Saturday, June 22, 2024
ಕನ್ನಡದ ಉತ್ತಮ ಸಾಹಿತಿಯನ್ನು ಕಳೆದುಕೊಂಡಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾII ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ ಎಂದರು.
ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಎನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯಾದ್ಯಂತ ಆಸಕ್ತರಿಗೆ ವಿಶೇಷ ಸೂಚನೆ:
ಯುವ ಪ್ರತಿಭೆಗಳು, ಹಿರಿ-ಕಿರಿ ಆಸಕ್ತ ಸಾಹಿತಿ, ಕವಿ, ಲೇಖಕರಿಗೆ ಈ ದಿವಸ ವೇದಿಕೆ ಕಲ್ಪಿಸುತ್ತಿದೆ. ಆಸಕ್ತರು ತಮ್ಮ ಸ್ವ ರಚಿತ ಲೇಖನ, ಕಥೆ, ಕವನ , ಶಾಲಾ ಕಾಲೇಜಿನ, ವಿಶ್ವವಿದ್ಯಾಲಯ ವರದಿ, ಹೋರಾಟಗಾರರ ಮನವಿ, ತಮ್ಮ ಜಿಲ್ಲೆ, ಪಟ್ಟಣ, ತಾಲೂಕು, ಗ್ರಾಮಗಳಲ್ಲಿನ ಸಮಸ್ಯೆಗಳು ಸೇರಿದಂತೆ ಇತರೆ ಸುದ್ದಿ ಹಾಗೂ ಜಾಹೀರಾತುಗಳನ್ನು ಪ್ರಕಟಿಸಲು ಇಂದೇ ಸಂಪರ್ಕಿಸಿರಿ.
ಸಂಪಾದಕರು ಈ ದಿವಸ ಕನ್ನಡ ದಿನ ಪತ್ರಿಕೆ ವ್ಯಾಟ್ಸಪ್ ಸಂಖ್ಯೆ : 7204279187 / 9900378892 ತಾವು ಟೈಪಿಸಿ eedivasa@gmail.com ಈ ಮೇಲ್ ಗೂ ಮೇಲ್ ಸೆಂಡ್ ಮಾಡಿದರೆ ಪ್ರಕಟಿಸಲಾಗುವುದು.