ವಿಜಯಪುರದಲ್ಲಿ ಕಳಪೆ ತೊಗರಿ ಬೀಜ ವಿತರಿಸಿದ ಅಧಿಕಾರಿ, ಕಂಪನಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಅಪರ ಡಿಸಿಗೆ ಮನವಿ ಸಲ್ಲಿಸಲಾಯಿತು.
ವಿಜಯಪುರ: ಕಳಪೆ ತೊಗರಿ ಬೀಜ ವಿತರಿಸಿ ಜಿಲ್ಲೆಯ ರೈತರ ಬೆಳೆ ಹಾನಿ ಮಾಡಿದ ಕೃಷಿ ಅಧಿಕಾರಿಗಳ ಹಾಗೂ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಹಾನಿಗೊಂಡ ಬೆಳೆ ಪ್ರದರ್ಶಿಸಿ, ನಗರದಲ್ಲಿ ಅಖಂಡ ಕರ್ನಾಟಕ ರೈತ ಸಂಘ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ಅಪರ ಡಿಸಿ ಸೋಮಲಿಂಗ ಗೆಣ್ಣೂರಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕೃಷಿ ಇಲಾಖೆಯ ಮೂಲಕ ವಿತರಿಸಿದ ಜಿಆರ್ಜಿ 152 ಹಾಗೂ ಜಿಆರ್ಜಿ 811 ಕಳಪೆ ತೊಗರಿ ಬೀಜ ವಿತರಣೆಯಿಂದ ಬಿತ್ತಿದ ತೊಗರಿ ಬೆಳೆ ನೋಡಲು ಬಲು ಸೊಗಸಾಗಿದ್ದು, ಆದರೆ ಗಿಡಗಳಲ್ಲಿ ಒಂದೂ ತೊಗರಿ ಕಾಯಿ ಇದರಿಂದ ರೈತರು ಆತಂಕಕ್ಕಿಡಾಗಿದ್ದಾರೆ. ಹಾನಿಗೊಳಗಾದ ತೊಗರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಕಳಪೆ ತೊಗರಿ ಬೀಜ ವಿತರಿಸಿದ ಕಂಪನಿಗಳ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಾದ್ಯಂತ ತೊಗರಿ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಇಡೀ ಜಿಲ್ಲೆಯಲ್ಲಿ ಜಿಆರ್ಜಿ 152 ಹಾಗೂ ಜಿಆರ್ಜಿ 811 ತೊಗರಿ ಬೀಜ ಬಿತ್ತನೆ ಮಾಡಲಾಗಿದೆ. ಕೃಷಿ ಇಲಾಖೆಯವರು ಬೀಜ ತೆಗೆದುಕೊಳ್ಳುವ ಸಂದರ್ಭದಲ್ಲಿ ತೊಗರಿ ಗುಣಮಟ್ಟ, ಬೀಜ ಬಿತ್ತನೆ ಮಾಡಬೇಕಾದರೆ ಇದಕ್ಕೆ ಅನುಸರಿಸಬೇಕಾದ ಕ್ರಮಗಳೆನು ? ಎಂಬುದರ ಬಗ್ಗೆ ಮೊದಲು ಇಲಾಖೆ ಅಧಿಕಾರಿಗಳು ಮಾಹಿತಿ ಪಡೆದುಕೊಂಡು ನಂತರ ರೈತರು ತೊಗರಿ ಬೀಜ ಖರೀದಿ ಮಾಡುವ ಸಂದರ್ಭದಲ್ಲಿ ರೈತರಿಗೆ ತಿಳಿ ಹೇಳಬೇಕಿತ್ತು ಅದೂ ಕೂಡ ಆಗಿಲ್ಲ. ಸದ್ಯ ಅಧಿಕಾರಿಗಳು ಏನೇನೋ ಸಬೂಬು ಹೇಳುತ್ತಿರುವುದು ಸರಿಯಲ್ಲ ಎಂದರು.
ರಾಜ್ಯ ಬೀಜ ನಿಗಮದವರು ತೊಗರಿ ಬೀಜದ ಗುಣಮಟ್ಟ ಮಾಡದೇ ಬೀಜ ವಿತರಿಸುವ ಕಂಪನಿಗೆ ಸರ್ಟಿಪೈ ಮಾಡಿದ್ದಾದರು ಹೇಗೆ ?, ಸರ್ಟಿಪೈ ಮಾಡಬೇಕಾದರೆ ಯಾವ ಆದಾರದ ಮೇಲೆ ಸರ್ಟಿಪೈ ಮಾಡಿದ್ದಾರೆಂಬುದು ಇದರ ಗುಣಮಟ್ಟವನ್ನು ಲ್ಯಾಬದಲ್ಲಿ ಪರೀಕ್ಷೀಸಬೇಕು. ಇದರಲ್ಲಿ ಬೀಜ ನಿಗಮದವರು ಹಾಗೂ ಕೃಷಿ ಇಲಾಖೆಯವರ ಕೈವಾಡ ಇದೆ ಎಂಬುದು ಸ್ಪಷ್ಟ ಪಡಿಸುತ್ತದೆ. ಮೊದಲೇ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಇಂತಹದರಲ್ಲಿ ಬೀಜ ವಿತರಿಸಿದ ಕಂಪನಿಯವರು ಒಂದು ರೀತಿ ರೈತರಿಗೆ ಮೋಸ ಎಸಗುತ್ತಿದ್ದಾರೆ. ಇದರಿಂದ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಹಾನಿಗೊಳಗಾದ ತೊಗರಿಗೆ ಸೂಕ್ತ ಪರಿಹಾರ ನೀಡಬೇಕು, ಕಳಪೆ ಬೀಜ ವಿತರಿಸಿದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ ಕಂಪನಿಯ ಪರವಾನಿಗೆ ರದ್ದು ಪಡಿಸಬೇಕು ಆಗ್ರಹಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.
No comments:
Post a Comment