹಾಗೂ ನಾಟಕ ಪ್ರದರ್ಶನ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.