Thursday, August 8, 2024

ಬಸವನ ಜನ್ಮಸ್ಥಳಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಡಿಸಿ ಭೂಬಾಲನ್

ವಿಜಯಪುರ : ಬಸವ ಜನ್ಮಸ್ಥಳವಾದ ಇಂಗಳೇಶ್ವರ ಗ್ರಾಮಕ್ಕೆ ಇಂದು  ಜಿಲ್ಲಾಧಿಕಾರಿಗಳಾದ ಟಿ ಭೂಬಾಲನ್ ಅವರು ಭೇಟಿ ಮಾಡಿ  ಬಸವೇಶ್ವರರ  ಪುತ್ತಳಿ ನಿರ್ಮಾಣ ಕುರಿತು ಸಮೀಕ್ಷೆ ನಡೆಸಿ ಮತ್ತೆ ಸ್ಮಾರಕಕ್ಕೆ ತೆರಳಿ ವೀಕ್ಷಣೆ ಮಾಡಿ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ವೀಕ್ಷಣೆ ಮಾಡಿದರು.

ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮಕ್ಕೆ ಬೇಟಿ ಶ್ರೀ ಬಸವೇಶ್ವರ ಸರ್ಕಲ್ & ಮೂರ್ತಿ ಪ್ರತಿಷ್ಠಾಪನಾ ನಿರ್ಮಾಣ ಕುರಿತು ಸಂಬAಧಿಸಿದ ತಹಶೀಲ್ದಾರರಿಂದ ಮಾಹಿತಿ ಪಡೆದ ಅವರು, ಗಾವಠಾಣ ಜಾಗದಲ್ಲಿ ಬಸ್ ನಿಲ್ದಾಣ  ನಿರ್ಮಾಣ  ಕುರಿತು ಪರಿಶೀಲನೆ ನಡೆಸಿದರು.

ಬಸವೇಶ್ವರ ಬಸವ ಸ್ಮಾರಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಿರ್ಮಾಣ ಹಂತದಲ್ಲಿರುವ ಅಂಬಿಗರ ಚೌಡಯ್ಯ ಸಮುದಾಯ ಭವನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.  ಹಾಲು ಬಾವಿ ಹಾಗೂ ವಿರಕ್ತಮಠದ ವಚನ ಶಿಲಾ ಮಂಟಪ ವೀಕ್ಷಣೆ ಮಾಡಿದರು.

ಬಸವನ ಬಾಗೇವಾಡಿಯ ಮೆಗಾ ಮಾರ್ಕೆಟ್ ಮತ್ತು ನಂದಿ  ಮಾರ್ಕೆಟ್‌ಗೆೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಜೆ ಬಸವನ ಬಾಗೇವಾಡಿಯಲ್ಲಿರುವ  ಇಂದಿರಾ ಕ್ಯಾಂಟೀನಗೆ ದಿಢೀರ  ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಕ್ಯಾಂಟೀನದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಆಹಾರ ಸವಿಯುವ ಮೂಲಕ ಆಹಾರ ಗುಣಮಟ್ಟ ಪರೀಕ್ಷಿಸಿದರು.

ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:

ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ  ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ  ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.

ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.


No comments:

Post a Comment